ಒಟ್ಟು 4552 ಕಡೆಗಳಲ್ಲಿ , 126 ದಾಸರು , 2958 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾನವಿಲ್ಲ ಧರ್ಮವಿಲ್ಲ ಜ್ಞಾನವಿಲ್ಲಏನು ಹೇಳಿದರೇನು ವಿಷಯಮೆಚ್ಚಿದವಗೆ ಪ. ಕಂಡಕಂಡವರ ಅನ್ನಕೆ ಸಿಲುಕಿ ಅನುಗಾಲಭಂಡತನದಲಿ ಕಾಲವ ಕಳೆಯುತತಂಡ ತಂಡದಿ ಬಾಹ ಔತಣಕೆ ಮೈಯ್ಯುಬ್ಬಿಉಂಡು ಎನಗಿಂದಧಿಕ ಯೋಗ್ಯನಿಲ್ಲವೆಂದು 1 ಪರ್ವಕಾಲ ಪಿತೃದಿವ್ಸ ಗುರುಗÀಳ ಪುಣ್ಯದಿನಸರ್ವಕರ್ಮವ ತ್ಯಜಿಸಿ ಅತಿಥಿಗೀಯದೆಪರರ ಅನ್ನವ ಬಿಡದೆ ಉತ್ಸಾಹದಲಿ ಪೋಗಿನಲಿನಲಿದುಂಡು ಸ್ತೋತ್ರವ ಮಾಡಿ ದಿನಕಳೆವೆ 2 ಅನ್ಯರೊಡವೆಯು ತನಗೆ ಬಂದರೆ ಸಂತೋಷತನ್ನೊಡವೆ ಒಬ್ಬರಿಗೆ ಕೊಡಲು ಕ್ಲೇಶಉನ್ಮತ್ತನಾಗಿ ಉದರವ ಪೊರೆವ ಈ ದೋಷಮನ್ನಿಸಿ ದಯಮಾಡಿ ಸಲಹೋ ಹಯವದನ3
--------------
ವಾದಿರಾಜ
ದಾವನಿಹನೈಯ್ಯಾ ಕೃಷ್ಣಾ ಎನ್ನ ಕಾವವನು ನೀನಲ್ಲದೆ ಪ ನಾರಿ ದ್ರೌಪದಿ ನೆನೆಯಲು ಸಭೆಯಲ್ಲಿ ಶೀರಿ ದಾನವ ಮಾಡಿದೀ ಕೃಷ್ಣಾ ಘೋರ ದೂರ್ವಾಸ ಮುನಿಯು ನಡುವಿರುಳೆ ಹಾರೈಸಿ ಬರೆಯನ್ನವಾ ದೇವಾ ನಾರಿ ದ್ರೌಪದಿಯ ಮೊರೆಯ ದೊರೆಯು ಆಲಿಸೇ ಆ ರಾತ್ರಿ ಕಾಯ್ದ್ಯೋಬಲೆಯಾ 1 ಪರಿವಾರದಿಂದ ಕೂಡಿ ಕರಿರಾಜನಂಗ ನಾಟಕಂದೈದಲು ಭರದಿನೆಗಳಿಯು ಪಿಡಿಯಲು ಕಾಲನು ಇರದೆ ನಿನ್ನನು ಸ್ಮರಿಸಲು ದೇವಾ ಗರುಡವಾಹನನಾಗಿ ನೀನೈತಂದು ಕರುಣಿಸಿದ್ಯೋ ಕೊನೆಯ ಗತಿಯ 2 ದುರುಳ ಹಿರಣ್ಯಕನ ಶೀಳಿ ನರಹರಿಯೆ ತರಳ ಪ್ರಲ್ಹಾದನ ಪೊರೆದ್ಯೋ ದೇವಾ ಮರೆಯದಜಮಿಳ ನೆನೆಯಲು ಕೇಳ್ದು ನೀ ಪರಿಹರಿಸಿದೆ ಯಮಬಾಧೆಯ ದೇವಾ ನರಸಿಂಹವಿಠಲ ಸ್ವಾಮಿ ಧ್ರುವನನ್ನು ಪೊರೆದಂತೆ ರಕ್ಷಿಸೆನ್ನಾ 3
--------------
ನರಸಿಂಹವಿಠಲರು
ದಾವನು ಗುರುಸಹವಾಸಿ ಅವನಿದ್ದದ್ದೇ ಸ್ಥಳ ಕಾಶಿ ಧ್ರುವ ಕೂಡಿದವರ ತ್ರಿತಾಪಭಂಗಾ ರೂಢಿಗೆ ಮೆರೆವಳು ಙÁ್ಞನಗಂಗಾ ಮೂಡಿಹ ಆತ್ಮಜ್ಯೋತಿ ಲಿಂಗಾ ಕಂಡಿಹ ಗುಣರಾಸೀ 1 ವಿವರಿಸಿ ತಾರಕಮಂತ್ರದ ನೆಲಿಯಾ ಕಿವಿಯೊಳು ಹೇಳಲು ಗುರುರಾಯಾ ಭವ ಭಯಾ ಸ್ವಾನಂದವ ಬೆರೆಸೀ2 ಜನದಲಿ ನಾನಾ ಸಾಧನ ಜರಿದು ಮನದಲಿ ಒಂದೇ ನಿಷ್ಠಿಯ ಹಿಡಿದು ಅನುಮಾನದ ಸಿದ್ಧಾಂತಗಳದು ಸದ್ಭಾವನೆ ಒಲಿಸೀ 3 ಪ್ರೇಮಿಯ ನಿಜಸುಖ ಪ್ರೇಮಿಕ ಬಲ್ಲಾ ಈ ಮನುಜರಿಗಿದು ಭೇದಿಸುದಲ್ಲಾ ಶ್ರೀ ಮಹಿಪತಿ ಬೋಧಿಸಿದನು ಸೊಲ್ಲಾಪೂರಿಸಿ ಮನದಾಸಿ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸನಾದೆನಯ್ಯ ನಿಮ್ಮ ಏಸು ಜನ್ನಕೆ ವಾಸನೆ ಪರಿದ್ಯೋ ಶ್ರೀ ಹರಿ ಎನ್ನ ಜೀವಕೆ ಧ್ರುವ ಒಂದು ಮೊದಲಿಗಲ್ಲದೆ ಅನೇಕ ಜನ್ಮ ಜನಿಸಿ ಬಂದು ನೊಂದು ಬೆಂದು ಕಂದಿ ಕಳದೆನಯ್ಯ ಭಕ್ತ ವತ್ಸಲ 1 ವರ್ಮ ತಿಳಿಯಗೊಡದೆ ಎನ್ನ ಕವರ್iಪಾಶ ಕಟ್ಟಿ ಕೊರಳ ನಿರ್ಮಿಸಿ ನಿರ್ಮಿಸಿ ತಂದ್ಯೊ ನಿರ್ಮಳಾನಂತಾತ್ಮನೆ 2 ತಪ್ಪಿಲ್ಲದೆ ತಪ್ಪು ಹೊರಸಿ ಕೊಂಡಾಡಿದಯ್ಯ ಒಪ್ಪು ನಿಮಗಿದು ಕಪಟನಾಟಕ ಶ್ರೀ ಕೃಷ್ಣನೆ 3 ಎನ್ನ ಹೃದಯದೊಳಗಿದ್ದು ಭಿನ್ನಭೇದ ಮಾಡಿದೈಯ್ಯ ಇನ್ನಾರ ಮುಂದುಸುರಲಾಗದೊ ಶ್ರೀ ಕಾಂತನೆ 4 ಹೆಜ್ಜೆವಿಡಿದು ಬಂದ ನಿಜ ದಾಸ ಮಹಿಪತಿಗಿನ್ನು ಸಜ್ಜನರಿಗೀವ ಪದವ ಕೊಟ್ಟು ಕಾಯೊ ಕರುಣನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸರಾಗಿರೊ ವೈಷ್ಣವ ದಾಸರಾಗಿರೊ ದಾಸರಾಗಿ ಬಯಲಾಸೆಯ ನೀಗಿ ರ- ಮೇಶನ ಗುಣವಾರಾಶಿಯೊಳಿರಿಸುವ ಪ. ಸುಂದರ ಮಾನಾನಂದತೀರ್ಥಮತ ಸಾಂದ್ರ ಸುಖಾಂಬುಧಿಮಿಂದ ಮಹಾತ್ಮರ 1 ದಿವ್ಯಲೋಕಜನ ಭವ್ಯೋಭಯವಿಧ ಕಾವ್ಯರಚನ ಲಾತವ್ಯಯತೀಂದ್ರರ 2 ಸೀತಾಪತಿ ರಘುನಾಥನ ಮನದೊಳ- ಗಾತು ಭಜಿಪ ಗಣನಾಥ ಜನಕನ 3 ಶ್ರೀ ಮಹೇಶ ವಟು ವಾಮನ ಪದಯುಗ ಸಾಮಜವಾಹನ 4 ಕಾಕರಟನದೊಳ ಭೀಕರ ಮತವ ನಿ- ರಾಕರಿಸಿರುವ ಸುಧಾಕರ ಮೂರ್ತಿಯ 5 ತಂತ್ರ ದೀಪಿಕಾ ಯಂತ್ರವ ರಚಿಸಿದ ಮಂತ್ರಾಲಯವರ ಮಂತ್ರದೇವತೆಯ 6 ಗೋಪಿನಾಥನೆ ಭೂಪನೆಂದು ಸಂ- ತಾಪವ ಬಿಡಿಸುವ ಶ್ರೀಪಾದರ ಪದ 7 ಮಂದಕಲಿಯ ಕಾಲಿಂದಲೊರಿಸಿದ ಪು- ರಂದರದಾಸರ ಹೊಂದಿ ಹರಿಯ ನಿಜ8 ಸುಜನ ಹೃದಂಬುಜ ಸುಖಕರ ದಿನಮಣಿ ವಿಜಯರಾಜ ಪದ ಭಜನೆಯ ಮಾಡುತ 9 ಭಂಗುರ ಭವಭಯ ಭಂಗದ ಸುಗುಣ ತರಂಗನ ಒಲಿಸಿದ ಮಂಗಳ ಮಹಿಮರ 10 ಹರಿಕಥಾಮೃತದ ತೆರೆಗಳೊಳಾಡುವ ಪರತರಸಾರವ ಸುರಿದ ಮಹಾತ್ಮರ 11 ಸಿಡುಕರ ಸಂಸ್ಕøತಿ ಕಡಲೊಳು ಮುಳುಗಲು ಬಿಡದಲೆ ಕೈಪಿಡಿದೊಡೆಯನ ತೋರ್ಪರ 12 ಅರಿಷಡ್ವರ್ಗವ ತರಿದು ಬಿಸುಟು ಶ್ರೀ- ವರನ ಕೃಪಾರಸ ಸುರಿಸಿದ ಧನ್ಯರ 13 ಮೂಕನ ವಾಗ್ಮಿಯ ಮಾಡಿ ಮುರಾರಿಗೆ ಸಾಕ ಕೊಟ್ಟಿ ದೀನಾಕರದಾಸರ 14 ಮಾತಿಗೆ ಕಂಸಾರಾತಿನಲಿಯೆ ಜಗ ನ್ನಾಥರೆಂ¨ ವಿಖ್ಯಾತಿ ಪಡೆದವರ 15 ತಾಪತ್ರಯಗಳ ತಪ್ಪಿಸಿ ವೆಂಕಟ ಭೂಪನ ಸದಯಾರೋಪಗೈದವರು 16
--------------
ತುಪಾಕಿ ವೆಂಕಟರಮಣಾಚಾರ್ಯ
ದಾಸರಾಯಾ ಎನ್ನ | ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ ಪ ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವು ಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ | ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ | ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ1 ಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ | ಸಂಗೀತ ರಸನ ಪಾನಮಾಡಿ ಹರುಷದಿ | ದಾಸರಾಯಾ | ಹರಿ | ಡಿಂಗರೊಳುತ್ತುಂಗನೆನಿಸಿಕೊಂಡೆ ದಾಸರಾಯ 2 ಕುಶಲಗಾನವ ಕೇಳಿ ಗುರುಸತ್ಯ ಪೂರ್ಣರು | ದಾಸರಾಯಾ | ಪರಾ ವಸುನಾಮ ಗಂಧರ್ವನವತಾರ ನೀನೆಂದು | ದಾಸರಾಯಾ | ಪೆಸರಿಟ್ಟರಂದು ವಿದ್ವಜ್ಜನ ಮೆಚ್ಚಲು ದಾಸರಾಯಾ | ಎನ ಗೊಶವಹುದೇ ನಿಮ್ಮ ಮಹಿಮೆ ಕೊಂಡಾಡಲು |ದಾಸರಾಯಾ | 3 ಚರಿಸಿದೆ ಪುಣ್ಯಕ್ಷೇತ್ರಗಳ ಭಕುತಿಯಿಂದ | ದಾಸರಾಯಾ | ಪ್ರತಿ | ವರುಷ ಬಿಡದೆ ಶೇಷಗಿರಿಯವಾಸನ | ದಾಸರಾಯಾ | ಪರಿಯಂತ | ದಾಸರಾಯಾ | ಪರಿ ಚರಿಯವ ಕೈಕೊಂಡು ಪಡೆದೆ ಮಂಗಳಗತಿ ದಾಸರಾಯ 4 ಮುನಿಯು ಉಪೇಂದ್ರರಾಯರು ನಿಮ್ಮ ಚರಿತೆಯ | ದಾಸರಾಯಾಕೇಳಿ ಸಾನುರಾಗದಿ ಸರ್ವ ಮಂತ್ರೋಪದೇಶವ | ದಾಸರಾಯಾ | ಆನುಪೂರ್ವಕಮಾಡಿ ಅತಿ ಸಂತೋಷದಿ | ದಾಸರಾಯಾ | ಕೊಟ್ಟರು ಶ್ರೀ ನರಸಿಂಹ ಪ್ರತಿಮೆ ಸಾಲಿಗ್ರಾಮ | ದಾಸರಾಯಾ | 5 ಕಿಂಕರನೆನಿಸಿ ಪರಂದರದಾಸರೆ | ದಾಸರಾಯಾ | ಅವರಿಂ ದಂಕಿತ ವಹಿಸಿ ನಿಶ್ಯಂಕೆಯಿಂದ ನೀನು ದಾಸರಾಯಾ | ಪೊಂಕವ ಪೊಗಳುತ ಪೊಡವಿಯೊಳು ಚರಿಸಿದೆ | ದಾಸರಾಯಾ|ಭವ ಪಂಕವ ದಾಟ ಪರೇಶನನೈದಿದೆ | ದಾಸರಾಯಾ 6 ಪರಿಯಂತ ಕರ ಒಡ್ಡಲೊಲ್ಲೆನೆಂಬುವ ಛಲ | ದಾಸರಾಯಾ | ನಿನಗೆ ಸಲ್ಲಿತು ನಿಜ ಭಾಗವತರ ಪ್ರಿಯ | ದಾಸರಾಯಾ | ನಿಮ್ಮಾ ಅನುಭವೋಪಾಸನೆ ಏನು ತಿಳಿಯದು ದಾಸರಾಯಾ 7 ಕಮಲ ಧ್ಯಾನ ದಾಸರಾಯಾ | ಸ್ನಾನ ವರ ಮಂತ್ರ ಜಪ ತಪ ವಿಹಿತಾಚರಣೆಗಳು | ದಾಸರಾಯಾ ಪೆರತೊಂದು ಸಾಧನ ಮನ ವಾಕ್ಕಾಯಗಳಲಿ | ದಾಸರಾಯಾ | ನಾನೊಂದರಿಯೆ ದಯಾಬ್ಧಿ ಉದ್ಧರಿಸೆನ್ನ ಭವದಿಂದ ದಾಸರಾಯಾ 8 ನಾರಾಯಣಾತ್ಮಜ ಅನಂತಾರ್ಯರುದರದಿ ದಾಸರಾಯಾ |ಪುಟ್ಟಿ | ನೂರೊಂದು ಕುಲಗಳುದ್ಧಾರ ಮಾಡಿದೆ | ದಾಸರಾಯಾ | ಕಾರುಣ್ಯನಿಧಿ ಜಗನ್ನಾಥವಿಠಲ | ದಾಸರಾಯಾ | ನಿಮ್ಮ ಚಾರು ಚರಿತ್ರೆಯ ತುತಿಸಿ ಪಾವನನಾದೆ | ದಾಸರಾಯಾ 9
--------------
ಜಗನ್ನಾಥದಾಸರು
ದಾಸರಿವರ ನೋಡಿರೊ | ಗುರು ವಿಜಯ |ದಾಸರಿವರ ಪಾಡಿರೋ ಪ ವ್ಯಾಸರಾಜ್ಞೆಯಲಿಂದ | ವ್ಯಾಸ ಕಾಶಿಗೆ ಪೋಗಿ |ಶ್ರೀಶಾನುಗ್ರಹದಲಿ | ಭಾಸಿಸೀ ಮೆರೆದಂಥ ಅ.ಪ. ಎರಡನೆ ಯುಗದೊಳಗೆ | ಸುರಲೀಲ | ವರಕಪಿ ಎಂದೆನೆಸಿ |ಶಿರಿ ರಾಮಚಂದ್ರನ್ನ | ಚರಣ ಸೇವಕರಾಗಿಸುರ ವಿರೋಧಿಗಳ ಬಹಳ ಸಂಹರಿಸಿದ 1 ಯಾದವರಲಿ ಜನಿಸಿ | ನಿಕಂಪಾಖ್ಯ | ಶ್ರೀದಕೃಷ್ಣನ ಭಜಿಸಿ |ಮಾಧವ ಗೆದುರಾಂತ | ದೈತ್ಯರ ಸದೆಬಡಿದುಯಾದವೇಶನ ಪದ | ಕರ್ಪಿಸಿ ಮೆರೆದಂಥ 2 ಪುರಂದರ ದಾಸರ | ವರ ಗೃಹದಲಿ ಇದ್ದುಹರಿಚರಿತೆ ಶ್ರವಣದಿ | ವಿಪ್ರನಾಗ್ಯುದೀಸಿದ 3 ಮಧ್ವಪತಿಯ ನಾಮದಿ | ಭೃಗ್ವಂಶದಿ | ಮುದ್ದು ಮಗನೆನಿಸಿಮಧ್ವೇಶ ಹರಿಪಾದ | ಶ್ರದ್ಧೆಯಿಂದಲಿ ಭಜಿಸಿಮಧ್ವರಾಯರ ಮತ | ತುತಿಸಿ ಮೋದಿಸಿದಂಥ 4 ಚೀಕನಪರಿ ಕ್ಷೇತ್ರದೀ | ದಾಸಪ್ಪನು | ಆ ಕೂಸಮ್ಮನ ಉದರದಿಬೇಕಾಗಿ ಜನಿಸುತ್ತ | ಪ್ರಾಕು ಪ್ರಾರಬ್ದವನೇಕ ಬಗೆಯಲಿ ಉಂಡ | ಮಾಕಳತ್ರನ ಕಂಡ 5 ಪುರಂದರ | ದಾಸರೂಪಿಯಲಿಂದ |ಸೂಸಿ ಶಾಸ್ತ್ರವ ಮಧ್ವ | ಭಾಷ್ಯಾನು ಸಾರದಿ |ಭಾಷೆ ಕನ್ನಡದಲ್ಲಿ | ಮೀಸಲೆನಿಸಿ ಪೇಳ್ದ 6 ಧ್ಯಾನೋಪಾಸನೆ ಕರ್ಮವ | ಯೋಗ್ಯರಿಗೆ | ಗಾನಗೈದಿಹ ಸುಜ್ಞಾನೀ | ಮಾನ್ಯ ಮಾನದ ದುಷ್ಟ | ಗಾನಕೆ ಮನ ಕೊಡದೆಮೌನಿಯಾಗುವ ಮಾರ್ಗ | ದಾನವ ಮಾಡೀದ 7 ಸ್ವಪ್ನದಲ್ಲೆನಗವರೂ | ದರ್ಶನದಿ | ಕೃಪ್ಪೆಯಲನುಗ್ರಹಿಸಿ |ಅಪ್ಪಾರ ಮಹಿಮರು | ತಪ್ಪದೆ ತ್ರಯ ಬಾರಿಒಪ್ಪಿ ತೀರ್ಥವನಿತ್ತು ಕಳುಹಿದ ಮಹಾಂತ 8 ವತ್ಸರ ಕಾರ್ತೀಕ | ಸಿತ ದಶಮಿ | ಆವಗುರುವಾಸರದಿಭಾವಜ ಪಿತ ಗುರು | ಗೋವಿಂದ ವಿಠಲನಭಾವದಿ ಕಂಡು ಸುಯೋಗದಿ ಪೊರಟಂಥ 9
--------------
ಗುರುಗೋವಿಂದವಿಠಲರು
ದಾಸರು ಭಜಿಸುವೆ ನಿನ್ನನು ವಿಜಯದಾಸಾರ್ಯನೆ ಪೊರೆಯೊ ಪ ಭಜಿಸುವೆ ನಿನ್ನ ಪಾದಭಜಕಜನರ ಪಾದ ರಜದೊಳಿಟ್ಟು ನನ್ನ ರಜತಮ ಹರಿಸೊಅ.ಪ ವಿಜಯಸಾರಥಿಪ್ರಿಯ ನಿಜದಾಸ ನೀನೆಲೋ ಗುರುವೆ ಅಜಪಿತನಜಸುತ ನಿಜಲೋಕಗಳೆಲ್ಲ ಬಿಜಯ ಮಾಡಿ ನಿಜಗತಿಪ್ರದನಾರೆಂದು ನಿಜವನರಿತು ದೈವಾವೆಂದರುಹಿದ ಭೃಗುಮುನಿ1 ರಕ್ಷಿಸಬೇಕೋ ಶ್ರೀ ಲಕ್ಷ್ಮೀಶ ದಾಸನೆ ಗುರುವೆ ಪಕ್ಷಿವಾಹನನ ನೀ ವಕ್ಷತಾಡನ ಮಾಡೆ ತಕ್ಷಣ ಕ್ಷಿತಿ ಕುಕ್ಷಿಯೊಳು ಜಗದ್ರಕ್ಷಕನಾದ ಮು ಮುಕ್ಷುಗಳೊಡೆಯನೆ ನೀಕ್ಷಿಸಿದಾ ಧೀರಾ2 ದ್ವಾಪರದಲ್ಲಿ ನಿಕಂಪನೆಂದೆನಿಸಿದೆ ಮೆರೆದೆ ಶಾಪತನದಿ ವ್ಯಾಧರೂಪದಿಂದ ಶ್ರೀ ಗೋಪಾಲಗೆ ಬಾಣ ಮ್ಮಪ್ಪನೆಂದು ತ್ರಿಜಗಕೆ ತೋರ್ದೆ 3 ಉದ್ಧರಿಸಲು ನೀನುದ್ಭವಿಸಿದೆಯೋ ಮಧ್ವಪತಿಯ ಅಭಿದಾನದಿ ನೀನು ಮಧ್ವಾಗಮ ಶೋಧಿಸಿ ಸುಧೆಯ ತಂದು ಶುದ್ಧ ದುಗ್ಧರನೆಲ್ಲ ಉದ್ಧಾರಮಾಡಿ ಪ್ರ ಸಿದ್ಧಿ ಪಡೆದ ಅನಿರುದ್ಧನ ದಾಸನೆ 4 ಪುರಂದರದಾಸರ ವರ ಸುಕುಮಾರ ಧೀರಾ ಉರಗಾದ್ರಿವಾಸವಿಠಲನ ದಾಸ ಭೂಸುರನಾಗಿ ಚಿಪ್ಪಗಿರಿಯೊಳು ಪರಿಪರಿ ಸಾಧನ ತೋರಿ ಮೆರೆವ ಗುರು 5
--------------
ಉರಗಾದ್ರಿವಾಸವಿಠಲದಾಸರು
ದಿನ ದಿನ ಹರಿಕೃಷ್ಣಯೆನುತಿರೆ ಮನುಜನ ಮನವೆ ವೈಕುಂಠವೆಂದೆನಿಸುವುದು ಪ ನೆನೆಯುವ ಭಕ್ತನ ಕಿವಿಯಲಿ ಕೊಳಲಿನ ದನಿಜನಿಪುದು ಕಂಬನಿ ಮಿನುಗುವುದು ಅ.ಪ ಪೊಡವಿ ಪತಿಯ ಎಡತೊಡೆಯೊಳಿದ್ದಾ ಮುದ್ದು ಹುಡುಗನ ಬಲತಾಯಿ ಪಿಡಿದೆಳೆಯೇ ಕಡು ದುಗುಡದಿ ಶಿಶು ಅಡವಿಯೊಳಗೆ ಸಿರಿ ಯೊಡೆಯನ ಕಂಡು ಕೊಂಡಾಡಿದನು 1 ದ್ಯೂತದೊಳೆಲ್ಲವ ಸೋತರ ಸತಿಯಳ ಘಾತಿಸಿ ಸೀರೆಯ ಸೆಳೆದಾಗ ಭೀತಿಯಿಂದಲಿ ಪರಂಜ್ಯೋತಿ ಕೃಷ್ಣಾಯೆನೆ ಪ್ರೀತಿಯೊಳಕ್ಷಯ ವರವಿತ್ತಾ ಕೃಷ್ಣಾ2 ಕೂಗಿದೊಡನೆ ತ್ವರೆಯಾಗಿ ಬರುವ ನಮ್ಮ ನಾಗಶಯನ ಮಾಂಗಿರಿಪತಿಯ ರಾಗದಿ ಪೂಜಿಸಿ ವಂದಿಸಲವನನು- ರಾಗದಿ ನರ್ತಿಪನೆಡಬಲದಲಿ ರಂಗಾ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಿಮ್ಮಾಕ ನಿನಗ್ಯಾಕೆ ಎಲೆ ಎಲೆ ಜಮ್ಮಾಸಿ ಜರ ತಿಳಿಕೊ ಪ ದಿಮ್ಮಾಕ ನಿನಗ್ಯಾಕೆ ಛೀಮಾರಿ ನಿನ್ನ ದಿಮ್ಮಾಕ ಮುರಿಲಿಕ್ಕೆ ಗುಮ್ಮವ್ವ ನಿಂತಾಳೆ ಅ.ಪ ಸೊಕ್ಕಿನಿಂದ ನಡೆವಿ ಮುಂದಿಂದು ಲೆಕ್ಕಕ್ಕೆ ತರದಿರುವಿ ಫಕ್ಕನೊಯ್ದೆಮನವರು ಉಕ್ಕಿನ ಪ್ರತಿಮೆಯ ತೆಕ್ಕೆಯೊಳಾನಿಸಿ ನಿನ್ನ ಒಕ್ಕಲಿಕ್ಕುವರವ್ವ 1 ತಾರತಿಗಡಿ ತುಸು ವಿ ಚಾರಮಾಡಿನೋಡು ಘೋರ ಯಮದೂತರು ಹಾರೆ ಕಾಸಿ ಯೋನಿ ದ್ವಾರದಿ ಸೇರಿಸಿ ಘೋರ ಬಡಿವರವ್ವ 2 ಪಾಮರಳಾದಲ್ಲೆ ಮುಂದಿನ ಕ್ಷೇಮವ ಮರೆತಲ್ಲೇ ಭೂಮಿಸುಖಕೆ ಮೆಚ್ಚಿ ತಾಮಸದಲಿ ಬಿದ್ದು ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರಾದಿ 3
--------------
ರಾಮದಾಸರು
ದೀನ ಪರಿವಾರ ಪಾಹಿ ದಾತಾರ ಮಾಂ ದೇಹಿಮೇ ಚರಣಸೇವಾಂ ಪ ಬೃಂದಾವನಶೈಲವಾಸ ಪರಮಕೃಪಾಕರ ಪಾಪನಾಶ ಸುಧೀಂದ್ರ ವಿಭೂಷ ಹೃದಯೋಲ್ಲಾಸ ಅ.ಪ ಸರ್ವೇಶ ವೆಂಕಟೇಶ ಗುರುವರ ಸುಖಧಾಮ ಸುರರಂಜನ ಅಖಿಲ ಬೃಂದಾಳಿಭೀಮ ಶ್ರೀರಾಮ ಪರಿಭಾಷಾ ಮನಿವೇಶ ಜಿತಸೋಮ 1 ಪ್ರಾಣೇಶಸುತ ಭಜನ ಸತತ ವಿರಾಜ ಪರಿ ಪೂರ್ಣದರ್ಶನ ನಿರಂತರದಾಯಕ ಮುನಿಪುಂಗವ ಹರಿಣ ಸಾರಾಂಗ 2 ಮಂಗಳ ಚರಣ ತುರಂಗ ಗಂಗಾಮೃತ ಪೂರ್ಣತೀರ್ಥ [ತುಂಗಾತೀರ ನಿವಾಸಿನೀಂ] ಮಾಂಗಿರಿರಂಗ ಸಂಪ್ರೀತ ಮಾಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೀನರಿಗೆಲ್ಲಾ ಬಂಧು ಕೇಶವ ತಂದೆ ದೀನರಿಗೆಲ್ಲಾ ಬಂಧು ಪ ದಾನವಾಂತಕÀ ನಿನ್ನ ನೇಮಾನುಯಾಯಿಗೆ ಮಾನವ ಕೊಟ್ಟು ರಕ್ಷಿಪ ಬಂಧು ನೀನೇ ಅ ದೀನ ದ್ರೌಪದಿ ದೇವಿಗೇ ಅಕ್ಷಯವಿತ್ತು ಮಾನವ ಕಾಯ್ದೆ ನೀನೇ ಪ್ರಾಣವು ಹಾರುವಾಗ ಜಮಿಳ ಸ್ಮರಿಸಲು ಯೇನನ ಸಲಹೆ ಮೋಕ್ಷವನಿತ್ತ ಹರಿಯೇ 1 ದೀನ ದೇವಿಕಿ ದೇವಿಯ ಗರ್ಭದಿ ಬಂದು ದೈನ್ಯಳ ಸಲಹಿತಿದೆಯೋ ಹೀನ ವಾಲ್ಮೀಕನು ನಾಮವ ಭಜಿಸಲು ಹೀನನಿಗೊಲಿದು ಬುದ್ಧಿಯನಿತ್ತ ಹರಿಯೇ 2 ಸನ್ನುತ ನಮಿಸುವಂಥ ದಾಸರಿಗೆಲ್ಲ ಸನ್ನುತ ಸ್ಮರಿಸುವಂಥ ನಿತ್ಯ ಭಜಿಪ ದೀನರಿಗೆಲ್ಲ ಚನ್ನಕೇಶವ ಸ್ವಾಮಿ ಪೊರೆವಂಥ ಬಂಧೂ 3
--------------
ಕರ್ಕಿ ಕೇಶವದಾಸ
ದೀನಶರಣ ಮಾಮನೋಹರಾ ಕೃಪಾಪೂರಾ ಪ ಗಾನಲೋಲ ತರಣಿರುಚಿರ ನೀಲಗಾತ್ರ ಅ.ಪ ನೀರಜಾಕ್ಷ ನೀರಜಭವ ನಾರದಾದಿನುತಚರಣಾ ಚಾರುಚರಿತಾ ನಿಗಮವಿದಿತಾ | ವಾರಣೀಶನಮಿತಾ 1 ಸುಗುಣ ಭರಿತ ಮಾಂಗಿರೀಶ ಪಾರ್ಥಸೂತ್ರ [ಅಗಣಿತಗುಣಚರಿತ ಕಾಯೋ ನಾ ಶರಣಾಗತ] 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್