ಒಟ್ಟು 141 ಕಡೆಗಳಲ್ಲಿ , 40 ದಾಸರು , 122 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಹರಿಯ ಮಂಗಳ ಪದಗಳು ಆರುತಿ ಬೆಳಗುವೆನು ಮಾಧವಗಾರುತಿ ಬೆಳಗುವೆನು ಪ ಆರುತಿ ಬೆಳಗುವೆ ಮಾರುತಿ ಪ್ರಿಯ ಯದು-ಕೀರುತಿಕರ ಪಾರ್ಥಸಾರಥಿ ಹರಿಗೆ ಅ.ಪ. ನೀರೊಳು ಪೊಕ್ಕವಗೆ ಕಡಲೊಳು ಭಾರವ ಪೊತ್ತವಗೆಮೂರು ಪಾದದಿ ಸರ್ವಧಾರುಣಿ ಅಳೆಯುತಧೀರ ಬಲಿಯ ಮನೆ ದ್ವಾರ ಕಾಯ್ದವಗೆ 1 ಕ್ಷತ್ರಿಯರ ಗೆಲಿದವಗೆ ಗಾರ್ಜಿತ ಸತ್ರವ ಕಾಯ್ದವಗೆಸತ್ಯ ರುಕ್ಮಿಣಿ ಮುಖ್ಯ ಪತ್ನಿಯರಾಳಿದಬತ್ತಲೆ ಕುದುರಿಯ ಹತ್ತಿ ಮೆರೆದವಗೆ 2 ಸೃಷ್ಟಿಯು ಇಲ್ಲದವಗೆ ಜಗವನು ಸೃಷ್ಟಿ ಪಾಲಿಪಗೆಬಟ್ಟಿಲಿಂದಲೇ ಗಿರಿ ಬೆಟ್ಟನೆತ್ತಿದ-ಭೀಷ್ಟ ನೀಡಲು ಸುಖ ಪುಷ್ಪವಂದಿತಗೆ 3 ನಂದಗೋಕುಲದಲ್ಲೆ ಬೆಳೆಯುವ ಮಂದಜಾಕ್ಷಿಯರಲ್ಲೆಒಂದೊಂದು ಆಟಗಳಾಡಿ ಸುಖವನಿತ್ತನಂದ ಬಾಲಕನಾದ ಇಂದಿರೇಶನಿಗೆ4
--------------
ಇಂದಿರೇಶರು
ಸಕಲ ದಿವಿಜಾರಾಧ್ಯ ಚರಣ ಪ ಕಂದರ್ಪ ಕೋಟಿ ಮೋಹನ್ನ ಕಾಯಾ | ಕಂಸ ಚಾಣೂರ ಮರ್ದನಕಾಲಿಯ ವಿಷಕಲಿಲ ಸಲಿಲಯಾನಕಲಪ್ರಾಣ ಗೋಗೋಪ ಜೀವನಾ | ಈಯ್ಯಾ ಈಯ್ಯಾ || ಗೋಕುಲದಿ ಗೋಪಿಯರ ಮನೆಗಳಲಿ ಗೋರಸ ಚೌರ್ಯ ಸಂಪನ್ನಾ |ಮಧುರ ಮುರಲಿ ನಿನಾದದಿಂದ ಮೋಹಿಪ್ಪ ||ಮೌನಿಗಳ ಮಾನಸಗಳಲ್ಲಿ | ಸಸ ಸಾನಿಸಾನಿ ನಿಸನಿ |ನಿಸನಿ ಸಾಸನಿನಿ ಸರಿಗರಿ ಮಗಗರಿಸ ನಿಧನಿಧ ನಿಧಪಮ || ಧಿಕ್ಕತಾ ಧಿಕ್ಕತಾ ಧಿಮಿ ಧಿಮಿಕಿತಾ ಧಿಮಿಕಿತಾ ಗಿಕಿಟ ತೋಂ |ಗಿಕಿಟ ತೋಂ ಗಿದಿಗದಿಗ ಥೈಯಾ ಥೈಯಾ || ಪರಿ ನಂದನಂಗಳದಲ್ಲಿ ಕುಣಿಕುಣಿದಾಡುವ ಶ್ರೀವಿಠ್ಠಲನಪಾದಾಂಬುಜದ ಭಜನದಿಂದೆ ತರಿಸುವೆನೆಂದು ಪಾಡುವೆನುಗೀತ ಪ್ರಬಂಧ ಬರೆಹಗಾರ ರುಕ್ಮಾಂಗದನು ||
--------------
ರುಕ್ಮಾಂಗದರು
ಸರಸಿಜಾಕ್ಷ ಸರಸದಿಂದ ಸರಸಿಜೋದ್ಭವಗೊಲಿದು ಬಂದ ಪ ಉರಸಿನ ಮ್ಯಾಲೆ ಸರಸಿಜಾಕ್ಷಿಯನಿರಿಸಿ ಬಂದಅ.ಪ. ಶರಧಿ ಗಂಭೀರ ವರಘನಸಾರ ಕಸ್ತೂರಿ ತಿಲಕಧರಹೀರ ಮೌಕ್ತಿಕ ಕೇಯೂರ ಧರಿಸಿದ ನವನೀತಚೋರ ಬಂದ 1 ನಂದ ಗೋಪಿಗಾನಂದವೂಡಿದ ಕಂದ ಗೋಕುಲದಿ ಬಂದಅಂದದಿಂದ ಸೌಂದರಿಯರ ಗೋವಿಂದ ಮುಕುಂದ 2 ಅಂಗನೆಯರ ಕುಚಗಳಾಲಿಂಗನವ ಮಾಡಿ ನವಮೋಹನಾಂಗರಂಗವಿಠಲನು ನಮ್ಮಂತರಂಗದೊಳಗಿಹ ಕಲ್ಮಷಭಂಗ3
--------------
ಶ್ರೀಪಾದರಾಜರು
ಸಾಕೊ ರಂಗ ಅರಸುತನ ಯಾಕೊ ಯಾಕೊಗೋಕುಲದ ಗೊಲ್ಲರು ನುಗಿಸಿ ಗಲ್ಲವ ಹಿಂಡಿಕಾಕು ಮಾಡಿದ್ದು ನಿನಗೆ ಬೇಕೊ ಬೇಕೊ ಪ. ರುದ್ರ ಬ್ರಹ್ಮ ಹತ್ಯಾಕಾರ ಕ್ಷುದ್ರ ಬಲೀಂದ್ರನು ಕದ್ದೊಯ್ದ ಸುವರ್ಣ ಮುಕುಟವಕದ್ದೊಯ್ದ ಸುವರ್ಣ ಮುಕುಟವ ಬಲರಾಮ ಮಧ್ಯಪಾನಿ ಎಂದು ನುಡಿದನು ನುಡಿದನು 1 ಮಗನ ಮಗನು ಬಲು ಕೊಂಡೆಗಾರನಾದ ಮಗಳ ಮಗ ನಿನ್ನ ಹಣಿಗಚ್ಚಿದ ಮಗಳ ಮಗ ನಿನ್ನ ಹಣಿಗಚ್ಚಿದ್ದು ಕಂಡುನಗತಾರೊ ನಿನ್ನ ಸರಿಯವರು ಸರಿಯವರು2 ಶುಕ ಪಿತೃದ್ರೋಹಿ ಪ್ರಲ್ಹಾದ ಭ್ರಾತೃದ್ರೋಹಿ ವಿಭೀಷಣಭ್ರಾತೃದ್ರೋಹಿ ವಿಭೀಷಣ ಇವರು ಮುಖ್ಯಪಾತ್ರರೊ ನಿನ್ನ ಕರುಣಕೆ ಕರುಣಕೆ3 ಸ್ವಾಮಿದ್ರೋಹಿ ಅಕ್ರೂರ ಗುರು ದ್ರೋಹಿ ಪ್ರಲ್ಹಾದ ಬ್ರಾಹ್ಮಣರ ದ್ರೋಹಿಗಳು ಯಾದವರು ಬ್ರಾಹ್ಮಣರ ದ್ರೋಹಿಗಳು ಯಾದವರು ನಿನ್ನ ಮುಖ್ಯಪ್ರೇಮಕ್ಕೆ ವಿಷಯರೊ ವಿಷಯರೊ4 ದುರುಳ ಶಿಶುಪಾಲನ ಸಭೆಯೊಳು ಬೈದದ್ದುಸರಿಬಂತೆ ರಾಮೇಶನ ಮನಸಿಗೆ ಮನಸಿಗೆ 5
--------------
ಗಲಗಲಿಅವ್ವನವರು
ಸುಶೀಲ ಶ್ರೀಲೋಲ ಪ ಗೋಕುಲದಿ ಪುಟ್ಟಿ ಆಕಳನೆ ಕಾಯ್ದ ಗೋವರ್ಧನವನೆತ್ತಿ ಗೋಪವೃಂದ ಕಾಯ್ದ 1 ಬಾಲತನವ ನೋಡಿ ಪಾಲುಬೆಣ್ಣೆ ಸೂರೆ ಬಾಲಗೋಪರೊಡನೆ ಚೋರನೆನಿಸಿ ಮೆರೆದ 2 ಮುರಳಿನಾದಗೈದು ಪರಿಪರಿಯ ಜನರ ಮರುಳುಗೈಸಿ ಮೆರೆದ ಸುರಮುನಿ ವಂದ್ಯ 3 ಮಡದಿಯರು ಜಲದಿ ಮುದದಿಂದಾಡುತಿರಲು ಮದನನಯ್ಯ ವಸ್ತ್ರಗಳನೆ ಕದ್ದ ಚೋರ 4 ಕಾಳಿ ಮಡುವ ಧುಮುಕಿ ಕಾಳಸರ್ಪನ ತುಳಿದಕಾಮಜನಕ ಹರಿ ಶ್ರೀ ಕಮಲನಾಭ ವಿಠ್ಠಲ5
--------------
ನಿಡಗುರುಕಿ ಜೀವೂಬಾಯಿ
ಹರಿಪಾದವ ನಂಬಿರೋ | ಮನುಜರೆಲ್ಲ | ಹರಿಯಲ್ತೆ ಹರಿಗರ್ವ ಹರಿಸಿ ಗೋಕುಲದೀ | ವಿ | ಹರಿಸಿ ಹರಿಜಳಲ್ಲಿ ಹರಿಮೆಟ್ಟಿನಲಿವಂಥ ಪ ಸೋಮಜ ಭವನ ಪದಾ | ಸೇವೆಗೆ ಮೆಚ್ಚಿ | ಸೋಮ ಪುತ್ರಗೆ ನೀಡಿದಾ | ಸೋಮನಾ ಭಂಡಾರಿಯನೆ ಮಾಡಿ ದಯದಿಂದ | ಸೋಮಜಾನನಾ ಪೂರ್ಣ ಸೋಮಚಕೋರವಾ 1 ಕಮಲಾರಿ ಧರ ಸೇವ್ಯನು | ಶಂಖ ಚಕ್ರ | ಕಮಲಾಗದಾಧರನು | ಕಮಲಾಂಘ್ರೀಯನಖ ಕಮಲದಿ ಜನಿಸಿದಾ | ಕಮಲದಿ ಮೂಜಗ ಕಮಲಗತಿಯ ನೀವ 2 ಗೋಪೆಸರನ ಪಿತನ | ಉದ್ಧರಿಸಲು | ಗೋಪಾದ ತ್ರಯ ಕೃತನ | ಗೋಪಾದಿವಿನುತ ಮಹಿಪತಿಸುತ ಪ್ರಭು | ಗೋಪಕೋಟಿ ತೇಜ ಗೋಪಾಲ ನೆನಿಸುವ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಾಲು ಮಾರಲು ಪೋದೇವಮ್ಮ ಗೋಕುಲದೊಳ- ಗ್ಹಾಲು ಮಾರಲು ಪೋದೆವಮ್ಮ ಹಾಲು ಮಾರುವ ಧ್ವನಿ ಆಲಿಸಿ ಕೇಳುತ ಬಾಲಕೃಷ್ಣ ಬಹು ಲೀಲೆ ಮಾಡುತ ಬಂದಪ ಹಸಿರು ಜರದ ಸೀರೆಯನುಟ್ಟು ಕುಸುರಿಕಂಕಣ ಎಸೆವೊ ಹವಳದ ಹಿಂಬಳೆ ಕಟ್ಟು ಮೊಸರಿನ ಕುಂಭ ಕÀುಸುಮ ಮಲ್ಲಿಗೆಯ ಮುಡಿಯಲ್ಲಿಟ್ಟು ಶಶಿವದನೆಯರೆಲ್ಲ ಚೆಂದದಿ ಬರುತಿರೆ ಕುಸುಮನಾಭ ಮುಸುಗೆಳೆದು ಮೊಸರು ಸುರಿದ1 ಬಣ್ಣ ಬಣ್ಣದ ಸೀರೆಯನುಟ್ಟು ಮುತ್ತಿನ ಬಟ್ಟು ಹೊಳೆವೊ ಕಸ್ತೂರಿ ತಿಲಕವನಿಟ್ಟು ಹಾಲಿನಕುಂಭ ಸಣ್ಣಮಲ್ಲಿಗೆ ಮುಡಿಯಲಿಟ್ಟು ಚೆನ್ನಾರ ಚೆಲುವೇರು ಚೆಂದದಿ ಬರುತಿರೆ ಕಣ್ಣು ಸನ್ನೆಮಾಡಿ ಕರೆದು ಮುದ್ದಿಡುವ 2 ಮುಂದೆ ಮುಂದಾಗಿ ಹೋಗುತಿರಲು ಹಿಂದ್ಹಾಲಿನ್ಹರವಿ- ಗೊಂದೊಂದ್ಹರಳು ಮೀಟುತಿರಲು ಧಾರೆಗೆ ಬಾಯಾ- ನಂದದಿಂದೊಡ್ಡಿ ಕುಡಿಯುತಿರಲು ಸÀಂದಣಿಯೊಳು ನಾವು ಒಂದರಿಯದಲೆ ಬಂದಿಳುಹಲು ಬರೀ ಗಡಿಗೆ ಕಾಣಮ್ಮ 3 ಕಡಗೋಲಿಂದೊಡೆದÀು ಗಡಿಗೆಯನು ಬಡವರ ಬೆಣ್ಣೆ ಒಡಲಿಗೆ ಕದ್ದು ತಿಂಬುವುದೇನು ಕಂಡರೆನಗಂಡ ಬಡಿದÀರಿನ್ನೇನು ಮಾಡುವೆ ನೀನು ಗಡಿಬಿಡಿ ಮಾಡುತ ಕತ್ತಲ ಮನೆಯೊಳು ತÀುಡುಗನಂತೆ ತಿರುಗಾಡುವ ತಾನು 4 ಸಿಟ್ಟು ಮಾಡುವುದ್ಯಾತಕಮ್ಮ ಶ್ರೀ ರಮಣನ ಬಿಟ್ಟು ಬಾಹುವುದೆ ಲೇಸಮ್ಮ ಭೀಮೇಶಕೃಷ್ಣನ ಕಟ್ಟಿ ಹಾಕುವುದೆ ಲೇಸಮ್ಮ ಪಟ್ಟುಮಾಡಿ ಪರಹೆಂಗಳೇರೊಳು ಕ- ಣ್ಣಿಟ್ಟ ಮ್ಯಾಲೆ ಒಂದಿಷ್ಟಾದರು ಬಿಡ5
--------------
ಹರಪನಹಳ್ಳಿಭೀಮವ್ವ
ಹೊಡಿ ಜೈಭೇರಿ ಮ್ಯಾಲೆ ಕೈಯ ತಿವ್ರ್ಹೊಡಿ ಪ ಕಡಲೊಳು ಭೇದಿಸಿ ಅಡಗಿದ್ದ ್ಹಯಾಸುರ- ನ್ಹೊಡೆದು ವೇದವ ತಂದೊಡೆಯ ಶ್ರೀಕೃಷ್ಣನೆಂದ್ಹೊಡಿ 1 ಮಂದರೋದ್ಧರ ತಾ ಸುಂದರಿ ರೂಪದಿ ತಂದಮೃತೆರೆದ ಮುಕುಂದ ಶ್ರೀಹರಿಯೆಂದ್ಹೊಡಿ 2 ಖಳಹಿರಣ್ಯಾಕ್ಷನ ಸೆಳೆದಪ್ಪಳಿಸಿದ ಇಳೆಧಾರಕ ನಳಿನಾಕ್ಷ ಶ್ರೀಹರಿಯೆಂದ್ಹೊಡಿ3 ನಾಶ ಮಾಡಿದ ಲಕ್ಷ್ಮೀಶ ಶ್ರೀಹರಿಯೆಂದ್ಹೊಡಿ4 ತ್ರಿಚರಣದ ಇಳೆ ಬೇಡಿ ತ್ರಿವಿಕ್ರಮ- ರೂಪ ಧರಿಸಿದ ಉಪೇಂದ್ರ ಶ್ರೀಹರಿಯೆಂದ್ಹೊಡಿ 5 ಕೊಡಲಿ ಪಿಡಿದು ತಾ ಮಡುಹಿದ ದÉೂರೆಕುಲ ಕಡು ಮಾಋಷಿ ಪೊಡವ್ಯೇಶ ಶ್ರೀಹರಿಯೆಂದ್ಹೊಡಿ 6 ದಶಶಿರ ಹತ ಮಾಡಿದ ಸತಿ ಸೀತಾಂಗನೆ ಪತಿಯೆ ಶ್ರೀಹರಿಯೆಂದ್ಹೊಡಿ7 ಗೋಕುಲದೊಳಗಾನೇಕ ಸೂರ್ಯರಂ ತಾಕಳ ಕಾಯ್ದ ಗೋಪಾಲ ಶ್ರೀಹರಿಯೆಂದ್ಹೊಡಿ 8 ಮುದ್ದು ಸ್ತ್ರೀಯರ ವ್ರತ ಮೋಹಿಸಿ ಕೆಡಿಸಿದ ಶುದ್ಧ ವೈಷ್ಣವರಿಗೆ ಸುಲಭ ಶ್ರೀಹರಿಯೆಂದ್ಹೊಡಿ 9 ದುಷ್ಟ ಕಲಿಗಳಿಗೆ ಶಿಕ್ಷಕ ತಾ ನಿ- ರ್ದುಷ್ಟನು ಭೀಮೇಶಕೃಷ್ಣ ಶ್ರೀಹರಿಯೆಂದ್ಹೊಡಿ 10
--------------
ಹರಪನಹಳ್ಳಿಭೀಮವ್ವ
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು
ಇಂಥ ಬುದ್ಧಿಯಲ್ಲಿ ಸೇರಿತೊ ಕೃಷ್ಣ ಗೋಕುಲದೊಳುಎಂಥವರೂ ನಿನ್ನ ದೂರು ಹೇಳುತಿಪ್ಪರೊ ಹೀಗಾದರೆ ನಿಲ್ಲರೋ ಪಗಂಡನುಳ್ಳ ನಾರಿಯರಾ ಮಂದಿಯೆಲ್ಲ ನೋಡ ಬಲು ಉ-ದ್ದಂಡತನದಲ್ಲಿ ಸೀರೆ ಸೆರಗ ಪಿಡಿವರೇ ಇಂಥ ದುಡುಕು ಮಾಡುವರೇ ||ಚಂಡಾಡುವಾಗೆನ್ನವಸನ ಮರೆತೆ ಕೊಂಡು ಪೋಗಲವಳು |ಕಂಡು ಕೊಸರಿಕೊಂಡರಿಂಥ ಸುದ್ದಿ ಹುಟ್ಟಿಸಿ ಪೇಳುವಳಮ್ಮ ಹೊಂದಿಸಿ 1ಹಿರಿಯರುಳ್ಳಾ ಸೊಸೆಯ ಕೂಡ ಒಗೆತನವ ಕೆಡಿಸುವಂತೆ |ಸರಸವಾಡುವದು ನಿನಗೆ ಸಲ್ಲುವದೇನೋ ಯನಗೆ ಭೂಷಣವೇನೋ ||ನಿರುತ ಅವಳ ತಾಯಿ ನಂದಗೋಪಗಣ್ಣಾಯೆಂದು ಕರೆಯ- |ಲರಿತೆನತ್ತೆ ದುಗಳು ನಾದಿನಿಯೆಂದು ಮನಸಿಗೆ ಚರ್ಚೆ ಮಾಡಿದೆನೀ ಬಗೆ2ಕುಲದೇವತೆಯ ಮೀಸಲು ತುಪ್ಪ ನೆಲವಿನ ಮೇಲಿಟ್ಟಿರಲು ಮದ್ದು |ಕಲಶವ ಒಡೆದು ಬಾಹುವದೆಲ್ಲ ಚಿನ್ನಾಟವೇನೋ, ಅವರು ಮುದ್ದಿಸುವರೇನೋ ||ತಿಳಿಯದೆ ನೆಳಲಿದುಯೆಂದು ಕಳ್ಳನ ಒಳಗಿರಿಸಿಹಳೇಕೆಂದು ವಡದೆ |ನೆಲಖರಿಧೋಗುವಘೃತನೋಡಲೆ ತಿಂದೆನಮ್ಮಯ್ಯ ತಪ್ಪಿರೆ ಕಟ್ಹ್ಯಾಕು ಕಯ್ಯ 3ಚಿನ್ನನಂತೆಯಾಗಿಯವರ ಮಗ್ಗುಲೊಳು ಮಲಗಿಯೆಂಥ |ಸಣ್ಣ ಕೃತ್ಯ ಮಾಡಿ ಬಾಹುವೆಂತಲ್ಲೋ ಕಂದ ಕೇಳುವರಿಗೇನುಛಂದ||ನಿನ್ನ ಸಲಿಗೆ ಬಹಳ ಕಂಡು ಇಲ್ಲದ್ದೊಂದೆ ಹುಟ್ಟಿಸುವರು |ಯನ್ನ ದಿಸವಕ್ಕೀ ಜಾರತ್ವ ಕಲಿತಿದ್ದೇನೇನೇ ನಿನಗೇನೂ ತಿಳಿಯದೇನೇ 4ಕದ್ದು ಮೊಲೆಯುಂಡು ಕರು ಬಿಟ್ಟು ಹರಕೊಂಡಿತು ನೋಡಿರಿ ಎಂಬೆಯಂತೆ |ದುಗ್ಧವೆಮಾರಿಬಾಳಿವೆ ಮಾಡುವರೆಂತು ತಾಳುವರೋ ಹೀಗಾದರೆ ನಿಲ್ಲರೋ ||ಇದ್ದಾ ಮನೆಯವರಿಗೆ ನಂಬವು ಅಂಥಾಲಾಳ ಮೊಲೆಯ ನಾನುಂಡರೆ ಮೋರೆಗೆ |ಒದ್ದರೆ ರೋದನ ಮಾಡುತ ನಿನ್ನ ಬಳಿಗೊಂದಿನ ಬಾರೆನೇ ಹುಡುಗರಿಗಂಬುವ ಮಾತೇನೇ 5ಇಡಲುದಕವ ಬೆರಸಿ ಮಜ್ಜನಕೆ ಛಲದಿಂದಲಿ ಚಲ್ಲಿ ಬಾಹುವರೇ |ಬಡಿವೆನೊ ನಾ ತಾಳದೆ, ಮುದ್ದಾದರೆ ಮತ್ತೊಮ್ಮೆಯುಣಬೇಕು ಆಡುತ ಮನೆಯೊಳಗಿರಬೇಕು ||ಹುಡುಗರ ಸಂಗಡ ಅಣ್ಣನೂ ನಾನೂ ಇದ್ದೆವೆ, ಅಲ್ಲಾಕೆಯ ಮೊಮ್ಮಗನು |ಗಡಿಗೆಯ ಉರುಳಿಸೆ ನಾ ಕಂಡವರಿಗೆ ಹೇಳಿದೆನೆ ಇಷ್ಟಾ ಯನ್ನನು ಕಾಡುವದದೃಷ್ಟಾ 6ಎದೆಗಳ ಮುಟ್ಟುವದೇಕೋ ಎರಕೊಂಬುವರಲ್ಲಿಗೆ ಪೋಗಿಯಿನ್ನನ್ನಾ |ಹದದಿಂದಲೆ ಯಿರು ಶಿಕ್ಷೆಯ ಮಾಳ್ಪೆ ಎಚ್ಚರಿಕೆಯಿರಲಿ ಕಾಲ್ಪಡಿದರೆ ಬಿಡೆನೋ ಮರಳಿ ||ಮುದದಿಂದಲಿ ಚಂಡೊಗೆಯಲು ಅವಳಾ ಬಚ್ಚಲಿಯೊಳು ಬಿತ್ತು ತಕ್ಕೊಂಡೇ |ಹದ ತಪ್ಪಿದರೀ ಹೆಂಗಸರೆಲ್ಲಾ ಪ್ರಾಣೇಶ ವಿಠಲನಾಣೇ ಸುಳ್ಳಲ್ಲವು ಕಾಣೇ 7
--------------
ಪ್ರಾಣೇಶದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಎಂಥ ಗಾಡಿಕಾರನೆ-ಕೃಷ್ಣಯ್ಯ ಇ - |ನ್ನೆಂಥ ಗಾಡಿಕಾರನೆ? ಪಕಂತುಪಿತನು ಬೇಲಾಪುರದ ಚೆನ್ನಿಗರಾಯ ಅ.ಪಹಿಂಡುಕೂಡಿರುವ ಮಕ್ಕಳನೆಲ್ಲ ಬಡಿವರೆಲಂಡನೇನೆ-ಅಮ್ಮ |ಉಂಡು ಹಾಲು ಬೆಣ್ಣೆ ಬೆಕ್ಕಿಗಿಕ್ಕುವರೆ ಪ್ರಚಂಡನೇನೆ? 1ಹೆಚ್ಚು ಹೇಳುವುದೇನು ಬಿಚ್ಚಿ ಉರೋಜವ ತೋರುವನೆ-ಅಮ್ಮ |ಮುಚ್ಚು ಮರೆಯೇತಕೆ ಮನೆಮನೆಗಳಲಿ ಪೋಗುವನೆ 2ವಸುಧೆಯೊಳಗೆ ನಂದಗೋಕುಲದೊಳಗೆ ತಾ ಬಂದ ಕಾಣೆ-ಅಮ್ಮ |ಹಸು ಮಗನಾದ ನೀ ಪುರಂದರವಿಠಲರಾಯ ಕಾಣೆ 3
--------------
ಪುರಂದರದಾಸರು
ಎಂದಿಗೆ ಬಹನೆ ಕೃಷ್ಣ ಮಂದಸ್ಮಿತಾನನೆ |ಅಂದದಿಂದಿರುವ ತನ್ನಯ ವೃಂದಾವನ ಬಿಟ್ಟಿಲ್ಲಿಗೆ ತವಕದಿ ಪತರುಣೀ, ಗೋಕುಲದೊಳಗಿಹ ಸಖಿಯರು ಎಂಥಾ ಧನ್ಯರೆ |ಪರಮಾತ್ಮನ ಪೊಂದಿ ಇತರ ಕರಕರಿ ಅರಿಯಳೆ ||ಹರಿಯಿಂತೊಲಿದಿರಲವರೇನು ಸುರಲೋಕದ ಸ್ತ್ರೀಯರೇ |ಪರಿಪರಿ ಸುಖ ಸಾಗರದೊಳಗಿರುವರುಜರಿದುಮಧುರೆಯಲ್ಲಿಹದೆಂದು 1ಅಮ್ಮೆಏನೊಳ್ಳೆವರವರಾಳ್ವರು ಸಮ್ಮಾತಾಂತಲ್ಲವೆ |ನಮ್ಮನೆಯವರವರಂತೆ ಸುಮ್ಮನೆ ಇರುವರೆ ||ಬೊಮ್ಮನ ಜನಕೆಮೊಲಿಸಿದರೆ ಒಮ್ಮೆಗೆ ಪೇಳಿರೆ |ಸಮ್ಮಸಿ ಕೊಳ್ಳಲು ಮನದಿ ಸುಕರ್ಮದ ಪ್ರಬಲಿಗೆ ಘಮ್ಮನೆ ಬಹಸಖಿ 2ಅಲ್ಲೀ ಸ್ತ್ರೀಯರಕಿಂತಿತಿಶಯ ಚಲ್ವೆರ್ನಾವಲ್ಲವೆ |ಸುಳ್ಳಲ್ಲಿಂತಾಭರಣಾಂಬರವೆಲ್ಲಿ ಕಂಡಿಹರೆ ||ಗೊಲ್ಲಿತಿಯರು ನಮ್ಮಂದದಿ ಸೊಲ್ಲಿಸಬಲ್ಲರೆ |ಮಲ್ಲಮರ್ದನ ಪ್ರಾಣೇಶ ವಿಠಲೆಮ್ಮನು ಬಿಟ್ಟೆಲ್ಲಿ ಪೋಗನು 3
--------------
ಪ್ರಾಣೇಶದಾಸರು
ಕಂಡೀರೆ ನೀವೆಲ್ಲರೂ ಶ್ರೀಕೃಷ್ಣನ ಕಂಡೀರೆ ಪಕಂಡೀರೆ ಪಾಂಡುರಂಗನನೂ ಕಳಕೊಂಡಿರೆಪಾಪ ಸರ್ವವನೂ ಅಂಡಜವಾಹನನಾಗಿಸಂಚರಿಸುವಪುಂಡರೀಕಾಕ್ಷಬ್ರಹ್ಮಾಂಡ ನಾಯಕನನ್ನೂ 1ಎಂಟನೆ ಅವತಾರಿಯೆನಿಸಿ ದೇವಕಿ ಎಂಟನೇಗರ್ಭದಿ ಜನಿಸಿ ಎಂಟನೆಮಾಸಶ್ರಾವಣಕೃಷ್ಣಾಷ್ಟಮಿ ದಿನ ನಟ್ಟಿರುಳಿನಲಿಸೃಷ್ಟಿಗಿಳಿದ ಶ್ರೀಕೃಷ್ಣನ 2ಮಧುರಾ ಪಟ್ಟಣದಿ ಮೈದೋರಿ ಬಹುವಿಧವಾಗಿ ಗೋಕುಲದೊಳಗಾದಧಿಘೃತಚೋರಕನೆಂದು ಯಶೋದೆಗೆಪದುಮಾಕ್ಷಿಯರು ಬಂದು ದೂರುವ ಕೃಷ್ಣನ 3ದನುಜೆ ಪೂತನೆಯಸುಗೊಂಡು ತನ್ನಜನನಿಗೋಪಿಗೆ ಬಾಯೊಳ್ ತೋರ್ದ ಬ್ರಹ್ಮಾಂಡವನಜಾಕ್ಷಿಯರ ಕೂಡಿ ಯಮುನಾ ತೀರದೊಳಾಡಿವನಿತೆಯರುಡುವ ಶೀರೆಗಳೊಯ್ದ ಕೃಷ್ಣನೇ 4ಗೋವಳರರಸನೆಂದೆನಿಸಿ ಶಿರಿಗೋವರ್ಧನವೆತ್ತಿಗೋವ್ಗಳ ಮೇಸಿ ಪಾವಕನುಕಾಳಿಮರ್ದನ ಗೈದು ಮಾವ ಕಂಸನ ಗೆಲ್ದಮಧುರೆಯೊಳ್ ಕೃಷ್ಣನಾ 5ದ್ವಾರಕಾಪುರವೊಂದ ರಚಿಸಿ ಬಲವೀರರಾಮನ ದೊರೆರಾಯನೆಂದೆನಿಸಿನಾರಿಯರ್ ಹದಿನಾರು ಸಾವಿರ ವಡಗೂಡಿಮಾರಕೇಳಿಯೊಳ್ ಮುದ್ದು ತೋರುವ ಕೃಷ್ಣನ 6ಶರದ ಸೇತುವಿಗೆ ಮೈಯ್ಯಾಂತ ಉಟ್ಟಶೆರಗೀಗೆ ವರವ ದ್ರೌಪದಿಗೊಲಿದಿತ್ತನರನ ಸಾರಥಿಯಾಗಿ ಕುರುನೃಪರನು ಗೆಲ್ದುಧರೆಯ ಪಟ್ಟವ ಧರ್ಮಜನಿಗಿತ್ತ ಕೃಷ್ಣನೆ 7ದುಷ್ಟ ನಿಗ್ರಹನೆಂಬ ಬಿರುದೂ ಭಕ್ತರಕ್ಷಕನೆಂದು ಮೂರ್ಲೋಕವದೆಂದೂಸೃಷ್ಟಿಯೊಳ್ ನರಜನರು ನಮಿಸಿ ಪೂಜಿಸಲೆಂದುಬಿಟ್ಟರು ದ್ವಾರಕಾಪುರವ ರಾಮಕೃಷ್ಣರು 8ಹಡಗಿನ ಮೇಲೇರಿ ಬಂದೂ ನಮ್ಮಉಡುಪಿಅನಂತೇಶನಿದಿರಾಗಿ ನಿಂದೂಕಡು ಕೃಪೆಯೊಳ್ ಭಕ್ತ ಕನಕನಿಗೊಲಿದವೊಡೆಯ ಗೊೀವಿಂದ ಗೋಪಾಲಕೃಷ್ಣನ 9
--------------
ಗೋವಿಂದದಾಸ
ಕೃಷ್ಣ ರಕ್ಷಿಸೆನ್ನ ಜಯ ಜಯಪಕ್ಷಿರಾಜಗಮನಾದುಷ್ಟಹನನ ಜಲಜಾಕ್ಷ ಜನಾರ್ದನಶಿಷ್ಟ ಜನರ ಮನದಿಷ್ಟ ಪ್ರದಾಯಕ ಪಗೋಕುಲದೊಳು ನೆಲಸಿ ದೈತ್ಯರ-ನೇಕರನು ಮಥಿಸಿಲೋಕದ ಜನರಿಗೆ ರೀತಿಯ ತೋರುತ-ನೇಕರ ಮನೆ ಮನೆ ಬೆಣ್ಣೆಯ ಭುಜಿಸಿದ 1ದ್ವಾರಕೆಯೊಳು ನಿಂತೆ ಕೌರವವೀರಗಾಯುಧವಿತ್ತೆಸಾರಥಿಯಾಗುತೆ ಧಾರುಣಿ ಗೆಲಿಸಿದೆಧೀರ£Àುನೀ ಗೋವಿಂದನೆ ದಾಸನೆ 2
--------------
ಗೋವಿಂದದಾಸ