ಒಟ್ಟು 2477 ಕಡೆಗಳಲ್ಲಿ , 108 ದಾಸರು , 1764 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೇ ಮರೆವರೇನೊ ಹರಿಯಾ ಪ ಬಹು ಜನುಮಗಳಲ್ಲಿ ಬಟ್ಟ ಬವಣಿಗಳರಿಯಾ ಅ.ಪ. ವಿಷಯ ಚಿಂತನೆ ಮಾಡಸಲ್ಲ ಮೇಷ ವೃಷನನಾದನು ಹಿಂದೆ ಪೌಲೋಮಿ ನಲ್ಲ ಝಷ ಕೇತುವಿನ ಮ್ಯಾಳ ಹೊಲ್ಲ ನಿರಾ ಶಿಷನಾಗು ಯಮರಾಯನೆಂದೆಂದೂ ಕೊಲ್ಲ 1 ಧನವೆ ಜೀವನವೆಂಬಿ ನಿನಗೆ ಸುಯೋ ಧನ ನೋಡು ಧನದಿಂದ ಏನಾದ ಕೊನೆಗೆ ಅನಿರುದ್ಧ ದೇವನ ಮನೆಗೆ ಪೋಪ ಘನ ವಿಜ್ಞಾನವನೆ ಸಂಪಾದಿಸು ಕೊನೆಗೆ 2 ಹರಿದಾಸನಾಗಿ ಬಾಳೋ ಗುರು ಹಿರಿಯರ ಪಾದಕಮಲಕೆ ನೀ ಬೀಳೋ ನರರ ನಿಂದಾಸ್ತುತಿ ತಾಳೋ ದೇಹ ಸ್ಥಿರವಲ್ಲ ಸಂಸಾರ ಬಹು ಹೇಯ ಕೇಳೋ 3 ಹಲವು ತೀರ್ಥಗಳಲ್ಲಿ ಸ್ನಾನ ಮಾಡೆ ಮಲ ಪೋಯಿತಲ್ಲದೆ ನಿರ್ಮಲ ಜ್ಞಾನ ಫಲಿಸದೆಂದಿಗು ಹೀನ ಬುದ್ಧಿ ಕಳೆದು ಸೇವಿಸು ಸಾಧುಗಳನನುದಿನ 4 ಜಿತವಾಗಿ ಪೇಳುವೆ ಸೊಲ್ಲಾ ಹರಿ ಕಥೆಯಲ್ಲಿ ನಿರತನಾಗಿರು ಲೋಹ ಕಲ್ಲಾ ಪ್ರತಿಮೆ ಪೂಜಿಸಿದರೇ ನಿಲ್ಲ ಪರೀ ಕ್ಷಿತನೆಂಬ ರಾಯ ಈ ಮಹಿಮೆಯ ಬಲ್ಲಾ 5 ಜ್ಞಾನೇಚ್ಛಾ ಕ್ರಿಯಾ ಶಕ್ತಿ ತ್ರಯವಾ ತಿಳಿ ದಾನಂದ ಪಡು ಬಯಸದಿರುಭಯವಾ ಸಾನುರಾಗದಿ ಬೇಡು ದಯವಾ ನೀ ಮ ದ್ದಾನೆಯಂದದಿ ಚರಿಸು ಬಿಟ್ಟು ಭಯವಾ 6 ಭಾವ ಕ್ರಿಯಾ ದ್ರವ್ಯಾದ್ವೈತ ತ್ರಯ ಆವಾಗ ಚಿಂತಿಸು ಭೂಮ್ಯಾದಿ ಭೂತಾ ಜೀವಿಗಳೊಳು ಜಗನ್ನಾಥ ವಿಠಲ ಗಾವಾಸ ಯೋಗ್ಯವೆಂದರಿಯೋ ಸಂತತಾ 7
--------------
ಜಗನ್ನಾಥದಾಸರು
ಮನವೇನೆಂಬುದನರಿಯೋ ಮನುಜ ಮನ ವೇನೆಂಬುದನು ಧ್ರುವ ಮನವೇನೆಂಬುದನನುಭವಕೆ ತಂದು ಖೂನದಲಿಡದೆ ಜ್ಞಾನದಲಿ ನಾನಾ ಶಾಸ್ತ್ರವ ಓದಿ ನೀ ಅನುದಿನ ಏನು ಘಳಿಸಿದ್ಯೊ ಮರುಳ ಮನುಜ1 ಉತ್ಪತ್ತಿ ಸ್ಥಿತಿ ಲಯ ಕರ್ತನೆಂದೆನಿಸಿ ಪ್ರತ್ಯೇಕರವನು ತೋರುತಲಿ ಮತ್ತೆ ಬ್ಯಾರ್ಯಾದ ಪರಬ್ರಹ್ಮೆಂದು ತಾ ಚಿತ್ತ ಭ್ರಮಿಸುದು ದಾವುದೊ ಮನುಜ 2 ಏಕೋ ವಿಷ್ಣು ವೆಂದೆನಿಸಿ ಮುಖದಲಿ ಪೋಕ ದೈವಕೆ ಬಾಯದೆರೆಸುತಲಿ ನಾಕುವೇದವ ಬಲ್ಲವನೆಂದೆನಿಸಿ ವಿಕಳಿಸುತಿಹ್ಯದು ದಾವುದೊ ಮನುಜ 3 ಉತ್ತಮೊತ್ತಮರ ಕಂಡಾಕ್ಷಣ ಹರುಷದಿ ನಿತ್ಯಿರಬೇಕೀ ಸಹವಾಸವೆನಿಸಿ ಮತ್ತೊಂದರಘಳಿ ಗಾಲಸ್ಯವ ತೋರಿ ಒತ್ತಿ ಆಳುವದು ದಾವುದೊ ಮನುಜ 4 ಪಾಪವ ಮಾಡಬಾರದು ಎಂದೆನಿಸಿ ವ್ಯಾಪಿಸಿಗೊಡದೆ ಕಾಣದನಕ ಉಪಾಯದಲಿ ಅಪಸ್ವಾರ್ಥವು ಇದಿರಡೆ ಅಪಹರಿಸುವದು ದಾವುದೊ ಮನುಜ 5 ಪ್ರಾಚೀನವೆ ತಾಂ ನಿಜವೆಂದರುಹಿಸಿ ಆಚರಣೆಯ ಬ್ಯಾರೆ ತೋರುತಲಿ ನೀಚ ಊಚ ಹೊಡೆದಾಡಿಸುತ ನಾಚಿಸುತಿಹುದು ದಾವೊದೊ ಮನುಜ 6 ಸಗುಣ ನಿರ್ಗುಣ ಬ್ಯಾರೆರಡನೆ ತೋರಿ ಬಗೆ ಬಗೆ ಸಾಧನ ತೋರಿಸುತ ಬಗೆದೊಂದೆವೆ ಭಕುತಿಗೆ ನೆಲೆಗೊಳಿಸಿದ ಪ್ರಗತಿ ತೋರುವುದು ದಾವುದೊ ಮನುಜ 7 ಧ್ಯಾನಕೆ ಕೂಡಿಸಿ ಮೋನವ ಹಿಡಿಸಿ ಅನುದಿನ ಜಪವನು ಮಾಡಿಸುತ ಘನವಾಗಿಹÀ ಅನುಭವ ಸುಖದಾಟದ ಖೂನ ದೋರಿಸುದು ದಾವುದೊ ಮನುಜ 8 ಮರವಿಗೆ ತಾನೆ ಅರಿವೇ ಕೊಟ್ಟು ತಿರಿವು ಮರವಿನಂಕುರದ ಕುರ್ಹುವಿನ ಇರಹು ತೋರಿಸುದು ದಾವುದೊ ಮನುಜ 9 ಮನವಿನ ಮೂಲವು ತಿಳಿವದು ಭಾನುಕೋಟಿ ಪ್ರಕಾಶನ ಕರುಣದಲಿ ನಾನು ನಾನೆಂಬವರಿಗೆ ಇದರ ಖೂನ ಲೇಶ ತಿಳಿಯದೊ ಮನುಜ 10 ಹರಿಯೆ ಗುರುವೆಂದರುಹಿಸಿ ಆತ್ಮಲಿ ಶರಣಹೋಗುವ ಭಾವನೆದೋರಿ ತರಳಮಹಿಪತಿ ಗುರುದಯ ಪಡಕೊಂಡಿಂದು ಯೋಗ್ಯನಾಗುವದಿದೊಂದೆ ಮನುಜ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಸಿಜ ಪಿತ ವಿಠಲ | ನೀನಿವನ ಸಲಹೋ ಪ ಅನುಮಾನ ವಿನ್ನಿಲ್ಲ | ಅಣುಗ ನಿನ್ನವನೋ ಅ.ಪ. ಸಿಂಧು ಮೂರುತಿಯೇ 1 ಸ್ವಪ್ನ ಸೂಚನೆಯಂತೆ | ಒಪ್ಪಿದಂಕಿತವಿತ್ತುಅರ್ಪಿಸಿಹೆ ನಿನ್ನಡಿಗೆ | ಸರ್ಪ ಶಯನಾ |ಒಪ್ಪಿಡಿಯ ಅವಲಿಗ್ಯೆ | ಅಪ್ಪಾರವಿತ್ತಿರುವೆಇಪ್ಪರಿಯ ಮಹಿಮೆಗಳು | ಇನ್ನಾರಿಗುಂಟೋ 2 ವಿಷ ಅಮೃತವಾದಂತೆ | ದುಷ್ಕರ್ಮ ಫಲರಹಿತಎಸೆಗುತ್ತ ಸಂತಾಪ | ನಶಿಸುವಂತೆಸಗೋಅಸಮ ಮಹಿಮನೆ ಭಕ್ತಿ | ಪಾಶಕ್ಕಾವಶನಾಗಿಮಿಸುಣಿ ಮೇಲ್ಮಣಿಯಂತೆ | ಭಾಸಿಸೋ ಹರಿಯೇ 3 ಮೋದ ಮೋದ ದ್ವಂದ್ವ | ಬುದ್ಧಿ ಸಮವೆನಿಸೋ 4 ಆವದೇಶವು ಇರಲಿ | ಆವಕಾಲವು ಇರಲಿನೀವೊದಗೊ ಸ್ಮøತಿ ಪಥಕೆ | ಕೋವಿದರ ಒಡೆಯಾಕಾವ ಕೊಲ್ಲುವ ಗುರೂ | ಗೋವಿಂದ ವಿಠ್ಠಲನೆಭಾವದಲಿ ಮೈದೋರೇ | ಓವಿ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಮನಸಿಜಜಾತ ತಾತಮೋಹಿನಿಭಾಮಿನೀ ಶ್ರೀಮಣಿ ಪ ವನಜಾಸನೆ ಘನಸುಗುಣೀ | ಮುನಿಮಾನಸ ತೋಷಿಣಿ ಅ.ಪ ನರೋತ್ತುಂಗ ಪ್ರಮೋದಿನೇ | ಚಿನ್ಮಯೆ ಸುಮಭಾವನೆ ದರಹಾಸ ಸುಮಾನಿನೆ ಭಾಗ್ಯಾಲಂಕಾರೆ ಪಂಕಜಾಸನೇ 1 ವರ ಸುಖಾಭ್ಯಂಜನೇ ಮೋಹನೇ ಮಣಿಗಣರದನೇ | ಗಜಗಮನೇ ಭೃಂಗ ಚತುರೆ ನಿರುತ ನಿರಂಜನಿ ಕೋಮಲೇ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮನಿ ಮನಿಗೆ ಗುರುಭಕ್ತರಾದವರು | ಜಗದೊಳಗೆಲ್ಲಾ | ಘನ ನೆಲೆ ಕಂಡವರೊಬ್ಬರಿಲ್ಲಾ ಪ ಗುರು ಸ್ವರೂಪರಿಯದೆ | ನರಭಾವ ಮರಿಯದೆ | ಗುರು ಭಕ್ತಿ ಶೀಲಾ ತಾ ತಿಳಿಯದೇ 1 ಸಂಪ್ರದಾಯಕರು ಯನಿಸಿಕೋಬೇಕು | ಯಂದು ಬಯಸೀ | ಕ್ಷಿಪ್ರದಿ ಮಂತ್ರವ ಕೊಂಬರು ಅರಸಿ 2 ಸುರಸ ಮಾತಾಡಿದರ | ಗುರುಯಂದಿರುತಿಹರು ಸಾರೆ | ಬಿರುನುಡಿಕೇಳಲು ತೊಲಗುವರು ಬ್ಯಾರೇ 3 ಮೊಲೆ ಬದಿಯೊಲುಣ್ಣಿ | ಮೊತ್ತಾ ಇರುವಂತೆ ನೋಡಿಸತ್ಯಾ | ನೆಲೆ ಭಕ್ತಿಯೆತ್ತಾ ತಾನಿವ್ಹನೆತ್ತಾ 4 ಹುರಡೆ ಡಾಂಭಿಕದಿಂದಾ | ಚರಿಸಿದರೇನು ಛಂದಾ | ಗುರುಮಹಿಪತಿ ಪ್ರಭು ನೆಲಿಯಲಿ ಯಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನುಜಾ ಹಿಡಿ ದಾರಿ ದಾರಿ ದಾರಿ ದಾರಿ | ಪ್ರಾಣಿ ಹಿಡಿ ದಾರಿ ದಾರಿ ದಾರಿ ದಾರಿ ಪ ದೃಢಭಾವದಿಂದಾ | ಪಡೆದು ಸದ್ಬೋಧಾ | ಒಡನೆ ಸದ್ಗುರು ಪಾರಾ | ಸಾರಿ ಸಾರಿ ಸಾರಿ ಸಾರಿ 1 ಚಾರು ಭಕುತಿಯಾ | ದಾರಿ ನಿಶ್ಚಯಾ | ಆರು ಅರಿಗಳ ಕೈಯ್ಯಾ | ಮೀರಿ ಮೀರಿ ಮಮೀರಿ ಮೀರಿ 2 ತನುಧನ ಬೆರೆದು | ಋಣವೆಲ್ಲ ಮರೆದು | ಕ್ಷಣದೊಳೆಲ್ಲಡಗುವದು | ತೋರಿ ತೋರಿ ತೋರಿ ತೋರಿ 3 ಸ್ವಾನಂದ ವಿರಹಿತಾ | ದಿನಗಳೆವರೆ ವ್ಯರ್ಥಾ| ಮಾನವಜನ್ಮದಿ ಮತ್ತೆ | ಬಾರಿ ಬಾರಿ ಬಾರಿ ಬಾರಿ 4 ಸಾರಥಿ | ತೋರಿ ತೋರಿ ತೋರಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮರತಿರಲಾರೆ ನಿಮ್ಮನೂ ಹರಿಯೇ ಧೊರೆಯೆ ಪ ಸುರಮುನಿವರನುತ ಕರಿವರ ಸುಚರಿತ ಕರುಣಿಸಿ ಕಾಯೊ ಮಮದುರಿತಹರಣ ವೆಂಕಟ್ರಾಮಾನುಜ 1 ಕುಸುಮ ಶರೀರ ಭಾವಾ ಪಶುಪತಿಪ್ರಿಯಸೇವೆ ತೃಷೆಯ ನೀಗಿಸೊ ವೆಂಕಟ್ರಾಮಾನುಜ2 ಭರತಪುರೀಶನ್ಯಾರೊ ನಿಜ ಸುರತವ ತೋರೋ ಗುರುವು ತುಲಶಿರಾಮ ದೊರೆಯೆ ಸರಿಯೊ ವೆಂಕಟ್ರಾಮಾನುಜಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
ಮರುಳುತನವಿದ್ಯಾಕೆ ಮನವೆ ಮಂದಭಾವದಿ ಶ್ರೀ- ಧರೆಯರಸ ಸ್ವೇಚ್ಛೆಯಿಂದ ಪೊರೆವ ತಾನೆ ಕರುಣದಿ ಪ. ಕಾಲ ನಾನಾ ಫಲಗಳನ್ನು ತೋರ್ಪುದು ಶ್ರೀ ಲಲನೆಯರ ಸನಿಚ್ಛೆಯಿಂದ 1 ಛಳಿಯು ಬಿಸಿಲು ಮಳೆಯು ಗಾಳಿ ಸುಳಿವದ್ಯಾರ ಕೃತ್ಯವೆಂದು ತಿಳಿದು ನೋಡಲಿನ್ನು ವ್ಯರ್ಥ ಫಲವಗೊಳ್ಳುತಳಲದಿರು 2 ಸತ್ಯ ಸಂಕಲ್ಪಾನುಸಾರ ಭೃತ್ಯವರದ ಕರುಣದಿಂದ- ಲಿತ್ತುದೆ ಸಾಕೆಂದು ತಿಳಿವದುತ್ತಮ ಸಾಂಗತ್ಯ ಬಯಸು 3 ಹಸಿದ ವೇಳೆಯಲ್ಲಿ ತಾಯಿ ಬಿಸಿಯ ಹಾಲ ತಣಿಸಿ ತನ್ನ ಶಿಶುವಿಗೀವ ತೆರದಿ ಭಕ್ತವಶನ ಮೇಲೆ ಭಾರವಿರಿಸು 4 ನೆನೆವ ಜನರ ಮನದೊಳಿರುವ ವನಜನಾಭ ವೆಂಕಟೇಶ ವಿನಯದಿಂದ ಕಾವನೆಂಬ ಘನವ ತಿಳಿದು ಪಾಡಿ ಪೊಗಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯದ ಭಾವಗೋಚರವಾುತಯ್ಯಾಕರುಣಿ ವೆಂಕಟದಾಸವರ್ಯ ಸದ್ಗುರುವೆ ಪಸನ್ನಿಕರ್ಷವನಾದರಣ ಹೇತು ಮಾನವರಿಗೆನ್ನುತಾನಂದ ರಸರುಚಿ ದೋರಿಸಿನಿನ್ನನೆ ತೊಳಲಿ ಬಳಲುತ ನಿನ್ನೊಳೆರಗುವಂತುನ್ನತರ ಮಾಡಲಂತರ್ಧಾನವಡೆವೆ 1ಗೋಪಿನಾರಿಯರಿಗಾನಂದ ರೂಪವ ತೋರಿತಾಪಬಡುವಂತಗಲಿ ುದ್ಧವರ ಮುಖದಿಸೋಪಾಯವಚನದಿಂ ತಿಳು'ದರ್ಥವ ನೆನೆಯಲೀ ಪರಿಯ ತೋರಿತೆನಗೆಲೆ ದಯಾನಿಧಿಯೆ 2ನೆರೆಧನ್ಯರಾದೆವಾ'ಲ್ಲ ಸಂದೇಹ ಗುರುವರ ವಾಸುದೇವಾರ್ಯ ಚಿಕನಾಗಪುರದೀಪರತತ್ವವರುಪಿ ವೆಂಕಟದಾಸ ವೇಷದಿಂಮರಳಿ ನಿಜದೊಳು ನಿಂದೆ ಕರುಣಾಸಮುದ್ರಾ 3
--------------
ತಿಮ್ಮಪ್ಪದಾಸರು
ಮರೆಯದೆ ಶ್ರೀಹರಿಯಮನದಲಿ ಸ್ಮರಿಸೊ ಗುರುಹಿರಿಯರ ಅನುಗ್ರಹವನು ಗಳಿಸೊ ಪ ಇಂದಿರೆ ರಮಣನ ಅನುದಿನ ಮಂದರ ಧರನಾ 1 ಬಗೆ ಬಗೆಯಲಿ ಶ್ರೀ ಭಗವಂತನ ಪಾದ ಯುಗವನು ನೆರೆನಂಬಿಯಿ-----ಎಂದೆಂದೂ 2 ಪರಿಪರಿ ನವವಿಧ ಭಕ್ತಿಯು ಸಾಧಿಸಿ ಪರ ಬ್ರಹ್ಮ ಪರಮಾನಂದನ 3 ಶರಧಿಶಯನನ ಶಾಂತ ನಿಧಾನನ ಅರವಿಂದ ನಯನನ ಹರಿಗೋವಿಂದನಾ 4 ದಿನಕರ ಕೋಟಿತೇಜ ವಿಲಾಸನ ಮಾನವ ರಕ್ಷಕನಾ 5 ಚಿತ್ತವು ಚಲಿಸದೆ ಚಿನ್ಮಯ ರೂಪನ ನಿತ್ಯಾನಂದನ ನಿಗಮಗೋಚರನಾ 6 ಭಾವಜನಯ್ಯನ ----- ಭಾವನಕೊಲಿದ ಜನ ಹೃದಯದಿ ಕುಣಿದಾಡುವ ನಾ7 ಜ್ಞಾನಾನಂದನ ಜ್ಞಾನಿಗಳರಸನ ಧೇನು ಪಾಲಕ ಜಗದೀಶನ ಮುಕುಂದನ 8 ಮಾಧವ ಮುನಿ ಗೋವಂದ್ಯನ ಶರಣರ ಪೊರೆವಾ ಬಿರುದಿರುವ ದೇವನಾ 9 ಇನಕುಲ ಭೂಷಣನ ವಿಶ್ವಲೋಕೇಶನ ದನುಜಾಂತಕ ಶ್ರೀ ದಾಮೋದರನಾ 10 ಪಾಂಡವ ಪಕ್ಷಕನ ಪರಮಾಣು ರೂಪ ಬ್ರಹ್ಮಾಂಡನಾಯಕ ಕೋದಂಡಧರನ ಇಂದೂ 11 ವಾರಿಧಿ ಬಂಧನ ವೈದೇಹಿ ತಂದನ ಮೀರಿದ ರಕ್ಕಸರ ಮದಿಸಿದವನಾ 12 ಪನ್ನಗ ಶಯನ `ಹೆನ್ನ ವಿಠ್ಠಲನ ' ಉನ್ನತ ಚರಿತನ ಇನ್ನು ಹರುಷದಲಿ 13
--------------
ಹೆನ್ನೆರಂಗದಾಸರು
ಮರೆವಾರೇನೋ ನಿನ್ನ ನೀನು ಗುರುತಾ ನೆಲೆ ಮಾಡದೆ | ಸಿರಿಯರಸನಸಿರಿ ಚರಣವ ಸ್ಮರಿಸದೇ | ನರದೇಹ ಬರಡವ ಮಾಡುವರೆ ಜಾಣಾ ಪ ಹಲವು ಪುಣ್ಯದಿಂದಲ್ಲದೇ ಸುಲಭದಲ್ಲಿ ಜನ್ಮವು | ಇಳೆಯೊಳಗುದಯಿಸಿ ತಿಳಿಯದೆ ಸ್ವಹಿತದ | ಬಳಿಕೆಯ ನೆರೆಭವ ಬಲಿಯೊಳು ಸಿಲುಕಿ | ತೊಳಲುತ ನಿಶಿದಿನ ಬಳಲುವೆ ಜಾಣಾ 1 ಅವಗತಿಯೋ ಎನಗೆ ಮುಂದಾ | ಆವ ಜನಮ ವಿಹುದೋ | ವಿವೇಕದಿಂದ ವಿಚಾರಿಸಿ ಮನದೊಳು | ಭಾವಿಸಿ ಗುರುವಿನ ಪಾವನ ಪಾದಾ | ಭಾವಭಕುತಿಯಲಿ ಸಾವಧನನಾಗದೆ | ಹ್ಯಾವಹೆಮ್ಮೆಲೆ ದಿನಗಳೆದೇ ಜಾಣಾ 2 ಬದಿಯಲ್ಲಿದ್ದಾ ವಸ್ತುವನು | ಸದಗಾನಾದ್ಯೋ ಕಾಣದೆ | ಸಾಧುರ ಕೈಯಲಿ ಹಾದಿಯ ಕೇಳೆಲೋ | ಸಾದರದಲಿ ನಿಜ ಸಾಧನ ಬಲಿದು | ಭೇದಿಸು ಮಹಿಪತಿನಂದನ ಸಾರಿದಾ | ಗಾದಿಯನ್ನದೆ ಗತಿ ಸಾಧಿಸೋ ಜಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಹಾಲಕ್ಷ್ಮಿದೇವಿ ಪ ಆಹಾ ನಿನ್ನ ಮಹಿಮೆ ಹೊಗಳಲಳವೆ ಅ.ಪ ಮೂಲ ಪ್ರಕೃತಿ ಮಹಾಮಾಯೆ ನಿನ್ನ ಲೀಲೆಯಲ್ಲವೆ ಸಮಸ್ತವೂ ಸಾಲದೆಂಬುವ ದುಸ್ವಭಾವ ಬಿಡಿಸಮ್ಮ 1 ಕ್ಷೀರಸಾಗರಾತ್ಮಜೇ ಭಜೇ ಅಂ ಭೋರುಹಾಕ್ಷನರ್ಧಾಂಗಿ ಸಾರಸ ವೈರಿಯ ತಂಗಿ ಶುಭಾಂಗಿ 2 ತುತ್ತುಮಾಡಿವುಣಿಸಮ್ಮ ಮತ್ತಾರನು ಕಾಣೆಮ್ಮ ನಮ್ಮಮ್ಮ 3 ತಾನೆ ಶ್ರೇಷ್ಟನೆಂಬ ಹೀನರ ಸಂಗವು ಜ್ಞಾನಿಗಳಿಗೆಯಿದು ಹಾಸ್ಯವಲ್ಲದೆ 4 ನಿನ್ನ ಪತಿಯಾದ ಗುರುರಾಮ ವಿಠಲನ ಘನ್ನ ಚಿತ್ತಗನುಸಾರ ಮನ್ನಿಸಿ ಕಾಯಿ ನೀ ನೆನ್ನನು ನಿಜದೆÉ ಮಹಾಲಕ್ಷ್ಮಿದೇವಿ 5
--------------
ಗುರುರಾಮವಿಠಲ