ಒಟ್ಟು 4113 ಕಡೆಗಳಲ್ಲಿ , 125 ದಾಸರು , 2499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಜಗನ್ನಾಥದಾಸರು) ಇಂದು ಪ ಕಂಗಳ ಧಣಿ ರಂಗವೊಲಿದ ಮಹಾತ್ಮರ ಅ.ಪ ದ್ವಾಪರದಲ್ಲಿಯ ಶಲ್ಯರು ಇವರಂತೆ ತಪಸಿ ಪ್ರಹ್ಲಾದನ ಅನುಜರು ಇವರಂತೆ ಕಪಟರಹಿತ ಕಲ್ಕೀರ ಭೂಪನ ರೂಪರೇಶೆಯ ನಿರ್ಮಿಸಿ ಮೆರೆದವರ 1 ಎಂಥ ಪುಣ್ಯವಂತರು ನಮ್ಮ ಹಿರಿಯರು ಇಂಥ ಮಹಾತ್ಮರ ಸೇವಿಸಿ ಬದುಕಲು ನಿಂತು ಮನದಿ ಇವರ ನಾಮ ಭ್ರಾಂತಿಯಾಗಲು ಸಂತೋಷದಿ ಶಾಂತ ಹೊಳೆ ಹರಿಸುವರನು 2 ಶಿಷ್ಟ ಸದಾಚಾರ ಸೃಷ್ಟಿಸಿ ಜಗದಲಿ ಶ್ರೇಷ್ಠ ದಾಸರೆಂದು ಖ್ಯಾತರಾಗಿಹರ ಅಷ್ಟಮಾಂಗ ಸಾಷ್ಟಾಂಗದಿ ಎರಗಲು ಸೃಷ್ಟೀಶ ಸಿರಿವತ್ಸಾಂಕಿತನ ತೋರ್ಪರ 3
--------------
ಸಿರಿವತ್ಸಾಂಕಿತರು
(ಪೆರ್ಡೂರು ಶ್ರೀ ಅನಂತಪದ್ಮನಾಭ) ಪದ್ಮನಾಭ ಚರಣವೆನ್ನ ಶಿರದೊಳಿಟ್ಟು ಪಾಲಿಸು ಮಾತ ಲಾಲಿಸು ಪ. ಆದಿಭೌತಿಕಾದಿ ನಾನಾ ಬಾಧೆಯಿಂದ ಬಳಲಿ ಬಹಳ ನೊಂದೆನು ಇಲ್ಲಿ ಬಂದೆನು ಮೂರ್ತಿ ನಿನ್ನ ಕರುಣವಾಗಲೆಂದು ಕೈಯ್ಯ ಮುಗಿದು ಬೇಡುವೆ ಮಹಿಮೆ ಪಾಡುವೆ ಕಾದರೊಳ್ಳಿತಿನ್ನು ನಿನ್ನ ಪಾದಸೇವೆ ಮಾಳ್ಪುದನ್ನು ಮಾಧವ ಮಛ್ಛಾದಿರೂಪ 1 ದುರುಳ ಭಾವವನ್ನು ಬಿಡಿಸಿ ಸಲಹಿನ್ನು ಕೊಟ್ಟು ಫಲವನ್ನ ಒರಳಿನಲ್ಲಿ ಕೊರಳ ಸಿಕ್ಕಿ ನರಳುವಂತಾಗಿರುವ ಕಷ್ಟ ಪರಿಯಾಯ ಸ್ವಾಮಿಯರಿಯೆಯ ಶರಣು ಶರಣು ಎಂದು ಮುಂದೆ ಹೊರಳಿ ಬೇಡಿಕೊಂಡು ನಿಂದೆ ಚರಣ ಪದ್ಮದಾಸರನ್ನು ಮರಿಯದೆ ಮಾನಿಸುವ ತಂದೆ 2 ರಾಜಕದಳಿಮಾಲಿಕಾ ವಿರಾಜಕಂಠ ಭಕ್ತ ಕಲ್ಪ ಭೂಜನೆ ರಾಜ ರಾಜನೆ ಮೂಜಗನ್ನಿವಾಸ ಪೂರ್ಣ ರಾಜರಂತರಾತ್ಮ ವ್ಯಸನ ರಾಜಿಯ ಕಡಿಸು ಬೋ ಜೀಯಾ ಈ ಜಗತ್ತಿನಲ್ಲಿ ನಿನ್ನ ಸೋಜಿಗವನರಿವರುಂಟೆ ತೇಜದಾಯಿ ವೆಂಕಟಾದ್ರಿ ರಾಜನೀನೆಂದರಿದೆ ನಿಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಬ್ರಹ್ಮಾಂಡ ಪುರಾಣದ ಕರುಣಾಕರ ಸ್ತೋತ್ರದ ಅನುವಾದ) ಶ್ರೀ ರಮಣನೆ ನಮೋ ಎಂದು ನುತಿ ಪೇಳ್ವೆನಿಂದು ಪ. ನಿನ್ನನು ದೂಡದಿರನ್ಯರ ಬಳಿಗೆ ಪಾದ ಕಾಪಾಡು ದೇಹವ ದಾಢ್ರ್ಯದೊಳಗೆ 1 ಈಶನು ನೀ ಎನಗೆಂದಿಗು ನಿನ್ನ ದಾಸನಾದುದರಿಂದ ಪೋಷಕರನು ಕೃಪೆಯಿಂದ 2 ಎನ್ನ ಭರಣಕನ್ಯರಸಡ್ಯೆಯೇನು ಕಂಬುರುಹಾಕ್ಷಾಶ್ರಿತ ಕಾಮಧೇನು 3 ಫಣಿರಾಜಶಯನ ಶ್ರೀಕಾಂತ ಎನಗೆ ಸಿದ್ಧಾಂತ 4 ಕಲ್ಕಿರುವ ಸ್ವಾಪಲ್ಕಿವರದ ನಿನ್ನ ಶುಲ್ಕದಾಸಗೆ ಭಯವಿಲ್ಲ ಫಲ್ಕಸ ಪಾವನ ಮನದಿ ನೀಯಿರಲನ್ಯ ಕಲ್ಕಗಳುಂಟೆ ಭೂನಲ್ಲ 5 ಹೆಚ್ಚಾದರ್ಥಗಳುಂಟೆ ಪೇಳು ತಡಮಾಳ್ಪದಾಶ್ಚರ್ಯ ಕೇಳು ದಯಾಳು 6 ತಾಯೆ ತನ್ನಣುಗಗೆ ಗರವನಿಕ್ಕೆ ಬೇರೆ ಕಾಯುವರುಂಟೆ ಬೇಗದಲಿ ಲೋಕದಲಿ 7 ದಾತ ಪರಿತ್ರಾತ ಜ್ಞಾತದಯಾನ್ವಿತನೆಂದು ಪಾಲಿಸು ಗುಣಸಿಂಧು 8 ನೀ ನಿರ್ವಹಿಸುವಿಯೆಂದು ತಿಳಿದೆ ಎನ್ನಯ ವಾರ್ತೆಗೊಳದೆ9 ನೀ ಬಿಡದಿರು ಹರಿಯೆ ಸರ್ವಾರ್ಥದಾಯಕ ಎನ್ನ ದೊರೆಯೆ 10 ಎಂದು ಪೇಳ್ದೆದು ಶ್ರುತಿ ನಿಂದು ಭವ ಬೇಗ ಓಡಿ ಬಂದು 11 ಎನ್ನೊಳ್ಯಾಕೆ ನಿರ್ದಯವು ಬೇಗ ಪರಿಹರಿಸಾಧ್ಯಾತ್ಮಿಕಾರ್ತಿ 12 ಶಕುತಿಯದ್ಭುತವಲ್ಲ ಸ್ವಾಮಿ ಬಹುದು ಸುಪ್ರೇಮಿ 13 ಪಂಡಿತಜನರು ಲೋಕದಲಿ ಪುಂಡರೀಕಾಕ್ಷ ನೀನರಿವಿ 14 ದಯೆದೋರು ಭೃಂಗಾಳಕಾಂತ ದಿನಕಾಂತ ದಯೆದೋರೊ ಬೇಗ ನಿಶ್ಚಿಂತಾ 15 ಕರಗಳ ಮುಗಿದು ಸ್ವೀಕರಿಪುದು ಬುಧುರರಿದು. 16
--------------
ತುಪಾಕಿ ವೆಂಕಟರಮಣಾಚಾರ್ಯ
(ಭಕ್ತಿ ಎಂಬ ಸ್ತ್ರೀಯ ವರ್ಣನೆ) ಸೇರಿರೊ ನವ ನಾರಿಕುಂಜರನನ್ನು ಧೀರಲಕ್ಷ್ಮೀವರನು ಮಂಟಪವೇರಿ ಮುಂದಕೆ ಬರುವನು ಪ. ಶ್ರವಣ ಕೀರ್ತನ ಸ್ಮರಣ ಸೇವನ ಪೂಜ ಪ್ರ- ಣವ ದಾಸ್ಯ ಸಖತ್ವ ಸರ್ವವ ವಹಿಪ ನವವಿಧ ಭಕುತಿಯ1 ದೂರ ನಿಂತರೆ ತೋರದು ಸರಿಯಾಗಿ ಸಾರಗೈಯಲು ಸಾಧನೆಗಳಿಂದಾರು ಮೂರಾಗಿರುವುದು 2 ಜೋಲುವಾ ಸೊಂಡಿಲೆಂಬುದೆ ಸುಜ್ಞಾನ ಕಾಲುಗಳೆ ಪುರುಷಾರ್ಥವೆನಿಪವು ಬಾಲ ಸದ್ಗುಣಭಾವವು 3 ಭಕ್ತಿ ಭುಕ್ತಿಗಳೆರಡು ನೇತ್ರಗಳು ವಿ- ರಕ್ತಿಯುದರವು ವಿಷ್ಣು ಗಾಥಾಸಕ್ತಿ ಸಕಲೇಂದ್ರಿಯಗಳು 4 ನಿತ್ಯ ನಿರ್ಮಲ ಚರಿತ ಲಕ್ಷ್ಮೀಶನ ಭೃತ್ಯಪಾದ ರಜಸ್ಸಮೂಹವನೆತ್ತಿ ನಾಲ್ದೆಸೆ ಸುರಿವದು 5 ಹತ್ತಿರೆಂದಿಗು ಸೇರಲೀಯದು ದು- ದುರಿತ ಕೂಪದಿ ಒತ್ತಿ ಕೆಡುಹುವ ವಹಿಲವು 6 ಛಲಕೆ ಮೆಚ್ಚುತ ನಲಿವುದು ಮನದಲಿ ಚೆಲುವ ಶೇಷಗಿರೀಂದ್ರನಾಥನ ವಲಿಸಿ ಕೊಂಡಿಲ್ಲಿಳಿವುದು 7
--------------
ತುಪಾಕಿ ವೆಂಕಟರಮಣಾಚಾರ್ಯ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಮೂಲ್ಕಿಯ ನರಸಿಂಹದೇವರು) ಜಯತು ಜಯತು ನೃಹರಿ ಬ್ರಹ್ಮಾದಿನಿರ್ಜರ ಜಯತು ಜಾತಕೈವಾರಿ ಪ. ಜಯ ನಮೋ ಜಗದಾದಿಮಾಯಾ ಶ್ರಯ ಚರಿತ್ರ ಪವಿತ್ರ ವಿಗತಾ- ಮಯ ಸದಾನಂದೈಕನಿಧಿ ಚಿ- ನ್ಮಯ ದಯಾರ್ಣವ ಭಯನಿವಾರಣ ಅ.ಪ. ಸುಕುಮಾರ ಪ್ರಹ್ಲಾದನ ಬಾಧಿಸೆ ಭಯಾ- ನಕ ರೂಪ ತಾಳ್ದಾಕ್ಷಣ ಸಕಲ ಲೋಕಾಲೋಕಭೀಷಣ ಪ್ರಕಟನಖಮುಖ ಕ್ರೋಧವಾಹಿನಿ ಪ್ರಖರ ಜ್ವಾಲಾಮಾಲ ಬದ್ಧ- ಭ್ರಕುಟಿ ಲಾಲಿತ ಭಕುತ ವತ್ಸಲ 1 ಪಾರಮೇಷ್ಠಿ ರುದ್ರರೇ ಮುಖ್ಯಸ್ಥ ವೃಂ- ದಾರಕಋಷಿವರರೇ ವೀರಭದ್ರ ಸುಭದ್ರ ನಂದಿ ಪ್ರ- ವೀರ ಭೈರವ ಭೃಂಗಿ ಮುಖ್ಯರು ಶ್ರೀರಮಣ ಕುರು ಕರುಣ ಪಾರಾ- ವಾರಸಮ ಗಂಭೀರನೆಂಬರು 2 ಶಾಂತವಾಗದು ಕ್ರೋಧ ಮಾಡಿದುದಾ- ನಂತ ಸಂಕ್ಯಾಪರಾಧಾ ಎಂತು ನಿರ್ವೃತಿ ಎಂದು ಚಿಂತಾ- ಕ್ರಾಂತರಾಗಿ ಪಿತಾಮಹಾದ್ಯರು ಕಂತುಜನನಿಯ ಬೇಡಿಕೊಳಲ- ತ್ಯಂತ ಹರುಷವನಾಂತು ಬಂದಳು 3 ಪಟ್ಟದರಸನರೂಪ ಕಾಣುತ ಭಯ- ಪಟ್ಟಳಪೂರ್ವಕೋಪ ಶ್ರೇಷ್ಠಭಕ್ತಶಿಖಾಮಣಿಯ ಮುಂ- ದಿಟ್ಟೆರಗಿ ಸಂಸ್ತುತಿಸೆ ದನುಜಘ- ರಟ್ಟ ಹೃದಯನಿವಿಷ್ಟ ಕರುಣಾ- ದೃಷ್ಟಿಯಿಂದ ಸಂತುಷ್ಟಗೊಳಿಸಿದ 4 ಶ್ರೀ ಲಕ್ಷ್ಮೀನಾರಾಯಣ ದೈತ್ಯೇಂದ್ರ ಹೃ- ಚ್ಛೂಲ ಅಖಿಲ ಕಾರಣ ಕಾಲಕಾಲಾಂತಕ ತಮಾಲ ಸು- ನೀಲನಿಭ ನಿತ್ಯಾತ್ಮ ಸುರಮುನಿ ಜಾಲಪಾಲ ವಿಶಾಲ ಗುಣನಿಧಿ ಮೂಲಿಕಾಲಯಲೋಲ ನರಹರಿ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಲಿಂಗಸುಗೂರಿನ ಹತ್ತಿರ ಚಿಲಕರಾಗಿ ಗ್ರಾಮದಲ್ಲಿರುವ ಗೇಣರಾಯನೆಂಬ ಪ್ರಾಣದೇವರು) ಗೇಣುರಾಯ ನಿನ್ನಾಮಹಿಮಿಯ |ಸ್ಥಾಣು ಅರಿಯ ಮುನ್ನಾ |ದೀನ ರಕ್ಷಕನೆಂಬೋ ಬಿರುದು ಕೇಳಿತವ |ಧ್ಯಾನವ ಕೊಡು ಎಂದೇ, ತಂದೇ ಪ ರವಿಜನ ಭಯದಿಂದ ಕಪಿಗಳು |ಲಯ ಚಿಂತೆಗಳಿಂದಾ ||ಪವನ ಕುವರ ಕಂಡಾಕ್ಷಣ ಈ ಭಯ |ತವಕನಚ್ಚಿ ಪೊರದೀ, ಮೆರದೇ 1 ಭೂಸುರ ಚಿಂತಿಸೆ ಬರಿದೀ ಈ |ಮೊರಿ ಕೇಳಿ ಆ ಶಿಶುವಿನ ಉಳಾಹಿದೇ ||ಘಾಸಿಗೊಳಿಸುವ ಘಳಬಕನೊರಸಿ |ಭಾಸುರ ಕೀರ್ತನೆಯ ಪೊರದಿ ಇಷ್ಟಾರ್ಥವ ಕರದೀ 2 ಪರಿಯೊಳು ಚಿಲಕರಾಗಿ ಗ್ರಾಮದೊಳು |ಮೆರೆಯುವ ಯತಿಯೋಗೀ ||ಗುರುಶ್ರೀಶ ಪ್ರಾಣೇಶ ವಿಠಲನ |ಚರಣ ಪೊಕ್ಕವರ ಸಲಹುವ ಕರುಣೀ | ಯೇಧಣಿ 3
--------------
ಶ್ರೀಶಪ್ರಾಣೇಶವಿಠಲರು
(ಶೇಷಶಾಯಿಯ ವರ್ಣನೆ) ಸ್ವರಮಣನೆನುತಲಿ ಮೊರೆಯಲು ಶ್ರುತಿಗಳು ಹೊರಳುವದೇನುಚಿತ ಅರೆ ನಿಮಿಷವು ನಿನ್ನುರವ ಬಿಟ್ಟಗಲದೆ ಇರುವಳು ರಮೆ ನಿರತ ಪ. ಕವಿಗಳು ಗುಣರಸ ಸವಿದು ಸುಖಭರದಿ ದಿವಿಜರ ಲೆಕ್ಕಿಸರೂ ಪವಿಧರ ಪಾಲಕ ರವಿ ಉದಿಸಿದ ಬಳಿ ಕವಿಕುಲ ಮಲಗುವರೆ 1 ಇಂದಿರೆ ನಿನ್ನನು ಹೊಂದುತ ಪರಮಾ- ನಂದದಿ ಮುಳುಗಿರಲು ಎಂದಿಗು ಮಲಗದ ಸುಂದರ ವಿಗ್ರಹ ಇಂದು ನೀ ಮಲಗುವರೆ 2 ದೋಷವಿದೂರ ಅಶೇಷ ಸುರಾರ್ಚಿತ ದಾಸ ಜನಾನಂದ ಶೇಷಗಿರಿ ವಿಶೇಷಾಸನ ಯಿ- ನ್ನೇಸು ಶಯನ ಚಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
[ನಿನ್ನ ಭಕ್ತರಿಗೆ ಭವದ ದೋಷವಿಲ್ಲ ಸರ್ವ ಕರ್ತೃ ಸ್ವತಂತ್ರ ಹರಿಯೇ, ನೀನೆ ಪ್ರೇರಿಸಿ ಭಕ್ತರಿಂದ ಅಪರಾಧ ಮಾಡಿಸಿ ಹೊಣೆಗಾರರನ್ನು ಮಾಡಿ ದಣಿಸದಲೆ ಕ್ಷಮಿಸಿ ಚಿತ್ತದಲಿ ಪೊಳೆ ಎಂದು ಪ್ರಾರ್ಥನಾ.] ಧ್ರುವತಾಳ ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲವಿಪರೀತವೇನಯ್ಯ ಎನ್ನಂದಿಲಿಅಪರಿಮಿತ ಸ್ವಾತಂತ್ರವುಳ್ಳ ಕರ್ತುತ್ವದಿಂದಕೃಪಣರ ಬಾಧೆಗೆ ಯತನವೇನೋವಿಪುಳ ಐಶ್ವರ್ಯದಿಂದ ಸ್ವಾಮಿ ನೀನಾದರೂಸುಪಥ ನಡಿಯದಿಪ್ಪ ಕುಜನರನ್ನತಪುತ ದುಃಖದಲ್ಲಿ ನಿಯಾಮಿಸುವಿಯೆಂದುಅಪೌರುಷೇಯವಾದ ಶ್ರುತಿಯು ಪೇಳೆಖಪತಿ1ಯು ಬಾಧಿಪದಕೆ ಕಾರಣವೇನುಂಟುಉಪಗೂಢ2 ಕರುಣಿಯೇ ತಿಳುಹಬೇಕುಕ್ಲಿಪುತ ರಹಿತವಾದ ವಪುಗಳು ಬರಲೇಕೆಶಪಥ ಉಂಟು ನಿನ್ನ ಬಿಡೆನೆಂದೂಉಪರಿಯಿನ್ನು ಉಂಟು ಅಪರಾಧವೇನು ತಿಳಿಯೆನೃಪತಿ ಹೀನವಾದ ಸತಿಯನೊಲಸೆಉಪಮ ರಹಿತವಾದ ಸಥೆ ಮಾಳ್ಪ ತೆರದಂತೆಚಪಲನಾದರು ಇದನು ಪೋಗದೆಂದು ರಿಪು ಕುಲ ದಲ್ಲಣನಾದ ಪಿತನ ಭಯಕೃಪೆಗೆ ವಿಷಯನಾದ ಸುತರಿಗೆ ನೀನುಅಪಾರ ಗುಣನಿಧೆ ಇನಿತು ಮಾತೆ ಹೊರತುಕುಪಿತನಾಗುವದಕ್ಕೆ ಕೃತ್ಯವಿಲ್ಲಶಪಥ ರೂಪನೆ ನಿನ್ನ ಆಜ್ಞ ಪಾಲನೆ ಮುಖ್ಯಸಫಲವಲ್ಲದೆ ಮತ್ತೊಂದಧಿಕವಿಲ್ಲ ಅ-ನುಪಮ ಸಾಧನ ಇದೆ ಇದೆ ಸಿದ್ಧವೆಂದುವಿಪ ಅಹಿಪಾದ್ಯರು ಮಾಳ್ಪುದಾಗಿ ಸುಪವಿತ್ರವೆನಿಪ ಸತ್ವಬೋಧಿತನಾಗಿ ಹರಿಕ್ಷಿಪಣರ1 ವ್ಯಾಪಾರನಿಂದಾದಕ್ಕೆಸ್ವ ಪಕ್ಷದವರನ್ನು ವೊಹಿಸದಲೆ ಕಡಿಗೆ ಪ-ರ ಪಕ್ಷದವರೆಲ್ಲ ನುಡಿದ ನುಡಿಗೆ ಅಪಹಾಸ ಮಾಡಿದಿ ಅಭಿಮಾನವಿಲ್ಲದಲೆಆಪ್ತನೆಂಬೊ ಮಾತು ಉಳಿಸದಲೆತಪನವಾದ ಭವದಿ ತಂದು ಕ್ಲೇಶವ ಬಡಿಸಿಅಪಹೃತವಾದ ಜ್ಞಾನ ಮಾಡಿದೆನಗೆಉಪಕಾರವೇನು ನಿನ್ನ ಮಾತು ಕೇಳಿದದಕೆಈ ಪರಿ ಮಾಡದಿರು ನಂಬಿದವರತಪುತ ಸುವರ್ಣ ವರ್ಣ ಗುರು ವಿಜಯ ವಿಠ್ಠಲರೇಯಯಃ ಪ್ರಾಣದಾತಿ ಮದ್ಭಕ್ತನೆಂಬೋದು2 ಸತ್ಯ ಮಾಡು 1 ಮಟ್ಟ ತಾಳ ಪ್ರೌಢ ಕರ್ಮದಿ ನಿನ್ನ ಪ್ರೀತಿಯ ಎನಸಲ್ಲಕೀಡ ಕರ್ಮ3 ನರಕವೆಂದೆಂಬೋಸು ಅಲ್ಲಮಾಡು ಎಂದವರನ್ನು ಬಿಡುವರೆ ಮಹಾಪಾಪಬೇಡ ಎಂದದರನ್ನ ಮಾಡುವದೆ ದೋಷಈಡಿಲ್ಲವೋ ನಿನ್ನ ಮಹಿಮೆಗೆ ಏನೆಂಬೆ ರೂಢಿಗಾಗಿದೆ ನೋಡು ದ್ರೋಣನ ವಧೆಗಾಗಿ ನೀ-ನಾಡಿದ ಉಕುತಿಯನು ಗ್ರಹಿಸದ ಕಾರಣದಿ ನೋಡಿಸಿದಿ ನರಕ ದುಃಖವ ಧರ್ಮಜಗೆಗೂಢ ಬಲ್ಲವರಾರು ನಿನ್ನ ಪ್ರೀತಿಯು ಧರ್ಮಗಾಢ ಭಕುತರೆಲ್ಲ ಇದೆ ಮಾಡುವರಾಗಿಕ್ರೋಧ ಮೂರುತಿ ಗುರು ವಿಜಯ ವಿಠ್ಠಲರೇಯಆಡಿದ ವಚನಗಳು ಸಕಲ ಸಾಧನವೆನಗೆ 2 ತ್ರಿವಿಡಿತಾಳ ಅರಸು ತನ್ನ ನಿಜ ಪರಿಚಾರ ಜನರಿಗೆಸರಿ ಬಂದ ಕಾರ್ಯದಲಿ ನಿಲ್ಲಿಸಲುನರರಿಗುಂಟೇನಯ್ಯ ವಿಹಿತಾವಿಹಿತದ ಭಯಧರಣಿಪತಿಯ ಪ್ರೀತಿ ಒಂದೇ ಹೊರ್ತುಸರಸಿಜ ಹರಿಭವ ಸುರಪಾದಿ ನಿರ್ಜರರುಹರಿಯೆ ನಿನ್ನಾಜ್ಞವ ಪಾಲಿಪರೋಸರಸಿಜಾಂಡವನ್ನು ನಿಯಾಮಿಸಿ ಒಂದೊಂದುಪರಿಯ ವ್ಯಾಪಾರದಲ್ಲಿ ನಿಲ್ಲಿಸಲೂಪರಮಾಣುಗಳ ಸ್ಥೂಲ ಸೃಷ್ಟಿ ಸ್ಥಿತಿಯ ಮಾಡಿತರುವಾಯ ಲಯದಲ್ಲಿ ಅಭಿಮುಖರುಪರಮ ಭಯಂಕರವಾದ ಕಾರ್ಯಗಳಿಂದಕರುಣವಿಲ್ಲದಲೆ ಖಂಡ್ರಿಪರು ಈತೆರದಿ ಮಾಡುವರಿಗೆ ಪಾಪ ಪುಣ್ಯವೇನುಧೊರಿಯೆ ನಿನ್ನಯ ಪ್ರೀತಿ ಒಂದಲ್ಲದೆಮರಳೆ ಸಂದೇಹವಿಲ್ಲ ``ಭೀಷಾಸ್ಮಾದ್ವಾತಃ ಪವತಿ’’ವರಲುತಿವೆ ವೇದ ಅಂತವಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಾಶರಣರ್ಗೆ ಕರ್ಮಗಳ ಲೇಪ ಉಂಟೆ 3 ಅಟ್ಟತಾಳ ಸತಿ ಕರ್ಮ ಕೊರತೆ ಮಾಡೆಪಾತಿವ್ರತಕೆ ದೋಷಕೆ ಎಂದಿಗಾದರೂ ನೋಡಾಸ್ತೋತ್ರ ಮಾಡುವಾಗ ಶಬ್ದ ಡೊಂಕಾಗಲು ಪಾ-ರತ್ರಿಕವಾಗುವ ಪುಣ್ಯಕ್ಕೆ ದೋಷವೆಸೂತ್ರನಾಮಕ ನಿನ್ನ ಆಜ್ಞವ ನಡಿಸುವಭಕ್ತರಿಗೆ ಉಂಟೇನೊ ಭವದೋಷವನ್ನುಕ್ಷೇತ್ರ ಮೂರುತಿ ಗುರು ವಿಜಯ ವಿಠ್ಠಲರೇಯಾ ಧಾ-ರಿತ್ರಿಯೊಳಗೆ ನಿನ್ನವಗೆ ದೋಷವೇನೊ 4 ಆದಿತಾಳ ಒಂದಪರಾಧ ಉಂಟು ವಂದಿಪೆ ತಲೆಬಾಗಿಇಂದಿರೆ ಮೊದಲಾಗಿ ಶ್ವಾಸ ಬಿಡಿಸೊ ಶಕ್ತಿಎಂದಿಗೆ ಬಾರದು ನಿನ್ನ ಹೊರತಾಗಿ ಸಿಂಧುಜ1 ಮೊದಲಾದ ಸುರರಲ್ಲಿ ನೀನಿಂದುಚಂದ ಚಂದದ ಕಾರ್ಯ ಮಾಡಿಸಿ ಭಕ್ತರ್ಗೆಪೊಂದಿದ ಘನತೆಯು ನಿನ್ನದಲ್ಲದೆ ಅನ್ಯ-ರಿಂದಲಿ ಮಾಳ್ಪ ಕೃತ್ಯ ಎಳ್ಳಿನಿತಿಲ್ಲವೆಂದುಮಂದಮತಿಗನಾಗಿ ತಿಳಿಯದೆ ಅಹಂಕಾರಬಂದೊದಗಲು ಅದರನ್ನೆ ಅತ್ಯಭಿವೃದ್ಧಿ ಮಾಡಿತಂದು ಈ ಲೋಕದಿ ಬಂಧನ ಮಾಡಿಸಿದಿತಂದೆ ನಿನಗೆ ಇದು ಪರಮ ಸಮ್ಮತವಾಗೆ ಎ-ನ್ನಿಂದಾಗುವದೆ ಮೋಚನ ಮಾರ್ಗವಒಂದು ತೀರಿಸ ಬಂದು ಹನ್ನೊಂದು ಗಳಿಸಿಕೊಟ್ಟಿಬಂಧು ಅನಿಮಿತ್ಯನಾದದ್ದು ನಿಜವಿತ್ತೆಕುಂದುಗಳೆಣಿಸದೆ ಪಾಲಿಪದೆನ್ನನುಮಂದರಧರ ಗುರು ವಿಜಯ ವಿಠ್ಠಲರೇಯಾಇಂದು ಎಂದೆಂದಿಗೆ ನೀನೆವೆ ಗತಿಯೊ 5 ಜತೆ ಭಕತರ ಅಪರಾಧವೆಣಿಸದಲೆ ತ್ವರಿತದಿ ಚಿತ್ತಮುಕುರದಲಿ ಪೊಳೆಯೊ ಗುರು ವಿಜಯ ವಿಠ್ಠಲರೇಯಾ || [ವಿಷನಾಮ ಸಂ|| ಮಾರ್ಗಶೀರ್ಷ ಶುದ್ದ 8]
--------------
ಗುರುವಿಜಯವಿಠ್ಠಲರು
[ಶ್ರೀ ಪ್ರಾಣದೇವರ ಅನುಗ್ರಹವಿಲ್ಲದೆ ಶ್ರೀ ಹರಿಯು ಎಂದಿಗೂ ಒಲಿಯನೆಂಬ ಪ್ರಮೇಯ. ಪೂರ್ವಜನ್ಮದಲ್ಲಿ ವಾಲಿ ಹನುಮಂತನ ಅನುಗ್ರಹವಿಲ್ಲದ ಕಾರಣ ರಾಮನು ನಿಗ್ರಹಿಸಿದ. ಅರ್ಜುನನಾದಾಗ್ಗೆ ಭೀಮನು ಅಗ್ರಜನಾಗಿ ದಯ ಮಾಡಿದುದಕ್ಕೆ ಕೃಷ್ಣನು ಸಖನಾದ. ಮೂರನೆ ಜನ್ಮ ಜಯತೀರ್ಥರಾದಾಗ್ಗೆ ಜ್ಞಾನವಿತ್ತು ಕುಮತಗಳ ನಿರಾಕರಿಸಿದಿ ಪ್ರಾಣನ ಕೃಪೆಯಿಂದ ಎಲ್ಲ ಸೌಖ್ಯ ಗಂಟು. ಈಗಾದರು ಹಿಂದಿನಂತೆ ಪೊರೆಯೊ ಎಂದು ಪ್ರಾರ್ಥನೆ.] ಧ್ರುವತಾಳ ಹಿತಮಾಳ್ಪ ಜನಕನಾಗಿ ರಕ್ಷಸು ಎಂದೆಂಬೆನೆಪಿತೃ ಸಮಾನ ಜೇಷ್ಠನೆಂದೆಂಬ ವಿಧದಿ ಪಿತನೆ ಸರಿ ಎನಗೆ ಉಪಕಾರವ್ಯಾತಕಿನ್ನುಮಾತರಿಶ್ವನೆ ದೂರ ನೋಳ್ಪದೇನೊಭಾತೃನಾಗಿ ಎನ್ನ ಪಾಲಿಸು ಎಂದೆಂಬೆನೆನೋತ ಪುಣ್ಯಗಳಿಂದ ಹರಿಯು ತಾನೆ ಸ್ವತ ಏವ ಮಾಡಿದ ಈಗ ನುಡಿವದೇನೊಮಾತೃ ನೀನೆ ದೇಹ ಪೊರೆಯುವಲ್ಲಿಅತುಳ ಗುರುವಾಗಿ ಬೋಧಿಸು ಎಂದೆಂಬೆನೆಆತ್ಮ ಗುರುವಿಗೆ ನಿಜ ಗುರುವೆನಿಸಿದೆ ನಿತ್ಯನೂತನವಾಗಿ ಯಿದನು ಬೇಡಿಕೊಂಬುವದೇನುವೀತಿ ಹೋತ್ರನೆ ದೈತ್ಯ ಸಂತತಿಗೆಪ್ರತ್ಯಂತರ ಜನುಮದ್ವಯದಿ ನಿಜ ಮುಖದಿಂದಲೆಮತಿಯು ನೀಡಿದ ಮುಖ್ಯ ಗುರು ನೀನೆ ಪ್ರತಿಯಿಲ್ಲದೆ ಇದ್ದ ಇಷ್ಟನೇನೊ ಎನಗೆಗತಿ ಪ್ರದಾತನು ನೀನೆ ಆವಕಾಲಆಪ್ತನಾಗಿ ನೀನು ಸಲಹಬೇಕೆಂಬೆನೆ ಗತ ಜನ್ಮಗಳಲಿ ನೀನು ಮಾಡಿದುಪ-ಕೃತಿಗಳೆಣಿಸೆ ಈಗ ನಿನಗಿಂದಧಿಕವಾದಆಪ್ತನಾವನು ಎನಗೆ ಅರಸಿ ನೋಡಾಮತಿಯು ರಹಿತವಾದ ಜನುಮಗಳು ಬರಲಿಅತಿ ಹಿತ ನೀನೆ ಎನಗೆ ಇಹ ಪರದಿಅತಿಶಯ ಕೃಪಾನಿಧೆ ಗುರು ವಿಜಯ ವಿಠ್ಠಲರೇಯಅತಿ ಪೀಯನಾಗುವನು ನಿನ್ನ ದಯದಿ 1 ಮಟ್ಟತಾಳ ಬಾಂಧವನು ನೀನೆ ಎರಡು ಬಗೆಯಿಂದ ತಂದೆ ನಿನ್ನುಪಕಾರ ಅನಂತ ಜನುಮದಲಿಮಂದನಾದವ ನನು ತೀರಿಸಬಲ್ಲೆನೆಬಂಧು ಅನಿಮಿತ್ಯ ಗುರು ವಿಜಯ ವಿಠ್ಠಲ ನಿ-ನ್ನಿಂದಲಿ ಎನಗೆ ಅನುಗ್ರಹ ಮಾಡುವನೊ 2 ತ್ರಿವಿಡಿತಾಳ ನಿನ್ನ ಕರುಣಪೇಕ್ಷ ಮಾಡದಲೆ ಒಂದುಜನುಮ ಹರಿ ಕರುಣವಿಲ್ಲದಲೆ ಕಳದೇಅನಂತರದಿ ಎನ್ನ ಪುಣ್ಯ ಸಾಸಿರದಿಂದಅನುಜನಾದೆ ನಿನ್ನ ಕೃಪೆಯಿಂದಲಿಮನುಜ ಕೃತಿಯಾದರು ಪ್ರತಿಮದಲ್ಲಿ ಘನ್ನ ಚೇಷ್ಟಾದಿಗಳು ತೋರಿದಂತೆ ಎನ್ನ ನಾಮಕನಾಗಿ ಎನ್ನ ರೂಪದಿಂದಎನ್ನ ಕೃತ್ಯಗಳೆಲ್ಲ ನೀನೆ ಮಾಡಿಉನ್ನತವಾದ ಕೀರ್ತಿ ತಂದು ಇತ್ತು ಎನ್ನಜನ್ನರ ಮಧ್ಯದಲಿ ಶ್ರೇಷ್ಠನೆನಸಿಪನ್ನಗ ತಲ್ಪನ್ನ ಕರವಶನೆನನಿಸಿದಿನಿನ್ನ ಕರುಣಕೆ ಎಣೆ ಆವದಯ್ಯಾಎನ್ನ ಸ್ವಭಾವದಿಂದ ಹರಿ ತಾನು ಇನಿತಾದ ಮನ್ನಣೆ ಮಾಡುವನೆ ಎಂದಿಗನ್ನನಿನ್ನುಪಕಾರವೆಂಬ ವನ್ನಧಿಯೊಳಗೆ ನಿರುತಮುಣಗಿ ಇಪ್ಪೆನಯ್ಯಾ ತೆರವಿಲ್ಲದೆ ಚನ್ನ ಪ್ರಸನ್ನ ಗುರು ವಿಜಯ ವಿಠ್ಠಲರೇಯನಿನ್ನಿಂದಲೆ ಎನಗೆ ಬಂಧುನಾದಾ 3 ಅಟ್ಟತಾಳ ದುರುಳ ಮತಗಳೆಂಬೊ ಮಾಯಿ ಗೋಮಾಯಿಗಳುಶಿರವೆತ್ತಿ ನೋಡದೆ ಪಲಾಯಧ್ವರಾದರು ಈತೆರವಾದ ಮಹತ್ಮಿ ನಿನ್ನದು ನಿನ್ನದುಮರಳೆ ಮಾತುಗಳನ್ನು ತೋರದಿದ್ದರನಿಗೆ (ರೆನಗೆ)ಕರುಣವಲ್ಲದೆ ಅನ್ಯಾಲೋಚನೆ ಇದಕ್ಕಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಪೊರೆವನು ನಿನ್ನಯ ಬಲದಿಂದಲಾವಾಗ 4 ಆದಿತಾಳ ಮೂರ್ತಿ ಗುರು ವಿಜಯ ವಿಠ್ಠಲರೇಯನಿನ್ನಿಂದ ಮಾಡಿಸುವ ವಸುಧಿಯ ವ್ಯಾಪಾರ 5 ಜತೆ ನಿಖಿಳ ಸೌಖ್ಯವೆ ಉಂಟುಉನ್ನತ ಮಹಿಮ ಗುರು ವಿಜಯ ವಿಠ್ಠಲ ಒಲಿವ || [ನಳ ನಾಮ ಸಂ|| ಚೈತ್ರ ಬ|| 12 ಆದಿತ್ಯವಾರ]
--------------
ಗುರುವಿಜಯವಿಠ್ಠಲರು
* ಶ್ರೀ ಪರಾತ್ಪರವಿಠಲ ಪಾಲಿಸಿವರ ಪ ಚರಾಚರಾತ್ಮಕದೇವ ಪರಮ ಪ್ರೀತಿಯಿಂದ ಅ.ಪ. ಮೂರ್ತಿ ಭಾಗವತ ಪ್ರಧಾನ ಸಾಗರೋಪಮ ಭಕ್ತಿ ಪ್ರದದೇವ ಬಾಗಿ ಬೇಡುವೆ ವಿಜ್ಞಾನರೂಪದಿ ನಿನ್ನ 1 ಭಾಗವತೋತ್ತಮರ ಪದ್ಧತಿಯಲಿ ಗುಪ್ತಸಾಧನ ಪಾಲಿಸು ಶುಕಾನುಬಂಧದಿ ಶುಕಪ್ರೇಮ ಪಾತ್ರನಾಗಿ ಸುಖಮಯನ ಭಜಿಸುತಿರಲಿ 2 ಆಪ್ತತಮ ಗುಣಸಮುದ್ರ ಶ್ರೀಜಯೇಶ- ವಿಠಲ ಪೂರ್ಣ ಪ್ರೀತಿಯಲಿ ನಿತ್ಯ ಭಾಗವತರ ಸಂಗದಲಿಟ್ಟು ನಿರುಪಮ ಸುಖನೀಡು 3 ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲಶೀಲಗಳನ್ನು ಎಂದೊ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆನೆಲವಿತ್ತ ದಯವಂತ ಶ್ರೀಕಾಂತ 3
--------------
ಜಯೇಶವಿಠಲ
* ನೆರದು ಗೋಪಿಯರೆಲ್ಲಾರು ಕೃಷ್ಣಯ್ಯನ ಶೆರಗಪಿಡಿದುಕೊಂಡು ಅರುಹಿದರತಿ ಬೇಗದಿ ಪ. ಹಾಲು ಕರವುತಿರಲು ತೊಲೆಗೆ ನಿಚ್ಚಣಿಕೆಯ ಹಾಕದೆ ಸುರಿದಾನು ನೆಲವಿನ ಪಾಲ್ಮೊಸರಾ 1 ಅಂಮೈಯ್ಯಾ ಇಲ್ಲಾ ಕಾಣೆ ಇವಳು ಯಂನ್ನಾ ಸುಂಮ್ಮಾನೆ ದೂರುವಳು ಹುಂಮ್ಮಿಂದ ನಾನವಳ ಅಟ್ಟಕ್ಕೆ ನೆಗವೊರೆ ಬೊಮ್ಮ ಜಟ್ಟಿಗನೆ ನಾನು 2 ಮತ್ತೊರ್ವಳಿಂತೆಂದಳು ನಿಂನಮಗ ಹತ್ತಿ ಗವಾಕ್ಷಿಯಿಂದಾ ಬಚ್ಚಿಟ್ಟ ಬೆಣ್ಣೆಯನೆಲ್ಲಾವ ಮೆದ್ದಾನು ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆಯ ಮೆಲ್ವಾರೆ ಇವನ ಹೊಟ್ಟೆ ಕೆರೆಭಾವಿಯೇನೆ ಅಮ್ಮಾ ಹುಡುಗರಿಗೆ ಎಂದು ಬಚ್ಚಿಟ್ಟ ಬೆಣ್ಣೆಯನೆಲ್ಲಾ ಹೊಡೆದರವರ ಮಕ್ಕಳು 4 ಮಲಗೋಮಂಚದ ಮೇಲೆ ನಾ ಮಲಗೀರೆ ಮೊರೆವ ಹಾವನು ಪಿಡಿದು ಅರಿಯದಂತೆ ಬಂದು ಮುಸುಕಿ- ನೊಳಗಿಟ್ಟು ಅರಿಯಾದೆ ಹೋದನಂಮಾ 5 ಹರನಡುಗುವ ಹಾವನು ನಾ ಪಿಡಿವಾರೆ ತರಳಾನು ತಡೆಕಾರನೆ ಹರಕೆಯ ಹೊತ್ತುದವಪ್ಪಿಸದಿದ್ದರೆ ಗುರುತು ತೋರÀಲು ಬಂತೇನೊ 6 ಮಕ್ಕಳ ಪಡೆದವರುಯಿಲ್ಲದ ಕಳ ವಿಕ್ಕಲಿ ಬಹುದೆ ಕೃಷ್ಣಗೆ ಸಿಕ್ಕಿದ ತಪ್ಪು ಸಹಿತವೆ ತಂದರೆ ನಾನು ತಕ್ಕ ಬುದ್ದಿಯ ಪೇಳುವೆ 7 ಅಣುಮಯರೂಪ ಕಾಣೆ ನಿಂನಯ ಮಗ ಚಿನುಮಯ ರೂಪ ಕಾಣೆ ಚಿನುಮಯ ರೂಪ ಹೆಳ ವನಕಟ್ಟೆ ಆದಿಕೇಶವ ರಂಗನೆ8
--------------
ಹೆಳವನಕಟ್ಟೆ ಗಿರಿಯಮ್ಮ
|| ಶ್ರೀ|| ಪದ್ಯ|| ಮುಂದೆ ತುಳುಜಾ ದೇವಿ ಬಂದು ನಿಂತಿರಲು ತ್ವರದಿಂದ ನೋಡ್ಯನುಭೂತಿ ಬಂದಂಥ ದೇವಿಯ ಚಂದದ ಬಹು ತೇಜವೆಂದು ತಿಳಿಯದೆ ಎನ್ನ ಮುಂದೆದುರಿಗೆ ಏನು ಬಂದಿರುವುದೆಂದು ತ್ವರದಿಂದ ನಡುಗಿದಳು|| ಮುಂದ ಆದೇವಿ ತಾ ಮುಂದಕ್ಕೆ ಕರೆಯುತಲೇ ಕುಂದರದನಿಯೇ ಕೇಳು ಕುಂದು ನಿನ್ನಲ್ಲಿ ಇಲ್ಲ ಎಂದು ನಿನ್ನ ಭಕ್ತಿಗೆ ಚಂದಾಗಿ ಅಭಯದ ಕೂಟ್ಟಂದಳೀಪರಿಯ||1 ಪದ ರಾಗ:ಕಾನಾಡ ಆದಿತಾಳ ಬೇಡು ಬೇಕಾದ್ದು ಬ್ಯಾಗನೇ|| ಅನುಭೂತಿ|| ಬೇ|| ನೀಡುವೆ ನಾನು|| ಪ ಮಾನಸ ದುಃಖವ್ಯಾಕಿದು || ನಿನ್ನ ಭಿಮಾನವೆಂಬುದು ನನ್ನದು|| ಮಾನಿತರೊಳ್ಹಗತಿ ಮಾನವಂತೆಯೇ ಮಾನುನಿ ಮಣಿ ಅನುಮಾನವ ಬಿಟ್ಟು|| 1 ಎಷ್ಟು ಸ್ನೇಹವ ತೋರಲಿ|| ಬಂದೆ ಸಂತುಷ್ಟಳಾಗುತ ನಿನ್ನಲಿ|| ಶಿಷ್ಟಳೆ ನೀ ಕೇಳಸ್ಪಷ್ಟದಿ ನಿನಗೆ ದೃಷ್ಟಿಗೆ ಬೀಳಲು ಕಷ್ಟಗಳುಂಟೆ|| 2 ಚಿಂತಿಸಿದಿ ಯಾಕೆನ್ನನು|| ಬಂದಂತಹ ಚಿಂತೆ ಎಲ್ಲಾನೂ ಕಳೆವೆನು|| ಸಂತೋಷದಲಿ ಅನಂತಾದ್ರೀಶನ ಚಿಂತನದಿಂದಿರು ಚಿಂತೆಯನು ಬಿಟ್ಟು|| 3 ಆರ್ಯಾ ಅತಿ ಹಿತ ವಚನವನು ಕೇಳಿ || ಅತಿ ಹರುಷಿತಳಾದಳಾಗ ಆ ಬಾಲೆ ಹಿತವಾಯಿತು ಎನಗೆಂದು || ನತಿಸುತ ಮಾತಾಡಿದಳು ಹೀಗೆಂದು|| 1 ಪದ ರಾಗ:ಮುಖಾರಿ ಆದಿತಾಳ ತುಳುಜಾದೇವಿಯೇ|| ಪ ನಮೋ ಎಂಬೆ ಮತ್ತು ಜಗದ್ಥಾತ್ತಿಯೆ || ಬಹುಪ್ರಮಿತಾ ಹಿಮಾಚಲನ ಪುತ್ರಿಯೇ || ಸುಮಹಿಮ ಸುಂದರಗಾತ್ರಿಯೇ|| ಮನದಾ ಅಮಿತಾರೋಗಕ್ಕೆ ಮಹಾಮಾತ್ತಿಯೇ|| 1 ತ್ವರಿತಾದಿಂದಲೇ ಬಂದಂಥಾಕಿಯೇ || ಎಂದು ತ್ವರಿತಾ ತ್ವರಿತಾದೇವಿಯು ಎನಿಸು ವಾಕೆಯೆ|| ಮರೆತಿರಲಾರೆ ನಾ ನಿನ್ನಕಿಯೇ || ಸ್ನೇಹಾಭರಿತಾಗಿ ಭಕ್ತರನ ಸಲಹವಾಕಿಯೇ|| 2 ಚಿಂತಿ ಮಾಡಲು ಬಂದು ನಿಂತಿಯೇ || ಎನಗೆ ಚಿಂತಿಯು ಮಾಡಬ್ಯಾಡಂತಿಯೇ|| ಎಂಥಾಕಿ ನೀನು ದಯಾವಂತಿಯೇ || ವರದಾ ನಂತಾದ್ರೀಶನ ಸಖನ ಕಾಂತಿಯೇ|| 3 ಆರ್ಯಾ ಕರ ಮುಗಿದು|| 1 ಪದ ರಾಗ :ಆನಂದ ಭೈರವಿ ವರಕೊಡು ಎನಗಿದು ತ್ವರಿತದಿ ತಾಯಿ|| ಮರೆಯ ದೆಂದೆಂದೂ ಹಗಲಿರುಳು ನೀ ಕಾಯಿ|| ಪ ಮಂದ ಮತಿಯು ದೈತ್ಯ ಬಂದಿಹನೋಡು|| ಕೊಂದವನ ಎನಗಾನಂದವ ನೀಡು 1 ಮಾಡುವ ತಪಸ್ಸಿಗೆ ಕೇಡು ತಂದಿಹನು|| ಮಾಡಲಿನ್ನೇನು ನಿನಗೆ ಬೇಡಕೊಂಬುವೆನು|| 2 ಪತಿಯ ಸೇವಿಸುವಂಥ ಸತಿಯು ಬೇಡುವೆನೂ|| ಸತತಾನಂತಾದ್ರೀಶನಾ ಸ್ವøತಿಯು ಮಾಡುವೆನು|| 3 ಅನುಭೂತಿಯ ವಚನವನು || ಅನುಸರಿಸುತ ಬ್ಯಾಗಕೊಟ್ಟು ಎನಗಿಲ್ಲೆಂತ್ಯಂದಳಾಗ ಜಗದಂಬಾ|| 1 ಮಾಡಿದಳು|| ಹುಂಕಾರ|| 2 ಒಗೆದಾನು ಯುದ್ಧದಲ್ಲಿ ಜಾಣಾ|| 3 ಸಾರಶಕ್ತಿಯನು ತೆಗೆದಾ ಶೌರ್ಯದಿ ಮತ್ತಾಕೆಯಲ್ಲೇ ಒಗೆದಾ|| 4 ಎದೆಗ್ಹೊಡೆದಳು ಶೂಲದಲೆ||ಅದುರೂಪವು ಬಿಟ್ಟು|| ತನ್ನಕ ಪಟದಲೆ ಕುದುರೆಯ ರೂಪವ ಧರಿಸಿ|| ಒದರುತ ನಿಂತಾಗ ಮುಂದ ಖ್ಯಾಕರಿಸಿ|| 5 ಗಾಢನೆ ಮಹಿಷಾಗಿ ಬಂದ ಬದಿಯ್ಮಲೇ 6 ತೋರುವ ಬಹುಬೆಟ್ಟಗಳ|| ಕೊಡಗಳಿಂದಲೇ ಕೊಡಗಳ್ಹಗಳು| ಮಾಡುವ ವೃಷ್ಟಿಯದೆಷ್ಟು|| ಕಾಡುವ ಕಪಟದಿಂದ ಮತ್ತಿಷ್ಟು 7 ಶೃಂಗಗಳಿಂದ ಹಿಡಿದಳು ದÉೈತ್ಯಬಾಯಿಬಿಡುವಾ|| 8 ಅವನ ಮುರದೊತ್ತಿ 9 ಕಡೆದಳು ಆಗವನ ಬಿಲ್ಲುಬಾಣದಲೆ|| 10 ದಾನವನು|| ಹುಟ್ಟಿದ ಸೈನ್ಯವು ಎಲ್ಲಾ|| ಪೆಟ್ಟು ಹಾಕುತ ಬಂತು ಭೂತಗಳಿಗೆಲಾ||್ಲ 11 ತಡಿಯದೇ ಅವನ ಹುಡುಕುತಲಿ || ಕಡಿದಳು ಶಿರ ಕಡೆದಳು ಮತ್ತವನ ಶಿರವು ಖಡ್ಗದಲೇ|| 12 ಸುರರು ಥಟ್ಟನೆ ಕರೆದರು ಪುಷ್ಪ ದೃಷ್ಟಿಯನು|| 13 ಪದ್ಯ ರಾಗ:ದೇಶಿ ಅಟತಾಳ, ಸ್ವರ ಷಡ್ಜ ಓಡಿ xಟ್ಟನೆ ಹಿಡಿದರಾಗ|| 1 ಕುಕ್ಷಿಗಿಲ್ಲದಲೆ ಬುಭೂಕ್ಷಿತರದು ಎಲ್ಲಾ ಭಕ್ಷಣ ಮಾಡುವರು|| ಅಕ್ಷಯ ಬಲದಿಂದ ದಕ್ಷರು ಎಲ್ಲಾರು ರಾಕ್ಷಸರಾದರು|| 2 ಭೈರವಾದಿಗಳು ಎಲ್ಲಾರು ದೇವಿಯ ಪರಿಚಾರಕರಾದವರು ಸೇರಿ ಸೈನ್ಯದಲ್ಲಿ ಅಪಾರ ಸಂಭ್ರಮದಲ್ಲಿ ಹಾರ್ಯಾಡುತಿರುವರು3 ಆ ತಾಳಮೊರದಂಥ ಬೇತಾಳ ಗಣಗಳು ಪ್ರೇತ ಪಿಶಾಚಿಗಳು|| ಯಮದೂತರಸಮರವರು|| 4 ರಕ್ತ ಪಾನವ ಮಾಡಿದರು|| 5 ದುರುಳರನೆಲ್ಲನು ಹೊರಳಿಸಿ ಹೊಟ್ಟೆಯ ಕರಳವ ಬಗಟಿದರು| ಸರಳವಾದ ಆ ಕರಳ ಮಾಲೆಯ ಮಾಡಿ ಕೊರಳೊಗ್ಹಾಕಿದರು||6 ಹಾಕಿಕೊಂಡು ಕುಣಿದಾಡಿದರು||7 ಕಂಕಲಾದಿಗಳು ಭಯಂಕರರವರು ಅಸಂಖ್ಯಾಕರಾಸವರು|| ಶಾಂಕರೀ ದೇವಿಯ ಕಿಂಕರರಿಂಥ ಅಲಂಕಾರಗಳನಿಟ್ಟರು || 8 ಅವನಂತವ ಅರಿಯೇ ನಾನು|| 9 ಆರ್ಯಾ ಬಲ್ಲಿದ ದೈತ್ಯದ ಕೊಂದು || ನಿಲ್ಲದೆ ಅನುಭೂತಿ ಬದಿಯಲೇ ಬಂದು || ಅಲ್ಲಿಹಳು ಮಹಾಮಾಯಾ|| ಇಲ್ಲಿ ಗೆ ಪೂರ್ಣಾಯಿತು ಎರಡು ಅಧ್ಯಾಯಾ || ಶ್ರೀ ಹರೇಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
101. ಹರಿಹರ ಧ್ರುವತಾಳ ಹರಿಹರರಿಬ್ಬರು ಒಂದೇ ರೂಪವ ಧರಿಸಿ | ದುರುಳ ಗುಹಾಸುರನ ಕೊಂದರೆಂದೂ | ಮರಳು ಮಾನವರು ತಿಳಿಯಾದೆ ನುಡಿವರು | ಹರಿಹರರೀರ್ವರು ಏರವಾದರೆ ಅಂದು | ಹರನು ಮೈಮರೆದು ನಿಂದನ್ಯಾತಕೆ | ಧಾರುಣಿಯೊಳಗೆ ಹಿರಣ್ಯಕಶಿಪು ದೈತ್ಯ | ಸುರರ ಓಡಿಸಿ ಪ್ರಬಲನಾಗಿರೆ | ಪರಮ ಪುರುಷ ಹರಿ ನರಹರಿರೂಪವನ್ನು | ಧರಿಸಿ ರಕ್ಕಸನ್ನ ಕೊಲ್ಲುವಾಗಲಿ, ಕೇ | ಸರಿಯಾ ಬಳಿಗೆ ಪೋಗಿ ಮಾರೆಯಾ ಬೇಡಿಕೊಂಡು | ಮೆರದಾನೇನೋ ಅವತಾರ ಮಾಡಿ | ಹರಿಯ ಅದ್ಭೂತ ಶಕ್ತಿ ನಾನಾ ಲೀಲಾ ವಿನೋದ | ಚರಿಸೂವ ಪರಬೊಮ್ಮ ಗುಣಪೂರ್ಣ ನೂ | ತುರಗವದನ ಮತ್ಸ್ಯಕೂರ್ಮಸೂಕರ ವೇಷ | ಧರಿಸಿದಾತನು ಕಾಣೋ ಯುಗಯುಗದೀ | ಕರುಣಾಸಿಂಧು ನಮ್ಮ ವಿಜಯವಿಠಲರೇಯಾ | ಹರಿಹರ ರೂಪ ಧರಿಸಿದ ಕಾಣಿರೋ 1 ಮಟ್ಟತಾಳ ದೀಪದ ಉಪಕಾರ ದಿನಪಗೆ ಏನಾಹದು | ಭೂಪತಿಗಾಳಿನ ಅನುಸುಣ್ಯಾತಕೆ | ಕೋಪವನು ತಾಳಿ ಭೃಗುಮುನಿ ಕೈಯಿಂದ | ಶಾಪನ ಕೈಕೊಂಡನಂದು ಭಸ್ಮಾ ಸುರನ | ಆ ಪತ್ತಿಗಾರದೆ ಮೊರೆ ಇಡಲು ಕೇಳಿ | ಶ್ರೀಪತಿ ಮೊಗದಲಿ ಕಾಯದದ್ದು ಕಾಣದೆ | ಗೋಪಾಲ ವಿಜಯವಿಠಲ ಹರಿಹರ | ರೂಪವು ತಾನಾದ ಅನೇಕ ರೂಪನೊ 2 ತ್ರಿವಿಡಿತಾಳ ಕಂತು ಜನಕ ಶಿವನ ಬೇಡಿಕೊಂಡದ್ದು ಪುರಾ | ಣಾಂತರದಲ್ಲಿ ಪೇಳುತಿವೆ ನೋಡಿಕೊ | ಎಂತಾಹದೀ ನುಡಿ ಸಿದ್ಧವಲ್ಲವೊ ಶ್ರೀ | ನಖ ಮೌಳಿ ಅಭೀದಾನು | ವೈರಿ ಅರ್ಧಂಗವನೆ ತಾಳಿ | ನಿಂತಿಪ್ಪ ಶ್ರೀ ಹರಿಯಾ ಕೂಡಾ | ನಂತಾ ಕಲ್ಪರೆ ನಿಗಮಾ ಗೋಚರ ಸರ್ವ | ಸ್ವತಂತ್ರನು ಒಬ್ಬಾರ ಹಂಗಿಗಾನೆ | ಚಿಂತಾಮಣಿಯಾ ಬಳಿಯಾ ನಾಡ ಹರಳನೆ ತಂದು | ಸಂತತವಿಟ್ಟರೆ ಸರಿಯಾಗೋದೆ | ಸಂತೋಷ ಪೂರ್ಣಗೆ ದೈತ್ಯನ ಕೊಲ್ಲುವುದಕೆ | ಚಿಂತೆಮಾಡಿದನೆಂಬೊ ವಾರ್ತಿಯೇನೂ | ನಿತ್ಯ ಮೇಹಕವನೆ ತೋರಿ | ಅಂತು ಗಾಣದ ನರಕಕ್ಕೆ ಹಾಕೂವ | ದಂತಿ ವರದ ದೇವ ವಿಜಯವಿಠಲ ಜಗ | ದಂತರಿಯಾಮಿಗೆ ಅಸಾಧ್ಯ ಬಂದಿಲ್ಲ 3 ಅಟ್ಟತಾಳ ಹರಗೆ ಈ ಪ್ರತಿಪ ಉಳ್ಳರೆ ಭಸುಮಾ | ಸುರಗಂಜಿ ಹರಿಗೆ ಮೊರೆ ಇಡುವನೇನೊ | ಜರಸಂಧನಿಗೆ ಇತ್ತಾವರ ಮತ್ತೇನಾಯಿತು | ಮರಳಿ ರಾಮನಕೂಡ ಶರಧನು ಪಿಡಿದು ಮೈ | ಮರೆದು ನಿಂದದ್ದು ಸರ್ವ ಜಗ ವೆಲ್ಲ ಬಲ್ಲದು | ಕರಿ ರಾಜಾ ಆ ಮೂಲಾವೆಂದು ಕರೆವಾಗ | ಪರಮೇಷ್ಠಿ ಶಿವನೊ ಮತ್ತಾವನೊ ಕಾಯ್ದವ | ಸುರರೊಳಗೀತಾ ಗಿಂದಧಿಕ ದೇವರು ಇಲ್ಲಾ | ಹರಿಹರರೂಪಾ ಶ್ರೀ ವಿಜಯವಿಠಲರೇಯಾ | ಚರಿತೆಯ ತೋರುವ ಅವರ ಯೋಗ್ಯತಾದಷ್ಟು 4 ಆದಿತಾಳ ತ್ರಿಶೂಲ ಡಮರುಗ ಭಸಿತ ರುದ್ರಾಕ್ಷಿಯು | ಪಶುವಾಹನನಾಗಿ ಇಪ್ಪದಿದೆ | ಅಸುರಾರಿಯಲ್ಲದೆ ಅನ್ಯರೂಪಗಳಲ್ಲ | ಹಸನಾಗಿ ತಿಳಿದು ಈತನ ಮಹಿಮೆ ಕೊಂಡಾಡಿ | ಕೆಸರು ಕಸ್ತೂರಿಯಾದರೆ ಕೌತುಕವಲ್ಲವೇನೊ | ಶಶಿಧರ ಹರಿರೂಪ ದೊ[ಳು]ಕೂಡುವನೆ | ವಶವಾಗಿ ಇಪ್ಪನು ತದ್ರೂಪಾದಂತೆ ಕಾಣೊ | ಕುಶನ ಬಯಸುವನು ಸಮನಾಗಿ ನಿಲ್ಲುವನೆ | ಪಶುಗಳ ಕಾಯ್ದ ನಮ್ಮ ವಿಜಯವಿಠಲ ಪ | ರಶುರಾಮ ಕ್ಷೇತ್ರದಲಿ ಹರಿಹರ ರೂಪನಾದಾ 5 ಜತೆ ತುಂಗಮಹಿಮೆ ದೇವೋತ್ತುಂಗಾ ತುಂಗಾವಾಸ | ರಂಗ ವಿಜಯವಿಠಲ ಹರಿಹರ ಮೂರುತಿ 6
--------------
ವಿಜಯದಾಸ
2. ಆತ್ಮ ನಿವೇದನೆ ಅಪರಾಧವೆನ್ನದೈಯ ಹೇ ಜೀಯಅಪರಾಧವೆನ್ನದೈಯ ಅಪರಿಮಿತವೆ ಸರಿ ಪ ಕೃಪೆ ಮಾಡೊದಿಲ್ಲವೆ ಕೃಪಣವತ್ಸಲ ಕೃಷ್ಣ ಅ.ಪ ಹುಡುಗರು ಮಾಡುವ ತಪ್ಪಿಗೆ ಜನನಿ ತಾಬಿಡುವಳೆ ಅದರಿಂದ ಕೃಪೆಯ ಮಾಡದಲೆನಡೆವ ಕುದುರೆ ತಾನು ಎಡಹಿದರೆ ಸ್ವಾಮಿಕಡೆಗೆ ಕಟ್ಟುವನೇನೊ ತಿರುಗಿ ನೋಡದಲೆ 1 ಮಾಡು ಎಂದದ್ದನು ಬಿಟ್ಟರೆ ಅಪರಾಧಬೇಡವೆಂದನು ಮಾಡುವುದಪರಾಧಈಡಿಲ್ಲ ನಿನ್ನ ದಯ ಬೇಡುವೆನೋ ನಿನಗೆಮಾಡುವೆ ಬಿನ್ನಹ ನಾಚಿಕೆಯಿಲ್ಲದಲೆ2 ವಾಸುದೇವ ಶ್ರೀಹರಿಯೆನೋಡದಿದ್ದರೆ ಭಕುತ ಜನರು ತಮ್ಮಬೀಡ ಸೇರಿಸರೆನ್ನ ಕೇಡೇನೊ ಇದಕಿಂತನೋಡೊ ನೀ ದಯದಿಂದ ಭಕುತವತ್ಸಲ ಕೃಷ್ಣ 3
--------------
ವ್ಯಾಸರಾಯರು