ಒಟ್ಟು 183 ಕಡೆಗಳಲ್ಲಿ , 46 ದಾಸರು , 133 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಕ್ಕಿದೆಲ್ಲೊ ಕೃಷ್ಣ ನೀನು ಸಿಕ್ಕಿದೆಲ್ಲೊ ನಮ್ಮ ಕೈಯ ಹೊಕ್ಕು ಮುನಿಯ ಹಕ್ಕಿಯೊಳಾದ್ಯೊ ತೆಕ್ಕಿಯ ಪುಕ್ಕಸಾಟಿಯ 1 ಬಿಟ್ಟರ ಗೊಲ್ಲತೇರಲ್ಲೊ ಕಟ್ಟಿದ ಸೊಲ್ಲೊ ಮುಟ್ಟಿ ಬಿಡುವವರಲ್ಲೊ ಘಟ್ಯಾಗಿ ನಿಲ್ಲೊ 2 ನಾವು ಬಲ್ಲೆವು ನಿನ್ನಾಟ ಎವಿ ಹಾಕುನೋಟಿ ಹವಣಿಸಿ ಹಿಡಿದೆವೊ ನೀಟ ಭಾವಿಸಿ ಈ ಮಾಟ 3 |ಬಲ್ಲತನವದೋರಿದೊ ಇಲ್ಲಿ ಮರುಳಾದ್ಯೊ ನಿಲ್ಲೊ ನಮ್ಮೊಳು ನೀನಾದ್ಯೊ ಎಲ್ಲಿಗೆ ಹೋದ್ಯೊ 4 ವಶವಾಗಲಿಕ್ಕ ನಮಗ ವಸುಧಿಯೊಳಗ ಯಶೋದೆ ಹಡೆದಳು ತಾ ಈಗ ಲೇಸಾಗಿ ನಿನಗ 5 ನಾವು ಹಿಡಿದೇವೆಂಬುವ ಮಾತ ಪೂರ್ವಾರ್ಜಿತ ನವನೀತ ಸವಿದೋರಿ ಹಿತ 6 ಭಾನುಕೋಟಿ ಸು ಉದಯ ಮುನಿಜನರಾಶ್ರಯ ನೀನಾಗಿ ಸಿಕ್ಕಿದ್ಯೊ ಕೈಯ ದೀನ ಮಹಿಪತಿಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುಖ ಪೂರ್ಣ ವಿಠಲನೆ | ಸಲಹ ಬೇಕಿವಳಾ ಪ ವಿಖನ ಸಾಂಡವ ಬಾಹ್ಯ | ಒಳಗೆಲ್ಲಾ ವ್ಯಾಪ್ತ ಅ.ಪ. ನಾರಿಮಣಿ ಪತಿಸೇವೆ | ಸಾರತರದಲಿಗೈದುಭೂರಿಭಕ್ತಿಯಲಿಂದ | ಸಂತಾನಕಾಗೀಶ್ರೀ ರಮಣ ತವಪಾದ | ದಾರಾಧನೆಯಗೈದುಭೋರಿಟ್ಟು ಪ್ರಾರ್ಥಿಪಳು ಕಾರುಣ್ಯ ಮೂರ್ತೇ 1 ಭಕುತರ್ಗಭೀಷ್ಟಗಳ | ನೀ ಕೊಡುವಿ ಎಂತೆಂಬಉಕುತಿಯನೆ ನಾ ಕೇಳಿ | ಅರಿಕೆಯನೆ ಮಾಳ್ವೇಈಕೆಯ ಮನೋರಥವ | ನೀ ಕೊಟ್ಟು ಸಾಧನವವೈಖರಿಯಲಿಂದೆಸಗೊ | ರುಕುಮಿಣೀ ಪತಿಯೇ 2 ಉಚ್ಛನೀಚಾದಿಗಳು | ಸ್ವಚ್ಛ ತಿಳಿಸಿವಳೀಗೆಅಚ್ಛ ಕನ್ನಿಕೆ ರಮಣ | ಅಚ್ಯುತಾನಂತಾಮುಚ್ಚು ಕಾಣಿಕೆಗೊಂಡು | ಇಚ್ಛೆ ಪೂರೈಸುವುದುಸಚ್ಚದಾನಂದಾತ್ಮ | ಚಿತ್ಸುಖಪ್ರದನೇ3 ಹರಿಗುರು ಸದ್ಭಕ್ತಿ | ದುರ್ವಿಷಯ ವೀರಕ್ತಿಹರಿಯ ವಿಷಯಕ ಜ್ಞಾನ | ಕರೋಣಿಸೋ ದೇವಾನಿರುತನಾಮ ಸ್ಮರಣೆ | ಇರಲಿವಳ ಮುಖದಲ್ಲಿಮರುತಾಂತರಾತ್ಮಕನೆ | ಶಿರಿ ರಮಣ ಹರಿಯೇ 4 ಶ್ರೀವತ್ಸಲಾಂಚನನೇ | ಭಾವುಕರ ಪರಿಪಾಲಗೋವತ್ಸದನಿ ನಾವು | ತೀವ್ರ ಬರುವಂತೇಶ್ರೀವರ ಶ್ರೀಗುರೂ | ಗೋವಿಂದ ವಿಠಲನೆನೀವೊಲಿಯ ಬೇಕೆಂದು ಬೇಡ್ವೆ ಗೋಪಾಲ 5
--------------
ಗುರುಗೋವಿಂದವಿಠಲರು
ಸುಂದರ ಕೃಷ್ಣನು ಕರೆಯುವ ಬನ್ನಿರೆ ಇಂದುಮುಖಿಯರೆಲ್ಲ ಪ ಚಂದದಿ ವಿಹರಿಸುವ ಬನ್ನಿರಿ ಇಂದುಮುಖಿಯರೆಲ್ಲ ಅ.ಪ ಭಾಸುರಾಂಗನ ಕೂಡಿ ನಾವು ರಾಸಕ್ರೀಡೆಯಲಿ ಈ ಸಂಸಾರದ ಕ್ಲೇಶಗಳನು ಪರಿ ಹಾಸ ಮಾಡುವ ಬನ್ನಿ 1 ಪರಿಮಳ ಕುಸುಮಗಳ ಸೊಗಸಿನ ತರುಲತೆ ಬುಡದಲ್ಲಿ ಮುರಹರ ಕೃಷ್ಣನ ಮುರಳಿಯನೂದುವ ತರಳೆಯ ಅಂಬನ್ನಿ 2 ನಂದಕುಮಾರನಿಗೆ ನಾವು ಮಂದಹಾಸದಲ್ಲಿ ಗಂಧ ತಾಂಬೂಲಗಳಂದದಿ ನೀಡುತಾ ನಂದಪಡುವ ಬನ್ನಿ 3 ಯಮುನಾ ತೀರದಲಿ ನಾವು ಸುಮಬÁಣನ ಸೊಲ್ಲನು ಮುರಿಯುವ ಬನ್ನಿ ಕಮಲಾಕ್ಷಿಯರೆಲ್ಲಾ 4 ಪನ್ನಗವೇಣಿಯರೇ ಈಗ ಪ್ರ ಸನ್ನವದನ ಕೃಷ್ಣ ತನ್ನ ಇಂಗಿತವನರುಹಲು ಎಮ್ಮನು ಸನ್ನೆಯ ಮಾಡುತಿಹ 5
--------------
ವಿದ್ಯಾಪ್ರಸನ್ನತೀರ್ಥರು
ಸೂರ್ಯ ಮಂಡಲ ಮಧ್ಯವರ್ತಿ | ಕಾರ್ಯ- ಕಾರಣ ಪ್ರಕೃತಿಗಳಿಗೆ ಚಕ್ರವರ್ತಿ-ವಿಜ್ಞಾನ ಸ್ಫೂರ್ತಿ-ವಿರಾಟಮೂರ್ತಿ ಪ ಪಾದ ತುರ್ಯನಾಮಕ ಲೋಕ- ಮರ್ಯಾದಾ ಸ್ಥಾಪಕ ಮಾದೇವಿರಮಣ-ಶತಕೋಟಿ ಕಿರಣ-ತೋರೋ ತವ ಚರಣ 1 ಅಮಿತ ನಿರಕ್ಷರ ಕುಕ್ಷಿಗಳ್ ನಿತ್ಯ ಮಾಡುವ ತ- ಪ್ಪಕ್ಷಮಿಸಬೇಕಪ್ಪ-ನಾವು ನಿನಗೆ ಕಪ್ಪ 2 ಕಮಲ ಸಂಭವ ಹೃದ್ಯ ನ್ಯಾಯಧರ್ಮಯುಕ್ತ ನಿಗಮಾಂತವೇದ್ಯ ಚೋದ್ಯ 3 ಹಾರ ಕಿರೀಟ ಕೇಯೂರ ಮಕರಕುಂಡಲ ಧಾರಿ ಸ್ವರ್ಣಮಯಾಂಗ ಧೃತ ಶಂಖ ಚಕ್ರ-ಶಿಕ್ಷಿತ ಶುಕ್ರ-ಪರಿಹರಿಸು ವಕ್ರ4 ವೃಷ್ಟಿಯ ಕೊಟ್ಟು ಸಂತುಷ್ಟಿ ಪೊಂದಿಸು ಜಗ ಜಟ್ಟಿ ಶ್ರೀ ಗುರುರಾಮವಿಠ್ಠಲ ಸ್ವಾಮಿ ಶಿಷ್ಟ ಜನಪ್ರೇಮಿ-ಸರ್ವಾಂತರ್ಯಾಮಿ5
--------------
ಗುರುರಾಮವಿಠಲ
ಸೈಯವ್ವ ಇದು ಸೈಯೆ, ಗೋಪಿ, ಸೈಯವ್ವ ಇದು ಸೈಯೆ ಪ ಸೈಯೆ ಗೋಪಿ, ನಿನ್ನ ಮಗರಾಮನಿಗೆ ಒಳ್ಳೆ ಬುದ್ಧಿ ಕಲಿಸಿದ್ದೀಯೆ ಅ ಸಂಜೆಯ ವೇಳೆಗೆ ಬಂದು - ಸಟೆಯಲ್ಲ - ಮನೆಯ ಒಳಗಡೆ ನಿಂದುಕುಂಜರಗಮನೆ ಬಾರೆಂದು ಎನ್ನ ಮುಂಗುರುಳ ತಿದ್ದಿದಗಂಜಿ ಶಲ್ಯವ ಎನಗೆ ಮುಸುಕಿಟ್ಟು ಮುದ್ದಾಡಿ ಕಡೆಗೆಕಂಜಲೋಚನೆ ಕುಚದ ಗಂಟು ಬಿಚ್ಚೆಂದ ನೋಡು 1 ಬಿಟ್ಟ ಮಂಡೆಯಲಿ ಗಂಡ ಮೈಮರೆತು ಮಲಗಿಹುದ ಕಂಡುಜುಟ್ಟನ್ನು ಬಿಚ್ಚಿ ಮಂಚದ ನುಲಿಗೆ ಬಿಗಿದು ಕಟ್ಟಿದಕೊಟ್ಟಿಗೆ ಸುಡುತಿದೆ ಏಳೆಂದು ಬೊಬ್ಬೆಯಿಟ್ಟುದ ಕೇಳಿಥಟ್ಟನೇಳಲು ಗಂಡ, ಜುಟ್ಟು ಕಿತ್ತು ಹೋಯಿತಮ್ಮ2 ಅಡವಿ ಜಟ್ಟಿಂಗನ ಮಾಡಲಿಕೆ ಒಳ್ಳೆ ಸಡಗರ ಸಂಭ್ರಮದಿಂದಹೆಡಗೆ ತುಂಬ ಹೋಳಿಗೆ ಮಾಡಿ ಕೊಡ ನೀರು ತರಲು ಹೋದೆನೆಕಡೆಗೊಂದು ಹೋಳಿಗೆ ಬಿಡದೆ ಕೊಡದುಪ್ಪ ಹಾಲ್ಮೊಸರು ಪಾಯಸಕಡು ಫಟಿಂಗ ತುಡುಗು ತಿಂದು ಮೀಸಲಳಿದು ಎಡೆಗೆಡಿಸಿ ಹೋದನೆ 3 ಊರೊಳಿಂತಾಯ್ತೆಂದು ಸಾರಿದೆವೆ ನಾರೇರುಅಡವಿಯಲಿ ಕೂಡಿದೆವೆ ಹಲವಾರು ಹೆಂಗಸರುನೂರಾರು ಗೆಳತೇರು ಉಳಿದ ಹಾಲನು ಮಾರಿದಾರಿ ಹಿಡಿದು ಬರುವಾಗೊಂದು ಕೊಳವ ಕಂಡೆವೆ ನೊಡು 4 ಓರಗೆ ಹೆಂಗಳು ನಾವು ನೀರಾಟವಾಡಲಿಕೆಸೀರೆ ಕುಬಸವ ದಡದೊಳಿಟ್ಟು ಕೊಳಕೆ ಧುಮುಕಿದೆವೆಚೋರ ನಿನ್ನ ಮಗ ಸೀರೆಕುಬಸವನೆಲ್ಲ ತಕ್ಕೊಂಡು ಹೋಗಿತೋರದುಂಚ ಕಡಹದ ಮರನೇರಿ ನೋಡುತ ಕುಂತನೆ 5 ನೆಟ್ಟನೆ ನೀರಾಟವಾಡಿ ನಾಲ್ಕೂ ದಿಕ್ಕಿನಲಿ ನಾವು ಅಡರಿದೆವೆಇಟ್ಟಲ್ಲಿ ಸೀರೆಕುಬಸಗಳಿಲ್ಲ ಕೆಟ್ಟೆವಯ್ಯಯ್ಯೋಕಿಟ್ಟನ ಕೈಚಳಕವೆಂದು ನಾವಷ್ಟದಿಕ್ಕುಗಳ ನೋಡಿದೆವೆತುಟ್ಟತುದಿ ಕೊಂಬೆಯಲಿ ಕುಂತಿರುವ ಪುಟ್ಟನ್ನ ಕಂಡೆವೆ 6 ಮುಂದೆ ಹಸ್ತದಿ ಮುಚ್ಚಿಗೊಂಡು ಕೃಷ್ಣನಿಗೆ ಗೋಗರೆದು ಕೇಳಲುವಂದನೆ ಮಾಡಿದರೆ ನಿಮಗೆ ಸೀರೆ ಕುಬಸವ ಕೊಡುವೆನೆಂದಒಂದು ಕರದಿ ಮುಗಿವೆವೆಂದರೆ ಎರಡು ಕರದಿ ಮುಗಿಯಿರೆಂದಬಂಧನಕ್ಕೊಳಗಾದೆವೆಂದು ವಿಧಿಯಿಲ್ಲದೆ ಮುಗಿದೆವೆ 7 ಪುಷ್ಪಗಂಧಿಯರೆ ಒಪ್ಪಿತವಾಗಲಿಲ್ಲ ನನ್ನ ಮನಕೆಚಪ್ಪಾಳೆ ಇಕ್ಕುತ ಮರದ ಸುತ್ತ ತಿರುಗಿರೆಂದತಪ್ಪದು ಎಷ್ಟೊತ್ತಾದರು ಬಿಡನೆಂದು ಜಯಜಯವೆನುತಚಪ್ಪಾಳೆ ಇಕ್ಕುತ ಮರದ ಸುತ್ತಲೂ ತಿರುಗಿದೆವೆ8 ಪಗಡೆಕಾಯಿ ಕುಚದ ದಗಡಿಯರೆ ಪುಗಡಿ ಹಾಕಿರಿ ಎನ್ನೆದುರುತೆಗೆದು ಕೊಡುವೆ ನಿಮ್ಮ ವಸ್ತ್ರಗಳ ಬಗೆಬಗೆಯಿಂದಜಗದೊಳು ನಗೆಗೇಡಾದೆವು ಇನ್ನು ನುಡಿದು ಫಲವಿಲ್ಲೆಂದುಪುಗಡಿ ಹಾಕಿದೆವೆ ನಾವು ಛೀ ಛೀ ಎನ್ನುತಲಿ 9 ಕಡೆಯಾಟ ಕಮಲನೇತ್ರೆಯರೆ ಎಡೆಯಾಗಿ ಹೋಗಿ ನಿಲ್ಲಿರಿಓಡಿಬಂದರೊಂಟಿಯಾಗಿ ಹಿಡಿದು ನೋಡಿ ಕೊಡುವೆ ಎಂದಕೋಡಗ ಕೊರವಂಗೆ ಸಿಕ್ಕಿ ಆಡಿದಂತೆ ನಾವಾಡಿದೆವೆಓಡಿ ಬಂದೊಬ್ಬೊಬ್ಬರಿಗೂ ಹಿಡಿದು ಸವರಿ ವಸ್ತ್ರವನಿತ್ತನೆ 10 ತಂಡತಂಡದ ನಮಗೆ ಬಣ್ಣಬಣ್ಣದ ಬಳೆಯನಿಟ್ಟುಮಂಡೆ ಬಾಚಿ ಕುರುಳ ತಿದ್ದಿ ಕುಂಕುಮವಿಟ್ಟನೆಪುಂಡ ನಿನ್ನಣುಗ ನೆಲೆಯಾದಿಕೇಶವರಾಯಬಂಡು ಮಾಡಿ ಬಳಲಿಸಿ ಕೊನೆಗೆ ರಮಿಸಿ ಕಳಿಸಿಕೊಟ್ಟನೆ 11
--------------
ಕನಕದಾಸ
ಹರಿ ಪರದೈವ ಚತುರ್ದಶ ಲೋಕಕೆ | ಉರಗನ ಮುಂಡಿಕೆ ತುಳುಕಿ ಪೇಳುವೆ ನಾನು ಪ ಮುನಿಗಳೆಲ್ಲ ನೆರೆದು ಸದ್ವರವ ಮಾಡುತಲಿ | ಮನ ಬಂದ ಹಾಗೆ ಅರ್ಪಿಸುತಿರಲು | ಮುನಿ ನಾರದನು ಕೇಳೆ ಭೃಗು ಮುನಿಯನು ಕಳುಹಿ | ವನಜನಾಭನೆ ದೈವವೆಂದು ನಿರ್ಣೈಸಿದರು1 ದುರ್ವಾಸ ಮುನಿಪಗೆ ಚಕ್ರ ಎಡೆಗೊಂಡಿರಲು | ಅಜ ಗಿರೀಶಾ || ಗೀರ್ವಾಣರಾದ್ಯರು ಪರಿಹರಿಲಾರದಿರೆ | ಸರ್ವೋತ್ತಮನೆ ಒಬ್ಬ ಹರಿಯೆಂದು ಸಾರಿದರು 2 ಕರಿ ಬಾಧೆಯನು ಬಡುತಲಿ | ಕಾವವಾತನೆ ದೈವ ಎಂದು ಕೂಗೆ || ನಾವು ತಾವು ಎಂದು ಎಲ್ಲರು ಸುಮ್ಮನಿರೆ | ತಾವ ಕಾಕ್ಷನೆ ಕಾಯ್ದಾ ಪರದೇವತೆ ಎಂದು 3 ಹÀಯಮುಖನು ವೇದಗಳು ಕದ್ದೌಯೆ ಸಕಲರು | ಭಯಬಿದ್ದು ನಿತ್ರಾಣರಾಗಿರಲು || ಜಯದೇವಿ ರಮಣನು ವೇದವನು ತಂದು ಜಗ | ತ್ರಯಕೆ ಒಡೆಯನೆನೆಸಿಕೊಂಡ ಪರನೆಂದು 4 ಮೊದಲು ನಿರ್ಣಯವಾಗಿ ಇರಲಿಕ್ಕೆ ಮಂದಮತಿ | ಮದಡ ಮನುಜರೆಲ್ಲ ನೆಲೆಗಾಣದೆ || ಮದನ ಪಿತ ವಿಜಯವಿಠ್ಠಲನ ಒಲಿಸಿಕೊಳ್ಳದೆ | ಮದ ಗರ್ವದಲಿ ನುಡಿದು ನರಕದಲ್ಲಿ ಬೀಳುವರೂ5
--------------
ವಿಜಯದಾಸ
ಹರಿ ಹರಿ ಹರಿಯೆನ್ನಿ ಹರಿಯ ನೆನವಿಗೊಮ್ಮೆ ತನ್ನಿ ಧ್ರುವ ಹಿಡಿದು ನಿಜ ಒಂದು ¥ಥ ಪಡೆಯಬೇಕು ಸ್ವಹಿತ ನೋಡಿ ಗೂಢಿನೂಳು ಗುರುತ ಕೊಡುವ ನೋಡಿ ಗುರುನಾಥ ಒಡಯನಹುದಯ್ಯನೀತ ಪೊಡವಿಯೊಳು ಶ್ರೀನಾಥ ಮಾಡಿ ಭಕ್ತಿ ಏಕಚಿತ್ತ ಕೂಡಿ ಜ್ಞಾನಸನ್ಮತ 1 ಹಿಡಿದು ನೀವು ಗುರುಪಾದ ಮಾಡಬ್ಯಾಡಿ ಭೇದ ಕಡಿಯಬೇಕು ಕಾಮಕ್ರೋಧ ಕೂಡಿ ನಿಜಸುಭೋದ ಬೋಧ ಗೂಢಗುಪ್ತವಾಗಿಹ್ಯದ ಕೊಂಡಾಡುತಿಹ್ಯ ವೇದ ಬಿಡದೆ ಮಹಿಮೆ ನಿರ್ಗುಣದ 2 ನಾವು ನೀವುವೆಂಬ ನುಡಿ ಗೋವಿಸುವದೀಡ್ಯಾಡಿ ಹ್ಯಾವ ಹೆಮ್ಮೆಹಿಡಿಯಬ್ಯಾಡಿ ಭಾವ ಬಲಿದು ಪೂರ್ಣ ನೋಡಿ ಕಾವ ಕರುಣನ ಕೂಡಿ ಭವಬಂಧನ ನೀಗಿ ಬಿಡಿ ಪಾವನ್ನವಾದ ನೋಡಿ ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಾಲು ಮಾರಲು ಪೋದೇವಮ್ಮ ಗೋಕುಲದೊಳ- ಗ್ಹಾಲು ಮಾರಲು ಪೋದೆವಮ್ಮ ಹಾಲು ಮಾರುವ ಧ್ವನಿ ಆಲಿಸಿ ಕೇಳುತ ಬಾಲಕೃಷ್ಣ ಬಹು ಲೀಲೆ ಮಾಡುತ ಬಂದಪ ಹಸಿರು ಜರದ ಸೀರೆಯನುಟ್ಟು ಕುಸುರಿಕಂಕಣ ಎಸೆವೊ ಹವಳದ ಹಿಂಬಳೆ ಕಟ್ಟು ಮೊಸರಿನ ಕುಂಭ ಕÀುಸುಮ ಮಲ್ಲಿಗೆಯ ಮುಡಿಯಲ್ಲಿಟ್ಟು ಶಶಿವದನೆಯರೆಲ್ಲ ಚೆಂದದಿ ಬರುತಿರೆ ಕುಸುಮನಾಭ ಮುಸುಗೆಳೆದು ಮೊಸರು ಸುರಿದ1 ಬಣ್ಣ ಬಣ್ಣದ ಸೀರೆಯನುಟ್ಟು ಮುತ್ತಿನ ಬಟ್ಟು ಹೊಳೆವೊ ಕಸ್ತೂರಿ ತಿಲಕವನಿಟ್ಟು ಹಾಲಿನಕುಂಭ ಸಣ್ಣಮಲ್ಲಿಗೆ ಮುಡಿಯಲಿಟ್ಟು ಚೆನ್ನಾರ ಚೆಲುವೇರು ಚೆಂದದಿ ಬರುತಿರೆ ಕಣ್ಣು ಸನ್ನೆಮಾಡಿ ಕರೆದು ಮುದ್ದಿಡುವ 2 ಮುಂದೆ ಮುಂದಾಗಿ ಹೋಗುತಿರಲು ಹಿಂದ್ಹಾಲಿನ್ಹರವಿ- ಗೊಂದೊಂದ್ಹರಳು ಮೀಟುತಿರಲು ಧಾರೆಗೆ ಬಾಯಾ- ನಂದದಿಂದೊಡ್ಡಿ ಕುಡಿಯುತಿರಲು ಸÀಂದಣಿಯೊಳು ನಾವು ಒಂದರಿಯದಲೆ ಬಂದಿಳುಹಲು ಬರೀ ಗಡಿಗೆ ಕಾಣಮ್ಮ 3 ಕಡಗೋಲಿಂದೊಡೆದÀು ಗಡಿಗೆಯನು ಬಡವರ ಬೆಣ್ಣೆ ಒಡಲಿಗೆ ಕದ್ದು ತಿಂಬುವುದೇನು ಕಂಡರೆನಗಂಡ ಬಡಿದÀರಿನ್ನೇನು ಮಾಡುವೆ ನೀನು ಗಡಿಬಿಡಿ ಮಾಡುತ ಕತ್ತಲ ಮನೆಯೊಳು ತÀುಡುಗನಂತೆ ತಿರುಗಾಡುವ ತಾನು 4 ಸಿಟ್ಟು ಮಾಡುವುದ್ಯಾತಕಮ್ಮ ಶ್ರೀ ರಮಣನ ಬಿಟ್ಟು ಬಾಹುವುದೆ ಲೇಸಮ್ಮ ಭೀಮೇಶಕೃಷ್ಣನ ಕಟ್ಟಿ ಹಾಕುವುದೆ ಲೇಸಮ್ಮ ಪಟ್ಟುಮಾಡಿ ಪರಹೆಂಗಳೇರೊಳು ಕ- ಣ್ಣಿಟ್ಟ ಮ್ಯಾಲೆ ಒಂದಿಷ್ಟಾದರು ಬಿಡ5
--------------
ಹರಪನಹಳ್ಳಿಭೀಮವ್ವ
ಹೆಂಗಳೆಯರು ನಾವು ರಂಗೈಯ್ಯ ಮಾನಂಗಳ ಕಾಯಬೇಕೋ ಭಂಗ ಬಡುವೆವು ಮಂಗಚೇತನದಂಬಿಗನು ವಾಸಂಗಳನು ನೆರೆ ಸೆಳೆದಿಹಾನು ಪ ಗೋಪಿವೃಂದವು ಕೂಡಿ ಚಿತ್ತದ ಸಂತಾಪ ನೀಗಲು ಮಾಡಿ ತೋಷಗೊಳಿಸಲು ಪಾಪಿಯಂಬಿಗ 1 ಬಯಕೆಯಾ ಹಾರವನು ನಾವೆಲ್ಲರು ವಯನಾಗಿ ಕಟ್ಟಿದ್ದೆವೋ ಮಾಡ್ದೆವು ಮತಿಯು ಪೋದುದು ನಯನದಿಂದವುಗಳನೆ ನೋಡದೆ ಬಯಲುಮಾಡಿದೆವಿತ್ತೀಕಂಗೆ 2 ಎಷ್ಟು ಬಳಲುತಿಹೆವೊ ಶ್ರೀಕೃಷ್ಣ ನಿನ್ನಿಷ್ಟಕ್ಕೆ ಬಂದುದೇನೋ ಇಷ್ಟು ಪರಿಯಲ್ಪರಿವುದೇತಕೆ ಇಷ್ಟ ಮೂರುತಿ ಕೃಷ್ಣನೀಗಲೆ ದುಷ್ಟ ಅಂಬಿಗನಂಗ ತೊಲಗಿ ಶಿಷ್ಟ ನರಸಿಂಹ ವಿಠ್ಠಲಾದ 3
--------------
ನರಸಿಂಹವಿಠಲರು
ಹೇಗೆ ಮಾಡಬೇಕು ಭಜನೆಯನು ಹೇಗೆ ಮಾಡಬೇಕುಬೇಗ ಜ್ಞಾನ ಭಕ್ತಿ ವೈರಾಗ್ಯ ಬರುವಂತೆ ಭಜನೆಮಾಡಬೇಕು ಪಆಧ್ಯಾತ್ಮಿಕ 'ಷಯದಲಿ ಮೊದಲು ಬಲು ಶುದ್ಧಜ್ಞಾನ ಬೇಕುಮಹಾತ್ಮ್ಯದ ಸುಜ್ಞಾನ ಪೂರ್ವಕ ಸುಧೃಡ ಸ್ನೇಹಬೇಕುದೇಹದೌಲತ್ತಿನ ಸ್ವರೂಪವರಿತು ವೈರಾಗ್ಯ ಹುಟ್ಟಬೇಕುಈ ಮೂರು ಮನಸಿನಲಿ ಮೂಡುವಂತೆ ನಾವು ಭಜನೆ ಮಾಡಬೇಕು 1ನಾನು ನನ್ನದೆಂಬ ಅಹಂಕಾರ ದಿನದಿನಕೆ ಅಳಿಯಬೇಕುಮಾನಾಪಮಾನವು ಆದರೆ 'ಗ್ಗದೆ ಕುಗ್ಗದೆ ಇರಬೇಕುಹೆಣ್ಣು ಹೊನ್ನು ಮಣ್ಣುಗಳ 'ಷಯದಲಿ ತ್ಯಾಗ ವೈರಾಗ್ಯ ಬುದ್ಧಿಬೇಕುಪುಣ್ಯ ಪಾಪಗಳನರಿತ ಸದ್ಭಕ್ತರ ಸಂಗತಿ ಇರಬೇಕು 2ಮಧ್ವಮತದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಶುದ್ಧಮನದ ಸಾತ್ವಿಕರ ಸಂಗದಲಿ ಭಜನೆ ನಡೆಯಬೇಕುಬುದ್ಧಿಗೇಡಿ ದುರ್ದೈ' ದುಷ್ಟರನು ದೂರದಲಿ ಇಡಬೇಕುಶ್ರದ್ಧೆುಂದ ಭೂಪತಿ'ಠ್ಠಲನನು ಭಜಿಸಿ ಕುಣಿಯಬೇಕು ನ
--------------
ಭೂಪತಿ ವಿಠಲರು
ಹ್ಯಾಗೆ ಮುಕ್ತಿಯಾಗುವುದು ಕೂಗಿದರೇನು ಫಲ ಪ ಯೋಗವರಿತು ತನ್ನಲಿರುವ ನಾಗಶಯ್ಯನನ ನೋಡದೆ ಅ.ಪ ಅರಿತೆವೆಂದು ಹಾರಾಡುವ ಅಹಂಕಾರಿಗಳಿಗೆ 1 ವೇದಶಾಸ್ತ್ರ ಓದಲಿಲ್ಲ ವಾದವಿಲ್ಲಿ ಸಲ್ಲ ಬೋಧೆ ಮನಸಿಗಂಟಲಿಲ್ಲ ಬುದ್ಧಿಶೂನ್ಯರಿಗೆಲ್ಲ 2 ನಾವು ನಮ್ಮದೆಂಬುದು ಬಿಡದೆ ಸಾವ ಕುನ್ನಿಗಳಿಗೆ 3 ಬಾಯಿಮಾತಿಲಿಂದಲೇನು ಮಾಯವಾದಗಳೇನು ನ್ಯಾಯಮಾರ್ಗವರಿತವನು ಕಾಯದಾಸೆಮಾಡನು 4 ಗುರುರಾಮವಿಠ್ಠಲನ ಸ್ಮರಣೆಯ ಮಾಡದೆ ದುರುಳ ನರರಿಗೆ 5
--------------
ಗುರುರಾಮವಿಠಲ
(ಒರಳುಕಲ್ಲು ಪೂಜೆಯ ಪದ)ಜಯ ಹನುಮಂತ ಭೀಮ | ಜಯ ಸರ್ವಜ್ಞಾಚಾರ್ಯ |ಜಯ ಭಾರತೀಶಾ ನಿರ್ದೋಷಾ || ನಿರ್ದೋಷ ಶ್ರೀ ವ್ಯಾಸಲಯನೆ ನಿನ್ನಂಘ್ರೀಗೆರಗೂವೆ | ಸುವ್ವಿ ಸುವ್ವೀ ಸುವ್ವಾಲಾಲೆ ಪಮುದದಿಂದಾ ಶ್ರೀ ಹರಿಯಾ | ಮದಿವಿ ಹಮ್ಮೀಕೊಂಡು |ಪದುಮಾಕ್ಷಿಯರೆಲ್ಲಾ ಒರಳೀಗೇ || ಒರಳಿಗಕ್ಕಿ ಹಾಕಿಪದ ಪಾಡಿದದನೂ ಬಣ್ಣೀಪೇ1ದೇವಕಿ ಯಶೋದೆ ಶ್ರೀ | ದೇವಭೂತೇ ಕೌಸಲ್ಯ ಸ- |ತ್ಯವತಿ ನೀವೆಂಥ ಧನ್ಯರೇ || ಧನ್ಯಾರೆ ಪಡದು ಶ್ರೀ |ದೇವೇಶಗೆ ಮೊಲಿಯಾ ಕೊಡುವೀರಿ 2ಅಕ್ಷರಳೆ ಪರಮಾತ್ಮನ | ವಕ್ಷ ಸ್ಥಳ ಮಂದಿರೆ |ಲಕ್ಷೂಮಿದೇವಿ ಜಯಶೀಲೆ || ಜಯಶೀಲೆ ಎಮ್ಮನು |ಪೇಕ್ಷಿಸಿದೆ ಕಾಯೇ ವರವೀಯೇ 3ಅಚ್ಛಿನ್ನ ಭಕ್ತರು ನೀವಚ್ಯುತಗೆ ಮುಕ್ತಿಯಾ |ತುಚ್ಛವೆಂಬುವಿರೆ ಸರಸ್ವತೀ || ಸರಸ್ವತಿಭಾರತಿ|ನಿಶ್ಚೈಸಿ ಒರಳೀಗೊದಗೀರೆ 4ಅಕ್ಕಿ ಥಳಿಸಲಿ ಬಾರೆ | ಅಕ್ಕ ಸೌಪರಣಿ ಶ್ರೀ |ರಕ್ಕಸಾ ವೈರೀ ಮದುವೀಗೇ || ಮದುವೀಗೆವಾರುಣಿತಕ್ಕೊಳ್ಳೆ ಕೈಲಿ ಒನಕೀಯಾ 5ಕೂಸಾಗಿ ಇದ್ದಾಗ ಆ ಶಿವನೆ ಬರಲೆಂದು |ಪೋಷಿಸಿದೆ ದೇಹಾ ತಪಸೀದೆ || ತಪಸೀದೆ ಪಾರ್ವತಿನೀ ಶೀಘ್ರ ಬಾರೇ ಒರಳೀಗೆ6ಇಂದ್ರ ಕಾಮನಸತಿಯಾರಿಂದು ಬನ್ನಿರಿ ನಮ್ಮ |ಮಂದರೋದ್ಧರನಾ ಮದಿವೀಗೇ || ಮದುವೀಗೆ ಒರಳಕ್ಕಿ |ಛಂದದಿಂದಲಿ ಪಾಡಿ ಥಳಿಸೀರೇ 7ಶತರೂಪಿ ನೀ ಪ್ರೀಯ ವ್ರತ ಮೊದಲಾದವರನ್ನ |ಪತಿಯಿಂದ ಪಡದೂ ಅವನೀಯಾ || ಅವನೀಯ ಪಾಲಿಸಿದಪತಿವ್ರತೀ ಒನಕೀ ಕೈಕೊಳ್ಳೇ8ದೇವರಂಗನಿಯರಿಗೆ ಸಾವಧಾನದಿ ಜ್ಞಾನ |ನೀ ವರದೇ ಎಂಥಾ ಗುಣವಂತೇ || ಗುಣವಂತೆ ಕರುಣಾಳೆಪ್ರಾವಹೀ ಪಿಡಿಯೇ ಒನಕೀಯಾ 9ಅರುವತ್ತು ಮಕ್ಕಳನಾ ಹರುಷದಿಂದಲಿ ಪಡದು |ವರನೋಡಿ ಕೊಟ್ಟೀ ಪ್ರಸೂತೀ || ಪ್ರಸೂತಿ ನೀನುಹಂದರದ ಮನಿಯೊಳೂ ಇರಬೇಕೂ 10ಗಂಗಾದೇವಿ ಯಂಥ ಇಂಗಿತಜÕಳೆ ನೀನು |ಹಿಂಗಿಸಿದೆ ವಸುಗಳಪವಾದಾ || ಅಪವಾದ ತ್ರಯ ಜಗ-ನ್ಮಂಗಳೇ ಪಿಡಿಯೇ ಒನಕೀಯಾ 11ಅನಿರುದ್ಧಾಶ್ವಿನಿ ಚಂದ್ರ ಇನಕಾಲಾ ಸುರಗುರು |ವನತಿಯರೆ ಉಳಿದಾ ನವಕೋಟೀ || ನವಕೋಟಿ ಸುರರಮಾನಿನಿಯೇರು ಬಂದೂ ಥಳಿಸೀರೇ 12ಅನ್ಯರನ ಪಾಡಿದರೆಬನ್ನಬಡಿಸುವ ಯಮನು |ವನ್ನಜಾಂಬಕನಾಶುಭನಾಮಾ || ಶುಭನಾಮ ಪಾಡಿದರೆಧನ್ಯರಿವರೆಂದೂ ಪೊಗಳೂವಾ13ಈ ವ್ಯಾಳ್ಯದಲಿ ನೋಡಿ ನಾವು ಥಳಿಸೀದಕ್ಕಿ |ಪಾಪನ್ನವಾಗೀ ತ್ವರದಿಂದಾ || ತ್ವರದಿಂದ ನಮ್ಮ ಶ್ರೀಗೋವಿಂದನ ಶಾಸೀಗೊದಗಲೀ 14ಹೆಚ್ಚಿನಂಬರ ಉಟ್ಟು ಅಚ್ಚಿನ ಕುಪ್ಪುಸ ತೊಟ್ಟು |ಪಚ್ಚಾದಿ ರತ್ನಾಭರಣಿಟ್ಟೂ || ಇಟ್ಟು ಸುಸ್ವರಗೈದುಅಚ್ಯುತನ ಪಾಡೋರಿನಿತೆಂದೂ 15ಲಕ್ಕೂಮಿ ಪತಿಯಾಗಿ ಬಹು ಮಕ್ಕಳನ ಪಡದಿದ್ದಿ |ಇಕ್ಕೊಳ್ಳಿ ಈಗಾ ಮದುವ್ಯಾಕೇ || ಯಾಕೊನತರಾನಂದಉಕ್ಕೀಸುವದಕೆ ರಚಿಸೀದ್ಯಾ16ಎಂಂದಾಗೆದೊ ಶ್ರೀ ಮುಕುಂದ ನಿನ್ನಾ ಮದುವಿ |ಹಿಂದಿನಾ ಬ್ರಹ್ಮರರಿತಿಲ್ಲಾ || ರರಿತಿಲ್ಲಅವಿಯೋಗಿಎಂದು ಕರಸುವಳು ಶೃತಿಯೋಳೂ 17ಶೀಲಿ ಸುಂದರಿ ನಿನ್ನ ಆಳಾಗಿ ಇರುವಳು |ಶ್ರೀ ಲಕ್ಷ್ಮೀ ನೀನು ಸ್ವರಮಣಾ || ಸ್ವರಮಣನಾಗೆವಳಮ್ಯಾಲೆ ಮದುಪ್ಯಾಕೊ ಭಗವಂತಾ18ಆರು ಮಹಿಷಿಯರು ಹದಿನಾರು ಸಾವಿರ ಮ್ಯಾಲೆ |ನೂರು ನಾರಿಯರೂ ಬಹುಕಾಲಾ || ಬಹುಕಾಲ ಬಯಸಿದ್ದುಪೂರೈಸಿ ಕೊಟ್ಯೋ ದಯಸಿಂಧು 19ವೇದನೆಂಥಾ ಪುತ್ರ ವೇದನಂತಾ ಬಲ್ಲ |ವೋದುವಾ ನಿರುತಾ ನಿನ ಪೌತ್ರಾ || ಪೌತ್ರೌ ನಿಮ್ಮಣ್ಣ ಸ್ವ-ರ್ಗಾಧಿಪತಿ ಎಂದೂ ಕರಸೂವ 20ಜಗವ ಪಾವನ ಮಾಳ್ಪ ಮಗಳೆಂಥ ಗುಣವಂತಿ |ಅಗಣಿತಜ್ಞಾನವಂತಾರೊ || ಜ್ಞಾನವಂತರೊ ನಿನ್ನಯುಗಳಸೊಸಿಯರೂ ಪರಮಾತ್ಮಾ21ಈ ವಸುಧಿಯೊಳಗೆಲ್ಲಾ ಆವಶುಭಕಾರ್ಯಕ್ಕೂ |ದೇವೇಶ ನಿನ್ನಾ ಸ್ಮರಿಸೋರೋ || ಸ್ಮರಿಸುವರೊ ನಿನ ಮದುವಿ-ಗಾಂವೀಗ ನಿನ್ನೇ ನೆನೆವೇವೊ 22ಅಕ್ಲೇಶಾ ಅಸಮಂಧಾ ಶುಕ್ಲಶೋಣಿತದೂರಾ |ಹಕ್ಲಾಸುರಾರೀ ದುರಿತಾರೀ || ದುರಿತಾರಿ ಅಸಮ ನಿ-ನ್ನೊಕ್ಲಾದವರಗಲೀ ಇರಲಾರೀ 23ವೇದವೆಂಬದು ಬಿಟ್ಟು ಭೂ ದಿವಿಜಾರಮರಾರು |ಮಾಧವನ ಗುಣವಾ ಪೊಗಳೂವಾ || ಪೊಗಳುವಾ ಸುಸ್ವರವಾಶೋಧಿಸೀ ಕೇಳೂತಿರುವಾರೂ 24ಕಾಮಾದಿಗಳ ಬಿಟ್ಟು ಸೋಮಪರ ರಾಣಿಯರು |ಸ್ವಾಮಿಯ ವಿವಾಹಾ ನಾಳೆಂದೂ || ನಾಳೆಂದರಿಷಿಣದಕ್ಕೀಹೇಮಾಧರಿವಾಣಕ್ಕಿರಿಸೋರೂ25ಜಯ ಮತ್ಸ್ಯಾ ಕೂರ್ಮಾಕಿಟಿಜಯ ನರಸಿಂಹಾ ಋಷಿಜ |ಜಯ ರಾಮಕೃಷ್ಣಾ ಶ್ರೀ ಬುದ್ಧಾ || ಶ್ರೀಬುದ್ಧಕಲ್ಕಿ ಜಯಜಯ ದತ್ತಾತ್ರಯಶುಭಕಾಯಾ 26ಆನಂದಾದಿಂದಾ ಸುರ ಮಾನಿನಿಯಾರಾಡೀದ |ಈ ನುಡಿಯಾ ಪಾಡೀದವರೀಗೆ || ಅವರಿಗಿಹಪರದಲ್ಲಿಪ್ರಾಣೇಶ ವಿಠಲಾ ಒಲಿವೋನೂ 27
--------------
ಪ್ರಾಣೇಶದಾಸರು
150ಅಗಲಿ ಸೈರಿಸಲಾರೆವೊ ವೇಣುಗೋಪಾಲಅಗಲಿ ಸೈರಿಸಲಾರೆವೊನಗಧರಪನ್ನಗನಗಾಧೀಶಗುಲಗಂಜಿ ಬರ್ಹಿಯಗರಿಯು ಎಳೆದಳಿರು ಕೇತಕಿಯ ಗರಿಯುದೇವ ಕೊಳಲನೂದುವುದು ನಾವುಕೇಳಿಮುದದಿ ನಲಿದು
--------------
ಗೋಪಾಲದಾಸರು
ಊಟಕ್ಕೆ ಬಂದೆವು ನಾವು ನಿನ್ನ -ಕೋಟಲೆಗಳ ಬಿಟ್ಟು ಅಡಿಗೆ ಮಾಡಮ್ಮ ಪ.ಕತ್ತಲಕ್ಕುತಲಿವೆ ಕಣ್ಣು - ಬಲು -ಬತ್ತಿ ಬರುತಲಿವೆ ಕೈಕಾಲ ಜುಮ್ಮ ||ಹೊತ್ತು ಹೋಗಿಸಬೇಡವಮ್ಮ - ಒಂದು -ತುತ್ತನಾದರು ಮಾಡಿ ಇಕ್ಕುವುದು ಧರ್ಮ 1ಒಡಲೊಳಗುಸಿರಿಲ್ಲವಮ್ಮ - ಗಳಿಗೆ -ತಡವಾದರೀ ಪ್ರಾಣ ಉಳಿವುದಿಲ್ಲಮ್ಮ ||ನುಡಿಯು ಚಿತ್ತಕೆ ಬರಲಮ್ಮ - ಒಂದು -ಪಿಡಿ ಅಕ್ಕಿ ಅನ್ನದಿ ಕೀರ್ತಿ ಪಡೆಯಮ್ಮ........... 2ಹೊನ್ನರಾಶಿಗಳನು ಸುರಿಯೆ - ಕೋಟಿ -ಕನ್ನೆ ಧರಿತಿಯ ಧಾರೆಯನೆರೆಯೆ ||ಅನ್ನದಾನಕೆ ಇನ್ನು ಸರಿಯೆ - ನಮ್ಮ -ಚೆನ್ನ ಪುರಂದರವಿಠಲನೊಳ್ ಬೆರೆಯೆ........... 3
--------------
ಪುರಂದರದಾಸರು