ಒಟ್ಟು 1875 ಕಡೆಗಳಲ್ಲಿ , 111 ದಾಸರು , 1413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಪುರುಷೋತ್ತಮವಿಲಾಸ 62-2 ಆನಂದ ಜ್ಞಾನಮಯ ಅಖಿಲ ಗುಣ ಪರಿಪೂರ್ಣ || ಅನಘ ಲಕ್ಷ್ಮೀರಮಣ ಶರಣು ಜಗದೀಶ ಪ ವನಜಾಸನಾದಿ ಸುರರಿಂದ ಆರಾಧಿತನೇ | ವನಜಜಾಂಡದಿ ಜಗಜ್ಜನ್ಮಾದಿಪತೇ ಅಪ ಅಮಿತ ಅನಂತ ಗುಣಕ್ರಿಯಾರೂಪ ಅನಂತ ಶೀರ್ಷಾನಂತ ಉರುಸುಗುಣಪೂರ್ಣ|| ಅನಂತಾಕ್ಷ ಸರ್ವಜ್ಞ ಸಾಕ್ಷಿ ಸರ್ವಾಧ್ಯಕ್ಷ || ಅನಂತಪಾದನು ಅನಂತರೂಪಸರ್ವಸ್ಥ 1 ಸಹಸ್ರಪಾತ್ ಸತ್ಯಂ ಸತ್‍ಸೃಷ್ಟಿ ಜೀವನದ ಸಹಸ್ರಾಕ್ಷಜ್ಞಾನಂ ಎರಡು ವಿಧಜ್ಞಾನ || ಸಹಸ್ರಶೀರ್ಷಾನಂತಂ ಆನಂದ ಆನಂದ ಮಹಾಮಹಿಮ ಪೂರ್ಣಗುಣ ಪುರುಷನೀಬ್ರಹ್ಮ 2 ನಾಕಭೂಪಾತಾಳ ಜಗದಂತರ್ಬಹಿವ್ರ್ಯಾಪ್ತ || ಭಕುತರ ಸಮೀಪಸ್ಥ ಇತರರಿಗೆ ದೂರ || ಏಕಾತ್ಮ ಪರಮಾತ್ಮ ಪರಮ ಪುರುಷವಿಷ್ಣೋ ನೀಕಾಲಗುಣ ದೇಶಾಪರಿಶ್ಚಿನ್ನ ಭೂಮನ್ 3 ಪ್ರಕೃತಿಶಚವ್ಯಕ್ತ - ಮಹದಾದಿ ತತ್ವಂಗಳಿಗೇ | ಆಕಾಶ ಮೊದಲಾದ ಭೂತ ಪಂಚಕಕ್ಕೆ || ಸುಖಮಯನೇ ನೀಸರ್ವೆ ಚೇತನಾ ಚೇತನಕೆ | ಏಕ ಆಶ್ರಯ ಅನಂತ ಶೀರ್ಷಾಕ್ಷಪಾದ 4 ಪರಮೇಶ ಅವಿಕಾರ ಸಮರ್ಥ ಉರು ತೈಜಸಚ್ಛಕ್ತಿ ರೂಪವಷಟ್ಕಾರ ಪ್ರಕ್ರತಿ ಸರ್ವದಿ ನೀನು ಸ್ವೇಚ್ಛೆಯಿಂ ತುಂಬಿರುವಿ | ಪ್ರಕೃತಿ ಸರ್ವವು ನಿನ್ನಧೀನವೋ ಸ್ವಾಮಿ 5 ದ್ಯುಭ್ವಾದಿ ಜಗತ್ತಿಗೆ ಆಧಾರಾಧಿಷ್ಠಿತನು ದುಭ್ವಾದಿಗಳವ್ಯಾಪ್ಯ ವ್ಯಾಪಕನು ನೀನು ಸರ್ವಸ್ಥನಾಗಿ ನೀ ಸರ್ವವಶಿಯಾದುದರಿಂ ಸರ್ವನೀನೇಂದೆನಿಸಿಕೊಂಬಿಯೋ ಸ್ವಾಮಿ 6 ಆಧಾರ ಆಧೇಯೆ ಅನಂತಾಲ್ಪಶಕ್ತಿಯು ಅಧಿಷ್ಠಾನಾಷ್ಟಿತ ವ್ಯಾಪ್ಯ ವ್ಯಾಪಕವು ಭೇದ ಈರೀತಿಯಲಿ ಸುಸ್ಪಷ್ಟವಾಗಿದೆಯು ಇದಂಸರ್ವಂ ಉಕ್ತಿ ನಿನ್ ಸ್ವಾಮಿತ್ವ ಬೋಧಕವು 7 ಅಧೀನ ನಿನ್ನಲ್ಲಿ ಸ್ವಾಮಿ ಸರ್ವವಶಿಸರ್ವ | ಓದುನವು ಕರ್ಮಫಲಭುಂಜಿಪ ಸಂಸಾರಿಗಳು ಅದರಂತೆ ಮುಕ್ತರಸ್ವಾಮಿ ಆಶ್ರಯನು 8 ಇವು ಮಾತ್ರವೇ ನಿನ್ನ ಮಹಿಮೆಗಳು ಪರಮಾತ್ಮ || ಸರ್ವ ಈ ಚೇತನಾಚೇತನ ಪ್ರಪಂಚವು ಸರ್ವೇಶ ನಿನ್ನಂಶ ಸಹೃದಯ ಕಿಂಚಿತ್ತು 9 ಒಡೆಯನಿನ್ನಮಿತ ಶಕ್ತಿಯೊದಂಶದಲೆ ಜಡಜಗತ್ ಇರುವಿಕೆ ವಿಕಾರವುಸರ್ವ || ಜಡ ಭಿನ್ನರಲಿ ನಿನ್ನ ಸಾದೃಶ್ಯ ಅತಿ ಸ್ವಲ್ಪ ಪಾದ ವೊಂದಂ ಶೃತ ಸುಪಾದನು 10 ಅಧೀನತ್ವದಿಂಜಗತ್ ಇದಂಸರ್ವಂ ಎಂದಂತೆ - ಪಾದೋಸ್ಯ ವಿಶ್ವದಲಿ ಭಿನ್ನಾಂಶಜೇಯ || ಭಿನ್ನಜೀವರು ನಿನ್ನ ಪಾದರಾಗಿತಿಹರೋ ಚಿತ್ಚೇತ್ಯಯಂತ 11 ಪೂರ್ಣಗುಣನಿಧಿ ಅನಘ ಜನ್ಮಾದಿಕರ್ತಅಜ ಆವಣ್ನಯೋನಿತ ಪ್ರಾಪ್ಯ ಮಧ್ವಸ್ಥ ಶರಣು || ವನಜಭವಪಿತ ಶ್ರೀಶ ಪ್ರಸನ್ನ ಶ್ರೀನಿವಾಸ ನಮೋ ಪರಮ ಪುರಷ 12
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ
ಶ್ರೀ ಮಧ್ವಾಚಾರ್ಯರು ಸ್ಮರಿಸು ಸಂತತ ಗುರುಗಳಾ ಬಿಡದೆ ಅನುದಿನಾ ಪ ವಾತ ಭೀಮನ ಒಡೆಯ ವೇದವ್ಯಾಸಯುತ ಸಾರಂಗಧರನಆ ಪ್ರೇಮದಿಂದಲಿ ಭಜಿಪೆನಡಿಗಳ ಬಿಡದೆ ಅ.ಪ. ಮಂದ್ರಜಾಸನ ಸುತನ ವಚನ ಕೊಂಡು ಧರೆಯೊಳು ಬಂದು ಭಜಿಸುತ ಪೊಂದಿಪವರ ವೃಂದ ಹರಿಸಿ ಸುಗುಣ ಸುವೃಂದಗಳಿಗೆ ಬಂಧುಪರ ಗೋವಿಂದನೆಂಬುದ ಬೋಧಿಸಿದನ 1 ಮಂಗಳಾಂಗನ ಕೊಂಡು ತುಂಗಕುಲ ತೀರ್ಥರ ಶರದೀ ಬಂದೂ ಭೂಮಿಯೊಳು ಅನಂಗಪಿತನ ಒಲಿಸಿರಂಗರಾಜನ ದೂತನಿಂದಾ ವಿದ್ಯವಾ ಕೊಂಡು ಬಂದು ಪರಮಾದರದಿ ವ್ಯಾಸತ್ರಯಯುತ ಸುಧೆಯನಗರದನಂಘ್ರಿಯಾ 2 ರಘುಕುಲಾ ಜಲಧೀಗೆ ಜಲಜವೈರಿಯಂತೊಪ್ಪುವಾಮಾರನಯ್ಯ ಶಿರಿ ಪರಶು ಪಾಣೀ ಯಾತ ಜಡೆಧಾರ ತುರೀಯನಾಶ್ರಯಿಸೀ ಬಾಣರೂಪವಾ ಬಿಡದೆಬಾಣವಾ ಗುರಿ ಮಾಡಿಬಾಣವರದನ ಸರಿಯೆಂದೆನಿಸಿ ಬಾಣ ಭೇದವನೆ ಬೋಧಿಸಿಬೋಧತೀರ್ಥರ ಮತಾಧಿಪನ ತಂದೆವರದಗೋಪಾಲವಿಠಲನಭಜಕಾ 3
--------------
ತಂದೆವರದಗೋಪಾಲವಿಠಲರು
ಶ್ರೀ ಮಾರುತಾತ್ಮ ಸಂಭೂತ ಹನುಮ ಭೀಮ ಮಧ್ವಾಖ್ಯ ಯತಿನಾಥ | ಮೂಲ ರಾಮಕೃಷ್ಣಾರ್ಪಿತ ಸುಚೇತಾ | ಮಮ ಸ್ವಾಮಿ ಚಿತ್ತೈಸೆನ್ನ ಮಾತಾ 1 ಅಂಜನಾದೇವಿ ಸುಕುಮಾರ |ಎಮ್ಮ ನಂಜಿಸುವ ಘೋರ ಸಂಸಾರ |ಹೇ ಪ್ರ ನಿಗಮ ಸಂಚಾರ | ಕ್ಲೇಶ ಭಂಜಿಸಿ ಸಲಹೋ ಗುಣೋದಾರ 2 ಕುಂತಿ ಜಠರದಲುದಿಸೆ ಬಂದೆ | ಮಾ ಹೊಂತ ಕೌರವರ ನೀ ಕೊಂದೆ | ಅನಾ ದ್ಯಂತ ಕಾಲದಿ ಎಮ್ಮ ತಂದೆ | ನೀನೆ ಸಂತೈಸಬೇಕೆಂದು ನಿಂದೆ 3 ಮಧ್ಯ ಗೇಹಾಖ್ಯ ದ್ವಿಜಸದನ | ದೊಳಗೆ ಉದ್ಭವಿಸಿ ಮೆರೆದೆ ಜಿತಮದನ | ಧರ್ಮ ಪದ್ಧತಿಗಳ ಪ್ರಸನ್ನವದನಾ | ತಿಳಿಸಿ ಉದ್ಧರಿಸೋ ದನುಜಕುಲ ನಿಧನ4 ಶ್ರೀ ಪೂರ್ಣಬೋಧ ಯತಿರಾಯ | ಎಮ್ಮ ತಾಪತ್ರಯಗಳಿಂದ ನೋಯ | ಗೊಡದೆ ನಿಕಾಯ | ಕೃಷ್ಣ ದ್ವೈಪಾಯನಗೆ ನೀನೆ ಪ್ರೀಯ 5 ಬದರಿಕಾಶ್ರಮಕೆ ನೀ ಪೋಗಿ | ಲಕ್ಷ್ಮೀ ಹೃದಯ ವಾಸನ ಪದಕೆ ಬಾಗಿ | ಭಾಷ್ಯ ಮುದದಿಂದ ಪೇಳ್ದೆ ಚೆನ್ನಾಗಿ | ಎನಗೆ ಅದರ ಭಾವವ ತಿಳಿಸೋ ಯೋಗಿ6 ತಾಪ ಭಾರ ತೀರಮಣ ಮಹಪಾಪ ವೆಣಿಸಿ ದೂರ ನೋಳ್ಪರೆ ಸುಪ್ರತಾಪ ಪರಮ ಕಾರುಣಿಕ ತೋರೋ ತವರೂಪ 7 ಭಕ್ತರಿಗೊಲಿದು ಭವದಿಂದ ನೀ ಮುಕ್ತರನÀ ಮಾಡು ದಯದಿಂದ ನೀನೆ ಶಕ್ತನಹುದೆಂದು ವೇದವೃಂದದೊಳಗೆ ಉಕ್ತವಾಗಿದೆ ನಿಮ್ಮಾನಂದಾ8 ಜೀವಕೋಟಿಯೊಳು ನೀನೆ ಪಿರಿಯ ಎಮ್ಮ ನೋವು ಸುಖಗಳನು ನೀನೆ ಅರಿಯ ಈಗ ನೀವೊಲಿಯದಿರೆ ಹರಿ ನಮ್ಮ ಪೊರೆಯಾ ಜಗವ ಕಾಯ್ವ ಗುರುವರ ನೀನೆ ಖರೆಯ 9 ಶ್ರೀ ಜಗನ್ನಾಥ ವಿಠ್ಠಲಯ್ಯ ನಂಘ್ರಿ ಪೂಜಿಸುವ ಸಜ್ಜನರ ಕೈಯಾ ಪಿಡಿದು ನೀ ಜೋಕೆ ಮಾಡುವುದು ಜೀಯಾ ನೀನೆ ಈ ಜಗತ್ರಯ [ಕೆ] ಗುರುವರ್ಯಾ 10
--------------
ಜಗನ್ನಾಥದಾಸರು
ಶ್ರೀ ರಘೂತ್ತಮತೀರ್ಥರು ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುಗಳ ಪಾದಾಬ್ಜವ ಪಾಡಿದೆನು ಸನ್ಮಹಿಮೆಗಳ ನಾ ಬೇಡಿದೆನು ಮನದಣಿಯೆ ವರಗಳ ಈಡು ಇಲ್ಲದೆ ಕೊಡುವ ಪ್ರಭುಗಳ ಅ.ಪ. ಪಂಚಕೃಷ್ಣಾರಣ್ಯಕ್ಷೇತ್ರ ಪಿನಾಕಿಯ ತೀರದಲ್ಲಿ ನಿಂತು ಮಿಂಚುತಿಹ ಕಾಷಾಯದಂಡ ಕಮಂಡಲವ ಧರಿಸುತ್ತ ಧರೆಯೊಳು ಪಂಚಬಾಣದ ಪಿತನ ಗುಣಗಳ ಅಂಚೆಯದಿ ಪೊಗಳುತ್ತ ಹರುಷದಿ ಸಂಚಿತಾಗಾಮಿಗಳ ಕಳೆದು ಪ್ರಪಂಚದಲಿ ಮೆರೆವಂಥ ಗುರುಗಳ 1 ಅಲವಬೋಧರ ಭಾಷ್ಯಟೀಕಾ ಭಾವವನು ಸುಜನರಿಗೆ ಬೋಧಿಸಿ ಕಲುಷಮತಗಿರಿ ಸಮುದ(ದಾ)ಯಂಗಳ ಕುಲಿಶದಂದಲಿ ಖಂಡಿಸುತಲಿ ಮೂಲರಾಮ ದಿಗ್ವಿಜಯರಾಮರ ಪಾದಕಮಲಕೆ ಭೃಂಗನೆನಿಸುತ ಶೀಲಭಕ್ತಿ ವಿರಕ್ತಿಮತಿಗಳ ಪಾಲಿಸುತ ಯತಿಮೌಳಿ ರತುನರ 2 ಕಾಮಧೇನು ಸುಕಲ್ಪತರು ಚಿಂತಾಮಣಿಯವೋಲ್ ಕಾಮಿತಾರ್ಥವ ಪ್ರೇಮದಲಿ ಬೀರುತ್ತ ಅಧ್ಯಾತ್ಮದಿ ತಾಪತ್ರಯ ಕಳೆಯುವ ಸ್ವಾಮಿ ಶ್ರೀಹರಿ ಶ್ರೀದವಿಠಲನ ದಾಸಾಗ್ರಣಿಯೆನಿಸಿ ಮರೆವರ ನೇಮದಿಂದಲಿ ಶ್ರೀ ರಘೂತ್ತಮ ಮೌನಿವರ್ಯರ ಕರುಣ ಬಯಸುತ 3
--------------
ಶ್ರೀದವಿಠಲರು
ಶ್ರೀ ರಘೋತ್ತಮತೀರ್ಥರು ನಮೋ ದೈಶಿಕಾರ್ಯ | ರಘೂತ್ತಮ ಪದನಮೋ ದೇವತಾತ್ಮ ಪ ವಿಮಲ ರಾಮ ಸನ್ಮಹಿಮ ಭಜಕಗುರುನಮೋ ನಮೋ ಪೂತಾತ್ಮ ಅ.ಪ. ಚಾರು ವ್ಯಾಖ್ಯ ಕೃತ ದೀಕ್ಷಭಾರಿ ಗ್ರಂಥ ಬೃಹದಾರಣ್ಯ ವಿವರಣ ನ್ಯಾಯ ಗ್ರಂಥಲಕ್ಷ್ಯಸಾರ ತತ್ವಪ್ರಭೆ ಚಾರುಗೀತ ಪ್ರಭೆ ತೋರ್ದ ಭಾವದಕ್ಷ 1 ಬೋಧ ಕಾರ್ಯತೀವ್ರ ಮನದ ದುರ್ಭಾವ ಕಳೆದು ಹರಿಭಾವ ಈಯೊ ವರ್ಯಭಾವ ಕೊಲಿವ ಕರ್ಮಾವಳಿಗಲ್ಲೆನೆ ಓವಿ ಪೇಳ್ದ ದಾಸಾರ್ಯಕಾವ ಕರುಣಿ ಹರಿಭಾವದಿ ನಿಲ್ಲುವ ಭಾವ ಬೋಧಕೃತ ಆರ್ಯಾ 2 ತೈಜಸ ಒರಯ ನ್ಯಾಯ ಸುಧೆ ಪೇಳ್ದ ಕೋಣಾಧ್ಯಕ್ಷಪರಿಪರಿ ಪ್ರಾರ್ಥಿಪೆ ಗುರು ಗೋವಿಂದ ವಿಠಲನ ಚರಣದಿ ದೀಕ್ಷ 3
--------------
ಗುರುಗೋವಿಂದವಿಠಲರು
ಶ್ರೀ ರಮಣಿಯರಸ ಕಂ ಜೋದ್ಬವಾರ್ಚಿತ ಪುಣ್ಯ | ಚಾರುತರ ಯುಗ್ಮಪದ ರಂಜನಾಸುರ ಸಂ | ಹಾರ ಸುರ ಜನ ಪಾಲ ಪರಮಾನಂದ ಸಾ | ಕಾರನಲಿದುಪ್ಪವಡಿಸಾ ಹರಿಯೇ ಪ ಹರಿವೇಗ ಮಂಮೀರ್ವ ಹರಿಗಳೇಳಂಗಳದಲಿ | ಹರಿಯಾಗ್ರಜನನಿಂದ ಹರಿಪದದೊಳಗ ಜವದಿ ಹರಿವುತಿಹ ಝಗ ಝಗಿಪ ಹರಿಮಯದ ರಥದೊಳಗ | ಹರುಷಾದೊಳಡರ್ದು ಬಳಿಕಾ || ಹರಿದಿಕ್ಕಿ ಲಿಂದೊಗೆದು ಹರಿಜಗಳ ವಿಸ್ತರಿಸಿ | ಹರಿಯುಮೊದಲಾದವರ ಹರಿಸಿ ತೇಜವ ಜಗಕ | ಪರಿ ಹರಿಸಿ ಉದಿಸಿದಹರಿಯು ನರಹರಿಯೆ ಉಪ್ಪವಡಿಸಾಹರಿಯೇ1 ಪವನಜ ಖಗರಾಜ | ಭಜಿಪಧ್ರುವದ ಶಶಿರಾನುಜ ಭಿಷ್ಮಾ ತನ್ನ ಆ | ತ್ಮ ಜರಿತ್ತ ರಿಕ್ಷಪತಿ ರಜನೀಶ ವಾನ್ನರ | ಧ್ವಜ ವಿಧುರ ಅಂಬರೀಷಾ || ದ್ವಿಜ ಪುಂಡಲೀಕ ಪದ್ಮಜ ಮುಖ್ಯರಾದ ನಾ | ಶುಕ ಉದ್ಧವ ಬಲಿ ಜಯ ವಿಜಯರ ಕೂಡಿ | ಸುಜನರೈ ತಂದ | ರಂಬುಜ ಪದಕ ನಮಿಸೆ ವಾ | ರಿಜನಾಭ ಉಪ್ಪವಡಿಸಾ ಹರಿಯೇ 2 ಪಾಕ ಶಾಸನ ಅಗ್ನಿ ಆಕಾಳ ನೈಋತಿರ | ತ್ನಾಕರ ಪ್ರಭಂಜನಪಿ ನಾಕಿವರ ಕೌಬೇರ | ನಾಕೆರಡು ದಿಕ್ಕಿನವರೇಕೋ ಭಾವದಲಿಂದ ನಾಕ ಪುರಗಜ ಅಜಮಹಾ ಕೋಣ ಮನುಜ ಮಕ | ಹಾಕುರಂಗಂದಣವು ಗೋಕುಲೆಂದ್ರನು ಇಂತು | ವಾಹನ ವಿವೇಕದೇರಿ ಬಂದಿದೆ | ಲೋಕೇಶ ಉಪ್ಪವಡಿಸಾ ಹರಿಯೇ3 ಶ್ರೇಷ್ಠ ಕಶ್ಯಪ ಋಷಿ ವಶಿಷ್ಠ ಗಾರ್ಗೇಯ ತಪೋ | ನಿಷ್ಠ ವಿಶ್ವಾಮಿತ್ರ ಸೃಷ್ಠಿಯೊಳ ಜಲದ ಸಂ | ದಷ್ಟ ವರುಣನ ಗರ್ವ ಭಷ್ಟ ಮಾಡಿದಗಸ್ತಿ | ಅಷ್ಟಾದಶ ಧ್ವಯ ಬಾರಿ ಸೃಷ್ಟಿರ ಚನೆಯ ಕಂಡ | ತುಷ್ಟ ಬಕದಾಲ್ಪ್ಯ ಉತ್ಕøಷ್ಟ ಸನಕಾದಿಗಳು | ದೃಷಮಾನಿಸರಾಗಿ ಮುಟ್ಟಿಸ್ತುತಿ ಸುತಲಿದೇ | ಕೃಷ್ಣ ನೊಲಿ ದುಪ್ಪವಡಿಸಾ ಹರಿಯೇ 4 ವರ ವಾಮ ದೇವಾತ್ರಿ ಪರಮಗಾಲ ವನುಸೌ | ಭರಿಯ ಕೌಡಿಣ್ಯ ಸುಖ ಭರಿತ ಕೌಸಿರ ಮತಿ | ಪರಿಪೂರ್ಣ ಜಯಾಮುನೀರ್ವರು ಭರತರುಸುಗುಣ ಶರಧಿ ವೈಶಂ ಪಾಯನಾ|| ಸುರಪುರೋಹಿತ ಮಹಾ ಸುರರ ವಂಶಾವಳಿಯು | ತರಣಿಜ ಬುಧಾದಿಗಳ | ಕರದೊಳು ಸುಫಲವಿರಿಸಿ ಹರುಷಾದಲಿ ನಿಂದಿದೆ || ಪರಬೊಮ್ಮ ಉಪ್ಪ ವಡಿಸಾ ಹರಿಯೇ 5 ಡಮರುಧರ ಜಡೆಯೊಳಗ ಸಮುಲ್ಲಾಸದಲಿ ಮೆರೆವ ಅಮರ ನದಿ ಪಾಪಹರ ಸಮಕೃಷ್ಣ ವೇಣಿ ಸು | ವಿಮಲ ಗೋದಾವರಿ ಕುಮುದ್ವತಿ ಕಾವೇರಿ | ಶ್ರಮಹಾರಿ ತುಂಗ ಭದ್ರಿ || ಯಮುನಿ ಫಲ್ಗುಣಿ ಮಹೋತ್ತಮ ಸರಸ್ವತಿ-ಕಪಿಲ | ನರ್ಮದಿ ಮೊಲಾಗಿ ಅಮಲಗ್ರೋದ ಕವ | ಕ್ರಮದಿಂ ಕೊಂಡು ನದಿ ಚಮು ಬಂದಿದೇ ಪೊರಗ | ಕಮಲಾಕ್ಷ ಉಪ್ಪವಡಿಸಾ ಹರಿಯೇ6 ದಾರುಣೀ ಚರರಾದಾ ಚಾರುಗೋ ಬ್ರಾಹ್ಮಣರು | ಸಂರಕ್ಷಣೆಯ ಮಾಳ್ವ ಧೀರಯ ಯಾತಿ | ಮೇರು ಸಮ ಹರಿಶ್ಚಂದ್ರ ವೈರಾಟ ಪತಿಜನಕ | ಆರಾಯ ನಳ ನಹುಷನು || ಶೂರ ಹಂಸಧ್ವಜನು ಸಾರಿ ವಿಷ್ಟಕ್ಸೇನ | ವೀರ ಪಾಂಚಾಲನ - ಕ್ರೂರ ಚಂದ್ರಹಾಸ ಮ | ಯೂರ ಧ್ವಜ ಪ್ರಮುಖರಾರತದಿ ಬಂದರಿದೆ | ಕಾರುಣನೆ ಉಪ್ಪಾವಡಿಸಾ ಹರಿಯೇ 7 ವಾರಿಯೋಳ್ ನಡೆವಹತೇರಗಜ ಶೃಂಗರಿಸಿ | ಏರಿಬಂದಿಳಿದು ಮಹಾ ವೀರ ಭಟರೋಗ್ಗೀನೊಳು | ಬಾರಿ ಬಾರಿಗೆ ನಿಮ್ಮ ಚೀರುತ ಬಿರುದಂಗಳನು ಭೂರಿಜನ ಸಚಿದಣಿಸುತಾ || ಪಾರವಿಲ್ಲದ ಪಟಹ ಭೇರಿ ನಿಸ್ಸಾಳತಹ | ಳಾರವರಿದು ಊದುತಲಿ ಈ ರೀತಿ ನೃಪರದಳ | ಚಾರುವಾಲಗವ ಮನವಾರಗುಡುತಿದೆ ಪರಮ ಶೌರಿ ವಲಿದು ಪ್ಪವಡಿಸಾಹರಿಯೇ 8 ಕೇಣವನು ಗೊಳ್ಳದಿಹ ಜಾಣ ಕಲೆಯಿಂದ ಗೀ | ರ್ವಾಣ ಸ್ತ್ರೀಯರು ನೃತ್ಯ ಮಾಣುತಲಿ ಬರೆಕರದಿ | ವೀಣೆಯನು ತಾಂ ಪಿಡಿದು ವಾಣಿ ತುಂಬರ ಸುಪ್ರ ವೀಣನಾರದ ಗಣಪನು || ಶ್ರೇಣಿಯಿಂ ತೊಡಗೂಡಿ ತ್ರಾಣದಿಂದಲಿ ನಾಮ | ವಾಣಿಯಲಿ ವಚಿಸುತಿದೆ ಕಾಣಲ್ಕೆ ನಿಂದಿದೆ | ಏಣಾಂಕನುಜೆ ಮುಗಿದು ಪಾಣಿಯನು ಗುರು ಮಹಿಪತಿ ಪ್ರಾಣನೊಲಿದುಪ್ಪವಡಿ ಸಾ ಹರಿಯೇ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ರಮಣಿವರ ಹರಿಯೆ ಬಾ ಸಮೀರಣ ಮಂತ್ರಿಯ ದೊರೆಯೆ ಬಾ ವಾರುಧಿಶಯನ ವರಾಭವ ಕಂಬ್ವರಿಧಾರಿಬಾ ವೈರಿ ಬಾ ದೈತ್ಯ ವಿದಾರಿ ಬಾರೆಂದು ಹಸೆಗೆ ಕರೆವೆನು ಶೋಭಾನೆ 1 ಭಕ್ತಾಭಿಲಷಿತದಾಯಿ ಬಾ ಮುಕ್ತಾಶ್ರಯ ಫಣಿಶಾಯಿ ಬಾ ಯುಕ್ತಿಯಿಂದ ದುರ್ವೃತ್ತನ ಮೂಲೆಯೊಳೊತ್ತಿದ ಬಾ ವರ ಸಂಪತ್ತಿದ ಬಾ ವಿವಿಧ ಶುಭಾತಿದ ಬಾರೆಂದು ಹಸೆಗೆ ಕರೆವೆನು ಶೋಭಾನೆ 2 ದುಷ್ಟಜನಾಟವಿ ಕಾಲನ ಬಾ ಪಾಲನ ಬಾ ಪತಿ ಬೆಟ್ಟದೊಡೆಯ ಸಂ- ದೃಷ್ಟಾ ಬಾ ನೃತ್ಯವರಕಾಷ್ಠ ಬಾ ಹೂಣನ ಮೆಟ್ಟುತ ಬಾ ಹಸೆಯ ಜಗುಲಿಗೆ ಶೋಭಾನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ರಾಘವೇಂದ್ರರು ಈ ಪದಾರಾಧಾನಾ, ಪಾವನ ಮಹಾ ಪಾವೇಭ ಸಂಚಾನನಾ ಪ ತಾಪತ್ರಯ ಹರ, ರಾಘವೇಂದ್ರರ ಬಹುಪದವ್ಯಾಪಾರನಾ, ಅನುದಿನಾ ಅ.ಪ. ದುರಿತ ರೇಣು ಮುಂತಾದ ತೃಣಪ ರಕ್ಷಿಪಗಿಡು ತೃಣ ಪರಿಹಾರವಿದೆ, ನಾಘಾದೆ 1 ಅಂಧ ಬದಿರ ಮೂಕರು ಸೇವಿಸುತ ನಂದಾಗಳೇರುವರು ವೃಂದಾವನ ಸೇವೆ, ಗೈದು ವಂದಿಸಿ ದಿವ್ಯ ಕಂದನ್ನೆತ್ತಾಡಿಸಿರೋ, ಜೋ ಎನ್ನಿರೊ 2 ಕುಪ್ಠ ಭಗೇಂದ್ರಕ್ಷಯಾ, ಬಾಲಗ್ರಹ ದುಷ್ಟ ಪಿಶಾಚಭಯ ಕಷ್ಟ ಓಡಿಸಿ ದಯ ದಯದೃಷ್ಟಿಯಿಂದ ನಿಖಿ- ಳಾಷ್ಠ ವಿಟ್ಟು ಕರೆವಾ, ತಾ ಮೆರೆವಾ 3 ಆರಾಧಿಸುತಲಿ ಬಂದ, ನವಲಗುಂದ ಸಾರಸಿಂದಾರ್ಯರಿಂದ ಕ್ಷೀರ ಸೇಚನ ಮೂವತ್ತಾರು ವರುಷ ಗುರುವಾರ ಮೃಷ್ಠಾನ್ನದಿಂದ, ಆನಂದ 4 ಬಹಳ ಗುಣಗಳ ನೋಡಿ, ಒಲಿದು ಒಲಿದು ಮಂತ್ರಾ ಲಯದೊಳು ನಿಂತು ಶೀಲ ಸಂಪತ್ತಿಗೆ ಒಲಿದಿಹ ರಾಜ ಗೋಪಾಲ ಭಕ್ತರ ಚಯಾ ಆಶ್ಚರ್ಯ ಶ್ರೀರಸ್ತು5
--------------
ರಾಜಗೋಪಾಲದಾಸರು
ಶ್ರೀ ರಾಘವೇಂದ್ರರು (4) ಈತನೆ ಶ್ರೀ ಪ್ರಲ್ಹಾದನು ಆಹ್ಲಾದಕರನು ಪ ಈತನೆ ಪ್ರಲ್ಹಾದ ಜಗನ್ಮಾತಾಲಕುಮಿಪತಿಯ ಗುಣವಭೂತಳದಲ್ಲಿ ತೋರಿ ಬಹು ನಿರ್ಭಿತಿಯಿಂದ ಮೆರೆದ ಗುರು ಅ.ಪ. ದುಷ್ಟ ಹಿರಣ್ಯಕ ಬಹುವಿಧದಲ್ಲಿ ನಿಷ್ಕರುಣಿಯಾಗೆಕಷ್ಟ ಬಡಿಸೆ ಸುತಗೆ ಜವದಲಿಸೃಷ್ಟಿಗೊಡೆಯ ಸ್ತಂಭದಿಂದ ದೃಷ್ಟನಾಗಿ ಅಸುರನಂದನಶ್ರೇಷ್ಠ ನಖದಿಂ ಬಗೆಯ ನಿಷ್ಠೆಯಿಂದ ನಮಿಸಿದ ಗುರು 1 ಶೂರ ಬಾಲ್ಹೀಕನೆನಿಸಿದ ಬ್ರಹ್ಮಣಮುನಿ ಪಾದಾರವಿಂದ ದಯದಿ ಭಜಿಸಿದಘೋರ ಮಾಯಾವಾದಿಗಳನು ವಿದಾರಣ ಮಾಡಿ ಸುಧಾಸಾರಪಾನ ಮಾಡಿ ವಿಭುದಚಾರು ಚಂದ್ರಿಕಾ ರಚಿಸಿದ ಗುರು 2 ಸಿಂಧುಶಯನ ಶ್ರೀ ರಮಾಪತಿ ವಿಠ್ಠಲನ ಭಕುತಿಯಿಂದ ಭಜಿಪ ರಾಘವೇಂದ್ರಯತಿಎಂದೆನಿಸುತ ಮಂತ್ರನಿಲಯ ಮಂದಿರವನು ಮಾಡಿ ಭಕುತವೃಂದದ ಪುರುಷಾರ್ಥಗಳನು ತಂದು ಕೊಡುವ ಕಲ್ಪದ್ರುಮನು 3
--------------
ರಮಾಪತಿವಿಠಲರು
ಶ್ರೀ ರಾಮ ನಾಮಾ ಧ್ರುವ ಶರಣಾಗತರಕ್ಷಕನೇಮ ಸುರ ಮುನಿಜನಪೂರಿತಕಾಮ ಹರ ಹೃದಯಕಾಗಿಹುದು ವಿಶ್ರಾಮ ಶ್ರೀ ರಾಮನಾಮ 1 ತರಣೋಪಾಯಕತಿ ಸುಗಮ ವರ್ತಿಸುತೀಹದಾಗಮ ನಿಗಮ ಪುರತ್ರಯ ಪಾವನ ಮಾಡುತಿಹುದು ಪರಮ 2 ಕರುಣಾರ್ಣವ ಕಲ್ಪದ್ರುಮ ವರಪ್ರತಾಪದಿ ನಿಸ್ಸೀಮ ತರಳ ಮಹಿಪತಿ ಪಾವನ ಮಾಡಿತು ಜನ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ರಾಮನಾಮ ಸ್ಮರಿಸೀಕ್ಷಕಾರಿ ಘೋರಾವತಾಪಗಳದಾಗಳದಾ ಪುರಾರಿ ಆರಾದರೇನು ಜಪಿಸೀ ಜಪಸೀದ ಯೋಗಿ ಸಾರುವೆ ನೊಡಿ ಸುಖವಾ ಸುಖವನು ನೀಗಿ1 ಸೋಕಲು ರಾಮಪದವಾ ಪದವನು ನೀಗಿ ತಾಕನ್ಯಳಾದಳರಿಯಾ ಅರಿಯಾದ ಹೋಗಿ ನೀ ಕೇಳಿ ಕೇಳಿ ಮರವೇ ಮರವೇನೋ ನೀನು ಲೋಕೇಶಗ್ಹೋಗುಶರಣಾ ಶರಣಾಗುವನು 2 ಏನಿತ್ತಳಂದು ಶಬರಿ ಬರಿಯಹಣ್ಣಾ ತಾನುಂಡುಕೊಟ್ಟು ಭವವಾಭವವಾರಿಸಣ್ಣಾ ಅನಾಥಬಂದು ಮರಿಯಾಮರಿಯಾದಹೋಗಿ ಸ್ವಾನಂದಸಾಖ್ಯಗರೆವಾಗರೆವಾಗೊವಲ್ಲಿ 3 ಇಂದಿರೆ ಸುದ್ದಿ ಸುಧಿಯಾ ಸುಧಿಯಾದಲಿಂದಾ ತಂದಾರೆಪದ್ಮಭವನಾ ಭವಸಾದರಿಂದಾ ಆದನೇವೆ ಕೊಟ್ಟುಕರದೀ ಕರದೀಶನಾಥಾ ಮುಂದಿನಭಾವ್ಯ ಹನುಮಾ ಹನುಮಾವಿಧಾತಾ4 ರಾಮೆಂದುಕೂಗಿ ಗಿಳಿಯಾ ಗಿಳಿಯಾಗಣಿಕೆ ನೇಮದಲಿ ಮುಗುತಿಯಾ ಗತಿಯಾಬೇಕೆ ಪ್ರೇಮದಿ ಮಾನವರುತಾ ವರತಾತನೆಂದಾ ಕಾಮಾರ್ಥನೀವ ಚಲುವಾ ಚಲುವಾ ಮುಕುಂದಾ5 ಸುಗ್ರೀವ ಬಂದು ಅಡಿಯಾ ಅಡಿಯಾಗಲೆಂದು ಶೀಘ್ರದಿಶೀಳಿತರುವಾ ತರುವಾಯಲಿಂದು ಅಗ್ರಜನೊತ್ತಿ ಅವನೀ ಅವನೀಯ ರಾಮಾ ನುಗ್ರಹ ಮಾಡದರಿಯಾದರಿಯಾಗು ವಾತ್ಮಾ6 ಶುಭವಾಕ್ಯ ದೂರಿದನು ಜಾಣನು ಜಾಣನಾಗಿ ವಿಭೀಷಣಬಂದ ಕಣವೀಕ್ಷಣದಲಿ ಸಾಗಿ ವಿಭುಕೊಟ್ಟಲಂ ಕಾಶ್ರಯವಾಶ್ರಯವಾಗಿ ರಾಮಾ ಅಭಿವರ್ಣಿಸುದುರಸನಾ ರಸನದಿ ನೇಮಾ7 ಶೇವೆಯನು ಮಾಡಿ ತಣಲೀತಣಲೀಯ ನೋಡಿ ತಾವರಿ ಕೈಯ್ಯಳೆಳದಾಲೆಳದಾದಯ ಮಾಡಿ ಭಾವಾರ್ಥಿಯಾದ ನರನಾ ನರನಾಥವೇಷಾ ಕಾವನುಲೋಕಜನ ಕಾಜನಕಾತ್ಮಜೇಶಾ 8 ರಾಮಾಷ್ಟಕಾದ ಕವಿತಾ ಕವಿತಾನೆ ಆಗೀ ಶ್ರೀ ಮಹಿಪತಿ ವರದಾ ವರದಾತ ಯೋಗಿ ಕುಂದ ಗುರುತಾಗುರುತಾತ ಮಾಡಿ ನೇಮದಿ ಕಾವಕರುಣೀಕರುಣೀಯ ನೋಡಿ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ವರದ ಗೋಪಾಲ | ವಿಠಲ ಪ್ರಾರ್ಥಿಪೆ ನಿನ್ನದೇವ ತವ ದಾಸ್ಯವನು | ಬವಿಕಾಂಕ್ಷಿಪನ ಪ ನೀವೊಲೀದಿವನ | ಸ್ವೀಕರಿಸುವುದಯ್ಯಪಾವಮಾನಿ ಪ್ರಿಯ ಶು | ಭಾವಹ ಪ್ರದನೇ ಅ.ಪ. ವಿಶ್ವ ವ್ಯಾಪಕ ಹರಿಯೆ | ಅಶ್ವಮೊಗ ನಿನ್ನಂಘ್ರಿಸುಸ್ವರದಿ ಕೀರ್ತಿಸುವೆ | ಶಾಶ್ವತಾನಂದಾನಶ್ವರ ಜಿಹಾಸೆಯನು | ವಿಶ್ವಾಸದಿಂದಿತ್ತುವಿಶ್ವಕುಟುಂಬಿಕನೆ | ಹ್ರಸ್ವಗೈ ಕರ್ಮಾ 1 ಅನುವಂಶಿಕವಾಗಿ | ಗಾನಕಲೆ ಇವನೀಗೆನೀನೇವೆ ಕರುಣಿಸಿಹೆ | ವೇಣುಗೋಪಾಲಮಾನನಿಧಿ ಮಧ್ವ ಕಾ | ರುಣ್ಯ ಪಾತ್ರನು ಎನಿಸಿಜ್ಞಾನ ಭಕ್ತ್ಯಭಿವೃದ್ಧಿ | ಮಾಣದಲೆ ಗೈಯ್ಯೋ 2 ಏಸೇಸೋ ಜನುಮಗಳ | ರಾಶಿ ಪುಣ್ಯದ ಫಲವುಕೈಸೇರಿ ಆಶಿಸುವ | ದಾಸದೀಕ್ಷೆಯನುಲೇಸಾಗಿ ತೈಜಸನ | ಆಶಿಷವ ಕೈಕೊಂಡುಮೀಸಲ ಮನದಿ ಉಪ | ದೇಶವಿತ್ತಿಹನೋ 3 ತೃಕ್ಷಾದಿ ದಿವಿಜೇಡ್ಯ | ಪಕ್ಷಿವಹ ಕೃಷ್ಣ ಹೃ-ತ್ಕುಕ್ಷಿಯೊಳು ತವರೂಪ | ಈಕ್ಷಿಸುವ ಭಾಗ್ಯಭಿಕ್ಷೆಯನು ಇತ್ತು ಉ | ಪೇಕ್ಷಿಸದೆ ಪೊರೆ ಇವನಅಕ್ಷೀಣ ದಯಸಾಂದ್ರ | ಲಕ್ಷುಮಿಯ ರಮಣ 4 ಭಾವದ್ರವ್ಯ ಕ್ರಿಯವು | ಈ ವಿಧಾದ್ವೆತತ್ರಯ ಆವ ಸುಜ್ಞಾನವನು | ಈವುದಿವನೀಗೆ |ದೇವದೇವೇಶ ಗುರು | ಗೋವಿಂದ ವಿಠಲನೆಈ ವಿದಧ ಭಿನ್ನಪವ | ನೀ ವೊಲಿದು ಸಲಿಸೋ5
--------------
ಗುರುಗೋವಿಂದವಿಠಲರು
ಶ್ರೀ ವಿಜಯದಾಸರ ಸ್ತೋತ್ರ ಪದಗಳು ಕಾಯೋ ಕಾಯೋ ಕಾಯೋ - ವರವೀಯೋ ಪ ಕಾಯೋ ಕಾಯೋ ವರವೀಯೋ ವಿಜಯ ಗುರುರಾಯ ನೀನಲ್ಲದುಪಾಯ ಮತ್ತಿಲ್ಲ ಅ.ಪ ತಾಪತ್ರಯ ಬಲುದ್ದೀಪನವಾಗಿದೆನೀ ಪರಿಪಾಲಿಸದೀಪರಿ ಥರವೇ 1 ಪಾಪಗಳೆಣಿಸದೆ ಪಾವನ ಮಾಳ್ಪದುಶ್ರೀಪತಿ ಪಡೆದ ಸುರಾಪಗದಂತೆ 2 ಸ್ವೀಕರಿಸೆನ್ನ ನಿರಾಕರಿಸದೆ ಬಲುವ್ಯಾಕುಲನಾಗಿಹೆ ನೀ ಕರುಣದಲಿ 3 ದುರಿತ 4 ಒಂದರಿತವನಲ್ಲ ಇಂದಿರೇಶನ ಪದದ್ವಂದ್ವವ ತೋರೋ ಹೇ ತಂದೆ ಕರುಣದಿ 5 ಮಾನವರೊಳಗೆಲ್ಲ ಈ ನರಮೂರ್ಖನುಏನು ಅರಿಯ ಬಲು ದೀನನಾಗಿಹನು 6 ಆಲಸ್ಯ ತಾಳದು ಪಾಲಿಸು ವೇಣು ಗೋ-ಪಾಲ ವಿಠಲನ ಆಳು ಕೃಪಾಳು 7
--------------
ವೇಣುಗೋಪಾಲದಾಸರು
ಶ್ರೀ ವಿಜಯದಾಸರು ಆಲಿಸೀ ಸಜ್ಜನರೆಲ್ಲ | ಆಲಿಸಿಅಲಿಸಿ ಶಿಷ್ಯ ಸಂಪತ್ತಿ | ಬಹುಮೇಳವಿಸಿತು ದಾಸ ವೃತ್ತಿ | ಆಹಲೀಲೇಲಿ ಚರಿಸುತ ಪಾಲಿಸಿ ಸುಜನರಮಾಲೋಲ ಧ್ಯಾನದಿ ಕಾಲವ ಕಳೆವಂಥ ಅ.ಪ. ಸತ್ರಯಾಗದ ನೆವದಿಂದ | ಒಬ್ಬಪುತ್ರನಿರೆ ಮುದದಿಂದ | ಕಾಳತ್ರ ಮಡಲಿಘಾರೆ ನಿಂದ ಪುತ್ರಗೆ ಮೋಹನನೆಂದಾ | ಆಹಹಸ್ತವ ಶಿರದೊಳಿಡುತ್ತಲಿ ಹರಸೀದವಿಸ್ತಾರ ತವ ಕೀರ್ತಿ ಆಗಲೆಂದೆನುತಲಿ 1 ಸುಜನ | ಶಿಷ್ಯತಾ ಪೊಂದುತಂಕಿತಗಳನ | ಕೊಟ್ಟುಗೋಪಾಲ ವಿಠಲಾಂಕದವನ | ಗೈದುಆ ಪಂಗನಾಮ ತಿಮ್ಮಯ್ಯನ | ಆಹಆ ಪರಿಯಲಿ ವೇಣುಗೋಪಾಲ ವಿಠಲನಶ್ರೀಪಾದದಾಸನ್ನ ಮಾಡುತ್ತ ಪೊರೆದಂಥ 2 ಸೂತ್ರ | ಆಹಅಪ್ಪನಾದ ಗುರು ಗೋವಿಂದ ವಿಠಲಗೆಕಪ್ಪ ತೆರದಿ ದೇಹ ನರ್ಪಿಸಿ ಮೆರೆದನ 3
--------------
ಗುರುಗೋವಿಂದವಿಠಲರು