ಒಟ್ಟು 268 ಕಡೆಗಳಲ್ಲಿ , 58 ದಾಸರು , 238 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪರಮೇಷ್ಠಿ ನಿರುತನಿಷ್ಠಿ ಮಾಣದೆ ಕೊಡು ಮನಮುಟ್ಟಿ ಪ ನಾನಾ ನಾಡಿನೊಳು ನೀನೆ ಪಿರಿಯನೆಂದು ಆನಂದ ಮತಿಯಿಂದ ಗಾನವ ಮಾಡುವೆ ಅ.ಪ. ಪುರುಷನಾಮಕ ವಿಧಾತ ಹಂಸವರೂಥ ಸರಸಿಜ ಗರ್ಭ ಶಿವತಾತ ಪರಮ ಗುರುವೆ ವಿಖ್ಯಾತ ಪೂರ್ವ ಮಾರುತ ತಾರತಮ್ಯದೊಳುನ್ನತ ಸಿರಿ ಪರಮಾಣು ಪ್ರದೇಶ ವರ ಶಬ್ದ ಪಿಡಿದು ಪರಿ ಪರಿಯಿಂದಲಿ ಶತಾನಂದ 1 ಜಗವÀ ಪುಟ್ಟಿಸುವ ಮಹಾಧೀರ ತತ್ವಶರೀರ ಮಗುಳೆ ಅನಿರುದ್ಧಕುಮಾರ ಝಗಿಝಗಿಪ ಮಕುಟಧರ ಜೀವನೋದ್ಧಾರ ನಿಗಭಿಮಾನಿ ಚತುರ-ಮೊಗನೆ ಪ್ರಬಲ ಅಹಿಗರುಡಾದ್ಯರಿಗೆಲ್ಲ ಅಗಣಿತ ವಾಕ್ಯನೆ ಹಗಲಿರುಳು ಮನಸಿಗೆ ಸುಖವಾಗುವ ಬಗೆ ಕರುಣಿಸು ನಮ್ಹಗೆಗಳ ಕಳೆದು 2 ವಾರಿಜಾಸನ ಲೋಕೇಶ ಭಕುತಿವಿಲಾಸ ಚಾರುಸತ್ಯ ಲೋಕಾಧೀಶ ಸಾರಹೃದಯ ವಿಶೇಷ ಮಹಿಮನೆ ದೋಷ ದೂರ ನಿರ್ಮಲ ಪ್ರಕಾಶ ಧಾರುಣಿಯೊಳಗವತಾರ ಮಾಡದ ದೇವ ಸಾರಿದೆ ನಿನ್ನಂಘ್ರಿವಾರಿಜಯುಗಳವ ಸಾರಿಸಾರಿ ವಿಜಯವಿಠ್ಠಲನ್ನ ಆರಾಧಿಪುದಕೆ ಚಾರುಮತಿಯ ಕೊಡು 3
--------------
ವಿಜಯದಾಸ
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾಲಯ ಕೃಪ ಆಲಯ ಬಾಲಗೋ ಪಾಲ ಬೇಗ ಪಾಲಿಸು ಪಿಡಿದೆನ್ನ ಪ ನಿತ್ಯನಿರ್ಮಲ ಸತ್ಯಚರಿತ ದೇವ ಸತ್ಯಭಾಮೆಯ ಪ್ರಿಯನಾಥ ಸ್ವಾಮಿ ನಿತ್ಯನಿಗಮ ವೇದವಿನುತ ಜಗ ಕರ್ತು ಕಾರುಣ್ಯರಸಭರಿತ ಆಹ ಭಕ್ತಾಂತರ್ಗತ ಕಾಲಮೃತ್ಯುಸಂಹರ ಸ ಚ್ಚಿತ್ತಾನಂದ ಹರಿ ಸತ್ಯ ಸರ್ವೋತ್ತಮ 1 ದಿನಮಣಿಕೋಟಿಪ್ರಭಾಕರನುತ ವನಜಸಂಭವ ಸುರನಿಕರ ದಿವ್ಯಗುಣ ಘನನಿಧಿಗಂಭೀರ ಜೀಯ ಅನುಪಮ ಭೂಗಿರಿವರ ಆಹ ಮನಸಿಜಪಿತ ಮನುಮುನಿಮನಮಂದಿರ ತನುತ್ರಯದಲಿ ನಿನ್ನ ನೆನಹನು ಪಾಲಿಸು 2 ಶ್ಯಾಮಸುಂದರ ಕೋಮಲಾಂಗ ಭಕ್ತ ಕಾಮಿತಫಲಪ್ರದಪುಂಗ ದುಷ್ಟ ಸೋಮಕಸುರಮದಭಂಗ ಪುಣ್ಯ ನಾಮಕ ಸುಜನತರಂಗ ಆಹ ತಾಮಸ ಪರಿಹರ ಭೂಮಿಜನಕ ಜಯ ಕ್ಷೇಮ ಕರುಣಿಸು ಮಮಸ್ವಾಮಿ ಶ್ರೀರಾಮಯ್ಯ3
--------------
ರಾಮದಾಸರು
ಪಾಲಿಸೋ ಪರಿಪಾಲಿಸೋ ಪ ಪಾಲಿಸೋ ನೀ ಕಾಲನಾಮಕ-ಶ್ರೀಲೋಲ ಕಾಲಕರ್ಮದಲೆನ್ನಕರುಣಿಸಿ ನೀನೀಗ ಅ.ಪ ದುಷ್ಟಜನರ ಸಂಹಾರಕ-ಸರ್ವ ಶಿಷ್ಟಜನರ ಪರಿಪಾಲಕ-ದೇವ ಸೃಷ್ಟ್ಯಾದ್ಯಷ್ಟಕರ್ತುಕ-ತ್ವದ್ಭಕ್ತರಾ- ಭೀಷ್ಟದಾಯಕಾ 1 ಜಗದ್ಭರಿತ ಜಗದಂತರ್ಯಾಮಿ-ಸರ್ವ ಜಗದಾದ್ಯಂತ ಭಿನ್ನನೇಮಿ-ನೀನೆ ಸ್ವಗತಭೇದಶೂನ್ಯಮಹಿಮಾ ಇನ್ನು ಜಗದ್ಭುಕು ಮಮಕುಲಸ್ವಾಮಿ 2 ಪರಮೇಷ್ಟಿಭವಇಂದ್ರವಂದಿತ-ಕ್ಷರಾ- ಕ್ಷರ ಪುರುಷ ಪೂಜಿತ-ಪಾದ ನಿರವಧಿಕಗುಣಗಣಾನ್ವಿತ ನೀನೆ ಜರಾಮರಣನಾಶ ವರ್ಜಿತ 3 ಮುಕ್ತಾಮುಕ್ತಾಶ್ರಯದೇವನೆ-ಸರ್ವ ಭಕ್ತಮುಕ್ತಿಪ್ರದಾತನೆ-ವ್ಯಕ್ತಾ ವ್ಯಕ್ತಪುರುಷದೇವನೆ ಪುರುಷ- ಸೂಕ್ತಸುಮೇಯ ಅಪ್ರಮೇಯನೆ 4 ಸ್ವರವರ್ಣ ಶಬ್ದವಾಚ್ಯನೆ-ದೇವ ಸುರಾಸುರಾರ್ಚಿತ ಪಾದನೆ ಓಂ- ಕಾರ ಪ್ರಣವ ಪ್ರತಿಪಾದ್ಯನೆ ನಿತ್ಯ ನಿಖಿಳಾಗಮದೊಳು ಸಂಚಾರನೆ5 ಅಚಿಂತ್ಯಾನಂತರೂಪಾತ್ಮಕ-ನಿನ್ನ ಭಜಕರ ಭವಬಂಧ ಮೋಚಕ-ಸರ್ವ ಅಬುಜಾಂಡ ಕೋಟಿನಾಯಕ ನೀನೆ ಜಗದಾದ್ಯಂತ ವ್ಯಾಪಕ6 ವೇದ ವೇದಾಂತ ವೇದ್ಯನೆ-ನೀನೆ ಆದಿಮಧ್ಯಾಂತದೊಳ್ ಖ್ಯಾತನೆ ಗುರು ಮೋದತೀರ್ಥರ ಹೃತ್ಕಾಂತನೆ ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲನೆ 7
--------------
ಉರಗಾದ್ರಿವಾಸವಿಠಲದಾಸರು
ಪಾಲಿಸೋ ಸದಾ ಪರಿಪಾಲಿಸೋ ಪಾಲಿಸೋ ಪಾರ್ವತಿ ರಮಣ | ತ್ರಿದ ನಾಲಿಗೆಯಿಂದಲಿ | ಶ್ರೀಲಕುಮೀಶನ ಕಾಲ ಕಾಲಕ್ಕೆ ಕೊಟ್ಟು ಅ.ಪ ಭೇಷಪಾವಕ ಪತಂಗ | ನಯನ ಭಾಸುರ ಸ್ಪಟಿಕ ನಿಭಾಂಗ | ಹರಿ ದಾಸ ಜನರ ಸುಸಂಗವಿತ್ತು ದೋಷ ಕಳೆಯೊ ರಾಮಲಿಂಗ ಆಹಾ 1 ಕೇರ ಕುಮಾರ ಕುಮಾರ | ಪಿತ ಕೀರನಾಮಕನವತಾರ |ಕೀರಾ ದೇವನ ಗರ್ವಪರಿಹಾರ | ತಾಟ ಕಾರಿನಾಮ ಸವಿಗಾರ | ಆಹಾ ಶರಧಿ ವೈಕಾರಿಕÀ | ತತ್ವಾಧಿ ಕಾರಿ ವಿಕಾರಿ ಷಕಾರ ಪದಾರ್ಚಕ 2 ನಂದಿವಾಹನ ನಾಗಶರನೆ | ನೀಲ ಸುರನದಿ ಧರನೆ | ಶಾಮ ಸುಂದರ ವಿಠಲನ ಸಖನೆ ಮಹಿ ಶ್ಯಂದನ ಶಿವಶಂಕರನೆ | ಆಹಾ ಒಂದೂರಾರ್ಯರ ಕರದಿಂದ ಪೂಜಿತನಾಗಿ ನಿಂದು ಭಜಿಪರಿಗಾನಂದವೀವ ದೇವ 3
--------------
ಶಾಮಸುಂದರ ವಿಠಲ
ಪಾಲೀಸೊ ಪವಮಾನ | ಜಯಪತಿಬಾಲಾನೆ ಜಗತ್ರಾಣಾ ಪ ಕಾಳೀರಮಣ ಹೃತ್ಕೀಲಾಲಜದಿ ತೋರೊಲೀಲಾಮಾನುಷನ | ಬಾಲ ಗೋಪಾಲನ ಅ.ಪ. ಶ್ವಾಸ ರೂಪಕ ಪ್ರಾಣಾ | ತತುವರಿ | ಗೀಶಾ ಭಕ್ತ ಪೋಷಣ ||ವಾಸೀಸಿ ತ್ರಿವಿಧರೊಳ್ | ತಾಸೀಗ್ವಂಭೈನೂರುಶ್ವಾಸ ಜಪಂಗಳ | ಲೇಸಾಗಿ ನೀ ಗೈದೆ 1 ಸಕಲ ಜಗವು ವ್ಯಾಪ್ತಾ | ಜೀವರ | ಅಖಿಲ ಕರ್ಮದಿ ಶಕ್ತಾ ||ಸೃಕು ಸೃವಾದ್ಯಂಗ | ಪ್ರಕಾರದೊಳಗಿದ್ಯುಕುತಿಯಲಿ ಯಜ್ಞ | ಭೋಕ್ತøವ ಸೇವಿಸುವ 2 ಕೂರ್ಮರೂಪಿ ಜಗಭಾರ | ಪೊತ್ತಿಹೆ | ಪೇರ್ಮೆಯಲಿಂದ ಸಮೀರ ||ಧರ್ಮನನುಜ ಸೂ | ಶರ್ಮಾನ ಬಿಗಿದು ಗೋ-ಧರ್ಮಾ ಕಾಯ್ದ ಭಾವಿ | ಬ್ರಹ್ಮಾನೆ ಸಲಹೆನ್ನ 3 ಬೃಹತೀ ನಾಮಕಗನ್ನಾ | ನಾಗುತ | ಮಹಾ ಪುರುಷ ಸೇವೆಯನ್ನಾ ||ವಿಹಿತ ಮಾರ್ಗದಿ ಗೈದೆ | ಮಹಾ ಮಹಿಮ ವಾಯು ಸಹೋಬಲೌಜ ಭ್ರಾಜ | ಪಾಹಿ ತೇಜೋರೂಪಿ 4 ತರಾತಮದ ಸೊಲ್ಲಾ | ಶ್ರೀಹರಿ | ಗುರು ಗೋವಿಂದ ವಿಠಲಾ ||ಪರಮ ಪರಾಧ್ರ್ಯನುತ | ಪರಮ ರಸನು ಎನುತೊರೆವ ಮರುತ ಪದ | ಸರಸೀರುಹಕೆ ನಮೊ 5
--------------
ಗುರುಗೋವಿಂದವಿಠಲರು
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪಿಳ್ಳಂಕೇರಿಯ ವಾಸ ದಾಸ | ಕಾಯೊಮಲ್ಲಾರಿ ಮಹಿದಾಸ ದಾಸಾ ಪ ಎಲ್ಲ ಸಚರಾಚರದಿ ವ್ಯಾಪ್ತನು | ನಲ್ಲ ಕೃಷ್ಣನ ಸೇವೆ ಬಹಳದ ಸಲ್ಲಿಸಲು ಬಹುರೂಪ ತಾಳ್ದ ಪ್ರ | ಪುಲ್ಲ ವದನಾಂ ಭೋಜ ಹನುಮ ಅ.ಪ. ದಕ್ಷಿಣಾಕ್ಷಿಯ ವತ್ಸರೂಪಾ | ಸುರತ್ರ್ಯಕ್ಷಾದಿ ಸಂಸೇವ್ಯ ಭೂಪಾ |ಕ್ಷೋಭ್ಯತೀರ್ಥ ಶ್ರೀ ಯತಿಪಾ | ಗೊಲಿದುಅಕ್ಷಾರಿ ತೋರ್ದೆ ಈ ರೂಪಾ |ಕುಕ್ಷಿಯಲಿ ಪಾಪಾತ್ಮ ಪುರುಷನ | ಶಿಕ್ಷಿಸುತ ಶೋಭಿಸುತ ನಿತ್ಯಪಕ್ಷಿವಾಹನನಂಘ್ರಿ ಕಮಲವ | ಈಕ್ಷಿಸಲು ಸಹಕರಿಪ ಪ್ರಾಣಾ 1 ದುರುಳ ಅವನನ್ವಯದ | ಸಹಜಾತರನು ವಧಿಸಿ ಮೆರೆದ ಸ 2 ಸಾರ ಸಜ್ಜನರನ್ನು ಪೊರೆದ 3 ಹಂಸನಾಮಕ ಹರಿ ದ್ವಂದ್ವಾ | ಪಾದಪಾಂಸುವ ಧರಿಸಿ ಮೆರೆಯುವಾ |ಹಂಸಾಖ್ಯ ಜಪ ದಿನ ದಿನವಾ | ಪಟ್ಯತವಿಂಶತ್ಯೇಕ ಸಾಸಿರವಾ |ಹಂಸವಾಹನ ತಾತನೆನಿಸುವ | ಕಂಸಮರ್ದನ ಚರಣಕರ್ಪಿಸಿಸ್ವಾಂಶರೂಪವನಂತ ಧರಿಸುತ | ಶಂಸಿಸುವೆ ವೇದೋಕ್ತ ಅನುಕ್ತದಿ 4 ದೇವ ದೇವರ ದೇವ ದೇವಾ | ಗುರುಗೋವಿಂದ ವಿಠ್ಠಲ್ಲ ದೇವಾ |ಕಾವ ಕೊಲ್ಲುವ ಸ್ಥಿರ ಚರವಾ | ನಂಬುದಾವ ಬಲ್ಲನಿವನ ಮಹಿಮವಾ |ಭಾವಿ ಬೊಮ್ಮನೆ ರಮೆಯ ಮುಖದಿಂ | ಶ್ರೀವರನ ಮಹಿಮೆಗಳ ತಿಳಿದುಭಾವ ಶುದ್ಧಿಯ ಗೈದು ಸುಜನರ | ಸ್ವಾವಲಂಬಿಗಳೆನಿಸಿ ಪೊರೆವ 5
--------------
ಗುರುಗೋವಿಂದವಿಠಲರು
ಪುರಂದರ ದಾಸರಾಯ ಪ ದಾಸರಾಯ ಪ್ರತಿವಾಸರದಲಿ ಶ್ರೀನಿ ವಾಸನ್ನ ತೋರೋ ದಯಾಸಾಂದ್ರ ಅ.ಪ. ವರದನಾಮಕ ಭೂಸುರನ ಮಡದಿ ಬ ಸಿರಲಿ ಜನಿಸಿ ಬಂದು ಮೆರೆದೆ ಧರಣಿಯೊಳು 1 ಕುಲಿಶಧರಾಹ್ವಯ ಪೊಳಲೊಳು ಮಡದಿ ಮ ಕ್ಕಳ ಕೂಡಿ ಸುಖದಿ ಕೆಲ ಕಾಲದಲಿದ್ಯೊ 2 ವ್ಯಾಸರಾಯರಲಿ ಭಾಸುರ ಮಂತ್ರೋ ಪ ದೇಶವ ಕೊಂಡು ರಮೇಶನ ಒಲಿಸಿದ್ಯೊ 3 ವಾಹನ ವಸ್ತುಗಳನೆಲ್ಲ ತೃಣಕೆ ಬಗೆದು ಕೃಷ್ಣಾರ್ಪಣವೆಂದೆ ಬುಧರಿಗೆ 4 ಕೃತಿ ಪೇಳಿ ಆ ಪ್ರಾಕೃತ ಹರಿಯಿಂದ ಸ್ವೀಕೃತ ನೀನಾದ್ಯೊ 5 ಮೂರ್ತಿ ಮಹಿಮೆಗಳ ಕೀರ್ತಿಸಿ ಜಗದಿ ಕೃತಾರ್ಥನೆಂದೆನಿಸಿದೆ6 ವನಧಿ ಪೋತನೆನಿಪ ಜಗ ನ್ನಾಥ ವಿಠ್ಠಲನ ಸುಪ್ರೀತಿಯಿಂದೊಲಿಸಿದೆ 7
--------------
ಜಗನ್ನಾಥದಾಸರು
ಪೊರೆಯಬೇಕೋ ಎನ್ನ ಶ್ರೀ ನರ ಹರಿಯೆ ಕೇಳೋ ಮುನ್ನಾ ಪ ನೀ ಪೊರೆಯದಿರಲು ಈ ಪೊಡವಿಯೊಳಗೆ ಕಾಪಾಡುವರನು ಕಾಣೆ ನಿನ್ನಾಣೆ ಮನ್ನಣೆಯಲಿ ಅ.ಪ ನೀರ ಪೊಕ್ಕರು ಬಿಡೆನೋ ಬೆನ್ನಲಿ ಭಾರ ಪೊತ್ತರು ಬಿಡೆನೋ ಕೋರೆಯ ಬೆಳೆಸಿ ನೀ ಘೋರ ರೂಪನಾಗಿ ತಿರುಕನೆಂದು ಪೇಳಲು ಬಿಡೆನೋ 1 ಕೊಡಲಿ ಪಿಡಿಯೆ ಬಿಡೆನೋ ನೀ ಘನ ಅಡವಿ ಸೇರಲು ಬಿಡೆನೋ ತುಡುಗನಂದದಿ ಪಾಲ್ಗಡಿಗೆ ಒಡೆದು ಸಲೆ ಉಡುಗಿ ಜರಿದು ತುರುಗೇರಲು ಬಿಡೆನೋ 2 ಪಾಪಿ ಎಂದು ಎನ್ನ ಜರಿಯದೆ ಕಾಪಾಡೆಲೊ ಘನ್ನ ಶ್ರೀ ನರಹರಿಯ ನಾಮಕೆ ಪೋಪದ ಪಾಪಗಳುಂಟೆ ಜಾಲವ ಮಾಡದೆ 3
--------------
ಪ್ರದ್ಯುಮ್ನತೀರ್ಥರು
ಪೋಷಿಸು ಎನ್ನಯ ದೋಷಗಳೆಣಿಸದೆ ದಾಸರಾಯ ಶೇಷನಾಮಕನೆ ವಿಶೇಷ ಜ್ಞಾನವ ನೀಡೋ ದಾಸರಾಯ ಪ ಸಂತತ ಕರಪಿಡಿ ಸಂತರೊಡೆಯ ಗುರು ದಾಸರಾಯ ಸಂತೋಷ ತೀರ್ಥರಂತಃ ಕರಣ ಪಾತ್ರ ದಾಸರಾಯ 1 ಚಿಂತಿಪ ಜನರಿಗೆ ಚಿಂತಾಮಣಿತಯ ನೀನೆ ದಾಸರಾಯ ಚಿಂತಿರಹಿತವರ ಚಿಂತಾಮಣಿಯು ನೀನೆ ದಾಸರಾಯ 2 ಚಿಂತ ರಹಿತವರ ಚಿಂತರವೇಲಿವಾಸ ದಾಸರಾಯ ಕದಂಬ ವಿನುತ ದಾಸರಾಯ 3 ಬೆಂಬಿಡದಲೆ ಮನದ್ಹಂಬಲ ಪೂರೈಸು ದಾಸರಾಯ ನಂಬಿದ ದ್ವಿಜರಿಗೆ | ಶಂಭುಗಿರಿಯಲ್ಲಿ ದಾಸರಾಯ 4 ಬಾಂಬೊಳೆ ತೋರಿಸಿ ಸಂಭ್ರಮಗೊಳಿಸಿದ ದಾಸರಾಯ ಹರಿಕೇತು ಹರಿಸುತ ಹರಿಣಾಂಕ ಕುಲಜಾತ ದಾಸರಾಯ 5 ಹರಿಕೇತು ಹರಿಸುತಾದ್ಯರನ ಸಂಹರಿಸಿದ ದಾಸರಾಯ ಹರಿದಾಡುತಿಹ ಮನ | ಹರಿಯಲ್ಲಿ ನಿಲಿಸಯ್ಯದಾಸರಾಯ 6 ಹರಿವೈರಿ ಮತಕರಿ | ಪರಿಪರಿ ಹರಿಸಘು ದಾಸರಾಯ ಪೂರ್ತಿಸುವ ನಿನ್ನ ವಾರ್ತೆಕೇಳಿ ಬಂದೆ ದಾಸರಾಯ 7 ಪಾರ್ಥಸಾರಥಿ ಭವ್ಯದಾಸರಾಯ ಮೂರ್ತಿಯ ಸ್ಥಾಪಿಸಿ ಕೀರ್ತಿಯ ಪಡೆದ ದಾಸರಾಯ 8 ನೇಮನಿಷ್ಟೆಯ ಬಿಟ್ಟು ಪಾಮರನಾದೆನಗೆ ದಾಸರಾಯ ಶ್ರೀಮಧ್ವನಿಗಮಾರ್ಥ | ಪ್ರೇಮದಿ ತಿಳಿಸಯ್ಯ ದಾಸರಾಯ 9 ಕಾಮಾದಿ ಷಡ್ವೈರಿ | ಸ್ತೋಮಾದಿ ಕುಲಿಶನೆ ದಾಸರಾಯ ಕಾಮಿತ ಫಲದಾಯಕ ಶಾಮಸುಂದರ ದೂತ ದಾಸರಾಯ 10
--------------
ಶಾಮಸುಂದರ ವಿಠಲ
ಪೋಷೀಸೊ ಹರಿ ಮಂಚಕ | ಪೆಡೆಗಳುಸಾಸೀರ5ುಭೂಷ5ಪ|| 5ಷ ಎನ್ನ ದೋಷ ನಿ | ಶ್ಯೇಷವ ಗೈಸುತಸಾಸೀರ ನಾಮವ ಮನಾ | ಕಾಶದೊಳು ತೋರಿ ಅ.ಪ. ಬೇಡೂವೆ ವಾತಾಶನಾ | ಎನ್ನನ್ನುಕಾಡೂವ ವ್ಯಜಿನಾಹನಾ |ಮಾಡಿ ಮನ್ಮಾನಸದಿ | ರೂಢಿಗೊಡೆಯ ಹರಿಯನೋಡುವ ಸುಖ ತಡ | ಮಾಡದೆ ಕೊಟ್ಟು ಕಾಯೋ 1 ಚಕ್ಷುವೆ ಶ್ರವ ಕಾಯಾ ಪೂರ್ವದತ್ರ್ಯಕ್ಷಾನೆ ಸುರಗೇಯಾ |ಕುಕ್ಷೀಯೆ ಪಾದವೆಂಬ | ಲಕ್ಷಣ ಶಿರದಲ್ಲಿಲಕ್ಷೀಸದಲೆ ಜಗ | ಸರ್ಪಪಾಯಿತ ನಿನಗೆ 2 ಜೀವ ನಾಮಕ ನೆನಿಪೆ | ಹರಿಯನುಸೇವಿಸುತಲಿ ಸುಖಿಪೆ ||ಕಾವಕೊಲ್ಲುವ ಗುರು | ಗೋವಿಂದ ವಿಠಲನತೀವರ ತೋರ್ಪುದು | ನೀ ವೊಲಿದೆನಗಿನ್ನು 3
--------------
ಗುರುಗೋವಿಂದವಿಠಲರು
ಪ್ರಭು ಪಾಂಡುರಂಗ ವಿಠಲ | ಅಭಯಪ್ರದಾತಾ ಪ ಇಭವರದ ನೀನಾಗಿ | ಪೊರೆಯ ಬೇಕಿವನಾ ಅ.ಪ. ಮರ್ಮಗಳ ನರಿಯದಲೆ | ಕರ್ಮೂನುಭವದೊಳಗೆಪೇರ್ಮೆಯಲಿ ಸಿಲ್ಕಿ ಬಲು | ನೊಂದಿಹನೊ ಬಹಳಾಧರ್ಮಕೃದ್ಧರ್ಮಿ ಹರಿ | ಧರ್ಮಸೂಕ್ಷ್ಮವ ತಿಳಿಸಿನಿರ್ಮಮನ ಮಾಡಿವನ | ಕರ್ಮನಾಮಕನೇ 1 ಮಧ್ವರಾಯರ ಕರುಣ | ಬದ್ಧ ನಿರುವನು ಈತಸಿದ್ದಾಂತ ತತ್ವಗಳು | ಬುದ್ದಿಗೇ ನಿಲುಕೀಅದ್ವಯನು ನೀನೆಂಬ | ಶುದ್ಧಬುದ್ಧಿಯನಿತ್ತುಉದ್ಧಾರಮಾಡೊ ಹರಿ | ಕೃದ್ಧಖಳಹಾರೀ 2 ನಾನು ನನ್ನದು ಎಂಬ | ಹೀನಮತಿಯನು ಕಳೆದುನೀನು ನೀನೇ ಎಂಬ | ಸುಜ್ಞಾನವಿತ್ತುದಾನವಾರಣ್ಯ ಕೃ | ಶಾನು ಶ್ರೀ ಹರಿಯೇಸಾನುರಾಗದಿ ಪೊರೆಯೊ | ದೀನವತ್ಸಲ್ಲಾ 3 ಹರಿ ನಾಮ ವೆಂತೆಂಬೊ | ವಜ್ರಕವಚವತೊಡಿಸಿದುರಿತಾಳಿ ಅಟ್ಟುಳಿಯ | ದೂರಗೈ ಹರಿಯೇಸರುವ ಕಾರ್ಯಗಳಲ್ಲಿ | ಹರಿಯು ಓತಪ್ರೋತನಿರುವ ನೆಂಬುದ ತಿಳಿಸಿ | ಪೊರೆಯ ಬೇಕಿವನಾ 4 ಪಾದನಾತ್ಮಕನೆನಸಿ | ಪಾವ ಮಾನಿಯ ಪ್ರೀಯಧೀವರನೆ ಶ್ರೀವರನೆ | ಕಾವ ಕರುಣಾಳುಗೋವುಗಳ ಕಾವ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಪ್ರಳಯಜಲದಲಿ ನೀನಾಲದೆಲೆಯ ಮ್ಯಾಲೆ ಹಲವು ಜೀವರು ನಿನ್ನ ಹೃದಯದೊಳಿರಲು ಕೆಲವುದಿನದಿ ಯೋಗನಿದ್ರೆಯೊಳಿರೆ ಒಲವಿಂದ ಸೃಜಿಸುವೆನೆಂದು ನೇಮಿಸುವೆ1 ಪ್ರಕೃತಿಯ ಮೂಲಕಾರಣವನು ಮಾಡಿ ಸಕಲತತ್ವಗಳ ಸಮ್ಮೋಹದಿ ಕೂಡಿ ವಿಕಳಿಸದಂತೆ ತನ್ಮಾತ್ರೆಯ ಕೂಡಿ ಅಖಿಳೇಶ ಮಹತತ್ವಗಳ ನಿರ್ಮಿಸಿದೆ 2 ಮಹತತ್ವದಿಂದಹಂಕಾರವ ಪುಟ್ಟಿಸಿ ಅಹಂಕಾರದಿಂದ ವೈಕಾರಿಕ ಮೊದಲಾದ ತ್ರಿವಿಧತತ್ವಗಳ ನಿರ್ಮಾಣವÀ ಮಾಡ್ದೆ ಮಹಮಹಿಮೆಯ ಮೆರೆದೆ ಜಗವರಿಯೆ 3 ಇಪ್ಪತ್ತುನಾಲ್ಕು ಅಯಿದಾರುತತ್ವಗಳಿಂದ ತÀಪ್ಪದೆ ಬೊಮ್ಮಾಂಡವ ನಿರ್ಮಿಸಿದೆ ಸರ್ಪಶಯನನಾಗಿ ನಾಭಿಕಮಲದಿಂದ ಅಪ್ಪಬ್ರಹ್ಮನ ಪ್ರಸವಿಸಿದೆ ನೀನೆಂದು 4 ಒಂದು ಮೂರುತಿಯಿಂದ ಸೃಷ್ಟಿಯ ಮಾಡಿ ಮತ್ತೊಂದು ಮೂರುತಿಯಿಂದ ಪಾಲನೆ ಮಾಡಿ ಒಂದು ಮೂರುತಿಯಿಂದ ಸಂಹರನೆ ಮಾಡಿ ಒಂದೊಂದು ಮಹಿಮೆಯು ಅನಂತಾದ್ಭುತವು 5 ಒಂದು ರೋಮಕೂಪದಲಿ ಬ್ರಹ್ಮಾಂಡ ಇಂದಿರೆ ಅನಂತಕೋಟಿ ನಾಮಗಳಲ್ಲಿ ಬಂದು ಗೋಕುಲದಲ್ಲಿ ಶಿಶುವಾಗಿ ತೋರಿದೆ ಆ- ಸುರರು 6 ಜನನಮರಣ ಭಯದಿಂದ ದೇವತೆಗಳು ಅನುದಿನ ನಿನ್ನ ಪೂಜೆಯ [ಮಾಡೇವೆನಲು] ಪುನರಾವೃತ್ತಿ ರಹಿತವಾದ ಫಲವೆತ್ತಿ ಮನುಜನಂತೆ ತೋರುವುದೇನುಚಿತವೊ 7 ಒಮ್ಮೆಕಾಣಲು ಸಿರಿರಮ್ಮೆ ಚೆಲುವನ ಒಮ್ಮನದಿಂದ ನೋಡೇನೆಂಬ ಭಯದಿಂದ ರಮ್ಮೆ ಮೊಗವ ತಗ್ಗಿಸಿ ನಾಚಿಸಿದಳೆ 8 ದÀಶದಿಕ್ಕು ನೋಡುತ್ತ ಭಯದಿಂದ ಕಮಲಜ ಶಶಿನಾಳದೊಳಗಿದ್ದ ದಾರಿಯ ಕಾಣದೆ ದಶಶತವರುಷ ನಿಮ್ಮನು ಧ್ಯಾನಿಸುತಿರೆ ವಸುಧೀಶ ನಿಮ್ಮ ನಿಜವ ತೋರಿದಿರಿ 9 ಆಲೋಚನೆಯಿಂದ ಸರ್ವ ವಿಷಯದಿಂದ ಲೀಲೆಯಿಂದ ಪಾಡಿ ಕಮಲಸಂಭವನ ವೋಳು ಮಾಡದಂತೆ ಒಳಿತಾಗಿ ತಲೆವಾಗೆ ಮೂಲ್ಲೋಕವ ಕೃಪೆಯಿಂದ ಪಾಲಿಸಿದೆ 10 ನಂದ ಯಶೋದೆ ವಸುದೇವ ದೇವಕಿಯರು ಸುಕೃತ ಫಲವಾಯಿತೆಂದು ಬಂದ ಬ್ರಾಹ್ಮಣರ ದ್ರವ್ಯದಿ ದಣಿಸಿದರು 11 ಜಾತಕರ್ಮವ ಮಾಡಿ ಮಧುವ ಬಾಯೊಳಗಿಟ್ಟು ಒತ್ತುಮೊರನ ಗೊಟ್ಟಿನಲಿ ಮಲಗಿದ್ದು ಸಾ- ಕ್ಷಾತ್ ಶ್ರೀ ನಾರಾಯಣನ ಅವತಾರವೆಂದು ಮಾತೆಯ ಮೊಲೆವಾಲನುಂಡ ಬೇಗದಲಿ 12 ವಾರುಣಿ ಶ- ಚಿ ರತಿ ಮೊದಲಾದ ಸತಿಯರು ನಾರಾಯಣ ಪರದೇವತೆಯೆಂದು ನಾರಿಯರೆಲ್ಲ ಪಾಡಿದರತಿ ಹರುಷದಲಿ 13 ನಾಮಕರಣ ದಿವಸ ಬ್ರಹ್ಮಾದಿ ಸುರರು ಈ ಮಹಾಶಿಶುವ ನೋಡೇವೆಂಬ ಭರದಿಂದ ಆ ಮಹಾಸ್ತೋಮವೆಲ್ಲ ಕೂಡಿಬರ- ಲೀ ಮಹಾಶಿಶುವ ನೋಡಿದರೆ ಅರ್ಥಿಯಲಿ 14 ವ್ಯಾಸ ಧೌಮ್ಯಾಚಾರ್ಯರೊಲಿದು ಮಂತ್ರಗಳಿಂದ ಸಾಸಿರಕೋಟ್ಯನಂತ ನಾಮಗಳುಳ್ಳ ವಾಸುದೇವ ಕೃಷ್ಣನೆಂಬ ನಾಮಗಳಿಟ್ಟು ಸೂಸಿದರಕ್ಷತೆ ಸುಮೂಹೂರ್ತದಲಿ 15 ಕ್ಷೀರಾಂಬುಧಿಯನ್ನೆ ತೊಟ್ಟಿಲು ಮಾಡಿ ಓರಂತೆ ನಾಲ್ಕುವೇದಗಳ ನೇಣನೆ ಮಾಡಿ ಧೀರಶೇಷನು ಬಂದು ಹಾಸಿಕೆ ಹಾಕಲು ನಾರಿಯರೊಡನೆ ಮಲಗಿದೆಯೊ ಹಯವದನ 16
--------------
ವಾದಿರಾಜ