ಒಟ್ಟು 1888 ಕಡೆಗಳಲ್ಲಿ , 109 ದಾಸರು , 1339 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮ-ಭೀಮ-ಮಧ್ವರು ಅಖಿಳ ಬೊಮ್ಮಾಂಡ ನಾಯಕ ಸಕಲ ಜೀವೋತ್ತುಮ ಪಾದ ನಿಖಿಳ ಲೋಕವ್ಯಾಪ್ತಾ ಲಕುಮಿರಮಣನ ಪ್ರಾಣ ಸಂಭೂತ ಸುಖಙÁ್ಞನಮಯ ಸ್ವರೂಪ ಸುಮನೋತ್ತಂಸ ಶಿಖಿಸಖೋದಿತರವಿ ಪ್ರಕರ ಸನ್ನಿಭ ಮುಖ ಸುಖಪೂರ್ಣ ಶುದ್ಧ ಸತ್ತ್ವ್ವಶರೀರ ಆಖಣಾಶ್ಮ ಸಮಚರಣ ಭಕ್ತಾಭರಣ ಲೋಕೈಕ ವೈದ್ಯಾಭಾರತೀಕಾಂತಾ ಲೌಕಿಕ ಸುಖದಾತಾ ಪ್ರಖ್ಯಾತಾ ಕಾಕೋದರ ಶಾಯಿ ನಮ್ಮ ಗುರುಜಗನ್ನಾಥವಿಠಲನಾ ಲೋಕನವಿತ್ತು ಪೊರೆಯೋ ಪ್ರಾಣರಾಯ
--------------
ಗುರುಜಗನ್ನಾಥದಾಸರು
ಹನುಮ-ಭೀಮ-ಮಧ್ವರು ಅಸುರರನು ಅಳಿಯ ಬಂದೆನು ನಾನು ನಿನ್ನ ವೈರಿದಶರಥರಾಮನಾಳೆಂದ ಪ. ಹೊಸಕಪಿಯೆ ನೀನು ಬಂದುದೇನುಕಾರಣವೆನಲುದಿ[ಶೆÀ]ಗೆ ಬಲ್ಲಿದ ಹನುಮ ನಾ ಕೇಳೊ ನಿ-ನ್ನಸುರ ಪಡೆಯ ಮಡುಹಬಂದೆ ನಿನ್ನಎಸೆವ ಪಾದದಲೊದೆಯ ಬಂದೆ ವನದಸಸಿಯ ಕಿತ್ತೀಡ್ಯಾಡಿ ನಿಂದೆ ನಿನ್ನದಶಶಿರವ ಕತ್ತರಿಸಿ ಎಸೆವ ರಾಮರ ಮಡದಿಹಸುಳೆ ಸೀತೆಯ ಅರಸಲು ಬಂದೆ 1 ಎನ್ನ ವೈರಿಗಳು ಇನ್ಯಾರೆಂದು ರಾವಣನುಹೊನ್ನಕುಂಡಲದ ಹನುಮನೆ ಕೇಳೊಮುನ್ನವರ ಸಾಹಸವಯೇನೆಂಬೆ ಅವರಪರ್ಣಶಾಲೆಯ ಹೊಕ್ಕು ಬಂದೆ ರಾಮ-ಕನ್ಯೆ ಸೀತಾಂಗನೆಯ ತಂದೆತನ್ನ ಬಿಲ್ಲ ತಾ ಹೊತ್ತು ತಿರುಗುವುದ ಕಂಡೆ 2 ಇನ್ನು ಹೆಮ್ಮೆಮಾತ್ಯಾತಕೊ ಕಪಿಯೆಕಚ್ಚಿ ಕೀಳಲೋ ಕಣ್ಣು ಹತ್ತುತಲೆಯನೆ ಹಿಡಿದುನುಚ್ಚುನುರಿ ಮಾಡಿ ಕೊ[ಲ್ಲಲೊ]ನಿನ್ನ ಇಷ್ಟುಹೆಚ್ಚಿನ ಮಾತ್ಯಾಕೊ ನಿನಗೆ ಬಹಳಕಿಚ್ಚು ತುಂಬಿತು ಕೇಳೋ ಎನಗೆ ಒಂದುಮೆಚ್ಚು ಹೇಳುವೆನೊ ರಾಮರಿಗೆಅಚ್ಚುತನ ಬಣಕೆ ಮೀಸಲಾಗಿರು ನೀನು 3 ವಿಧಿ ಕಾಲಮ[ಣೆ]ಯಾಗಿಬೆನ್ನಬಿಡದಿಹ ಪರಿಯ ನೋಡೊ 4 ಎನ್ನ ಸೋದರಮಾವ ವಾಲಿಯನು ಕೊಂದೀಗತಮ್ಮ ಸುಗ್ರೀವಗೊಲಿದು ವರವಿತ್ತುನಿನ್ನ ಕೊಂಡೊ[ಯ್ದ]ನೆಂಬುವರೊ ನಿನ್ನಚಿನ್ನನ ತೊಟ್ಟಿಲಿಗೆ ಕಟ್ಟುವರೊ ನಿನ್ನಹೊನ್ನತುಂಬೆಂದು ಆಡ್ಸುವರೊನಿನ್ನ ಶಿರವರಿದು ವಿಭೀಷಣಗೆÀ ಪುರವ ಕೊಡಬೇಕೆನುತಎನ್ನೊಡೆಯ ಬರುತಾನೆ ತಾಳೊ ಎಂದ 5 ಎತ್ತಿಹಿಡಿವ ಕೈಪಂಜು ಲೆಕ್ಕವಿಲ್ಲ ನಾ ಹಿಡಿದವಕತ್ತಿ ಇಪ್ಪÀತ್ತು ಕಾಣೋ ಕಪಿಯೆಎತ್ತಿ ಕಡಿವೆನು ಬಾಹುದಂಡ ಬೆ-ನ್ನ್ಹ್ಹತ್ತಿ ಬಡಿಯದೆ ಬಿಡೆನು ಕಂಡ್ಯಾ ನಿನ್ನಚಿತ್ತದಲಿ ತಿಳಿದುಕೊಳ್ಳೆಂದಮತ್ತೆ ನಾ ತಾಳಿ ಕೈಗಾಯಿದೆನಲ್ಲದೆ ಬಾಯಬತ್ತಿಸದೆ ಬಿಡುವೆನೇನೋ ಕಪಿಯೆ 6 ಮತ್ತ ರಾವಣ ನೀನು ಹೊತ್ತಿದ ಭೂಮಿ ಹಣತಿಸುತ್ತಣ ಸಮುದ್ರವೆ ತೈಲಎತ್ತಿ ಹಿಡಿವಳು ಸೀತೆ ದೀಪ ನಮ್ಮಚಿತ್ತದೊಲ್ಲಭನ ಪ್ರತಾಪ ನಿನ್ನಲಂಕಪಟ್ಟಣವು ಸುಡುವಂತೆ ಶಾಪಹತ್ತು ತಲೆ ಹುಳ ಹಾರಿಬಂದು ಬ್ಯಾಗಸುತ್ತಿ ಬೀಳುವುದು ದೀಪದೊಳಗೆ7 ಹೆಚ್ಚಿನ ಮಾತಿಷ್ಟು ಇವಗ್ಯಾಕೆ ಹಿಡಿತಂದುಕಿಚ್ಚು ಹಚ್ಚಿರೊ ಬಾಲಕೆ ಎಂದ ಆಗಪೊಚ್ಚಸೀರೆಗಳ ಸುತ್ತಿದರು ತ್ವರಿತಅಚ್ಚ ಎಣ್ಣೆಯಲಿ ತೋಯಿಸಿದರು ಬಾಲಹೆಚ್ಚಿಸಲು ಕಂಡು ಬೆದರಿದರುಕಿಚ್ಚು ಹಚ್ಚಲು ರಕ್ಕಸರ ಗಡ್ಡಮೀಸೆ ಸಹಎಚ್ಚರಿಸಿ ಸುಟ್ಟ ಲಂಕಾಪುರವ8 ಮುಖ್ಯಪ್ರಾಣ ವರದ ಮೆರದ 9
--------------
ವಾದಿರಾಜ
ಹನುಮಂತಾ | ಮದ್ಗುರುವೆ | ಹನುಮಂತ ಪ ಹನುಮಂತ - ಗುಣಗಣ ನಿಲಯ | ಮುನಿಸನಕಾದಿ ಜನ ಮನಾಲಯ | ಆಹಮನ ಆದೀಂದ್ರಿಯ ನಿಯ | ಮನವನೆ ಮಾಡುತ್ತಅನುನಯದಿಂದಲಿ | ಪಾಲಿಪೆ ಸರ್ವರ ಅ.ಪ. ಅಂಜನೆ ಕುವರನೆ ಹನುಮ | ಚಿಣ್ಣಕಂಜ ಸಖಗೆ ಹಾರ್ದನಮ್ಮಾ | ಇಂದ್ರಸಂಜಯನನ ಹೊಡೆದನಮ್ಮಾ | ಶಿಶುಅಂಜಲಿಲ್ಲವು ನೀ ನೋಡಮ್ಮಾ | ಆಹಸಂಜಯಪಿತ ತನ್ನ | ಶ್ವಾಸ ನಿರೋಧಿಸೆಅಂಜಲು ಮೂರ್ಜಗ | ಕಂಜಾಕ್ಷ ಸಲಹೀದ 1 ರಾಮರ ಭಂಟ ಧೀಮಂತಾ | ಬಲಭೀಮ ಭಯಂಕರ ಅಮಿತಾ | ರೂಪನಾಮಗಳ್ ಪೊಂದುವ ಸತತಾ | ನೋಡುಕಾಮನಯ್ಯನ ಕಾಣ್ವ ನಿರತಾ | ಆಹಭೀಮ ಪ್ರಾಣಾನಂದ | ಮುನಿಯೆಂದು ಕರೆಸುತ್ತಬೊಮ್ಮನ ಪದವಿಯ | ಸಮ್ಮುದದಿ ಪಡೆವಂಥ 2 ಹರಿಯೆ ನೀನು ಪ್ರತಿಬಿಂಬಾ | ಪುರಹರಿಗೆ ನೀನು ಗುರು ಬಿಂಬಾ | ಸುರಾಸುರರ ನೀದಂಡಿಪಾ ಡಿಂಬಾ | ನಿನ್ನವರಣ ವರ್ಣಿಸುವುದು ಗುಂಭಾ | ಆಹಹರ ಮುಖಾದ್ಯರು ನಿನ್ನ | ನಿರುತದಿ ಸುತ್ತಿಸುತ್ತಪರಿಪರಿ ಗುಣರೂಪ | ಕ್ರಿಯೆಗಳ ನೋಳ್ಪರು 3 ನಿನಗೆಣೆ ಯಾರೊ ಸಮೀರ | ಮಹವನಧಿಯ ದಾಟಿದ ಧೀರ | ದೈತ್ಯಜನರ ನೀ ಸವರಿದ್ಯೋ ವೀರ | ದಶಾನನನ ನೀ ಸದದೆಯಾ ಶೂರ | ಆಹಜನಕಜ ರಮಣನ | ನೆನೆ ನೆನೆ ನೆನೆಯುತಅನುಗಾಲ ಕಿಂಪುರುಷ | ಖಂಡದಲಿರುವಂಥ 4 ಕುರುಕುಲ ವನಕೆ ಕುಠಾರ | ದುಷ್ಟಜರೆಯ ಸುತನ ಸೀಳ್ದ ಧೀರ | ಸತಿತರಳೆ ದ್ರೌಪದಿ ಕಾಯ್ದ ವೀರ | ದುರುಳದುರ್ಯೋಧನನ ಅಸು ಹರ | ಆಹಕುರುವಂಶಕನಳನೆ | ಧರಣಿ ಭಾರವ ನಿಳುಹನರಮೃಗ ಲೀಲೆಯಂ | ದರಿಗಳ ತರಿದಂಥ 5 ಯತಿಕುಲ ಕುಮುದಕೆ ಸೋಮ | ದಶಮತಿಯೆ ಮಾಯ್ಗಳ ತರಿದ ಭೀಮ | ಅಹಂಮತಿಯ ಕಳೆ ಸಾರ್ವಭೌಮ | ಜಗತ್ಪತಿಗೆ ನೀ ಸುಪವಿತ್ರ ಧಾಮಾ | ಆಹವಿತತ ಶ್ರೀ ಹರಿಯೆ ಸ | ರ್ವೋತ್ತಮನೆಂಬಂಥಸೂತ್ರಾರ್ಥ ರಚಿಸಿ ಸ | ಚ್ಛಾಸ್ತ್ರವನರುಹಿದ 6 ಪವಮಾನ ಪೊಗಳುವೆ ನಿನ್ನ | ಭವಭವಣೆಯ ಪಡಲಾರೆ ಘನ್ನ | ಗುರುಗೋವಿಂದ ವಿಠಲಾನ | ಚರಣ | ತೋರೊತವಕದಿ ನಿನ್ನೊಳು ಪವನ | ಆಹನವ ವಿಧ ಭಕುತಿಗೆ | ನೆಲೆಯು ನೀನಾಗಿಹೆತವಕೀರ್ತಿ ಪೊಗಳಲು | ಶಿವನಿಗು ಅಳವಲ್ಲ 7
--------------
ಗುರುಗೋವಿಂದವಿಠಲರು
ಹನುಮನ ಬಲಗೊಂಬೆ ಹರುಷದಲೆನಮ್ಮ ತನುಮನ ಧನ ಈತಗೊಪ್ಪಿಸುತಲೆ ಪ. ರಾಣಿಗೆ ಮುದ್ರೆಯನಿಟ್ಟ ಜಾಣನೆನುತಲೆಮುಖ್ಯ ಪ್ರಾಣ ಮುಯ್ಯಾ ಗೆಲೆಸೋ ಈ ಕ್ಷಣ ಎನುತಲೆ 1 ಕೋತಿಯ ಸ್ವರೂಪನಾದ ಈತನೆನುತಲೆ ದೈತ್ಯ ಜಾತಿಯ ಸಂಹರಿಸಿ ಬಂದ ಖ್ಯಾತನೆನುತಲೆ2 ಸೀತೆಯ ಮನೆಗೆ ತಂದ ಮಹಾತ್ಮನೆನುತಲೆಈತಗೆ ಜೋಡ್ಯಾರು ಮುಂದೆ ಖ್ಯಾತನೆನುತಲೆ 3 ಕೃಷ್ಣನ ಸೇವೆಗೆ ಅತಿ ನಿಷ್ಠ ನೆನುತಲೆದುಷ್ಟ ಕೌರವರ ಕೊಂದ ಶ್ರೇಷ್ಠ ನೆನುತಲೆ 4 ಶ್ರೀಶ ರಾಮೇಶಗೆ ಮುಖ್ಯದಾಸನೆನುತಲೆ ವಾಸವಾದ ಬದರಿಯಲಿ ಮಧ್ವೇಶನೆನುತಲೆ5
--------------
ಗಲಗಲಿಅವ್ವನವರು
ಹರಣ ಸೀಳಿದ ದಾರಿತಾರಾತಿಸಂಘ ನಮಿಪೆನನವರತ ಪ ಜ್ಞಾನ ಜ್ಞೇಯ ಜ್ಞಾತೃನಾಮಕ ರಮಾಪತಿಗೆ ಕರ್ಮ ಕರಣಾ ನೀನೆನಿಸಿ ತತ್ವದೇವತೆಗಳಿಂದೊಡಗೂಡಿ ಪ್ರಾಣಪಂಚಕ ರೂಪ ಜಗವ ಪಾಲಿಸುವೆ1 ಕಾರುಣ್ಯನಿಧಿಯೆ ಇಪ್ಪತ್ತೊಂದು ಸಾವಿರದ ಈ ರೀತಿ ಮಾಳ್ಪೆನೆಂದೆಲ್ಲರಿಗೆ ತೋರ್ಪಿ 2 ಉದ್ಧರಿಸಬೇಕು ಯಂತ್ರೋದ್ಧಾರ ಪ್ರಾಣ ಶ್ರೀ ಮದ್ಧನುಮ ಭೀಮ ಗುರುಮಧ್ವ ಮುನಿಪ ಸಿದ್ಧಾಂತ ತತ್ವಜ್ಞ ಸದ್ವೈಷ್ಣವರ ಸಭಾ ಮಧ್ಯದೊಳಗಸಮ ಸದ್ವಿದ್ಯೆಗಳನೊರೆದೆ3 ದಾಶರಥಿ ಪ್ರೀಯತಮ ವಿಭೀಷಣನ ಮನದಭಿ ಲಾಷೆಗಳನೆಲ್ಲ ಪೂರೈಸಿ ನಿಂದೆ ವ್ಯಾಸಮುನಿ ಹೃತ್ಕುಮುದ ಭೇಶ ಬಿನ್ನೈಪೆ ಸಂ ತೈಸು ನಿನ್ನವರ ಭವಕ್ಲೇಶಗಳ ಕಳೆದು 4 ಅಪರೋಕ್ಷ ಪವ ಮಾನ ನಿನ್ನವತಾರ ಅಂಶಗಳಲಿ ನ್ಯೂನವಿಲ್ಲದೆ ಜಗನ್ನಾಥವಿಠಲನ ಚರಿ ತಾನುಸಾರದಲಿ ತವ ಚರಿತೆ ತೋರಿಸುವೆ 5
--------------
ಜಗನ್ನಾಥದಾಸರು
ಹರತನ್ನ ಕರದಲಿ ಪ್ರಾಣಲಿಂಗವನು ಧರಿಸಿಪ್ಪನೆಂಬುದ ಕೇಳಿ ರಾವಣನು ತರುವೆನೆನುತ ಪೋಗಿ ಭಜಿಸೆ ಶಂಕರನ ಕರುಣಿಸಲಾತನ ಮನದಭೀಷ್ಟವನು ದುರುಳ ಖಳತಾ ಕೊಂಡು ಲಿಂಗವ ಪುರಕೆ ಗಮಿಸುವ ವ್ಯಾಳ್ಯದಲಿ ವಿಧಿ ಸುರಪ ಮುಖ್ಯ ಅಮರರು ನಿಮ್ಮಯ ಸ್ಮರಿಸೆ ಮೆಚ್ಚಿದ ಪಾರ ಮಹಿಮನೆ ಮೊರೆ ಹೊಕ್ಕೆ ನಿಮ್ಮ ಪಾದವನು ವಿಘ್ನೇಶ 1 ಕರುಣಿಸೋ ಎನ್ನ ವಾಂಛಿತವ ಸರ್ವೇಶ ಪರಮ ಪಾವನ ವೇಷ ಮುನಿ ಜನರ ಪೋಷಾ ನಿರುತ ಭಕ್ತ ವಿಲಾಸ ನಿರೂಪ ಮಹೇಶ ಹರಿ ಮುಂತಾದವರೆಲ್ಲ ನುತಿ ಸುತ್ತಲಿಂದು ಕರಿವಕ್ತ್ರ ನೀ ಕೇಳು ಪರಮೇಶನಂದು ಕರದ ಲಿಂಗವ ನಿತ್ತನಾ ದಶಶಿರಗೆ ವರ ದೈವ ದ್ರೋಹಿ ರಕ್ಕಸನಾತನಿಂಗೆ ವರ ಮಹಾಲಿಂಗವದು ಸೇರಲು ತಿರುಗಿಡುವಯತ್ನವನು ಪೇಳಿಯೋ ಪೊರೆಯ ಬೇಕೆನಲ ಭಯನಿತ್ತ ನಾ ಮೊರೆಹೊಕ್ಕೆ 2 ಇವಗೆ ಚಕ್ರವನಾಗಹರಿ ಪಿಡಿದಿರಲು ಧನುಜೇಶ ಸಂಧ್ಯಾವಂದನೆಗೆ ಯೋಚಿಸಲು ಘನ ಮಹಿಮನೆ ನೀನು ವಟುರೂಪಿನಿಂದ ಮಣಗುತ್ತಿರಲು ಕಂಡು ಖಳ ಕರದಿಂದ ಅಣುಗನಿಮ್ಮಯ ಮಹಿಮೆಯರಿಯದೆ ಪೇಳೆ ವಿನಯದಿಂ ಲಿಂಗವನು ಖಳಬರುವ ತನಕ ಕರದಲಿ ಪಿಡಿದಂತಹ ಪರಮ ಮಹಿಮನೆ 3
--------------
ಕವಿ ಪರಮದೇವದಾಸರು
ಹರಿ ಗೋವಿಂದ ವಿಠಲ | ಪೊರೆಯ ಬೇಕಿವಳಾ ಪ ನಿರುತ ಹರಿ ಗುರುದಾಸ್ಯ | ಅರ್ಥಿಸುತ್ತಿಹಳಾ ಅ.ಪ. ಸುಪ್ತೀಶತೋರ್ದಪರಿ | ಪ್ರಾಪ್ತಿ ಪ್ರಾಣನ ವಶವುಕ್ಲಪ್ತವಾಯ್ತಿವಳೀಗೆ | ಮುಕ್ತಿ ಸಾಧನಕೆ |ಎತ್ತ ನೋಡಿದರತ್ತ | ಆಪ್ತಮುಖ್ಯ ಪ್ರಾಣಪೊತ್ತಿಹನು ಸರ್ವತ್ರ | ವ್ಯಾಪ್ತಿ ಮೂರುತಿಯೇ 1 ಭವ ಹಾರೀ 2 ಭುವನ ಪಾವನ ನಿನ್ನ | ಸ್ತವನ ವೈಭವ ಕೇಳೆಸರ್ವದಾ ಸರ್ವತ್ರ | ಶ್ರವಣ ಸುಖದಲ್ಲೀನಿರ್ವಿಕಾರದ ತಿರಗಲೀಕೆಯ ಮನಸುಸರ್ವಾಂತರಾತ್ಮಕನೆ | ಸಾರ್ವಭೌಮ 3 ತಾಪ ಭಯಅಧ್ಯಕ್ಷ ಶ್ರೀಹರಿಯೆ ನೀನಾಗಿ ಕಳೆದೂ |ಮಧ್ವಾಂತರಾತ್ಮಕನ | ಹೃದ್ಗುಹದಿ ತೋರೆಂದುಬುದ್ಧಿ ಪೂರ್ವಕ ಬೇಡ್ವೆ | ಪದ್ಮನಾಭಾ 4 ಸಾಧನದ ಜೀವಿಗಳ | ಸಾಧನದ ಪ್ರತಿಭಂಧಸಾದರದಿ ವಾರಿಸುತ | ಮೋದಮನ ನೀಯೋ |ಮೋದಮುನಿ ವಂದ್ಯ ಗುರು | ಗೋವಿಂದ ವಿಠಲನೆನೀದಯದಿ ಪೊರೆ ಇವಳ | ಪ್ರಹ್ಲಾದ ವರದಾ 5
--------------
ಗುರುಗೋವಿಂದವಿಠಲರು
ಹರಿ ನಿನ್ನ ಭಕುತಿಗುನ್ಮತ ಬಿಡಬೇಕು ಗುರು ಹೇಳುವ ಮಾತು ಕೈಗೂಡಬೇಕು ಧ್ರುವ ಕಾಮೋನ್ಮತ್ತಗೆಲ್ಲಿಹದೊ ನಿಜಭಕ್ತಿ ನೇಮ ಉಂಟೆ ಪರಾಮರಿಸುವ ಶಕ್ತಿ ಕೋಮಲತಿಯರ ಕಂಡು ಕಳವಳಾದ್ಯುಕ್ತಿ ಪಾಮರಗಳಿಗೆಲ್ಲಿಹ್ಯದೊ ವಿರಕ್ತಿ 1 ಧನೋನ್ಮತ್ತಗೆಲ್ಲಿಹುದೊ ನಿಜಧ್ಯಾನ ಕಾಣನೆಂದಿಗೆ ಕಣ್ದೆರದು ತಾ ಖೂನ ಹೆಣ್ಣು ಹೊನ್ನಿನ ಮ್ಯಾಲೆ ಇಟ್ಟಿಹ ಜೀವ ಪ್ರಾಣ ಹೀನ ಮನುಜರಿಗೆಲ್ಲಿಹುದೊ ಸುಜ್ಞಾನ 2 ಉನ್ಮತ ಹೋದರೆ ಸನ್ಮತದಿಂದ ತನ್ಯಯಾಗುವರು ಸದ್ಘನ ಕೃಪೆಯಿಂದ ಉನ್ಮನಾಗುವಂತೆ ನೋಡೋ ಮುಕುಂದ ಚಿಣ್ಣ ಮಹಿಪತಿಗೆ ಸದ್ಬೋಧ ಆನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿ ನೀ ನೋಡದಿರೆ ಬಾಳಬಹುದೆ ಪ ಸರುವ ಮೂಲನೆ ದೇವ ಪರಮಪಾವನ ಮಹಿಮ ಅ.ಪ. ಜ್ಞಾನಮಯ ವಿಜ್ಞಾನ ಮಾನಿಗಳ ಹೆದ್ದೈವ ದಿವಿಜ ಪ್ರಾಣಾಧಾರಿ ದೀನ ಬಾಂಧವ ಹೃದಯ ವನಜ ಮಂದಿರ ಪೂರ್ಣಾ ನಿನೊಹಿಸಿ ಮದ್ಧರ್ಮ ಕಾಣಿಸೊ ಕರುಣಾಬ್ಧಿ 1 ಘೋರ ಕಲಿಮಲ ವ್ಯಾಪ್ತಿ ಮೀರಿಹುದು ಸಜ್ಜನರ ಶ್ರೀರಮಣ ಶ್ರುತಿಧರ್ಮ ಜಗವೆಲ್ಲಿದೆಯಯ್ಯ ಭಾರಕರ್ತನೆ ನಿನ್ನ ಆರಾಧಿಸದೆ ಜನರು ಸ್ವಾರಾಧ್ಯರಾಗಿಹರು ಗತಿಯೇನೊ ಸುಜನಕೆ 2 ಕಾಲ ಸರ್ವಾತ್ಮ ಮರುದಾತ್ಮ ಜಯೇಶವಿಠಲ ಗಮನ ಗೀರ್ವಾಣ ಮುನಿ ವಂದ್ಯ ಶೌರಿ ರುಜುಮನವ ಕೊಡೆನಗೆ 3
--------------
ಜಯೇಶವಿಠಲ
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿ ಹರಿ ಗೋವಿಂದ ಯನಬಾರದೇ ಪ್ರಾಣಿ ಪ ಹರಿ ಹರಿ ಗೋವಿಂದಯನಲು ಭಕುತಿಯಲಿ | ಹರಿಸುವ ಪಾಪೌಘವನು ಸಾರಂಗ ಪಾಣೀ 1 ವೃತ ತಪ ಸಾಧನದಿಂದಲೀ ನಿಲುಕದ ನಿಜಗತಿಯಾ| ಕ್ಷೀತಿಯೋಳು ಸುಲಭದಿ ಕೊಡುವನು ದೀನಾಭಿಮಾನಿ 2 ತಂದೆ ಮಹಿಪತಿ ಕಂದಗ ಸಾರಿದ ಯಚ್ಚರ ನೀ | ಛಂದದಿ ಇಹಪರ ನೀವದು ಯದುರಾಜ ಸ್ಮರಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿಯೆಂದು ಸ್ಮರಿಸೆಲೋ ಪ್ರಾಣಿ ಪ ಹರಿ ಹರಿ ಯೆಂದು ಸ್ಮರಿಸೆಲೋ ಪ್ರಾಣೀ | ಹರಿಸುವ ಬಂಧ ಸಾರಂಗ ಪಾಣಿ 1 ನರಜನ್ಮದಲಿ ಬಂದು ನೀ ಮುಂದುಗಾಣೀ | ಮರೆದು ತನಗ ತನ್ನ ಮಾಡುವರೇ ಹಾನಿ 2 ತರುಣೋಪಾಯ ದೋರುವ ಮೊರೆಹೊಕ್ಕರೆ ನೀ | ಗುರುಮಹಿಪತಿ ಸ್ವಾಮಿ ನಿಜ ಸುಖದಾನಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಕರ್ತ ನಾನಲ್ಲೆಂದು ಹಿರಿಯರಾಡಿದ ಮಾತು ಅರಿ ಜೀವೋಪಿ ಕರ್ತನೆಂಬ ವಿರೋಧ ಪ ಸಿರಿ ಅರಸ ತತ್ವೇಶರ ಕೈಯೊಳು ಚರಿಪಾಧೀನ ಜೀವನಲ್ಲವೆ ಪರಮ ನಿಷ್ಕ್ರಿಯ ನಾ ಹೀನ ಮನವೆ ಅ.ಪ ಜಲಾಗ್ನಿ ಸ್ತಂಭ ಜಪ ಕಲಿತ ಮಾತ್ರಕೆ ಪ್ರಾಣಿ ನಿಲಬಹುದೆ ಅನಲ ಜ್ವಾಲೆಯೊಳು ಮ್ಯಾಲೆ ಸುಖದಾಸೆಯಿಂದ ಹಲವು ಕರ್ಮಾಚರಿಸಿ ಗೆಲಬಹುದೆ ನಿಲಯ ಹರಿಕರ್ತನೆಂದ ನುಡಿಗೆ 1 ಬಿಡಿಬಾಯ ಮಾತಿಗೆ ಪೊಡವಿಪ ಒಪ್ಪುವುದಾದರೆ ಪಡುವದ್ಯಾಕೆ ತದ್ಧಿತಪಃ ಪ್ರಮಾಣ ಬಿಡುವುಧ್ಯಾಗೆ ಶ್ರುತಿ ಸ್ಮøತಿ ಹರಿ ಆಜ್ಞೆ ಕಾಯ ಏಕವಾಗೋ ತನಕ 2 ಜ್ಞಾನೇಚ್ಛಾಕ್ರಿಯ ಶಕ್ತಿ ಮಿನುಗುವ ಜೀವಕ್ಕೆ ನಿತ್ಯ ಸ್ವಭಾವದಲ್ಲೆ ಜ್ಞಾನಿಗೆ ಕೊಡುವ ಯಥೇಷ್ಟಾಚರಣೆ ಏನೇನು ಕೂಡದು ಶ್ರವಣಾಧಿಕಾರಿಗೆ 3 ನಾನು ನನ್ನದು ಎಂಬ ಜ್ಞಾನ ಅನುಗಾಲ ಇರಲಾಗಿ ನೀನು ನಿನ್ನದು ಎಂಬ ವಂಚನೆಯಲ್ಲವೆ ಹೀನ ಬಿಡದು ಇದರಿಂದ ಅನುಮಾನ ಮಾಡಸಲ್ಲ ತನ್ನ ಕ್ರಿಯ ಅನ್ಯಕ್ರಿಯದಂತಾಗೋತನಕ ಮನವೆ 4 ಜ್ಞಾತಾಜ್ಞಾತ ಕರ್ಮದೊಳು ಜ್ಞಾತಾನುಷ್ಠಾನ ವಿಶೇಷ ಪೀತನಾಹ ಶ್ರೀಶ ತಾನು ಕರ್ಮ ನಿಷ್ಪಲವಲ್ಲವು ಜ್ಞಾತ ವಿಜಯ ರಾಮಚಂದ್ರವಿಠಲ 5
--------------
ವಿಜಯ ರಾಮಚಂದ್ರವಿಠಲ
ಹರಿದಾಟ ನಿಲಿಸು ಮನದಘದೂರ ಸುಖಸಾರ ಎರಗುವೆನು ತವಪದಕೆ ಸ್ಮರಿಸಿ ನಿಮ್ಮುಪಕಾರ ಪ ಸಂತಸವ ಕೊಡು ಎನ್ನ ಅಂತರಂಗದಿ ನಿಂತು ಕಂತುಪಿತ ಚಿಂತಿಪರ ಚಿಂತಾಮಣಿ ಪ್ರಭುವೆ 1 ಅಲ್ಪಮನಸಿನ ಕುಕಲ್ಪನೆಯ ಪರಿಹರಿಸು ಅಲ್ಪರಿವ ದೀನರಿಗೆ ಕಲ್ಪತರು ನೀನು 2 ನಾಮಾಡಿದಪರಾಧ ಪ್ರೇಮದಿಂ ಕ್ಷಮಿಸು ಶ್ರೀ ರಾಮ ಮಮಪ್ರಾಣೇಶ ಪ್ರೇಮಾಬ್ಧಿನಿಲಯ 3
--------------
ರಾಮದಾಸರು
ಹರಿಧ್ಯಾನವೆ ಗಂಗಾಸ್ನಾನ ವಿಷ- ಯಾನುಭವ ಜಯವೆ ಮೌನ ಪ್ರಾಣೇಶನೆ ಸರ್ವೋತ್ತಮ ವೇದ ಪು- ರಾಣ ಪ್ರಮಾಣವೆ ಜ್ಞಾನ1 ಮತ್ತರ ಸಂಗ ಪ್ರವೃತ್ತಿಯೊಳಿರದೆ ನಿ- ವೃತ್ತಿಯೊಳಿರುವುದೆ ಮಾನ ಸತ್ಯಾತ್ಮನ ರೂಪದೊಳು ಭೇದರಾ- ಹಿತ್ಯವೆ ಸರ್ವಸಮಾನ2 ಕರ್ತ ಲಕ್ಷ್ಮೀನಾರಾಯಣನ ಪಾದ ಭಕ್ತಿ ವಿರಹಿತನೆ ಹೀನ ಚಿತ್ತಜೋದ್ಭವ ಪರಾತ್ಪರ ತ್ರಿಜಗವು ಪ್ರತ್ಯಗಾತ್ಮನಾಧೀನ 3
--------------
ತುಪಾಕಿ ವೆಂಕಟರಮಣಾಚಾರ್ಯ