ಒಟ್ಟು 627 ಕಡೆಗಳಲ್ಲಿ , 94 ದಾಸರು , 563 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿಗಿರೀಶ ನಿನ್ನ ಬೇಡುವೆನೀಗ ಪರಿಪಾಲಿಸೊ ಸತತ ಪ. ನರಹರಿ ಭಕ್ತರ ಪೊರೆಯುವೆ ನೀನೆಂ- ಇಂದು ಅ.ಪ. ನಾರಸಿಂಹ ನಿನ್ನ ಸಾರಿ ಭಜಿಸುವೆನು ತೋರೊ ನಿನ್ನ ಪದವ ಬಾರಿಬಾರಿಗೆ ಸ್ತುತಿಸಲು ಬಾಲನು ಘೋರ ದೈತ್ಯನ ಸೀಳಿ ಪೊರೆದೆಯೊ 1 ಶೇಷಾಂತರ್ಗತ ನಾರಸಿಂಹ ವಿ- ಶೇಷ ಮಹಿಮೆ ತೋರೊ ಶೇಷಶಯನ ಮಹರುದ್ರಾಂತರ್ಗತ ಪೋಷಿಸೊ ಭಕ್ತರ ಶಾಂತರೂಪದಿ 2 ಲೀಲೆಯಿಂದ ಶ್ರೀ ಲಕುಮಿ ಹಿತದಿ ವ್ಯಾಳಶಯನನಾಗಿ ಪಾಲಿಸಬೇಕೆನ್ನನು ಸತತದಿ ಗೋ- ಪಾಲಕೃಷ್ಣವಿಠ್ಠಲ ನೀ ದಯದಿ 3
--------------
ಅಂಬಾಬಾಯಿ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರುಣದಿಂದ ಕಾಯೊ ಎನ್ನನು ಉರಗಾದ್ರಿವಾಸ ವಿಠ್ಠಲ ದೇವ ಪ ತಂದೆ ವೆಂಕಟೇಶ ವಿಠ್ಠಲ ಬಂದು ಎನ್ನ ಹೃದಯದಲ್ಲಿ ನಿಂದು ನಾಮ ನುಡಿಸಿ ಪೇಳ್ವ ಚಂದ ಮನಕೆ ತಂದು ಕೊಡುತ 1 ವಾಸುದೇವ ನಿನ್ನ ಮಹಿಮೆ ತೋಷದಿಂದ ಭಜಿಸುವುದಕೆ ದೋಷಗುಣಗಳನ್ನೆ ಕಳೆದು- ಲ್ಲಾಸ ಮನಕೆ ಒದಗುವಂತೆ 2 ಮಂದಮತಿಗಳಾದ ಜನಕೆ ಮುಂದೆ ಗತಿಯ ಪಥವ ತೋರಿ ಬಂಧನಂಗಳನ್ನೆ ತರಿದು ತಂದೆ ಕಾಯೊ ಇಂದಿರೇಶ 3 ಬೊಕ್ಕಸದ ದ್ರವ್ಯ ಜನರು ವೆಚ್ಚಮಾಡುತಿರುಹ ತೆರದಿ ಮೆಚ್ಚಿ ಬಂದ ಜನರ ಮನದ ಇಚ್ಛೆ ಪೂರ್ತಿಗೊಳಿಸಿ ಪೊರೆದೆ 4 ಅಂತರಂಗದೊಳಗೆ ನಿನ್ನ ಚಿಂತೆ ಮರೆಯದಂತೆ ಕೊಟ್ಟು ಅಂತರಾತ್ಮ ಕಮಲನಾಭ ಸಂತೈಸಿ ಕಾಯೊ5 ಟ ಟ ಅಸ್ವತಂತ್ರ ಜೀವಾಂತರ್ಗತ ಶ್ರಿ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಶ್ರೀ ಉರಗಾದ್ರಿವಾಸ ವಿಠ್ಠಲಾಭಿನ್ನ ಶ್ರಿ ಗುರುವಾಸುದೇವ ವಿಠ್ಠಲಾ ಭಿನ್ನ ಶ್ರೀ ತಂದೆ ವೆಂಕಟೇಶ ವಿಠ್ಠಲಾತ್ಮಕ ಶ್ರೀ ಕಮಲನಾಭ ವಿಠ್ಠಲಾಯ:ನಮ: ಟ ಶ್ರೀ ಕಮಲನಾಭ ವಿಠ್ಠಲ ದಾಸರಾದ ಜೀವೂಬಾಯಿ ಅವರು ರಚಿಸಿದ ಮೊತ್ತ ಮೊದಲ ಹಾಡು.
--------------
ನಿಡಗುರುಕಿ ಜೀವೂಬಾಯಿ
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣಾದಿ ಪೊರೆಯನ್ನ ಪಾರ್ವತೀರಮಣ ಪುರಹರನೆ ಕರುಣಿಪುದೆಮಗೆ ಸುಜ್ಞಾನ ಈ ಪ ಧರಣಿಯೊಳು ಗೂಗಲ್ಲು ಕ್ಷೇತ್ರ ಸುಮಂದಿರನೆ ನಿನ್ನ ಅನುದಿನ ಅ.ಪ ದುರಿತ ಗಜ ಪಂಚಾಸ್ಯ ಕರಮುಗಿವೆ ನೆರೆನಂಬಿನಿನ್ನನು ಶೇವಿಸುವ ಶರಣರಿಗೆ ಸುರತರುವೆ ಜನಿಸಿರುವರೊಳು ಸರ್ವರಿಗೆ ಮನದಲಿ ಪ್ರೇರಿಸುವ ಗುರುವೆ ಗೂಗಲ್ಲಪ್ರಭುವೆ 1 ಭಾಗವತಸು ತಿಳಿಸೆನ್ನ ಮನಕೆ ಜಿತ ಮನೋಜಾತ 2 ಪರಿಪಾಲಿಸಲು ಶಿವನೆ ರಾಜಿಸುವ ಕೃಷ್ಣಾಕೂಲದಲಿ ನಿಂದಿರುವಿ ಶಂಕರನೇ ಜನಮೇಜಯಾಖ್ಯ ಪಾದ ಸುವಿಶಾಲ ಮಹಿಮನೇ 3 ನೀಡಿದೆಯೊ ಗೌತುಮ ಮನಮಂದಿರದಿ ಗೋ- ವಿಂದನಂಘ್ರಿಯ ಕಾಂಬುವೊ ಬಗೆಯ ತೋರೆನಗೆ ಜೀಯ4 ಶ್ರೀಶ್ವೇತಗಿರಿ ಸುಕ್ಷೇತ್ರ ಪಂಚ ಕ್ರೋಶಗನು ನೀನೆ ಸರ್ವೇಶ ಕಾರ್ಪರ ವಾಸಸಿರಿ ನರಕೇಸರಿಗೆ ಪ್ರಿಯನೇ ದುರ್ವಿಷಯದಲಿ ಅಭಿಲಾಷೆ ಪುಟ್ಟಿಸದಂತೆ ಶಶಿಧರನೆ ಸಿರಿವ್ಯಾಸಕುವರನೇ5
--------------
ಕಾರ್ಪರ ನರಹರಿದಾಸರು
ಕರುಣಿಸಲೊಲ್ಯಾ ಕರುಣಾನಿಧೇ ಪ ಕರುಣಿಸಲೊಲ್ಯಾ ನೀ ಕರುಣಸಾಗರ ನಿನ್ನ ಭವ ಅರಣ ದಾಟುವಂತೆ ಅ.ಪ ವಿಶ್ವವ್ಯಾಪಕನೆ ವಿಶ್ವಾಸುವಿಶ್ವ ನೀ ವಿಶ್ವ ಪ್ರೇರಕ ನಿನ್ನ ವಿಶ್ವಪಾದದೊಳು ನಾ ವಿಶ್ವಾಸಮಾಳ್ಪÀಂತೆ 1 ಜ್ಞಾನದಾಯಕನೆ ಜ್ಞಾನದಾಯಕ ಎನ್ನ ಜ್ಞಾನನಿಚಯ ನೀನೆ ಹಾನಿಮಾಡಿ ನಿನ್ನ ಜ್ಞಾನವನೈದೊಂತೆ 2 ಮಂದರೋದ್ಧರನೆ ಮಹಾರಾಯಾ ನಂದದಾಯಕನೆ ಇಂದಿರಾಪತಿ ನಿಜ ನಂದಕೊಡುವ ನಿನ್ನ ದ್ವಂದ್ವ ಚರಣದೊಳು ಸಂದೇಹವಿಲ್ಲದಂತೆ 3 ಕಾಮಿತಾರ್ಥವನೆ ಕಮಲಾಕ್ಷಾ ಕಾಮನ್ನಪಿತನೆ ಕಾಮಿತಾರ್ಥಗಳನ್ನು ಕಾಮಿಸದಲೆ ನಿನ್ನ ನಾಮವ ಭಜಿಸುವ ನೇಮಮತಿಯನಿತ್ತು 4 ಸೃಷ್ಟಿಕಾರಣನೆ ಶ್ರೀಕೃಷ್ಣಯ್ಯಾ ವೃಷ್ಣಿನಾಯಕನೆ ದುಷ್ಟಮತಿಯ ಬಿಡಿಸಿ ಶಿಷ್ಟಙÁ್ಞನವನಿತ್ತು ದಿಟ್ಟಗುರುಜಗನ್ನಾಥ ವಿಠಲ ನೀ ಎನ್ನ 5
--------------
ಗುರುಜಗನ್ನಾಥದಾಸರು
ಕರುಣಿಸು ಪ್ರಭುತಂದೆ ತರಳಂಗೆ ದಯವ ಪ ಹರಿ ನೀನೆ ಅವತರಿಸೀಪರಿಭವಶರಧಿಯ ಪರಿಹಾರಗೊಳಿಸುವ ಪರಮಪಾವನರೂಪ 1 ಅರಿವಿಟ್ಟು ಭಜಿಸುವೆ ಮರೆಯದೆ ಮಗನ್ವಚನ ಕರುಣದಿ ಆಲಿಸಿ ವರದಹಸ್ತವ ಶಿರಕೆ 2 ಹಿಂಸೆಬಿಡಿಸು ಮಹ ಸಂಸಾರದುರಿಯನ್ನು ಧ್ವಂಸಗೈಯುವ ಶರಣರಾಂಶದ ಪ್ರಸನ್ನತೆ 3 ದುರಿತ ದೂರೀಕರಿಸಿ ಪರಮಾನಂದದಲಿರುವ ಸಿರಿ 4 ಮರೆಯ ನಿನ್ನಡಿಯಿನ್ನು ಸರುವೇಶ ಮೊರೆಕೇಳಿ ಗುರುವಾಗಿ ಶ್ರೀರಾಮ ಸ್ಥಿರಮೋಕ್ಷ ಸಂಪದವ 5
--------------
ರಾಮದಾಸರು
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣಿಸೈ ಗುರುರಾಯ ಚರಣತೀರ್ಥವನು ಹರಣ ಭಯದೊಳು ಲಕುಮೀರಮಣನೊಲಿವಂದದಲಿ ಪ ದೇಶ ದೇಶವ ತಿರುಗಿ ಬೇಸರದು ಈ ಚರಣ ಭೂಸುರವ ಪೂಜಿಸುವದು ಈ ದಿವ್ಯ ಚರಣ ಕ್ಲೇಶವೆನಿಸದೆ ತೀರ್ಥದಾಸೆಯ ಬಿಡದ ಈ ಚರಣ ಕಾಶಿ ರಾಮೇಶ್ವರಕೆ ನಡೆದ ಚರಣ1 ಹಾವಿಗೆಯನೊಲ್ಲದೆ ಹಾದಿ ನಡೆದಿಹ ಚರಣ ದೇವಿ ಭಾಗೀರಥಿಗೆ ಇಳಿದ ಚರಣ ಕಾವಿ ವಸ್ತ್ರವನುಟ್ಟ ಕಾಶಿವಾಸಿಯ ಚರಣ ಕೋವಿದರು ವಂದಿಸುವ ದಿವ್ಯ ಚರಣ2 ಗಟ್ಟಿ ಬೆಟ್ಟವ ತಿರುಗಿ ಕಷ್ಟಬಟ್ಟಿಹ ಚರಣ ಸೃಷ್ಟಿಗುತ್ತಮ ನದಿಯ ಮಿಂದ ಚರಣ ಇಷ್ಟಗಳನೆಲ್ಲ ತಾ ಪಡೆದುಕೊಂಡಿಹ ಚರಣ ಕೃಷ್ಣಮೂರ್ತಿಯ ಬಳಿಗೆ ಬಂದ ಚರಣ 3 ಶುದ್ಧ ವೈಷ್ಣವರೆಲ್ಲ ಉಜ್ಜಿ ತೊಳೆವ ಚರಣ ಬದ್ಧ ಮುಕ್ತರಿಗೆಲ್ಲ ಸಿದ್ಧಿಯಹ ಚರಣ ಮಧ್ವರಾಯನ ಮತದಿ ಎದ್ದು ತಿರುಗುವ ಚರಣ ವಿದ್ಯೆನಿಧಿ ಗುರುರಾಯ ಬಾಳ್ದ ಚರಣ 4 ಧರಣಿಯನು ಬಲವಂದು ದಣಿದು ಬಂದಿಹ ಚರಣ ಕೈವಲ್ಯ ಪಡೆದ ಚರಣ ವರಾಹತಿಮ್ಮಪ್ಪನಿಹ ಗಿರಿಯನೇರಿದ ಚರಣ ಸ್ಥಿರವಾಗಿ ಉಡುಪಿಯೊಳು ನಿಂದ ಚರಣ 5
--------------
ವರಹತಿಮ್ಮಪ್ಪ
ಕರೆತಾರಬಾರದೇನೇ ರಂಗಯ್ಯನ ಬರಲಾರೆನೆಂದರೂ ಕರವಮುಗಿದಾದರೂ ಪ ಸರಸಿಜನಾಭನ ಅರವಿಂದಚರಣಕೆ ಎರಗಿ ಎರಗಿ ಮತ್ತೆ ಕರುಣಿಸೆಂದಾದರೂ ಅ.ಪ ನೆನೆದು ಪೂಜಿಸುವರ ಮನೆಗೆ ಬರುವೆಯೆಂದು ಮುನಿಜನ ಪೇಳ್ದುದು ಸಟೆಯಹುದೇನೋ ಜನನಿಯು ಜನಕನ ಅನುಜನಗ್ರಜನ ಘನತರ ಬಂಧುವು ನೀನೆಂದುಸುರಿ 1 ನಂದನಕಂದ ಗೋವಿಂದನ ಪಾದಾರ ವಿಂದವ ಕಾಣದೆ ಜೀವಿಸಲರಿಯೆ ಎಂದು ಪೇಳುತ ಮುಚುಕುಂದಗೆ ವಂದಿಸು ಮಂದಹಾಸದಿ ಬರುವ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರೆವರು ಬಾ ಮನೆಗೆ ಶ್ರೀ ಕೃಷ್ಣ ಮೂರ್ಜಗಂಗಳಿಗೆ ರಾಜಾಧಿರಾಜ ಪ ರಾಜಿಸುವ ಸೋಜಿಗದ ಬಲು ಸೋಜಿಗದ ಮನೆಗೆ ಶ್ರೀ ಕೃಷ್ಣ ಅ.ಪ ಸಾರಸಲೋಚನೆ ಭೀಷ್ಮಕ ಕುವರಿ ನೂರು ವಿಧದ ಬಲು ಪರಿಮಳದ ಚಾರು ಕುಸುಮಗಳ ಹಾರವ ಪಿಡಿದು ಮಾರಜನಕ ನಿನ್ನ ಕೋರುವಳು 1 ಚಿತ್ತಜನಯ್ಯನ ಚಿತ್ತದ ರಾಣಿ ಯತ್ನದಿ ನಿನ್ನನು ಕರೆಸಿದಳು ಚಿತ್ರವಿಚಿತ್ರದ ಮುತ್ತುರತ್ನಗಳ ಉತ್ತಮ ಪೀಠಕೆ ದಯಮಾಡೊ 2 ಯದುಕುಲ ನಂದನ ನೀ ಬಾರೋ ಮಧುರಾನಾಥಾ ನೀ ಬಾರೋ ಮದಗಜಗಮನದಿ ಬಾರೊ ಪ್ರಸನ್ನ ವದನೆಯರಾರತಿ ಬೆಳಗುವರು3
--------------
ವಿದ್ಯಾಪ್ರಸನ್ನತೀರ್ಥರು
ಕಲಿಪುರುಷನಿಗತಿಹರುಷ ಬಲುಸಜ್ಜನಗಳುಬಾಯ್ಬಾಯ್ಬಿಡುವುದು ಪ ಅಲಕ್ಷ್ಮೀರಮಣ ಅಖಿಲ ದುರ್ಗುಣಂ ಗಳಕೊಟ್ಟೆಲ್ಲರ ಗಾಳಿಗೆ ತೂರುವೆ ಅ.ಪ ರಾವಣಾಸುರಗೆ ಮಗನೆನಿಸಿ ದೇವತೆಗಳ ಸೆರೆಯಲ್ಲಿಡಿಸಿ ಭಾವಜ್ಞರನು ನಿರಾಕರಿಸಿ ಸಭಾಸ್ಥಾನಗಳ ಭಂಗಪಡಿಸಿ ಬಹುದುಃಖ ಪಡಿಸಿ ಪಾಂಡುಕುಮಾರರ ಪಾವನಿಯಿಂತೊಡೆಯೊಡೆದು ಬೀಳುತ ಬಗೆಯ ನೆನದುಯೀಗೆಮ್ಮ ಬಾಧಿಸುವೆ 1 ಆಗಮಗಳು ಸುಳ್ಳೆಂಬುವದು | ನಾ ಯೋಗಿಯೆಂದು ಹಿಗ್ಗುತಲಿಹುದು ಭಾಗವರತ ನಿಂದನೆಗೈದು | ನಿರ್ ಭಾಗ್ಯತನ್ನತಾನೆ ಪೊಗಳುವದು ಸಾಗರದಂತಿಹ ದುರಾಸೆಯೊಳಗಾ ವಾಗಲು ಜನ ಮುಳುಗುತ ತಿಳಿಯದೆ ಹಾಗರ್ವದಿ ನಿಷ್ಫಲವ ಪೊಂದುವರಿದು 2 ನೀತಿ ತಪ್ಪಿತಾವ್ನಡೆಯುವುದು | ದು ರ್ಜಾತಿಗಳುತ್ತಮರೆಂಬುವದು ಆತುರದಲಿಮನವಳುಕುವುದು | ಬಲು ಘಾತಕತನದಲಿತಿರುಗುವದು ಗಾತುರಸುಖವೇ ಮೊಕ್ಷವೆಂದು ವಿಷ ಯಾತಿಶಯದಿಯರಿಷಡ್ವರ್ಗಗಳೊಳು ರಾತಿರಿಪಗಲೆನ್ನದೆ ಬೀಳ್ವುದುನಿ ನ್ನಾತಗಳಿಂಗೆ ಸ್ವಭಾವಗುಣಂಗಳು 3 ಕ್ಷಾಮಡಾಂಬರಗಳ್ಹೆಚ್ಚುವದು | ನಿ- ಷ್ಕಾಮರ ಹಾಸ್ಯವಮಾಡುವದು ಕಾಮದಿಜನಗಳ ಬಾಧಿಪದು ನಿಷ್ಕಾರಣರೋಗದಿ ಸಾಯುವದು ಪಾಮರರೆಲ್ಲರು ಪಂಡಿತರಾವೆಂ- ದೀಮಹಿಯೊಳುಮನಬಂದಂತೆಸದಾ ತಾಮಸಗಳಬೋಧಿಸುತಲಿಜಗದೊಳು ದ್ರವ್ಯಾರ್ಜನೆಮುಖ್ಯಸಾಧನವೆಂಬುದು 4 ವಿಪರೀತ ಫಲಗಳಾಗುವುದು ಚಪಲಹೊಂದಿಚಿಂತಿಸುತಿಹುದು ಜಪಹೋಮಗಳನು ತ್ಯಜಿಸುವದು ಬಲುಜಾಡ್ಯಂಗಳನನುಭವಿಸುವದು ಉಪಕಾರಗಳನುಮಾಳ್ಪರಲ್ಲಿ ಪ್ರ ತ್ಯಪಕಾರಗಳೆಣಿಸುತಲಾವಾಗಲು ಕಾಲಕಳೆಯುತ ವೃಥಾನೋಯುವದು 5 ಶೂದ್ರರುವೇದವ ಪಠಿಸುವದು | ನಿರು ಪದ್ರವನುದಂಡಿಸುತಿಹುದು | ಹರಿ ರುದ್ರವಿಧಿಗಳದೂಷಿಪದು | ಅ- ಬದ್ಧವೆಬಲುರುಚಿಯೆಂಬುವದು ಕ್ಷುದ್ರಕುನಾಸ್ತಿಕಮತವನಂಬಿ ದೇ- ವದ್ರೋಹಗಳನುಮಾಡುತ ಬಾಯಲಿ ಇದ್ದದ್ದಾದರುಯಿಲ್ಲೆಂಬುವದು6 ಪರರೊಡವೆಗಳಪಹರಿಸುವದು | ನೆರೆ- ಹೊರೆಯಂತಿರಬೇಕೆಂಬುವದು ಗುರುವಿನಲ್ಲಿ ದ್ವೇಷವೆಣಿಸುವದು | ಸತಿ- ಯರುಪತಿಯಲಿದ್ವೇಷಿಸುತಿಹುದು ನಿರತವುಜೀವನಕಿಲ್ಲೆಂದುಬಳಲಿ ದುರ್ವಿದ್ಯಗಳಭ್ಯಾಸಿಸಿಕಡೆಯಲಿ ನರಕಂಗಳಿಗೆ ಪ್ರಯಾಣಮಾಡುವದು7
--------------
ಗುರುರಾಮವಿಠಲ
ಕಲಿಮುಖ್ಯ ದೈತ್ಯರನು ಸ್ಮರಿಸಿ ಬಿಡದೆ ಕಲುಷವರ್ಜಿತ ಭಾಗವತರು ಮರೆಯದಲೆ ಪ ಮಲಮೂತ್ರಗಳ ವಿಸರ್ಜನೆ ಗೈವಾಗ ಎಂ ಜಲ ಕೈ ಬಾಯ್ದೊಳೆದು ಉಗುಳುವಾಗ ಹುಳಿ ಬೀಜ ಕವಡೆ ಪಗಡೆಗಳಾಡುವಾಗ ಮ ಕ್ಕಳನಾಡಿಸುತಲಿ ವಿಸ್ಮರಣೆಯಿಂದಿರುವಾಗ 1 ಸಂಧಿಕಾಲದಲಿ ಸತಿಯೊಡನೆ ಪವಡಿಸಿದಾಗ ನಿಂದ್ಯ ಕರ್ಮಗಳನಾಚರಿಸುವಾಗ ತಂದೆ ತಾಯಿಗಳ ದಿನ ಮರೆತು ಒಟ್ಟಾಗ ಕ ರ್ಮೇಧಿ ಭಿಕ್ಷಕೆ ಬರಲು ಇಲ್ಲೆಂಬುವಾಗ 2 ಮಾಸೋಕ್ತ ಧರ್ಮವನು ತೊರೆದಾಗ ವಿಪ್ರಗೋ ಗ್ರಾಸಗಳ ಕೊಡದೆ ಭುಂಜಿಸುವಗಲೇ ಮೀಸಲು ಮಡಿ ಮೈಲಿಗೆಗಳ ನೋಡದಲೆ ದು ಷ್ಯಾಸೆಯಲಿ ನೀಚರಾಲಯದಲುಂಬಾಗ 3 ಪ್ರಾಯ ಧನ ಮದದಿಂದ ಹೇಯ ವಿಷಯಗಳು ಪಾ ದೇಯವೆಂದರಿದು ಭುಂಜಿಸುವಾಗಲು ಜಾಯಾತ್ಮ ದೇಹಾದಿಗಳು ತನ್ನದೆಂಬಾಗ ಮಾಯವಾದಿಯ ಉಕುತಿ ಮನಕೆ ತಂದಾಗ 4 ಮತಿವಮತರೊಡನೆ ಮತ್ಸರ ಪುಟ್ಟಿದಾಗವ ರ್ಪಿತ ಪದಾರ್ಥಗಳ ಭುಂಜಿಸುವಾಗಲು ಮೃತ ವತ್ಸ ಗೋವಿನ ಚಲಮಂಬಾಗ ಶ್ರೀ ಪತಿ ಜಗನ್ನಾಥವಿಠಲನ ಸ್ಮøತಿ ಬಿಟ್ಟಾಗ 5
--------------
ಜಗನ್ನಾಥದಾಸರು
ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಪ ಜಲಜನಾಭನ ಕೃಪೆಯ ಪಡೆದವರು ಕೇಳಿ ಅ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು1 ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು 2 ವೈರಿ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ3 ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು 4 ಅನ್ನವಸ್ತ್ರಗಳಿಂದ ಚೆನ್ನಾಗಿ ಬಾಳುವರಭಿನ್ನ ತಂತ್ರವ ಮಾಡಿ ಕೆಡಿಸುತಿಹರುಗನ್ನಗತಕವ ಮಾಳ್ಪ ಗ್ರಾಮಣ್ಯಗಳ ಕಲಿತುಕುನ್ನಿಗಳು ಹೆಚ್ಚಿದರು ಕ್ರೂರ ಫಣಿಯಂತೆ 5 ಆಳಿದೊಡೆಯಂಗೆರಡು ಬಗೆಯುವಾತಗೆ ಒಳ್ಳೆಮಾಳಿಗೆಯ ಮನೆ ತುರುವು ಧನಧಾನ್ಯವುವೇಳೆವೇಳೆಗೆ ಬರುವ ಹೆಂಡತಿಯ ಲೆಕ್ಕಿಸದೆಸೂಳೆಯನು ನೆಚ್ಚಿ ಕಾಲವ ಕಳೆವರಯ್ಯ6 ಸೇರಿ ದ್ರೋಹವ ಮಾಳ್ಪ ಕ್ರೂರಕರ್ಮಿಗಳ ಮತಪೂರೈಸಿ ಕೊಡುವರರಸುಗಳೆಲ್ಲರುಧಾರಿಣಿಯ ಭಾರವನು ತಾಳಲಾರದೆ ದೇವಿಶ್ರೀರಾಮ ರಾಮೆಂದು ಶಿರವ ತೂಗುವಳು7 ಪತಿ ನೀನೆ ಗತಿಯೆನಲುಮುತ್ತೈದೆಗುಡುವುದಕೆ ವಸ್ತ್ರವಿಲ್ಲಮತ್ತೆ ವ್ಯಭಿಚಾರಿಣಿಗೆ ತೊಡಿಗೆ ಬಂಗಾರಗಳುವರ್ತನೆಯಿದೇನಯ್ಯ ಕಲಿಯುಗದ ಮಹಿಮೆ 8 ಪತಿವ್ರತೆಯರೆಂಬುವರು ಶತಸಹಸ್ರಕೊಬ್ಬರುಮಿತಿಮೀರಿ ಇಹರಯ್ಯ ಇತರ ಜನರುಮತಿಗೆಟ್ಟು ಮನಸೋತು ಅನ್ಯ ಪುರುಷರ ಕೂಡಿಗತಿಗೆಟ್ಟು ಹೋಗುವರು ಮೂರು ತೊರೆದು 9 ಹರಿಹರರ ಪೂಜೆಗಳು ಹಗರಣಗಳಾದವುಉರಿ ಮಾರಿ ಚಾಮುಂಡಿ ಶಕ್ತಿಗಳಿಗೆಕುರಿ ಕೋಣ ನೈವೇದ್ಯ ಧೂಪದೀಪಗಳಿಂದಪರಮ ಭಕ್ತಿಯ ಸಲಿಸಿ ಪೂಜಿಸುವರಯ್ಯ10 ನಡೆವ ಕಾರ್ಯಗಳೆಲ್ಲ ನುಡಿಯಲೆನ್ನಳವಲ್ಲಒಡೆಯ ನೀನೇ ಬಲ್ಲೆ ಕಲಿಯುಗದ ಮಹಿಮೆತಡವ ಮಾಡಲಿ ಬೇಡ ತಾಳಲಾರದು ಲೋಕಮೃಡನ ವೈರಿಯ ಪೆತ್ತ ಆದಿಕೇಶವನೆ11
--------------
ಕನಕದಾಸ