ಒಟ್ಟು 1104 ಕಡೆಗಳಲ್ಲಿ , 106 ದಾಸರು , 899 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಬನ್ನಿ ಇಂದಿರೇಶಾ ಇಂದುವಾರದಲಿ ಬಲು | ಅಂದದಿಂದ ಮೆರೆವನಂದವ ನೋಡಾ ಪ ಮುತ್ತಿನ ಕಿರೀಟ ಮೇಲೆ ಸುತ್ತಿದ ಲತೆ ತಳಲು | ರತ್ನಗಂಬಳಿ ಕಲ್ಲಿಯ ಬುತ್ತಿ ಪೆಗಲೂ || ತೂತ್ತುತೂರಿ ಎಂದು ಸ್ವರ | ವೆತ್ತಿ ಊದುವ ಕೊಳಲು | ಉತ್ತಮ ಶೋಕ್ಲವನು ಮೆರೆಯುತ್ತಲಿಪ್ಪುದು 1 ಉಂಗುರಗೂದಲು ಪುಬ್ಬು ಸಿಂಗಾಡಿ ಅಂದದಿ ಒಪ್ಪೆ | ಅಂಗಾರ ಕಂಕಣ ಮಂಗಳಾಂಗ ನಿಸ್ಸಂಗ | ರಂಗ ತುಂಗ ಮಹಿಮ ತಾರಂಗ ಅಂಗುಲಿಲಿ ರತ್ನ | ದುಂಗುರವ ಯಿಟ್ಟ ಸುಖಂಗಳ ನೋಡಾ 2 ಉಂಗುರವ ನಡು ಮೇಲು ಕಂಗಳ ಕುಡಿನೋಟ | ಗೋಪಾಂಗನೇರ ಮನಕೆ ಮೋಹಂಗಳ ತೋರೆ | ಅಂಗಜನ್ನೆನೆಸಿ ತಾಪಂಗಳು ವೆಗ್ಗಳದಿಂದ | ಹಂಗೀಗರಾಗೆ ನಗುವ ಗಂಗಾಜನಕ 3 ಲೋಕ ಬೆಲೆಗೊಂಬ ಅಲೌಕೀಕ ಮಣಿನಾಸದಲ್ಲಿ | ರಾಕಾಬ್ಜಾನಂದದಿ ಮೊಗಾನೇಕ ಲೋಕೇಳಾ | ನಿತ್ಯ ಬೇಕೆಂದು ಜಪಿಸಲು ದೊರಕದ ದೊಂಬಲು ಬಾ ಯದುಕುಲಾಂಬರಾ4 ಕುಂಡಲ ಕರ್ಣ ಶ್ರೀಗಂಧ ಪೂಸಿದ ವಕ್ಷ | ಪೂಗೊಂಚಲು ಸಣ್ಣನಾಮ ಆ ಗೆಜ್ಜೆಧ್ವನಿ | ಆಗಮನ ಸೋಲಿಸೆ ನಾನಾ ಭೋಗಾದಲ್ಲಿಯಿಪ್ಪ | ಮಧ್ವ | ಯೋಗಿಪ್ರಿಯಾ ವಿಜಯವಿಠ್ಠಲಾ ಗುಣನಿಧಿ 5
--------------
ವಿಜಯದಾಸ
ಇಂದುಶೇಖರಾ ಮನ್ನಿಸೋ ದಯದಿಂದ ಶಂಕರಾ ಪಪಂಚವಕ್ತ್ರನೆ ಪಾಲಿಪುದು ತ್ರಿಪಂಚನೇತ್ರನೆಪಂಚಭೂತ ತನು'ದೆನಗೆ ಪಗೆಯಾಗಿದೆ ನೋಡಯ್ಯಾವಂಚಕನು ನೀನೆಂದೆನ್ನ ವಾರೆನೋಡಬೇಡಯ್ಯಾಸಂಚರಿಪ ಮನಕೆ ಮನುವ ತೋರಿ ನೋಡಬೇಡಯ್ಯಾಪಂಚಶಿರದ ನಾಮಾಧೀಶ ಪರಮ ಕೃಪೆಮಾಡಯ್ಯಾ 1ವ್ಯಾಳಭೂಷಣನೆ ಬಿನ್ನಪವನ್ನು ಕೇಳು ಈಶನೆಏಳು 'ಷಯ ವ್ಯಸನಾದಿಗಳಿಂದೇಳಿಗೆಯ ಘನವಾದಾಳಿವರಿದಾ ಕರಣಾತಡಿಗೆ ಧೈರ್ಯ ಕಲಿತನವಾತಾಳಲಾರೆನಯ್ಯಾ ಎನ್ನ ತನು'ನವಗುಣವಾಫಾಲನೇತ್ರ ಬಿಡಿಸೊ ನಿನ್ನ ನೆನ'ಗಿತ್ತಭಯವಾ 2ಕಾಮನಾಶನೆ ಕರುಣಿಸಯ್ಯಾ ವ್ಯೋಮಕೇಶನೆಹೇಮ ಭೂ'ು ಹೆಣ್ಣಿಗಾಗಿ ಹೇಳಲೇನ ನೊಂದೆನೈತಾಮಸಗುಣಂಗಳಿಂದ ತಾಪಹೆಚ್ಚಿ ಬೆಂದೆನೈಕಾ'ುನಿಯರೆಡೆಯೊಳೆನ್ನ ಕಾಡಬೇಡವೆಂದೆನೈನಾಮರೂಪಕ್ರಿಯಾರ'ತ ನೀನೆ ಗತಿಯೆಂದೆನೈ 3
--------------
ತಿಮ್ಮಪ್ಪದಾಸರು
ಇದೇ ಪುರುಷಾರ್ಥ ಮನಜ ಪರಮಾತ್ಮ ಪಡೆವುದಿದು ವೇದಾರ್ಥ ಇದನ್ನು ಬಿಸುಟಿನ್ನು ಬಾಳುವೆ ಬದುಕನ್ನು ಮಾಡುವುದಿದುದೇ ವ್ಯರ್ಥ S ದೇಹವಿರುವಾಗಲೇ ಪೂರ್ಣಪದನಾ ದೊರಕಿಪನೆ ಜಾಣ ಮೋಹಮಾಯಾವಿಕಾರವ ದಾಂಟಿ ಪೋಗುವನೆ ಜಾಣ ಸಾಹಸದಿ ಈ ಸಾವನು ನೀಗೀ ಮೋದಿಸುವ ಜಾಣ ಉಳಿದ ನರ ಕೋಣ ಅವನಿಯುಳು ಪ್ರಾಣ ತಳೆದಿರುವುದೇ ವ್ಯರ್ಥ ತನ್ನ ಒಳಗಿರ್ವ ಸಂಪೂರ್ಣ ಸುಖತಾ ಅರಿಯುವನೆ ಜಾಣ ಭಿನ್ನವಾಗಿರ್ಧ ತೋರಿಕೆ ಇದನಾ ಭಾದಿಸುವ ಜಾಣ ಮುನ್ನ ಸುಖದುಃಖಗಳನ್ನು ನೀಗಿ ನಿಲ್ಲುವನೆ ಜಾಣ ಇವನೇ ಗುರುನಾಥಾ ಶಂಕರ ಭಗವಂತಾಪೇಳಿದ ನುಡಿ ವೇದಾರ್ಥ
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಸಮಯ ಹರಿಯೇ ಇದೇ ಸಮಯ ಪ ಕಮಲ ತೋರಿ ಸದಾ | ಬಿಡದೆ ಎನ್ನ ಮುದದಿ ಪೊರೆವುದಕೆ ಅ.ಪ ನಾನಾ ಯೋನಿಯಲಿ ಬಂದು ಜ್ಞಾನ ದುರ್ಲಭನಾಗಿ | ಹೀನನಾದವಗೆ ಸುಜ್ಞಾನ ಪಾಲಿಸುವುದಕೆ 1 ಆಶಾಪಾಶಕೆ ಸಿಲುಕಿ ಶ್ರೀಶನ ಮರೆತೆನೋ | ಲೇಸು ದಾರಿಯ ತೋರಿ ದಾಸನ ಕಾಯುವುದಕೆ 2 ಸಂತರ ಸಂಗವ ಸಂತತ ಪಾಲಿಸಿ ಅಂತರಂಗದಿ ನಿನ್ನ ಚಿಂತನೆ ಕೊಡುವುದಕೆ 3 ಹಿಂದಿನ ಸುಕೃತದಿ ಬಂದೆ ಭೂಸುರನಾಗಿ | ಮುಂದಿನ ಪದಕ್ಕಾಗಿ ಕುಂದದೆ ಸಲಹುವುದಕೆ 4 ಪತಿ ವಿಜಯವಿಠ್ಠಲ ವೆಂಕಟ | ತಾಪವ ಕಳೆದೆನ್ನ ಕಾಪಾಡುವುದಕೆ 5
--------------
ವಿಜಯದಾಸ
ಇದೇ ಸೀತಾ ಮಹಾಮಂತ್ರ ಭವಾಬ್ದಿ ದಾಂಟುವಾ ಮಂತ್ರಾ ನಿತ್ಯ ಅನುದಿನಾ ಪಠಿಸುತಿರುವಾತಾ ಮುಕುತಿಪಂಥ ಪಡೆವ ನಿರುತಾ ಇದೇ ದೇಹದಲಿ ತಾನಿರುತಾ 1 ವಿರಾಗಿಯಾಗಿ ಮನದಲ್ಲಿ ಪರಾನಂದಾತ್ಮರೂಪವನು ತಿಳಿಯುವಾ ಚೈತನ್ಯರೂಪವನು ಇದೇ ಗೀತಾಪರಣಫಲ ತಾ ಪ್ರಶಾಂತಾಕಾಮನಾಗಿರುತಾ 2 ನಿಧಾನಾ ನೊಂದಮನನಿಗಿದೆ ಪ್ರಧಾನಾ ಶಾಸ್ತ್ರ ಸಂಚಯ ದೇ ಪ್ರಧಾನಾ ಷಟ್‍ಶಾಸ್ತ್ರ ಸಂಚಯದೇ ಸದಾ ಧ್ಯಾನಾ ಇದೇ ಮನನಾ ಮನುಜನೇ ಇದುವೆ ಸುಖತಾಣಾ 3 ತಿಳಿ ನೀ ಗೀತೆಯಾ ಬೋಧಾ ಅಳಿ ನೀ ಜೀವಪರ ಬೇಧಾ ತಿಳಿ ನೀ ಪರಮಾತ್ಮಪದ ಬೋಧಾ ಪಡೆವ ಮೋದಾ ಶ್ರವಣದಿಂದಾ ಇದೇ ಶ್ರೀ ಶಂಕರನ ಬೋಧಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇವೆ ಗುರು ಘನ ಮಹಿಮೆ ಧ್ರುವ ಅಧ್ಯಾತ್ಮದಾನಂದದ ನೆಲೆನಿಭ ಮಹಾತ್ಮರು ಬಲ್ಲರು ಖೂನ ಹೊಳೆಯುತಿಹ್ಯದು ಅನುದಿನ ಚಿಂತಾಯಕ ಗುರು ಘನ ಪ್ರತಾಪವು ತುಂಬಿಹ್ಯದು ಪರಿಪೂರ್ಣ ಶುದ್ಧಾಂತ್ಮದ ಸೂತ್ರಾಂತ್ರದ ಗತಿಗಳ ಮೂಢಾತ್ಮರು ಬಲ್ಲವೇನ 1 ಮಹಿಮರು ಮನಿಮನಿಗಿಲ್ಲ ಮಹಿಮಾನಂದದನು ಸಂಧಾನ ಪರಮವಿರಕ್ತನೇ ಬಲ್ಲ ಜೀವನ್ಮುಕ್ತಾಗುವ ಗತಿ ಮಾರ್ಗವು ಎಂದಿಗೆ ದೊರೆವದಿದೆಲ್ಲ ಪೂರ್ವಕಲ್ಪನೆಯಲ್ಲ ಮಿಕ್ಕಿನಾ ನರಗುರಿಗಳಿಗಿದು ಇಲ್ಲ 2 ಹುರಳಿಲ್ಲದ ಕರ್ಮಾಚರಣೆಯೊಳು ಮರುಳಾದರು ಜನವೆಲ್ಲ ಸರ್ವರಿಗಾವುದಲ್ಲ ಪೂರ್ವಾ ಪಾರ ಮಹಾಗುರು ಯೋಗಮಾರ್ಗವು ಸ್ತುತಿಸಲೆನಗಳವಲ್ಲ ಸರ್ವಮಯವೆಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇನಕುಲಪತಿ ಕರುಣಿಸೊ ಸಲಹುವರನ್ಯರನರಿಯೆ ಪ ತಾಪಸರಮಣಿಯ ಶಾಪವ ತಪ್ಪಿಸಿ ಶ್ರೀಪತೆ ಕಾಯಲಿಲ್ಲವೆ ರಾಘವ 1 ನೀರಜ ಕರುಣೆಯ ತೋರಿಸು ಗುಣಧಾಮನೆ ರಾಮನೆ 2 ನಾಮಗಿರಿ ಶ್ರೀ ಸ್ವಾಮಿನೃಸಿಂಹನೆ ನೇಮಿಸು ನಿನ್ನ ಸೇವನೆ ದೇವನೆ 3
--------------
ವಿದ್ಯಾರತ್ನಾಕರತೀರ್ಥರು
ಇನ್ನಾದರೂ ಬುದ್ಧಿ ಬಾರದು ಜನಕೆ ಕಣ್ಣಾರೆ ಕಂಡರು ಮರವುದು ಮನಕೆ ಪ. ಉದರದಲ್ಲಿ ರಚಿಸುವರ್ಯಾರು ರೂಪಾ- ತದಧೀನವಾಗಿ ಬರುವದೆಂದು ತಾಪ ಮದ ಮೋಹಾದಿಗಳೆಂತು ಮಸುಕುವದೆಂತರಿ- ತಿದ ನೋಡಿದರೆ ಕರ್ತ ತೋರುವ ಭೂಪ 1 ಕಾರಣ ಸಾಮಥ್ರ್ಯಯಿದ್ದರು ಕಾರ್ಯ ತೋರದು ಕೆಲರಿಗೆ ತನ್ನಂತಾಗುವದು ವಾರಿಧಿ ಶಯನನ ವಶವಾದರಿಂದಹಂ- ಕಾರದಿಂದಲಿ ತನ್ನಿಂದಹದೆಂಬ ಮೋಹದಿ 2 ರಕ್ಷಕರಿಲ್ಲದ ಶಿಶು ಬದುಕುವುದು ಲಕ್ಷ ಜನರ ಯತ್ನದಲಿ ಮತ್ತೊಂದಿರದು ಲಕ್ಷ್ಮೀರಮಣ ವೆಂಕಟೇಶನ ಗತಿಯೆಂದಾ- ಪೇಕ್ಷಿಸದಿರೆ ಕುಕ್ಷಿಯೊಳಗಿಟ್ಟು ಸಲಹುವಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇನ್ನಾರಿಗುಸುರುವೆ ಇನ್ನಾರ ಬಳಲಿಸುವೆನಿನ್ನ ಚಿತ್ತಬಂದಂತೆ ನೀನೆ ಕಾಯಯ್ಯ ಪ. ಅನ್ನಾಥರೊಡೆಯ ಎನ್ನ ಮುನ್ನ ಮಾಡಿದ ಪಾಪತÀನ್ನ ಫಲವಾಯಿತೆಂದು ಇನ್ನುಬ್ಬಿ ಕೊಬ್ಬುತಿದೆಎನ್ನುದರದಿ ಅನುದಿನ್ನ ಕೂಡಿಘನ್ನಪಿತ್ತವೆಂಬ ಬಲುಕಿಚ್ಚು ಹೆಚ್ಚುತಿದೆ 1 ದ್ರೌಣ್ಯಸ್ತ್ರದಿಂದ ಬೆಂದ ನಿನ್ನ ತಂಗಿಯ ಮೊಮ್ಮಗಸನಕಾದಿಗಳರ್ಚಿಸುವ ಸೌಮ್ಯಪಾದದಕೊನೆಯನ್ನೆ ಮುಟ್ಟಿಸಿ ಪೆಣನಾಗಿರ್ದ ಹಸುಳೆಯ ಜನರು ಜಯಜಯವೆನೆ ಜೀವಂತನ್ನ ಮಾಡಿದೆ 2 ನಿತ್ಯ ಮೃತನು ನಾನುಭೃತ್ಯನು ಪಾಪವ ಕಿತ್ತು ಎತ್ತಿಕೋ ತಂದೆ 3 ಅಂಜಿದ ಕಪಿಕಟಕ ಸಭೆಯ ಪಂಜರ ಬಸಿವುತಿದೆ ನಿನ್ನಕಂಜಾಕ್ಷದಿಂದ ನೋಡಿದರವರಂಜಿಪೋಗದೆಅಂಜನಾದೇವಿಯ ಸುತನಾಳಿದ ರಘುರಾಯಅಂಜಿಸಬೇಡ ತಂದೆ ನಿನ್ನ ಕಂದನ ರಕ್ಷಿಸಿಕೊ 4 ವನ್ನದ ಹರಿಣನಂತೆ ಸುತ್ತ ಮುನ್ನ ಬರಲು ಕೃಷ್ಣಎನ್ನ ತಾಪವು ಅನುದಿನ್ನ ತಟ್ಟದುಇನ್ನೊಬ್ಬ ಮದ್ದನೀಯೆ ಅದು ಉನ್ನತವಾಗುತಿದೆ ತಂದೆಎನ್ನಾಳು ಹಯವದನ ಇನ್ನಾದರೆ ಸಲಹೊ 5
--------------
ವಾದಿರಾಜ
ಇರಬೇಕು ನಿಂದಕರು ಸಜ್ಜನರಿಗೆ ಪ ದುರಿತ ರಾಶಿಗಳ ಪರಿಹರಿಸಲೋಸುಗ ಅ.ಪ. ಕಲುಷ ಕರ್ಮವ ಮಾಡೆ ಕಳೆವರಿನ್ನಾರೆಂದು ಕಮಲಭವನು ತಿಳಿದು ನಿರ್ಮಿಸಿದವನಿಯೊಳಗೆ ನಿಂದಕರ ಕಲುಷರನ ಮಾಡಿ ತನ್ನವರ ಸಲಹುವ 1 ದಿವಿಜರಿಳೆಯೊಳಗೆ ಜನ್ಮಗಳೊಲ್ಲೆವೆಂದಬ್ಜ ಭವಗೆ ಮೊರೆಯಿಡಲು ವರವಿತ್ತನಂದು ಕರ್ಮ ಮಾಡಿದರು ಸರಿಯೆತ ನ್ನವನೆನಿಸದವಗೆ ತಜ್ಜನ್ಯ ಫಲ ಬರಲೆಂದು 2 ಮಾನವಾಧಮ ಜನರು ನೋಡಿ ಸಹಿಸದಲೆ ಹೀನ ಮತಿಯಿಂದ ಮಾತುಗಳಾಡಲು ಭಾನು ಮಂಡಲಕೆ ಮೊಗವೆತ್ತಿ ಉಗುಳಿದರೆ ನ್ನಾನನವೆ ತೊಯ್ವುದಲ್ಲದರ್ಕಗೇನಪಮಾನ 3 ಮಲವ ತೊಳೆವಳು ತಾಯಿ ಕೈಗಳಿಂದಲಿ ನಿತ್ಯ ತೊಳೆವ ನಿಂದಕ ತನ್ನ ನಾಲಗಿಂದ ಬಲು ಮಿತ್ರನಿವನೆಂದು ಕರೆದು ಮನ್ನಿಸಬೇಕು ಹಲವು ಮಹ ಪಾಪಗಳ ಕಳೆದು ಪುಣ್ಯವನೀವ 4 ಅನುಭವಿಪ ದುಷ್ಕರ್ಮಗಳ ಜನ್ಯ ಫಲವು ತ ನ್ನಣುಗರಿಗೆ ಅಪವಾದ ರೂಪದಿಂದ ಉಣಿಸಿ ಮುಕ್ತರ ಮಾಡಿ ಸಂತೈಪ ನರಕ ಯಾ ತನೆಗಳವರಿಗೆ ಇಲ್ಲದುದರಿಂದ ಎಂದೆಂದೂ 5 ಮನುಜಾಧಮರಿಗೆ ಹರಿದಾಸರಲಿ ದ್ವೇಷ ವೆನಿಪ ಸಾಧನವೆ ನಿಸ್ಸಂದೇಹವು ಅನುತಾಪ ಬಿಡದೆ ಹರುಷಿತರಾಗಿ ನಿಷ್ಪ್ರಯೋ ಜನದಿ ಹರಿಪದಾಬ್ಜ ಭಜಿಪ ಭಜಕರಿಗೆ 6 ಲೋಕದೊಳು ನಿರ್ಮಿಸಿದನಿರ್ವರನು ಹರಿ ತಾನು ಭೂ ಕೋವಿದರ ಮಲವು ಪೋಗಲೆಂದು ಶ್ರೀ ಕರಾರ್ಚಿತ ಜಗನ್ನಾಥವಿಠಲ ಗ್ರಾಮ ಸೂಕರರು ನಿಂದಕರು ಕರುಣಾಳು ಇಳೆಯೊಳಗೆ 7
--------------
ಜಗನ್ನಾಥದಾಸರು
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಈ ಸಂಸಾರ ಸುಖವು ಬೇಸರಾಯ್ತೆನಗೆ ವಾಸವಾನಜ ಲಾಲಿಸೊ ಪ ಏಸು ಜನುಮದ ಪಾಪವೊ ಈ ಸಂಸಾರ ಬಂಧನವೊ ಅ.ಪ ತಂದೆ ತಾಯಿ ಎಂಬುದದು ಒಂದು ಚಿಂತೆ ಬಂಧು ಬಳಗವು ಎಂಬುದದು ಬೇರೆ ಚಿಂತೆ ಸತಿ ಸುತರೆಂಬದದು ದೊಡ್ಡ ಚಿಂತೆ ಕಂದನಿಲ್ಲದಿರಲದು ಘೋರ ಚಿಂತೆ 1 ಹಿಂದೆ ಮಾಡಿದ ಪಾಪಕೀಸು ಭವಣೆಯು ಸಾಕು ಮುಂದೆ ಬೇಡವೊ ಸ್ವಾಮಿ ಈ ತೆರದ ತಾಪ ಇಂದು ಮಾಡಿದ ಪಾಪ ಒಂದುಳುಹದಂತೆ ತಂದೆ ಕರುಣದಿ ಸುಟ್ಟು ಸಲಹೆನ್ನ ದೊರೆಯೆ 2 ಪಾದ ಸರೋಜದಲಿ ಮಂದಮತಿಯ ಮನ ಚಲಿಸದೆ ನಿಲುವಂತೆ ಒಂದು ಬೇಡುವೆನೊ ದೇವ ಬೇರೊಂದ ನಾನೊಲ್ಲೆ ಮಂದರೋದ್ಧಾರ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ಈತÀನೀಗ ವಿಜಯ ವಿಠ್ಠಲಾ ಯಾತನೆಯನು ಕಳೆದು ಪೊರೆವಾ ಪ ಕರೆದರೊಂದೆ ನುಡಿಗೆ ಬಂದು ಕರುಣದಿಂದ ಮುಂದೆ ನಿಂದು ಕರವ ಪಿಡಿದು ಅಂದು ಅಭಯ ಕರವ ಪಾಲಿಸಿದ ದಯಾಸಿಂಧು ಪರಿಪರಿಯಿಂದಲಿ ಹಿಂದು ಮುಂದು ದುರಿತದಿಂದ ನೊಂದು ಬಂದು ಮೊರೆ ವಿಚಾರಿಸಿ ಸಾಕಿದನಿಂದು 1 ಅಚ್ಯುತಾನಂತನೆಂಬ ನಾಮಾ ಅಚ್ಚು ಸುಧೆಯೆನಗೆ ನೇಮಾ ನಿಚ್ಚ ಉಣಲಿಕಿತ್ತ ಪ್ರೇಮಾ ಚಚ್ಚಲದಲಿ ಪೂರ್ಣಕಾಮಾ ಹೆಚ್ಚಿ ಬಪ್ಪ ಮದದಾ ಸ್ತೋಮಾ ನುಚ್ಚು ಮಾಡಿ ಬಿಡುವ ಭೀಮಾ ಸುಚ್ಚರಿತ ಸಾರ್ವಭೌಮಾ2 ಮೊದಲೆ ಗುರು ಪುರಂದರದಾಸರಾ ಹೃದಯದೊಳಗೆ ನಿಂದಾ ಶೃಂಗಾರಾ ಉದಧಿಯೋ ಇದು ಬಣ್ಣಿಸಿಬಲ್ಲ್ಲಿರಾ ತ್ರಿದಶರೊಳಗೆ ಕಾಣೆ ಜ್ಞಾನರ ಸದಮಲಾನಂದ ಪೂರ್ಣ ಇಂದಿರಾ ಸದನಾ ಪ್ರತಾಪಗುಣ ಪಾರಾವಾರಾ ಪದೋಪದಿಗೆ ಎನ್ನಯ ಮನೋಹರಾ3
--------------
ವಿಜಯದಾಸ
ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು