ಒಟ್ಟು 1456 ಕಡೆಗಳಲ್ಲಿ , 90 ದಾಸರು , 1190 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೀಸಪದ್ಯ ಧರಣಿ ಮೊರೆಯನು ಕೇಳಿ ಸರಸಿಜಾಸನ ಸಕಲ ಸುರರ ಸಹಿತದಿ ಶರಧಿಶಯನಗÀರುಹೆ ವಸುದೇವ ದೇವಕಿ ಸುತನೆನಸಿ ಅಜನಯ್ಯ ವಸುಮತಿಯಲವತರಿಸಿ ಲೀಲೆಯಿಂದ ದುರುಳ ದೈತ್ಯರ ಸದೆದು ಪರಿಪಾಲಿಸಿದ ಸಾಧು ಸುಜನರನ್ನು ನಿಜಭಕ್ತ ಪಾಂಡವರ ನೆಂಟನೆಂದೆನಿಸಿ ಭೂ ಭುಜ ಸುಯೋಧನ ಮುಖ್ಯ ದುರುಳರನ್ನು ಸದೆಬಡಿಸಿದಾ ಬಳಿಕ ಮದದಿ ಕೊಬ್ಬಿದ ಯದು ಬಳಗವನು ವಿಪ್ರಶಾಪದಿಂದ ಕೊಲಿಸಿ ಪದುಮಸಂಭವಜನಕ ಕರಿಗಿರೀಶನು ತನ್ನ ಸದನಕ್ಕೈದಿದ ಸರ್ವವ್ಯಾಪ್ತ ಸರ್ವೇಶ
--------------
ವರಾವಾಣಿರಾಮರಾಯದಾಸರು
ಸೀಸಪದ್ಯ ಪ್ರಳಯ ರುದ್ರನ ಕೋಪಕ್ಕೆಮ್ಮಡಿಯ ಕೋಪದಿಂ ದ ಲಘು ಶಾಪವ ಮುನಿಯು ಕೊಟ್ಟರಂಜೆ ಕಡುಕಷ್ಟ ಕೋಟಲೆಯು ದುಃಖ ದಾರಿದ್ರಗಳು ಒಡನೊಡನೆ ಬಂದೊದಗೆ ನಡುಗೆ ನಾನು ಶರಭ ವೃಶ್ಚಿಕ ಸರ್ಪ ಮೊದಲಾದ ಬಲು ಕ್ರೂರ ಪ್ರಾಣಿಗಳ ಬಾಧೆಗಂಜೆ ಅಸಿಧಾರೆಗಂಜೆ ಇನ್ನಸು ಪೋಗುವುದಕಂಜೆ ವಸುಧೀಶರಾಗ್ರಹಕೆ ಲವಲೇಶವಂಜೆ ಉರಿಗಂಜೆ ಸೆರೆಗಂಜೆ ಹರಣದ ಭಯಕಂಜೆ ಕರಿಗಿರೀಶನ ಕರುಣವೊಂದಿರಲು ಎನಗೆ ಒರೆದ ವಚನಕೆ ಅನೃತ ಸಂಘಟಿಸಲದಕೆ ನೆರೆ ಅಂಜುವೆನು ನಾನು ಇನ್ನೊಂದಕಂಜೆ
--------------
ವರಾವಾಣಿರಾಮರಾಯದಾಸರು
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸುಕೃತ ವಮ್ಮರಂಗನ ಕಾಂತೆಯರದಮ್ಮಅನಂತ ದೇಶಗಳು ಇವನಂತ ತಿಳಿಯವುಈ ಕಾಂತೆಯರುಒಲಿದರೆಂತು ಪೇಳಮ್ಮ ಪ. ಪಟ್ಟಾವಳಿ ಕೊಟ್ಟರು ರಂಗಗೆ ಇಟ್ಟರು ದಿವ್ಯ ಮುಕುಟವಇಟ್ಟರು ದಿವ್ಯ ಮುಕುಟ ಮುತ್ತಿನಹಾರ ಗಟ್ಟಿ ಕಂಕಣದ ಕೆಲದೆಯರು1 ಕೇಶರ ಬೆರೆಸಿದ ಮೀಸಲ ಶ್ರೀಗಂಧವಶ್ರೀಶನ ಸತಿಯರು ಹಿಡಕೊಂಡುಶ್ರೀಶನ ಸತಿಯರು