ಒಟ್ಟು 3159 ಕಡೆಗಳಲ್ಲಿ , 111 ದಾಸರು , 1823 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ವನಧಿಗೆ ನವಪೋತ | ಪಾಲಿಸು ವಿಖ್ಯಾತ ಪ ವಿಯದಧಿಪನೆ ಎನ್ನ ಕೈಯ್ಯನು ಪಿಡಿಯೋ | ಜ್ಞಾನ ಭಿಕ್ಷ ಈಯೋ ಅ.ಪ. ಮಾಯಾಪತಿ ಪದ ಪದ್ಮಯುಗಳ ಭಜಿಪಾ | ಉತ್ತಮ ಪಥತೋರ್ಪಾಶ್ರೇಯಸು ಸಾಧನ ವೆನಿಸಿ ಮೆರೆಯುರ್ತಿರ್ಪಾ | ಹರಿಪರಮನು ಎನಿಪಾ ||ಮಾಯಾಮತ ತಮ ಸೂರ್ಯನೆನಿಸಿ ಮೆರೆವಾ | ಸುಜನಸುರದ್ರುಮವಾನ್ಯಾಯ ಸುಧೆಯನೇ ತಾರಚಿಸಿರುವಾ | ಮುಕುತಿ ಮಾರ್ಗ ತೋರ್ವಾ 1 ಕಾಕು ವೃತ್ರನಿಂದಾವೃತ ಜಗವಿರಲೂ | ಜ್ಞನರಹಿತ ವಿರಲೂಲೋಕ ಮಹಿತ ಮಂತ್ರವು ನಿನಗಿರಲೂ | ಜಪಿಸುತಾಸ್ತ್ರ ಬಿಡಲೂ ||ಆ ಕುಯೋನಿಗತ ಚಿತ್ರಕೇತು ಮೋಕ್ಷ | ಆಯಿತು ಸುರರಾಧ್ಯಕ್ಷಲೋಕಾಮಯವನು ಹರಿಸಿ ಜಗದಿ ಮೆರೆದೇ | ಮಹಾನ್ನು ಎನಿಸೀದೇ2 ಚಾಪ ಜೇತಾಕುಕ್ಷಿಯೊಳಗೆ ಬಲು ಬಲು ವಿಖ್ಯಾತಾ | ಕಾಗಿನಿ ತಟದಿಸ್ಥಿತ ||ಅಕ್ಷರೇಡ್ಯ ಗುರುಗೊವಿಂದ ವಿಠ್ಠಲನಾ ತನ ಹೃದ್ಗನಾಗಿರುವವನ ||ಅಕ್ಷಿಯೊಳಗೆ ಕಂಡು ಮೋಕ್ಷ ಪಧವ ಸೇರ್ದ | ಆನಂದವ ಬೀರ್ದ 3
--------------
ಗುರುಗೋವಿಂದವಿಠಲರು
ಭವ ಹರಿಸೊ ಕರುಣಾ ಜಲಧಿ ನೆಂಟ ನೀನಾಗಿ ಹೃನ್ಮಂಟಪದೊಳಗೆ ಪ. ಎಂಟಕ್ಷರ ನುತನೆ ಎಂಟು ರೂಪಾತ್ಮಕನೆ ಎಂಟು ಮೂರು ತತ್ವ ನಿರ್ಮಿಸಿಹನೆ ಎಂಟು ದಳದಲಿ ನಿಂತು ಎಂಟು ವಿಧ ಪ್ರೇರಿಸುತ ಎಂಟು ದಿಕ್ಪತಿಗಳಿಂ ಸೇವೆ ಕೊಳುತಿಹನೆ 1 ಎಂಟು ವಿಧ ಕರ್ತೃವೆ ಎಂಟು ಭಾಗ್ಯಯುತನೆ ಎಂಟು ಬಾಹು ಎಂಟು ಆಯುಧಧರನೆ ಎಂಟು ಪತ್ನಿಯರಿಂದ ಎಂಟನೇ ಅವತಾರಿ ನೆಂಟರೊಡನೆ ಜಗದ ಕಂಟಕರ ಸದೆದನೆ 2 ಎಂಟೆರಡು ಕಲೆಪೂರ್ಣ ವೆಂಕಟರಮಣನೆ ಎಂಟು ವಿಧ ಮದಗಳನು ಭೇದಿಸುತಲಿ ಎಂಟೆರಡು ಒಂದು ಇಂದ್ರಿಯ ನಿನ್ನ ಕಡೆ ಮಾಡಿ ಭಂಟನೆನಿಸೆನ್ನ ಶ್ರೀ ಗೋಪಾಲಕೃಷ್ಣವಿಠಲ3
--------------
ಅಂಬಾಬಾಯಿ
ಭವ ಹಿಂಗವ್ವ ಸುಳ್ಳೆ ಮಂಗ್ಯಳಾಗಿ ತಿರುಗಬೇಡವ್ವ ಪ ಪಿಂಗಟದಿಂದ ಭವಸಂಕಟದಲಿ ಬಿದ್ದು ಭಂಗದಿಂ ಕಂಗೆಡಬೇಡವ್ವ ಅ.ಪ ಮುಂಗಿಯ ಮನೆಯೊಳು ನಿಂತೆವ್ವ ತಂಗಿ ಹ್ಯಾಂಗಿದ್ದದರಂತರಿಯವ್ವ ಕಂಗಳಿನಿಕ್ಕಿ ಮಹ ಮಂಗಳಾತ್ಮನ ಕಂಡು ಪಿಂಗದ ಸವಿಸುಖ ಸುರಿಯವ್ವ 1 ಹಾಳು ಜಗದ ಗಾಳಿ ಬೇಡವ್ವ ನಿಜ ಬಾಳುವ ಮಾರ್ಗವ ತಿಳಿಯವ್ವ ನೀಲ ಶ್ಯಾಮನ ಧ್ಯಾನ ತಾಳಿಯ ಕಟ್ಟಿಕೊಂಡು ಕಾಲನ ದಾಳಿಯ ಗೆಲಿಯವ್ವ 2 ಮೈಲಿ ಮುಟ್ಟು ಚಟ್ಟಳಿಯವ್ವ ನೀ ಮೇಲುಮಂಟಪ ಹತ್ತಿ ನೋಡವ್ವ ಬೈಲಿಗೆ ಬೈಲು ನಿರ್ಬೈಲು ಶ್ರೀರಾಮನ ಲೀಲೆಯೊಳಗೆ ನಿಂತು ನಲಿಯವ್ವ 3
--------------
ರಾಮದಾಸರು
ಭವ ಭಂಗ ಪ. ಥಳ ಥಳಿಸುತ ಗೆಳತಿಯರು ಸಹಿತಾಗಿಚಳತೆಂಬೊ ದಿವ್ಯ ಆಭರಣಚಳತೆಂಬೊ ದಿವ್ಯಾಭರಣ ಭೂಷಿತರಾಗಿಕುಳಿತ ನಾರಿಯರು ಕಡೆಯಿಲ್ಲ1 ಕುಂತಲ ಕದುಪಿನ ಕಾಂತೆಯರು ಹರುಷದಿಕಂತುನಯ್ಯನ ಮುಖನೋಡಿಕಂತುನಯ್ಯನ ಮುಖನೋಡಿಮೈಮರೆದು ನಿಂತ ನಾರಿಯರು ಕಡೆಯಿಲ್ಲ 2 ಅಂದುಗಿ ಅರಳೆಲೆ ಬಿಂದಲಿ ಭಾಪುರಿಅಂದವಾಗಿದ್ದ ಅಸಲಿಅಂದವಾಗಿದ್ದ ಅಸಲಿ ಕಟ್ಟಿದಕಂದರಿನ್ನೆಷ್ಟು ಕಡೆಯಿಲ್ಲ3 ಕಾಲಲಂದುಗೆ ಗೆಜ್ಜೆ ತೋಳಲಿ ತಾಯತಲಾವಳಿಗೆ ಮುತ್ತು ಅಲುಗುತಲಾವಳಿಗೆ ಮುತ್ತು ಅಲುಗುತಸುಳಿದಾಡೊ ಬಾಲರಿನ್ನೆಷ್ಟು ಕಡೆಯಿಲ್ಲ 4 ಹಸಿರು ಪಚ್ಚದ ಕಂಭ ಕುಸುರಾದ ಗಿಳಿಬೋದುಗೆಎಸಕೊ ಮಾಣಿಕದ ಜಗುಲಿಯ ಎಸಕೊ ಮಾಣಿಕದ ಜಗುಲಿ ಸಿಂಹಾಸನದಿ ವಸುದೇವ ತನಯ ಕುಳಿತಾನೆ 5 ಬಿಸÀಜನೇತ್ರಿಯರ ಮುಂದೆ ಕುಶಲದ ಮಾತ್ಹೇಳುತವಸುದೇವ ತಾನು ಕುಳಿತಾನವಸುದೇವ ತಾನು ಕುಳಿತಾನ ದೇವಕಿಯಸೊಸೆಯರ ಕಂಡು ಹರುಷಾಗಿ 6 ಚಲುವ ರಾಮೇಶನ ಬಲದ ಭಾಗದಿಬಂದು ಹಲವು ಮಾತುಗಳು ಕಿವಿಯೊಳುಹಲವು ಮಾತುಗಳು ಕಿವಿಯೊಳುಹೇಳುತ ಬಲರಾಮ ತಾನೆ ಕುಳಿತಾನೆ7
--------------
ಗಲಗಲಿಅವ್ವನವರು
ಭಳಿರೆ ನಿಮ್ಮಯ ಗುಣವ ವರ್ಣಿಸಲಳವೆಜಲಧಿಸಮಗಂಭೀರ ಜಯತೀರ್ಥವರ್ಯ ಪ. ನಿನ್ನ ಕೃತಿಯೆಂಬಂಜನವ ದೃಷ್ಟಿಯೊಳಿಟ್ಟುಸನ್ನ್ಯಾಯ ವಿವೃತ್ತಿ ಮತ ಭೇದಗಳಲ್ಲಿಪನ್ನಂಗಶಯನನ ಭಕ್ತಿಯಿಂದ ಪ್ರ-ಸನ್ನವನೆ ಮಾಡಿ ಪುರುಷಾರ್ಥವೀವುದೊ 1 ಆವ ಪರಿಯಿಂದ ಅರ್ಜುನನು ರಣದೊಳು ಪೊಕ್ಕುದೇವನುದರದಿ ಕಂಡನೀ ವಿಶ್ವರೂಪಆವಂದದಿ ಗುರು ಶ್ರೀಮದಾನಂದತೀರ್ಥರಭಾವಗಳನೆ ತಿಳಿದೆ ಭಾಷ್ಯಾದಿಗಳಲಿ 2 ಬುಧರು ನಿನ್ನಯ ನ್ಯಾಯಸುಧೆಯ ಶ್ರವಣವ ಸ-ವಿದು ಉದ್ಧರಿಸಿ ಮೋಹಂಗಳ ಮುಪ್ಪುಗಳ ಕಳೆದುಒಂದಧಿಕ ಬಲದಿಂದ ಒದ್ದು ಮಾಯಿ ದಿತಿಜರನುಒದಗಿ ಕಾಮವೆಂಬ ಕ್ಷುಧೆಗಳ ಅಳಿವರೊ 3 ಮಧ್ವರಾಯರೆಂಬುದು ಮತ್ತೊಂದು ರೂಪದಲಿಇದ್ದು ನುಡಿದಂದದಲಿ ಸಿದ್ಧಾಂತವನು ನೀ ಉದ್ಧರಿಸಿ ಲೋಕದಲಿಅದ್ವೈತ ಮತದವರ ಉದ್ಯೋಗದಿಂದ ಬಲುಮುಗ್ಧರನು ಮಾಡಿದೆ4 ಬರಿದೆ ಮಾತುಗಳಿಂದ ಬಂದ ವಿದ್ಯಾರಣ್ಯನಮರುಳು ಮಾಡಿದೆ ಗ್ರಂಥsÀಕರಣದಿಂದ ಪರರನರಿಗಳನು ಮಾಡಿದಾಶ್ಚರ್ಯ ಕಾರಣಪುರುಷವರ ಹಯವದನನ ಪಾದಸರಸಿಜಭೃಂಗ 5
--------------
ವಾದಿರಾಜ
ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಭಾರ ನಿನ್ನದು ದೇವಾ ಭಕುತ ಸಂಜೀವಾ ಪ ದೂರ ನೋಡದೆ ಪೊರೆಯೊ ದುರಿತಗಳ ತರಿಯೊ ಅ.ಪ. ಮೂರನೆ ಗುಣದಿಂದ ಮತ್ತನಾಗಿ ಬಹಳ ಮೂರು ವಿಧ ವಿಷಯದಲಿ ಮಗ್ನನಾದೆ ಮೂರುಖಾಗ್ರೇಸರಿಗೆ ಮುಂದಾವಗತಿಯೈಯ ಮೂರಾವತಾರವುಳ್ಳ ಮರುತಾತ್ಮಜನೆ 1 ಆರು ಮೂರರ ದ್ವಾರದ ಸ್ಥಿರದ ಮನೆಯೊಳಗೆ ಆರು ವೈರಿಗಳು ಕಂಡಾವಾಗಲೂ ಆರು ಬಿಡಿಸದ ಬವಣೆ ಬಡಿಸುತಲೈದಾವರೆ ಆರೆರಡು ಪೆಸರುಳ್ಳ ಅಂಜನಾತ್ಮಜನೆ 2 ಪಂಚೇಂದ್ರಿಯಗಳು ಕೂಡೆ ಪರಿಪರಿ ಬಗೆಯಿಂದ ಪಂಚಮಹಾ ಪಾತಕಕೆ ಎಳೆಯುತಾರೆ ಪಂಚಕಷ್ಟಕೆ ಗುರಿಯು ಆಗಲಾರೆನು ಪ್ರಾಣ ಪಂಚಪದಕವೇ Pದರುಂಡಲಗಿ ಹನುಮಯ್ಯ 3
--------------
ಕದರುಂಡಲಗಿ ಹನುಮಯ್ಯ
ಭಾರತೀ ರಮಣ ಸುರವಿನುತ ಚರಣ ಶಾರದಾ ಪುರ ಶರಣ ಪ ನೂರು ಯೋಜನಮಿರ್ದವಾರಿಧಿ ಲಂಘಿಸಿ ಬೇಗ ಧಾರುಣಿ ಸುತೆಯ ಕಂಡು ದೂರ ನಮಿಸಿ ಸಾರಿ ಮುದ್ರಿಕೆಯ ನಿತ್ತು ತೋರಿರಾಕ್ಷಸಗೆ ಭಯ ಶ್ರೀರಾಮಗೆ ಬಂದು ಕ್ಷೇಮ ವಾರುತಿಯ ಪೇಳಿದಂಥ 1 ಇಂದು ಕುಲದಲ್ಲಿ ಪಾಂಡುನಂದನನೆನಿಸಿ ಜರಾ ಸಂಧ ಮುಖರನು ಗದೆಯಿಂದವರಸಿ ಅಂದುರಣದಲ್ಲಿ ಕರುವೃಂದವ ಮಥಿಸಿ ಆ ನಂದ ಕಂದನೊಲಿಮೆಯ ಛಂದದಿ ಪಡೆದು ಗುರು 2 ಮೇದಿನಿ ಮೋದ ತೀರ್ಥರೆಂದೆನಿಸಿ ವಾದದಿಂದಲಿ ವಾದಿ ಮತ್ತ ವಾರಣ ಮೃಗಾಧಿಪರೆನಿಸಿ ಪಂಚ ಬೇಧ ಬೋಧಿಸುವ ಶಾಸ್ತ್ರ ಸಾದರದಿ ವಿರಚಿಸಿದ 3 ಕಾಲಕಾಲದಲಿ ದ್ವಿಜರಾಲಯದಿ ಬಂದು ನಿನ್ನ ಬಾಲವನಿತೆರ ಸಹ ಶೇವಿಸುವರು ಪಾಲಿಕಿ ಉತ್ಸವದಲ್ಲಿ ಶೇರುವದು ಪೌರಜನ ಪಾಲಿಸಬೇಕಯ್ಯ ಪಾಂಚಾಲಿರಮಣನೆ ನಮೊ 4 ಭವ ಕೂ ಪಾರ ನಾವಿಕನೆ ಎಂದು ಪ್ರಾರ್ಥಿಸುತಲಿ ಸೇರಿದ ಸಜ್ಜನರಘ ದೂರಮಾಡಿ ಪೊರೆವಂಥಕಾರ್ಪರ ನಿಲಯ ಸಿರಿನಾರಸಿಂಹ ನೊಲಿಸಿದ 5
--------------
ಕಾರ್ಪರ ನರಹರಿದಾಸರು
ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೀಮಸೇನನ ಸ್ತ್ರೀವೇಷ ಭೀಮನು ಸರ್ವಜನಾ ಮೋಹಿಸುವಂಥಕಾಮಿನಿ ರೂಪವ ತೊಟ್ಟನು ಪ ಸೋಮ ಸಮಾನನ ತಾಮರಸಾಂಬಕಹೇಮಾಂಬರ ಕಂಠೀಮಣಿ ಗಣ ಸು -ತ್ರಾಮ ಕಾಮಿನಿಯಾ ಮೋಹಿಪ ಅಬಿ -ರಾಮರೂಪ ನಿಸ್ಸೀಮ ಬಲಾಢ್ಯ ಅ.ಪ. ಬಟಕುಚಪಟ ಕರಪುಟದಿಂದ ಹಿಗ್ಗಿಸಿ ತೀಡುತ ಅಂ-ಗುಟ ತುದಿಲೆಳೆದೆಳೆದುಟಿ ರಕ್ತಿಮೆಯನು ನೋಡುತಕುಟಿಲಾಳಕನ್ಯಾವರಿಸುತ ಪಟುಮಾತಾಡುತವಿಟರಿಗೆ ಸ್ಮರಸಂಕಟವನು ಹೃದಯದಲೂಡುತ ಪುಟ್ಟಚಂಡ ಹಾರಿಸಿ ನಟನೆ ಮಾಡುವಾ -ರ್ಭಟಕಂಜಿಹ ವಿಟಪಟಲ ಹಾಂಗಿರಲದುವಟುರಿದ್ದರು ಯತಿ ಮಠಮಂದಿರ ಲಂ -ಪಟವ ಬಿಟ್ಟ ಮಿಟಿಮಿಟಿ ನೋಡುವರೋ 1 ಕರಿಕಲಭಗಮನ ಸೊರಗಿದ ಕಟಿಕಂಠೀರವುವಿಠಲ ನಯನಜತ ಎರಳೆಗಳ್ ಮನೆಯನು ಸೇರವುಸರಸ ಸ್ವರದಿಂದ ಪರಿಭ್ರಮಿಸಿತು ಕಲಕಿರವುಸುರನರವರ ಸುಂದರಿಯರ ಚಲುವಿಕೆ ಮಾರವು ಹೆರಳ್ ಬಂಗಾರವು ಮಲ್ಲಿಗೆ ಸರಗೀ ಸರಹರಳ್ ಕಂಕಣ ಬಳೆ ಸರಳ್ ಬೆರಳುಂಗುರಅರಳ್ ಮಲ್ಲಿಗೆ ಸರ ಕೊರಳ್ ಗಂಧವ ಕಂಡುಮರುಳ್‍ಗೊರಡ ಜನ ಹಗಲಿರುಳು ಧೇನಿಪರೊ 2 ಮೃಗಮದತಿಲಕವು ಮುಗುಳ್ ನಗೆಮೊಗ ಬಿಂಬಾಧರಖಗಯುಗದಂದದಿ ಝಗಝಗಿಸುತಿಹ ಪಯೋಧರಅಘಹರ ರಾಜಗೋಪಗ ಸಖ ಪಾರ್ಥ ಸಹೋದರಬಗೆ ಬಗೆಯಲಿ ಮನದಗ ಅಘಹರನ ಕೃತಾದರಮುಗುಳ್ ಮಲ್ಲಿಗೆ ಸರ ತೆಗೆತೆಗೆದ್ಹಾಕುತಸೊಗಸು ಸುಗುಣರೂಪ ತಗುಬುಗಿಲೆನುತಿರೆಜಗದ ಜನರ ಮನ ಭುಗಿಭುಗಿಲೆನುತಿರೆಬಗೆ ಬಗೆಯಲಿ ಒಂದ್ಹಗಲ್ಯುಗವಾಗೆ 3
--------------
ರಾಜಗೋಪಾಲದಾಸರು
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