ಒಟ್ಟು 18764 ಕಡೆಗಳಲ್ಲಿ , 134 ದಾಸರು , 7642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು - ಜಗ ಪ ದೇಕ ಪೊಡವಿಗೊಡೆಯನ ರಾಣಿ ಪರಮ ಕಲ್ಯಾಣಿ ಅ ಗುರು ಹಿರಿಯರನು ಕಂಡು ಮುರುಕಿಸುವ ಮೋರೆಯಲಿಅರೆಮತಿಯ ಕೊಂಕು ಮಾತುಗಳನಾಡಿಚರಣಕೆರಗದ ಮನುಜರಿರಬಾರದೆಂದೆನುತಮರಮುರಿದು ಒರಗಿ ಸಾಯಲಿ ಎಂದು ನಡುಗಿದೆಯ1 ಉತ್ತಮರ ಹೊಟ್ಟೆಯಲಿ ಬಗಳೊ ಶ್ವಾನವು ಹುಟ್ಟಿಹೆತ್ತವರ ನಿರ್ಬಂಧಕೊಳಗು ಮಾಡಿಅತ್ತೆ ಮಾವರ ಕೀರ್ತಿಯ ಕೊಂಡಾಡುವಧಮರಹೊತ್ತು ಇರಲಾರೆನೆನುತ ಮತ್ತೆ ನಡುಗಿದೆಯ2 ಕಳ್ಳತನವನು ಕಲಿತು ಕಾಲೋಚಿತವ ಕೇಳ್ದುಸುಳ್ಳು ಮಾತುಗಳಾಡಿ ಒಡಲ ಪೊರೆದುಕೊಳ್ಳಿ ದೆವ್ವಗಳಂತೆ ಅಲೆದಾಡುತಿರುವಂಥಸುಳ್ಳು ಮನುಜರ ಹೊರಲಾರೆನೆಂದು ನಡುಗಿದೆಯ 3 ಕಲಿಯುಗದಿ ಮುರಹರನ ಸ್ಮರಣೆಯನು ಮಾಡದೆಯೆಸಲೆ ಭಕ್ತಿಯಿಂ ವೇದಶಾಸ್ತ್ರವನೋದದೆಲಲನೆಯರ ಮೇಲೆ ಕಣ್ಣಿಡುವ ಹೊಲೆಯರನು ನಾ-ನೊಲಿದು ಹೊರಲಾರೆನೆಂದು ನಡುಗಿದೆಯ 4 ಧರೆಯೊಳಗೆ ಕರ್ಮಿಗಳು ಹೆಚ್ಚಿ ಕವಿತ್ವವ ಕಲಿತುನರಕುರಿಗಳೆಲ್ಲರು ನಡೆಗೆಟ್ಟರೆಂದುಗುರುವೆ ಕೇಳಯ್ಯ ಕನಕ ಪ್ರಿಯ ತಿರುಪತಿಯಗಿರಿಯಾದಿಕೇಶವನೆ ಒಲಿದು ನಿಲ್ಲಿಸಿದ 5
--------------
ಕನಕದಾಸ
ಏಕೆ ಪೋಗುವೆ ರಂಗಾ, ರಂಗಯ್ಯ ರಂಗ ಪ ಏಕಾಂತದೊಳು ಪೇಳ್ವ ವಾಕ್ಕುಗಳನು ಕೇಳಿ ಅ.ಪ ಮುನಿಸತಿ ಶಿಲೆಯಾಗಿ ವನಜನಾಭಾಯೆಂದು ನೆನೆಯುತಲಿಲ್ಲವೋ ಮನ ಮೋಹನಾ ತನಯ ಪ್ರಹ್ಲಾದ ತಾ ಜನಕಾ ಬಾರೆನಲಿಲ್ಲ 1 ದುರುಳ ಮಕರಿಯಿಂದೆ ಪರಿತಾಪವಾಂತಿಲ್ಲ ಸ್ಮರಿಸಲಿಲ್ಲ ದುರುಳ ಕದ್ದೊಯ್ಯಲಿಲ್ಲ ಸರಸಿಜಾನನನೀಗ ಚರಣಕೆರಗಲಿಲ್ಲ 2 ಹದಿನಾರು ಸಾವಿರ ಸುದತೀ ಮಣಿಯರೆಲ್ಲ ಮದನಾಂಗ ಬಾರೆಂದು ಕರೆಯಲಿಲ್ಲ ಉದಧಿ ನಿನ್ನರಸಲಿಲ್ಲ ಪದುಳದೆ ಬಲಿ ನಿನ್ನ ಚದುರ ಬಾರೆನಲಿಲ್ಲ 3 ಕರದೆ ಕೊಡಲಿಯ ಪಿಡಿದು ಮರದೆ ನಿ[ಲ್ಲೆನುತಲಿ] ನೂರಾರು ಕೈಯವ ಕರೆಯಲಿಲ್ಲ ಹರನೀಗ ತ್ರಿಪುರರ ತರಿಯೆ ಬಾರೆನಲಿಲ್ಲ ವರತುರುಗವೇರಿ ಧುರಕೆ ಬಾರೆಂಬರಿಲ್ಲ4 ಕಾಮಿತವೀಯೆಂದು ಪ್ರೇಮದಿ ಭಜಿಸುವ ಪಾಮರರಿಲ್ಲಿಗೇ ಬರುತಿರ್ಪರೋ ಶಾಮನೆ ಮಾಂಗಿರಿಗಾಮಿಯಾಗಿಹೆಯೇಕೆ ಕಾಮಹರನೆ ಬಾರೊ ರಾಮದಾಸಜೀವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ ಇರು ಇರುತೆಲ್ಲ ನನ್ನದೆಂದಿ ಮರೆವಿನ ಆಲಯದೊಳು ನಿಂದಿ ಕರುಣವಿಲ್ಲದೆತುಸು ಹೆಡತಲೆಮೃತ್ಯು ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1 ತನುಜನರು ಇವರು ಧನಕನಕಿರುವತನಕ ಹಿತರು ಜನಕಜನನಿಯರು ಕೊನೆಗೆ ಸಂಗಡ ಬರರ್ಯಾರು ಕನಿಕರವಿಲ್ಲದೆ ಕಾಲದೂತರು ಘನಬಾಧೆಪಡಿಸಲು ಬಿಡಿಸರೋರ್ವರು 2 ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು ಪಾಮರ ಸಂಸಾರ ಕಾಮಿಸಿ ಕೆಡಬೇಡೇಲೆ ಮಳ್ಳ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಭಜಿಸಿ ಭವಗೆಲಿದು ನೀ ಬಾಳೋ3
--------------
ರಾಮದಾಸರು
ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ
ಏತಕೆ ಬಾರದೊ ಹರಿಯೆ ನೀತವೆ ಇದು ಸರಿಯೆ ಪ ನಿಗಮ ಸಂಗೀತನಾಮ ಜಲ ಜಾತನಯನ ಬಹುಪ್ರೀತಿ ಮಾಡಿದರು ಅ.ಪ ಕುಂದರದನ ಕುರುವಿಂದಾಧರ ಪೂ ರ್ಣೇಂದು ವದನ ಮುನಿವಂದ್ಯ ಎಂದಿಗೆ ಈ ಭವಬಂಧ ಬಿಡಿಸಿ ದಯ ದಿಂದ ತೋರುವಿಯಾನಂದ ಕುಂದುಗಳೆಣಿಸದೆ ಚಂದದಿ ಸಲಹಲು ಎಂದೆಂದಿಗು ನೀ ಗತಿಯೆಂತೆಂದರು 1 ಮಾರಜನಕ ಗಂಭೀರ ಹೃದಯ ಸಂ ಚಾರ ಭಜಕ ಮಂದಾರ ತೋರು ನಿನ್ನ ಪದ ಸಾರಸವನು ಮುನಿ ನಾರದಾದಿ ಪರಿವಾರ ಘೋರ ಶರಧಿಯೊಳು ಸೇರಿದವರಿಗಿ ನ್ನಾರು ಬಂದು ಉದ್ಧಾರ ಮಾಡುವರು 2 ಶ್ರೀಶ ಯದುಕುಲಾಧೀಶ ಮೇಘ ಸಂ ಕಾಶ ರೂಪ ಸರ್ವೇಶ ಘಾಸಿಪಡಿಪ ವಿಷಯಾಸೆಗಳೆಲ್ಲವ ನಾಶಗೈಸೊ ಶ್ರೀನಿವಾಸ ದಾಸ ಜನರಿಗುಲ್ಲಾಸವ ಕೊಡುತಿಹ ವಾಸುದೇವವಿಠಲಯ್ಯನೆ ಎನ್ನೊಳು 3
--------------
ವ್ಯಾಸತತ್ವಜ್ಞದಾಸರು
ಏನ ಪೇಳಲಿ ಹರಿಯ ವ್ಯಾಪಾರ ಮಹಿಮೆ ಪ ಆನಂದ ಆಶ್ಚರ್ಯ ಆಗುವುದು ಎನಗೆ ಅ.ಪ. ಮರಳಿಗೋಸುಗ ಪೋಗೆ ಮಾಣಿಕ್ಯ ದೊರೆಯಿತು ಅಮೃತ ಕಳಶವಾಯ್ತು ಇರುಳು ಕತ್ತಲೆಯೊಳಗೆ ಮಣಿದೀಪ ಮಿರುಗಿತು ಕಮಲ ಮಾಲಿಕೆಯಾಯ್ತು 1 ಪಾಪ ಕಾರ್ಯವ ಕೊಳಲು ಪುಣ್ಯ ಸಾಧನವೀವ ಪಾಪ ಸಾಧನವೀವ ಪುಣ್ಯ ಕಾರ್ಯದಲಿ ಪಾಪ ಬೀಜದ ಪುಣ್ಯ ಪುಣ್ಯ ಬೀಜದ ಪಾಪ ಶ್ರೀಪತಿಯ ವ್ಯಾಪಾರ ಈ ಪರಿಯಲಿಹುದು2 ಮೃಗಯಾ ವಿಹಾರದಲಿ ಮನವಿಟ್ಟು ನಾ ಬರಲು ಮೃಗಲಾಂಛನವನ ಕಳೆಯ ಮೀರುವಂಥ ಮಿಗೆ ತೇಜದೀ ಮಗುವು ಎನಗೆ ದೊರೆತುದು ನರ ಮೃಗರೂಪಿ ಕರಿಗಿರೀಶನ ಕರುಣವಿಲ್ಲದಲೆ 3
--------------
ವರಾವಾಣಿರಾಮರಾಯದಾಸರು
ಏನ ಬೇಡಲಿ ನಾನು ಏನ ನೀಡುವೆಯೋ ನೀನು ನೀನೆನ್ನ ಪ್ರಭುವಾಗಿರೆ ಹೇಳೋ ರಂಗ ಪ ನಾನಿನ್ನ ವಂದಿಸಿ ಧ್ಯಾನವ ಗೈವಾಗ ಏನನೀ ಕೊಡಲಾರೆ ಹೇಳೋ ರಂಗಯ್ಯಅ.ಪ ಕರಣಕಾರಣ ನೀನು ಕೊರಡಬೊಂಬೆಯು ನಾನು ಕರವ ಪಿಡಿದು ಎನ್ನ ನಡೆಸುವೆ ನೀನು ಕಾನನ ಸಿರಿ ಸುಖ ಭೋಗವು ಸ್ಥಿರವಲ್ಲ ಹರಿ ನಿನ್ನ ಚರಣಸೇವೆಯೆ ಸಾಕೋ 1 ಬೇಡಿ ಬೇಡಿ ನಿನ್ನ ಕಾಡುವ ಮನವೀಯಬೇಡಯ್ಯ ನೀಡಯ್ಯ ಮಂಗಳನಾಮಂಗಳ ಪಾಡಿ ಕೊಂಡಾಡುತ ನಾಡೆ ವಂದನೆಗೈವ ರೂಢಿ ಒಂದಿರಲಿ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನ ಹೇಳಲಿ ನರಹರಿ ನಿನ್ನ ಮಹಿಮೆಯ ಪ. ನಿನ್ನ ಧ್ಯಾನ ಮಾಡೇನೆಂದರೆ ನಿಲ್ಲಗೊಡದು ಮನ ಅ.ಪ. ಸಚ್ಚಿದಾನಂದನ ಪಾದಾರವಿಂದವಮೆಚ್ಚಿ ಹಸನಾಗಿ ಇರು ಎಂದೆಡೆಹುಚ್ಚೆದ್ದ ಕಪಿಯಂತೆ ವಿಷಯವೆಂಬಡವಿಲಿಕಿಚ್ಚುಕಂಗೊಂಡು ಎನ್ನ ಕಾಡುತಿದೆ ರಂಗ 1 ವಾಸುದೇವನ ಗುಣಗಳ ಸ್ತುತಿಸದೆ ದು-ರಾಸೆಯೊಳು ಬಿದ್ದು ಕಾಡುತಿದೆಲೇಸಾಗಿ ನಾಯಿಬಾಲಕೆ ನಾರಾಯಣ ತೈಲಏಸುಬಾರಿ ತೀಡಿದರೆ ನೀಟಾಗುವುದೊ2 ಸಾಧು ಸಜ್ಜನರ ಸಂಗವ ಮಾಡಲೊಲ್ಲದೆಬಾಧಿಸುತಿದೆ ದುಷ್ಟಸಂಗದಿಂದಮಾಧವ ಭಕ್ತವತ್ಸಲ ಹಯವದನನೆನೀ ದಯಮಾಡಿ ನಿನ್ನಂತೆಮಾಡೆನ್ನ ಮನ 3
--------------
ವಾದಿರಾಜ
ಏನ ಹೇಳಲೆನ್ನ ಬುದ್ಧಿಹೀನತೆಯನಿಂದು ಹರಿಯೆ ಶ್ವಾನಕಿಂತ ನೀಚನಾದೆ ಧ್ಯಾನಿಸದೆ ಮರುಳಾದೆ ಪ. ಪಂಚವಿಂಶತ್ವದಲ್ಲಿ ಮಿಂಚುತ್ತಿರುವ ನಿನ್ನ ರೂಪ ಕಿಂಚಿತ್ತಾದರರಿಯದೆ ಕೀಳ್ಹಂಚಿನೊಳಸಂಚ ನಂಬಿ 1 ಮಾಯಾ ಶಕ್ತಿ ಪಾಶಬಂಧದಲ್ಲಿ ಸಿಲುಕಿ ಲೇಶ ಸ್ವಾತಂತ್ರ್ಯವರಿಯದಾಶೆಯೆಂಬ ಕಡಲೊಳಿಳಿದೆ 2 ಗಣನೆಯಿಲ್ಲದೆನ್ನ ಕೆಟ್ಟ ಗುಣಗಳೊಂದನೆಣಿಸದಿಂದು ಮೂರ್ತಿ ದೋರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏನಬೇಡಲಿ ನಿನ್ನ ನಾ ಬಯಸಿ ಸ್ವಾಮಿ ಐಹಿಕ ಸುಖ ನಿಖಿಲ ಪುಸಿಯಾಗಿ ಪ ವನಿತೆಯನು ಬೇಡಲೆ ತನಗೆ ಅಲ್ಲದೆ ಮತ್ತೆ ಮನೆತುಂಬ ಮರಿಮಾಡಿ ತಿನಿಸಿಗ್ಹಾಕೆಂದು ಅನುಗಾಲ ಬೆನ್ನ್ಹತ್ತಿ ತಿನುತಿಹ್ಯಳು ಹರಿದ್ಹರಿದು ಬಿನುಗರಲಿ ಬಿನುಗೆನಿಸಿ ಘನತೆಯನು ಕೆಡಿಸಿ 1 ಘನವೆಂದು ನಂಬಿ ನಾ ಧನವನಾಪೇಕ್ಷಿಸಲೆ ಸನುಮತದಿ ಒತ್ತಟ್ಟಕ್ಷಣ ಕೂಡ್ರಗೊಡದೆ ದಣಿವಿಕಿಲ್ಲದೆ ದುಡಿಸಿ ಅಣುಮಾತ್ರ ಸುಖಕೊಡದೆ ಚಿನುಮಯಾತ್ಮನೆ ನಿನ್ನ ನೆನವೆ ಮರೆಸುವುದು 2 ಭೂಮಿಯನು ಬೇಡಲೆ ಸ್ವಾಮಿಯಂತೆ ಸೇವೆಗೊಂಡು ತಾಮಸದಿ ನೂಕಿ ಬಲು ಪಾಮರೆನಿಸುವುದು ಸ್ವಾಮಿಯೆನ್ನಯ ಸಕಲ ಕಾಮಿತ ಕಡಿದು ನಿಮ್ಮ ನಾಮಬಲ ಕರುಣಿಸು ಶ್ರೀರಾಮ ಪ್ರಭುತಂದೆ3
--------------
ರಾಮದಾಸರು
ಏನಯ್ಯ ಧೊರೆಯೆ-ನಿನಗಾನಂದವೆ ಧೊರೆಯೇ ಪ ನುಡಿನೀನೊಲಿದಾಲಿಪುದುಅ.ಪ. ಜಾತಿಧರ್ಮವಿಲ್ಲಾ-ಶಾಸ್ತ್ರದರೀತಿನಡತೆಯಿಲ್ಲ ಮಾತಿದುಪುಸಿಯಲ್ಲಾ-ಮಾನದ-ಭೀತಿಯುಮೊದಲಿಲ್ಲಾ ನೀತಿಯನರಿಯದ-ಕೋತಿಗಳಂದವ ಜಾತಿಯ ಜನರೊಳು ಮಾತಿನವಾಶಿಯಿಲ್ಲ 1 ದುರ್ಜನರು ಬೆರೆದು-ದೋಷವಿ ವರ್ಜಿತರನ್ನು ಜರಿದು ಲಜ್ಜೆಯನೆರೆತೊರೆದು ಗರ್ವದಿ ಗರ್ಜಿಸಿ ಮೊರೆದು ಈ ಜಗದೊಳಗಿಹ ಸಜ್ಜನರಿಗೆ ಕುಲಕಜ್ಜಳರವ ಮತಿ ಗುಜ್ಜುಗಿಸುತ್ತಿಹ 2 ಗಂಡನ ಬಿಟ್ಟಿಹರು-ಗರತಿಯ-ಕಂಡು ನಗುತ್ತಿಹರು ಮಿಂಡರ ಬೆರೆದಿಹರು-ಮೇಲತಿ-ದಿಂಡೆಯರಾಗಿಹರು ಚಂಡಿಸುತಿರ್ಪರೋ 3 ಕೇಳುಹಂದೆಯಾಳು-ಕ್ಲೇಶವ ಪೇಳಲು ಮತಿತಾಳು ಕೀಳು ಜನರ ಬಾಳು ಕಿವಿಯಲ್ಲಿ ಕೇಳಬಹುದೆ ಪೇಳು ಜನರೂಳಿಗ ಬಲುಘನ 4 ಧರೆಯೊಳಧಿಕವಾದ ಶ್ರೀ ಪುಲಿ-ಗಿರಿಯೊಳು ನೆಲೆಯಾದ ಸಿರಿವರ ನಿಜಪಾದ-ಸೇವೆಯ-ಕರುಣಿಸು ಬಹುಮೋದ ಶರಣಾಭರಣ ನಿಜ ಕರುಣವ ತೋರಿಸು ವರದ ವಿಠಲಧೊರೆ ವರದದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಏನಾದರಾಗಲಿ ಹರಿ ನಿನ್ನ ಸ್ಮರಣೆ ಮಾತ್ರ ಒಂದಿರಲಿ ಪ ಆಚಾರಿಯೆನಲಿ ಬಹು ದು | ರಾಚಾರಿಯೆನಲಿ ಜನರೆಲ್ಲನೀಚನೆಂದೆನಲಿ ಅನದಿರಲಿ 1 ಜ್ಞಾನಿ ಎಂದೆನಲಿ ದುರ್ಮಾರ್ಗ | ನಾನೆನಲಿ ಜನರೆಲ್ಲ ಬಹು ಮಾನವಂತನೆನಲಿ ಅನದಿರಲಿ 2 ಪಾಪಿಯಾಗಿರಲಿ ಬಹು ಸಂ | ತಾಪಿಯಾಗಿರಲಿ ಜನರೆಲ್ಲಪಾಪಿಯೆಂದೆನಲಿ ಅನದಿರಲಿ 3 ರಾಗವೇ ಬರಲಿ ಬಹು ವೈ | ಭೋಗವೇ ಬರಲಿ ವಿಷಯ ನಿಯೋಗವೇ ಬರಲಿ ಬರದಿರಲಿ 4 ಒಲಿದರೆ ನೀ ವ್ಯಾಸವಿಠಲ ಜನ | ರೆಲ್ಲ ಮತ್ತ್ಹಳಿಯುತಿರಲಿ ಇರದಿರಲಿ ಏನಾದರಾಗಲಿ ಹರಿಯೆ 5
--------------
ವ್ಯಾಸವಿಠ್ಠಲರು
ಏನಾದರೇನಲ್ಲಿ ಇರಕೂಡದು ಹೋಗಿ ಆನಂದ ಕಾನನದೊಳಿರೆ ಸುಖವದು ಪ ನರಮನುಜರೊಳಗಿಲ್ಲಿ ಜನಿಸಿಭೂತಳಕೆಲ್ಲ ದೊರೆಯೆನಿಸಿ ಭೋಗ ಪಡಿಸುವುದರಿಂದಲು ಮಣಿ ಕರ್ಣಿಕೆಯ ಸರಸಿಯೊಳು ಚರಿಸಿ ಮಡಿದರೆ ಮುಕ್ತಿಯಹುದು 1 ಕೊಕ್ಕದಲಿ ವನಿತೆ ಮನೆಮಕ್ಕಳಲಿ ಪಶುಗಳಲಿ ಹೆಕ್ಕಳದೊಳಿಲ್ಲಿ ಸಾವುದರಿಂದಲು ಹೊಕ್ಕು ಮನೆ ಮನೆ ಬಿಡದೆ ಕಾಶಿಯಲಿ ತಿರಿದುಂಡು ಡೊಕ್ಕೆಯನು ಬಿಡೆ ಮೋಕ್ಷ ಪದವಿಯಹುದು 2 ಹರಿ ಸುತನ ಕೋಣೆ ಲಕ್ಷ್ಮೀಪತಿಯ ಪಾದ ಸರಸಿರುಹದಲಿ ಜನಿಸಿರ್ದ ಜಾಹ್ನವಿಯಲಿ ನರ ಮುಳುಗಿ ಕಾಶಿ ವಿಶ್ವೇಶ್ವರನ ಸನ್ನಿಧಿಯೊಳೊರಗಿದರೆ ಮರಳೆ ಜನ್ಮಕೆ ಬಾರೆನೋ 3
--------------
ಕವಿ ಪರಮದೇವದಾಸರು
ಏನಾದರೇನು ಗುರು ಪಡದನಕಾ | ತಾನೊಲಿಯನು ಹರಿ ಕಾವನ ಜನಕಾ ಪ ಪರಿಪರಿಸಾಧನದಲಿ ಬಳಲುವರೆ | ಪರಸ ಮುಟ್ಟದೆ ಲೋಹವಾಗುವದೇ ಕನಕಾ1 ಪತಿತೋದ್ಧಾರಗುರು ಸ್ವಸುಖದಾನಿ | ವೃತ ತಪಸಿದ್ಧಿಯ ಬಹು ಸುಖ ಕ್ಷಣಿಕಾ2 ಗುರು ಮಹಿಪತಿಪ್ರಭು ಜ್ಞಾನಾಂಜ ನಿಡದೇ | ಧರೆಯೊಳಾಹನೇ ನರ ಚಿದ್ಘನ ಧನಿಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು