ಒಟ್ಟು 1739 ಕಡೆಗಳಲ್ಲಿ , 50 ದಾಸರು , 1423 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀಲೋಲ ವಿಠಲ ರಕ್ಷಿಸಲಿ ಬೇಕು ಹರಿಯೇಪಕ್ಷ್ಮಗಳು ಅಕ್ಷಿಗಳ ಅಗಲದಿಪ್ಪಂತಿವನಾ ಪ ದಾಸತ್ವ ದೀಕ್ಷೆಯಲಿ ಕಾಂಕ್ಷೆಯನು ತೋರ್ದವಗೆಮೀಸಲಿಂದಿದ್ದೆನ್ನ ಮನದಿ ತೈಜಸನೇಲೇಸು ಹರಿಕಥೆ ಸುಧೆಯ ಸಾರವನು ನೋಡೆಂದುಶ್ರೀಶತವ ಕ್ರೀಡಾ ವಿಲಾಸದಿ ಮಾರ್ಗ ತೋರೋ 1 ಕಂಕಣಾಕಾರೇಶ ಅಂಕಿತವ ನಿತ್ತಿಹೆನುಕೊಂಕುಗಳ ತಿದ್ದುತಲಿ ಕಿಂಕರನ ಸಲಹೊ |ಪಂಕಜ ಸುರರೆಲ್ಲ ಕಿಂಕರನು ನಿನಗೆಂಬಶಂಕೆ ವಿರಹಿತ ಜ್ಞಾನ ತರತಮವ ತಿಳಿಸೊ 2 ಹಿಂದಿನ ಸುಸಂಸ್ಕಾರದಿಂದಿವನ ಸಂದೋಹಬಂದುದನೆ ರಕ್ಷಿಸ್ಯಾನಂದಕರ ಮತದಲೀ |ಬಂಧು ಬಳಗವು ನೀನೆ | ತಂದೆ ತಾಯಿಯು ನೀನೆಎಂದೆಂಬ ಸುಜ್ಞಾನ ಕರುಣಿಸೈ ಹರಿಯೇ 3 ಕರ್ಮ ವೈದೀಕ ವೆನಿಸುತ್ತಕರುಣಿಸೋ ತವರೂಪ ಹೃತ್ಕಂಜದೊಳಗೇ 4 ಸರ್ವಜ್ಷ ಸರ್ವೇಶ ಸರ್ವಾಂತರಾತ್ಮಕನೆಶರ್ವವಂದ್ಯನೆ ಹರಿಯೆ ನಾಪೇಳ್ವುದೇನೋದುರ್ವಿಭಾವ್ಯನೆ ಗುರು ಗೋವಿಂದ ವಿಠ್ಠಲನೆದರ್ವಿಜೀವನು ಗೈವ ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ಲಕ್ಷ್ಮೀವಲ್ಲಭ ಜಯ ಪಕ್ಷಿವಾಹನ ಜಯಮೋಕ್ಷದಾಯಕನೆ ಜಯ ಜಯ ಪ ಮೋಕ್ಷದಾಯಕನೆ ಮಧುಸೂದನ ಪ-ದ್ಮಾಕ್ಷಗಾರುತಿಯ ಬೆಳಗಿರೇ ಅ.ಪ. ಜಲದೊಳು ಸಂಚರಿಸಿ ಬಲು ಗಿರಿಯ ಧರಿಸಿದಇಳೆಯ ದಾಡೆಯಿಂದ ನೆಗಹಿದಾ ||ಇಳೆಯ ದಾಡೆಯಿಂದ ನೆಗಹಿದ ನರಹರಿ ಚೆಲುವಗಾರುತಿಯ ಬೆಳಗಿರೆ ಶೋಭಾನೆ 1 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕ ||ಆಕ್ರಮಿಸಿ ತ್ರಿಲೋಕನಾಳ್ದ ಶ್ರೀರಾಮಶ್ರೀ ಕೃಷ್ಣಗಾರುತಿಯ ಬೆಳಗಿರೇ 2 ನಗ್ನನಾಗಿ ವ್ರತವಾ ವಿಘ್ನವ ಚರಿಸಿದಅಜ್ಞಾನಿ ಕಲಿಯ ಸದೆದ ||ಅಜ್ಞಾನಿ ಕಲಿಯ ಸದೆದ ಮೋಹನ್ನ ವಿಠ್ಠಲ ಸ-ರ್ವಜ್ಞಗಾರುತಿಯ ಬೆಳಗಿರೇ3
