ಒಟ್ಟು 355 ಕಡೆಗಳಲ್ಲಿ , 68 ದಾಸರು , 276 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವನೀತ ಕೃಷ್ಣನ ಪ ನೆನೆಯೋ ಗೋಪೀತನಯ ಕಂಸನ ಮನೆಯ ಕೊಂಡಾತನ ಅ ತರಳ - ಚೆಲುವ ಮುಂಗುರುಳಹುಲಿಯುಗುರ ಕೊರಳಉಂಗುರಗಳ ಬೆರಳಕಾಲಿಗೆ ಕಟ್ಟಣಳನಿಲುವುತಿಹ ದುರುಳತನದಲಿ ತುರುಗಳ ಕಾಯ್ದವನ 1 ವಿಷವನುಣಿಸಿ ತಲ್ಲಣಿಸುವಹುರಿತ ಸಹೊಸವ (ದುರಿತ ಸಹವಾಸವ ?)ಆದರಾವಿ ದಾಸವ (ಅದರ ವಿಲಾಸವ ?)ನೋಡಿದರೆ ಸಿಸುವಾಗಿಬಲು ಅಸುರರ ಗೆಲಿದವನ 2 ಸಲಯ ಕಾಳಿಂಗನತಲೆಪಿಡಿದ ಕಂಗೊಲೆಯಮೊರೆ ಕೇಳಿ ಬಲಿಯಅವನ ಕೋಮಲೆಯಕಿವಿಗೆ ಪೂಮಾಲೆಯಾದ ನೀಟುಗಾಯನೆಲೆಯಾದಿಕೇಶವನ 3
--------------
ಕನಕದಾಸ
ನವರತ್ನದ ಮಂಟಪದಿ ಮೆರೆವೊ ಸುಖಾಸನಕೆ ಈಗ ನವಮೋಹನ ರಘುರಾಮನೆ ನೀನು ಬಾ ಬೇಗ ಪ. ದಶರಥನುದರದಿ ಜನಿಸಿ ಅಸುರ ತಾಟಕಿಯನು ಸಂಹರಿಸಿ ಋಷಿಗಳ್ಯಾಗವ ಕಾಯ್ದದು ನೀನು ಋಷಿ ಪತ್ನಿಯರನು ಉದ್ಧರಿಸೀ ಪತಿವ್ರತೆಯೆನಿಸಿದ ಅತುಳ ಮಹಿಮ ಶ್ರೀರಾಮ ಬಾ ಬೇಗ ಅತುಳ ಮಹಿಮ ಶ್ರೀರಾಮ ಬಾ ಬೇಗ1 ಶಿವಧನುವೆತ್ತಿದ ಧೀರ ಸೀತಾದೇವಿಯ ಕರವನೆ ಪಿಡಿವಾ ತವಕದಿ ಮುರಿದಾಯೋಧ್ಯಯಾಳಿದ ಶ್ರೀ ಶ್ರೀನಿವಾಸನೆ ನೀನು ಬಾ ಬೇಗ ಸುಖಾಸನಕೆ 2
--------------
ಸರಸ್ವತಿ ಬಾಯಿ
ನಾಗವೇಣಿಯೆಂದರೆ ಹೀಗೇಕೆ ಮಾಳ್ಪಿರಿ ಬಾಗಿಲು ಕುಟ್ಟುವುದೇಕೆ ನೀವ್ ಪ ಬಾಗಿಲು ಬಿಡುವೊಡೆ ಹೇಗದು ಸಾಧ್ಯವೊ ಬೇಗ ಹೇಳು ನೀನಾರು ಇನ್ನು ಅ.ಪ. ಆಗಮ ಕದ್ದೊಯ್ದ ಅಸುರನ ಕೊಂದು ನಾ ನಾನಾಗಲೆ ನಾಲ್ಮೊಗಗಿತ್ತೆ ಕೇಳಿ ಆಗಲೆ ಆಗಮದಲಿ ನಿನಗರ್ತಿಯಷ್ಟಿದ್ದರೆ ಮೂಗನ್ಹಿಡಿದು ಕೂಡೋ ಬೇಗ 1 ಮೂಗನ್ಹಿಡಿವ ಒಣಯೋಗಿಯು ನಾನಲ್ಲ ಆ ಗಿರಿಯನು ನಾ ಪೊತ್ತೆ ಕೇಳಿ ಈಗ ನಾವರಿದೆವು ನೀ ಗಿರಿ ಹೊರವಡೆ ಇಂದು 2 ಕಳ್ಳನಲ್ಲ ಭೂಮಿ ಕಳ್ಳನ ಕೊಂದೆನೆ ಸೂಕರ ನಾನಾಗಿ ಕೇಳಿ ಘೊಳ್ಳನೆ ನಗುವರು ಕೇಳಿದವರು ಇದ ಮೆಲ್ಲು ಹೋಗಿ ನೀ ಮಣ್ಣ 3 ಮಣ್ಣು ಮಾತೇಕೆ ಹಿರಣ್ಯಕನನು ಕೊಂದೆ ಚಿಣ್ಣನ ಕಾಯ್ದೆನು ಕೇಳಿ ಚಿಣ್ಣರ ಸಾಕ್ಷಿಯ ಬಿಟ್ಟರೆ ನಿನಗಿಲ್ಲ ಚಿಣ್ಣನಾಗು ನೀ ಹೋಗÉೂ 4 ಸಣ್ಣವನಾದರೂ ಘನ್ನನು ನಾನಾದೆ ಪುಣ್ಯನದಿಯ ನಾ ಪೆತ್ತೆ ಕೇಳಿ ಬಿನ್ನಾಣ ಮಾತಿಗೆ ಸೋಲುವರಲ್ಲವೊ ಬೆನ್ನು ತಿರುಗಿಸಿ ನೀ ಪೋಗೊ5 ತಿರುಗಿಸಿದವನಲ್ಲ ಬೆನ್ನನೊಬ್ಬರಿಗೂ ನಾ ಪರಶುಧರನು ನಾ ಕೇಳಿ ಅರಸರಲ್ಲ ನಾವ್ ಸರಸಿಜನೇತ್ರೆಯರು ಕರುಣರಹಿತ ನೀ ಪೋಗೊ 6 ಚರಣರಜದಿ ನಾ ಶಿಲೆಯನುದ್ಧರಿಸಿದೆ ಕರುಣರಹಿತನೆ ಪೇಳಿ ನೀವು ಸರಸ ಮಾತುಗಳನು ಮನ್ನಿಸಿ ಎಮ್ಮನು ಕರಿಗಿರೀಶ ನೀ ಕಾಯೋ ಸ್ವಾಮಿ 7
--------------
ವರಾವಾಣಿರಾಮರಾಯದಾಸರು
ನಾರದ ದೇವಋಷಿಗಳ ನೋಡಿದೆ ಹರಿಪಾದ ಸೇವಕರ ಕೊಂಡಾಡಿದೆ ದೇವಋಷಿ ಹರಿಪಾದ ಸೇವಕರು ನಮ್ಮಾ ್ವಸು- ದೇವಸುತನಂಕದಲ್ಲುದಿಸಿದುತ್ತಮರಿವರು ಪ ವಾಣಿಪತಿಪಿತನ ಚರಣಾಂಬುಜ ಸೇವೆ ಮಾಡೋ ಜನರಲ್ಲೆ ಕರುಣ ಜಾಣ ನಾರಂದ ಜಗದೀಶನ ಗುಣಮಹಿಮೆ ವೀಣಾಪಾಣಿಗಳಿಂದ ಸ್ತುತಿಸಿ ಕೊಂಡಾಡುವರು 1 ಪ್ರೀತಿಯಿಂದ್ಹರಿಯ ನೋಡಿ ಸುರಪಾರಿ- ಜಾತವನು ತಂದು ನೀಡಿ ಮಾತುಳಾಂತಕನ ಮಡದಿ(ಯ)ರಿಗೆ ಕಲಹವನ್ಹೂಡಿ ಭೂತಳಕೆ ಸುರತರುವ ತರಿಸಿದರ್ಹರಿಕರಗಳಿಂದ2 ದಾಸಿಯಲ್ಲುದಿಸಿ ವಿಷಯಗಳು- ದಾಶ(ಸೀ?)ನವ ಮಾಡಿ ಬ್ಯಾಗ ಅಸುರಾಂತಕನ ಅತಿಭಕ್ತಿಯಿಂದಲಿ ಭಜಿಸಿ ಭೀ- ಮೇಶಕೃಷ್ಣನ ಗುಣವ ಪಾಡಿ ಕೊಂಡಾಡುವರು3
--------------
ಹರಪನಹಳ್ಳಿಭೀಮವ್ವ
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ಲಕ್ಷುಮಿ ಅರಸನೇ ಪ. ನಾರಾಯಣ ಲಕ್ಷುಮಿಅರಸನೆ ಹಯವದನ ಸ್ವಾಮಿ ನೀ ಒಲಿದು ದಯವಾಗು ಅ.ಪ. ಕೊಂಡ ಕ್ರೋಧವೆಂಬ ಕನ್ನಡಿ (ಕೆಂಗಿಡಿ?) ಲೋಭಮೋಹಗಳನುವಾದೊ ಲೋಭಮೋಹಗಳನುವಾದೊ ಹಯವದನ ಸ್ವಾಮಿ ನೀ ಒಲಿದು ದಯವಾಗು 1 ಮನುಗಳ ಕಾಲದಲ್ಲಿ ಜಲದೊಳಗವತರಿಸಿ ಜಗವೇಳು ಧರೆಯ ನೆಗಹಿದೆ ಜಗವೇಳು ಧರೆಯ ನೆಗಹಿದೆ ಹಯವದನ ಮತ್ಸ್ಯವತಾರ ದಯವಾಗು 2 ಕೂರ್ಮಾವತಾರದಲಿ ಭೂಮಿಯ ನೆಗಹಿದೆ ಕೂಡೆ ಸಜ್ಜನರ ಸಲಹಿದೆ ಕೂಡೆ ಸಜ್ಜನರ ಸಲಹಿದೆ ಹಯವದನ ಕೂರ್ಮಾವತಾರ ದಯವಾಗು 3 ದುರುಳ ದಾನವಗಂಜಿ ಕೋರೆದಾಡೆಯಲಿ ನೆಗಹಿದೆ ಕೋರೆದಾಡೆಯಲಿ ನೆಗಹಿದೆ ಹಯವದನ ವರಾಹಾವತಾರ ದಯವಾಗು 4 ಸೊಕ್ಕಿದ ಅಸುರನ ಕರುಳ ಕುಕ್ಕಿ ಮಾಲೆಯ ಮಾಡಿ ಭಕ್ತನಿಗಭಯ ಸಲಿಸಿದೆ ಭಕ್ತನಿಗಭಯ ಸಲಿಸಿದೆ ಹಯವದನ ಅಪ್ಪ ನರಸಿಂಹ ದಯವಾಗು 5 ವಾಮನನಾಗಿ ನೀ ಭೂಮಿದಾನವ ಬೇಡಿ ಭೂಮಿ ಪಾದದಲಿ ಅಳೆದೆಯೊ ಭೂಮಿ ಪಾದದಲಿ ಅಳೆದೆಯೊ ಹಯವದನ ವಾಮನಾವತಾರ ದಯವಾಗು 6 ಹೆತ್ತವಳ ಶಿರ ಕಡಿದು ಕ್ಷತ್ರಿಯಕುಲ ಸವರಿ ಮತ್ತೆ ಕೊಡಲಿಯ ಪಿಡಿದೆಯೊ ಮತ್ತೆ ಕೊಡಲಿಯ ಪಿಡಿದೆಯೊ ಹಯವದನ ಅಪ್ಪ ಭಾರ್ಗವನೆ ದಯವಾಗು 7 ಸೀತೆಗೋಸ್ಕರವಾಗಿ ಸೇತುವೆ ಕಟ್ಟಿಸಿದೆ ಪಾತಕಿ ರಾವಣನ ಮಡುಹಿದೆ ಪಾತಕಿ ರಾವಣನ ಮಡುಹಿದೆ ಹಯವದನ ಖ್ಯಾತ ರಘುನಾಥ ದಯವಾಗು 8 ಕೃಷ್ಣಾವತಾರದಲಿ ದುಷ್ಟಕಂಸನ ಕೊಂದೆ ಹೆತ್ತವಳ ಬಂಧನ ಬಿಡಿಸಿದೆ ಹೆತ್ತವಳ ಬಂಧನ ಬಿಡಿಸಿದೆ ಹಯವದನ ಕೃಷ್ಣಾವತಾರ ದಯವಾಗು 9 ಉತ್ತಮ ಸತಿಯರ ಹೆಚ್ಚಿನ ವ್ರತ ಸವರಿ ಮತ್ತೆ ಹಯವೇರಿ ಮೆರೆದೆಯೊ ಮತ್ತೆ ಹಯವೇರಿ ಮೆರೆದೆಯೊ ಹಯ[ವದನ ಉತ್ತಮ ಬೌದ್ಧ ಕಲ್ಕಿ ದಯವಾಗು] 10 ಅಂಗಜನಯ್ಯನೆ ಮಂಗಳಮಹಿಮನೆ ಗಂಗೆಯ ಪೆತ್ತ ಗರುವನೆ ಗಂಗೆಯ ಪೆತ್ತ ಗರುವನೆ ಹಯವದನ ಮಂಗಳ ಮಹಿಮ ದಯವಾಗು 11 ವಾದಿರಾಜರಿಗೊಲಿದೆ ಸ್ವಾದೆಪುರದಲಿ ನಿಂತೆ ವೇದಾಂತ ಕಥೆಯ ಹರಹಿದೆ ವೇದಾಂತ ಕಥೆಯ ಹರಹಿದೆ ಹಯವದನ ವೇದಮೂರುತಿಯೆ ದಯವಾಗು 12
--------------
ವಾದಿರಾಜ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣ ಹರಿ ಗೋವಿಂದ ಪ ಸಿರಿಯು ಸಹಿತ ಮೆರೆದಿರುವ ಜಗದ್ಗುರು ಅ.ಪ ಇತ್ತು ವೇದವ ಶತಧೃತಿಯನೆ ಸಲಹಿದೆ 1 ಸುರಿ ಸುರಿದಮೃತವ ದಿವಿಜರಿಗುಣಿಸಿದೆ 2 ಲೋಕೇಶನ ನಾಸಿಕದೊಳಗುದಿಸುತ | ಜೋಕೆಯಿಂದ ತ್ರೈಜಗವನು ಸಲಹಿದೆ 3 ಕುಂಭಿನಿಯೊಳು ನರಹರಿಯೆಂದೆನಿಸಿದೆ 4 ಒಲಿದು ತ್ರಿವಿಕ್ರಮ ವಾಮನನೆನಿಸಿದೆ5 ಅಮಿತ ಪರಾಕ್ರಮಿ ಭಾರ್ಗವನೆನಿಸಿದೆ 6 ಶಶಿಮುಖಿ ಸೀತಾರಾಮನೆಂದೆನಿಸಿದೆ 7 ಅಸುರಾಂತಕ ಶ್ರೀಕೃಷ್ಣನೆಂದೆನಿಸಿದೆ 8 ಅಪರಿಮಿತ ಮಹಿಮ ಬುದ್ಧನೆಂದೆನಿಸಿದೆ 9 ಸಾಸಿರ ನಾಮನೆ ಕ(ಲ್ಕಿ)ಯೆಂದೆನಿಸಿದೆ 10 ಹೃತ್ಕಮಲೇಶ ಸದಾನಂದನೆನಿಸಿದೆ 11
--------------
ಸದಾನಂದರು
ನಿಂದೆ ಮಾಡುವಿ ಯಾತಕೋ | ಮಂದಮಾನವ ಶ್ರೀಗೋವಿಂದ ದಾಸಾರ್ಯರನ್ನ ಎಂದೆಂದಿಗೀಮಾತು | ಇಂದಿರೇಶನ ಭಕುತ ವೃಂದ ಮೆಚ್ಚುವದಿಲ್ಲವೋ ಮೂಢ ಪ ಬಾಲತನದಾರಭ್ಯ ಶೀಲ ಸದ್ಭಕುತಿಯಲಿ ತಾಳ ತಂಬೂರಿ ಪಿಡೆದು | ಶ್ರೀಲೋಲ ಹರಿನಾಮ ಹೇಳುತಲಿ ಸತತ | ಗೋಪಾಳ ವೃತ್ತಿಯ ಮಾಡಿ ಕಾಲವನು ಕಳೆದವರು 1 ಕುಸುಮಶರನಟ್ಟುಳಿಗೆ ವಶವಾಗದಿರಿ ಎಂದು ಉಸುರುತಲಿ ಶಿಷ್ಯಗಣಕೆ | ಅಸುರಾರಿ ಮಹಿಮೆಯನು ರಸವತ್ ಕವಿತೆಯಲಿಂದ ನಿಶಿ ಹಗಲು ವರ್ಣಿಸಿದ ಅಸಿಫ್ಯಾಳು ನಿಲಯರನು 2 ಕ್ಲೇಶ ಸುಖ ಸಮ ತಿಳಿದು ಲೇಸಾಗಿ ಗುರುಸೇವೆಗೈದು ವಾಸಸ್ಥಾನಕೆ ತೆರಳಿದೀ ಸುಗುಣರನು ವ್ಯರ್ಥ ನಿಂದೆ ಮಾಡುವಿ ಯಾಕೋ 3
--------------
ಶಾಮಸುಂದರ ವಿಠಲ
ನಿದ್ರೆಮಾಡಿದ ರಂಗ ನಿದ್ರೆಮಾಡಿದ ಭದ್ರಹಾಸಿಗೆ ಮೇಲೆ ಸಮುದ್ರರಾಜನ ಮಗಳ ಸಹಿತ ಪ. ವೇದಕದ್ದ ಅಸುರನಿಗಾಗಿ ಆ ಮತ್ಸ್ಯರೂಪವ ಧರಿಸಿ ಸಾಧಿಸಿ ಅಸುರನ ಕೊಂದ ವಾರಿಜಾಕ್ಷ ಬಳಲಿ ಬಂದು 1 ತರಳ ಹಿರಣ್ಯಕಶ್ಯಪನ ಕರುಳ ಬಗೆದು ಕೊರಳೊಳಿಟ್ಟು ನರಮೃಗ ರೂಪವ ತಾಳಿ ನರಸಿಂಹ ಬಳಲಿ ಬಂದು 2 ಬಲಿಯ ದಾನವನ್ನೆ ಬೇಡಿ ನೆಲನ ಮೂರಡಿ ಮಾಡಿ ಒಲಿದು ಬಾಗಿಲನ್ನೆ ಕಾಯ್ದ ವಾಮನನಾದ ಬಳಲಿ ಬಂದು 3 ತÀಂದೆಯ ಮಾತನ್ನೆ ಕೇಳಿ ತಾಯಿ ಶಿರವನ್ನೆ ಅಳಿದು ಏಳುಮೂರು ಬಾರಿ ನೀನು ಭೂಮಿಯ ಪ್ರದಕ್ಷಣೆಮಾಡಿ 4 ಸೀತೆಗಾಗಿ ಪಡೆಯ ಸವರಿ ಸೇತುಬಂಧನವ ಮಾಡಿ ದೂತರಾವಣನ್ನ ಕೊಂದು ಸೀತಾರಾಮ ಬಳಲಿ ಬಂದು 5 ಗೋಕುಲದಲ್ಲಿ ಹುಟ್ಟಿ ಗೋವುಗಳನ್ನೆಲ್ಲ ಕಾಯ್ದು ಗೋಪಸ್ತ್ರೀಯರ ಸೀರೆ ಸೆಳೆದು ಗೋಪಾಲಕೃಷ್ಣ ಬಳಲಿ ಬಂದು 6 ಬತ್ತಲೆ ಕುದುರೆಯನೇರಿ ಮತ್ತೆ ತೇಜಿಯನ್ನೆ ನಡೆಸಿ ಹತ್ತಾವತಾರವ ತಾಳಿ ಮತ್ತೆ ಕಲ್ಕಿರೂಪನಾÀಗಿ 7 ಧರೆಯೊಳತ್ಯಧಿಕವಾದ ಶ್ರೀರಂಗಪಟ್ಟಣದಿ ನೆಲೆಸಿ ಕರುಣದಿಂದ ಭಕ್ತರನ್ನು ಸಲಹಬೇಕು ಹಯವದನನೆ 8
--------------
ವಾದಿರಾಜ
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು
ನೀನಲ್ಲದಲೆ ಇನ್ನು ನಾನಾರ ಕೂಗಲೊ ಮಾನನಿಧಿ ಗೋಪಾಲ ಶ್ರೀನಿಧಿಯೇ ಪ. ಶ್ರೀನಿವಾಸನೆ ಎನ್ನ ನಾನಾ ಪರಿಯ ಕಷ್ಟ ನೀನೆ ಬಿಡಿಸಿ ಸಲಹೊ ಮಾನಾಭಿಮಾನದೊಡೆಯ ಅ.ಪ. ಕಡುಕೋಪದಿಂ ಖಳನು ಹುಡುಗನ ಬಾಧಿಸೆ ದೃಢ ಭಕ್ತಿಯಿಂದ ನಿನ್ನಡಿಯ ಭಜಿಸೆ ಕೆಡಹಿ ಅಸುರನ ಕೊಂದು ಒಡನೆ ಭಕ್ತನ ಕಾಯ್ದೆ 1 ತೊಡೆಯನೇರಲು ಬರೆ ಜಡಿದು ನೂಕಲು ತಾಯಿ ಒಡನೆ ಮನದಿ ನೊಂದು ಪೊಡಮಡುತ ಅಡವಿ ಅಡವಿ ತಿರುಗಿ ದೃಢದಿ ಭಜಿಸೆ ಧ್ರುವ ಒಡನೆ ಓಡಿ ಬಂದು ದೃಢಪಟ್ಟ ಕೊಡಲಿಲ್ಲೆ 2 ಕರಿ ಕರೆಯೆ ತಡೆಯದೆ ಸಲಹಿದ ಪೊಡವೀಶ ನೀನಲ್ಲೆ ಕಡುಕರುಣಿ ಬಡವಗೆ ಸಿರಿಯಿತ್ತೆ ಮಡದಿಗಕ್ಷಯವಿತ್ತೆ ಕಡುದ್ರೋಹಿಗಳ ಕೊಲಿಸಿ ಒಡನೆ ಐವರ ಕಾಯ್ದೆ3 ಚಿನುಮಯ ಗುಣಪೂರ್ಣ ಅಣು ಮಹತ್ ಅಂತರಾತ್ಮ ಎಣಿಸಲಾಹೊದೆ ನಿನ್ನ ಘನ ಮಹಿಮೆ ಮನಸಿಜಪಿತ ಸರ್ವ ಮನನಿಯಾಮಕ ಹರಿ ಮನದಲ್ಲಿ ನೀ ನಿಲ್ಲೊ 4 ಶ್ರೀಪದ್ಮಭವನುತ ನಾ ಪಾಮರಾಳಿಹೆ ಗೋಪಾಲಕೃಷ್ಣವಿಠಲ ಶ್ರೀಪತಿಯೆ ನೀ ಪಾರು ಮಾಡದೆ ಕಾಪಾಡುವವರ್ಯಾರೊ ತಾಪ ಬಿಡಿಸಿ ಸಲಹೋ5
--------------
ಅಂಬಾಬಾಯಿ
ನೋಡಮ್ಮಾ ಶ್ರೀ ವಾಸುದೇವನಾ ನಮ್ಮ ಬೇಡಿದಿಷ್ಟಾರ್ಧವ ನೀವನಾ ಪ ಪರ ಬ್ರಹ್ಮ ರೂಢಿಗೆ ನರಲೀಲೆಯಾಡುವ ಬಗೆಯಾಅ.ಪ ದೇವರ ಅನುಮತ ನೋಡಿದಾ ಅಂವ ದೇವಕಿ ಉದರದಿ ಮೂಡಿದಾ ಪಾವನ ಗೋಕುಲ ಮಾಡಿದಾ ಸುಖ ದೇವಿ ಯಶೋದೆಗೆ ನೀಡಿದಾ ಆವಾವ ಪರಿಯಲಿ ನೋವ ಬಗೆಯ ಬಂದು ಗಾಲಿಲ ಅಸುರರ ಜೀವನ ವಳಿದಾ 1 ಗೊಲ್ಲತೆಯರ ಮನಮೋಹಿಸಿ ಕದ್ದು ಅಲ್ಲಿಹ ಪಾಲ್ಬಣ್ಣೆ ಸೇವಿಸಿ ಬಿಲ್ಲ ಹಬ್ಬದ ನೆವತೋರಿಸಿ ಪೋಗಿ ಮಲ್ಲಚಾಣರರಾ ಭಂಗಿಸೀ ಬಲ್ಲಿದ ಕಂಸನ ಮಲ್ಲಯದ್ಧಗಳಿಂದ ಘಲ್ಲಿಸಿದನು ಜನಚಲ್ಲಿ ಬಡಿದನಾ 2 ನೀರೊಳು ಕಟ್ಟಿಸಿ ಮನೆಯನು ಬಂಗಾರದ ದ್ವಾರಕಾ ಪುರವನು ಸೇರಿಸಿ ಯದುಕುಲದವರನು ರುಕ್ಮಿ ಣೀ ರಮಣಲ್ಲಿಗೆ ಮರೆದನು ಸಾರಿದ ಶರಣರಾ ತಾರಿಸಿ ಹೋದನು ಮಹಿಪತಿ ನಂದನ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪರಮ ದಯಾಕರನೇ ಗೌರೀಸುತನೇ ಪರಿಪರಿಯಿಂದಲಿ ಪಾಲಿಸು ಯೆನ್ನನು ಪ ಸಿದ್ಧಿವಿನಾಯಕ ವಿದ್ಯಾಪ್ರದಾಯಕ ಸದ್ಬುದ್ಧಿಯ ಕೊಡು ಮೋದಕಪ್ರಿಯನೆ1 ಮೂಷಕವಾಹನ ದೋಷರಹಿತನೇ ಅಸುರನಾಶ ಸರ್ಪಾಕಟಿಸೂತ್ರನೇ 2 ಜಾನಕೀರಮಣ ಶ್ರೀ ಹನುಮೇಶವಿಠಲನ ಅನುದಿನ 3
--------------
ಹನುಮೇಶವಿಠಲ
ಪರಮಯೋಗಿಯ ನೋಡಿರೊ ನೀವೆಲ್ಲರು | ಪರಮಯೋಗಿಯ ನೋಡಿರೊ || ಪರಮಯೋಗಿಯ ನೋಡಿ ಪ್ರೀತಿವಂತರಾಗಿ | ನಿರಯವ ಕಳೆದು ಆನಂದ ಬೇಡುವರೆಲ್ಲ ಪ ವಾನರ ವೇಷವಾಗಿ ಪರ್ವತ ಸೇರಿದಾ | ಭಾನುನಂದನ ಮನೋಬಯಕಿಯ ಸಲ್ಲಿಸಿ || ಏನೆಂಬೆ ಬಲು ಒಂದು ರೂಪವಾಗಿ ತೋರಿ | ತಾನೆ ತನ್ನೊಳಗೆದ್ದು ದುರುಳರ ಮೋಹಿಸಿದಾ 1 ವಿಷವನುಂಡು ಮೂರು ಲೋಕದೊಳಗೆ ಮೆರೆದು | ಅಸುರ ಬಕನ ಸೀಳಿ ಧರಿಗೆ ಬಿಸುಟು | ಶಶಿಮುಖಿಯಳ ಪ್ರೀತಿಬಡಿಸಿ ಅರ್ಜುನಗೊಲಿದು | ಶಶಿಕುಲದಲಿ ಪುಟ್ಟಿ ದುರ್ಜನ ಸಂತಾಪಬಡಿಸಿ2 ಯತಿಯಾಗಿ ಜನಿಸಿ ಸುವಾಕ್ಯವ ಬಯಸಿ | ಮತಿಹೀನ ಜನರ ಶಾಸ್ತ್ರವ ಖಂಡಿಸಿ || ತುತಿಸಿದ ಭಕ್ತರ್ಗೆ ಗತಿಯ ಕೊಡುವ ಪ್ರಾಣ- ನಿತ್ಯ ಪರಮ 3
--------------
ವಿಜಯದಾಸ
ಪರಿಪಾಲಿಸುವುದು ಎಮ್ಮನು ಪರಮಾತ್ಮನ ರಾಣಿ ಕರುಣಾಕರನ ಪಾದಸ್ಮರಣೆಯನೆ ಕೊಟ್ಟು ಪ ಅಮರೇಶ ವಂದ್ಯಳೆ ಕಮಲಾಲಯೆ ನೀಬಂದು ಶ್ರಮವಿಲ್ಲದೆಯನ್ನೆಯ ಮಮತೆಯನು ಬಿಡಿಸು 1 ವಸುದೇವಸುತನ ರಾಣಿ ಅಸುರ ಸಂಹಾರಳೇ ನಿನ್ನ ವಶವಾದ ಮೇಲೆ ಅಂಭ್ರಣಿಯೆ ನಸುನಗುತ ಈಗ 2 ಮಂದರೋದ್ಧಾರಎನ್ನ ಸಂದುಸಂದಲಿ ಕಾರ್ಯವ ನಿಂದುಮಾಡಿಸುವಂಥದನ್ನು ಚಂದದೀಬೋಧವಕೊಟ್ಟು 3 ಮಂಗಳಾಂಗಿಯೆ ನಿನ್ನ ಮುಂಗಾಣದೆಸೊರಗಿದೆ ಅಂಗಜಪಿತನ ಜಾಯೇ ಭಂಗಪಡಿಸದೆಬೇಗಾ 4 ಪದ್ಮಸಂಭವನಮಾತೆ ಮುದ್ದುಮೋಹನವಿಠಲ ಪದ ಪದ್ಮಗಳನೀನೊಲಿದು ಹೃತ್ಪದ್ಮದಲಿ ಕಾಣಿಸುತ 5
--------------
ಮುದ್ದುಮೋಹನವಿಠಲದಾಸರು