ಹಿಡಕೊಂಡುರಂಗಗೆ ಲೇಪಿಸೆವೆಂಬೊ ಭರದಿಂದ2 ಸಾರ ತುಳಸಿಯು ಬೆರೆದ ಪಾರಿಜಾತದ ಮಾಲೆವಾರಿಜ ಮುಖಿಯರು ಹಿಡಕೊಂಡವಾರಿಜ ಮುಖಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ3 ಪಚ್ಚಮಾಣಿಕ ಬಿಗಿದ ಹೆಚ್ಚಿನ ಸರಗಳುಮಚ್ಛನೇತ್ರಿಯರು ಹಿಡಕೊಂಡುಮಚ್ಛನೇತ್ರಿಯರು ಹಿಡಕೊಂಡುರಂಗಗೆ ಏರಿಸೆವೆಂಬೊ ಭರದಿಂದ4 ಕೊರಳಲಿ ಸರಮಾಲೆ ಅರಳಿದ ಮುಖ ಕಮಲಎರಳೆ ನೋಟದಲಿ ಚಲುವನಎರಳೆ ನೋಟದಲಿ ಚಲುವ ಚನ್ನಿಗರಾಯನ ತರುವಳಿನೋಡಿ ಹರುಷಾಗಿ 5 ಹಸ್ತದಿ ಹಣಿಮ್ಯಾಲೆ ಕಸ್ತೂರಿ ಬಟ್ಟಿಟ್ಟುಉತ್ತಮ ತಿಲಕ ರಚಿಸುತಉತ್ತಮ ತಿಲಕ ರಚಿಸುತರಂಗನ ಹತ್ತಿರ ನಿಂತ ಕೆಲವರು6 ಇನ್ನೋರ್ವಳು ಬಂದು ಕನ್ನಡಿ ತೋರುತಕರ್ಣ ಕುಂಡಲವ ಸರಿಸುತಕರ್ಣ ಕುಂಡಲವ ಸರಿಸುತ ರಾಮೇಶನ ಚನ್ನಾಗಿ ನೋಡಿ ಸುಖಿಸುತ 7
--------------
ಗಲಗಲಿಅವ್ವನವರು
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸುಬ್ಬರಾಯ ಸುಜನಪ್ರಿಯ ಕರ್ಬುರಾಂತಕ ನಿರ್ಭಯವನು ಪಾಲಿಸಯ್ಯ ನಿರ್ಗತಮಾಯ ಪ. ಗೌರೀಕುಮಾರ ಪಾರಾವಾರಗಭೀರ ಮಾರನವತಾರ ತಾರಕಾರಿ ಶ್ರೀಕರ1 ಪಂಕಜಾಕ್ಷ ಪಾಹಿಮಾಂ ಶ್ರೀಶಂಕರಾತ್ಮಜ ಕುಂಕುಮಾರುಣವರ್ಣ ಪೂರ್ಣಾಲಂಕೃತ ವಿರಜ2 ಪೃಥ್ವಿಗುತ್ತಮ ಪಾವಂಜಾಖ್ಯ ಕ್ಷೇತ್ರಮಂದಿರ ಕರ್ತ ಲಕ್ಷ್ಮೀನಾರಾಯಣಭೃತ್ಯ ಸುಂದರ3
--------------
ತುಪಾಕಿ ವೆಂಕಟರಮಣಾಚಾರ್ಯ
ಸುಬ್ರಹ್ಮಣ್ಯನೆ ಶುಭ್ರವದನನೆ | ನಿರ್ಭಯವನುರೆ ಮಾಳ್ವನೆ | ಶರಣು ಶರಣು 1 ಕರುಣಿ ನಿತ್ಯಾನಂದನೆ | ಶರಣು 2 ರಾಮನ ತೋಷನೆ | ಶರಣು 3 ಶೋಕ ನಾಶ ಉಮಾ ಕುಮಾರಕ | ಶ್ರೀ ಕುಮಾರ ಗಿರೀಶನೆ | ಶರಣು 4 ದಾಸರಾ ಮನ ತೋಷನೆ 5
--------------
ಬೆಳ್ಳೆ ದಾಸಪ್ಪಯ್ಯ
ಸುಮ್ಮನಿರಬಾರದೆ ಮನವೆ ನೀನು ಸುಮ್ಮನಿರಬಾರದೆ ಹಮ್ಮುಅಹಂಕಾರ ಹೆಮ್ಮೆಗಳೆದು ಪನ್ನಗಾದ್ರಿಯ ಧ್ಯಾನಮಾಡುತ್ತ ಪ ಚಿಂತೆಯನು ತೊರೆದು ಮನವೆ ಲಕ್ಷೀಕಾಂತನೊಳು ಬೆರೆದು ಅಂತರಂಗದಿ ಕಂತುಜನಕನ ಸಂತತವಿಟ್ಟು ಪಂತವನು ಬಿಟ್ಟು 1 ಆಸೆಯನು ತೊರೆದು ಮನವೆ ನೀ ಶ್ರೀಶನೋಳು ಬೆರೆದು ಘಾಸಿಯಾಗದೆ ವಾಸುದೇವನ ದಾಸನಾಗಿ ಉಲ್ಲಾಸದಿಂದಲೆ 2 ಯಾರು ಬೈದರೇನು ಈ ದೇಹ ಇನ್ಯಾರು ಕೊಯ್ದರೇನು ಘೋರಮಾಯೆ ದೂರಮಾಡಿ ನೀ ವಾರಿಜಾಕ್ಷನ ಪಾದವನು ಸೇರಿ 3 ಎಲ್ಲರಲ್ಲಿ ವಾಸುದೇವನಿಲ್ಲದಿಲ್ಲೆನುತ ಹುಲ್ಲು ಹುಳುವಿನೊಳು ಸೊಲ್ಲು ಪಾಡುತ್ತ 4 ಸೃಷ್ಟಿಯೊಳಗಧಿಕ ಮೂಡಲಗಿರಿ ಬೆಟ್ಟದೊಳಗಿರುವ ದಿಟ್ಟವೆಂಕಟನ ಮುಟ್ಟಿ ಭಜಿಸಿ ನೀ ಮಾಡಿದಷ್ಟು ಪಾಪವ ನಷ್ಟ ಮಾಡುತ್ತ 5
--------------
ಯದುಗಿರಿಯಮ್ಮ
ಸೂರ್ಯ | ಕಾಯೊಯತಿ ಸತ್ಯ ಧ್ಯಾನಾಖ್ಯವರ್ಯಾ ಪ ಧೃತ - ಕ್ಷಿತಿಯೊಳಗೆ ದುರ್ಮತವ ಖಂಡಿಸಿ | ಅತಿಹಿತದಿ ದ್ವೈತವನೆ ಬೋಧಿಸಿವಿತತ ಹರಿ ಪರನೆಂದು ಸಾಧಿಸಿ | ಮತಿಯ ಮನುಜರ್ಗೊರೆದ ತಾಪಸಿ ಅ.ಪ. ಪಾದ ವನಜಾ |ಸಾಪರೋಕ್ಷೀಕೃತ ಯತಿಜ | ತೋರೊಸುಪಥ ಮುಕ್ತಿಗೆ ಹತ ದಿತಿಜ |ಶ್ರೀ ಪತಿಯ ಚರಣಾಬ್ಜ ಮಧುಪನೆ | ಕೋಪ ಸಲ್ಲದು ಕೃಪೆ ಪಯೋನಿಧಿಪಾಪ ರಹಿತನ ಮಾಡಿಯನ್ನನು | ಪ್ರಾಪಿಸೆನಗೆ ಜ್ಞಾನಖ್ಯ ಸೂರ್ಯನ 1 ಕಾಶಿ ರಾಮೇಶ್ವರ ಕುಂಭ | ಕೋಣದೇಶ ಯಾತ್ರೆಗಳ್ಮಾಡಿ ಡಿಂಬಾ |ಮೀಸಲೆನಿಸಿ ಜಯಸ್ತಂಭಾ | ಹೂಡಿಶ್ರೀಶ ಸರ್ವೋತ್ತಮನೆಂಬಾ ||ಭಾಷೆಯನು ಕೈಗೊಂಡು ಚರಿಸುತ | ಕೃಷಿಯ ಮಾಡಿದೆ ಹರಿಯ ಮತವನುತೋಷಿಸಿದೆ ಸದ್ವೈಷ್ಣ್ವವೃಂದವ | ವಿಶದ ವಿದ್ವತ್ಸಭೆಯ ನೆರೆಸೀ 2 ಚಿತ್ತ ವಿಡುತ ಲಯದಿ ಚಿಂತನಾ | ಸಾರಿಸತ್ಯ ಪಾಂಡುರಂಗ ವಿಠಲನಾ |ಹತ್ತಿರ ಕಿತ್ತೊಗೆದೆ ತನುವಿನ ವರಚೈತ್ರ ಶುಕ್ಲದಿ ಆರೆಡನೆ ದಿಣ |ಕ್ಷಾತ್ರ ತೇಜದಿ ಮೆರೆದೆ ಗುರುವರ | ಕ್ಷಿತಿಯೊಳಗೆ ಸುರಾರು ನಿಮಗೆವಿತತ ಗುರುಗೋವಿಂದ ವಿಠಲನ | ಚಿತ್ತದಲಿ ಸ್ಮರಿಸುತ್ತ ಪೊರಟ 3
