ಒಟ್ಟು 3112 ಕಡೆಗಳಲ್ಲಿ , 114 ದಾಸರು , 2158 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾರ್ವತಿಪತಿ ಆರ್ವರಾಭಿಷ್ಟಿಯ ಸರ್ವಪೂರಿಸಿ ತನ್ನಿಜಪದ ಸೇವಕನಿಗೆ ಕರುಣವ ಬೀರ್ವನಿಗೆ ಚರಿತ ಆ ಪೂರ್ವನಿಗಾರತಿಯಾ ಬೆಳಗಿರೇ ಸೋ 1 ತಾರ್ಕು ಪದೇಶಿತಾ ಸರ್ಕನೆ ಕರ್ಕಶ ಮಾರ್ಗವ ಬಿಡಿಸುವ ಅತಕ್ರ್ಯನಿಗೆ ಅಘತಮರ್ಕನಿಗೆ ಸುರಸ ಪರ್ಕನಿಗಾರತಿಯಾ ಬೆಳಗೀರೇ ಸೋ 2 ಅಂಬುಶಶಿಬಿಂಬಾಂಕಿತ ಜಟೆ ಅಂಬಕತ್ರಯ ಶಾಂಭವ ವಾಸೆ ಚಿದಂಬರಗೆ ಗಜಚರ್ಮಾಂಬರಗೆ ಹರಸಿ ಶ್ವಂಭರಗಾರತಿಯ ಬೆಳಗಿರೇ ಸೋ3 ಕರ್ಪುರ ಗೌರವತನು ತೋರ್ಪುವ ಸರ್ಪಾಭರಣಗಳಲಿ ಶೋಭಿಸುತಿರ್ಪನಿಗೆ ಹತ ಕಂರ್ದಪನಿಗೆ ಸುಜ್ಞಾನ ದರ್ಪಣೆಗಾರತಿಯಾ ಬೆಳಗೀರೆ ಸೋ 4 ಕುಂದದಿ ಆನಂದದಿ ಮಹೀಪತಿ ನಂದನ ಸಲಹುವ ಘನ ಅಶಿತ ಕಂದರಿಗೆ ಪೂಜಿತ ಇಂದರಗೆ ಸದ್ಗುಣ ಸಾಂದರ ಗಾರತಿಯಾಬೆಳಗೀರೆ ಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಲಯ ನರಕೇಸರಿ ಸತತಂ ಪರಿಪೂರ್ಣ ಗುಣಾಕರ ಪ ವಿನುತ ಸಂಜೀವ ದೇವ ಲೀಲಾ ಖೇಲನ ಸ್ತಂಭ ವಿದಾರಣ 1 ರಾಕ್ಷಸ ಗರ್ಭ ನಿರ್ಭೇದನ ನಿಪುಣ ಸಿಂಹನಾದ ಶ್ರೀದ ದಕ್ಷೀ ವಿಪಕ್ಷಸು ಶಿಕ್ಷಣ ದಕ್ಷನೆ 2 ಶೂರ ಹಿರಣ್ಯಕ ಹೃದಯ ದಳನಸಂಹಾರ ವೀರ ಸಾರ ಪೊರ ಹರೆ 3 ಕಾಲ ಲೋಲ ಭಂಜನ ರಂಜನ 4 ಶ್ರೀ ಲಕ್ಷ್ಮೀ ಕುಚ ಕುಂಕುಮ ಪಂಕಿಲ ದೇಹ ದೇವ ನೀಲ ನಿಭಾಕೃತಿ ಧೇನುನಗರ ಪತೇ 5
--------------
ಬೇಟೆರಾಯ ದೀಕ್ಷಿತರು
ಪಾಲಯಮಾಂ ಪರಮೇಶಚಿತಕಾಲಿ ಸಂತತಮಂಬಿಕೇಶಭೂರಿಲೀಲ ಶಂಕರವಿಯತ್ಕೇಶಕರುಣಾಲಯಹೃತಪಶುಪಾಶಧೃತಶೂಲ ವಿಶಾಲ ಕಪಾಲ ಕರಾಲಕಂ-ಕಾಲಿಕಾಕೂಲ (?) ವಿಲೋಲಾಸ್ಥಿಮಾಲಾ ಪ ವಾರಣಾಸುರ ಚರ್ಮಚೇಲಸುರವಾರಸೇವಿತ ಗಾನಲೋಲಭಕ್ತಾಧಾರ ಸಕಲ ಜಗನ್ಮೂಲನಿರ್ವಿಕಾರ ಮೃಕಂಡು ಕಸಾಲಹಾರ ಹೀರ ಮಂದಾರ ಪಟೀರ ನೀಹಾರಗೋಕ್ಷೀರ ಕರ್ಪೂರ ಸುಧಾರಸಗೌರ1 ವ್ಯೋಮತರಂಗಿಣೀಜೂಟಜಿತಕಾಮಪಾಲಿತ ಸರ್ವಖೇಟವಿತತಾಮಲಾಂಬರ ಪುಷ್ಪವಾಟರಘುರಾಮಪೂಜಿತ ಪಾದಪೀಠಪೂರ್ಣಕಾಮಾತಿಧಾಮಾಭಿರಾಮ ನಿಸ್ಸೀಮಸುತ್ರಾಮ ಮುಖ್ಯಾಮರಸ್ತೋಮಲಲಾಮ 2 ಗೋಪತಿರಾಜಿತುರಂಗಘೋರಪಾಪಾಂಧಕಾರಪತಂಗದಿವ್ಯತಾಪಸಹೃದಯಾಬ್ಜಭೃಂಗವಿಶ್ವವ್ಯಾಪಕನಿಗಮಾಂತರಂಗಯಾಮಿನಿಪಕಲಾಪಾದ್ರಿಚಾಪರಮಾಪತಿರೂಪನಿರ್ಲೇಪ ಕೆಳದಿ ರಾಮೇಶ ಚಿದ್ರೂಪ 3
--------------
ಕೆಳದಿ ವೆಂಕಣ್ಣ ಕವಿ
ಪಾಲಸಾಗರ ಸಂಭೂತೆ ಕೈವಲ್ಯದಾತೆ ಪಾಲಿಸೆನ್ನನು ನಿಜಮಾತೆ ಪ ಆಲಿಸು ನಿನ್ನಯ ಬಾಲನ ನುಡಿ ಈ ಕಾಲದಿ ಮನ್ಮನ ಆಲಯದೊಳು ನಿಂದು ಅ.ಪ ನಿತ್ಯ ನಿರ್ಮಲೆ ಈ ಮಹಾಮಹಿಮ ವಿಶಾಲೆ ಕಾಮನ ಜನನಿ ಸುಲೀಲೆ ಜಲಜಸುಮಾಲೇ ತಾಮರಸಾಂಬಕೆ ಸಾಮಜಭವ ಸು - ತ್ರಾಮ ಪ್ರಮುಖ ಸುರಸ್ತೋಮ ನಮಿತಗುಣ - ಪಾದ ಯಾಮ ಯಾಮಕೆ ನಿತ್ಯ ನೇಮದಿ ಭಜಿಪೆ ಶ್ರೀರಾಮನ ತೋರೆ 1 ವೇದಾಭಿಮಾನಿ ಅಂಬ್ರಾಣಿ ಸುಗಣಸನ್ಮಣಿ ವೇದವತಿಯೆ ರುಕ್ಮಿಣಿ ವೇದವಂದ್ಯಳೆ ಗುಣಪೂರ್ಣೇ ನಿತ್ಯಕಲ್ಯಾಣಿ ಖೇದಗೊಳಿಸುವ ಭವೋದಧಿ ದಾಟಿಸಿ ಮೋದ ಕೊಡುವ ಪಂಚಭೇದಮತಿಯನಿತ್ತು ಯಾದವಗುಣವನುವಾದ ಮಾಡಿಸಿ ನಿತ್ಯ ಮೋದಬಡಿಸು ಶ್ರೀ ಮಾಧವರಾಣಿ 2 ಜಾತರೂಪಾಭಾಶುಭಗಾತ್ರಿ ಈ ಜಗಕೆ ಧಾತ್ರಿ ಸೀತೆ ನೀನೆ ಲೋಕಪವಿತ್ರೆ ಧಾತಾಪ್ರಮುಖಸುರಸ್ತೋತ್ರೇ ನೀರಜನೇತ್ರೆ ವೀತಭಯಳೆ ತ್ರಿನೇತ್ರೇ ಪಾತಕವನಕುಲವಿತಿಹೋತ್ರ ಸುರ - ವಿನುತ ಸುಖವ್ರಾತ ಕೊಡುವ ನಮ್ಮ ದಾತ ಗುರುಜಗನ್ನಾಥವಿಠಲಗೆ ನೀ ನೀತಸತಿಯೆ ಎನ್ನ ಮಾತೆ ವಿಖ್ಯಾತೆ3
--------------
ಗುರುಜಗನ್ನಾಥದಾಸರು
ಪಾಲಿಪುದು ನಯನಗಳ ನಾಲಿಗೆಯ ನೀನು ಶ್ರೀಲೋಲ ಸಾರ್ವಭೌಮನೇ ಪ ನೀಲಮೇಘಶ್ಯಾಮ ಬೇಲಾಪುರಾಧೀಶ ಶೀಲ ಅಚ್ಚುತದಾಸಗೆ ಸ್ವಾಮಿ ಅ.ಪ ಪರಮಪದನಾಥ ಇಂದಿರೆಯರಸ ಸಕಲ ನಿ ರ್ಜರರು ಪೂಜಿಸುವಂಘ್ರಿಯಾ [ವರ]ನೇಮದಿಂ ಪಾಡೀ ಆಡೀ ದುರಿತಭವ ಶರಧಿಯಾ ಪಿರಿದು ದಾಟುವೆನೆಂದು ಭರದೊಳೈದಿದವಗಾ ಶ್ಚರ್ಯದಾಪತ್ತಡಸಿತ್ತೇ ಸ್ವಾಮಿ 1 ಹಿಂದೆ ಮಾಡಿದ ಕರ್ಮವೆಂಬದಕೆ ಜನನವಾದು ದಿಂದು ಊನನಲ್ಲಾ ಪೊಂದಲೀ ನಗರವನು ಪೋಗಲಾಕ್ಷಣದಿ ವಾಗ್ಬಂಧವತ್ವವೆರೆಡು ಮುಂದಕಡಿಯಿಡಲು ಇಂದಿನದೊಲಚ್ಚುತನ ದಾಸ ನಂದವಳಿದುಬ್ಬಸದೊಳು ಇಂದು ನೀ ಸಲಹಿದಡೆ ಪೂರ್ವಾರ್ಜಿತ ಕರ್ಮ ವೃಂದಗಳು ನಿಂದಿರುವವೆ ಸ್ವಾಮಿ 2 ಮನುಜ ಮಾಡಿದ ಪಾತಕಗಳನು ಎಣಿಸುವಡೆ ಘಣಿರಾಜಗಳವಡುವುದೇ ಗುಣ ತರಂಗಿಣಿಯೆ ದುರ್ಗುಣಗಳೆಣಿಸಲು ಶ ರಣಜನರೊಳೇಂಪುರುಳಿರುವುದೇ ಚಿನುಮಯನೆ ಭಕ್ತವತ್ಸಲನೆ ಅಚ್ಚುತz ಸನವಗುಣಗಳನೀ ಮರೆದು ಗುಣನಿಧಿಯೆ ಚೈತನ್ಯವಿತ್ತುಳುಹೆ ಬೇಗ ನಾ ಧನ್ಯನೆಲೊ ವೈಕುಂಠರಮಣಾ 3
--------------
ಬೇಲೂರು ವೈಕುಂಠದಾಸರು
ಪಾಲಿಸಯ್ಯ ಪೂರ್ಣ ಲೋಲ ಲಕ್ಷುಮಿರಮಣ ಧ್ರುವ ಮುನಿವರ ಪಾಲಕ ಘನ ಸುಖದಾಯಕ ಕನಕಾಂಬರಧರ ಕಸ್ತೂರಿ ತಿಲಕ ಅನಾಥ ಬಂಧು ಅರ್ತ ರಕ್ಷಕ 1 ಸಮಸ್ತಕೆ ನೀ ದಾತ ವಿಮಳ ವಿರಾಜಿತ ಕಮಲ ಸಂಭವಸುತ ಸೋಮಜು ವರಪ್ರಿಯ ಕಾಮಪೂರಿತ 2 ಅನಂಗಜನಕ ಅಣುರೇಣುವ್ಯಾಪಕ ದೀನ ಮಹಿಪತಿಗೆ ನೀ ಬೀರೊ ಸ್ವಾನಂದಸುಖ ಅನಂತಕೋಟಿ ಬ್ರಹ್ಮಾಂಡನಾಯಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಲಿಸು ಗುರುವರ್ಯ ಜಯಾರ್ಯ ಪ ಶ್ರಿಮದಾನಂದತೀರ್ಥರ ಕಂದ ಶ್ರೀಮದಕ್ಷೋಭ್ಯರ ಕಂದ ಯತೀಂದ್ರ 1 ಪೂರ್ಣಬೋಧ ತೀರ್ಥಾರ್ಣ ವಿಹಾರಿ ಸ್ವರ್ಣ ಪಾತ್ರ ಸುಧಾಕಾರಿ ಉದಾರಿ2 ಶ್ರೀ ನರಹರಿ ಧ್ಯಾನವಿಚಾರಿ ಮೌನಿ ಗುಣಗಣಧಾರಿ ಉದ್ಧಾರಿ3
--------------
ಪ್ರದ್ಯುಮ್ನತೀರ್ಥರು
ಪಾಲಿಸು ಪರಮಪಾವನ ಪದ್ಮಾವತೀರಮಣ ಪಾಲಿಸು ಪಯವಾರಿಧಿವಾಸ ಪದ್ಮಗದಾಧರ ಕೌಸ್ತುಭಭೂಷ ಪ. ಪಾಹಿಪಾರ್ಥಸಾರಥಿಅ.ಪ. ಮದನಜನಕ ಮಹಿಮಾಂಬುಧಿ ನಿನ್ನ ಪದಕಮಲವ ನಾ ಸ್ಮರಿಸದೆ ಎನ್ನ ಮದಮುಖತನವನು ಒದರುವದೆನ್ನ ಪದುಮನಾಭ ರಕ್ಷಿಸು ನೀ ಮುನ್ನ ಸದಯಾಂಬುಧಿ ನೀನಲ್ಲವೆ ನಿನ್ನೊಳು ಕ್ರೋಧ ಉದುಭವಿಸುವುದು ನಿಜವೇ ಭಕ್ತವಾತ್ಸಲ್ಯ ಇದಕೆ ನೀ ಊನ ತರುವೆ ಸಾಕು ಈ ಮರವೆ ಒದಗಿಸು ಸರ್ವಮನಸಿನೊಳ್ ಪುದು- ಗಿದಿಷ್ಟಾರ್ಥಗಳ ನೀ ದಯವಿಡುತ ಇಹಪರಗತಿಗಾ- ಸ್ಪದವಾದ ಸಂಪದವ ನೀ ಕೊಡು ತ್ವರಿತ ತ್ರೈಲೋಕ್ಯದಾತ ಮಧುಸೂದನ ಮಂದರಗಿರಿಧರ ನೀ- ರದ ನಿಭ ನಿರ್ಮಲ ನಿಜರೂಪ ಗುಣ ಸದನಾಚ್ಯುತ ರವಿಕುಲದೀಪ ನಿರ- ವಧಿ ಆನಂದ ರಸಾಲಾಪ ಬುಧಜನೋಪಲಾಲಿತ ಲೀಲಾಯತ ಉದಧಿಶಾಯಿ ಮಾನದ ಮಧುಸೂದನ1 ನಾಮಸ್ಮರಣೆಯೆ ನರಕೋದ್ಧಾರ ನೇಮವಿಲ್ಲೆಂಬುದು ನಿನ್ನ ವಿಚಾರ ಸಾಮಾರ್ಥದ ಗುಣಕೆಲ್ಲನುಸಾರ ಪಾಮರ ಮನಕಿದು ಈ ಗುಣಭಾರ ಶ್ರೀಮನೋಹರನೆ ಲಾಲಿಸೊ ಚಾತುರ್ಥಿಕ ಜ್ವರದಿ ಭ್ರಾಮಕನಾದೆ ಪಾಲಿಸೊ ದಾರಿದ್ರ್ಯವೆಂಬ ಸೀಮೆಯಿಂದಲಿ ದಾಟಿಸೊ ಸುಕೀರ್ತಿಯ ಮೆರೆಸೊ ಸಾಮಗಾನಲೋಲ ಸುಜನ ಸ್ತೋಮ ಭಾಗ್ಯನಿಧಿಯೆ ಎನ್ನ ಮನದ ಅಜ್ಞಾನವೆಂಬ ತಾಮಸ ಪರಿಹರಿಸಿ ಜ್ಞಾನೋದಯದ ಸದಾನಂದ ಈ ಮಹಾಭಾಗ್ಯಗಳೆಲ್ಲ ನೀನಿತ್ತಿರೆ ನೀ ಮಾಡುವುದೆಲ್ಲವು ಸಹಜ ಗುಣ ಧಾಮಾಶ್ರಿತ ನಿರ್ಜರಭೂಜ ಸುಜನ ಸ್ತೋಮಾರ್ಕಾಮಿತ ವಿಭ್ರಾಜ ಶ್ರೀಮಚ್ಛೇಷಾಚಲ ಮಂದಿರ ಸು- ತ್ರಾಮಾರ್ಚಿತ ಸದ್ರಾಮ ಶ್ರೀರಾಮ2 ಉಡುವ ಸೀರೆಯ ಸೆಳೆಯಲು ದ್ರುಪಜೆಯ ಕೊಡಲಿಲ್ಲವೆ ಬಹುವಸನ ಸಂತತಿಯ ಹಿಡಿಯವಲಕ್ಕಿಗೆ ದ್ವಾರಕ ಪತಿಯ ಕಡು ಸರಾಗವಾಯ್ತಿಂದಿನ ಪರಿಯ ಬಿಡುತ ಬೆಟ್ಟದ ಮಧ್ಯದಿ ನಿಂತರೆ ನಿನ್ನ ಬಿಡುವರ್ಯಾರಯ್ಯ ಶೀಘ್ರದಿ ಮನಸಿನಿಷ್ಟ ಕೊಡು ದಯವಿಟ್ಟು ಮುದದಿ ಕರುಣಾವುದಧಿ ಕಡುಲೋಭಿತನ ಬಿಡು ಮಹರಾಯ ಅಡಿಗಳಿಗೆರಗುವೆನು ಜಗದಯ್ಯ ಪೂರ್ವಾರ್ಜಿತ ಕರ್ಮ ವಡಂಬಡಿಸಿ ರಕ್ಷಿಸು ದಮ್ಮಯ್ಯ ಪಂಢರಿರಾಯ ಒಡೆಯ ಶ್ರೀ ಲಕ್ಷ್ಮೀನಾರಾಯಣ ನಡುನೀರೊಳು ಕೈಬಿಡುವೆಯ ನೀ ತೊಡಕೊಂಡ ಬಿರುದೇನಯ್ಯ ಈ ಕಡು ಕೃಪಣತನ ಸಾಕಯ್ಯ ಪೊಡವಿಯೊಳಗೆ ಪಡುತಿರುಪತಿಯೆಂಬ ದೃಢಕಾರ್ಕಳದೊಡೆಯ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೆನ್ನ ಗೋಪಾಲ ಕೃಷ್ಣ ಪ ಪಾಲಿಸೆನ್ನ ದಧಿಪಾಲ ಮುಖರ ಗೋ ಪಾಲಬಾಲ ಕೃಪಾಲಯ ಹರಿಯೇ ಅ.ಪ. ಭವ ರುಂಡಮಾಲ ಮೇ ಷಾಂಡ ಪ್ರಮುಖ ಸುರಷಂಡ ಮಂಡಿತನೆ 1 ಗೋಪಿ ಗೋಪಾಲ ವೃಷ್ಣಿಕುಲ ದೀಪ ಶ್ರೀಪಶಿವಚಾಪ ಭಂಜನಾ 2 ಅಂಡಜಾಧಿಪ ಪ್ರಕಾಂಡ ಪೀಠ ಕೋ ದಂಡಪಾಣಿ ಬ್ರಹ್ಮಾಂಡ ನಾಯಕ 3 ವ್ಯಾಪ್ತ ಗೋಪ್ತ ಜಗದಾಪ್ತ ದೋಷ ನಿ ರ್ಲಿಪ್ತ ಪ್ರಾಪ್ತಗತಸುಪ್ತ ಸುಷುಪ್ತಾ 4 ವೇದವೇದ್ಯ ಬ್ರಹ್ಮಾದಿವಂದ್ಯ ಸುಖ ಬೋಧಪೂರ್ಣ ಬ್ರಹ್ಮೋದನ ಭೋಕ್ತಾ 5 ಅಧ್ವರೇಶ ಲೊಕೋದ್ಧಾರÀ ಪಾಣಿ ಸ ರಿದ್ವರ ಪಿತಗುರು ಮಧ್ವವಲ್ಲಭಾ6 ಪೋತ ವೇಷದರ ಪೊತನಾರಿ ಪುರು ಹೂತ ಮದಹ ಜಗನ್ನಾಥ ವಿಠ್ಠಲ 7
--------------
ಜಗನ್ನಾಥದಾಸರು
ಪಾಲಿಸೆನ್ನನು ಪಾಹಿ ಪಾರ್ವತೀಶ ಈಶ ಕಾಲಕರ್ಮವಿದೂರಪಾಪನಾಶ ಪ ಪರಮ ಪುರುಷ ಪರೇಶ ಪರಮಾತ್ಮ ಪರಿಪೂರ್ಣ ವರ ಪರಂಜ್ಯೋತಿ ರೂಪಾತ್ಮನೇ ಕರಿ ಚರ್ಮಧರ ಭಸ್ಮ ಭೂಷಣ ದಿಗಂಬರನೇ ಶರಣು ಜನಸುರಧೇನು ನಿಸ್ಸಂಗನೇ 1 ಉಮೆಯರಸ ಪಂಚವದನ ನಿರ್ಮಲನೆ ವಿಮಲತರ ಗಂಗಾಜೂಟಧರನೇ ಅಮಿತಬಲ ವೃಷಭವಾಹನನೆ ಶಾಶ್ವತನೆ ಕಮಲ ಪಿತ ಸುತ ಹರನೇ ಶಿವರೂಪನೇ 2 ವರವ್ಯಾಘ್ರ ಚರ್ಮಧರ ಇಂದುಶೇಖರ ಹರನೆ ಕರದಿ ಡಮರುಗಧರನೇ ಶೂಲ ಪಾಣಿ ಮೆರೆವ ನಾಗಾಭರಣ ಗಿರಿಜೆವರ ಯೋಗೀಶ ಮೂರ್ತಿ ಶ್ರೀ ಶಂಭು ಶಂಕರನೆ 3
--------------
ಕವಿ ಪರಮದೇವದಾಸರು
ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ ನಿತ್ಯ ಸಲಿಸುತ ಪ್ರಸನ್ನನಾಗಿ ಪ ಓಡಿಸಿ ವಿಷ್ಣುವ ನೀಡು ವೈರಾಗ್ಯವ ಬೇಡುವೆ ನಾ ಕೃಪೆ ಮಾಡಿ ಗತಿ 1 ಆರ್ತರಭೀಷ್ಟೆಯ ಪೂರ್ತಿಪದಾನಿ ಶುಭ ಮೂರ್ತಿಸದಾ 2 ಶಾಮಸುಂದರ ಸ್ವಾಮಿಯ ನಿಜ ದಾಸ ಮೌನಿಯ ಘನ ಪ್ರೇಮಾನಿಸ್ವಿತಾ 3
--------------
ಶಾಮಸುಂದರ ವಿಠಲ
ಪಾಲಿಸೊ ಜಗನ್ನಾಥ ದಾಸಾ | ವರ್ಯಕಳೆಯೊ ಯನ್ನ ಕಲಿಕಲ್ಮಷ ಪ ಶೀಲ ಗೋಪಾಲನ ದಾಸಾರ್ಯರ ಕರಜನೆಲಾಲಿಸೋಗುಣನಿಧಿ ಬಾಲನ ಬಿನ್ನಪ ಅ.ಪ. ಹರಿಕಥಾಮೃತ ವಕ್ತಗುರುವೇ | ಕಾಯೊಪರಮ ಭಕ್ತರ ಕಲ್ಪತರುವೆ |ಹರಿಗುರು ಕರುಣ ಸಂಪೂರ್ಣಪಾತ್ರನೆ ಭವಸೆರೆಯ ಬಿಡಿಸಿ ಕಾಯೊ ಪರಮ ಪವಿತ್ರ1 ಅದ್ವೈತ ಗಜಸಿಂಹ 2 ಭವಜಲಧಿ ನವಪೋತ ಹರಿಯಾ | ಗುರುಗೋವಿಂದ ವಿಠಲನ ಪದವಾ |ಅವಿರತ ಹೃದಯದಿ ನೋಡುವ ಸೌಭಾಗ್ಯಜವದಿ ಪಾಲಿಸೊ ಜಗನ್ನಾಥ ದಾಸಾರ್ಯನೆ 3
--------------
ಗುರುಗೋವಿಂದವಿಠಲರು
ಪಾಲಿಸೊ ದೇವ ಮೂಲೋಕ ಕಾವ ಎಲ್ಲರೊಳ ಗೀವ ಶ್ರೀ ಲಕ್ಷುಮಿಯ ಜೀವ ಧ್ರುವ ಮುನಿಜನ ಪಾಲ ಘನಸುಖಲೋಲ ಅನಾಥರನುಕೂಲ ದೀನದಯಾಳ 1 ಕರುಣಾಸಾಗರ ಪರಮ ಉದಾರ ದುರಿತ ಸಂಹಾರ 2 ಸಿರಿಲೋಲ ಭೂಷಣ ಹರಿನಾರಾಯಣ ತರಳ ಮಹಿಪತಿ ಪ್ರಾಣ ಹೊರಿಯೋ ನೀ ಪೂರ್ಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಾಲಿಸೋ ಎನ್ನ ನೀ ಘನಕರುಣದಲಿ ಗೋ| ಜಾತಕ ಮುದಿರಾ ಪ ಅಚ್ಯುತಾನಂತ ಮಹಿಮ ಸರ್ವಾಧಾರಾ| ಇಚ್ಚಾಪೂರಿತ ಮಾಡುವೆ ಸುರಜನರಾ| ನಿಚ್ಚಟ ಹೃತಯರಿಗೊಲಿವೆ ಸತ್ಪರಾ| ಸಚ್ಚಿದಾನಂದನೆ ಮಾ ಮನೋಹರಾ 1 ಸುರನದಿ ಪಿತ ವಸುದೇವ ಕುಮಾರಾ| ಸರಸಿಜ ಪಾಣಿ ಗೋವರ್ಧನೋದ್ದಾರಾ| ದುರಿತ ನಿವಾರಾ| ವರ ಚತುರ್ಭುಜ ನರಕಾಸುರ ಹರಾ 2 ವಿಷ್ಣು ನಾರಾಯಣಾಂಬುಜ ನಯನಾ| ವಾಷ್ರ್ಣೇಯಾ ಪರಮಪಾವನ ಮೂರ್ತಿದೇವಾ| ಜಿಷ್ಣುನಾತನು ಸಂಭವನ ರಥಬೋವಾ| ಕೃಷ್ಣ ಗುರು ಮಹಿಪತಿ ನಂದನ ಜೀವನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು