ಒಟ್ಟು 1724 ಕಡೆಗಳಲ್ಲಿ , 110 ದಾಸರು , 1401 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಂಭೋಶಿವಹರ ತ್ರಿಯಂಬಕ ಶ್ರೀಜಗ - ದಂಬಾರಮಣ ಪರಿಪಾಲಯಾ ಪ ಅಜಿನಾಂಬರಧರ ಭಜಿಪರಾರ್ತಿಹರ ತ್ರಿಜಗಪಾವನ ಗಂಗಾಧರ1 ನಂದಿವಾಹನ ಸುರವೃಂದ ಸುಪೂಜಿತ ಇಂದ್ರ ವಂದಿತ ಗರಕಂಧರ 2 ರುಂಡಮಾಲಧರ ಶÀುಂಡಾಲಮದಹರ ಚಂಡವಿಕ್ರಮ ಉಗ್ರೇಶ್ವರ 3 ದಕ್ಷಾಧ್ವರ ಹರದುಷ್ಟಶಿಕ್ಷಕ ವಿರೂ - ಪಾಕ್ಷನೆ ವೈರಾಗ್ಯನಿಧೆ 4 ವಾಮದೇವನೆ ಭಕ್ತಾಕಾಮಿತ ಫಲದನೆ ಕಾಮಸಂಹರ ಕರುಣಾಕರ 5 ಮೃತ್ಯುಂಜಯನೆ ಯನ್ನಪಮೃಹಾರಕಹರಿ ಭಕ್ತಾಗ್ರೇಸರ ಶಿವಶಂಕರ 6 ರಾಮನಾಮಲೋಲ ತಾಮಸಖಳಕಾಲ ಧಿಮಂತಜನ ಪರಿಪಾಲಕ 7 ಗಿರಿಜಾರಮಣ ನಿನ್ನ ಗುರುವೆಂದು ಮೊರೆಹೊಕ್ಕೆ ಹರಿಭಕ್ತಿಯಲ್ಲಿ ಮನನಿಲ್ಲಿಸೋ 8 ನಂಬಿದೆ ನಿನ್ನ ಪಾದಾಂಬುಜ ಯುಗಳ ಹೇ ರಂಭಜನಕ ಪೊರಿಯನ್ನನು9 ರಜತಾಚಲನಿವಾಸ ರಜನಿಚರ ವಿನಾಶ ಅಜನಸುತನೆ ದಿಗಂಬರ 10 ಸರ್ವಶ್ರೀ ವರದೇಶವಿಠಲನ ಸಖ ಮು - ಪ್ಪುರಹರ ಶ್ರೀ ಮಹಾದೇವ 11
--------------
ವರದೇಶವಿಠಲ
ಶರಣ ನೀನೆಲೊ ನರಹರಿ ಶರಣನೀನೆಲೊ ನರಹರಿ ಚರಣ ಪ ಶರಣ ನೀನಿರ್ದು ಮರವೆಗೂಡಿ ಜರಾಮರಣ ಪಡೆವರೇನೊ ಅ,ಪ ಯೋಗಮಾರ್ಗ ವಹಿಸಿ ನಿಜವಾದ ಭಾಗವತರ ಒಲಿಸಿ ರಾಗರಹಿತನಾಗಿ ನೀಗದ ಸಂಸಾರ ಭೋಗ ತ್ಯಜಿಸಿ ಭವರೋಗ ಗೆಲಿಯುವಂಥ 1 ಮಿಥ್ಯೆ ಮಾಯ ನೀಗಿ ಸತತ ನೀ ಸತ್ಯ ಜನಕೆ ಬಾಗಿ ಸತ್ಯಸಂಧನಾಗಿ ಚಿತ್ತಜತಾತನ ಭಕ್ತನೆನಿಸಿ ಯಮ ಮೃತ್ಯುಗೆಲಿಯುವಂಥ 2 ಪಾಮರತ್ವ ತೊರೆದು ನಿಜವಾದ ನೇಮನಿತ್ಯ ಪಿಡಿದು ಭೂಮಿಗಧಿಕ ಮಮಸ್ವಾಮಿ ಶ್ರೀರಾಮನ ನಾಮ ಭಜಿಸಿ ಮುಕ್ತಿ ಸಾಮ್ರಾಜ್ಯಪಡೆಯೆಲೊ 3
--------------
ರಾಮದಾಸರು
ಶರಣು ಗಜಾನನನೆ ಶರಣು ಲಂಬೋದರನೆ ಶರಣು ಪಾರ್ವತಿ ಪುತ್ರ ಶುಭಗಾತ್ರ ಪ ಆದಿಯಲಿ ನಿನ್ನ ಪಾದಭಜನೆಯ ಮಾಡೆ ಸಾದರದಿ ಸಲಹುವೆ ಮೋದವಿತ್ತು ಮೇದಿನಿಯಲಿ ನಿನ್ನಾರಾಧನೆಯ ಮಾಡದವ ನ- ರಾಧಮನೆನಿಸುವನಿದು ಪುಸಿಯಲ್ಲ 1 ಆಖುವಾಹನನೆ ನೀ ಕಳೆ ವಿಘ್ನಗಳ ಸಾಕು ಲಾಲಿಸೆನ್ನ ಏಕದಂತ ಮಣಿ ಭೂಷಣ ಕಾಕುಜನ ಕುಠಾರ ಲೋಕೈಕ ವೀರ 2 ಸಿತಿಕಂಠ ವರಪುತ್ರ ಪ್ರತಿ ವಾಸರವು ನಾ ನುತಿಸಿ ಬೇಡುವೆ ನಿನ್ನ ಸತಿರಹಿತನೇ ಸಿರಿ ರಂಗೇಶವಿಠಲನ ಅತಿಪ್ರೀತಿಯಿಂದ ಭಜಿಪ ಮತಿಯ ನೀಡೋ 3
--------------
ರಂಗೇಶವಿಠಲದಾಸರು
ಶರಣು ಶರಣು ಶ್ರೀ ರಾಮಚಂದ್ರನೆ ಶರಣು ಸುರಮುನಿ ವಂದ್ಯನೆ ಪ. ಶರಣು ಶ್ರೀ ರಘುಕುಲಾಬ್ಧಿಚಂದ್ರನೆ ಶರಣು ಸದ್ಗುಣ ಸಾಂದ್ರನೆ ಅ.ಪ ಕಮಲನಾಭನೆ ಕಮಲನೇತ್ರನೆ ಅಮರವಂದಿತ ವಿಮಲಚರಿತನೆ ಕುಮುದಸಖಸಮಾನ್ಯನೆ 1 ಅಂಬುಜಾಸನ ಶಂಭುವಂದಿತ ಶಂಬರಾರಿಯ ಜನಕನೆ ಕಂಬುಕಂದರ ನಂಬಿ ಭಜಿಸುವೆ ಬೆಂಬಿಡದಲೆ ಪಾಲಿಸೈ 2 ಪಕ್ಷಿವಾಹನ ರಕ್ಕಸಾಂತಕ ಲಕ್ಷ್ಮೀರಮಣ ಶುಭಲಕ್ಷಣ ಲಕ್ಷ್ಮಣಾಗ್ರಜ ಸತ್ಯವಿಕ್ರಮ ರಕ್ಷಿಸೈ ಪುರುಷೋತ್ತಮ 3 ಪರಮಪಾವನ ಶೇಷಗಿರಿಯೊಳು ನಿರುತ ನೆಲೆಸಿಹ ಶ್ರೀಶಗೆ ಶರಣ ಜನರ ಸಚ್ಚರಿತೆಯೋದುವ ವರವ ಪಾಲಿಸು ದೇವನೇ 4
--------------
ನಂಜನಗೂಡು ತಿರುಮಲಾಂಬಾ
ಶರಣು ಶ್ರೀ ನಂದನೇಶ್ವರ | ಪಾಲಿಸು ಜಗದೀಶ್ವರ | ಶರಣು ಶ್ರೀ ನಂದನೇಶ್ವರ ಪ ಶರಣು ಶ್ರೀ ಗುರುವರ ಗಂಗಾಧರ | ಕರ ಕಪಾಲಧರ ಹರ ಮೃತ್ಯುಂಜಯ ಅ.ಪ. ತಂದೆ ನಿನ್ನಯ ಪಾದವ | ಮರೆತಿಹುದರಿಂದ | ನಿಂದ ಹಲವಂಗದಲಿ ಭವಭವದಿ || ನೊಂದು ಬಂದೆ ನಾನಿಂದೀ ಭವದೊಳು | ಹೊಂದಿ ತವಾಂಘ್ರಿಯನಂದದಿ ಭಜಿಸುವೆ 1 ಭೇದ ಬುದ್ಧಿಯ ಮಾನವರು | ವೇದ ಶಾಸ್ತ್ರದ| ಹಾದಿಯರಿಯದ ಮತ್ಸರರು || ಸಾಧುಗಳೊಡನೆ ವಿರೋಧವನೆಣಿಸುವ | ಬಾಧಕರಾದರು ಹೇ ದಯಾನಿಧಿಯೇ 2 ತೊಡಕುಗಳನ್ನೆ ಬಿಡಿಸಿ | ಬಾಧೆಗಳ ವಾರಿಸಿ | ಕಡು ದುಷ್ಟಾತ್ಮರ ಶಿಕ್ಷಿಸಿ | ಎಡೆಬಿಡದೆನ್ನ ಮನೋರಥ ಸಲಿಸುತ | ದೃಢತರ ಭಕುತಿಯ ಕೊಡು ಕೃಪೆಯಿಂದಲಿ 3 ಪಾದ | ಮುಕುತಿ ಸಂಪದ ಪಾಲಿಸೊ || ಶಕುತಿಯೊಳಗೆ ನೀ ಯುಕುತಿಯಿಂದ ನಿಜ | ಸುಖದ ಪದವಿಯೊಳು ಪ್ರಕಟದಿ ಪೊರೆಯೈ4 ಯೋಗಿಗಳರಸ ನೀನೆಂಬ | ಬಿರುದುಗಳ ತೋರಿಸು- | ತೀಗೆನ್ನಪರಾಧವ ಕ್ಷಮಿಸೆಂಬ || ರಾಗದ ನುಡಿಯೊಳೆನ್ನಾಗಮನವೊಪ್ಪಿಸು- | ತೀಗ ಸದಾನಂದ ಯೋಗಾಂತರ್ಗತ 5
--------------
ಸದಾನಂದರು
ಶಶಿವದನೇರೆಲ್ಲ ದಿವಸಿವ್ರತವ ಮಾಡಿರೇ ಶಶಿಧರನ ಮಡದಿಯಾ ಭಜಿಸಿ ಪಾಡಿರೇ ಪ ಕತ್ಲೆರಾಯನ ಪತ್ನಿಯೂ | ಸುಪುತ್ರನ್ನ ಪಡೆಯಲೂ ಇತ್ತಳು ವಸ್ತ್ರಗಳನ್ನು ಚೆಂದದಿ ದ್ವಿಜರಿಗೆ ಕೊಡಲೂ ಪಡೆದಳು ಪುತ್ರನಾ ಬುಧರು ಕಾಳಿಂಗ ನೆಂದು ಕರೆದರು ಪರಿ ಪರಿವಿಧದಿಂದ ರಾಜರು ಹರುಷಗರೆದರೂ 1 ಗಿರಿಕಾನನದಿ ಚಲಿಸಿ | ಮೃಗವ ಸಂಹರಿಸೀ ಬಾಲಕನೂ | ಬರುತಿರಲು ಬಾಲಕನು ವ್ಯಾಘ್ರದ ದನಿಕೇಳಿ ಮೂರ್ಛೆಗೈದು ಮೃತನಾದನು 2 ಮೃತನಾದ ಸುತಗೆ | ಸತಿಯ ಕೊಡಬೇಕೆಂದು ಸಾರಿಸಿದ ಸತತ ದ್ರವ್ಯ ಕೊಡುವೆನೆಂದು ಮಾತ ನಾಡಿದೆ ದ್ವಿಜನಸುತನ ಸತಿಯ ತ್ಯಜಿಸಿ ಹೋಗಿರಲು ನಿಜಸುತಗೆ ಭಗಿನಿಯ ಕೊಡುವೆನೆಂದು ನುಡಿದಾನು 3 ಬೆಳ್ಳಿ ಬಂಗಾರ ಸಹಿತ ನಮಗೆ ಇರುವೋದೂ ಕನ್ನಿಕೆಗೆ ಮಾಂಗಲ್ಯ ಬಂಧನ ಮಾಡಿಹೋದಾರು 4 ರಾಜನು ಹೋಗುವಾಗ | ಸೊಸಿಯಮನೆಗೇಳೆಂದನು ಪತಿಯ ಬಿಟ್ಟು ಹ್ಯಾಂಗೆ ಮನೆಗೆ ಬರುವೋದೆಂದಳು ಪತಿಯ ಬಿಟ್ಟು ಬಂದರೆ ಪತಿವ್ರತವು ಇರುವೋದೆ ಹಿತವು ಬಯಸಿ ಬಂದರೆ ಸದ್ಗತಿಯು ದೊರೆವುದೇ 5 ಒಂದು ದಿನ ಸುಂದರಿ ಬಂದವರ ಕೇಳಿದಳು ಇಂದು ದಿವಸಿ ವ್ರತವು ಅಂದರು ಹಿಂದೆ ಗೌರಿಪೂಜಿಸಿದೆ ಮುಂದೆ ವ್ರತವನು ಬಂಧು ಬಳಗೆ ಇಲ್ಲದಲೆ ಮಾಡುವುದೇನು 6 ನಾರುಬತ್ತಿ ನೀರು ಎಣ್ಣೆ ಗೌರಿಗೆ ಮಾಡಿದಳು ಅಪಾರ ಸದಿಗೆ ಮುರಿದುಗೌರಿ ಪೂಜಿಸಿದಳು ಹರತಾ ಭಂಡಾರ ಒಡೆದು ಹರುಷಗರೆದನು ವರ ಕಾಳಿಂಗ ಕ್ಷಣ ದೊಳೆದ್ದು ಮಾತಾಡಿದನು ಪತಿಯಸಹಿತಾಗಿ ತಮ್ಮ ಗೃಹಕೆ ಬಂದರು ಸತತ ನಾರಸಿಂಹನ ಸ್ಮರಣೆ ಮಾಡಿದರು 7
--------------
ಓರಬಾಯಿ ಲಕ್ಷ್ಮೀದೇವಮ್ಮ
ಶಾಂತಿನಿಲಯ ಸುಖದ ಪ ಭ್ರಾಂತನಾದೆ ಪರಿಭವದ ತಂತು ತಿಳಿಯದಕಟ ಶ್ರೀ ಕಾಂತ ಕಾಯೊ ಪಿಡಿದು ಕರು ಣಾಂತರಂಗ ಕುಸುಮನಾಭ 1 ಉದಧಿಯಂದದುಕ್ಕಿಬರುವ ಅಧಮನಕೆ ಕಲ್ಪನೆಗಳು ಒದಗಿ ವಿಧ ವಿಧ ನೋಯಿಪು ದಿದನು ಬೇಗ ಪರಿಹರಿಸು 2 ನಂಬಿಭಜಿಪ ಭಕುತಜನರಿ ಗಿಂಬು ನೀನೆ ಅಂಬುಜಾಕ್ಷ ಇಂಬುಗೊಟ್ಟು ಸಲಹು ಸದಾ 3
--------------
ರಾಮದಾಸರು
ಶಾಂಭವಿ ದಯಮಾಡೆ ಸಿಟ್ಟು ಬಿಡು | ಮುನಿಯದೆ ಎನ್ನ ಕೂಡ |ಕೋಪವು ಮಾಡಬೇಡ ಎನಗಾರ |ಕರುಣ ದೃಷ್ಟಿಲಿ ನೋಡ ಪ ಮೂರ್ತಿ 1 ರಜ ತಮ ಸಂಗದಲಿ ನಾ ಕೆಟ್ಟೆ | ನಿನ್ನ ಸ್ಮರಣೆಯ ಬಿಟ್ಟೆ | ಕಾಮ ಕ್ರೋಧದಲಿ ಬಹು ಸುಟ್ಟೆ |ತಿಳಿಯದು ನಿನ್ನ ಗುಟ್ಟೇ 2 ಮನಸಿಗೆ ತರದಿರೆ ಎನ್ನ ದೋಷ |ಮಾಡೆನ್ನ ದುರಿತವಿನಾಶಾ |ಕಲಿಕಾಲಸುತನಾ ಭವಪಾಶಾ | ಭಜಿಸುವೆ ನಿನ್ನ ಮಹೇಶಾ 3
--------------
ಭೀಮಾಶಂಕರ
ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ. ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1 ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2 ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3 ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4 ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5 ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6
--------------
ಗಲಗಲಿಅವ್ವನವರು
ಶಾರದೆ ಪೊರೆಯೆನ್ನಾ - ಮಾತೆಯೆತೋರಿಸಿ ತವ ಚರಣಾ ಪ ಶಾರದೆ ತವ ಪದ | ಸಾರಿ ಭಜಿಸುವೆನುದೊರಗೈವುದೆನ್ನ | ಭಾರಿ ಅಜ್ಞಾನವ ಅ.ಪ. ವೀತ ದುರಿತೆ ಖ್ಯಾತೇ | ಶಿವಮಾತೆಯೆ ಸದ್ಗುಣ ಗಣ ವ್ರಾತೇ ||ಶಾತಕುಂಭೋಧರ | ಪ್ರೀತಿ ವಿಷಯ ಜಗನ್‍ಮಾತೆಯೆ ಹರಿಗುಣ | ಗಾಥೆಯ ಗೀತೆಯೆ 1 ಹಯಾಸ್ಯ ಪದದಲಿ 2 ಈಶಾಹಿ ವಿಹಗೇಂದ್ರಾ | ಸ್ವರ್ಗಾಧೀಶಾಧಿಪರು ಛಂದಾ ||ಮೀಸಲು ಮನದಲಿ | ಕ್ಲೇಶಗಳಿಲ್ಲದೆತಾಸು ತಾಸಿಗೆ ನಿನ್ನೆ | ಸೂಸಿ ಭಜಿಸುವರು 3 ನರಹರಿ ಗುರುಭಕ್ತೀ | ಬ್ರಾಹ್ಮೀಸರಸ್ವತಿ ಗಾಯಿತ್ರೀ ||ಅರ ವಿದೂರ ನರ | ಹರಿಯನು ಭಜಿಸುವಸುರ ಚಿರ ವಾಣಿಯ | ಕರುಣಿಸು ವಾಣೀ 4 ಪರ ಬೊಮ್ಮಾ |ಭಾವಜ ಪಿತ ಗುರು | ಗೋವಿಂದ ವಿಠಲನಓವಿ ಭಜಿಸುವಂಥ | ಭಾವವ ನೀಯೇ 5
--------------
ಗುರುಗೋವಿಂದವಿಠಲರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಶಿರಿದೇವಿಯೆ ಪೊರಿಯುವದೆನ್ನನು ತಾಯೆ ಭಾ ಸ್ಕರ ಪುರ ನಿಲಯೆ ಪ ಧರಣಿಸುರವರÀನಿಗೊಲಿದು ಶ್ರೀಗಂಧದ ವರ ಶಿಲೆಯೊಳು ನೆಲಿಸಿರುವ ಶುಭಾಂಗಿಯೆ ಅ.ಪ ಲಕುಮಿಯೆ ತವ ದರುಶನ ವರುಷಂಪ್ರತಿ ಮಾಡುವ ನೇಮಾಸಕ್ತ ಶ್ರೀ ಲಕ್ಷ್ಮೀಕಾಂತ ತತ್ಕರಸಂಪೂಜಿತ ಸತಿ 1 ಪದ್ಮೇ ಪ್ರಣಮಾಮಿ ಭವತ್ಪದ ಪದ್ಮೆ ವಾರಿಜದಳ ಸದ್ಮೆ ಪದ್ಮಾನನೆ ಸ್ಮರಿಸುವೆ ಕರಧೃತ ಪದ್ಮೆ ವಾಸಯಿ ಮಮಸದ್ಮನಿ ಪದ್ಮಾವತಿ ಪದ್ಮಜನುತ ಪದಪದ್ಮೇ ಉದ್ಭವಿಸಿದ ಪದ್ಮದಿ ಪದ್ಮನಾಭ ಹೃತ್ಪದ್ಮನಿವಾಸಿನಿ 2 ಸಿಂಹಧ್ವಜ ಶೋಭಿತೆ ಸಾನುರಾಗದಿ ಭಜಿಸುವರಿಗೆ ಪ್ರೀತೆ ಕಾಮಿತ ಫಲದಾತೆ ಜ್ಞಾನಾ ಸದ್ಭಕುತಿಯು ಕರುಣಿಸು ಮಾತೆ ವರದಾಭಯಹಸ್ತೆ ರಾಣೆಯೆ ನಮಿಸುವೆ 3 ವಂದಾರುಜನ ಮಂದಾರಾಮಿಂದಿರಾ ಸುಂದರಾನನಾಂ
--------------
ಕಾರ್ಪರ ನರಹರಿದಾಸರು
ಶಿವ - ಪಾವ9ತಿಯರು ಪರಮೇಶ್ವರಾ ಮಹದೇವಾ | ಗಿರಿಜಾವರ ಶಿವ ಶಂಭೋ | ಪರಮೇಶ್ವರ ಮಹದೇವಾ ಪ ಹರಶವ9 ಕಾಲಕಾಲ | ವಿರೂಪಾಕ್ಷ ರುಂಡಮಾಲಾ | ಶರಣು ಜನರಪಾಲಾ | ಗಿರಿ ಶೋಭಾವಾ ನೀ ಲೋಲಾ 1 ಭೂತೇಶ ವ್ಯೊಮಕೇಶಾ | ಶಿತಿಕಂಠ ಕೃತ್ತಿವಾಸಾ | ಕ್ರತು ಧ್ವಂಸಿ ದುಷ್ಟ ನಾಶಾ 2 ಈಶಾನ್ಯ ಭಗ9ರುದ್ರಾ | ಪಶುಪತೇ ವೀರಭದ್ರಾ | ಕೃಶಾನು ರೇತಸ್ ರೌದ್ರಾ | ಶಶಿಧರಾ ಯೋಗನಿದ್ರಾ 3 ಪಿನಾಕಿ ಮೃತ್ಯುಂಜಯನೇ | ನಾ ನಿನ್ನ ಮರತಿಹನೇ| ದೀನರ ಪಾಲಿಸುವನೇ | ನೀನೆನ್ನ ಕಾಯೋ ಭವನೇ 4 ಗಜಮುಖ ತಾತ ಬಾರೋ | ಭಜಿಸುವೆನೀ ಮೈದೋರೋ | ನಿಜದಾ ಸದಾನಂದ ಬಾರೋ | ರಜತಾದ್ರಿವಾಸ ತೋರೊ 5
--------------
ಸದಾನಂದರು
ಶುಕ್ಕುರವಾರದಿ ಭಕ್ತಿಲಿ ಭಜಿಸುವೆ ಲಕ್ಕುಮಿ ದೇವಿಯನುರುಕ್ಮಾಭರಣ ವಿಲಕ್ಷಣ ಶೋಭಿಪ ಸುಲಕ್ಷಣ ಮೂರ್ತಿಯನುರಕ್ಕಸರಿಪು ಬಲಪಕ್ಕದಿ ಕೂತಿಹ ರುಕ್ಮಿಣಿ ದೇವಿಯನು ಪ ಸಂತತ ಭಜಿಸುವ ಸಂತರ ಹತ್ತಿರ ನಿಂತು ರಕ್ಷಿಸುತಿಹಳುಶಾಂತಳು ಸದ್ಗುಣವಂತಳು ಕಮಲಾಕಾಂತನ ಸುಪ್ರಿಯಳೂ ಕರವೀರಪ್ರಾಂತ್ಯದೊಳಿರುತಿಹಳು ಹೃತ್ಕಮಲಂಚಳ ಸಂಸ್ಥಿತಳು 1 ಮಾಧವ ಭೂಮಿಯ ಮಂಗಳ ಮೂರ್ತಿಯು ಸುಖರಾಶಿ2 ಆಸ್ಯಾಂಬುಜತನು ಹಾಸಸುಕುಂತಳೆ ಭೂಷಿತ ಬಿಂಬೋಷ್ಠೀಕೂಸಿಗೆ ಕೊಡು ಇಂದಿರೇಶನ ಸಹಜಗದೀಶಳೆ ತವ ಭೆಟ್ಟಿ3 ಅಗಣಿತ ಮಹಿಮನಸುಗುಣದೊಳಾಡುವ ಮಿಗೆ ಹರುಷವ ಕೊಡುನಗೆಮುಖದವಳೇ 4 ಸಂದರವದನೆ ಸಿಂಧುರಗಮನೆ ಕುಂದದ ಅಸುರರನೆಮಂದರಮಾಲಾ ಭೂಷಿತವೇಣಿ ಇಂದಿರೇಶನ ಪಾದದ್ವಂದ್ವತೋರಿಸು ನಿನಗೊಂದಿಸುವೆನು ಶರದಿಂದು ಸುಮನಸೆ 5
--------------
ಇಂದಿರೇಶರು