ಒಟ್ಟು 261 ಕಡೆಗಳಲ್ಲಿ , 44 ದಾಸರು , 96 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗಾ ಬಾರೋ ಪಾಂಡುರಂಗ ಬಾರೋ ಶ್ರೀರಂಗಾ ಬಾರೋ ನರಸಿಂಗ ಬಾರೋ ಪಕಂದ ಬಾರೋ ಎನ್ನ ತಂದೆ ಬಾರೋಇಂದಿರಾ ರಮಣ ಮುಕುಂದ ಬಾರೋ 1ಅಪ್ಪ ಬಾರೋತಿಮ್ಮಪ್ಪಬಾರೋ ಕಂದರ್ಪನೈಯನೇ ಕಂಚಿವರದ ಬಾರೋ 2ವಿಷ್ಟು ಬಾರೋಉಡುಪಿಕೃಷ್ಣ ಬಾರೋ ಎನ್ನಿಷ್ಟ ಮೂರುತಿಪುರಂದರವಿಠಲ ಬಾರೋ3
--------------
ಪುರಂದರದಾಸರು
ರಾಮ ರಾಮ ರಾಮ ಸೀತಾ ರಾಮ ಎನ್ನಿರೋ ಪ.ಇಂದ್ರಿಯಂಗಳೆಲ್ಲ ಕೂಡಿಬಂದು ತನುವ ಮುಸುಕಲುಸಿಂಧು ಸುತೆಯ ಪತಿಯಧ್ಯಾನಎಂದಿಗಲ್ಲಿ ದೊರೆಯದೊ 1ಭರದಿ ಯಮನ ಭಟರಾಗಲೆಹೊರಡು ಎಂದು ಮೆಟ್ಟಿ ತುಳಿಯೆಕೊರಳಿಗಾತ್ಮ ಸೇರಿದಾಗಹರಿಯ ಧ್ಯಾನ ದೊರೆಯದೊ 2ದೋಷಕ್ಲೇಶ - ದುಃಖವೆಂಬಶ್ಲೇಷ್ಮದಲ್ಲಿ ಸಿಕ್ಕಿ ಇರಲುವಾಸುದೇವ ಕೃಷ್ಣನೆಂಬುದಾಸಮಯಕ್ಕೆ ದೊರೆಯದೊ 3ಸಿಂಗಾರವಾದ ದೇಹವೆಲ್ಲಅಂಗವಳಿದು ಮುರಿದು ಬೀಳೆ ||ಅಂಗಳಿಗಾತ್ಮ ಸೇರಿದಾಗರಂಗನ ಧ್ಯಾನವು ದೊರೆಯದೊ 4ಕೆಟ್ಟ ಕೆಟ್ಟರಲ್ಲೊ ಬರಿದೆಕಟ್ಟ ಕಡೆಯಲ್ಲಿಕಾಯಬಿಟ್ಟು ಹೋಗುವಾಗಪುರಂದರವಿಠಲ ಧ್ಯಾನ ದೊರೆಯದೊ 5
--------------
ಪುರಂದರದಾಸರು
ರಾಮಸ್ಮರಣೆಯಿಂದ ಸಕಲ ಪಾಪಹರ ರಾಮ ರಾಮ ಎನ್ನಿರೊವ್ಯೊಮಕೇಶನ ದಿವ್ಯತಾರಕ ಮಂತ್ರವು ಪ.ಶತಕೋಟಿ ರಾಮಾಯಣದ ಬೀಜಾಕ್ಷರ ರಾಮ ರಾಮ ಎನ್ನಿರೊಕ್ಷಿತಿಜೆಯ ಪ್ರಾಣದ್ವಲ್ಲಭ ಶ್ರೀದಶರಥರಾಮ ರಾಮ ಎನ್ನಿರೊ 1ಪಾಮರರೆಲ್ಲರು ಪಂಡಿತರಾದರು ರಾಮ ರಾಮ ಎನ್ನಿರೊಆ ಮೋಕ್ಷ ಕರತಳವಾಹುದು ಕೊಂಡಾಡೆ ರಾಮ ರಾಮ ಎನ್ನಿರೊ 2ಮಖಕೋಟಿಗಧಿಕ ಮಹಾಪುಣ್ಯದಾಯಕ ರಾಮ ರಾಮ ಎನ್ನಿರೊಮುಕ್ತಾಮುಕ್ತಾರ್ಚಿತ ಕರುಣವಾರಿನಿಧಿ ರಾಮ ರಾಮ ಎನ್ನಿರೊ 3ಭಕ್ತವತ್ಸಲ ಭಾಗ್ಯಭೂಷಿತಭವಹರರಾಮ ರಾಮ ಎನ್ನಿರೊನಿಖಿಲ ಭುವನಪತಿ ಬ್ರಹ್ಮಾದಿಸುರವಂದ್ಯ ರಾಮ ರಾಮ ಎನ್ನಿರೊ 4ಅಂಜನೆಜಾತಪೂಜಿತ ಪಾದವಾರಿಜ ರಾಮ ರಾಮ ಎನ್ನಿರೊಕಂಜನೇತ್ರಕಂಜಸಖಅನಂತಪ್ರಭ ರಾಮ ರಾಮ ಎನ್ನಿರೊ5ದಶಶಿರಮರ್ದನ ವಿಭೀಷಣ ವರಪ್ರದ ರಾಮ ರಾಮ ಎನ್ನಿರೊಸುಶರಧಿ ಬಂಧನ ಸುಗ್ರೀವ ಸಂಸೇವ್ಯ ರಾಮ ರಾಮ ಎನ್ನಿರೊ 6ಲಕ್ಷ್ಮಣ ಭರತ ಶತ್ರುಘ್ನಾರಾಧಿತ ರಾಮ ರಾಮ ಎನ್ನಿರೊಋಕ್ಷವರಪ್ರದ ರಘುಕುಲಾಂಬುಧಿಚಂದ್ರ ರಾಮ ರಾಮ ಎನ್ನಿರೊ 7ಜ್ಞಾನಾನಂದ ಬಲಾತ್ಮ ಪರಬ್ರಹ್ಮ ರಾಮ ರಾಮ ಎನ್ನಿರೊಮೌನಿನಿಕರಧ್ಯೇಯಪುಣ್ಯಪುರುಷಗೇಹ ರಾಮ ರಾಮ ಎನ್ನಿರೊ8ಪ್ರಸನ್ನಮೂರುತಿ ಪ್ರಸನ್ನಾನನ ಪರಮಾತ್ಮ ರಾಮ ರಾಮ ಎನ್ನಿರೊಪ್ರಸನ್ನನಿಲಯ ನಿತ್ಯಪ್ರಸನ್ನವೆಂಕಟ ರಾಮ ರಾಮ ರಾಮ ಎನ್ನಿರೊ 9
--------------
ಪ್ರಸನ್ನವೆಂಕಟದಾಸರು
ಸುವ್ವಿ ಸುವ್ವಾಲಿ |ಸುವ್ವಿ ಸಾಧ್ವಿಯರು ರಾಘವೇಂದ್ರರ ಪಾಡಿ ಪಅಂದಿನ ಕಾಲದ ಮಧ್ವಶಾಸ್ತ್ರವ ಮನಕೆ ತಂದು |ಅಂದದಿ ಟಿಪ್ಪಣಿ ಮಾಡಿದ ದೇವರಾರು | ಸುವ್ವಿ ||ಅಂದು ವಾದಿಸುವ ಜನರನ್ನು ಬಾಯಿ ಮುಚ್ಚಿಸಿದ |ಚಂದಿರ ವದನೆ ಈತನಮ್ಮ ಗುರುವು | ಸುವ್ವಿ 1ಇವರ ಚರಿತೆಯನ್ನು ತೋರಿದಷ್ಟು ತುತಿಸುವೆ |ಕಿವಿಗೊಟ್ಟು ಕೇಳುವದುಬುಧಜನರು | ಸುವ್ವಿ ||ಪವನಾಂಶರಿವರು ಕವಲಿಲ್ಲ ಖ್ಯಾತರಾಗಿ |ಅವನಿಯ ಸುರರಿಂದರ್ಚನೆಗೊಂಗುವರು | ಸುವ್ವಿ 2ಅಷ್ಟಾಕ್ಷರ ಮಂತ್ರವನು ತಪ್ಪದಲೆ ನಿತ್ಯವಾಗಿ |ನಿಷ್ಠೆಯಿಂದ ಭಜಿಸಲು ಭೂತ ಭಯವು | ಸುವ್ವಿ ||ಕುಷ್ಠರೋಗ ಕ್ಷಯ ಪಾಂಡು ಜ್ವರ ಸನ್ನಿ ಮೊದಲಾದ |ಅಷ್ಟುಪದ್ರವಾಕ್ಷಣ ಬಿಟ್ಟು ಓಡುವುದು | ಸುವ್ವಿ 3ಮೃತ್ತಿಕೆಮಾಲೆಅಂಗಾರದಿವ್ಯ ಮಂತ್ರಾಕ್ಷತೆಯು |ಹತ್ತಿರವಿರಲು ಕ್ಲೇಶವ ಲೇಶ ಕಾಣರು | ಸುವ್ವಿ ||ಎತ್ತ ಹೋದರು ಜನರಿಗೆ ಜಯಪ್ರದ ತೋರುವದು |ಕತ್ತಲಿಲ್ಲ ಶತಸಿದ್ಧ ಮತ್ತೇನುಕೇಳಿ| ಸುವ್ವಿ 4ಪಂಡಿತರು ಮೊದಲಾಗಿಹಸ್ತಿಉಷ್ಟ್ರ ಕುದುರೆಯ |ಹಿಂಡುಗಳು ತೃಷೆಯಿಂದ ಬಳಲುತಿರೆ | ಸುವ್ವಿ ||ದಂಡ ಜಗತಿಗೂರಿ ತೋಯ ತೆಗಿಸಿಯವನೀ |ಮಂಡಲದೊಳಗೆ ಪೆಸರಾದರಿವರು | ಸುವ್ವಿ 5ಕಟ್ಟಲಿಯ ಭತ್ತದೊಳು ಭೂಪದಳಯುಕ್ತ ಬರ |ಲಿಟ್ಟುಕೊಂಡು ಉಣಿಸಿ ಉತ್ತಮ ವರವ | ಸುವ್ವಿ ||ಕೊಟ್ಟು ಕಳಿಸಿದ ಮೇಲೆ ಆವು ಕೊಂಚಿಯಾಗಲಿಲ್ಲ |ಗಟ್ಟಿ ಸಂಕಲ್ಪರಿವರು ಮುನಿವರರು | ಸುವ್ವಿ 6ವಿಪ್ರರೆಲ್ಲರು ಹೇಳಿಸಿ ಕಟ್ಟಿಸಿದ ಸದನವ |ಥಟ್ಟನೆ ಕೆಡಿಸಿ ಭೂಪ ಮೆಚ್ಚುವಂದದಿ | ಸುವ್ವಿ ||ನೆಪ್ಪು ಧರೆಗಾಗಲೆಂದುಗುರುಸುಧೀಂದ್ರ ಕುಮಾರ |ಸರ್ಪನ ತೋರಿಸಿ ಸುಪ್ರಖ್ಯಾತರಾದರು | ಸುವ್ವಿ 7ದ್ವಿಜರ ಸ್ತೋಮವು ಬಾಯಿ ಬಿಡುತಿರೆ ದಯದಿಂದ |ನಿಜಕಾಷ್ಟವಿಳೆಗೆ ನಿಲ್ಲಿಸಿ ಮರವ | ಸುವ್ವಿ ||ಸೃಜಿಸಿ ಪಲ್ಲವ ಫಲಯುಕ್ತವಾಗಿ ತೋರಿಸಿದ |ಭಜಿಸಿರಿವರನ್ನು ಮಕ್ಕಳು ಬೇಡುವವರು | ಸುವ್ವಿ 8ಮುತ್ತಿನ ಮಾಲಿಕೆನೃಪಭಕ್ತಿಯಿಂದ ಕೊಡಲಾಗಿ |ಸಪ್ತಜಿಹ್ವಗುಣಿಸಿದ ಸರ್ವರು ನೋಡಿ | ಸುವ್ವಿ ||ಮತ್ತೆ ಬೇಡಲು ಪಾವಕನಿಗೆ ಪ್ರಾರ್ಥನೆಯ ಮಾಡಿ |ಮತ್ರ್ಯಪಗೆ ಇತ್ತರು ಮೊದಲಂತೆಯೆ ತಂದು | ಸುವ್ವಿ 9ಹಿಂದೆ ಮಾಡಿದ ದುಷ್ಕರ್ಮ ತೀರ ಬಂದದನು ನೋಡಿ |ಬಂದಾಕ್ಷಣದಲ್ಲಿ ಅವನ ವಿಚಾರಿಸಿ | ಸುವ್ವಿ ||ಇಂದಿರೇಶನ ಕಾರುಣ್ಯ ಬಲದಿಂದ ಜನನೋಡೆ |ಸಂದೇಹವಿಲ್ಲದೆ ಸುಲೋಕವನಿತ್ತರು | ಸುವ್ವಿ 10ತುಂಗಾತೀರ ಮಂತ್ರಾಲಯದಲ್ಲಿಶ್ರಾವಣಬಹುಳ |ಮಂಗಳ ಬಿದಿಗಿಯಲ್ಲಿ ನಿವಾಸವಾದರು | ಸುವ್ವಿ ||ಶೃಂಗಾರ ವೃಂದಾವನ ದ್ವಾದಶನಾಮ ಶ್ರೀ ಮುದ್ರೆಯು |ಕಂಗಳುಸಾಲವು ನೋಡ ಹೊದ್ದ ಶಾಠಿಯ | ಸುವ್ವಿ 11ಅಂಧಕಬಧಿರಕುಂಟ ನಾನಾ ರೋಗಿಗಳು ಮತ್ತೆ |ಕಂದ ವಜ್ರ್ಯ ಮೊದಲಾದವರಿಗೆಕಾಮ್ಯ| ಸುವ್ವಿ ||ತಂದುಕೊಡುವರು ಬೇಗ ಇತರ ಸಂಶಯವಿಲ್ಲ |ಮಂದಭಾಗ್ಯರಿಗೆ ಇವರ ಸೇವೆ ದೊರೆಯದೇ || ಸುವ್ವಿ 12ಕೌತುಕವೇನೆನ್ನಲಿ ಮುಂಜಿ ವಿವಾಹ ಮಾಡಿಸುವರು |ಚಾತುರ್ಮಾಸದೊಳಗೆ ಗ್ರಹಗಳಸ್ತವಾಗೆ | ಸುವ್ವಿ ||ಧಾತಾ ಪಿತ ನಿಲಯವಿದೇನೋಯೆಂದು ತೋರುವದು |ಪ್ರೀತಿಯುಳ್ಳ ಭಕ್ತರಿಗೆ ಅಧಮರಿಗಲ್ಲ | ಸುವ್ವಿ 13ಪಾಡ್ಯ ಪೂರ್ವಾರಾಧನೆ ಉತ್ತರಾರಾಧನೆಗೆ |ಒಡ್ಡಿಬರುವುದು ಎಂಟು ದಿಕ್ಕುಗಳಿಂದ ಜನವು | ಸುವ್ವಿ ||ಕಡ್ಡಿಹಿಡಿಯದಂಥ ಸಂದಣಿಯೊಳು ಸನ್ಮುಹೂರ್ತದಿ |ದೊಡ್ಡ ರಥವೇರಿ ಮಠವ ಸುತ್ತುವರು | ಸುವ್ವಿ 14ಇಷ್ಟೇಯೆನ್ನಲು ವಶವಲ್ಲ ಮಹಿಮೆಗಳಿನ್ನೂ ಉಂಟು |ನಷ್ಟ ಮಾಡುವರು ದುರ್ಮತ ದಾರಿದ್ರ್ಯವ | ಸುವ್ವಿ ||ಸೃಷ್ಟಿಗೊಡೆಯ ಪ್ರಾಣೇಶ ವಿಠ್ಠಲನೆಂದು ಪೇಳ್ವರು |ಎಷ್ಟು ಪೇಳಿದರೂ ಎನ್ನಿಂದಲಿ ತೀರದು | ಸುವ್ವಿ 15
--------------
ಪ್ರಾಣೇಶದಾಸರು
ಸ್ಮರಿಸುವೆ ನಾ ನಿಮ್ಮ ಚರಣಕಮಲಗುರುವಿಜಯರಾಯಜನ್ಮಾರಭ್ಯವು ನಿಮ್ಮ ಗುಣಕರ್ಮಗಳೆಲ್ಲ ವಿಜಯರಾಯದಿವಿಜರ ವೇಷದಿಂದವನಿಯೊಳುದಿಸಿದ್ಯೊ ವಿಜಯರಾಯಭಾಗವತಧರ್ಮವಹಿಸಿ ತ್ರಿರಾವರ್ತಿ ವಿಜಯರಾಯಕಂಚಿಕಾಳ್ಹಸ್ತಿ ಶ್ರೀರಂಗ ಸೇತುಯಾತ್ರೆ ವಿಜಯರಾಯಮರಿಯಾದೆಯಿಲ್ಲದೆ ವರಗಿರಿಯಾತ್ರೆಯ ವಿಜಯರಾಯಮಹಿಯಲ್ಲಿ ತಿರುಗಿ ಸರ್ವಕ್ಷೇತ್ರದಿ ವಿಜಯರಾಯಗುರೂಪದೇಶಕನಾಗಿ ವ್ಯಾಸಕಾಶಿಯಲ್ಲಿದ್ಯೊ ವಿಜಯರಾಯಸ್ವಚ್ಛವಾಗಿ ಗಂಗಾತೀರ ವಾಸಮಾಡಿ ವಿಜಯರಾಯತುಂಗಾತೀರದಿ ಕುಳಿತು ಗಂಗೆ ಪೆಚ್ಚಿಸಿದಿ ವಿಜಯರಾಯಮಧ್ವಮತದಸಾರಕವನದಿ ರಚಿಸಿದ್ಯೊ ವಿಜಯರಾಯಶುದ್ಧ ತತ್ವಸಾರ ಸುಳಾದಿ ಪದಮಾಡಿ ವಿಜಯರಾಯಸದಾಚಾರಸಂಪತ್ತು ಮಧುಕರವೃತ್ತಿಯು ವಿಜಯರಾಯಭಕ್ತರ ಅಪಮ್ಯತ್ಯುಬಿಡಿಸಿ ಆಯುನಿತ್ತೆ ವಿಜಯರಾಯನಿತ್ಯಾನ್ನ ಪುತ್ರೋತ್ಸವಗಳು ಭೃತ್ಯರಿಗೆ ವಿಜಯರಾಯಭಕ್ತಜನರಿಗೆ ತತ್ವೋಪದೇಶವ ಮಾಡಿ ವಿಜಯರಾಯಎಲ್ಲರಲಿ ಸಿರಿನಲ್ಲನ ಅಂಶವ ವಿಜಯರಾಯಬಲ್ಲಿದನೀನೊಂದುರೂಪದಿ ಎನ್ನಲ್ಲಿ ವಿಜಯರಾಯನಿಮ್ಮ ಪುಣ್ಯದ ಶೇಷವಿನ್ನು ಉಂಬೆವೊ ನಾವು ವಿಜಯರಾಯಎನ್ನಿಂದ ಆಗೋ ಸಾಧನವೆಲ್ಲ ನಿನ್ನದೊ ವಿಜಯರಾಯಈಗ ಈ ಯುಗದಿ ಸಾಧನವೆಂಬುದು ಕಾಣೆ ವಿಜಯರಾಯಗುರುನಿನ್ನ ಕರುಣಕವಚತೊಟ್ಟ ಭಕುತರ್ಗೆ ವಿಜಯರಾಯ
--------------
ಗೋಪಾಲದಾಸರು
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು