ಒಟ್ಟು 317 ಕಡೆಗಳಲ್ಲಿ , 66 ದಾಸರು , 268 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಮಿಸುವೇಂ ಜಗದಂಬೆ ನಿನ್ನಂ ಮುದದಿಂ ದೃಢದಿಂ ಮನವಾರೆ ನಾಂ ಪ ಉದಯಾದ್ರಿಯೊಳುದಿಸಿದ ನಾರೈ ಮನಿದೆ ಬಂದೇಂ ಬಳಿಸಂದೇಂ ಪದುಳದಿ ನಿಂದೇಂ ಅ.ಪ ಮೂಡಿದ ಕತ್ತಲೆಯೋಡಿÉಸಿ ಭರದಿಂ ನೋಡೆಚಿರಂ, ನಾಡೆಜಗಂ ಬೆಳಗಲಿ ಬೆಳಕಿಂ 1 ಭಾಮಿನಿಯರು ಸದ್ಭಾವನೆಯಿಂದಲಿ ದೇವಿಯ ಸಂಸೇವಿಸಿವೊಲ್ ತಾ ವರವಂ2 ಶೇಷಗಿರೀಶನ ದಾಸರು ನಾವೆನೆ ಭಾಷಾನಿಧಿಯಂ ಬಲಗೊಂಡಾಂ ಬೇಡುತ ನಲವಿಂ3
--------------
ನಂಜನಗೂಡು ತಿರುಮಲಾಂಬಾ
ನಮ್ಮ ಕುಲದೈವೀತ ಬೊಮ್ಮನ ಪಡೆದಾತ ಸಾಮಗಾಯನ ಪ್ರೀತ ಸ್ವಾಮಿನೀತ ಧ್ರುವ ವೇದ ಉದ್ಧರನೀತ ಮೇದಿನಿಯ ಪೊತ್ತಾತ ಸಾಧುಜನ ವಂದಿತ ಸದ್ವಸ್ತುನೀತ 1 ಧಾರುಣಿಯ ಗೆದ್ದಾತ ತರಳಗೊಲಿದಹನೀತ ದಾತ ಕರುಣಿ ಈತ 2 ಮೂರು ಪಾದಳಿದಾತ ಪರಶುಧರನಹುದೀತ ಸುರಜನರ ಪೂಜಿತ ಸರ್ವೋತ್ಮನೀತ 3 ಪವನಸುತಗೊಲಿದಾತ ಮಾವನ ಮಡುಹಿದಾತ ಭುವನತ್ರಯಲೀತ ದೇವನೀತ 4 ಬೆತ್ತಲೆಯು ಸುಳಿದಾತ ಉತ್ತಮ ಹಯವನೇರಿದಾತ ಭಕ್ತರಿಗೆ ಹೊರೆವಾತ ಶಕ್ತನೀತ 5 ಅಣುರೇಣುದೊಳೀತ ಅನುಕೂಲವಾದಾತ ಆನಂದೋ ಬ್ರಹ್ಮ ಅನಂತನೀತ 6 ಮಹಾಮಹಿಮನಹುದೀತ ಬಾಹ್ಯಾಂತ್ರಪೂರಿತ ಮಹಿಪತಿಯ ಸಾಕ್ಷಾತ ವಸ್ತುನೀತ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾಡ ದೈವಗಳ ಪೂಜೆಯನು ಮಾಡಿದರೆ | ಕೇಡಲ್ಲದೆ ಮತ್ತೆ ಕೈವಲ್ಯವುಂಟೇ ಪ ಕೊಳಚಿ ನೀರನು ದಾಟಲರಿಯದ ಮನುಜಗೆ ನಿಲವುದ್ದ ದ್ರವ್ಯ ಕೊಡುವೆ ಎನ್ನ ನಾ- | ಜಲನಿಧಿಯ ಉತ್ತರಿಸಿಕೊಂಡು ಎಂದರೆ ಅವನು | ಅಳಿಯದಂತೆ ದಡಕೆ ತರಬಲ್ಲನೇ 1 ಕತ್ತಲೆಗಂಜುವನ ಕರೆತಂದು ಶೃಂಗರಿಸಿ | ಉತ್ತಮದ ವಾಜಿವಾಹನವ ಮಾಡಿ || ಕತ್ತಿಯನು ಕರದಲ್ಲಿ ಕೊಟ್ಟು ರಿಪುಪರಿವಾರ- | ದತ್ತ ಒಂದಡಿಯಿಟ್ಟು ಬರಬಲ್ಲ್ಲನೇ 2 ತನಗೆ ಬಂದಾವಸ್ತು ಪರಿಹರಿಸಿಕೊಳ್ಳದೆ ಪರ- | ಮನ ವಿಡಿದು ಭಜಿಸಿದರೆ ಏನಾಗದೊ || ಬಿನಗು ದೈವರಗಂಡ ಶ್ರೀ ವಿಜಯವಿಠ್ಠಲನ | ವನಜಪದ ನೆನೆದರೆ ಮುಕುತಿಯುಂಟು 5
--------------
ವಿಜಯದಾಸ
ನಾನಾ ವೇಷಗಳಿನ್ನು ನಿನಗ್ಯಾಕೊ ಹರಿಯೆ ನಿನ್ನ ಭಕ್ತರು ನಿನ್ನ ತಿಳಿಯದೆ ಬಿಡರು ಪ ಮೀನಾಗಿ ಜಲದೊಳು ತಿರುಗುವದ್ಯಾಕೊ ಚಾರಣನೆಂದೆನಿಸಿ ಭಾರವ ಪೊತ್ತುದ್ಯಾಕೊ 1 ಹಂದ್ಯಾಗಿ ದಿತಿಜನ ಬಡಿದೆ ನೀನ್ಯಾತಕೋ ಕಂದನ ಪೊರೆಯೆ ಕಂಬದಿ ತೋರಿದ್ಯಾಕೊ 2 ವಟುವಾಗಿ ಭೂಮಿಯ ಬೇಡಿದೆ ಏತಕೊ ಹಟವು ರಾಯರ ಮೇಲೆ ನಿನಗ್ಯಾಕೆ ಬೇಕೋ 3 ಮಲತಾಯಿ ನುಡಿಗಾಗಿ ವನವಾಸ ನಿನಗ್ಯಾಕೊ ಬಲದಿ ತಂದೆಯ ಬಂಧ ಬಿಡಿಸಿದ್ದು ಸಾಕೊ 4 ರಾಜೇಶ ಹಯಮುಖ ಬತ್ತಲೆ ನಿಂತೆ ಏಕೊ ತೇಜಿಯನೇರ್ದು ತೋರುವ ಶೌರ್ಯ ಸಾಕೊ 5
--------------
ವಿಶ್ವೇಂದ್ರತೀರ್ಥ
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣನೆ ಈತ - ನಾರಿ ಒಳ್ಳೆಯವರಿಗೆ ಮಾಡ್ದ ವಿಘಾತ ಪ ಪರಿಪರಿಯಲಿ ಪೊಗಳುವ ಗೀತ - ನಾನೆಂದವರ ಮುರಿದ ಪ್ರಖ್ಯಾತ ಅ ಕೈಕಾಲಿಲ್ಲದೆ ಆಡ್ದಾಮೈಮೇಲ್ಭಾರವ ಪೊತ್ತು ನೋಡ್ದಾಕೋರೆಯಲಿ ತಿವಿದು ಹತ ಮಾಡ್ದಾತಾಕೊ ಎಂದು ಒದರಿ ಬಗೆದು ಬೀರ್ದಾಅರ್ತಿಯಿಂದ ಪಾತಾಳಕೆ ದೂಡ್ದಾಮುನಿಯ ಮಗನಾಗಿ ಕ್ಷತ್ರಿಯರ ಕಾಡ್ದಾರಾವಣಗಾಗಿ ಅಂಬುತೆಗೆದು ಹೂಡ್ದಾಆ ಜಮುನೆ ಪೊಕ್ಕು ಮೋಜು ಮಾಡ್ದಾದಿಗಂಬರ ವೇಷವ ತಾಳ್ದಾದಿಗಿದಿಗಿ ಎಂದು ಅಶ್ವವೇರ್ದಾ 1 ಪಾದ ಭೂಮಿ ತಾನೊಲ್ಲಇವನ ಕೊಡಲಿಬಾಯಿಗಿದಿರಿಲ್ಲಕೋ ಎಂದ ಲಂಕೆಗೆ ಬೆಂಕಿ ಮಲ್ಲಕೊಂಕಲಿ ಕೊಳಲನೂದಿ ಗೊಲ್ಲಮೈಮೇಲ್ ಗೇಣರಿವೆಯಿಲ್ಲಇವ ಮೇಲಾದ ತೇಜಿಯನೇರಬಲ್ಲ 2 ವೈರಿ ವನಕ್ಕೆ ಕೇಡು ತಂದಹಾಲ್ಮೊಸರ ಮೀಸಲು ಮುರಿದು ತಿಂದಬತ್ತಲೆ ನಿಂದು ಹತ್ತುವೆ ಕುದುರೆ ಎಂದಭರದಿ ಕಾಗಿನೆಲೆಯಾದಿಕೇಶವನೆಂದ3
--------------
ಕನಕದಾಸ
ನಿತ್ಯ ಸುಖವಿದೂ | ಚಿತ್ತದಲ್ಲಿ ಮಾಯ ಮೋಹ ಕತ್ತಲೆಯ ಕಾಣದಿಹುದು ಪ ತನುವು ತಾನಲ್ಲವೆಂದು | ಮನದಿ ಉನ್ಮನಸಿನಿಂದ | ಬಿನುಗು ವಿಷಯಗಳನೆ ಕೊಂದು | ಚಿನುಮಯಾತ್ಮನಾದೆ ಎನಲು 1 ಆಶೆಮೂಲವನ್ನು ಅಳಿದು | ಕೋಶ ಪಂಚಕಗಳ ಕಳೆದು | ಪಾಶವೆಂದು ತುಳಿದು ಲಕ್ಷ ಈಶನಲ್ಲಿ ಬೆರೆದ ಮೇಲೆ 2 ತಂದೆ ಭವತಾರಕನ | ಹೊಂದಿ ಪೂರ್ಣ ಬ್ರಹ್ಮನಾಗಿ | ಮುಂದೆ ಮೂರು ದೇಹ ಬಿಟ್ಟು | ಒಂದು ಗೂಡಿ ಬ್ರಹ್ಮನಲ್ಲಿ 3
--------------
ಭಾವತರಕರು
ನಿತ್ಯ ಬಿಡದೆ ಭಜಿಸೋ | ಕೋಸಿಗಿ ಮುತ್ಯನ ಕೃಪೆ ಗಳಿಸೋ ಭವ ಕತ್ತಲೆ ಓಡಿಸಿ ಉತ್ತಮಗತಿಯನು | ಇತ್ತು ಪಾಲಿಸುವ ಪ ಯಾತಕೆ ಅನುಮಾನ | ಈತನೆ ಜಾತರೂಪಶಯನ | ಜಾತದಾತಯತಿ | ನಾಥ ಶ್ರೀರಾಯರ ಪ್ರೀತಿಪಡೆದ ಪಿತ | ಭ್ರಾತಾರ್ಯರು ನಿಜ 1 ಪುನಃ ಜಗದಿ ಜನಿಸಿ | ಗಣಪತಿ ಅನುಚರ ನಾಮವ ಧರಿಸಿ ಅಖಿಲ ನಿಗಮದೋಳ್ | ಮಿನುಗುವ ಹರಿಗುಣ ಮಣಿ ಬೆಳಕನು ಗುಣ ಜನಕೆ ತೋರಿದನು 2 ಮಂದಾಜಾತಶಯನ | ಶಾಮಸುಂದರ ವಿಠಲನ ಪೊಂದಿದ ಮಾನವಿ ಮಂದಿರ ನೊಲಿಸುತ ಮಂದಜನರ ದಯದಿಂದ ಸಲಹುವರು 3
--------------
ಶಾಮಸುಂದರ ವಿಠಲ
ನಿತ್ಯ ಶುಭ ಮಂಗಳಂ ಪ ಮತ್ಸ್ಯಾವತಾರಿಗೆ | ವೇದ ಉದ್ಧಾರಿಗೇ ಪೊತ್ತ ಬೆನ್ನಲಿ ಗಿರಿಯ | ಮುದ್ದು ಕೂರ್ಮನಿಗೇ1 ದನುಜ ಸಂಹಾರಿಗೇ | ಮಧು ಕೈಟಭಾರಿಗೇ ವನದಿ ವಸನೆಯ ಪೊತ್ತ | ವರಹಾವತಾರಿಗೇ 2 ಪೋರನ್ನ ಪೋಷಕಗೆ | ಧಾರುಣಿಯ ಬೇಡ್ಡವಗೆಮೂರು ಲೋಕವನಳೆದ | ಮೂರ್ವಿಕ್ರಮ ನಿಗೇ 3 ಮೃಡ ಸಖನು ಕಾಳೀಯ | ಹೆಡೆಯ ಮೆಟ್ಟಿದಗೇ 4 ಬೆತ್ತಲೆ ನಿಂತವಗೆ | ಬುದ್ದಾವತಾರಿಗೇಉತ್ತಮ ಕಲ್ಕಿ ಗುರು | ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ನಿದ್ರೆಮಾಡಿದ ರಂಗ ನಿದ್ರೆಮಾಡಿದ ಭದ್ರಹಾಸಿಗೆ ಮೇಲೆ ಸಮುದ್ರರಾಜನ ಮಗಳ ಸಹಿತ ಪ. ವೇದಕದ್ದ ಅಸುರನಿಗಾಗಿ ಆ ಮತ್ಸ್ಯರೂಪವ ಧರಿಸಿ ಸಾಧಿಸಿ ಅಸುರನ ಕೊಂದ ವಾರಿಜಾಕ್ಷ ಬಳಲಿ ಬಂದು 1 ತರಳ ಹಿರಣ್ಯಕಶ್ಯಪನ ಕರುಳ ಬಗೆದು ಕೊರಳೊಳಿಟ್ಟು ನರಮೃಗ ರೂಪವ ತಾಳಿ ನರಸಿಂಹ ಬಳಲಿ ಬಂದು 2 ಬಲಿಯ ದಾನವನ್ನೆ ಬೇಡಿ ನೆಲನ ಮೂರಡಿ ಮಾಡಿ ಒಲಿದು ಬಾಗಿಲನ್ನೆ ಕಾಯ್ದ ವಾಮನನಾದ ಬಳಲಿ ಬಂದು 3 ತÀಂದೆಯ ಮಾತನ್ನೆ ಕೇಳಿ ತಾಯಿ ಶಿರವನ್ನೆ ಅಳಿದು ಏಳುಮೂರು ಬಾರಿ ನೀನು ಭೂಮಿಯ ಪ್ರದಕ್ಷಣೆಮಾಡಿ 4 ಸೀತೆಗಾಗಿ ಪಡೆಯ ಸವರಿ ಸೇತುಬಂಧನವ ಮಾಡಿ ದೂತರಾವಣನ್ನ ಕೊಂದು ಸೀತಾರಾಮ ಬಳಲಿ ಬಂದು 5 ಗೋಕುಲದಲ್ಲಿ ಹುಟ್ಟಿ ಗೋವುಗಳನ್ನೆಲ್ಲ ಕಾಯ್ದು ಗೋಪಸ್ತ್ರೀಯರ ಸೀರೆ ಸೆಳೆದು ಗೋಪಾಲಕೃಷ್ಣ ಬಳಲಿ ಬಂದು 6 ಬತ್ತಲೆ ಕುದುರೆಯನೇರಿ ಮತ್ತೆ ತೇಜಿಯನ್ನೆ ನಡೆಸಿ ಹತ್ತಾವತಾರವ ತಾಳಿ ಮತ್ತೆ ಕಲ್ಕಿರೂಪನಾÀಗಿ 7 ಧರೆಯೊಳತ್ಯಧಿಕವಾದ ಶ್ರೀರಂಗಪಟ್ಟಣದಿ ನೆಲೆಸಿ ಕರುಣದಿಂದ ಭಕ್ತರನ್ನು ಸಲಹಬೇಕು ಹಯವದನನೆ 8
--------------
ವಾದಿರಾಜ
ನಿನ್ನ ನಾನೇನೆಂದೆನೊ - ರಂಗಯ್ಯ ರಂಗನಿನ್ನ ನಾನೇಂದೆನೊ ಪ ನಿನ್ನ ನಾನೇನೆಂದೆ ನಿಗಮಗೋಚರ ಸ್ವಾಮಿಪನ್ನಗಶಯನ ಪಾಲ್ಗಡಲೊಡೆಯನೆ ರಂಗ ಅ ಧೀರ ಸೋಮಕ ವೇದಚೋರ ಖಳನನು ಸೀಳಿವಾರಿಧಿಗಿಳಿದು ಪರ್ವತವನೆತ್ತಿಧಾರಿಣಿಯನು ಕದ್ದ ದನುಜದಲ್ಲಣನಾದನಾರಸಿಂಹ ನಿನಗೆ ನಮೊ ಎಂದೆನಲ್ಲದೆನೀರ ಪೊಕ್ಕವನೆಂದೆನೆ - ಬೆನ್ನಲಿ ಘನ್ನಭಾರ ಪೊತ್ತವನೆಂದೆನೆ - ಮಣ್ಣನಗೆದುಬೇರ ಮೆದ್ದವನೆಂದೆನೆ - ರಕ್ಕಸನೊಳುಹೋರಿ ಹೊಯ್ದನೆಂದು ಹೊಗಳಿದೆನಲ್ಲದೆ 1 ಪಾಷಾಣ ಪತಿ ಶರಣೆಂದೆನಲ್ಲದೆತಿರುಕ ಹಾರುವನೆಂದೆನೆ - ಹೆತ್ತ ತಾಯಶಿರವ ತರಿದನೆಂದೆನೆ - ವನವಾಸಕೆಭರದಿ ಚರಿಸಿದನೆಂದೆನೆ - ಪೂತನಿಯನುಸರಕು ಮಾಡದೆ ಕೊಂದ ಹರಿಯೆಂದೆನಲ್ಲದೆ 2 ಚಿತ್ತಜಕೋಟಿ ಲಾವಣ್ಯ ಮುಪ್ಪುರದಉತ್ತಮಸ್ತ್ರೀಯರ ವ್ರತವಳಿದುಮತ್ತೆ ಕಲ್ಕಿಯಾಗಿ ಮಧುಪರ ಮಡುಹಿದಹತ್ತವತಾರದ ಹರಿಯೆಂದೆನಲ್ಲದೆಬತ್ತಲೆ ನಿಂತವನೆಂದೆನೆ - ತೇಜಿಯನೇರಿಒತ್ತಿ ನಡೆದವನೆಂದೆನೆ - ಬಾರಿಬಾರಿಗೆಸತ್ತು ಹುಟ್ಟುವನೆಂದೆನೆ - ಆದಿಕೇಶವಭಕ್ತವತ್ಸಲನೆಂದು ಪೊಗಳಿದೆನಲ್ಲದೆ 3
--------------
ಕನಕದಾಸ
ನಿನ್ನ ನಾನೇನೆಂದೆನೋ ರಾಮೇಶ್ವರನಿನ್ನ ನಾನೇನೆಂದೆನೋ ಸಕಲ ಲೋಕವನ್ನು ಪೊರೆವ ಪಾರ್ವತೀಶನೆಂದೆನಲ್ಲದೆ ಪ ತಾರಕಾಸುರನ ಪುತ್ರರ ಬಾಧೆಯನು ತಾಳಲಾರದೆ ಹರಿಮುಖ್ಯ ನಿರ್ಜರರುಶ್ರೀರುದ್ರ ಸಲಹೆಂದು ಪಾದಕೆ ಮಕುಟವ-ನೂರೆ ಪೊರೆದ ತ್ರಿಪುರಾರಿಯೆಂದೆನಲ್ಲದೆ ವಿಧಿ ಶಿರವ ಕೈ-ಯ್ಯಾರೆ ಕಡಿದನೆಂದೆನೆ ಭಕ್ತವತ್ಸಲವಾರಿಜಭವನುತಿಲೋಲನೆಂದೆನಲ್ಲದೆ 1 ನಾರದಸಹಿತ ಮತ್ಯಾರು ಕಾಣದಂದದಿಓರುಗಲ್ಲರಸಿನ ಮನೆಗೆ ಪೋಗಿತೋರುವ ಭಿತ್ತಿಯ ಕೊರೆದಾತನಿಷ್ಟವಪೂರಿಸಿದನುಪಮಮಹಿಮನೆಂದೆನಲ್ಲದೆಚೋರರ ಗುರುವೆಂದೆನೆ ಪಾರ್ಥಚಾಪದಿಂ-ದೇರುವಡೆದನೆಂದೆನೆ ಬತ್ತಲೆಮದವೇರಿ ಕುಣಿದನೆಂದೆನೆ ಅರ್ಜುನಗೊಲಿದಾರಾಜಿಸುವ ಮಹಾನಟನೆಂದೆನಲ್ಲದೆ2 ಸುರರು ದಾನವರೆಲ್ಲ ನೆರೆದು ವಾದಿಸಿ ಕ್ಷೀರಶರಧಿ ಮಥನವ ವಿರಚಿಸಲುಉರು ಹಾಲಾಹಲಮೊಗೆದುರುಹಲು ಸರ್ವರಪೊರೆದ ಶ್ರೀನೀಲಕಂಧರನೆಂದೆನಲ್ಲದೆಗರವ ಕುಡಿದನೆಂದೆನೆ ಪೆಣ್ಣಿತ್ತನಶಿರವನರಿದನೆಂದೆನೆ ಊರೂರೊಳುತಿರಿದುಗರುವನೆಂದೆನೆ ದುಷ್ಟ ಶಿಕ್ಷಕವರ ಕೆಳದಿಯ ರಾಮೇಶ್ವರನೆಂದೆನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ಮಗನ ಲೀಲೆಯ ತಾಳಲಾರೆವೆ ನಾವುತರಳನ ದುಡುಕು ಹೇಳಬಾರದೆ ಗೋಪಾಲಕೃಷ್ಣಗೆಬುದ್ಧಿ ಅಮ್ಮ ಪ ಇಂದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೇ ಯಶೋದೆ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕು ಪಾಲು ಬೆಣ್ಣೆ ಮೊಸರೆಲ್ಲವ ಮೆದ್ದುಕೋಲಲ್ಲಿ ನೀರ ಕೊಡವ ಒಡೆದನೇಅಸಲ ವರ್ಣನವ ದಿಟ್ಟ ನಿತ್ಯಾ ಇವನ ಹೋರಾಟಹೆಬ್ಬಾಲೆಯರಲ್ಲಿ ನೋಟ ಬಹಳ ಬಗೆಯಲಿಪಿಡಿದೇವೆಂದರೆ ಮೇಲಿಯಂಜಲುಗಳವೋಡಿದಾಅಮ್ಮ ಇದು ಚೆನ್ನಾಯಿತು 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನಲಿ ಜಲಕ್ರೀಡೆಯಾಡಲುಚಿತ್ತಚೋರ ಸೀರೆಗಳನೆಲ್ಲವ-ನೆತ್ತಿಕೊಂಡು ಮರವನೇರಿದನವ್ವಾಬೆತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಈ ಯುಕ್ತಿಗಳೇ ಬಹುಬಲ್ಲಹತ್ತಿಲಿ ಬಂದು ಕರವೆತ್ತಿ ಮುಗಿದರೆವಸ್ತ್ರಗಳೆಲ್ಲವ ಕೊಡುವೆನೆಂದನೇ ಅಮ್ಮ 2 ಜಾರ ನೀನೆಂದರೆಪರಿಹಾಸ್ಯವ ಮಾಡಿದ ರಂಗವಿಠಲನ ಅಮ್ಮ3
--------------
ಶ್ರೀಪಾದರಾಜರು
ನಿನ್ನ ವಶದಲಿ ಇದ್ದು ಇದ್ದು ಮುನ್ನೆ ದುರ್ವೃತ್ತಿಗೆ ಪೋಗುವುದೆನ್ನ ಮನಾ ಪ ಚಿತ್ರವಾದ ಕರಿಯ ಶೃಂಗರಿಸಿ ಮೇಲೆ ಛತ್ರಿಗೆ ನೆರಳಲ್ಲಿ ಕುಳ್ಳಿರೆನೆ ಆನೆ ಕೆಳಗೆ ಇಳಿದು ಬೂದಿಯೊಳಗಿಪ್ಪ ಕತ್ತೆ ಏರುವನೆಂದು ಇಚ್ಛೆ ಮಾಡುತಲಿದೆ 1 ಕಾಲಕಾಲಕೆ ಸುಧಿಯ ಸವಿದು ಮಾಣಿಕದ ಉಯ್ಯಾಲೆ ಮೇಲಾಡುತ್ತ ಬಾಳು ಎನೆ ತಾಳವೃಕ್ಷವನೇರಿ ತಲೆಕೆಳಗಾಗಿ ತಾ ಬೀಳುವೆನೆಂದು ಅಪೇಕ್ಷೆ ಮಾಡುತಲಿದೆ 2 ವೇಣಿ ಮಾಧವರಾಯಾ ನಿನ್ನ ಚರಣಾಂಬುಜ ಕಾಣುವ ಪ್ರಕಾಶ ಉದಾಸಸಿ ಕ್ಷೋಣಿಯೊಳಗೆ ಮಹಾ ಕತ್ತಲೆ ಬಯಸುವೆ ಹೀನನಂತೆಯಾದೆ ವಿಜಯವಿಠ್ಠಲರೇಯಾ 3
--------------
ವಿಜಯದಾಸ