ಒಟ್ಟು 5088 ಕಡೆಗಳಲ್ಲಿ , 132 ದಾಸರು , 3232 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತುಳಸಿ ಸ್ವೀಕರಿಸೆನ್ನಯ ಪೂಜೆಯ ತುಳಸೀ ಲೋಕೋತ್ತರನರಸೀ ಪ ಈ ಕರಗಳು ಧನ್ಯಗಳಾಗಲಿ ಮನ ವ್ಯಾಕುಲ ಪರಿಹರಿಸಮ್ಮ ಜನನಿ ಅ.ಪ ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಫುಲ್ಲ ಕುಸುಮವಿರಲು ಒಲ್ಲನು ಹರಿ ನೀನಿಲ್ಲದ ಪೂಜೆಯ ಬಲ್ಲರಿದನು ಜ್ಞಾನಿಗಳು ಮಾತೆ 1 ವಂದಿಸಿ ನಿನ್ನಯ ಚರಣಗಳಿಗೆ ಫಲ ಗಂಧ ಪುಷ್ಪಗಳನರ್ಪಿಸುವೆ ಬೃಂದಾವನಲೋಲನ ವಲ್ಲಭೆ ಮೃದು ಮಂದಹಾಸವನು ತೋರೆ ಮಾತೆ 2 ನೀನಿದ್ದೆಡೆ ಹರಿ ತಾನಿರುವನು ಅನು ಮಾನವಿಲ್ಲವೆನಗೆ ನೀನಾಗಿರುವೆ ಪ್ರಸನ್ನವದನೆ 3
--------------
ವಿದ್ಯಾಪ್ರಸನ್ನತೀರ್ಥರು
ತುಳಸಿ ನಿನ್ನ ಭಜಿಸುವೆ | ಬಳಸಿ ಬಳಸಿ ನಮಿಸುವೆ ಪ ಕೊಳಲಬಾಲನರಸಿಯೇ | ನಳಿನವಿಸರಗಂಧಿಯೇ ಅ.ಪ ಗಾನಕೊಲಿದು ನಲಿವಳೇ | ಜ್ಞಾನವಿತ್ತು ಕಾವಳೆ ನಿನ್ನಕರುಣೆ ಕೃಷ್ಣನೊಲವು | ನಿನ್ನಸ್ಮರಣೆ ಪಾಪಹರವು 1 ಮಂಗಳಾಂಗಿ ತುಳಸಿದೇವಿ ರಂಗಗಿರಿಯ ನೀವದೇವಿ ಮಾಂಗಿರೀಶ ದಯಿತೆ ಮಹಿತೆ ಇಂಗಿತಾರ್ಥವೀವ ಮಾತೆ 2 ಬೃಂದಾವನ ದಿವ್ಯಸದನೆ ಇಂದೀವರ ಭವ್ಯವದನೆ ಕುಂದಾವಳಿ ಸದೃಶರದನೆ ನಂದಾತ್ಮಜ ಮನಮೋಹನೆ 3 ಸರಸವಿರಸಭರಿತೆ ನಮಿತೆ ಪರಮಚತುರೆ ಸುರಸನ್ನುತೆ ಮುರಳಿಗಾನಲಸಿತೆ ಮಾತೆ ವಂದೆ ಮಾಂಗಿರೀಶಸಹಿತೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಳಸಿದೇವಿ ಪದಕೇ | ನಾರೇರು | ಬೆಳಗಿರಿ ಆರುತಿಯಾ ಪ ಬೆಳಗುವುದೂ ನಮ್ಮ | ಅಳಗಿರಿ ರಂಗನಲಲನೆ ಶ್ರೀ ತುಳಸಿಗೆ | ಕಲಿಮಲ ಹಾಗೆ ಅ.ಪ. ದಳಪ್ರತಿ ದಳದಲ್ಲಿ | ಶ್ರೀಹರಿ | ನೆಲಸಿಹ ತಾನಲ್ಲಿಒಲಿಮೆಲಿ ಭಕುತರ | ಹಲವು ಸೇವೆಗಳಿಗೊಲಿದು ಅಭೀಷ್ಟವ | ಸಲಿಸುವ ದೇವಿಗೆ 1 ಅಮೃತ | ಕಲಶವ | ಧರಿಸುತ ಧನ್ವಂತ್ರಿಬರಲು ನಯನದಿಂ | ಮರುಳೆ ಆನಂದಕೆವರ ಬಿಂದೋದ್ಭವೆ | ಹರಿ ಪ್ರಿಯೆ ತುಳಸೀ 2 ಇಂಬು ತೋರಿ ಇರಲುಅಂಬುಜಾಕ್ಷ | ಗುರು ಗೋವಿಂದ ವಿಠಲನ |ತುಂಬಿ ದ್ವೈಭವದಿ | ಸಂಭ್ರಮ ಸೇವಿಪ 3
--------------
ಗುರುಗೋವಿಂದವಿಠಲರು
ತುಳಸೀ ದೇವಿ ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ ಸತಿ ಉದ್ಧರಿಸೆನ್ನನೆಂದು ಉದಕವೆರೆದು ನಮಸ್ಕರಿಸಿ ವಂದಿಸುತಲಿ ಸುಧೆಯ ಸುರರಿಗಿತ್ತ ಧನ್ವಂತರಿ ನಯನದಿ ಉದಿಸಿದೆ ಆನಂದ ಅಶ್ರುಗಳಿಂದಲಿ ಮದಗರ್ವ ಬಿಡಿಸೆನ್ನ ಶುದ್ಧಿಯನ್ನೆ ಮಾಡಿ ಹೃದಯದಿ ಹರಿಯ ತೋರಿ ರಕ್ಷಿಸೆಂದೆನಲು ಸದ್ದಿಲ್ಲದೆ ಪೊರೆವ ಗೋಪಾಲಕೃಷ್ಣವಿಠ್ಠಲ
--------------
ಅಂಬಾಬಾಯಿ
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ತೊಂಡನು ಕಂಡುದ ಬಿನ್ನೈಸುವೆನುಪಾಂಡವ ಪ್ರಿಯ ಎನ್ನ ತಪ್ಪು ಕಾಯಯ್ಯ ಪ ಹರಿ ನಿನ್ನ ನಾಮ ಕಾಮಧೇನುವಿಗೆದುರಿತದೊಟ್ಟಿಲು ಮೇವು ಭವಾಂಬುಧಿಯುಅರಸಿ ಕುಡಿವ ನೀರೆರೆವಡೆನ್ನಲ್ಲಿಭರಿತವಾಗಿರೆ ಒಲಿದು ಎನ್ನೊಳ್ಯಾಕಿರಿಸೆ 1 ಮುನಿಗಳ ಮನದ ಮೊನೆಯಾದ ಕೊನೆಯಲ್ಲಿಘನಭಕ್ತಿ ಪಾಶದಿ ಸಿಲುಕಲ್ಯಾಕೆಎನ್ನ ಚಿತ್ತ ಚಂಚಲದುಯ್ಯಾಲೆಯಲಿನಿನ್ನ ಮನಬಂದಂತೆ ಓಲ್ಯಾಡಲಾಗದೆ 2 ಕರ್ಣರಂಧ್ರದಿ ಮನವನು ಪೊಕ್ಕು ಪಾಪವನಿನ್ನವರಲಿ ತಳವರಸಲ್ಯಾಕೆಎನ್ನೊಳ ಹೊರಗೆ ಪಾಪರಾಸಿಗಳಿವೆನಿನ್ನ ಮನಬಂದಂತೆ ಸೊರೆಗೊಳ್ಳೆಲೊ ಕೃಷ್ಣ3
--------------
ವ್ಯಾಸರಾಯರು
ತೊಡರು ಪ ತೊಡರು ನಿಮಗಳವಡದು ನಾನರಿವೆ 1 ಮೇಣದಹಿಕೋಟಿ ದಳ್ಳುರಿಯ ಗರುಡನ ಕೂಡಪ್ರಾಣದಿಂ ಕಾದಿ ಜಯಿಸುವುದೆ ಹೇಳಾಕ್ಷೋಣಿಯೊಳು ಕ್ಷೀಣದೈವ ಬ್ರಹ್ಮಾಂಡ ಕೋಟಿಗಳುದಾನವಾರಿಯ ದಾಸಗಳವಡವು ನಾನರಿವೆ 2 ಹುಲಿಯ ಮೀಸೆಯ ಪಾಶವಿಡಿದು ಗೋವತ್ಸಗಳುನಲಿದು ಉಯ್ಯಾಲೆಯನಾಡುವವೆ ಹೇಳಾಕಲಿ ಬಾಡದಾದಿಕೇಶವರಾಯ ಚಕ್ರದಲಿತಲೆಗಳನು ಚೆಂಡಾಡಿಸುವ ಕಾಣೊ ಬೇಡ 3
--------------
ಕನಕದಾಸ
ತೊರವಿ ನರಸಿಂಹನ ಸ್ತೋತ್ರ ನರಹರೀ | ಪಾಲಿಸೊ ಎನ್ನ | ನರಹರೀ ಪ ನರಹರೀ | ನಮಿಸೂವೆ ನಿನ್ನ | ಚಾರುಚರಣ ಕಮಲಕ್ಕೆ ಮುನ್ನ | ಅಹತೊರವಿ ಕ್ಷೇತ್ರದಲ್ಲಿ | ಪರಿಪರಿ ಭಕುತರಮೊರೆಯ ಕೇಳ್ಕರುಣದಿ | ವರವ ನೀಡುತಲಿಹ ಅ.ಪ. ಪೂರ್ವ ಸಾಲಿಗ್ರಾಮ ರೂಪ | ದಲ್ಲಿದೂರ್ವಾಸ ಪೂಜಿತ | ರೂಪ | ಇದ್ದುಓರ್ವ ಭಕ್ತನಿಗೆ ಸಲ್ಲಾಪ | ತೇಜಗೈವದ ಕೇಳ್ವದು ಅಪರೂಪ | ಅಹಊರ್ವಿಯೊಳ್ ಚಿಮ್ಮಲಗಿ | ಸರ್ವಾಧಿಕವು ಕ್ಷೇತ್ರಇರ್ವೆ ನಾನಲ್ಲೀಗ | ತರ್ವೋದು ತೊರವೀಗೆ 1 ಸೊಲ್ಲ ಲಾಲಿಸಿ ಗಾಢ ಭಕ್ತ | ಎದ್ದುಚೆಲ್ಲೀದ ವಾರ್ತೆ ಸರ್ವತ್ರ | ಜನರಲ್ಲಸ ಗೊಳದೆ ಮುಂದತ್ತ | ಹಸಿಹುಲ್ಲನು ತೆಂಕದಿಶಿಯಿತ್ತ | ಅಹಚೆಲ್ಲುತ ಪೋಗುತಿರೆ | ಜ್ವಲೀಸಿತದುಚಿಮ್ಮಲ್ಲಿಗಿ ಊರ್ಬಳಿ | ಒಳ್ಳೆ ಕೃಷ್ಣಾತೀರ 2 ಸ್ವಪ್ನ ಸೂಚಿತ ತಾಣ ಬಗೆದು | ನೋಡೆಅಪ್ಪ ನೃಹರಿ ಕಂಡನಂದು | ಭಕ್ತರಪ್ಪಿ ಆನಂದಾಶ್ರು ಬಿಂಧು | ಕೈಚಪ್ಪಾಳೆ ಬಡಿದುಘೇಯೆಂದು | ಆಹಅಪ್ಪಾರ ಮಹಿಮನ | ಗೊಪ್ಪಾದ ಘನಮೂರ್ತಿಉಪ್ಪರಿ ತಂದಿಡುತ | ದರ್ಪದಿ ನಿಂತರು 3 ಶಿರಿ ಹಾಗೂ ಪ್ರಹ್ಲಾದರಾಯ | ಯುಕ್ತಹಿರಣ್ಯಕನ ತನ್ನ ತೊಡೆಯ | ಮೇಲೆಇರಿಸಿ ಉದರ ಸೀಳ್ದ ಬಗೆಯ | ಕೇಳಿಕರುಳನು ಮಾಲೆಯ ಪರಿಯ | ಆಹಧರಿಸುತ್ತ ತೋರ್ದನು | ಹಿರಣ್ಯಕಶಿಪೂಜತರಳ ಭಕ್ತನ ತೆರ | ತರಳನರಿದಿಷ್ಟೆಂದು 4 ಶಿಷ್ಟ ಮತ್ಸ್ಯಾವತಾರ | ಯುಕ್ತಶ್ರೇಷ್ಠ ಪ್ರಭಾವಳಿಹಾರ | ಸುವಿಶಿಷ್ಟದಿ ನರ ಮೃಗಾಕಾರ | ನಾಗಿಅಷ್ಟವು ಭುಜಯುಕ್ತಾಕಾರ | ಆಹಶಿಷ್ಟ ಭಕ್ತರಿಂದ ಕಷ್ಟವಿಲ್ಲದೆ ತೆರಳಿಶ್ರೇಷ್ಠ ತೊರವಿಯಲ್ಲಿ ಇಷ್ಟನಾಗಿ ನಿಂದ 5 ಮುನ್ನಿದ್ದ ನೃಹರಿಯ ಶಿಲೆಯ | ಕೊಂಡುಚೆನ್ನ ತೀರ್ಥದಿ ನರಹರಿಯ | ಇಡಲುಕೃಷ್ಣೆಗೆ ಪೋಗುವ ಪರಿಯ | ಪೇಳೆಘನ್ನ ಮೂರ್ತಿಯ ಒಯ್ದ ಬಗೆಯ | ಆಹ ಇನ್ನು ಮುನ್ನು ಪೇಳ್ವ | ನನ್ನೆಯ ಜನರಿಹರು ಮನ್ನಿಸುತೀವಾರ್ತೆ ಚಿನ್ಮಯನ ಕೊಂಡಾಡಿ 6 ಗುಪ್ತಾವು ಗಂಗಾ ಸನ್ನಿಹಿತ | ತೀರ್ಥಉತ್ತಮ ದಿಂದಭಿಷೇಚಿತ | ನಾಗಿನಿತ್ಯವು ಪವಮಾನ ಸೂಕ್ತ | ಪಂಚಯುಕ್ತವು ಪೂಜಾದಿ ಕೃತ | ಆಹಭಕ್ತಿ ಪೂರ್ವಕವಾದ | ಉತ್ತಮ ಸೇವೆಯನಿತ್ಯ ಕೈಗೊಳ್ಳುತ | ಭಕ್ತರಭೀಷ್ಟದ 7 ಮಾಸ | ಎರಡುಉತ್ಸವ ವೈಭವ ಘೋಷ | ಕೇಳಿ ಕುತ್ಸಿತ ಜನರೊಲ್ಲ ಈಶ | ಅಂತೆ ಸಚ್ಛಾಸ್ತ್ರ ಪ್ರವಚನ ಪೋಷ | ಆಹವತ್ಸಾರಿ ದುರುಳನ | ಕುತ್ಸಿತ ಉದರವವಿಸ್ತ್ರುತ ನಖದಿಂದ | ಕುತ್ತಿದ ಚಿಂತಿಸು 8 ನರಹರಿ ನಾಮಕ ಕವಿಯು | ಇಲ್ಲಿತೊರವಿಯ ನರಹರಿ ಸನಿಯ | ಚೆಲ್ವವರರಾಮ ಕಥೆಯನ್ನು ಬರೆಯು | ಅವ - ಕುವರ ವಾಲ್ಮೀಕಿಯೆ ಮೆರೆಯು | ಆಹತೊರವೆ ರಾಮಾಯಣ | ವಿರಚಿತ ವಾಯ್ತಿಲ್ಲಿಹರಿಯನುಗ್ರಹ ಜಾತ | ವರ ಕವಿತೆ ಉಲ್ಲಾಸ 9 ಹೃದಯ ಗುಹೆಯಲ್ಲಿ ವಾಸ | ಉಪನಿಷದು ಪೇಳ್ವದು ಅಂತೆಲೇಸ | ಬಲುಮುದದಿಂದ ಮಾಳ್ಪದ ವಾಸ | ಅಂಥಬುಧಜನಕಹುದು ಸಂತೋಷ | ಆಹವಿಧವು ಈ ಪರಿಯೆಂದು | ವಿಧಿಸಲು ಜಗತೀಗೆಹದುಳದಿ ತೊರವಿ ಸ | ನ್ನಿಧಿ ಗುಹೆಯೊಳುವಾಸ 10 ವಿಭವ | ದಿಂದಲೀವನು ಮುಕ್ತಿಯ ಸುಖವ | ಈತಕೈವಲ್ಯಾಕಧಿಪತಿ ಇರುವ | ಆಹತಾವಕನಾಗಿ ಗುರು | ಗೋವಿಂದ ವಿಠಲನಭಾವದಿ ನೆನೆವಂಗೆ | ತೀವರ ವರವೀವ11
--------------
ಗುರುಗೋವಿಂದವಿಠಲರು
ತೊರವಿ ನರಹರಿ ಸ್ತೋತ್ರ ಹರಿಯು ನಿಂದಿಹ ನೋಡೀ | ಭೂತಳದಿ ತೊರವಿಲಿಹರಿಯು ಇಂದಿರೆಗೂಡಿ | ಒಡವೆರೆಸಿ ಸರ್ವದಶರಣ ಜನರೊಡನಾಡೀ | ಸುಖವೀವ ನೋಡೀ ಪ ಹರಿಯೆ ಪರನೆಂಧ್ಹೇಳ್ಪ ಬಾಲಕೆದುರುಳ ಕಾಶ್ಯಪು ಪರಿಪರೀಯಲಿಕರ ಕೆರೆಯ ಗೊಡಲಾಗ ನರಹರಿತರುಳನುದ್ಧರ ಗೈದ ಶ್ರೀಹರಿ ಅ.ಪ. ಉದರ ಪೋಷಕ ಬೋಧಾ ಗುರುಶಂಡಮರ್ಕರು ಮುದದಿ ತಿಳುಹಲ ಗಾಧ | ಸರಿಸುತ್ತ ದೂರದಿಹದನ ಪೇಳಿದ ವೇದ | ಪ್ರತಿಪಾದ್ಯ ಶ್ರೀಹರಿವಿಧ ವಿಧವು ಕಾರ್ಯಗಾಧ | ಸೃಷ್ಠಿ ಲಯ ಮೊದಲಾದಅದುಭೂತವು ಎನೆ ಕಾರ್ಯ ಬಹಳವಗೈದು ಲೀಲೆಯ ತೋರಿ ಜಗದೊಳುಮುದವ ಬೀರುತ ಸಾಧು ಸಜ್ಜನಮೋದ ಬಡಿಸುವೆ ನೆಂದು ಪೇಳಿದ 1 ಕರಿಯಪದತಳ ತುಳಸೀ | ಪ್ರಹ್ಲಾದ ಬಾಲನಹಿರಿದು ಶರಧಿಯೊಳಿರಿಸೀ | ಮತ್ತವನು ಉಳಿದಿರೆಧರೆಯ ಗುಹೆಯೊಳಗಿರಿಸೀ | ಮೇಲ್ಕಿಲೆಯ ಮುಚ್ಚಲುಮರಳಿ ಬಂದನು ಜೀವಿಸೀ | ಹರಿಯ ವಿಶ್ವಾಸೀ ತರಳನಿಗೆ ಅಹಿಯಿಂದ ಕಚ್ಚಿಸಿಕರುಣಿ ಮಾತೆಯು ವಿಷವನೂಡಿಸೆಗರಸಹೋದರಿ ಪೊರೆಯಲವನನುತರಳನಿಂಧ್ಹರಿವರನುಯೆಂದ 2 ಬಂದ ಚಿಮ್ಮಲಿಗಿಂದ | ಭಕುತಂಗೆ ಪೇಳುತನಂದ ಹುಲ್ಲೆಸೆಯಂದ | ಅದು ಹತ್ತಿ ಉಳಿಯಲುನಿಂದಿಹೆ ತಾ ನಲ್ಲೆಂದ | ಅದರಂತೆ ಗೈಯಲುನಿಂದ ತೋರವಿಲಿ ಛಂದ | ಹರಿಯು ಬಹು ಆನಂದನಂದ ನಂದನನಾದ ಗುರು ಗೋ-ವಿಂದ ವಿಠಲನ್ನಕೇಸರಿಯುಚಂದದಿಂ ದೂವ್ರ್ಯಾಸ ಪೂಜಿತನಂದ ಕಂದ ಮುಕುಂದ ಶ್ರೀಹರಿ 3
--------------
ಗುರುಗೋವಿಂದವಿಠಲರು
ತೊಳೆಯಲಿ ಬೇಕಿದನು ಮನುಜಪ ಭವಕೂಪದಿ ಬಿದ್ದು ತೊಳಲಿ ಬಳಲಿ ಬಳಲಿ ಮಲಿನವಾಗಿಹ ಮನ ಹರಿಧ್ಯಾನ ಜಲದಲಿ ಅ.ಪ ಕಾಮಕ್ರೋಧದಿಂದ ಜನಿಸಿದ ಲೋಭಮೋಹ ಲೋಭದಿಂದ ಮದಮತ್ಸರ ಷಡ್ವಿಧ ತಾಪಗಳಿಂದ ಹದಗೆಟ್ಟಿರೆ ಮನ ಮುದದಿ ಹರಿಧ್ಯಾನದಿ 1 ದುರ್ಜನ ಸಂಗದೊಳು ಸೇರುತ ಮನ ವರ್ಜಿಸಿ ಹರಿ ಚರಿತ ಅರ್ಜುನ ಸಖ ಸರ್ವೇಶನ ನಾಮವು ಲಜ್ಜೆಯಿಲ್ಲದೆ ಸ್ಮರಿಸುತ ನಲಿಯಲು ಮನ 2 ಜನನ ಮರಣ ಕ್ಲೇಶದಿ ದು:ಖದಿ ಮನ ಮರಳಿ ಮರಳಿ ಪಾಪದಿ ಎಣಿಕೆ ಇಲ್ಲದ ದೋಷದೊಳಗೆ ಮುಸುಕಿದ ಮನ ನಿತ್ಯ 3 ಇಂದಿರೇಶನ ಧ್ಯಾನವ ಮಾಡಲು ಮನ ವೃಂದವ ಕೂಡಿ ಮಂದೋರದ್ಧರ ಗೋ_ ವಿಂದನೆನ್ನಲು ಮನ 4 ನಿಚ್ಚ ಭಕುತಿಯಿಂದ ಶ್ರೀ ಹರಿಪಾದ ಅರ್ಜಿಸಿಮುದದಿಂದ ರುಕ್ಮಿಣಿಯರಸನ ಸತ್ಯಸಂಕಲ್ಪನ ಮೆಚ್ಚಿಸಿ ಮುಕುತಿಯ ನೈದಲು ಈಮನ 5 ಮಧ್ವಮತದಿ ಜನಿಸಿ ನಿರಂತರ ಮಧ್ವರಾಯರ ಭಜಿಸಿ ಸದ್ವೈಷ್ಣವರ ಸಂಗದೊಳಾಡುತ ಲಜ್ಜೆತೊರೆದು ಕಾಲಗೆಜ್ಜೆ ಕಟ್ಟಲುಮನ6 ಕಂಬು ಚಕ್ರಧಾರಿ ಶ್ರೀ ಶೌರಿ ನಂಬುವರಾಧಾರಿ ಶಂಬರಾರಿಪಿತ ನಂಬಿದೆ ನಿನ ಪಾದ ಶಂಭುವಂದಿತ ಪಾಲಿಸಿಂದು ಸ್ಮರಿಸಲು ಮನ 7 ತೊಳೆದು ತೊಳೆದು ವಿಷಯ ವಾಸನೆಯನ್ನು ಹಲವು ವಿಧದಿ ತೊಳೆದು ಕಲುಷದೂರನ ನಾಮ ಸ್ಮರಣೆಯ ಮಾಡಲು ಮರುತ ಮತದ ಸಂಗ ದೊರೆವುದು ತವಕದಿ8 ಕಳವಳಿಸದೆ ಮನವು ನಿಶ್ಚಲದಲಿ ಥಳ ಥಳ ಥಳ ಹೊಳೆಯೆ ಕಮಲನಾಭ ವಿಠ್ಠಲವಲಿದು ಪಾಲಿಸುವನುಹಲವು ಬಗೆಯಲಿ ಹಂಬಲಿಸದೆ ಮನ 9
--------------
ನಿಡಗುರುಕಿ ಜೀವೂಬಾಯಿ
ತೋರಿಸೊ ತವರೂಪ ತೋಯಜ ನೇತ್ರ ಪ ಮಾರಜನಕ ಕರುಣಾರಸಪೂರ್ಣನೆ ನಾರಾಯಣ ಭವತಾರಕ ಮಮ ಸ್ವಾಮಿ ಅ.ಪ. ದಶರಥ ನಂದನ ವಸುಮತಿ ರಮಣ ತ್ರಿ ದಶವಂದಿತ ಚರಣ ಪಶುಪತಿಧನುಭೇದನ ವಸುಧಾಸುತೆರಮಣ ಋಷಿಪತ್ನಿ ಶಾಪಹರಣ ಅಸಮಾ ವಲ್ಕಲ ಚೀರವಸನಾ ಭೂಷಣಸ್ವಾಮಿ ಬಿಸಜಾಪ್ತನ ಸುತಗೊಲಿದವನಗ್ರಜ ನಸುವನು ತೊಲಗಿಸಿ ಅಸುನಾಥನ ಸುತ ಗೊಸೆದು ಬಿಸಜಭವ ಪದವಿಯ ಕರುಣಿಸಿ ವಿಷಧಿಯ ಬಂಧಿಸಿದಸಮ ಸಮರ್ಥ 1 ದಿನಮಣಿವಂಶ ಮಸ್ತಕಮಣಿಯೆಂದೆನಿಸಿ ಮುನಿ ಕೌಶಿಕನ ಯಜ್ಞಫಲವಾಗಿ ರಕ್ಷಿಸಿ ಅನಲಾಕ್ಷಧನು ಮುರಿದು ಮುನಿಪತ್ನಿಯನು ಪೊರೆದು ಜನಕಸುತೆಯ ಕರವನು ಪಿಡಿದ ಧೀರ ಜನಕನಾಜ್ಞೆಯಿಂ ವನವ ಪ್ರವೇಶಿಸಿ ಇನಸುತಗೊಲಿಯುತ ಅನಿಲಜನಿಂದಲಿ ಘನಸೇವೆಯ ಕೊಂಡನಿಮಿಷ ವೈರಿಯ ಹನನಗೈದ ಹೇ ಅನುಪಮ ಶೂರ2 ಲೀಲಾಮಾನುಷರೂಪ ಭೂಲಲನಾಧಿಪ ಫಾಲಾಕ್ಷವಿನುತ ವಿಶಾಲಸುಕೀರ್ತಿಯು ತಾ ಆಲಸ್ಯವಿಲ್ಲದೆ ವಿಶಾಲವನವ ಪೊಕ್ಕು ವಾಲಿಯ ಸಂಹರಿಸಿ ಪಾಲಿಸಿ ಸುಗ್ರೀವನ ಲೋಲಲೋಚನೆಯಿಹ ಮೂಲವ ತಿಳಿದು ಬಂ ದ್ಹೇಳಿದ ಪವನಜಗಾಲಿಂಗನವಿತ್ತು ಖೂಳ ದಶಾಸ್ಯನ ಕಾಲನೆಂದೆನಿಸಿದ ಶ್ರೀಲೋಲನೆ ಶ್ರೀ ಕರಿಗಿರೀಶನೆ3
--------------
ವರಾವಾಣಿರಾಮರಾಯದಾಸರು
ತ್ರಾಹಿ ತ್ರಾಹಿ ಶ್ರೀಗುರು ಅವಧೂತ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಸದ್ಗುರು ದೀನನಾಥ ಧ್ರುವ ತಪ್ಪು ಕ್ಷಮೆಯ ಮಾಡೊನೀ ಸ್ವಾಮಿ ನಮ್ಮ ಕೃಪಾಸಿಂಧು ಸದ್ಗುರು ಪರಬ್ರಹ್ಮ ಪಾಪಿ ದುರಾಚಾರಿಯು ನಾಪರಮ ಕೃಪೆಯಿಂದ ಕಾವದು ದಯನಿಮ್ಮ 1 ಗುಣದೋಷ ನೋಡದಿರೊ ಶ್ರೀಹರಿ ದುರಿತ ಕೋಟಿಗಳ ಸಂಹಾರಿ ನೀನಹುದೊ ಬಡವನಾಧಾರಿ ಅನುದಿನ ಕಾಯೊ ನೀ ಪರೋಪರಿ 2 ಒಮ್ಮೆ ಬಂಧನವ ಬಿಡಿಸೊ ಸಮ್ಯಕ ಙÁ್ಞನ ಸಾರದೊಳು ಕೂಡಿಸೊ ನಿಮ್ಮದಾಸ ಮಹಿಪತಿಯೆಂದೆನಿಸೊಬ್ರಹ್ಮಾನಂದದೊಳು ನಲಿದಾಡಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಾಹಿತ್ರಾಹಿ ಮಂತ್ರಾಲಯನಿಲಯ ಪ ತ್ರಾಹಿತ್ರಾಹಿ ಮಂತ್ರಾಲಯ ಗುರುವೆ ಸೂತ್ರನಪಿತಕೃಪಾಪಾತ್ರ ನೀನಹುದೊ1 ಧ್ಯಾನ ಮೌನ ಸುಜ್ಞಾನವಿಲ್ಲದಿಹ ದೀನ ಜನರುದ್ಧಾರ ಗಂಭೀರ 2 ವಸುಧೆಯೊಳಗೆ ದಶಪ್ರಮತಿ ಸುಶಾಸ್ತ್ರವ ಪ್ರಸರಿಸಿ ತೋರಿದ ಅಸಮಮಹಿಮನೆ3 ಮೂಕ ಬಧಿರ ಅಂಧಾದಿಗಳ ಕುಂದುಗಳ ವ್ಯಾಕುಲ ಹರಿಪ ಕೃಪಾಕರ ಮೂರ್ತೇ 4 ಕರುಣಶರಧಿ ಸಿರಿರಮಣನ ಭಕುತಾಗ್ರಣಿ ಸುಗುಣಗಣಾಭರಣಕೆಣೆಯೆ 5 ಬೇಡಿದಿಷ್ಟವ ನೀಡಿ ಕಾಪಾಡುವೆ ಈಡುಗಾಣೆ ನಿನಗೀ ನಾಡೊಳು ಇನ್ನು 6 ಇಂದು ಮುಂದು ಎನ್ನ ಕುಂದುಗಳೆಣಿಸದೆ ಕಂದನೆಂದು ಎನ್ನ ಮುಂದಕೆ ಕರೆಯೊ 7 ಕ್ಷೋಣಿಯೊಳಗೆ ನಿನಗಾರೆಣೆಕಾಣೆನೊ ವೀಣೆವೆಂಕಟ ನೀ ಸಂಕಟ ಹರಿಸೊ 8 ಪಾಲಿಸಯ್ಯ ಪ್ರಹ್ಲಾದ ವ್ಯಾಸ ಭೂ ನಲ್ಲ ನೀನಹುದೋ ಬಾಹ್ಲೀಕ ಪ್ರಭುವೇ 9 ಬಗೆ ಬಗೆ ಪಾಪೌಘಗಳನು ಕಳೆಯುವ ರಘುಪತಿಕಿಂಕರ ಶ್ರೀ ರಾಘವೇಂದ್ರ 10 ಪವನಾಂತರಾತ್ಮ ಶ್ರೀ ವೇಂಕಟೇಶ ಪದ ಕುವಲಯಕೆ ನೀ ಕುಮುದಬಾಂಧವ 11 ಶಂಕುಕರ್ಣ ಲಂಕೇಶನನುಜ ಶ್ರೀರಾಮ- ಕಿಂಕರನಕಳಂಕಮೂರುತೇ12 ಮರುತಮತಾಬ್ಧಿಯ ಸಾರಸುಧೆಯನಿತ್ತೆ ಉರಗಾದ್ರಿವಾಸವಿಠಲನ ದೂತ13
--------------
ಉರಗಾದ್ರಿವಾಸವಿಠಲದಾಸರು
ತ್ರಿಜಗ ವಂದಿತಗಾರತಿ ಎತ್ತಿರೆ ಪ ಎಳ್ಳುಂಡಲಿಗೆ ಕಬ್ಬು ಮೆಲುವವವಗೆ ಬೆಳ್ಳಿಯ ಹುರಿಗೆಜ್ಜೆಗಳ ಕಟ್ಟಿನಲಿವಗೆ ಡೊಳ್ಳಿನ ಗಣಪಗಾರತಿ ಎತ್ತಿರೆ1 ಭಕ್ತರ ಪೊರೆವವಗೆ ಉರಗ ಕುಂಡಲನ ಕುಮಾರ ಗಜವದನಗೆ ಶರಣ ಜನಕಗಾರತಿ ಎತ್ತಿರೆ 2 ದೇವತೆಗಳ ಕೈಯ ಕಪ್ಪವ ಕೊಂಬುವಗೆ ದಾವಾಗ್ನಿಯಿಂದ ಮೀರಿರುವಗೆ ಗಣೇಶಗಾರತಿ ಎತ್ತಿರೇ 3
--------------
ಕವಿ ಪರಮದೇವದಾಸರು