--------------
ಗುರುಗೋವಿಂದವಿಠಲರು
ಸ್ಥಾಣುಂಕರ ವಿರಾಜಿತ ರಮಾಸದನ ಮೋಹನ ಪ ವಾಣೀಶ ಸಂಭಾವಿತ ಗೋಪೀಜನ ಸೇವಿತಾ ಅ.ಪ ಮಣಿಭೂಷಣ ರಂಜಿತ ಮುಕ್ತಜನಾನಂದಿತಾ 1 ಫಣಿಮಣಿಗಣ ಸಂಭೂಷಿತ ವನಿತಾಜನ ತೋಷಿತ 2 ಅಣುರೇಣು ತೃಣಪೂರಿತ ಗುಣಸಾಗರ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸಿ ಬದುಕಿರೊ ಗುರುವರರಾ ನರ- ಹರಿಸ್ಮರಣೆ ಮರೆಯದಲೆ ಕೀರ್ತಿಸಿ ನಲಿದವರ ಪ ದಾಸದೀಕ್ಷೆಯ ವಹಿಸಿದವರ ಹರಿ ದಾಸರ ಕೂಡಿ ನರ್ತಿಸಿ ನಲಿದವರ ಶ್ರೀಶನ ಮಹಿಮೆ ಬಲ್ಲವರ ಭವ ಪಾಶಗಳಳಿವ ಸನ್ಮಾರ್ಗಬೋಧಕರ 1 ಬಡತನದಲಿ ಬಳಲಿದವರ ಭಾಗ್ಯ ಬಿಡದೆ ಬಂದೊದಗೆ ಹಿಗ್ಗದೆ ತಗ್ಗಿದವರ ಮೃಡಸಖನೊಲುಮೆ ಪಡೆದವರ ಬಹು ಸಡಗರದಲಿ ಹರಿ ಭಜನೆ ಮಾಡ್ದವರ 2 ಪಂಕಜಾಕ್ಷನ ಪೊಗಳಿದವರ ತಂದೆ ವೆಂಕಟೇಶ ವಿಠ್ಠಲ ದಾಸರಿವರ ಬಿಂಕದಿ ಹರಿಯ ಮರೆತವರ ಗರ್ವ ಬಿಂಕಗಳಳಿಯ ಸನ್ಮಾರ್ಗಕೆಳದವರ3 ತಾಳ ತಂಬೂರಿ ಪಿಡಿದವರ ಗೆಜ್ಜೆ ತಾಳ ಮೇಳದಿ ನರ್ತಿಸಿ ನಲಿದವರ ವ್ಯಾಳ ಶಯನನ ಭಕ್ತರಿವರ ಸಂಜೆ ವೇಳೆ ಹರಿಭಜನೆ ಮಾಡಿ ನಲಿದವರ 4 ಮಡದಿ ಮಕ್ಕಳು ಬಂಧು ಜನರ ಕೂಡಿ ಕಡು ಸಂಭ್ರಮದಿ ಹರಿಭಜನೆ ಮಾಡ್ದವರ ಕಡಲ ಶಯನನ ಭಕ್ತರಿವರು ಭಾಗ್ಯ ಬಡತನ ಸಮವೆಂದು ತಿಳಿಯ ಹೇಳ್ದವರ 5 ಹರಿಗುಣ ಕೀರ್ತಿಸಿದವರ ನರ ಹರಿಯ ಮಹಿಮೆಗಳ ಶಿಷ್ಯರಿಗೊರೆದವರ ಹರಿಯೆ ಸರ್ವೋತ್ತಮನೆಂದವರ ನಮ್ಮ ಉರುಗಾದ್ರಿವಾಸ ವಿಠ್ಠಲನ ನಂಬಿದವರ6 ಮಮತೆಯ ಬಿಡಬೇಕೆಂದವರ ದೇಹ ಮಮತೆಯ ಬಿಡುತ ಹರಿಪುರ ಸೇರಿದವರ ಕಮಲಾಕ್ಷನ ಭಕ್ತರಿವರ ನಮ್ಮಕಮಲನಾಭನ ವಿಠ್ಠಲನ ನಂಬಿದವರ 7
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸಿ ಬೇಡುವೆ ಹರಿಯ ಮುರಾರಿಯ ಸ್ಮರ ಕೋಟಿತೇಜನ ಸುರಮುನಿವಂದ್ಯನ ಪ ಮನ್ಮಥಕೋಟಿ ಲಾವಣ್ಯರೂಪದಿ ಮೆರೆವ ಮನ್ಮಥಯ್ಯನ ಪೊಗಳುತ್ತಲಿ ಚಿನ್ಮಯರೂಪನ ಚಿದ್ರೂಪನಾದನ ಹೃನ್ಮನದಲಿ ಪಾಡಿಪೊಗಳಿ ಕೊಂಡಾಡುತ ಅ.ಪ ಮನ್ಮನÀದೊಳು ಸ್ಮರಿಸಿ ಸ್ಮರಿಪ ಭಾಗ್ಯವು ಮುನ್ನ ಕರುಣಿಸಿ ಸಲಹು ಬಲು ಸಂ- ಪನ್ನ ನಿನಗೆದುರಿಲ್ಲ ಧರೆಯೊಳು ಪನ್ನಗಾದ್ರಿ ನಿವಾಸ ಶ್ರೀಶನ1 ವಿಶ್ವವ್ಯಾಪಕ ನೀನೆ ವಿಶ್ವಮೂರುತಿ ನೀನೆ ವಿಶ್ವ ನೀನೆ ಶ್ರೀ- ವಿಶ್ವವಸುನಾಮ ಸಂವತ್ಸರದೊಳು ಮೆರೆವ ವಿಶ್ವಮೂರುತಿ ಶ್ರೀ ಸರ್ವೇಶ್ವರ ನೀನೆಂದು2 ವಿಶ್ವಮಯ ವಿಶ್ವೇಶ ಶ್ರೀಹರಿ ವಿಶ್ವನಾಮಕ ವಿಮಲ ಸುಖಮಯ ವಿಶ್ವವನು ಉದರದೊಳು ಧರಿಸಿದ ವಿಶ್ವವನು ವದನದಲಿ ತೋರ್ದನ 3 ಕಮಲದಳಾಕ್ಷನ ಕಮನೀಯ ರೂಪನ ಕಮಲ ಸಂಭವನ ಪೆತ್ತಿಹ ಧೀರನ ಕಮಲಮುಖಿಯ ಕರಕಮಲದಿ ಪೂಜ್ಯನ ಕಮಲೆಯೊಡಗೂಡುತ ನಲಿವನ 4 ಕಮಲ ಕರದೊಳು ಪಿಡಿದ ಕಮಲೆಯ ಕಮಲನಾಭನ ಪಿತನೆ ಮುದದೊಳು ಕಮಲೆಯನು ಕೈಪಿಡಿದು ಮೆರೆಯುವ ಕಮಲನಾಭವಿಠ್ಠಲನ ಪ್ರತಿದಿನ5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ವಾಂತವ ತೊಳೆಯುತಲಿರಬೇಕು ಶಾಂತಿನಿಕೇತನವಾಗುವ ತನಕ ಪ ಶಾಂತ ಮೂರುತಿ ಶ್ರೀಶಾಂತನು ತನ್ನ ಏ ಕಾಂತ ಮಂದಿರವೆಂದೊಪ್ಪುವ ತನಕ ಅ.ಪ ಕಾಮ ಕ್ರೋಧವೆಂಬೊ ಕಸಗಳನು ನೇಮದಿಂದ ಗುಡಿಸುತಲಿರಬೇಕು ಪ್ರೇಮಜಲದ ಸೇಚನೆ ಮಾಡಿ ಹರಿ ನಾಮಸ್ಮರಣೆ ಧೂಪವ ಕೊಡಬೇಕು 1 ಕಲಿಪುರುಷನ ಓಡಿಸಬೇಕು ತಿಳಿಯ ವೈರಾಗ್ಯ ಭಕ್ತಿಗಳೆಂಬ ತಳಿರು ತೋರಣವ ಕಟ್ಟಲಿಬೇಕು ನಳಿನನಾಭನ ಮನ ಸೆಳೆಯುವ ತೆರದಿ 2 ಕಾಣಲು ಪರಮತತ್ವದ ದಿವ್ಯ ಜ್ಞಾನದ ಜ್ಯೋತಿಯ ಮುಡಿಸಲಿ ಬೇಕು ಜ್ಞಾನ ಸುಖಾದಿ ಸದ್ಗುಣ ನಿಧಿಯು ತಾನೆ ಪ್ರಸನ್ನನಾಗುತ ನೆಲೆಸುವ ಪರಿ3
--------------
ವಿದ್ಯಾಪ್ರಸನ್ನತೀರ್ಥರು