ಒಟ್ಟು 1656 ಕಡೆಗಳಲ್ಲಿ , 102 ದಾಸರು , 1262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಹು ಅಂಜನಾಗದನಕಾ ಪರಗತಿ ದೊರೆಯದು ಗುರುಕೃಪೆ ಆಗದನಕಾ ಧ್ರುವ ಕಣ್ಣುಕಂಡು ಕಾಣದನಕಾ ಅನುಮಾನ ಹೋಗದು ಉನ್ಮನವಾಗದನಕಾ ಙÁ್ಞನ ಉದಯವಾಗದನಕಾ ಮನ ಬೆರಿಯದು ಘನಮಯಾಶ್ಚರ್ಯವಾಗದನಕ 1 ತನ್ನೊಳು ತಾ ತಿಳಿಯದನಕಾ ಭಿನ್ನವಳಿಯದು ಅನುಭವ ಸುಖ ಹೊಳೆಯದನಕಾ ನೆನವು ನೆಲೆ ಗೊಳ್ಳದನಕಾ ಘನಪ್ರಭೆಯು ಹೊಳಿಯದು ಧ್ಯಾನ ನಿಜವಾಗದನಕ2 ಏರಿ ತ್ರಿಪುರ ನೋಡದನಕಾ ಗುರುಮಹಿಮೆ ತಿಳಿಯದು ತಾ ದೃಢಗೊಳ್ಳದನಕಾ ಮುರು ಹರಿಯಗುಡದನಕಾ ಹರಿಯದು ಜನ್ಮಗುರುಚರಣವ ನೋಡದನಕಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿ ನಿನ್ನಯ ನಿಜವನು ಜೀವಾ ಅರಿವಿಂದೆ ನೀನೆ ಆ ದೇವಾ ಪ ಸಾರಿ ಪೇಳಿತು ಈ ನುಡಿ ಶಾಸ್ತ್ರ ಅರಿತು ನೋಡಲು ನೀನೆ ಕೃತಾರ್ಥ ದೇಹಮನಗಳ ತ್ಯಾಗದಿಂದೆ ಉಳಿವುದಾ ನಿಜವೊಂದೇ 1 ಈ ಬೋಧಾದಾ ಅನುಭವ ಪಡೆಯೈ ನಾಶಮಾಡು ಈ ಮನವಾ ಈಶಜೀವರಾ ಐಕ್ಯದ ನಿಜವಾ ಪೇಳ್ದ ಶಂಕರದೇವಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿ ಬೇಗನೇ ಪರಮಾತ್ಮ ನೀನೈ ಪರತತ್ವನಾ ತ್ವರಿತದಲಿ ತಿಳಿಯೊ ಪ ಮೂರು ತಾಣಗಳ ಮೀರಿ ಗೋಚರಿಪ ತೋರುತಿಹ ಈ ದೇಹಾದಿಗಳಿಗೆ ಬೇರೆಯಾಗಿಪುದೆ ಪರಮಪದವು ಧೀರ ನೀನರಿಯೊ ಅದೆ ನಾನು ಎಂದು 1 ಕೋಶಪಂಚಕವ ಲೇಸಾಗಿ ಕಳೆದು ವಾಸನೆಯ ಪಾಶವನೆ ಹರಿದೊಗೆದು ಕ್ಲೇಶ ಪಡುವದನು ತ್ಯಜಿಸಿ ಮುದದಿ ನಾಶರಹಿತಾದ ಪದವು ತಾನೆಂದು 2 ಜನನಮರಣಗಳಿಗಾಚೆಗಿರುವಂಥ ಮನವಾಣಿಗಳಿಗೆ ನಿಲುಕದಿರುವಂಥ ಘನಪದವು ಇದುವೆ ಪರಮಾತ್ಮನೈ ಅನುನಯದಿ ಪೇಳ್ವ ಗುರುಶಂಕರಾರ್ಯ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿತು ಕೊಳ್ಳಿರೊ ಬ್ಯಾಗ ಹರಿಯ ನಾಮಮೃತ ದೊರಕುವದಲ್ಲಿದು ನೋಡಿ ಸರ್ಕನೆ ಸರ್ವರಿಗೆಲ್ಲಾ ಧ್ರುವ ಗುರುಕರುಣ ಕೃಪೆಯಿಂದ ಪರಮ ದಿವ್ಯಾಮೃತವು ಸುರಿಸುರಿದು ಚಪ್ದರಿಸು ಸೂರ್ಯಾಡಿ ಸಾರಸವ 1 ಅನುದಿನ ಸೇವಿಸುವ ಅನುಭವಿಗಳೂಟ ಏನೆಂದು ಸುರಲಿ ನಾ ಆನಂದೋಬ್ರಹ್ಮವಾ 2 ಮಾನವ ಜನ್ಮ ಚಂದ ಮಾಡಿಕೊಳ್ಳಿರೊ ಬಂದ ಕೈಯಲಿ ಬ್ಯಾಗ 3 ಆಲಸ್ಯ ಮಾಡಬ್ಯಾಡಿ ವಾಲ್ಗೈಸಿಕೊಳ್ಳಲಿಕ್ಕೆ ಸುಲಲಿತವಾಗಿಹುದು ತಿಳಿದುಕೊಂಬವರಿಗೆ 4 ಇರಳ್ಹಗಲ ಪೂರ್ಣ ಸುರವುತಿಹ ಅಮೃತ ತರಳ ಮಹಿಪತಿ ಪ್ರಾಣ ದೊರೆವ ಸಂಜೀವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು
ಅಲ್ಲಿಂದಲ್ಲೆದೆಮಾ ಅಲ್ಲಿಂದಲ್ಲೆದೆ ಘನಗುರುಮಹಿಮೆ ಧ್ರುವ ಅಲ್ಲಿಂದಲ್ಲಿದ್ದು ತಿಳಿಯದು ಲೋಕಾ 1 ಅಲ್ಯಾವನಾದರ ಅಲ್ಲೆವೇ ತಿಳಿದಾ 2 ಬಲ್ಲಮಹಿಮರ ಬಲಗೊಂಡು ಕೇಳಿ 3 ಒಳಗಲ್ಲ ಹೊರಗಲ್ಲ ಒಳಿತಾಗಿ ಕೇಳಿ4 ಕೆಳಗಲ್ಲ ಮ್ಯಾಲಲ್ಲ ತಿಳಿದುಕೊಂಡು ನೋಡಿ 5 ಹಿಂದಲ್ಲ ಮುಂದಲ್ಲ ಸಂಧಿಸಿ ನೋಡಿ 6 ಎಡಕಲ್ಲ ಬಲಕಲ್ಲ ಪಡಕೊಂಡು ನೋಡಿ 7 ದೂರಲ್ಲ ಸಾರ್ಯಲ್ಲ ಅರಿತಿನ್ನು ನೋಡಿ 8 ಬೆಡಗಿನ ಮಾತಲ್ಲ ಕಡಗಂಡು ನೋಡಿ 9 ಸ್ಥೂಲಲ್ಲ ಸೂಕ್ಷ್ಮಲ್ಲ ಭೇದಿಸಿ ನೋಡಿ 10 ಮನದಿರಗಿ ಉನ್ಮನವಾಗಲಿಕ್ಕೆ 11 ಕಣ್ಣದಿರಗಿ ಕಣ್ಣ ನೋಡಲಿಕ್ಕೆ 12 ಎಚ್ಚತ್ತು ಅಲ್ಲಿವೆ ಯೋಚಿಸಲಿಕ್ಕೆ 13 ಅರವಿನ ಮುಂದ ಮರವಿನ ಹಿಂದ 14 ಜಾಗ್ರ ನಿದ್ರಿ ಮಧ್ಯ ಅರುವಾಗಲಿಕ್ಕೆ 15 ಗುರುಕೃಪೆಯಿಂದಲಿ ಗುರುತಿಟ್ಟು ನೋಡಿ16 ಸಾಧಕನಾದರ ಸಾಧಿಸಬಹುದಿದು 17 ಭೇದಿಸೇನೆಂದರೆ ಭೇದಿಸಬಹುದಿದು 18 ಸೂರ್ಯಾಡೇನಂದರ ಸೂರ್ಯಾಡಬಹುದಿದು 19 ಖೂನಹೇಳಿದ ಮ್ಯಾಲ ಙÁ್ಞನೇನಬಹುದು 20 ಹೆಜ್ಜೆ ಹೇಳಿದ ಮ್ಯಾಲ ಸಜ್ಜನ ಅವನೀಗ 21 ಚೆನ್ನಾಗ್ಹೇಳಿದ ಮ್ಯಾಲ ಮನ್ನಿಸಬಹುದಿದು 22 ಗುರುತಹೇಳಿದ ಮ್ಯಾಲ ಗುರುಸ್ವರೂಪ ತಾಂ 23 ಸರಗಹೇಳಿದ ಮ್ಯಾಲ ಶರಣೆಂಬುದಾತಗ 24 ಅಲ್ಲಿಂದಲ್ಲೆಂಬುದನುಭವಾಗಬೇಕು 25 ಅನುಭವದೋರಿದ ಘನಗುರು ನಮ್ಮಯ್ಯ 26 ಲೇಸು ಲೇಸು ನಮ್ಮ ಭಾಸ್ಕರ ಗುರುದಯ 27 ಭಾಸುತ ಭಾಸ್ಕರಕೋಟಿ ತೇಜಾದನು 28 ದಾಸಮಹಿಪತಿಗೆ ಲೇಸು ಲೇಸಾಯಿತು 29
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವತಾರ ಹರಿಯ ವಿವರಿಸೆ ಬ್ರಹ್ಮಗಳ ಅಳವಲ್ಲಾ ಪ ಸುರಿವ ಮಳೆ ಹನಿ ಎಣಿಸಬಹುದು ಧರಣಿಯ ರಜ ಕಡಗಣಿಸ ಬಹುದು ಪರಮಾಣು ವರ ವೆಣಿಸಬಹುದು 1 ತಾರೆಯ ಲೆಖ್ಖವ ಹಿಡಿಯಲು ಬಹುದು ನೀರಸ್ವಿಯ ಮಾಪವ ಮಾಡಬಹುದು ಮೇರುಗಿರಿ ತೂಗಿ ನುಡಿಯ ಬಹುದು 2 ಅನಂತ ಗುಣಗಣ ನಿಲಯನುಯನಿಸಿ ಘನಗುರು ಮಹಿಪತಿ ಪ್ರಭು ಅವತರಿಸಿ ಅನುಚರರ ಹೊರೆವನು ಕರುಣಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಷ್ಟಮಠದ ಯತಿಗಳು ನೋಡಿ ದಣಿದವೆನ್ನ ಕಂಗಳು ಉಡುಪಿಯಲ್ಲಿರುವ ಅಷ್ಟಮಠದ ಶ್ರೀಪಾದಂಗಳವರ ಪ. ಸುಧಿಂದ್ರತೀರ್ಥ ಗುರುವರ್ಯರು ಬಂದ ಭಕ್ತರಿಗೆ ಕರುಣಾಮೃತ ಮಳೆಗರೆವರು ಶ್ರೀಹರಿಯ ತೋರುವರು ನೇಮದಿಂದಲಿ ಇವರ ನಾಮ ನೆನೆದರೆ ಸ್ವಾಮಿ ಶ್ರೀರಾಮನು ಪ್ರಸನ್ನನಾಗುವನು 1 ವಿಭುದಪ್ರಿಯತೀರ್ಥ ಗುರುವರ್ಯರು ಬಂದಾ ದುರ್ಜನರ ಮನವನು ಜಯಿಸುವರು ಮಹಾನುಭಾವರು ತರ್ಕನ್ಯಾಯ ವೇದಾಂತ ನಿಪುಣರು ಮಹಾಗುಣವಂತರು 2 ವಿದ್ಯಾಪುಣ್ಯತೀರ್ಥ ಶ್ರೀಪಾದಂಗಳವರು ಬಂದ ಸೇವಕರಿಗೆ ಬ್ರಹ್ಮವಿದ್ಯಾ ಪಾಲಿಸುವರು ರ್ದುಜನರ ದುರ್ಬುದ್ಧಿ ಒದ್ದಿ ಕೆಡಹುವವರು 3 ವಿಶ್ವೇಂದ್ರತೀರ್ಥರು ಈ ಗುರುವರ್ಯರು ವಾದಿರಾಜರ ಪೂಜಿಸುವರು ಜಗಕೆ ಸುಖವ ಸುರಿಸುವರು ಭೂತಪ್ರೇತಪಿಶಾಚಾದಿ ಮಾಡುವರು ಭಕ್ತರಘ ಕಡಿವರು4 ಇವರು ಭವಸಮುದ್ರವ ನೀಗಿಸುವರು ಶಿಷ್ಯರಿಗ್ಹರುಷ ಪಡಿಸುವುದು ಆನಂದದಿಂದಲ್ಲಿ ಹೃನ್ಮಂದಿರದಲಿ ಇಂದಿರೇಶನ ನೋಡುವರು 5 ರಘುಮಾನ್ವತೀರ್ಥ ಗುರುವರ್ಯರು ಲೋಕಮಾನ್ಯರು ಭಕ್ತರಿಗತಿಪ್ರಿಯರು ಮಹಾನುಭಾವರು ಅನ್ನದಾನದಲಿ ದೈನ್ಯರು ಆನಂದ ಭರಿತರು ಸುರರಿವರು 6 ಲಕ್ಷ್ಮೀಂದ್ರತೀರ್ಥ ಶ್ರೀಗಳವರು ಇವರು ತಮ್ಮ ತುಷೆಯೊಳಗಿಟ್ಟುಕೊಂಡು ರಕ್ಷಿಸುವರು ಲಕ್ಷ್ಮೀರಮಣನ್ನ ಪಾದಾ ಅಪೇಕ್ಷೆಯ ಮಾಡುಸುವರು ಹರಿಯ ಭಜಿಸುವರು 7 ವಿಶ್ವಮಾನ್ಯತೀರ್ಥ ಈ ಗುರುವರ್ಯರು ಬಂದ ಭೂಸುರರಿಂದ ಅನುವಾದ ಮಾಡುವರು ನೋಡುವರಿಗಾನಂದ ಪಡಿಸುವರು ಸುಜ್ಞಾನ ಯತಿವರ್ಯರು 8 ಅಷ್ಟಮಠದ ಯತಿಗಳ ಮಹಿಮೆಯನ್ನು ನಿಷ್ಠೆಯಿಂದಲಿ ಪೇಳುವನು ಅವನು ಸುರನು ಇವರ ದೋಷಿ ಎಂದವರನೇ ನರಕಾಧಿ ಬಾಧಿಸುವುದು ಕೃಷ್ಣನ ಪೂಜಿಸುವರು 9
--------------
ಕಳಸದ ಸುಂದರಮ್ಮ
ಅಹುದಹುದನಾಥ ಬಂಧು ಅಹುದಹುದನಾಥ ಬಂಧು|ಅನುಪಮ್ಯ| ಮಹಿಮೆ ಕಾರುಣ್ಯಸಿಂಧು| ಏನೆಂದು ಪೇಳೆಲೆಮ್ಮಾ|ಈ ದಯಕ| ತಾನು ಪಮೆ ಇಲ್ಲವಮ್ಮಾ| ನ್ಯೂನಾರಿಸದೆ ಬಂದನು,ಕ್ಷಮೆಯಿಂದ| ತಾನಾಗಿ ಸಲಹುತಿಹನು| ಜ್ಞಾನವಿಲ್ಲದೆ ತರಳನೆಂದಪೇಕ್ಷಿಸದೆನ್ನ| ಮನ ನೆನೆವಿನೊಳಗಿಟ್ಟು ತನ್ನ ಅಂಘ್ರಿಯದಾ 1 ಪತಿತರೊಳು ಪತಿತ ಅಧಮಾ|ಅಮೂಲ್ಯ| ಪತಿಹೀನ ಮೂಢ ಪರಮಾ| ಸುತ್ತ-ಭಕುತಿ ಮಾಡಲರಿಯೆ|ಚತೆರ ಸಂ| ಸ್ಕøತ ಮಾತನಾಡಲರಿಯೇ| ಗತಿಗೈದರೊಂದೊಂದು ವೃತದಿ ಮೊದಲಾದವರು| ಕ್ಷಿತಿಯೊಳಗೆ ಎನ್ನಂಥ ಶೂನ್ನರಾರಮ್ಮ 2 ನೆಲಿಗೆ ಮುಯ್ಯಕ ಮುಯ್ಯವು|ಈ ತೆರದಿ| ಸಲೆ ನಡೆತಿ ಉಂಟು ಕೆಲವು| ಕೊಳದೆ ಕೊಡುವವರಿಂದಿಗೆ|ಆರಿಲ್ಲಾ| ನಳಿನಜೇಂದ್ರಾದ್ಯರೊಳಗೇ ಒಲಿದು ಮಹೀಪತಿ ಸುತನ ಕರವಿಡಿದು ತನ್ನ| ದಾಸರ ದಾಸ ದಾಸನೆನಿಸಿದ ಬಿರದಿಗಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಳಿವ ಬಾಳ ನಂಬುತಲೀಗ ತಿಳಿ ತಿಳಿಯೊ ಧೀರನಾಗಿ ಪರಾಶಾಂತಿಯ ಬೇಗ ಪರಾಶಾಂತಿಯಬೇಗ ಪ ದೊರಕುವದೆ ಶಾಂತಿ ಜೀವನೆ ಹೊರಹೊರಗೆ ನೋಡಲು ಅರಿ ನಿನ್ನ ಹೃದಯದೋಳ್ ಸಲೆನಾಸಿಪುದು ತಿಳಿಯಲು ಮೂಲಸ್ವರೂಪ ನಿನ್ನ 1 ಈ ದೇಹ ನಾನು ಎಂಬ ಭ್ರಾಂತಿ ಬೇಗ ತ್ಯಜಿಸುತ ಬಾಧಿಸುತ ಬುದ್ಧಿಯನ್ನು ಬೇರೆಯಾಗಿ ತಿಳಿಯುತ ಬಾಧಾರಹಿತ ನಾ ವಾದ ಪದವೆ ನಾನಿಹೆನೆನುತ 2 ಈ ನಿರ್ವಿಕಲ್ಪವಾದ ಸ್ಥಿತಿಯೇ ತಾನಿಹೆನೆಂದು ಅನುಭವದಿ ತಿಳಿದುಕೊಳ್ಳು ಪರಾಶಾಂತಿಯದೆಂದು ನೀನೇ ಪ್ರಶಾಂತರೂಪನಿರಲು ಶೋಕಿಸಬೇಡ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಆ ವೆಂಕಟಗಿರಿನಿಲಯನಂಘ್ರಿ ರಾ ಜೀವಯುಗಳಗಾನಮಿಸುವೆನು ಪ ಸೇವಿಪ ಜನರಿಗಮರ ತರುವೆನಿಸಿ ಧ ರಾವಲಯಾಖ್ಯ ದಿವಿಯೊಳೆಸವ ಅ.ಪ. ನಿಖಿಳ ಜಗತ್ತಿಗೆ ಪಾವನತರವೆಂದೆನಿಸುವುದು ಶ್ರೀ ವಿಧಿಭವ ಶಕ್ರಾದ್ಯರು ಆವನ ಸೇವಕ ಸೇವಕರೆನಿಸುವರು ತಾ ಉತ್ತಮ ಪುರುಷನೆನಿಸಿ ಜಗವ ಸ ದಾವಕಾಲ ಸಂತೈಸುವನು ಜೀವಾಂತರ್ಗತನಾಗಿ ವಿವಿಧ ವೇ ದಾವಳಿಯಿಂದ ತುತಿಸಿ ಕೊಂಬಾ 1 ಪಾತನೊಳಹಿಪ ವಿರೋಧಿಸೆ ತವಸ ತ್ವಾತಿಶಯನ ತೋರೆಂದೆನುತಾ ಜಾತರೂಪ ಶೈಲಾತ್ಮಜನಪ್ಪಿರೆ ವೀತಿ ಹೋತ್ರ ಸಖ ಕಿತ್ತೊಗೆಯೆ ವೀತ ಕರ್ನನಳವಳಿದು ವೇಗ ಧಾತ ಮಹಿಳೆ ತೀರ್ಥದಿ ಭೂ ಲಕ್ಷ್ಮೀಸ ಮೇತನಾಗಿ ಮೋದಿಸುತಿಪ್ಪೆ 2 ಭೂಸುರನೊರ್ವನು ತೊಂಡಮಾನ ಧರ ಣೀಶÀನ ನಿಲಯದೊಳುಳುಹಿ ಸತಿಯ ನೃಪತಿ ಮರೆಯೆ ನಿ ಶ್ವಾಸ ವನೈದಿದಳಾ ಸತಿಯು ಆ ಸಮಯದಿ ದ್ವಿಜವರ್ಯನು ಬೆಸಗೊಳೆ ಕ್ಲೇಶದಿ ಭೂಮಿಪ ಸಂಸ್ತುತಿಸೆ ಕೇಶವ ತಾನಸ್ಥಿಗಳ ತರಿಸಿ ಸು ವಾಸಿನಿ ಶಿಶು ಸಹ ಒಲಿದಿತ್ತಾ 3 ವೃದ್ಧ ಬ್ರಾಹ್ಮಣನು ತುತಿಸೆ ಸಲಿಲದೊಳ ಗದ್ದಿ ಕುಮಾರತ್ವವನಿತ್ತ ಅಧ್ವರವೆಸಗಿದ ಋಷಿಗಳ ಮಂತ್ರದ ಪದ್ದತಿ ತಿದ್ದಿಯಜ್ಞವ ಮಾಡ್ದ ಮಧ್ಯರಾತ್ರಿಯೊಳು ಬೆಸಗೊಂಡ ನೃಪನು ಪದ್ರವ ಕಳೆದಾಯುಧವಿತ್ತು ಮೃದ್ಭಾಂಡವ ರಚಿಸುವನಿಗೊಲಿದವನ ಚೋದ್ಯ ತೋಂಡಮಾನಗೆ ತೋರ್ದ 4 ಸಂಚಿತ ಕುಕರ್ಮಗಳ ಮನೆಯ ಮುರಿದು ಆಗಾಮಿ ಫಲಂಗಳ ಅನುಭವಕೀಯದೆ ಪ್ರಾರಬ್ದಾ ಮೂರ್ತಿ ಚಿಂ ತನೆ ಇತ್ತು ಸ್ವರೂಪಸುಖಾ ಅನುದಿನದಲಿ ವ್ಯಕ್ತಮಾಡಿಸಿ ಕೊ ಟ್ಟನಿಮಿತ್ತಾಪ್ತನೆನಿಸುತಿಪ್ಪ 5 ಏಕಮೇವ ರತ್ನಾಕರ ಮಂದಿರ ಆಕೂತಿಜ ಯಜ್ಞಾಕರನೇ ಲೊಕವಿಲಕ್ಷಣ ಸೂಕರಾತ್ಮ ಪಿ ವಿನುತ ಲಕ್ಷ್ಮೀ ಕಾಂತಾ ಗೋಕುಲ ಮಂದಿರ ಏಕಾಂತಿಗಳ ನಿ ರಾಕರಿಸಿದೆ ಲೋಕೈಕ ಸುಖ ಶೋಕ ರಹಿತ ನಿಜಲೋಕವಿತ್ತು ನಿ ರಾಕುಲ ಸುಖಗಳ ತಾ ಕೊಡುವಾ 6 ದಿನಪನೊಳಗೆ ವೃಜಿನಿ ವಸು ತಾ ಎಂ ದೆನಿಸಿ ಜಯಾಪತಿ ಪ್ರದ್ಯುಮ್ನ ಅನಿರುದ್ಧಾದಿ ಚತುರ್ಮೂತ್ರ್ಯಾತ್ಮಕ ತನಗೆ ತಾನೆ ಪೂಜಕ ಪೂಜ್ಯ ಅನುಪಮ ನಾಮದಿ ಕರೆಸುತಲಿಹ ತ ನ್ನನು ಈ ಪರಿಧೇನಿಸುತಿಪ್ಪ ಮನುಜರಿಗೊಲಿದು ಜಗನ್ನಾಥವಿಠ್ಠಲ ಜನನ ಮರಣಗಳ ಪರಿಹರಿಪಾ 7
--------------
ಜಗನ್ನಾಥದಾಸರು
ಆ. ಶ್ರೀಹರಿಯ ಸ್ತುತಿ ಅಂಗಾರವನೆ ನೀಡು ಯನ್ನಂತರಂಗದ ಧೊರಿಯೇ ಪ ಅಮಂಗಳಗಳ ನೀಡುವೋ ಪರಮನೀಚ ಅಂಗನಿಯಳಿಗೆ ಅ.ಪ. ಮಂಗಳಾತ್ಮಜ ನಿನ್ನ ಅನುಗಾಲ ಕಂಗಳಿಂದಲಿ ನೋಡಿ ಸುಖಿಸುವೋಡಿಂಗನಾ ಭಂಗಪಡಿಸುತಿಹಳಿ 1 ಪರಮ ಅದ್ಭುತ ಮೂಗುತಿಯೆ ನಿನ್ನ ಅದ್ಭುತ-ಚರಿಯವ ತೋರು ಭೂತನಾಥಾ 2 ಭಕ್ತವತ್ಸಲನೆಂಬ ಬಿರುದು ಬೇಕಾದರೆ ನಂಬಿದ ಭಕುತರನು ಪಾಲಿಸಿ ಬಿರುದು ಪಡಿಯೋ 3 ಶಕುತಿ ಇಲ್ಲದ ಕಾರಣದಿ ವಿಷಕೂಪದೊಳು ಬಿದ್ದು ಘನ ಪಾಪಕೊಳಗಾದೆನೋ ವಿಷಕಂಠನೇ 4 ಹಂಸರೂಢನಾದ ದಾಸ ನಿನ್ನ ದಾಸರನು ಕ್ಲೇಶಪಡಿಸುವರ ಧ್ವಂಸಗೈಯೋ ತಂದೆವರದಗೋಪಾಲನಭಜಕಾ 5
--------------
ತಂದೆವರದಗೋಪಾಲವಿಠಲರು
ಆಡಣ್ಣ ನೀನಾಡಣ್ಣ ಅನುಭವದಾಟ ಆಡಣ್ಣ ಪ ರೂಢಿಯೋಳ್ಹರಿಯ ಗಾಢಮಹಿಮೆ ಕೊಂಡಾಡುವರೊಡನಾಟ ಅ.ಪ ಅಳುವರ ಕಂಡರೆ ಅತ್ತಂತೆ ಕಾಣೋ ನಗುವರ ಕಂಡರೆ ನಕ್ಕಂತೆ ಕಾಣೋ ಅಳುವ ನಗುವರಲಿ ಸಿಲುಕಿ ಸಿಲುಕದೆ ನಿ ನ್ನೊಳಗೆ ಮಾಧವನ ತಿಳಿದು ಆನಂದದಿ 1 ಅವರನು ಕಂಡರೆ ಅವರಂತೆ ಇವರನು ಕಂಡರೆ ಇವರಂತೆ ಅವರಿವರಿಗೊಂದೆಸವನೆತೋರಿ ಸಿರಿ ಪಾದ ಮನಭವನದಿಟ್ಟ್ಹಿಗ್ಗುತ 2 ವಾಸನೆ ಪ್ರಥಮ ನಾಶನ ಮಾಡೊ ದಾಸರ ಕಂಡರೆ ಸೇವೆಯ ಮಾಡೋ ಆಶಪಾಶ ನೀಗಿ ಶ್ರೀಶ ಶ್ರೀರಾಮನ ದಾಸನಾಗಿ ನಿಜ ಮುಕ್ತಿಯ ಕೂಡೊ 3
--------------
ರಾಮದಾಸರು
ಆಡುತ್ತಾ ಬಾರಮ್ಮಾ ನಲಿದಾಡತ್ತಾ ಬಾರಂಮಾ ಆಡುತ್ತವರಗಳಾ ನೀಡುತ್ತಾ ಕರುಣಾದಿ ನೋಡುತ್ತಾ ದಯದಿಂದಾ ಲಕ್ಷ್ಮಿ ಆಡುತ್ತಾಬಾರಮ್ಮಾ ಪ. ಬೇಸರವು ಬೇಡಮ್ಮಾ ದಾಸರ ದಾಸಿಯು ನಾನಿಂವÀು ವಾಸನಪೂರಿತೆ ವನರೂಹ ನೇತ್ರೆ ಸಾಸಿರನಾಮದ ವಾಸುದೇವನ ಸತಿ ಆಡುತ್ತಾಬಾರಮ್ಮಾ ನಲಿದಾಡುತ್ತಾ ಬಾರಮ್ಮಾ 1 ಕರದಾರವೊಯೆಂದು ತಾಯೆಯಂನಾ ಮೊರೆಯಲಾಲಿಸೆ ನೀ ಬಂದು ದುರಿತಗಳಾನೆಲ್ಲಾ ಪರಿಹರಿಸುವ ನಿಂಮ ಅನುದಿನ ಆಡÀುತ್ತಾ ಬಾರಮ್ಮಾ2 ಧರಣಿಯೊಳುನ್ನತವಾದ ಹೆಳವನಾಕಟ್ಟೆ ಗಿರಿಯೊಳು ನೆಲಸಿದ ಪರಮ ಪವಿತ್ರಳ ಕರುಣಾ ಸಿಂಧುವೆ ವರವನು ಕೊಡುತ್ತಾ ಬೇಗಾದಿಂದಲಿ ಆಡುತ್ತಾ ಬಾರಮ್ಮಾ3
--------------
ಹೆಳವನಕಟ್ಟೆ ಗಿರಿಯಮ್ಮ
ಆಡುವ ಬನ್ನಿರಿ ಬಾಲಕರೆ ಪ ರೂಢಿಗಚ್ಚರಿಯಾಗಿ ಬಲುಲೀಲೆಗಳಿಂ ಅ.ಪ ಜನನ ಮರಣವÉಂಬ ಚೆಂಡು ಬುಗುರಿಯಿಂ ಮನದ ವೃತ್ತಿಗಳೆಂಬ ಗೋಲಿಗಜ್ಜುಗದಿಂ ಜನಸಂಘವೆಂಬುವ ಚಿಳ್ಳೆಕೋಲುಗಳಿಂ ಅನುದಿನ ಭ್ರಾಂತಿಯೆಂಬ ಕವಣೆ ಕಲ್ಲುಗಳಿಂ 1 ಏಳುತಲೀ ಮುಖ ತೊಳೆದು ನೀವೆಲ್ಲ ಕರ್ಮ ಭಕ್ಷಗಳೆಲ್ಲ ಲೀಲೆಯಿಂ ಮೆಲ್ಲುತಲಿದರೊಳು ಬಲ್ಲ ಶೀಲ ಸದ್ಗುಣವುಳ್ಳ ಬಾಲಕರೆಲ್ಲ 2 ಶ್ರವಣ ಮನನವೆಂಬ ಸಾಧನೆಯಿಂದ ಭವಹರ ಗುರುರಾಮ ವಿಠಲ ಮುಕುಂದ 3
--------------
ಗುರುರಾಮವಿಠಲ