ಒಟ್ಟು 2845 ಕಡೆಗಳಲ್ಲಿ , 111 ದಾಸರು , 1881 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಪೂಜಿ ಮಾಡುವ ಬನ್ನಿರೊ ಗುರುಪಾದ ಪೂಜಿ ಮಾಡುವ ಬನ್ನಿರೊ ಧ್ರುವ ತಿಳುಹು ತಿಳಿಯ ನೀರಿಲೆ ತನುವಿಲೆ ಅಭಿಷೇಕವ ಮಾಡುವ ಮಾಡುವ ಬನ್ನಿರೊ 1 ಶುದ್ಧ ಸುವಾಸನೆಯ ಗಂಧದಾರತಿ ಅಕ್ಷತಿಡುವ ಮಾಡುವ ಬನ್ನಿರೊ 2 ಅರವ್ಹೆಂಬ ದೀಪದಲಿ ಗುರುಸ್ವರೂಪವ ನೋಡುವ ಬನ್ನಿರೊ ನಲಿದಾಡುವ ಬನ್ನಿರೊ 3 ಭಕ್ತವತ್ಸಲ ಮೂರ್ತಿಗೆ ಸುಖದು:ಖ ಧೂಪಾರತಿ ಮಾಡುವ ಮಾಡುವ ಬನ್ನಿರೊ 4 ನೆನವು ನೈವೇದ್ಯದಲಿ ಮನ ಬುದ್ಧಿ ತಾಂಬೂಲವ ನೀಡುವ ಮಾಡುವ ಬನ್ನಿರೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪೂಜಿಸ ಬಲ್ಲೆನೆ ನಾನು ನಿನ್ನಂಘ್ರಿಯ ರಾಜೀವದಳ ನಯನ ಪ ಭಂಜನ ಭವ ರಾಮಚಂದ್ರ ಸೀತಾ ಹೃತ್ಕುಮುದ ಚಂದ್ರ ಅ.ಪ ಪಾರಿಜಾತ ಪುನ್ನಾಗ ಬಕುಳ ಮಂ- ದಾರ ಮಲ್ಲಿಕ ಕೇತಕೀ- ಸಾರಸ ಜಾಜಿ ಚಂಪಕ ತುಳಸಿಯುಕರ- ವೀರವೇ ಮೊದಲಾದ ದಿವ್ಯ ಪುಷ್ಪಗಳಿಂದ 1 ವಿಶ್ವಾದಿ ಸಾಹಸ್ರನಾಮಂಗಳಿಂ ನಿನ್ನ ಶಾಶ್ವದ್ರೂಪವ ತಿಳಿದು ಅಶ್ವಮುಖಾನಂದಮಯ ಪರಮಾತ್ಮ ನಿ- ನ್ನರ್ಚಿಸುವಡೆ ಚಪಲ ಚಿತ್ತಗೆ ಸಾಧ್ಯವೆ 2 ಸೂರ್ಯ ಚಂದ್ರರು ದೀಪ ನೀರೆಲ್ಲ ಅಭಿಷೇಕವೂ ತೋರೂವದಿಗ್ವಸ್ತ್ರ ಪೃಥ್ವಿಗಂಧವು ಸರ್ವ ಸಾರ ಭೋಕ್ತಗೆ ಗುಣಗಳ ತಾಂಬೂಲಾದಿಗಳಿಂದ3 ಕಮಲ ಸದನ ಹಂಸಾಖ್ಯ ಕು- ಡಿದ ನೀರು ಅಭಿಷೇಕವೂ ಮುದದಿ ನಿತ್ಯದಿ ಉಂಬುವುದೆ ನೈವೇದ್ಯವು ಪ್ರತಿ ಪದ ಪ್ರದಕ್ಷಣೆ ಮಲಗುವದೆ ವಂದನೆಯೆಂದು 4 ಒಂದು ಅರಿಯದ ಉಭಯಾಂಧನು ನಾನು ಗೋ- ವಿಂದ ನಿನ್ನಯ ಭಕ್ತಾರಾ ಸಂದೋಹದೊಳಗಿಟ್ಟೆನ್ನರ್ಚನೆ ಕೈಕೊಂಡು ತಂದೆ ಪಾಲಿಸೋ ಗುರುರಾಮ ವಿಠಲ ಸ್ವಾಮಿ 5
--------------
ಗುರುರಾಮವಿಠಲ
ಪೂರ್ಣಭೋಧ ಮುನಿರಾಯಾ ಎನ್ನಲಿ ಕರುಣವ ಮಾಡಯ್ಯಾ ಪ ಚರಣವ ನಂಬಿದ ತರುಣನ ಭವ ಅರಣವ ದಾಟಿಸಿ ಶರಣನ ಪೊರೆಯೋ ಅ.ಪ ನಿನ್ನ ಮತದಿ ದೀಕ್ಷಾ ಪೊಂದಿಸಿ ನಿನ್ನ ಕರುಣ ಕಟಾಕ್ಷ ನಿನ್ನ ಶಾಸ್ತ್ರದಲನನ್ಯ ಭಾವವ ಮನ್ನಿಸೊ ದಿನದಿನ ಎನ್ನೊಳು ನೆಲೆಸಿದ್ದು 1 ಪಂಚಭೇದಮತಿಯಾ ತರತಮ ಪಂಚಕ ಭಾವದ ಪರಿಯಾ ವಂಚನೆÀ ಮಾಡದೆ ಪಂಚಿಕಿ ತಿಳಿಸೆಲೊ ಮಂಚಿಗೆ ಮರುತ ವಿರಿಂಚಿಯಾಗುವಿ ನೀ 2 ಮಾತರಿಶ್ವ ಹನುಮಾ ಭೀಮಾ ಯತಿನಾಥ ಮಧ್ವನಾಮಾ ಖ್ಯಾತ ಮಾಯಿಮತ ವ್ರಾತವನಳಿದ ದಾತಗುರುಜಗನ್ನಾಥ ವಿಠಲ ಪ್ರಿಯ 3
--------------
ಗುರುಜಗನ್ನಾಥದಾಸರು
ಪೂರ್ಣಿಮೆಯ ದಿನ (ಗರುಡ ದೇವರನ್ನು ಕುರಿತು) ರಂಭೆ :ಮಂದಗಮನೆ ಪೇಳಿದಂದವನೆಲ್ಲ ಸಾ- ನಂದದಿ ತಿಳಿದೆನೆ ಬಾಲೆ ವಾಹನ ವೇರಿ ಮಂದರಧರ ಬಹನ್ಯಾರೆ1 ಅಕ್ಕ ನೀ ಕೇಳಲೆ ರಕ್ಕಸವೈರಿಯ ಪಕ್ಕದ ಮೇಲೇರಿಸುತ ಅಕ್ಕರದಿಂದ ಕಾಲಿಕ್ಕಿ ಬರುವನೀತ ಹಕ್ಕಿಯಂತಿಹನೆಲೆ ಜಾಣೆ2 ಘೋರನಾಸಿಕದ ಮಹೋರಗ ಭೂಷಣ ಧಾರಿವನ್ಯಾರೆಂದು ಪೇಳೆ ಮಾರಜನಕಗೆ ವಾಹನನಾಗುವನೀತ ಕಾರಣವೇನೆಂದು ಪೇಳೆ3 ಊರ್ವಶಿ : ಈತನೆ ಮಹಾತಿಬಲ ಕಾಣೆ ಶ್ರೀವಿಷ್ಣುವಿಂಗೆ ಕೇತನನಾದ ಪುನೀತನೆಲೆ ಜಾಣೆ ಭೀತಿರಹಿತವಿಖ್ಯಾತಿ ಸರ್ಪಾ- ರಾತಿ ಸೂರ್ಯಾನ್ವಯನ ಬಲಗಳ ಚೇರಿಸಿದ ನಿಷ್ಕಾತುರನ ಹರಿ ಪ್ರೀತ ವಿನತಾ ಜಾತ ಕಾಣಲೆ4 ಗಂಡುಗಲಿ ಮಾರ್ತಾಂಡತೇಜಮಖಂಡ ಬಲನಿವನು ಮಾತೆಯ ಚಂಡವಿಕ್ರಮನು ನೇಮವ ತಂಡವೆಲ್ಲವನು ಕೋಪದಿ ನಂಡಲೆದು ಕರದಂಡನಾಭನ ಕೊಂಡುಬಂದವನಂಡಜಾಧಿಪ5 ಭೂರಿವೈಭವದಿ ಗರುಡನ ದಯದಿ ತೋರುತ ರವದಿ ಸನಕ ಸ- ಚಾರುಚರಣವ ತೋರಿ ಭಕ್ತರ ಶ್ರೀರಮಾಧವ ಮಾರಜನಕನು6
--------------
ತುಪಾಕಿ ವೆಂಕಟರಮಣಾಚಾರ್ಯ
ಪೆಣ್ಣೆಂದರಿದು ಮೆಚ್ಚಿ ಕೆಡಬೇಡ ನಿನ್ನ ತಿನ್ನುವ ಮರಿಗಿದು ತಿಳಿ ಮೂಢ ಪ ತಾಯಾಗಿ ಮೊದಲು ನಿನ್ನ್ಹಡೆದಿಹ್ಯದು ಪುನ: ಮಾಯಾಗಿ ಬೆನ್ನ್ಹತ್ತಿ ಸುಡುತಿಹ್ಯದು ಬಾಯೊಳು ಮೊಲೆಯಿಟ್ಟು ಬೆಳೆಸಿಹ್ಯದು ಮತ್ತು ಕೈಯೊಳು ಮೊಲೆಯಿಟ್ಟು ಕೊಲುತಿಹ್ಯದು 1 ಸುತನೆಂದು ಮುದ್ದಿಟ್ಟು ಒಲುತಿಹ್ಯದು ಮತ್ತು ಪತಿಯೆಂದು ನಿಜಮತಿ ಸುಲಿತಿಹ್ಯದು ರತಿಗೊಟ್ಟು ಅತಿಮೋಹದಾಡುವುದು ನಿನ್ನ ಗತಿಗೆಡಿಸಿ ಜವಗೀಡು ಮಾಡುವುದು 2 ಕಣ್ಣುಸನ್ನೆಯ ಮಾಡಿ ಕರಿತಿಹ್ಯದು ಬಹು ಬಣ್ಣ ಮಾತಾಡಿ ಸೋಲಿಪುದು ಕುನ್ನಿಯಂತೆ ನಿನ್ನ ಮಾಡುವುದು ಬಲು ಬನ್ನಬಡಿಸಿ ಬಾಯಿ ಬಿಡಿಸುವುದು 3 ಶ್ವಾನನಂದದಿ ಕೂಗಲ್ಹಚ್ಚುವುದು ಮಾನಾಭಿಮಾನ ತೊರೆಸುವುದು ನಿಜ ಜ್ಞಾನಕೆಡಿಸಿ ಪಾಪದ್ಹಾಕುವುದು 4 ತಂದ ಪುಣ್ಯವನೆಲ್ಲ ಸೆಳೆತಿಹ್ಯದು ಬಲು ಮಂದನೆನಿಸಿ ಕುಣಿಸ್ಯಾಡುವುದು ತಂದೆ ಶ್ರೀರಾಮಪ್ರೇಮ ಕೆಡಿಸುವುದು ನಿಜಾ ನಂದ ಮುಕ್ತಿಗೆ ಕಿಡಿ ಹಾಕುವುದು 5
--------------
ರಾಮದಾಸರು
ಪೇಳಲಳವಲ್ಲ ನಮ್ಮಯ್ಯನಾಟ ತಿಳಿವರಾರಿಲ್ಲ ಪ ಪೇಳೇನೆಂದರೆ ನಿಲುಕೊ ಮಾತಲ್ಲ ಹೇಳಿಕೆ ಕೇಳಿಕೆಗೆ ಮೀರಿದ ಮೇಲುಮಹಿಮನ ಲೀಲಾಜಾಲವ ಅ.ಪ ಸಾಧ್ಯ ಮಾತಲ್ಲ ಜಗಸೂತ್ರನಾಟಕೆ ಆದಿ ಅಂತಿಲ್ಲ ಜಗಮೂರರೊಳಗೆ ಸಾಧನಿಕರೆಲ್ಲ ನಿಜಭೇದ ತಿಳಿದಿಲ್ಲ ಸಾಧನಿಟ್ಟು ಆವಕಾಲದಿಂ ನಾದ ತಡೆಯದೆ ವೇದಗಳ ಬಿಡ ದೋದಿ ದಣಿದು ಇನ್ನು ಆದಿಮಹಿಮನ ಪಾದಕಾಣವು 1 ಬಾಗಿ ಅನುಗಾಲ ನಿಜತತ್ವಭೇದಿಸಿ ನೀಗಿ ಭವಮಾಲ ಜಡವಾದ ದುರ್ಭವ ರೋಗಗಳುಯೆಲ್ಲ ಪಾರಾಗಿ ನಿರ್ಮಲ ರಾಗಿ ಪರಮಯೋಗ ಒಲಿಸಿ ಯೋಗಿಗಳು ಮಹ ಉಗ್ರತಪದಿಂ ಯೋಗಬೆಳಗಿನೊಳಗೆ ನೋಡಲು ನಾಗಶಯನ ಮಹಿಮೆ ತಿಳಿಯದು 2 ಸಾನಂದಾದಿಗಳು ಮಹ ಭೃಗು ಗಾರ್ಗೇಯ ಮನು ಮುನ್ಯಾದಿಗಳು ದೇವರ್ಷಿ ನಾರದ ಶೌನಕಾದಿಗಳು ಘನ ಸಪ್ತಋಷಿಗಳು ಅನಂತಾನಂತ ಪ್ರಳಯದಿಂದ ಜ್ಞಾನ ಬೆಳಗಿನೋಳ್ನಿಂತು ನೋಡಿ ಕಾಣದೆ ಶ್ರೀರಾಮಪಾದ ಮೌನದೋಳ್ಮುಳುಗೇಳುತಿಹರು 3
--------------
ರಾಮದಾಸರು
ಪೇಳಿದರೆ ತಿಳಿಯುವುದೆ ಮಾಯಮೋಹಿಗಳಿಗೆ ನೀಲಶ್ಯಾಮನ ದಿವ್ಯಗೂಢದಿಹಮಹಿಮೆ ಪ ಬಂಜೆಗ್ಹೊಳೆವುದೆ ಪ್ರಸೂತಿವೇದನೆ ಸುದ್ದಿ ಸಂಜೀವನ ಮಹಿಮೆ ತಿಪ್ಪೆ ತೃಣಕೆ ತಿಳಿಯುವುದೆ ಅಂಜುಬುರುಕಗ್ವೀರತ್ವ ಸಾರಸವಿದೋರುವುದೆ ವಂಜಗೊಳುಪಾಗುವುದೆ ಹರಿಭಕ್ತಿಸಾರ 1 ನಾಗನ್ಹೆಡೆಯೆತ್ತಾಡಲಮೇಧ್ಯಜಂತರಿಯುವುದೆ ಕೋಗಿಲೆಯು ಕೂಗಲು ಕಾಗೆ ತಿಳಿಯುವುದೆ ಗೂಗೆಗ್ಹೇಳಲು ಅರುಣಪ್ರಭೆ ನೋಡಬಲ್ಲುದೆ ಭಾಗವತರ ನಡೆ ಭವರೋಗಿಗ್ಹೊಳಪಹ್ಯದೆ 2 ರಾಜ್ಯದಾಡಳಿತವನು ಚಾಂಡಾಳ ತಿಳಿಯುವನೆ ತೇಜಿಯ ಮಹಯೋಗ ಪಾಜಿಗ್ಹುಟ್ವುದೆ ಭೋಜನದ ಸವಿಸಾರ ರೋಗಿಗ್ಹೇಳಲು ಫಲವೆ ರಾಜಿಪ ಪರಲೋಕ ಕುಜನರರಿಯುವರೆ 3 ಹೀನನಿಗತಿ ತಿಳಿಯುವುದೆ ಜ್ಞಾನಬೋಧಾಮೃತ ಶ್ವಾನನಿಗೆ ಸೇರುವುದೆ ರಾಗ ಸುಖಸ್ವಾದ ಕೋಣಗ್ಹೊಳೆವುದೆ ವೇಣು ಮೃದಂಗ ಸುಖವಾದ್ಯ ಧ್ಯಾನಮಹಿಮೆಯ ಫಲವು ಭವಿಗೆ ತಿಳಿಬಲ್ಲುದೆ 4 ನೇಮದೊರುಷವು ಸುರಿಯೆ ಕಲ್ಲು ನೀರು ಕುಡಿಯುವುದೆ ಕಾಮಿಗಳಗನುಭವದ ಹಾದಿ ತಿಳಿ ಬಲ್ಲುದೆ ಪಾಮರಧಮರಿಗಿಲ್ಲ ದೀನಜನನಾಥ ಶ್ರೀ ರಾಮನಡಿ ನಿಜಭಕ್ತಿ ಸಾಧ್ಯವಾಗುವುದೆ 5
--------------
ರಾಮದಾಸರು
ಪೇಳುವೆ ಮನವೆ ನಿನಗೊಂದು ಕುಳಿತು ಲಾಲಿಪುದು ಮುಕ್ತಿಗೆ ಹಾದಿ ಎಂದು ಪ ಹರಿಯ ಚರಣಾಬ್ಜ್ಬಕೆ ಎರಗು ಬಡ ವರನ ಕಂಡರೆ ಅಕಟಾ ಎಂದು ಮರಗು ಹರಿ ಭಕುತಿಗೆ ನೀನೆ ಕರಗು ಇಹ ಪರದಲ್ಲಿ ಉತ್ತಮ ಯೆಂದೆನಿಸಿ ತಿರುಗು 1 ಅಹಂಕಾರ ಮಮಕಾರ ಬಿಟ್ಟು ಅಂಬು ರುಹಲೋಚನನ ಸುಮತವನ್ನೆ ತೊಟ್ಟು ಕುಹಕ ಮತಿಗಳನ್ನು ಬಿಟ್ಟು ಗುರು ದ್ರೋಹಿಗಳಾದವರ ಹೃದಯವÀ ಮೆಟ್ಟು 2 ಅಲ್ಪ ಬುದ್ಧಿಗಳನ್ನು ಮಾಣು ಒಂದು ಸ್ವಲ್ಪವಾದರು ಜ್ಞಾನದ ಮಾರ್ಗ ಕಾಣು ಬಲ್ಪಂಥದಲಿ ಬಾಹದೇನು ಬಿಡು ಅಲ್ಪಗಳ ಸಂಗ ಎಂದು ಸಾರಿದೆನು 3 ಸ್ವಾಮಿಯ ಪಾದವ ನೋಡು ನಿನ್ನ ಕಾಮ ಕ್ರೋಧಗಳೆಲ್ಲ ಕಳೆದು ಈಡಾಡು ನಾಮ ಕೀರ್ತನೆಗಳನ್ನು ಪಾಡು ತ್ರಿ ಧಾಮದೊಳಗೆ ಒಂದು ಇಂಬನೆ ಬೇಡು 4 ಎಚ್ಚತ್ತು ತಿಳಿದುಕೋ ಸೊಲ್ಲಾ ನಾನು ಮುಚ್ಚುಮೊರಿಲ್ಲದೆ ಪೇಳಿದೆನಲ್ಲಾ ಅಚ್ಚುತ ವಿಜಯವಿಠ್ಠಲನಲ್ಲದಿಲ್ಲ 5
--------------
ವಿಜಯದಾಸ
ಪೊಗಳಲಳವಾರಿಗೆ ಎಲೆ ದೇವ ನಿನ್ನ ನಿಗಮ ಆಗಮಾತೀತ ಗರುವರಹಿತನ ಪ ನೆಲೆಬುಡತುದಿ ಮೊದಲಿಲ್ಲದವನು ನೀ ಪ್ರಳಯ ಪ್ರಳಯಕ್ಕಾದಿ ಆದಿಯಾದವನು ನೀ ನಲಿಯುವಿ ನಲಿಯದೆ ಚಲಿಸುವಿ ಚಲಿಸದೆ ತಿಳಿಯದೆ ತಿಳಿಯುವಿ ವಿಲಸಿತ ಮಹಿಮ 1 ಆರಾರರಿಯದ ಮಹದಾದಿ ಅನಾದಿ ನೀನು ಸಾರ ಚರಾಚರಕ್ಕಾಧಾರರಾದವ ನೀ ಕೋರುವಿ ಕೋರದೆ ತೋರುವಿ ತೋರದೆ ಬಾರದೆ ಬರುವಿಯೊ ಮೀರಿದ ಮಹಿಮ 2 ಗುಣಿಸಿ ನೋಡಲು ತುಸುಗುಣ ತೊರೆದವ ನೀನು ಗಣಿತಕ್ಕೆ ನಿಲುಕದಕಲಂಕ ಮಹಿಮ ನೀ ಜನಿಸುವಿ ಜನಿಸಿದೆ ಕುಣಿಸದೆ ಕುಣಿಸುವಿ ಮಣಿಸುವಿ ಮಣಿಸದೆ ಅನುಪಮಮಹಿಮ 3 ತೊಡರೆಡರಿಗಡರದೆ ಕಡೆಯಲಾಡುವಿ ನೀನು ತೊಡರಿನೊಳಗೆ ಬಿಡದೆ ತೋರುವಿ ನೀ ನುಡಿಯಿಲ್ಲದೆ ನುಡಿಸುವಿ ನಡೆಯಿಲ್ಲದೆ ನಡೆಸುವಿ ಮಡಿಯಿಲ್ಲದೆ ಮಡಿಯೆನಿಪ ಕಡುಚಿತ್ರ ಮಹಿಮ 4 ಮೀಸಲು ಮಡಿರಹಿತಪಾವನ ನೀನು ಸಾಸಿರನಾಮದಿ ಕರೆಸಿಕೊಂಬುವಿ ನೀ ವಾಸಿಸದೆ ವಾಸಿಸುವಿ ಪೋಷಿಸದೆ ಪೋಷಿಸುವಿ ಶ್ರೀಶ ಶ್ರೀರಾಮ ದಾಸಜನರ ಸುಲಭ ನಿನ್ನ 5
--------------
ರಾಮದಾಸರು
ಪೊರೆಯೊ ಶ್ರೀಶನೆ ಸರುವ ಲೋಕ ಪೊರೆವನೆ ಪ ಅರಿತು ಅರಿಯದಂತೆ ನಾನು ಗರುವದಿಂದ ಮೆರೆದನಯ್ಯ ಅ.ಪ ಅರುಣ ಉದಯದಲ್ಲಿ ಎದ್ದು ಹರಿಯೆ ನಿನ್ನ ಸ್ಮರಣೆ ಬಿಟ್ಟು ಗೊರಿಕೆ ಹೊಡಿದು ನಿದೆÀ್ರಮಾಡಿ ದುರಿತದಲ್ಲಿ ಪೊರಳುವವನ 1 ಕುತುಬ ಕಾಲದಲ್ಲಿ ಬಂದ ಅತಿಥಿಗಳನು ಜರೆದು ನೂಕಿ ಮಿತಿಯ ಮೀರಿ ಸವಿಯುತ ಪರ- ಗತಿಯ ದಾರಿ ಕಾಣದವನ 2 ದಾನಧರ್ಮ ಕೇಳಬಂದ ಮಾನವಂತ ಜನರ ಬಹಳ ಹೀನ ಮಾತಿನಿಂದ ಬೈದ ಜ್ಞಾನರಹಿತನಾದ ನರನ 3 ರೊಕ್ಕವಿರುವದೆಂದು ಬಹಳ ಸೊಕ್ಕಿನಿಂದ ಬಡವರನ್ನು ಲೆಕ್ಕಿಸದೆ ಮಾತನಾಡಿ ಧಿಕ್ಕರಿಸಿದ ಅಧಮ ನರನ 4 ಪಟ್ಟದರಸಿಯಿರಲು ಅವಳ ಬಿಟ್ಟು ಪರರ ಸತಿಯ ಬಯಸಿ ಅಟ್ಟಹಾಸದಿಂದ ನಗುತ ಕೆಟ್ಟು ಹೋದ ಭ್ರಷ್ಟ ನರನ 5 ಎಷ್ಟು ಮಾಡಲೇನು ಎಳ್ಳಿ ನಷ್ಟು ಸುಖವ ಕಾಣಲಿಲ್ಲ ಇಷ್ಟ ಮಿತ್ರ ನೀನೆಯೆಂದು ಗಟ್ಟಿಯಾಗಿ ತಿಳಿದುಕೊಂಡೆ 6 ಶ್ರಿಷ್ಟಿಗೊಡೆಯನು ರಂಗೇಶ- ವಿಠಲನೆಂಬ ಮತಿಯ ಎನಗೆ ಎಷ್ಟು ಮಾತ್ರ ಕೊಟ್ಟು ಸಲಹೊ ಕೆಟ್ಟ ಮೇಲೆ ಬುದ್ಧಿ ಬಂತು 7
--------------
ರಂಗೇಶವಿಠಲದಾಸರು
ಪೋಗದೋ ಛಳಿ ಪೋಗದೋ ಪ ಹಳೆಯ ಹಚ್ಚಡ ಸಕಲಾತಿ ಚಿಮ್ಮುರಿ ಟೊಪ್ಪಿಗೆಬಿಳಿಯ ಕಂಬಳಿ ಪೊತ್ತರೆ ಪೋಗದೋನಳಿನಾಕ್ಷಿಯ ತನ್ನ ತೊಡೆಯ ಮೇಗಡೆ ಇಟ್ಟುಕಳಸ ಕುಚದ ಮೇಲೆ ಕೈಯಿಕ್ಕಿದಲ್ಲದೆ1 ಬಡನಡುವಿನ ಬಟ್ಟಕುಚದ ಕಾಮಿನಿರನ್ನೆಬೆಡಗಿನಲಿ ನಗುತ ನಲ್ಲನ ಬಳಿಗೆ ಬರಲುಒಡನೆಯೆ ಮೋಹದಿಂ ಪಿಡಿದೆತ್ತಿ ಲಲನೆಯನಡುಮಂಚದ ಮೇಲೆ ಕೆಡಹಿಕೊಂಡಲ್ಲದೆ2 ಛಳಿಗಾರದೆ ವಿಷ್ಣು ಛಳಿಗಾರದೆ ಶಿವಘಳಿಲನೆ ಗಂಗೆಯ ಬೀಸಾಡಲುಛಳಿಯ ಕಾರಣವೇನು ನೆಲೆಯಾದಿಕೇಶವತಿಳಿದು ನೀ ಹೇಳಯ್ಯ ಕಳಿಯ ವಿವರವನು 3
--------------
ಕನಕದಾಸ
ಪೋದರಯ್ಯ ತೆರಳಿ ಪೋದರು | ಸಾಧುನರಸಿಂಹಾರ್ಯರು ಮಾಧವನ ಮಂದಿರಕೆ ಪ ಶ್ರೀಕರ ಕೃಷ್ಣಾತಟದಿ ಐಕೂರು ಗ್ರಾಮದಿ ನೆಲೆಸಿ | ಏಕೋ ಭಾವದಿಂ ಸದಾ ಶ್ರೀಕಾಂತನ್ನ ಧ್ಯಾನಂಗತರು 1 ಭಾಗವತ ಸಾರೋದ್ಧಾರ ಸತ್‍ಶಿಷ್ಯರಿಗೆ ಸಾರುತ ಸದ್ಭಕ್ತಿಜ್ಞಾನ | ವೈರಾಗ್ಯಮಾರ್ಗವ ತೋರಿ 2 ಮಧ್ವಮತದಿ ಸಿದ್ಧಾಂತ ಪದ್ಧತಿಯನುಸರಿಸಿ | ಸದ್ಧರ್ಮದಿ ನಡೆಸುವ ಪ್ರಸಿದ್ಧ ವಿದ್ವಾಂಸರು 3 ವ್ಯಾಸದಾಸಕೂಟ ಮರ್ಮಲೇಸಾಗಿ ಸಜ್ಜನ ತತಿಗೆ ಬ್ಯಾಸರಿಲ್ಲದಲೆ ಪ್ರತಿವಾಸರುಪದೇಶಿಸುವರು 4 ನಿತ್ಯಗೈವ ಕೃತ್ಯಂಗಳು | ತತ್ವೇಶ್ವರ ದ್ವಾರಾ ಹರಿಗೆ ಚಿತ್ತಪೂರ್ವಕರ್ಪಿಸುವ ಸೋತ್ತುಮರೋತ್ತುಮರು ಲೋಕಕೆ 5 ಅಂತರಂಗದಲ್ಲಿ ಲಯದ ಚಿಂತನೆಯಗೈದು ಮುಕ್ತಿ ಪಂಥವನ್ನೆ ಪಿಡಿದು | ಜ್ಞಾನ ಸಂತತಿಯ ಜಗದಿ ನೆಲೆಸಿ 6 ಯಾವ ಸಂಶಯವ್ಯಾಕೆ ಕೋವಿದವರ್ಯರಾದ | ಭಾವಜ್ಷರ ಮುಖದಿಂದ ದೇವಾಂಶರೆನಿಸಿಕೊಂಡವರು 7 ವ್ಯಯ ಸಂವತ್ಸರಂತ್ಯಮಾಸ | ದ್ವಯತಿಥಿ ಸಿತವರ್ಷ ಹಯಸಪ್ರಸುತನ ವಾರದಿ ತ್ರಯ ಝಾವ ರಜನಿಯಲ್ಲಿ 8 ಆಸನಸ್ಥರರಾಗಿ ನಾಸಿಕಾಗ್ರದಲಿಟ್ಟು ಶ್ವಾಸಮಂತ್ರ ಜ ಪಿಸಿ ಬಿಂಬೋಪಾಸನಗೈವ ಬುಧರು 9 ಸಾಗರಶಯನನ ಧ್ಯಾನ ಯೋಗ ಬಲದಿ ತಿಳಿದು ಭುವಿ ಭೋಗ ತೀರಿತೆಂದು ಕೊಯಿಲು ತಾಗಿದ್ದೊಂದೆ ನೆವನದಿಂದ 10 ಆಶೆಕ್ರೋಧಂಗಳನಳಿದು | ಕ್ಲೇಶಮೋದ ಸಮ ತಿಳಿದು | ಭೂಸುರ ವೃಂದಕೆ ಸುಗ್ರಾಸವಿತ್ತು ತೋಷಿಸುವರು 11 ಹರಿಯಪುರಕೆ ಪೋಪ ಸಮಯ ಹರಿಸು ಬಂದು ಕೃಪ್ಣೆ ಇವರ ಚರಿಯ ನರೆÉದ ಜನಕೆ ತೋರಿ 12 ಸ್ವಾಮಿಶಾಮಸುಂದರನ | ನಾಮದ ಸನ್ಮಹಿಮ ಸತತ | ಪಾಮರ ಜನಕೆ ಪೇಳಿ ಪ್ರೇಮದಿಂ ಸಲಹಿದವರು 13
--------------
ಶಾಮಸುಂದರ ವಿಠಲ
ಪೋಷಿಸು ಎನ್ನಯ ದೋಷಗಳೆಣಿಸದೆ ದಾಸರಾಯ ಶೇಷನಾಮಕನೆ ವಿಶೇಷ ಜ್ಞಾನವ ನೀಡೋ ದಾಸರಾಯ ಪ ಸಂತತ ಕರಪಿಡಿ ಸಂತರೊಡೆಯ ಗುರು ದಾಸರಾಯ ಸಂತೋಷ ತೀರ್ಥರಂತಃ ಕರಣ ಪಾತ್ರ ದಾಸರಾಯ 1 ಚಿಂತಿಪ ಜನರಿಗೆ ಚಿಂತಾಮಣಿತಯ ನೀನೆ ದಾಸರಾಯ ಚಿಂತಿರಹಿತವರ ಚಿಂತಾಮಣಿಯು ನೀನೆ ದಾಸರಾಯ 2 ಚಿಂತ ರಹಿತವರ ಚಿಂತರವೇಲಿವಾಸ ದಾಸರಾಯ ಕದಂಬ ವಿನುತ ದಾಸರಾಯ 3 ಬೆಂಬಿಡದಲೆ ಮನದ್ಹಂಬಲ ಪೂರೈಸು ದಾಸರಾಯ ನಂಬಿದ ದ್ವಿಜರಿಗೆ | ಶಂಭುಗಿರಿಯಲ್ಲಿ ದಾಸರಾಯ 4 ಬಾಂಬೊಳೆ ತೋರಿಸಿ ಸಂಭ್ರಮಗೊಳಿಸಿದ ದಾಸರಾಯ ಹರಿಕೇತು ಹರಿಸುತ ಹರಿಣಾಂಕ ಕುಲಜಾತ ದಾಸರಾಯ 5 ಹರಿಕೇತು ಹರಿಸುತಾದ್ಯರನ ಸಂಹರಿಸಿದ ದಾಸರಾಯ ಹರಿದಾಡುತಿಹ ಮನ | ಹರಿಯಲ್ಲಿ ನಿಲಿಸಯ್ಯದಾಸರಾಯ 6 ಹರಿವೈರಿ ಮತಕರಿ | ಪರಿಪರಿ ಹರಿಸಘು ದಾಸರಾಯ ಪೂರ್ತಿಸುವ ನಿನ್ನ ವಾರ್ತೆಕೇಳಿ ಬಂದೆ ದಾಸರಾಯ 7 ಪಾರ್ಥಸಾರಥಿ ಭವ್ಯದಾಸರಾಯ ಮೂರ್ತಿಯ ಸ್ಥಾಪಿಸಿ ಕೀರ್ತಿಯ ಪಡೆದ ದಾಸರಾಯ 8 ನೇಮನಿಷ್ಟೆಯ ಬಿಟ್ಟು ಪಾಮರನಾದೆನಗೆ ದಾಸರಾಯ ಶ್ರೀಮಧ್ವನಿಗಮಾರ್ಥ | ಪ್ರೇಮದಿ ತಿಳಿಸಯ್ಯ ದಾಸರಾಯ 9 ಕಾಮಾದಿ ಷಡ್ವೈರಿ | ಸ್ತೋಮಾದಿ ಕುಲಿಶನೆ ದಾಸರಾಯ ಕಾಮಿತ ಫಲದಾಯಕ ಶಾಮಸುಂದರ ದೂತ ದಾಸರಾಯ 10
--------------
ಶಾಮಸುಂದರ ವಿಠಲ
ಪ್ರಕಾಶರೂಪಿ ವಿಠಲಾ ತೋಕನ್ನ ಸಲಹೋ ಪ ಅಕಳಂಕ ಚಾರಿತ್ರ | ನಿಖಿಲಾಗಮಸುವೇದ್ಯಪ್ರಕಟಿಸಿವನಲಿ ಜ್ಞಾನದಂಕುರವ ಹರಿಯೇ ಅ.ಪ. ಮಧ್ವಮತದಲಿ ದೀಕ್ಷೆ | ಶುದ್ಧ ಭಕುತಿ ಜ್ಞಾನಸಿದ್ದಿಸುವುದಿವನಲ್ಲಿ | ಮಧ್ವಾಂತರಾತ್ಮಾವಿದ್ಯೆಸಂಪದದಲ್ಲಿ | ಸ್ಪರ್ಧಿಸುವ ಮನಕಾಗಿಬುದ್ಧಿ ಪ್ರೇರಿಸು ಹರಿಯೆ ಸಿದ್ಧಮುನಿವಂದ್ಯಾ 1 ಕಾಮಾದಿ ಷಡ್ವೈರಿ | ಸ್ತೋಮವನೆ ಕಳೆಯುತ್ತನೇಮನಿಷ್ಠೆಯಲಿ ಮನ | ಕಾಮನೆಯ ಕೊಟ್ಟೂಪ್ರೇಮದಲಿ ಹರಿಗುರೂ | ಸ್ವಾಮಿ ಕಾರ್ಯವಗೈಸಿಕಾಮಿತಾರ್ಥದನಾಗೊ | ಕಾಮ ಪಿತ ಹರಿಯೇ 2 ಅಂಶದಲಿ ತನುವ್ಯಾಪ್ತಿ | ಸಾಂಶದೇವಾದಿಗಳುಸಂಸಾರ ನಿರ್ವಹಣೆ ಮಾಡಿಮಾಡಿಸುತಾಕಂಸಾರಿ ಪೂಜೆ ಎನೆ | ಶಂಸಿಸುತ ಯೋಗ್ಯರಲಿವಂಶ ಉದ್ಧರವೆಂಬ | ಅಂಶವನೆ ತಿಳಿಸೋ 3 ಕಾಕು ಜನಗಳ ಸಂಗ | ಓಕರಿಸುವಂತೆಸಗಿನೀಕೊಟ್ಟು ಸತ್ಸಂಗ | ಪ್ರಾಕ್ಕರ್ಮ ಕಳೆಯೋಲೌಕಿಕದಿ ಸತ್ಕೀರ್ತಿ | ನೀ ಕರುಣಿಸಿವನಲ್ಲಿಏಕಮೇವನೆ ಇದನೆ | ನಾ ಕೇಳ್ವೆ ಹರಿಯೇ 4 ಜೀವರಂತರ್ಯಾಮಿ | ಜೀವಕರ್ಮವವೆಸಗಿಆವಫಲ ದ್ವಂದ್ವಗಳ | ಜೀವಕರುಣಿಸುವನೇಭಾವುಕರ ಪಾಲಗುರು | ಗೋವಿಂದ ವಿಠ್ಠಲನೆಕಾವುದಿವನನು ಎಂಬ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು