ಒಟ್ಟು 111 ಕಡೆಗಳಲ್ಲಿ , 49 ದಾಸರು , 109 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂಡು ಕರ್ಮಗಳ್ಯಾಕೆ | ಬಂಡಿ ದೈವಗಳ್ಯಾಕೆಪಂಡರಿ ದೊರೆಯು ಇರಲು ಪ ಪುಂಡರೀಕಾಕ್ಷ ಪದಬಂಡುಣಿಯವೋಲ್ ತುತಿಸಲಿಲ್ಲಾ | ಬಲ್ಲಾ 1 ಕಂಬು ಸಾರಥಿ ಕೃಷ್ಣಚರಿತೆಗಳ ಪೊಗಳುತಿರಲೋ | ಕೇಳೋ 2 ಇಂದು ಭಾಗದಿ ಭಕ್ತಸಂದಣೀಯಲಿ ಸೇರುತಾ |ತಂದೆ ತಾಯಿಯ ಸೇವೆ | ಮುಂದು ಮಾಡಿದಗೊಲಿದುನಿಂದು ಇಟ್ಟಿಗೆ ಮೆಟ್ಟಿಹಾ |ನಂದ ನಂದನ ಗುರೂ ಗೋ | ವಿಂದ ವಿಠಲನವಂದಿಸೆಲೊ ಮುದದಿ ಸತತಾ | ವಿತತಾ 3
--------------
ಗುರುಗೋವಿಂದವಿಠಲರು
ಹ್ಯಾಗೆ ದರುಶನ ಪಾಲಿಸುವೆ ವಿಠ್ಠಲನೆ ಹ್ಯಾಗೆನ್ನ ಪೊರೆವೆ ವಿಠ್ಠಲನೆ ಪ. ನಾಗಶಯನನೆ ನಿನ್ನ ನೋಡಬೇಕೆಂದು ಮನ ಈಗ ತವಕಿಸುತಿಹುದು ಹ್ಯಾಗೆ ಮಾಡಲಿ ವಿಠಲ ಅ.ಪ. ಅರಿಯದಾ ದೇಶದಲಿ ಆಲ್ಪರಿದು ಅನ್ಯರಿಗೆ ಬರಿದಾಯ್ತು ಬಯಕೆ ವಿಠ್ಠಲನÉ ಪರಿ ಹರಿಯೆ ನೀನಲ್ಲದಲೆ ಪೊರೆಯುವರ ಕಾಣೆ ವಿಠ್ಠಲನÉ 1 ಕೈಯಲ್ಲಿ ಕಾಸಿಲ್ಲ ಮೈಯಲ್ಲಿ ಬಲವಿಲ್ಲ ಹ್ಯಾಗೆ ಬರಲಿನ್ನು ವಿಠ್ಠಲನೆ ನ್ಯಾಯದಿಂದಲಿ ಹಿಂದಿನಾ ಭಕ್ತರಂದದಲಿ ಕಾಯಬಾರದೆ ಎನ್ನ ಪೇಳೂ ವಿಠ್ಠಲನೆ 2 ಭಕ್ತ ಸುರಧೇನೆಂಬೊ ಬಿರುದು ಕೇಳೀ ಬಂದೆ ಚಿತ್ತಕ್ಕೆ ಬರದೆ ವಿಠ್ಠಲನೆ ಭಕ್ತರಾ ಕೂಟದಲಿ ಸೇರಲಿಲ್ಲವೆ ನಾನು ಭಕ್ತವತ್ಸಲನಲ್ಲವೇನೊ ವಿಠ್ಠಲನೆ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೇಶನೆ ಕಾಯೊ ಸತತ ವಿಠ್ಠಲನೇ ಹಿಂದಿನವರನು ಪೊರೆದ ಕೀರ್ತಿ ಉಳಿಯಲು ಈಗ ಕುಂದನೆಣಿಸದೆ ಕಾಯಬೇಕೊ ವಿಠ್ಠಲನೇ 4 ಕರುಣಿ ಎನ್ನಯ್ಯ ಕಂಗೆಡಿಸದಲೆ ಕಾಪಾಡೊ ಚರಣವೇ ಗತಿ ಎಂದು ಬಂದೆ ವಿಠ್ಠಲನೆ ಗುರು ಅಂತರ್ಯಾಮಿ ಎನ್ನಭಿಮಾನ ನಿನದೈಯ್ಯ ಸಿರಿಯರಸ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಆರು ಬಾರರು ಸಂಗಡಲೊಬ್ಬರು |ನಾರಾಯಣನ ದಿವ್ಯನಾಮ ಒಂದಲ್ಲದೆ ಪಹೊತ್ತು ನವಮಾಸಪರಿಯಂತಗರ್ಭದಲಿ |ಅತ್ಯಂತ ನೋವು ಬೇನೆಗಳ ತಿಂದು ||ತುತ್ತು ಬುತ್ತಿಯ ಕೊಟ್ಟು ಸಲಹಿದ ತಾಯಿಯು |ಅತ್ತು ಕಳುಹುವಳಲ್ಲದೆ ಸಂಗಡ ಬಾಹಳೆ 1ನೆರೆದಿದ್ದ ಪುರಜನ ವಿಪ್ರರಗ್ನಿಯ ಸಾಕ್ಷಿ |ಕರವಿಡಿದು ಕೈಧಾರೆ ಎರಸಿಕೊಂಡ ||ತರುಣಿ ತನ್ನಯ ಗಂಡನನು ಮುಟ್ಟಲಮ್ಮದೆ |ನೆರೆಏನುಗತಿತನಗೆ ಹೇಳಲಮ್ಮಳಲ್ಲದೆ2ಮನೆ-ಮಕ್ಕಳಿವರೆನ್ನ ತನುವು ಒಡವೆ ಎರಡು |ಘನವಾಗಿ ನಂಬಿರೆ ನನ್ನವೆಂದು |ಅನುಮಾನವೇತಕೆ ಜೀವ ಹೋದಬಳಿಕ |ಘನಹೊತ್ತು ಮನೆಯಲಿ ಇರಿಸಿಕೊಳ್ಳರೊ ದೇವ 3ಆತ್ಮ ಬಳಲಿದಾಗ ಬಂಧುಗಳು ಬಂದು |ಹೊತ್ತು ಹೊರಗೆ ಹಾಕು ಎಂತೆಂಬರು ||ಹೊತ್ತುಕೊಂಡು ಹೋಗಿ ಅಗ್ನಿಯಲ್ಲಿ ಬಿಸುಟು |ಮತ್ತೆ ಬೆನ್ನನು ತಿರುಗದಲೆ ಬಾಹೋರಲ್ಲದೆ 4ಹರಣಹೋಗದ ಮುನ್ನ ಹರಿಯ ಸೇವೆ ಮಾಡಿ |ಪರಲೋಕಸಾಯುಜ್ಯಪಡೆದುಕೊಂಡು |ಕರುಣಿ ಕೃಪಾಳು ಶ್ರೀ ಪುರಂದರವಿಠಲನ |ನೆರೆನಂಬಿ ಭಜಿಸಿ ನೀ ಸುಖಿಯಾಗೊ ಮನುಜಾ 5
--------------
ಪುರಂದರದಾಸರು
ಇಷ್ಟುಪಾಪವನು ಮಾಡಿದುದೆ ಸಾಕೊ |ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
--------------
ಪುರಂದರದಾಸರು
ಏನಾಯಿತು ರಂಗನೆ ನೋಡಿರಮ್ಮ-ನಿ-|ಧಾನಿಸಿ ಎನಗೊಂದು ಪೇಳಿರಮ್ಮ ಪಪುಟ್ಟಿದಾರಭ್ಯ ಕಣ್ಣ ಮುಚ್ಚನಮ್ಮ-ತಾನು |ಎಷ್ಟಾದರೂ ಮೊಲೆಯುಣ್ಣನಮ್ಮ ||ಸೊಟ್ಟಾದ ಮುಖ ಮೇಲಕ್ಕೆತ್ತನಮ್ಮ-ಹೀಗೆ |ಎಷ್ಟು ಹೇಳಲಿ ಬಾಯ ಮುಚ್ಚನಮ್ಮ 1ಕಾಯಇದ್ದಂತಿದ್ದು ಹೆಚ್ಚಿತಮ್ಮ-ಹೆತ್ತ |ತಾಯಿಯ ಬಲವಿಲ್ಲದಾಯಿತಮ್ಮ ||ನೋಯೆ ನೋಟಕೆಅಬ್ಧಿಬತ್ತಿತಮ್ಮ-ಅವನ |ಬಾಯಿಯೊಳಗೆವಿಶ್ವತೋರಿತಮ್ಮ2ಅತ್ಯಂತ ಮಾತುಗಳನಾಡಿದನಮ್ಮ-ಮುಂದೆ |ಸತ್ಯವು ಕುದುರೆಯನೇರುವನಮ್ಮ ||ನಿತ್ಯನಿರ್ದೋಷಪುರಂದರವಿಠಲ ತನ್ನ-|ಭಕ್ತರ ಸಲಹುವದೇವನಮ್ಮ 3
--------------
ಪುರಂದರದಾಸರು
ಒಂದೇ ನಾಮದೊಳಡಗಿದುವೊ ಆ -ನಂದದಿಂದುಸುರುವಅಖಿಳ ವೇದಗಳುಪಒಂದೇ ನಾಮವು ಪ್ರಹ್ಲಾದನ ಕಾಯ್ತು - ಮ -ತ್ತೊಂದೆ ನಾಮವೆ ಅಜಮಿಳನ ಸಲಹಿತು ||ತಂದೆ ತಾಯಿಯ ಬಿಟ್ಟ ಕಂದ ಧ್ರುವರಾಯಗಾ -ನಂದಪದವನಿತ್ತ ಅದ್ಭುತಗುಣವೆಲ್ಲ 1ಮಚ್ಛ್ಯಾದ್ಯಾನಂತಾವತಾರ ಅಷ್ಟಾದಶಸ್ವಚ್ಛ ಪುರಾಣಗಳಮೃತದಸಾರ ||ಕಚ್ಛಪನಾಗಿ ತ್ರೈಜಗಕೆ ಆಧಾರ ತ -ನ್ನಿಚ್ಛೆಯಿಂದಲಿ ತಾನು ಮಾಳ್ಪ ವ್ಯಾಪಾರ 2ಒಬ್ಬರೀತಗೆ ಸಮರಿಲ್ಲ ತ -ನ್ನಬ್ಬರದಿಂದಲಿ ಸಲಹುವನೆಲ್ಲ ||ಕಬ್ಬು ಬಿಲ್ಲನ ಪಿತಪುರಂದರ ವಿಠಲ ವೈದರ್ಭಿಯ ರಮಣನ ವರಸುಗುಣಗಳೆಲ್ಲ 3
--------------
ಪುರಂದರದಾಸರು
ಕಂಡು ಕಂಡು ನೀ ಎನ್ನ ಕೈ ಬಿಡುವರೆ ಕೃಷ್ಣಪುಂಡರೀಕಾಕ್ಷಪುರುಷೋತ್ತಮ ಹರೇಪಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲನಿಂದೆಯಲಿ ನೊಂದೆನಯ್ಯನೀರಜಾಕ್ಷ||ತಂದೆ ತಾಯಿಯು ನೀನೇ ಬಂಧು ಬಳಗವು ನೀನೇಎಂದೆಂದಿಗೂ ನಿನ್ನ ನಂಬಿದೆನೊ ಕೃಷ್ಣಾ 1ಕ್ಷಣವೊಂದು ಯುಗವಾಗಿ ತೃಣವು ಪರ್ವತವಾಗಿಎಣಿಸಲಳವಲ್ಲ ಈ ಭವದ ವ್ಯಥೆಯ ||ಸನಕಾದಿ ಮುನಿವಂದ್ಯ ವನಜಸಂಭವನಯ್ಯಫಣಿಶಾಯಿ ಪ್ರಹ್ಲಾದಗೊಲಿದ ನರಹರಿಯೆ 2ಭಕ್ತ ವತ್ಸಲನೆಂಬ ಬಿರುದು ಬೇಕಾದರೆಭಕ್ತರ ಅಧೀನನಾಗಿ ಇರಬೇಡವೆ ||ಮುಕ್ತಿದಾಯಕ ದೇವ ಹೊನ್ನೂರ ಪುರವಾಸಶಕ್ತಪುರಂದರವಿಠಲ ಶ್ರೀ ಕೃಷ್ಣಾ3
--------------
ಪುರಂದರದಾಸರು
ಕಂಡು ಕಂಡೆಂತು ಕೈ ಬಿಡುವೆ ಹರಿಯೆ |ಪುಂಡರೀಕಾಕ್ಷನಿನ್ನ ನಂಬಿದ ಮೇಲೆಪಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ |ಬಣಗುದಾರಿದ್ರ್ಯದಲಿ ಬಲು ನೊಂದೆನಯ್ಯ ||ಫಣಿಶಾಯಿ ಪ್ರಹ್ಲಾದವರದನೇ ನೀನೆನಗೆ |ಹೊಣೆಯಾದ ಮೇಲಿನ್ನು ಮರುಳು ಗೊಳಿಸುವರೆ? 1ಒಂದು ದಿನ ಅತಿಥಿಗಳನುಪಚರಿಸಿದವನಲ್ಲ |ಬೆಂದೊಡಲ ಹೊರೆದು ಬೇಸತ್ತೆನಯ್ಯ ||ಕುಂದು-ಕೊರತೆಯು ಏಕೆ ? ನಿನ್ನ ನಂಬಿದೆ ದಯಾ-|ಸಿಂಧುಗೋವಿಂದನೇ ತಂದೆಯಾದ ಮೇಲೆ2ಬಂಧು ಬಳಗ ಮುನ್ನಿಲ್ಲ ಬದುಕಿನಲ್ಲಿ ಸಖವಿಲ್ಲ |ನಿಂದ ನೆಲ ಮುನಿಯುತಿದೆನೀರಜಾಕ್ಷ||ತಂದೆ-ತಾಯಿಯು ನೀನೆ ಬಂಧು ಬಳಗವು ನೀನೆ |ಕುಂದದೇ ರಕ್ಷಿಸೈ ನಂದನಂದನನೆ 3ಆಶೆಯನು ಬಿಡಲಿಲ್ಲ ಅತಿ ಹರುಷವೆನಗಿಲ್ಲ |ದೇಶದೇಶವ ತಿರುಗಿ ದೆಸೆಗೆಟ್ಟೆನಯ್ಯ ||ವಾಸವಾರ್ಚಿತನಾದ ವೈಕುಂಠನಿಲಯ ಲ-|ಕ್ಷ್ಮೀಶ ನೀಯೆನ್ನ ಕಣ್ಣಾರೆ ಕಂಡ ಮೇಲೆ 4ಭಕುತವತ್ಸಲನೆಂಬ ಬಿರುದು ಹೊತ್ತಿದ ಮೇಲೆ |ಭಕುತರಾಧೀನನಾಗಿರ ಬೇಡವೆ ||ಮುಕುತಿದಾಯಕನೆ ಬೇಲೂರು ಪುರಾಧೀಶ್ವರ |ಸಕಲ ದೇವರದೇವಪುರಂದರವಿಠಲ5
--------------
ಪುರಂದರದಾಸರು
ಕರುಣಿಯೆಂಬೆ ಕರುಣಾಬ್ಧಿಯೆಂಬೆ ಶರಣು ಶರಣೆಂಬೆಪರಮಭಾಗವತರ ಅರಿಗಳ ತರಿದು ನೀನರಕ ತಪ್ಪಿಸಿ ನಿಜಪುರಕೊಯ್ಯುವೆಯೆಂದು ಪ.ತಾಯಿಯೆಂಬೆ ತವರೂರೆಂಬೆತ್ರಾಹಿತ್ರಾಹಿ ಎಂಬೆಬಾಯೆಂಬೆ ಮಾನವರಘ ಕಾಣಿಸುತಿರೆನೀಯಜಾಮಿಳಗಾಶ್ರಯನಿತ್ತೆಯೆಂದು 1ತಾತನೆಂಬೆ ಆದ್ಯಾಪ್ತನೆಂಬೆ ನಾಥನಾಥೆಂಬೆಪಾತಕಕೌರವರಾತಂಕ ಬಿಡಿಸಿ ಸಂಪ್ರೀತಿಲಿ ಪಾಂಡವರ ಕಾಯುವೆಯೆಂದು 2ಏಕನೆಂಬೆ ಅನೇಕನೆಂಬೆ ಸಾಕು ಸಾಕು ಎಂಬೆಶ್ರೀಕಾಂತ ಪ್ರಸನ್ವೆಂಕಟೇಕಾಂತ ದಾಸರಬೇಕಾಗಿ ದಡ ನೂಕುವೆಯೆಂದು 3
--------------
ಪ್ರಸನ್ನವೆಂಕಟದಾಸರು
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು
ನಮ್ಮ ಬಿಲ್ಲು ಕಂಡು ಬಹಳ ಭೀತಿ ಪಡುವಕೃಷ್ಣ ನಿಲ್ಲಲಿ ತಾಸು ನಿಲ್ಲಲಿ ಪ.ವೀರನೆ ಯುದ್ಧಕ್ಕೆ ಬಾರೆಂದು ಕರೆದರೆನೀರೊಳಗೆ ಚರಿಸುವಮಾರಿಸಣ್ಣದು ಮಾಡಿ1ಶರವ ಧರಿಸಿ ನಮ್ಮ ಸರಿಗೆ ಬಾ ಎಂದರೆಕರಕರ ಹಲ್ಲು ತಿಂದು ತೆರೆವ ತನ್ನ ಉರಿಬಾಯಿ 2ದೊರೆತನ ಕಳಕೊಂಡÀು ತಿರುಕತನದಿ ತಾಯಿಯಕರಕರ ಬಡಿಸುವ ಮರುಕು ಇಷ್ಟ ಇವಗ್ಯಾಕ 3ಅಜಗಳ ಪುರುಷನೆ ನಿಜನಾರಿ ಕಳಕೊಂಡುಗಜಗಮನೆಯರಿಗೆಲ್ಲ ನಿಜಪತಿ ನಾನೆಂದು 4ಬರಿಯ ಬತ್ತಲೆ ಪುರುಷ ಸರಿಯಲ್ಲ ನಮಗಿವಸಿರಿರಮಿ ಅರಸಗೆ ಈ ತುರುಗ ತಂಬಟಿಯಾಕ5
--------------
ಗಲಗಲಿಅವ್ವನವರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಾರಾಯಣ ಪಂಜರನಾರಾಯಣಾಯ ನಮೊ ನಾರಾಯಣಾಯ ನಮೊನಾರಾಯಣಾಯ ನಮೊ ನಾರಾಯಣನಾರದರ ಮುಖದಿಂದ ನರಕಸ್ಥರೆಬ್ಬಿಸಿದೆನಾರಾಯಣಾಯ ನಮೊ ನಾರಾಯಣ ಪ.ಮತ್ತಕರಿಯವಸಾನಕಂಜಿ ಹರಿಯೆ ನೀ ಕಾಯ್ದೆ *ಭಕ್ತ ಪ್ರಹ್ಲಾದನೇಕಾಂಗ ನಿಷ್ಠೆಗೆ ಒಲಿದೆ 1ಪೃಥುವಿಗಳ್ಳನನಿರಿದು ಸತಿಯನುದ್ಧರಿಸಿದೆಪೃಥುಚಕ್ರವರ್ತಿಗೆ ಪ್ರತ್ಯಕ್ಷನಾಗ್ಯೊಲಿದೆ2ಶೂಲಿಯನು ಬೆಂಬತ್ತಿ ಸುಡುವೆನೆಂಬನ ಸುಟ್ಟೆಶೀಲವಿಡಿದಂಬರೀಷನ ಮತವ ಗೆಲಿಸಿದೆಯೊ 3ಮಕರರೂಪದಿ ಸತ್ಯವ್ರತಗೆ ತತ್ವವನೊರೆದೆಮುಖದಿಶ್ರುತಿಪಿಡಿತಂದು ವಾರಿಜಾಸನಗಿತ್ತೆ4ಪುರುಹೂತಗಖಿಳ ಪರಮಾರ್ಥವನು ಅರುಹಿದೆಸುರಪನ್ನ ಭಯವಟ್ಟಿ ಧ್ರುವಗೆ ಧ್ರುವಪದವಿತ್ತ್ತ್ತೆ 5ಮಹಾಪಾಪನಿರತ ಅಜಾಮಿಳನಿಷ್ಟ ಕರಿಸಿದೆಮಹಿದಾಸನಾಗಿ ತಾಯಿಗೆ ತತ್ವವನು ಪೇಳ್ದೆ 6ಮುನಿ ಕಾಲಲೊದೆಯೆ ಎದ್ದು ಕರುಣಿಸಿದೆ ಕರುಣಾನಿಧಿಮುನಿವೆಂಗಳರೆಯಾಗೆ ಪದಸೋಂಕಿಸ್ಯೆತ್ತಿದೆಯೊ 7ಮಖವ ರಕ್ಷಿಸಿ ರಾಜಋಷಿಗಭೀಷ್ಟೆಯನಿತ್ತೆಮಕರಧ್ವಜಾರಿ ಧನು ಮುರಿದವನಿಜೇಶ8ಶುಭಕಪೀಶಗೆ ಅಭಯವರವಿತ್ತು ಕೈಪಿಡಿದೆಶುಭಕಂಠನಂಜಿಕೆಯ ಹನುಮ ಹೇಳಲು ಕಳೆದೆ 9ಶರಣು ಹೊಕ್ಕಿರೆ ವಿಭೀಷಣಗರಸುತನ ಕೊಟ್ಟೆಶರದಿ ರಾವಣನರಿದು ಸುರರ ಸಂಕಟ ಹರಿದೆ 10ಅನುಜನಗ್ನಿಗೆÉ ಧುಮುಕಲವಧಿ ಮೀರದೆ ಪೊರೆದೆಅನಿಮಿಷರ ನಿಕರಕತಿ ಆಹ್ಲಾದ ಬೆಳೆಯಿಸಿದೆ 11ಉರಿನುಂಗಿ ಗಿರಿನೆಗಹಿ ವ್ರಜವ ಪಾಲನೆ ಮಾಡ್ಡೆಉರಗನೆಳೆತಂದವನ ರಾಣಿಯರ ಸ್ತುತಿಗೊಲಿದೆ 12ಕ್ರತುನಾರಿಯರನ್ನ ಸವಿದುಂಡು ಸುಖವಿತ್ತೆಕ್ರತುಭೋಕ್ತø ಕ್ರತುಗಾತ್ರ ಕ್ರತುಪಾಲ ಕ್ರತುಶೀಲ13ಗೋಪ ಸ್ತ್ರೀಯರ ಕುಚದಿ ನ್ಯಸ್ತ ಚರಣಾಬ್ಜಯುಗಗೋಪೀ ಜನಜಾರನವನೀತದಧಿಚೋರ14ವಂಶಗಾಯನ ಪ್ರಿಯ ವಿಧುಕುಲೋದ್ಭವ ಕೃಷ್ಣವಂಶವರ್ಧಕಸುಜನವಂಶಮರ್ದಕ ಕುಜನ15ಅಕ್ರೂರವಂದ್ಯಕಂಸಾರಿಕುಬ್ಜಾರಮಣಆಕ್ರಂದಿಸಿದ ತಂದೆ ತಾಯಿಯರ ಭಯವಳಿದೆ 16ಅದಿತಿ ಕುಂಡಲದಾತ ಭಗದತ್ತವರದನೆಅಧಿಪತಿಗಳಧಿಪತಿಯೆ ಭೈಷ್ಮಿ ಸತ್ಯಾರಮಣ 17ಶಂಭುವಂದಿತಪಾದ ಸಾಂದೀಪೋದ್ಧವ ಪ್ರಿಯಶಂಬರಾರಿಯ ಜನಕ ಯಜÕಪೂಜಾಗ್ರಣಿಯೆ 18ಪಾಂಡವರ ಪ್ರಾಣ ದ್ರೌಪದಿ ಮಾನರಕ್ಷಕನೆಪೌಂಡ್ರಕಶೃಗಾಲಕೌರವ ಭೂಮಿ ಭಾರಹರ19ಅಭಿಮನ್ಯುನಾತ್ಮಜನ ಬಸುರೊಳಗೆ ಸಲಹಿದೆಯೊಅಭಯದಲಿ ಪಾಂಡವರ ಸಂತತಿಯ ಬೆಳೆಸಿದೆಯೊ 20ಗರುಡ ಗಂಧರ್ವಕಿನ್ನರಗೀತ ಸಂಪ್ರೀತಗರುವೆ ಲಕುಮಿಯ ಕೂಡ ಕ್ರೀಡಾದ್ರಿಯಲ್ಲಿರುವೆ 21ಶಂಖ ಚಕ್ರ ಗದಾಬ್ಜ ಶ್ರೀವತ್ಸ ಶೋಭಿತನೆಸಂಖ್ಯೆರಹಿತಾಭರಣ ಭೂಷಣಾವ್ಯಾಕೃತನೆ 22ಮೀನ ಕಶ್ಯಪ ಪೋತ್ರಿ ನೃಹರಿ ವಾಮನ ಭಾರ್ಗ್ವಮಾನವಪ ಕೃಷ್ಣಬುದ್ಧಕಲ್ಕಿ ಕಪಿಲಾತ್ರೇಯ23ಸ್ವಾಮಿ ತೀರ್ಥಾಂಬು ಅಂತರ್ಗಂಗಾಭಿಷಿಕ್ತಸ್ವಾಮಿ ಭೂವರಾಹ ವೈಕುಂಠನಾಥ ವಿಶ್ವೇಶ 24ಷಟ್ಕೋಟಿ ತೀರ್ಥಯುತಚರಣ ಶ್ರೀಭೂರಮಣಷಟ್ಕಮಲನಿಲಯ ಚಿನ್ಮಯ ಚಿದ್ಗುಣಾರ್ಣವನೆ 25ಭಕ್ತಾಭಿಮಾನಿ ಭವದೂರ ಭಕ್ತರ ಪ್ರಭುವೆಭಕ್ತವತ್ಸಲ ಕೃಪಾಂಬುಧಿಪರಾತ್ಪರಕೃಷ್ಣ26ವಸುಧೆವೈಕುಂಠ ಮಂದಿರವಾಸ ಶ್ರೀನಿವಾಸವಸುಪ್ರೀತ ವಸುಕರ್ತ ವಸುದಾತ ವಸುಪೂರ್ಣ 27ಆದಿನಾಥÀಪ್ರಮೇಯಾದಿ ಪುರುಷೋತ್ತಮನೆಆದಿಮಧ್ಯಾಂತ ರಹಿತಾದ್ಯಮೂರುತಿ ವಿಷ್ಣು 28ಬದುಕಿಪ್ಯಾದರೆ ನಿನ್ನ ಹೊಗಳಿಕೆಲಿ ಬದುಕಿಸೈಬುಧರ ಸಂಗತಿ ಕೊಟ್ಟು ಮನ್ನಿಸೆನ್ನನು ತಂದೆ 29ಕಿವಿಯಲ್ಲಿ ಮುಖದಲ್ಲಿ ನಾಮಾಮೃತವÀ ತುಂಬುಕವಲಾಗದೆ ಮನೋಳಿ ಮಿಗೆ ಪದಾಬ್ಜವ ತೋರು 30ಭವಭವದಿ ತೊಳತೊಳಲಿ ಬಳಬಳಲಿ ಬಲುದಣಿದೆಭವವಿರಿಂಚ್ಯಾದಿ ಕರಿಗಭಯದನೆ ನೀ ಸಲಹು31ನೀ ತಾಯಿ ನೀ ತಂದೆ ನೀ ಬಂಧು ನೀ ಬಳಗನೀತಿಗಳನರಿಯೆ ನಿನ್ನಯ ನಾಮವೆ ಗತಿಯು 32ತನು ನೆಚ್ಚಿಕಿಲ್ಲ ಚಿತ್ತದ ಗತಿಯು ನೀಟಿಲ್ಲತನಯತರುಣಿ ಕೊನೆಯ ಸಂಗತಿಗೆ ಆರಿಲ್ಲ33ದೋಷಗಳನರಸದೆನ್ನನು ಸಾಕು ಸಾಕಯ್ಯದಾಸಪಾಲಕ ದೇವ ಡಿಂಗರರ ಸಂಜೀವ 34ನಿನ್ನ ಮೂರುತಿ ನೋಡಿ ನೋಡಿ ನೋಡಿ ನೋಡಿನಿನ್ನ ಬಿಂಬವನೆಂದು ಕಂಡು ಕೊಂಡಾಡುವೆನೊ 35ನಿನ್ನ ಮೈ ಬೆಮರ್ಹೊಳೆಯಲ್ಲೆನ್ನ ಮುಳುಗಿಸಿನಿನ್ನವ ನಾ ನಿನ್ನವರ ಕೈಲಿ ಕೊಡು ಗಡಗಡ 36ವಾರಿಯಲಿ ಸ್ಥಳದಲ್ಲಿ ಅಡವಿಲೆಲ್ಲೆಲ್ಲಿ ಕಾಯೊವಾರಾಹ ವಾಮನ ನೃಸಿಂಹ ಕೇಶವ ಸ್ವಾಮಿ 37ಸತ್ಕುಲೋದ್ಭವನಾದೆ ಸನ್ಮಾರ್ಗರಿಯಲಿಲ್ಲಸತ್ಕರ್ಮಗಳಿಗೆ ಬಹಿಷ್ಕøತನಾಗಿ ಬಾಳುತಿಹೆ 38ಒಂದು ಜಾವದ ತಪ್ಪನೆಂದೆಂದಿಗುಣಲಾರೆವಂದಿಸುವೆ ಸಾಷ್ಟಾಂಗತ್ರಾಹಿತ್ರಾಹಿಪಾಹಿತ್ರಾಹಿ39ಮಧ್ವೇಶ ಮಧ್ವಪ್ರಿಯ ಮಧ್ವಮತ ಪ್ರತಿಪಾಲಮಧ್ವಗುರು ಸ್ತುತ್ಯ ಮಧ್ವಾರ್ಚಿತ ಪದಾಬ್ಜಹರಿ40ಏನರಿಯೆನೇನರಿಯೆ ನೀನೆ ನೀಗೆಲೆಲೆಎನ್ನಘವ್ರಜ ಪ್ರಸನ್ನವೆಂಕಟ ಕೃಷ್ಣ 41
--------------
ಪ್ರಸನ್ನವೆಂಕಟದಾಸರು
ಮಾರಿಯನು ತೋರುತಿಹೆನು ಅದನೀಗನಾರಿ ಎಂದೆಂಬರಯ್ಯಪಸೀರೆ ಕುಪ್ಪಸವನುಟ್ಟುಸಿಂಗರದಿ ತೋರ ಕಂಕಣವನಿಟ್ಟು ಅಯ್ಯಮೂರಳೆಯಕಟ್ಟಾಣಿಕಟ್ಟಿಯೇಮೋರೆ ಮುರಕಿಸುತಿಹುದು ಅಯ್ಯ1ಚಳ್ಳತುಂಬುಗಳಿಂದಚವುರಿ ಬೆಳ್ಳಿಯ ಬಳೆಗಳಿಂದ ಅಯ್ಯಮುಳ್ಳು ಗಜ್ಜೆಗಳ ಧರಿಸಿ ಮನೆಯೊಳಗೆಹಲ್ಲು ಕಡಿಯುತಲಿಹುದು ಅಯ್ಯ2ಓಲೆ ಮಾಡಿಸು ಎಂಬುದುವರಹಕೆ ಬಾಳುವೆ ನೋಡಿರಿ ಎಂಬುದಯ್ಯಹೇಳುವುದು ಕಿವಿಯೊಳಗೆ ಲೋಭಕಾಲು ಕೈ ತಿರುಹುವುದು ಅಯ್ಯ3ಕರೆಕರೆಯ ಮಾಡುತಿಹುದು ತಾಯಿಯಹೊರಡಿಸು ಮನೆಯಿಂದಲೆಂಬುದಯ್ಯಹರನ ಚಿಂತೆಗೆ ಹಾನಿಯು ಇದರಿಂದನರಕ ಬಹಳವ ತಿರುಗುವೆ ಅಯ್ಯ4ನಾರಿಯೆನಿಸಿಹುದೆ ಮೃತ್ಯುಇದನೀಗ ದೂರ ಮಾಡಿದನಾದರೆ ಅಯ್ಯಸೇರುವುದು ಸರ್ವಮುಕ್ತಿಚಿದಾನಂದನಿರೆ ತಾನೆಯಹುದು ಅಯ್ಯ5
--------------
ಚಿದಾನಂದ ಅವಧೂತರು