ಒಟ್ಟು 440 ಕಡೆಗಳಲ್ಲಿ , 67 ದಾಸರು , 369 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಲೆಂದು ಪಾಡಿರೆ ಕೋಮಲೆಯರೆಲ್ಲಾ ಅಮ್ಮಯ್ಯ ಗೋಪಾಲ ಕೃಷ್ಣಯ್ಯಗ ಶರಣಿಂದು ಕೋಲ ಪ. ಮುದ್ದು ಸುಭದ್ರ ನೀನು ಗೆದ್ದುಬರುತಿಯೆಂದುಎದ್ದ ಬೃಹಸ್ಪತಿಯು ತವಕದಿ ಕೋಲಎದ್ದ ಬೃಹಸ್ಪತಿಯು ತವಕದಿ ಅರ್ಜುನ ಸಿದ್ಧ ಮಾಡೆಂದ ರಥಗಳ ಕೋಲ 1 ಕೇಳಿರಿ ನಿಮಗೆಲ್ಲ ಭಾಳ ಬಲವದೆಕಾಳಿ ಮೊದಲಾದ ಕೆಲದೆಯರುಕಾಳಿ ಮೊದಲಾದ ಕೆಲದೆಯರು ಹರುಷದಿ ಹೇಳಿ ಬೃಹಸ್ಪತಿಯು ನುಡಿದಾನು ಕೋಲ2 ಪಾಂಡವರೆಲ್ಲರು ಉಂಡು ವೀಳ್ಯವನ್ಹಾಕಿಪುಂಡರಿಕಾಕ್ಷನ ಅರಮನೆಗೆ ಕೋಲಪುಂಡರಿಕಾಕ್ಷನ ಅರಮನೆಗೆ ಐವರುತಂಡ ತಂಡದಲೆ ನಡೆದಾರು ಕೋಲ3 ದ್ರೌಪದಿ ಸುಭದ್ರಾ ಇಬ್ಬರು ಒಂದಾಗಿಅಗಣಿತ ಒನಿತೆಯರು ಕೋಲಅಗಣಿತ ಒನಿತೆಯರು ಕೂಡಿಕೊಂಡು ತಾವುಪ್ರೇಮದಿಂದಲಿ ಬರುತಾರೆ ಕೋಲ 4 ಅರಿಷಿಣ ಕುಂಕುಮ ಗಂಧಬೆರೆಸಿ ಪರಿಮಳದಿಂದಸರಸಾದ ಸುರಭಿ ಕುಸುಮವ ಕೋಲಸರಸಾದ ಸುರಭಿ ಕುಸುಮರಾಮೇಶನ ಅರಸಿಯರಿಗೆ ಒಯ್ವೋ ಉಪಚಾರ ಕೋಲ 5
--------------
ಗಲಗಲಿಅವ್ವನವರು
ಖಾದಿ ಧರಿಸುವ ಜನಕೆ ಕ್ರೋಧವುಂಟೇ ಪ ಕ್ರೋಧ ಜೈಸಿದ ನರಗೆ ಕಲಹಗಳುಂಟೇ ಪಥ್ಯದಿಂದಿರುವವಗೆ ವ್ಯಾಧಿ ಭಯವೇ ನಿತ್ಯ ಉಪವಾಸಿಗೆ ಭತ್ತದಾ ವ್ಯಥೆಯುಂಟೇ ಚಿತ್ತ ಶುದ್ಧಿದ್ದವಗೆ ಮೈಲಿಗೆಯ ಪರವೇ 1 ಆಶೆ ಬಿಟ್ಟವನಿಗೆ ಅರಸರಾಭಯವುಂಟೆ ದಾಸನಾದವನಿಗೆ ದೋಷವುಂಟೆ | ದೇಶ ಉದ್ಧಾರಕಗೆ ಸೆರೆಮನೆಯ ಭಯವುಂಡೆ ಪೂಶರನ ಗೆದ್ದವಗೆ ಕಾಮಿನಿಯ ಭಯವೇ 2 ಗೀತಾರ್ಥ ತಿಳಿದವಗೆ ಪಾತಕದ ಭಯವುಂಟೆ ಶೀತೋಷ್ಣ ಸಹಿಸುವವಗೆ ಛಳಿ ಬಿಸಿಲು ಭಯವೆ | ನೀತಿ ಕೋವಿದರಿಗೆ ಜಾತಿ ಪಕ್ಷಗಳುಂಟೆÉ ದಾತನಿಗೆ ದುರ್ಭಿಕ್ಷು ಭೀತಿ ತಾವುಂಟೆ 3 ವಿದ್ಯಾಭಿಲಾಶೆಗೆ ತೇರ್ಗಡೆಯ ಭಯವುಂಡೆ ಉದ್ಯೋಗವಿದ್ದವಗೆ ಉದರ ಭಯವೇ ಯುದ್ಧ ಶೂರರಿಗೆಲ್ಲ ಮದ್ದುಗುಂಡಿನ ಭಯವೇ ಬುದ್ಧಿವಂತರಿಗೆಂದಿಗಪಮಾನ ಭಯವೇ 4 ನೇಮದಿಂದಲಿ ನಡೆವವಗೆ ಸೋಮಾರಿತನವುಂಟೆ ಭೂಮಾತೆ ಮಕ್ಕಳಿಗೆ ಕ್ಷಾಮವುಂಟೆ ಸಾಮಗಾನವಿಲೋಲ ಶಾಮಸುಂದರವಿಠಲ ನಾಮ ನೆನವವಗೆ ಯಮಧಾಮದಂಜಿಕೆಯೇ 5
--------------
ಶಾಮಸುಂದರ ವಿಠಲ
ಖುಲ್ಲ ಮಾತುಗಳು ನಿಲ್ಲದಾಯುಷ್ಕೀರ್ತಿ ಎಲ್ಲರೊಳು ಕೇಳಿ ಪ ಅರಸು ಸಣ್ಣವನೆಂದು ಸರಸವಾಡಲು ಸಲ್ಲ ಕರೆಸಿ ಕೇಳದ ಮಾತು ಆಡಸಲ್ಲ ಪರಸಖರ ಮನೆಯೊಳಗೆ ಇರಿಸಿಕೊಂಡಿರ ಸಲ್ಲ ಬೆರೆಸಿ ಬಹ ಪಾತಕರ ಅರಸುವರೆ ಸಲ್ಲ 1 ಹಗಲು ಕಳ್ಳನ ಕೈಯ ಜಗಳವಾಡಲು ಸಲ್ಲ ಹಗೆಯೊಡನೆ ಸ್ನೇಹವನು ಮಾಡಸಲ್ಲ ಜಗಳಗಂಟಿಕ್ಕುವನ ಮೊಗದೊಳಗೆ ನಗೆಯಿಲ್ಲ ಅಗಲಿ ಪೋಗುವೆನೆಂಬ ಮಗ(ನು) ಸೊಗ(ಸ)ಲ್ಲ 2 ಒಡೆಯನಿಲ್ಲದ ಊರು ಬಡವರಿಗೆ ಅಳವಲ್ಲ ಕಡು ಚೆಲ್ವೆ ಕುರುಡನಿಗೆ ಮಡದಿಯಹ ಸಲ್ಲ ನುಡಿಯ ತಿಳಿಯದೆ ಇಹನ ಸಾಕ್ಷಿಯನು ಇಡ ಸಲ್ಲ ದೃಢವಾದ ಮೂರ್ಖನೊಳು ಕದನ ಮಾತಿಲ್ಲ 3 ಹರಿದಾಸರೆನಿಸಿದರೆ ಪರಗತಿಯೊಳೆರವಿಲ್ಲ ಗುರುಹಿರಿಯರಾದವರ ಜರೆಯ ಸಲ್ಲ ಕರಕರೆಯ ಬದುಕಿನೊಳು ಬರುವ ಉಡುಗೊರೆಯಿಲ್ಲ ಪರಿ ಸಲ್ಲ 4 ಹರಿಯು ಮುನಿದರೆ ಮರೆಯೊಳಿರಿಸಿ ಕೊಂಬುವರಿಲ್ಲ ಹರಿಯೊಲಿದ ನರನೊಳಗೆ ಗೆಲುವ ಪರಿಯಿಲ್ಲ ವರಾಹ ತಿಮ್ಮಪ್ಪನಿರಲು ಬಲ್ಲ ನರನು ಹರಿದೂಷಕರ ಸರಿಯೊಳಗೆ ನಿಲ್ಲ 5
--------------
ವರಹತಿಮ್ಮಪ್ಪ
ಗಮನ ಕೃಷ್ಣಾ ಪ ಇಂದಿರೇಯರಸ ಮುಕುಂದ ಮೂಜಗಕ್ಕೆ ತಂದೆತಾಯಿ ನೀನೇ | ಶ್ರೀರಾಮಾ ಅ.ಪ ಕೇಸರಿ ಪುನಗುಗಳೂ ನೀಸತಿ ಸಹಿತ ಸದಾ ಲೇಪಿತ ಶ್ರೀನಿ- ವಾಸ ಸುಗುಣಧಾಮಾ | ಶ್ರೀ ರಾಮ 1 ಸ್ಪುರಿಪಲಲಾಟದೊಳೂಧ್ರ್ವ ಪುಂಡ್ರಕ- ಸ್ತುರಿತಿಲಕವು ಬೆಳಗೇ ಹರಿದ್ರಾ ಕುಂಕುಮ ಮಂಗಲ ದ್ರವ್ಯ ನಿನ್ನ ಅರಸಿ ಜಾನಕಿ ದೇವಿಗೇ | ಶ್ರೀರಾಮ 2 ಕ್ಷತೆಯಿಲ್ಲದವನು ನೀನೆಂಬುವದ- ಕ್ಷತೆ ನಿನದಿದೊ ದೇವಾ ತ್ಪತಿ ಮಹಾನುಭಾವಾ | ಶ್ರೀರಾಮ 3
--------------
ಗುರುರಾಮವಿಠಲ
ಗರುಡನೇರುವ ಕೃಷ್ಣ ಹೊರಡುವನೀಗ ಸಖಿನೋಡೋಣ ನಾವೆಲ್ಲ ಈಗ ಬಾರೆ ನೀರೆ ಪ. ಗಗನದಿ ಬೆಳಗುವ ಹಗಲು ಬತ್ತಿಗÀಳೆಷ್ಟುಹಗಲು ಬತ್ತಿಗಳೆಷ್ಟು ಮುಗಿಲಿಗೆ ಮುಟ್ಟೋಬಿರಸೆಷ್ಟ ಬಹುಶ್ರೇಷ್ಠಮುಟ್ಟೋ ಮಿಂಚಿನಂತೆ ಹೊಡೆವೊ ಬಾಣಗಳು ಕಡಿಯಿಲ್ಲ ನಲ್ಲೆ 1 ಎಡಬಲ ಭಾವೆ ರುಕ್ಮಿಣಿ ಮಡದಿಯರೊಪ್ಪುವ ಮಡದಿಯ ಹಿಂದೊಪ್ಪುವ ಬೆಡಗು ವರ್ಣಿಸಲು ವಶವಲ್ಲ ನಲ್ಲೆಬೆಡಗು ವರ್ಣಿಸುವೊ ಅವರಾರೆ ಚತುರ್ಮುಖನು ಖಡಿಸೋತು ಕೈಯ ಮುಗಿದಾನೆ ತಾನೆ2 ಕೃಷ್ಣನರಸಿಯರುಉಟ್ಟ ಪಟ್ಟಾವಳಿಯ ಬೆಳಕು ಅಷ್ಟು ಇಷ್ಟೆಂಬ ಮಿತಿ ಇಲ್ಲ ನಲ್ಲೆ ಅಷ್ಟು ಇಷ್ಟೆಂಬ ಮಿತಿ ಇಲ್ಲ ಸೂರ್ಯನಾಚಿಬಿಟ್ಹೋದ ತಮ್ಮ ಮನೆತನಕ ಸುಜನಕೆ 3 ಮದನ ತಾ ನಾಚಿ ಮನೆಗ್ಹೋದ ಅಗಾಧ4 ಕಡಗ ಸರಪಳಿ ಗೆಜ್ಜಿ ನಡುವಿನೊಡ್ಯಾಣ ಪದಕ ನಡುವಿನೊಡ್ಯಾಣ ಪದಕ ಇಡವೊಕುಂಡಲದ ಮುಕುಟವೆ ಚಂದವುಮುಕುಟದ ಕಾಂತಿಗೆ ಅಡಗಿವೆ ತಾರೆ ಗಗನದಿ ಮುದದಿ 5 ಫುಲ್ಲ ನಯನೆಯರ ಮುತ್ತಿನ ಝಲ್ಲೆ ವಸ್ತದ ಬೆಳಕುಎಲ್ಲೆಲ್ಲು ಇಲ್ಲ ಜಗದೊಳು ಕೇಳುಎಲ್ಲೆಲ್ಲೂ ಇಲ್ಲ ಜಗದೊಳು ಚಂದ್ರನಾಚಿಖಡಿ ಸೋತು ಕೈಯ ಮುಗಿದಾನೆÉ ತಾನೆ6 ಕೌಸ್ತುಭ ವೈಜಯಂತಿ ಹಾರ ಶೋಭಿಸುವ ಬೆಳಕೆಷ್ಟು ಬಹುಶ್ರೇಷ್ಠ7 ಮಂದಗಮನೆಯರು ಹರಿಯ ಗಂಧ ಕಸ್ತೂರಿ ಸೊಬಗುಛಂದ ವರ್ಣಿಸುವವರ್ಯಾರ ತೋರೆಛಂದ ವರ್ಣಿಸುವ ಅವರ್ಯಾರೆ ಚತುರ್ಮುಖನ ಛಂದಾಗಿ ನಾಚಿ ಕೈ ಮುಗಿದ ಸುಕರ 8 ನಲ್ಲೆಯರು ರಮೆ ಅರಸು ಮಲ್ಲಿಗೆ ಮುಡಿದ ಚಂದ ಮಲ್ಲಿಗೆ ಮುಡಿದ ಚಂದ ಎಲ್ಲೆಲ್ಲೂ ಇಲ್ಲಧsರೆ ಮ್ಯಾಲೆ ಎಲ್ಲೆಲ್ಲೂ ಇಲ್ಲ ಧರೆ ಮ್ಯಾಲೆ ಸರಸ್ವತಿಯುಚಲ್ವಿ ತಾ ನಾಚಿ ನಡೆದಾಳೆ ಕೇಳೆ 9
--------------
ಗಲಗಲಿಅವ್ವನವರು
ಗುರುರಾಘವೇಂದ್ರ ಶರಣರ ಸುರ ತರುವೆ ಕರುಣಸಾಂದ್ರ ಪ ಧರೆಯೊಳು ನಿನ್ನ ಶ್ರೀ ಚರಣಕಮಲ ಪ್ರಭೆ ಪರಿ ಉದ್ಧರಿಸು ಈ ಶರಣನ್ನ ಅ.ಪ. ಸುಕೃತ ಸ್ವರೂಪ ದರುಶನ ಮಾತ್ರದಿ ಭವ ಶ್ರಮ ಹರಿಸುವ ಪ್ರತಾಪ ರಮೆ ಅರಸನ ಗುಣ ಸಮುದಾಯದೊಳು ಮಗ್ನ ಭ್ರಮೆರಹಿತ ಸ್ಥಿರಚಿತ್ತ ನಮೋ ನಮೋ ನಿನಗೆ ಅಮಿತ ಮತಿಯ ಕರುಣ ಕವಚವ ಅಮಿತಕಾಲದಿ ಕೊಟ್ಟು ಮೆರೆಯುವ ಅಮಿತ ಮಂಗಳದಾಯಿ ತತ್ವದ ಕಮಲ ವೈಭವ ಸಲಹಲೆನ್ನನು 1 ಪಾವನ ಸುಯತಿ ರನ್ನ ಲಾಲಿಸು ವಾಕು ಸಾವಧಾನದಿ ಘನ್ನ ಭವ ಭವಣೆ ದಾವಾಗ್ನಿಯೊಳು ನೊಂದೆ ಶ್ರೀ ವರನ ದಾಸ ಕಾವ ದೃಷ್ಟಿಯಲಿ ನೋಡೊ ನಿತ್ಯ ಮಂಗಳ ಭಾವರೂಪ ಗುಣತ್ರಯಗಳ ಆವ ಕಾಲಕು ಬಿಡದೆ ನೋಡುವ ಭೂವಿ ಬುಧಮಣಿ ಪಾಲಿಸೆನ್ನನು 2 ತುಂಗಾತೀರ ನಿವಾಸ ರಾಘವೇಂದ್ರ ಗುರು ತುಂಗ ಮಹಿಮ ನಿರ್ದೋಷ ಮಂಗಳಾಸಮಹರಿ ಗಂಗಾಪಿತನ ಕೂಡಿ ತುಂಗಪೂಜೆಯ ಕೊಂಡ್ವರಂಗಳ ಬೀರುವ ಪಾದ ತೀರ್ಥದಿ ಭವ ಭಂಗ ಬಗೆಯನು ಬಲ್ಲ ಮಹಾತ್ಮ ರಂಗ ಜಯೇಶವಿಠಲ ದೇವನ ಸಂಗ ನೀಡುವ ಕೃಪೆಯ ಮಾಳ್ಪ 3
--------------
ಜಯೇಶವಿಠಲ
ಗೋಕುಲದ ಸತಿಯರೆಲ್ಲ ಶ್ರೀಕೃಷ್ಣನಾಟಗಳದೂರುತಲೆ ಪಾಡುವರು ಪ. ಕಪಟ ಸರ್ವಾಂಗದೊಳಗಿದಕೊಮಣ್ಣ ಮೆಲುವನು ತನ್ನ ತೆರೆಬಾಯಿ ತೆರೆವನಿವಚಿಣ್ಣತನದಾ ತನುವ ತೋರುತಲೆ ವನದೊಳಗೆಪಣ್ಣು ಫಲಗಳ ಸವಿವುತಅಣ್ಣನೊಡನೆ ಕೊಳಲನೂದುತಲಿ ಗೋಕುಲದಹೆಣ್ಣುಗಳ ಮರುಳು ಮಾಡುವ ಗಂಡುಗಲಿಯಿವನಿನ್ನ ಮಗ ಅಮ್ಮಮ್ಮ ಶುಕನ ನುಡಿಗಳ ಗೆಲುವಬಣ್ಣಿಸುವ ಕವಿಯದಾವ1 ಸುರರು ಸೋಲುತಿರೆಆರ್ತಿಯ ಕಳೆವರೆ ಭವರೋಗಕಿವನೆ ಮದ್ದುಇತ್ತಲೀತನ ಚೆಲುವ ಕಾಣುತಲಿ ಕಂದರ್ಪಪೃಥ್ವಿಯಲಿ ಬಿಲ್ಲ ಬಿಸುಟ 2 ಮೂರ್ತಿ ಕೀರ್ತಿಯ ಸೊಬಗುಚಿತ್ರ ಚರಿತ್ರಗಳ ಕಂಡಿರೆ ನಿಮ್ಮ ಕುಮಾರನಾದ ಹತ್ತುಸಾವಿರ ಪೆಸರು ಸಲ್ಲುವುದಮ್ಮ ಸ-ರ್ವತ್ರ ನೋಡುವ ಸುಜನರುಚಿತ್ತದೊಳಗೆಲ್ಲ ಪುರವಿಟ್ಟವರು ಅರಸುತಿರೆವ್ಯಾಪ್ತನೆಂಬುದಕೆ ತಮ್ಮ ತಮ್ಮ ಮನವೇ ಸಾಕ್ಷಿಮುಕ್ತಿ ನಮಗೇಕೆ ಹಯವದನನಂಘ್ರಿü್ರಗಳಾಣೆನಿತ್ಯದಲಿ ಇವನ ನೋಡುತಲಿಹುದು ಸಾಕೆಲೆ ಗೋಪಿ3
--------------
ವಾದಿರಾಜ
ಗೋಪಗೋಪನೆಂಬಾ ಕೋಗಿಲೆ ನಮ್ಮಶ್ರೀಪತಿಯ ಕಂಡರೆ ಬರಹೇಳೆ ಕೋಗಿಲೆ ಪ . ಕೆಂಗಾವಳೆಯಾಲೆದಲಿ (?) ಪಾಂಡುರಂಗಮಂಗಳ ಮೂರುತಿಪ್ಪಶೃಂಗಾರವಾದ ಸುರತರುವಿನ ನೆರಳೊಳುರಂಗನಾಥನ ಕಂಡರೆ ಬರಹೇಳೆ ಕೋಗಿಲೆ 1 ಮಧುಮಾಸದಲಿ ಮಾಧವನಿರಲುಚದುರೆ ಗೋಪಿಯರಸ ಮೇಳದಲ್ಲಿಮುದದಿ ವನಂತರನಾಡುವ ಭರದಿಂದಪದುಮನಾಭನ ಕಂಡರೆ ನೀ ಬರಹೇಳೆ 2 ಅಟ್ಟಿ ಅರಸುವ ಶ್ರ್ರುತಿಗಳಿಂದ ಸುಖಬಿಟ್ಟೆವೆಂದರವ ಪರಬ್ರಹ್ಮಸೃಷ್ಟಿಯೊಳು ಉಡುಪಿನ ಹಯವದನ ಸ್ವಾಮಿಯದೃಷ್ಟಿಲಿ ಕಂಡರೆ ಬರಹೇಳೆ ಕೋಗಿಲೆ3
--------------
ವಾದಿರಾಜ
ಗೋಪಾಲದಾಸರು ಕರದಾಗ ಬಾರದೇ ವೈದುಗ ಬಂದು ಬೋಧಿಸಿ ಮಾರ್ಗವ ತೋರಿಸಿ ಹೃದಯದಿ ಪಾದನಿಲ್ಲಿಸಿ ಮಂದನ ಪೋಷಿಸಿ ಭಂಗವ ಬಿಡಿಸುತಾ ಮಂಗಳ ಮೂರುತಿ ನಿನ್ನ ಮಹಿಮೆಗೆಣೆಗಾಣೆ ಧವಳ ಗುಣವಂತ ತಂದೆವರದಗೋಪಾಲವಿಠಲರೇಯನ ದಾಸನೆಂದೆನಿಸದೆಯನ್ನ 1 ವೈರಿ ಬನ್ನ ಭವ ಬನ್ನ ಪಡುತಿರೆ ಕಣ್ಣು ಕಾಣದೆ ಕರುಣವ ಬೀರುತ ಪಾಣಿಯ ಪಿಡಿದು ವೀಣಾವನಿತ್ತು ಗಾನವ ಪೇಳಿ ಗುಣವಂತನೆಂದೆನಿಸಿದೇ ಎನ್ನ ಅಣ್ಣಾ ಅಣ್ಣಾ ಭಾಗಣ್ಣ ಗಜಮುಖ ರೂಪದಿ ಬಂದು ಪಾಲಿಸಿದೈನಿನ್ನಾ ಕರುಣಾರಸಕೆಣೆಯುಂಟೆ ಯೆಣೆಯುಂಟೆ ನಿನ್ನ ದೇನಿಪರೊಳಗಿಟ್ಟುಶಿರಿಯರಮಣ ತಂದೆವರದಗೋಪಾಲನ ತೋರೋ 2 ನೂರಾರು ಸಾವಿರ ನಾರಿಯರೊಡಗೂಡಿ ಬೆಡಗು ಮಾಡೆ ನಾರಿಯಾಗಿ ನಿನ್ನಡಿಗಳ ಪೂಜಿಸಿ ಗರುಡನಂತೆ ನನ್ನ ಹೆಗಲೀನ ಕೂಡಿಸಿಕೊಂಡುತಿರುಗುವೆ ನೀತಿ ಕಪಿಯಂತೆ ನಿನ್ನ ಕಪ್ಪಾದಿ ವಲಿಸುವೆ ಕಮತವ ಮಾಡಿಸಿ ಮರ್ಮವ ಘಾಡಿಸಿ ಶರ್ಮವ ಗೂಡಿಸಿ ಚರ್ಮವ ತೊಡಿಸಿ ಕರ್ಮವ ಕೆಡಿಸಿಮೃಡನೊಡೆಯ ವಂದಿತ ತಂದೆವರದಗೋಪಾಲವಿಠಲನಡಿಗಳ ಧೇನಿಸುವಂತೆ ಮಾಡೋ 3 ಅಂಬರ ಭೋಜನೆ ಕಂಬುಕಂಧರನಿಂದ ಡಿಂಗರಪಾಲಿಪ ಡಿಂಬದಿ ಪೊಳೆಯುವಅಂಬಾರಮಣಸುತ ಭೀಮಾಂತರ್ಯಾಮಿ ತಂದೆವರದಗೋಪಾಲ ವಿಠಲನ ನಿಜ ಕೊಂಡಾ 4 ನಿಗಮ ನಿಧಿ ಕೃಷ್ಣಾಂತರ್ಯಾಮಿ ಲಕುಮಿ ಅರಸತಂದೆವರದಗೋಪಾಲವಿಠಲನ ವಾರಿಜದಲ್ಲಿ ತೋರೋ 5 ಜತೆ :ಆವಾಗ ಬಂದು ನೀ ಕಾವದಿರೇ ಸೇವಕನಾಗಲ್ಯಾಕೋ ಭಾವಜಪಿತ ತಂದೆವರದಗೋಪಾಲವಿಠಲರೇಯನ ದೂತ
--------------
ತಂದೆವರದಗೋಪಾಲವಿಠಲರು
ಗೋಪಿದೇವಿ ಎಂತು ಪೇಳಲೆ ನಾನೆಂತು ತಾಳಲೆ ಪ ಶ್ರೀಪತಿ ಬಂದು ನಿಂದು ಏಕಾಂತವನ್ನ ಆಡುತಾನೆ | ಪಾಪ ಇಂಥಾದುಂಟೇನೆ ಕೇಳೆ ಲಕ್ಷ್ಮೀಕಾಂತನೀತನೆ || ಮಂಥನ ಮಾಡುವಲ್ಲಿ ಮಂಥಣಿಯ ಒಡೆದನು | ಕುಂತಳವ ಪಿಡಿದು ಎನ್ನ ಕುಳ್ಳಿರಿಸಿದಾ ಕಿರಿಬೆವರನೊರಸಿದಾ 1 ಚಿಕ್ಕಮಕ್ಕಳ ಕೂಡಿ ಚಕ್ಕನೆ ತಾ ಬಂದು ಬೇಗ | ಬೆಕ್ಕು ಕುನ್ನಿ ಮರ್ಕಟವ ತಂದನಮ್ಮಾ ಇದು ಚಂದವೇನಮ್ಮ || ಉಕ್ಕುತಿಹ ಪಾಲ್ಗೊಡಗಳ ಉರುಳಿಸಿದಾ ಸುಮ್ಮನೆ | ಚೊಕ್ಕವೇನೆ ಸುಮ್ಮನೆ ಮೊಸರ ಸುರಿದಾ ಮೀಸಲು ಮುರಿದಾ 2 ರಕ್ಕಸರ ಗಂಡ ನಮ್ಮ ರಾಜ್ಯದೊಳಗಿವಗಿನ್ನು | ತಕ್ಕ ಬುದ್ದಿಯ ಪೇಳುವರದಾರು ಮೀರಿದ ಗೋಪಗೆ || ಸಿಕ್ಕ ಪಿಡಿದೇವೆಂದರೆ ಸಿಕ್ಕನಮ್ಮ ಇವ ಗುಡಿವಡ್ಡಿ ಬೇಡವೇ | ಕಕ್ಕಸದಲಿ ಬಲು ಕಕ್ಕಲಾತಿಯಲಿ 3 ಬಿರಬಿರನೆ ತಾ ಬಂದು ಬೆದರಿ ಎನಗಂದು | ಹರವಿಯ ಹಾಲು ಕುಡಿದಾ ತಾ ಎತ್ತ ಓಡಿದನೆ || ವಾರಿಗಣ್ಣಿನಿಂದಲಿ ನೋಡಿ ಒದಗಿ ಬಳಿಗೆ ಬಂದು | ತೋರವಾದ ಕುಚಗಳ ಪಿಡಿದಾನೆ ಬಲಿದನೇನೆ 4 ಹಾರ ಪದಕವು ಹಿಡಿ ಹಿಡಿ ಎಂದು ಎನ್ನ ಕೂಡ | ಸರಸವನಾಡಲಿಕ್ಕೆ ಅರಸನೇನೆ ನಮಗೆ ಪುರುಷನೇನೆ || ಪುರುಷರು ಕಂಡರೆನ್ನ ಪರಿಪರಿ ಬಾಧಿಸ್ಯಾರು | ತರಳನ ಕರೆದ್ಹೇಳು ತಿದ್ದಿ ನೀನು ಇವಗೆ ಬುದ್ಧಿ5 ಚಂಡನಾಡುತಲಿ ಚಿಕ್ಕ ಮಿಂಡಿಯರ ಕಂಡು ತಾನು | ಚಂಡು ಅಂತ ಕುಚಗಳ ಪಿಡಿದಾನೆ ಇಂಥದುಂಟೇನೆ || ಭಂಡು ಮಾಡತಾನೆ ಭಂಡಿಯ ಗೋವಳಗಿಂದು | ದಂಡಿಸವ್ವಾ ದಂಡವನು ಕೊಡು ನೀನು 6 ಚಂಡ ಪ್ರಚಂಡನಿವನು ಗೋಪಿಕೆಯರಿಗೆಲ್ಲ | ಉದ್ದಂಡನಿವನು ತಂಡ ತಂಡದಲಿ ತುರು- || ಹಿಂಡುಗಳ ಕಾಯುವ ಗೊಲ್ಲಬಾಲಕನಮ್ಮಾ |ಪಾಂಡುರಂಗ ವಿಜಯವಿಠ್ಠಲರಾಯ ಬಲು ದಿಟ್ಟನಿವನು7
--------------
ವಿಜಯದಾಸ
ಚದುರಂಗನಾಡುವ ನೋಡಿರೇ | ಮದನಮೋಹನ ಕೃಷ್ಣ ನಿಜ ಶಕ್ತಿಯೊಡನೆ ಪ ಭೂಮಿಯ ಹಲಗಿಲಿ ಕಾಯದ ಮನೆಯೊಳು | ವ್ಯಾಮೊಹಿ ಜೀವನು ಅರಸನಿಲ್ಲಿ | ನೇಮದಿ ಪುಣ್ಯ ಪಾಪದ ಪಲಗಳಿಸುವ | ಈ ಮನೆವೆಂಬ ಪ್ರಧಾನಿಯನಿಟ್ಟು 1 ಪ್ರಾಣಪಾನವೆಂಬ ಎರಡಾನೆ ನಿಲ್ಲಿಸಿ | ನಾನು ನನ್ನದು ಎಂಬ ಒಂಟೆಗಳ | ಜಾಣತನದ ಬುದ್ದಿ ಚಿತ್ತದ ಕುದುರೆ | ನಿ ಧಾನ ದಶೇಂದ್ರಿಯ ಕಾಲಾಳಿನಿಂದ 2 ಕಾಲಸೂತ್ರದಿ ನಡಿಸ್ಯಾಡುತ ಕೃತಕರ್ಮ | ಮೂಲದಿ ಹಾನಿವೃದ್ದಿಗಳಿಹವೋ | ಮೇಲೆ ಯಶಾಪಯಶ ಪಾಲಿಗೆ ತರುವ | ನೃ ಪಾಲಕ ಮಹಿಪತಿನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚರಣವ ನರ್ಚಿಸುವೆ ಹರಿ ನಿನ್ನ ಮರೆಯದೆ ಕೀರ್ತಿಸುವೆ ನೀನೆ ಎನ್ನರಸ ರಕ್ಷಿಸು ಎಂದು ಪ ರಕ್ಷಿಸು ಎಂದು 1 ಸುಗುಣಂಬರೀಶ ಭೂಪಗೆ ಕೊಡಲಾಕ್ಷಣ ಗಮನ ಚನ್ನಿಗನೆ ರಕ್ಷಿಸು ಎಂದು 2 ಮುಳಿದು ಗಜವ ನೆಗಳೆಳೆಯಲು ಭಯದಲಿ ನಳಿನಾಕ್ಷ ನಿನಗೆ ದೂರಲು ಬೇಗದಲಿ ಸಾರಿ ಸುಲಲಿತ ಮಹಿಮನೆಗಳ ಸೀಳಿ ಕರಿಯನು ಸಲಹಿದೆ ದೇವ ಗೋವಳನೆ ರಕ್ಷಿಸು ಎಂದು 3 ಬೇಗದಲಿ ಕಂಬದಿಬಂದು ಸದೆದು ದಾನವನ ದಾಯದಲಿ ಕಾಯ್ದು ಪದುಮಾಕ್ಷ ನರಹರಿ ಮುದದಿ ರಕ್ಷಿಸು ಎಂದು 4 ದುರುಳ ದುಶ್ಯಾಸನ ಭೂವರ ಪಾಂಡು ತನುಜರ ಅರಸಿಯ ಸೀರೆಯ ಭರದಿ ಸೆಳೆಯಲಾಗ ಮೊರೆಯಿಡಲಕ್ಷಯ ವರವನಿತ್ತು ಸಲಹಿದ ಹರಿ ಸುತ ಕೋಣೆಯ ಲಕ್ಷ್ಮೀಶ ರಕ್ಷಿಸು ಎಂದು 5
--------------
ಕವಿ ಪರಮದೇವದಾಸರು
ಚಾರು ಗಾಯನ ರತನಾ | ಸಾಕಾರನ ತಂದು ತೋರೇ ಪ ಇರುವ ದಿಕ್ಕಿನೋಳಿಹನಾ ಪರಮ ಮಿತ್ರನಾಹಾರಾ ಮಾಳ್ವೆರಿಯಣ್ಣನಾ ನಿರುತ ಸೇವೆಯ ಕೊಂಬನಾ | ಶರೀರದಿ ಜನಿಸಿದಾವಳ ಕೂಡಿಕೊಂಡಳ ಅರಸನ ಸ್ನೇಹವ ಮಾಳ್ವನಾ ಹರಿಣಾಕ್ಷಿ ತಂದು ತೋರೇ 1 ಯೊಡಲೊಳು ತ್ವರಿತದಿ ಜನಿಸಿದನಾ | ಬಂದನಾ ಶರದೆಚ್ಚ ಸ್ಥಳ ಕೊಂಡನೇ | ಅಸುರನ ಕಂದನಾ ಕೊಂದನಾ | ಜಗ ದರಿಯನ ತಂದು ತೋರೇ 2 ಮಂದಗಮನಿ ಪ್ರಿಯನಾ | ಮುಂದ ಗಾಣದ ಲೊಲ್ಲನಾ | ಕೈಯಿಂದ ಕೊಲಿಸಿದನಾ | ನಂದನ ತಂದು ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜನಕರಾಜನ ಸುತೆ ಜಾನಕಿ ಜೋ ಜೋ ಇನಕುಲತಿಲಕನರ್ಧಾಂಗಿಯೆ ಜೋ ಜೋ ಪ ಕುಂದಣ ಕೆತ್ತಿದ ಚಂದದ ತೊಟ್ಟಿಲ ಮಂದಗಮನೆಯರು ತಂದಿರಿಸಿದರು ಸುಂದರಾಂಗಿ ವೈದೇಹಿಯನೆತ್ತುವ ಆ- ನಂದದಿ ಜೋಗುಳ ಪಾಡ್ವರು ಜೋ ಜೋ 1 ರತ್ನ ಮುತ್ತುಗಳ ಕಿರೀಟವು ಹೊಳೆಯಲು ಮುತ್ತಿನ ತೊಡುಗೆಯಲಿ ರಂಜಿಸುವ ಸುಂದರಿಯ ಉತ್ತಮ ಸತಿಯರು ತೊಟ್ಟಿಲ ಪಿಡಿಯುತ ಅರ್ಥಿಯ ಜೋಗುಳ ಪಾಡ್ವರು ಜೋ ಜೋ2 ಕೌಸಲ್ಯದೇವಿಯ ಕಂದನ ರಮಣಿಯೆ ಕೌಶಿಕಯಜ್ಞದ ಪಾಲನಅರಸಿಯೆ ಹಂಸವಾಹನನ ಪಿತನ ಸತಿಯೆ ಖಳ ಧ್ವಂಸ ಮಾಡಿದ ರಘುರಾಮನರಸಿಯೆ 3 ಅಂಬುಜನಯನೆ ಪೀತಾಂಬರ ಶೋಭಿತ ಕಂಬುಕಂಠಿ ಕೋಕಿಲವಾಣಿ ಜೋ ಜೋ ತುಂಬುಗುರುಳ ಮುಖ ಕಮಲೆಯೆ ಜೋ ಜೋ ನಂಬಿದವರ ಕಾಯ್ವ ಕರುಣಿಯೆ ಜೋ ಜೋ4 ಕಮಲನಯನೆ ಕಮಲಾಲಯೆ ಜೋ ಜೋ ಕಮಲಗಂಧಿಯೆ ಕಮಲೋದ್ಭವೆ ಜೋ ಜೋ ಸತಿ ಜೋ ಜೋ ಕಮಲೆ ಹೃತ್ಕಮಲದಿ ವಾಸಿಸÀು ಜೋ ಜೋ5
--------------
ನಿಡಗುರುಕಿ ಜೀವೂಬಾಯಿ
ಜಯ ಕೊಲ್ಹಾಪುರ ನಿಲಯೇಶ್ರೀನಿವಾಸನ ಸತಿಯೇ ಸಾಗರರಾಜನ ಸುತೆಯೇನಾರಿಯರೆಲ್ಲದು ಕೂಡಿ ಆರತಿ ಬೆಳಗುವೆವು ಪ ಬಿಳಿಯ ಪತ್ತಲವುಟ್ಟು ಕಡಗ ಕಂಕಣ ತೊಟ್ಟುಜಡೆಗೆ ಮಲ್ಲೆಯ ಮಾಲೆ ಮುಡಿದಾ ವರಮಹಾಲಕ್ಷ್ಮಿಗೆ 1 ಮರುಗ ಮಲ್ಲಿಗೆ ಜಾಜಿ ಪಾರಿಜಾತದ ಕುಸುಮಸಿರಿಯ ಚರಣಕೆ ಅರ್ಪಿಸಲೆಂದು ಜಯ ಜಯ ಜಯ 2 ಬಡವರಾ ಮನೆತನಕೆ ಅಭಿಮಾನವನ್ನಿಟ್ಟುನಿರುತ ಕಳಶದಿ ಕುಳಿತ ಮಹಾಲಕ್ಷ್ಮೀಗೆ ಹಾಡುತ ಪಾಡುವೆವು 3 ಇಂದು ನಮ್ಮ ಸದನಕ್ಕೆ ಬಾ ಎಂದುಗದುಗಿನ ವೀರನಾರಾಯಣನ ಅರಸಿಗೆ ಹಾಡುತ ಪಾಡುವೆವು 4
--------------
ವೀರನಾರಾಯಣ