--------------
ಮೋಹನದಾಸರು
ಲಕ್ಷ್ಮೀಶ ನರಹರಿ ವಿಠ್ಠಲನೆ ಸಲಹೊ ಪ ಪಕ್ಷೀಂದ್ರ ವಾಹನನೆ ಈಕ್ಷಿಸುತ ಕರುಣದಿಂರಕ್ಷಿಸಲಿ ಬೇಕಿವಳ ಲಕ್ಷ್ಮಣಾಗ್ರಜನೇ ಅ.ಪ. ದೀನಜನ ಮಂದಾರ ಜ್ಞಾನದಾಯಕನೆ ಸುರ-ಧೇನು ಭಕ್ತರಿಗೆ ಕಾಮಿತವ ಕೊಡುವಲ್ಲಿ |ನೀನಿವಳಿಗೇ ಮೋಕ್ಷಜ್ಞಾನವನೇ ಪಾಲಿಸುತಸಾನುರಾಗದಿ ಸಲಹೊ ಪ್ರಾಣಾಂತರಾತ್ಮ 1 ಸೃಷ್ಟಿ ಸ್ಥಿತಿ ಸಂಹಾರ ಕರ್ತನೀನೆಂದೆನಿಪೆವೃಷ್ಟಿಕುಲ ಸಂಪನ್ನ ಜಿಷ್ಣು ಸಖ ಹರಿಯೇ |ಕಷ್ಟನಿಷ್ಠೂರಗಳ ಸಹಿಸುವಡೆ ಧೈರ್ಯವನುಕೊಟ್ಟು ಕೈ ಪಿಡಿಯುವುದು ಕೃಷ್ಣ ಮೂರುತಿಯೇ2 ಪತಿಯೆ ಪರದೈವ ವೆಂಬುನ್ನತದ ಮತಿಯಿತ್ತುಹಿತದಿಂದ ಹರಿಗುರು ಸೇವೆಯಲಿ ರತಿಯಸತತ ನಿನ್ನಯ ನಾಮ ಸ್ಮøತಿಯನ್ನೇ ವದಗಿಸುತಕೃತಿಪತಿಯೆ ನೀನಿವಳ ಉದ್ಧರಿಸು ಹರಿಯೇ 3 ತಾರತಮ್ಯ ಜ್ಞಾನ ವೈರಾಗ್ಯ ಭಕುತಿ ಕೊಡುಮೂರೆರಡು ಭೇಧಗಳ ಅರಿವಿತ್ತು ಹರಿಯೇಮಾರಪಿತ ಇವಳ ಹೃದ್ವಾರಿಜದಿ ತವ ರೂಪತೋರುತಲಿ ಸನ್ಮುದವ ಬೀರುವುದು ಹರಿಯೇ 4 ಸರ್ವಾಂತರಾತ್ಮನೆ ಗುರುಡವಾಹನ ದೇವಸರ್ವಜ್ಞ ಸರ್ವೇಶ ಮಮ ಕುಲ ಸ್ವಾಮೀ |ನಿರ್ವಿಘ್ನದಿಂದೆನ್ನ ಪ್ರಾರ್ಥನೆಯ ಪೂರೈಸೊಸರ್ವಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ಲಕ್ಷ್ಮೀಶ ಹರಿ ವಿಠಲ ರಕ್ಷಿಸೋ ಇವಳಾ ಪ ಕುಕ್ಷಿಯೊಳಗನ್ಯರೆನೆ | ರಕ್ಷಕರ ಕಾಣೇ ಅ.ಪ. ಮಧ್ವ ಮತದಲ್ಲಿಹಳು | ಶ್ರದ್ಧೆ ಭಕ್ತೇಯುತಳುಪದ್ಧತಿಗಳಲವಡಿಸಿ | ಶುದ್ಧ ಸಾಧನದಾ |ಅಧ್ಯಾನ ಕಳೆ ತಂದು | ಬದ್ಧಳನ ಮಾಡುತ್ತಉದ್ಧರಿಸೋ ಶ್ರೀ ಹರಿಯೆ | ಪದ್ಮನಾಭಾಖ್ಯಾ 1 ಸಿರಿ ಭವ ಹಾರೀ 2 ಸಾರ ಸಾಧನಕೇ |ಚಾರು ನಿನ್ನಯ ನಾಮ | ಸಾರಸದಿ ಸವಿದುಂಬಭರಣಿಯಲಿರಿಸಯ್ಯ | ಮಾರಪಿತ ಹರಿಯೇ 3 ಕರ್ಮಗಳ ಮಾಳ್ಪವಲಿ | ಮರ್ಮಗಳ ತಿಳಿಸಯ್ಯನಿರ್ಮಮತೆ ನೀಡುತ್ತ | ಧರ್ಮ ಸಾಧನಕೇ |ಕರ್ಮ ನಾಮಕ ಹರಿಯೆ | ಪೇರ್ಮೆಯಲಿ ಇವಳನ್ನಕ್ರಮ್ಮಿಸೋ ಕರ್ಮದಲಿ | ಧರ್ಮಗುಪ್‍ಧರ್ಮೀ 4 ಧಾವಿಸೀ ಬಂದಿಹಳು | ದೇವ ತವ ದಾಸ್ಯವನೆ ಭಾವುಕಳಿಗಿತ್ತಿಹೆನೋ | ಓವಿ ಉಪದೇಶಾಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನೆನೀವೊಲಿದು ಪೊರೆ ಇವಳ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಲಾಲಿ ಗೌರೀಪ್ರಿಯನೆ ಲಾಲಿ ನಾಲ್ಮೊಗನೆ ಲಾಲಿ ಲಕ್ಷ್ಮೀರಮಣ ಲಾಲಿ ಪರಿಪೂರ್ಣ ಪ ಕಪಟದಾನವಶಿಕ್ಷ ಕರುಣಾ ಕಟಾಕ್ಷ ತಪನಾಗ್ನಿ ಶಿಖಿನೇತ್ರ ಧನನಾಥ ಮಿತ್ರ ಸುಪವಿತ್ರ ಚಾರಿತ್ರ ಸುಜನನುತಿ ಪಾತ್ರ1 ವನಜ ಸಂಭವ ಸೃಷ್ಟಿ ಕರ್ತವಾಣೀಶ ಕನಕ ಗರ್ಭಾಪ್ರತಿಮ ಮಹಿಮ ಜೀವೇಶ ಗಮನ ಸುವಿಲಾಸ ಸನಕಾದಿ ಮುನಿವಿನುತ ಸರ್ವಲೋಕೇಶ2 ಪಕ್ಷಿವಾಹನ ಜಗದ್ರಕ್ಷ ಸಿರಿವರನೆ ಸಾಕ್ಷಿಯಾಗಿಹ ಗುರುರಾಮ ವಿಠ್ಠಲನೆ 3
--------------
ಗುರುರಾಮವಿಠಲ
ಲಾಲಿ ಪಾಡಿರೆ ಮುದ್ದು ಬಾಲಕಂದನಿಗೆ ಬಾಲಬ್ರಹ್ಮಚಾರಿಯಾದ ಕಪಿವರಗೆ ಪ. ಅಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಸಖನಿಗೆ ತುಡುಕಿ ವಜ್ರತನುವಾಗಿ ಸಂಜೀವ ತಂದು ಕಪಿಪುಂಜಗಳ ಸಲಹಿ ಮಂಜುಭಾಷಣ ರಾಮಪಾದ ದಾಸನಿಗೆ 1 ಪುಟ್ಟಿ ಕುಂತಿಯ ಉದರದಲಿ ಗಿರಿ ಒಡೆದು ದುಷ್ಟ ಕೀಚಕ ಬಕಾದಿಗಳ ಸಂಹರಿಸಿ ಕುಟ್ಟಿ ಕೌರವರ ಕುಲ ದ್ರೌಪದಿಯ ಕೂಡಿ ಪಟ್ಟವಾಳಿದ ಕೃಷ್ಣ ಪಾದಸೇವಕಗೆ 2 ಶ್ರೀಪತಿಯ ಆಜ್ಞೆಯಲಿ ವಿಪ್ರಸುತನಾಗಿ ಪಾಪಿ ದುರ್ಮತಗಳನು ತರಿದು ಮುರಿದೊಟ್ಟಿ ಸ್ಥಾಪಿಸುತ ಸಚ್ಛಾಸ್ತ್ರ ಯತಿಯಾಗಿ ಚರಿಸಿ ಗೋಪಾಲಕೃಷ್ಣವಿಠ್ಠಲನ ಮೆರೆಸಿದಗೆ 3
--------------
ಅಂಬಾಬಾಯಿ
ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಮಧ್ವರಾಯ ಗುರುವರ್ಯ ಪ ತ್ರೇತೆಯಲಿ ರಘುಪತಿಯ ಸೇವೆ ಸಲಿಸಿದವನೆ ಸೀತೆಯನು ಕಂಡು ರಕ್ಕಸರ ಗೆಲಿದವನೆ ದೂತರಾವಣಗೆ ನೀತಿಗಳ ಕಲಿಸಿದವನೆ ಭೀತಿಯಿಲ್ಲದೆ ಲಂಕಾಪುರವ ದಹಿಸಿದವನೆ 1 ದ್ವಾಪರದಿ ಶ್ರೀ ಕೃಷ್ಣನನು ಪೂಜಿಸಿದವನೆ ಪಾಪಿ ದುರ್ಯೋಧನಾದಿಗಳ ಗೆಲಿದವನೆ ಕೋಪದಲಿ ಜರಾಸಂಧನನು ಸೀಳಿದವನೆ ಶ್ರೀಪತಿಯ ಸೇವೆಯಲಿ ನಿಸ್ಸೀಮನೆನಿಸಿದವನೆ2 ಮಧ್ವಮತದವರನುದ್ಧರಿಸಿ ಮೆರೆದವನೆ ಶ್ರದ್ಧೆಯಿಂದಲಿ ಹರಿಯ ಭಜಿಪ ಗುರುವರನೆ ಮುದ್ದು ಕಮಲನಾಭ ವಿಠ್ಠಲನೊಲಿಸಿದವನೆ ಶುದ್ಧ ಮೂರುತಿ ಉಡುಪಿ ಕೃಷ್ಣನರ್ಚಿಸಿದವನೆ3
--------------
ನಿಡಗುರುಕಿ ಜೀವೂಬಾಯಿ
ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಲಾಲಿ ಗುರು ಮಧ್ವನಾಮ ಪ ತ್ರೇತೆಯಲಿ ಸಾಗರವ ದಾಟಿ ನಿಮಿಷದಲಿ ಸೀತೆಗುಂಗರ ಕೊಟ್ಟು ಕುಶಲ ತಿಳಿಸುತಲಿ ದೂತರಾವಣಗೆ ಶೌರ್ಯಗಳ ತೋರುತಲಿ ಸೀತೆಯ ಕ್ಷೇಮ ರಘುನಾಥಗರುಹುತಲಿ 1 ದ್ವಾಪರದಿ ಕೃಷ್ಣನಿಗೆ ಪರಮಾಪ್ತನಾಗಿ ದ್ರೌಪದಿಯ ವಚನವನು ಸಲಿಸಬೇಕಾಗಿ ಕೋಪದಲಿ ಖಳನ ಸೀಳುತ ತೃಪ್ತನಾಗಿ ಈ ಪರಿಯಲಿ ಹರಿಗೆ ಅರ್ಪಿಸುತ ಚನ್ನಾಗಿ2 ಮಧ್ವಮತವನುದ್ಧರಿಸಬೇಕೆನುತ ಶ್ರದ್ಧೆಯಲಿ ಕೃಷ್ಣನ್ನ ಸೇವಿಸುತ ಸತತ ಮುದ್ದು ಕಮಲನಾಭ ವಿಠ್ಠಲನ ಸ್ಮರಿಸುತ್ತಸದ್ಗ್ರಂಥ ರಚಿಸಿ ಬದರಿಯಲಿ ವಾಸಿಸುತ 3
--------------
ನಿಡಗುರುಕಿ ಜೀವೂಬಾಯಿ
ಲಾಲಿ ಲಾಲೀ ಲಾಲಿ ಮೊದಲಗಟ್ಟೇಶ ಲಾಲಿ ಲಾಲೀ ಲಾಲಿ ತುಂಗಭದ್ರ ತೀರೇಶಾ ಪ. ಆಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಾಕ್ಷ ರಾಮರಂಘ್ರಿಗಳನ್ನು ಸಾರಿ ಮಂಜುಭಾಷಿಣಿಗೆ ಹರಿ ಮುದ್ರಿಕೆಯ ತೋರಿ ಶೌರಿ 1 ಕುರುಕುಲದಿ ಜನಿಸಿದ ಕುಂತೀ ಕುಮಾರ ರಣಧೀರನೆನಿಸಿದ ಕುರುಪ ಸಂಹಾರ ಧರೆಯ ಭಾರವ ಕಳೆದೆ ಗದೆಯಿಂದ ಶೂರ ಧುರಧೀರ ಶ್ರೀ ಕೃಷ್ಣನಂಘ್ರಿ ಪರಿಚಾರ 2 ಅನ್ಯಮತಗಳ ಮುರಿದ ಧನ್ಯಮುನಿವರನೆ ಮಾನ್ಯ ಸುರರಿಂದ ಹರಿಗುನ್ನಂತಪ್ರಿಯನೆ ಭವ ಬನ್ನ ಬಿಡಿಸುವನೆ ಘನ್ನ ಗೋಪಾಲಕೃಷ್ಣವಿಠ್ಠಲನ ಸೂನೆ 3
--------------
ಅಂಬಾಬಾಯಿ
ಲಿಂಗಾ ಎನ್ನಂತರಂಗ ಪ ಮಂಗಳಾಂಗ ಸರ್ವೋ-ತುಂಗನೆ ರಾಮ ಅ. ಪ. ಮಂದಾಕಿನೀಧರಗೆ ಗಂಗಾಂಬು ಮಜ್ಜನವೆ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೆ ಕಂದರ್ಪಜಿತಗೆ ಮಿಗಿಲಾಪೇಕ್ಷೆಯೆ ರಾಮಾ 1 ಘನವಿದ್ಯಾತುರಗೆ ಮಂತ್ರಕಲಾಪವೆ ಧನವತಿಯ ಸಖಗೆ ಕೈಕಾಣಿಕೆಯೆ ಮನೆರಜತ ಪರ್ವತಗೆ ಫಣಿಯ ಆಭರಣವೆ ಮನೋ ನಿಯಾಮಕಗೆನ್ನ ಬಿನ್ನಹವೆ ರಾಮಾ2 ವೈರಾಗ್ಯ ನಿಧಿಗೆ ಈ ವಿಷಯ ಪದಾರ್ಥವೆ ಗೌರಿಯ ರಮಣಗೆ ಈ ಸ್ತೋತ್ರವೆ ವೀರ ರಾಘವ ವಿಜಯವಿಠ್ಠಲ ನಿಜಹಸ್ತ ವಾರಿಜದಳದಿಂದುದ್ಭವಿಸಿದ ಮಹಾ 3
--------------
ವಿಜಯದಾಸ
ಲೀಲಾ ಮನೋಹರ ವಿಠಲ | ಪಾಲಿಸೊ ಇವಳಾ ಪ ನೀಲ ಮೇಘ ಶ್ಯಾಮ | ಕಾಳಿಂದಿ ರಮಣಾಅ.ಪ. ಆಪನ್ನ ಪಾಲಾ |ನಿನ್ನವಾಳೆಂದೆನುತ | ಮನ್ನಿಸೀ ತಪ್ಪುಗಳಘನ್ನ ಮಹಿಮನೆ ಕಾಯೊ | ಕಾರುಣ್ಯ ಮೂರ್ತೇ1 ಸತ್ಸಂಗದಲಿ ಇಟ್ಟು | ಸತ್ಸಾಧನೆಯಗೈಸಿಮತ್ಸರಾದ್ಸರಿಗಳನ | ಕತ್ತರಿಸಿ ಹಾಕೀಉತ್ಸಹದಿ ಸಂಸಾರ | ಯಾತ್ರೆಗಳ ಚರಿಸಯ್ಯಮತ್ಸ್ಯ ಮೂರುತಿ ಹರಿ | ಸತ್ಯವ್ರತ ಪಾಲಾ 2 ತರತಮಾತ್ಮಕ ಜ್ಞಾನ | ಸದನದಲಿ ತಿಳಿ ಪಡಿಸಿಹರಿ ಭಕ್ತಿ ವೈರಾಗ್ಯ | ಎರಡು ಅನುಸರಿಸೀ |ಬರುವಂತೆ ಗೈದು ಉ | ದ್ಧರಿಸೊ ಹರಿ ಇವಳನ್ನನರಹರೀ ಮಾಧವನೆ | ಪರಿಪೂರ್ಣ ಕಾಮಾ 3 ಕಾಮ ಜನಕನೆ ದೇವ | ಕಾಮಿನಿಯ ಮನ ಬಯಕೆಪ್ರೇಮದಲಿ ನೀನಿತ್ತು | ಭೂಮ ಗುಣಧಾಮಾ |ಈ ಮಹಾ ಕಲಿಯುಗದಿ | ನಾಮ ಸ್ಮರಣೆಯ ಸುಖವಾನೇಮದಲಿ ನೀನಿತ್ತು | ಪಾಮರಳ ಉದ್ಧರಿಸೋ 4 ಕೈವಲ್ಯ ಪದದಾತಭಾವುಕಳ ಪೊರೆಯೆಂದು | ಭಾವದಲಿ ಬೇಡ್ವೇ |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನೆಭಾವದಲಿ ನೀ ತೋರಿ | ಹರುಷವನೆ ಪಡಿಸೋ 5
--------------
ಗುರುಗೋವಿಂದವಿಠಲರು
ಲೇಸಾಗಿ ಭಜಿಸುವೆ ಗೋಪಾಲದಾಸರ ರಾಶಿ ದುರಿತಂಗಳಾ ಪ ವಾಸವಾ ಪಿಡಿದ ವಜ್ರವೀಗಿರಿಯಂತೆ ನಿಶ್ಶೇಷದಿ ಭೇದಿಪರೊಇವರು ಅ.ಪ. ಸತಿ ಗಿರಿವಾಸ ನಾಮಕಳಾ ಸುರುಚಿರೋದರವೆಂಬೊ ಶರನಿಧಿಯಲ್ಲಿ ಚಂದಿರನಂತೆ ಉದಿಸಿಹರೋ ಇವರು 1 ಸದಮಲಮನದಲ್ಲಿ ಪದುಮನಾಭನ ನಾಮ ಪದೋಪದಿಯಲ್ಲಿ ಬಿಡದೇ ಪದರೂಪದಲ್ಲಿ ಪೊಗಳುವೊ ಸುಜನರಿಗೆ ಮೋಹವನುಣಿಸುತಿಹರೊ ಇವರು 2 ವಿಜಯದಾಸರೇ ತಮ್ಮ ನಿಜಗುರುಗಳೂ ಎಂದು ಭಜಿಪರೋ ಭಕುತಿಯಲ್ಲಿ ದ್ವಿಜವರ್ಯ ಜನಕಿಷ್ಟ ಸೃಜಿಸೋರು ಕಲ್ಪ ಭುಜದಂತೆ ನಿರುತದಲ್ಲಿ ಇಲ್ಲಿ 3 ತೊಂಡ ಪ್ರಹ್ಲಾದ ಪ್ರಿಯನ ಮಂಡಲ ಯತಿಗಳ ಬೆಳೆಪ ಯಾತ್ರೆಗಳ ಕೈಕೊಂಡು ಸೇವಿಸುತಿಹರೊ ಇವರು 4 ಭಕುತಿ ಪ್ರಾಚುರವಾಗೆ... ಹರಿನಾಮಪ್ರಕಟಿಸಿ ಕವನದಿಂದಾ ನಿಖಿಳಾಭೀಷ್ಟವನೀವ ಲಕುಮೀಪತಿಯೇ ಎಂದು ಭಕುತಗೆ ಬೋಧಿಪರೊ ಇವರು 5 ಆವಾವ ಕ್ರಿಯೆಗಳಲ್ಲಾವಾವ ಕಾಲದಿ ತಾವದಗಿನ್ನು ಹರಿಕಾವ ಸುಜೀವರ ಈ ವಿಧವೆಂದು ತನ್ನವರಿಗುಪದೇಶಿಪಾ6 ಭವ ತೋಯದಿ ಕಡೆಗೆತ್ತುವಾ . 7 ಸುಜನ ಜನರ ಕಾಯಕ್ಲೇಶವ ಕಳೆದು ಮಾಯಾರಮಣನ ವಲಿಸುವಂಥ ದಿವ್ಯ ಉಪಾಯವ ತೋರಿಪರೊ ಇವರು 8 ಮಂದ ಮನುಜ ನಾನು ಒಂದೊಂದಿವರ ಗುಣವೃಂದ ಪೊಗಳಲೊಶವೇ ತಂದೆ-ವರದಗೋಪಾಲವಿಠ್ಠಲನ ಹೊಂದಿ ಸೇವಿಪ ಗುರುವೇ 9
--------------
ತಂದೆವರದಗೋಪಾಲವಿಠಲರು
ಲೋಕ ನಾಯಕ ಲಕ್ಷ್ಮೀಲೋಲನಾ ಸ್ಮರಣೆ ಬಿಟ್ಟೂ ಪ ವಿದಿ ಮುನ್ನೆ ಬರದಿಷ್ಟಾ ಯಡಿಯಾತಪ್ಪಾದು ತುದಿಮೊದಲಿಂದಾ ಮಾಡಿದ ದೋಷವೆಲ್ಲಾ ಬೆದರಿಸಿದರೆ ಅದು ಬಿಡಲು ಬಲ್ಲುದೆ ಕೇಳೂ ಪಾದ ಭಜನಿಯ ಬಿಟ್ಟು 1 ನಾನಾಪರಿಯ ಮನಸೂ ನಟಿಸುವದಲ್ಲಾದೆ ಏನು ಎಲ್ಲವೂ ವ್ಯರ್ಥಾ ವೇದನೆ ನಿಂದೆ ನೀನು ಮಾಡಿದಾ ಫಲ ನಿನಗುಣಿ ಸದೆ ಬಿಡದೂ ಮಾನವಾಧೀಶನಂಘ್ರಿ ಧ್ಯಾನವೆಂಬುದು ಬಿಟ್ಟು 2 ಸಕಲಕೆ ಕರ್ತನಾಗಿ ಸರ್ವೋತ್ತಮನಿರಲು ಭಕುತಿ ಭಾವನೆಯಿಂದ ಭಜಿಸಾದೆ ನಿ ವಿಕಟಯೋಚನೆಯಿಂದ ಏನುಫಲವು ಇಲ್ಲಾ ನಿಕರ `ಹೊನ್ನೆಯ ವಿಠ್ಠಲನ ' ನಾಮೋಪಾಸನೆ ಬಿಟ್ಟು 3
--------------
ಹೆನ್ನೆರಂಗದಾಸರು
ಲೋಕನೀತಿ ಇತ್ತಿತ್ತ ಬಾರೆಂದು ಕರೆಯುವವರಿಲ್ಲದಿರೆ ವ್ಯರ್ಥವಲ್ಲವೆ ಜನ್ಮವು ಪ. ಅತ್ತತ್ತ ಹೋಗೆಂಬ ನುಡಿ ಕೇಳಿ ಜಗದೊಳಗೆ ಮತ್ತೆ ಇರಬಹುದೆ ಹರಿಯೆ ಅ.ಪ. ಆರಿಗಾರಾಗುವರೊ ಪ್ರಾರಬ್ಧ ನೀಗದಲೆ ಶೌರಿ ದಾರಿಯ ತೋರನು ಈ ರೀತಿಯರಿತು ಹೇ ದುರ್ಮನವೆ ನರಹರಿಯ ಆರಾಧನೆಯನೆ ಮಾಡೊ 1 ಏಕಾದಶ್ರೇಂದ್ರಿಯವ ಶ್ರೀ ಕಳತ್ರನೊಳಿಟ್ಟು ಏಕ ಮನದಲ್ಲಿ ಭಜಿಸು ಏಕೆ ತಲ್ಲಣಿಸುವೆ ಶೋಕಕ್ಕೆ ಒಳಗಾಗಿ ನೂಕು ಭವತಾಪ ಜಗದಿ 2 ಗೋಪಾಲಕೃಷ್ಣವಿಠ್ಠಲನೆ ಗತಿ ಎಂತೆಂದು ಈ ಪರಿಯಿಂದ ಭಜಿಸು ಶ್ರೀ ಪರಮ ಕಾರುಣ್ಯ ಗುರುಗಳಂತರ್ಯಾಮಿ ತಾಪ ಹರಿಸುವನು ಭವದಿ 3
--------------
ಅಂಬಾಬಾಯಿ