ಪರಿಪರಿ ಕೊಂಡಾಡೋ ಹರಿಯನ್ನು
ಮರೆದು ನೀ ಕೆಡಬೇಡೋ ಮನವೆ ಪ
ಮರವೆ ಮಾಯ ನೀಗಿ ಧರೆಭೋಗ ಮೆಚ್ಚದೆ
ನಿರುತ ಭಜಿಪರ ಬಿಟ್ಟು ಅರಲವಗಲ ಹರಿ ಅ.ಪ
ಕರುಣಸಾಗರನು ನರಹರಿ ಚರಣದಾಸರನ್ನು ತನ್ನಯ
ಹರಣಸಮಾನ ಮಾಡಿ ಕರುಣದಿಂದವರ
ಇರವ ಪೂರೈಸುತ ಪೊರೆವ ಪ್ರೇಮದಿಂದ 1
ಚಿಂತೆ ಭ್ರಾಂತಿಗಳನು ಬಿಡಿಸಿ ಸಂತಸ ಕರುಣಿಸಿ ಅವರ
ಅಂತರಂಗದಿರ್ದು ಅಂತರ ತಿಳಿಯಿತು
ಚಿಂತಿಸಿದ್ದನ್ನಿತ್ತು ಸಂತಸದಿಂ ಕಾಯ್ವ 2
ಸಾರಿಸಾರಿಗೆ ತನ್ನ ಚರಣಸೇರಿ ಭಜಿಪರನ್ನು ಬಿಡದೆ
ಆರಭಾರ ಪೊತ್ತು ಸೇರಿ ಅವರ ಬಳಿಯ
ಪಾರಸಂಭ್ರಮದಿಂ ಧೀರ ನಲೀತಿಹ್ಯ 3
ಅಮಲರೂಪ ತನ್ನ ನಿರುತ ವಿಮಲಚರಣವನ್ನು ನಂಬಿದ
ಸುಮನಸರಹೃದಯಕಮಲದಿ ವಾಸಿಸಿ
ನಿಮಿಷಬಿಟ್ಟಗಲದೆ ಕ್ರಮದಿ ಪಾಲಿಸುವ4
ಗೂಢದಿಂದ ಸ್ಮರಿಪ ಭಕುತರ ಗಾಢಮಹಿಮೆ ಕೃಪಾದೃಷ್ಟಿಯಿಂ
ಬೇಡಿದ ವರಗಳ ಕಾಡದೆ ನೀಡುತ
ರೂಢಿಯೋಳ್ ಬಿಡದೆ ಕಾಪಾಡುವ ಶ್ರೀರಾಮ 5