ಒಟ್ಟು 539 ಕಡೆಗಳಲ್ಲಿ , 89 ದಾಸರು , 465 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದು ಬಣ್ಣಿಸಲಿ ಗುರುರಾಯನಾ | ತಾ ನೆನೆದವರ ಧನ್ಯಗೈಸುವನಾ ಮಹಿಮೆ ಪ ಧರಿಯೊಳಜ್ಞಾನ ತಮಹರಣ ಭಾಸ್ಕರ ನೆನಿಪ | ಕರ ಕಮಲದಲಿ ಜನಿಸೀ | ವರಮೂಲ ಮಂತ್ರವನೆ ಗುರು ಮಹಿಪತಿಯಂಬಾ | ನಿರುತ ಖ್ಯಾತಿಯ ನಾಮ ಧರಿಸಿ ಬಂದನ ಮಹಿಮೆ1 ಘನಸಾರ ವಿದ್ಯದಾಕಾರವೋ | ಶುದ್ಧಜ್ಞಾನ ಕಲ್ಪ ದ್ರುಮವಿನಾ | ಮುದ್ದು ಫಲವೋಯನಲು ಸಿದ್ಧ ಸಾಧಕರ ನಡು | ಗದ್ದುಗೆಯೊಳೆಸೆವ ಗುಣ ನದ್ವೀತಿಯನ ಮಹಿಮೆ 2 ಸ್ವಸ್ಥ ಮನದಿಂದ ಭಕುತಿ ಸ್ತವನ ಮಾಡಲಿಕೆ | ಮಸ್ತಕದ ಮ್ಯಾಲಭಯ ಹಸ್ತನೀಡೀ | ಅಸ್ತಿ ಭಾತಿ ಪ್ರಿಯಂ ವಸ್ತು ವಿದೇಶ ಸಕಲ ಹೃದ | ಯಸ್ಥನೆಂದನು ಭವವ ವಿಸ್ತರಿಸುವನ ಮಹಿಮೆ 3 ಆರಿಗಳವಡದಿಹ ನೈರಾಸ್ಯ ವೃತ್ತಿಯಾ | ತಾರದಲಿ ನಡೆದು ಮುನಿ ವೈರಾಗ್ಯದಾ | ಸಿರಿ ಸಂಪದವ ತೋರಿದನು ನೋಡಲಿಕೆ | ಸಾರ ಸಾಂಖ್ಯವು ಯೋಗ ದಾರಿ ಬಲ್ಲನ ಮಹಿಮೆ4 ಹೊಂದಿದ್ದವರ ಚಿದಾನಂದ ಸುಖಸಾಗರದಿ | ನಿಂದು ಲೋಲ್ಯಾಡಿಸಿದ ನಂದಿಗಿಂದು | ತಂದೆ ಮಹಿಪತಿ ತನ್ನ ದ್ವಂದ್ವಪಾದುಕೆಗಳನು | ನಂದನ ಸಿರದಲ್ಲಿಟ್ಟು ಛಂದ ನೋಡುವನ ಮಹಿಮೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಸು ಜನ್ಮದಲೇನು ಪುಣ್ಯಮಾಡಿದೆವೊ ಲೇಸಾಗಿನ್ನು ಸ್ವಾಮಿ ನಿಮ್ಮನ ಕಂಡೆವೊ ಧ್ರುವ ಸಾಧನವೆಂಥಾದೆಂಬುದು ನಾವಿನ್ನರಿಯೆವೊ ನಿಮ್ಮ ದರುಶನದಲಿ ಪಾವನಾದೆವೊ ಇದೆ ಸಕಲ ಸಾಧನದ ಸುಫಲವೊ ಸ್ವಾಮಿ ನಿಮ್ಮ ದಯಕ ಸಾನುಕೂಲವೊ 1 ಮನೋಹರ ಮೋಹನಮೂರ್ತಿ ಕಂಡೆವೊ ಕೃಷ್ಣ ನಿಮ್ಮನ ಬಿಗಿದಪ್ಪಿಕೊಂಡೆವೊ ನಾನಾಸವಿಯ ನೆಲೆಗಳೂಟ ಉಂಡೆವೊ ಎಂದೂ ಬಿಡದೆ ಹೃದಯಲಿಟ್ಟುಕೊಂಡೆವೊ 2 ಹೆಣ್ಣು ಪ್ರಾಣಿಗಳು ನಾವೇನು ಬಲ್ಲ್ಲಿವೊ ನಿಮ್ಮ ವಿನಾ ಇನ್ನೊಂದು ನಾವೊಲ್ಲಿವೊ ಚನ್ನಾಗೊಲಿದ ಭಾನುಕೋಟಿ ನಮ್ಮಲ್ಲಿವೊ ಚಿಣ್ಣಮಹಿಪತಿಗಿದೆ ಸಾಫಲ್ಯವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಔಷಧದ ಬೇರೊಂದನು ನಾರದನು ತಂದ ಪೋಷಣೆಗೆ ಸಕಲರೂ ಸವಿಯಲೆಂದ ಪ ಜ್ವರಭೇದಗಳಿಗೆಲ್ಲ ನರಹರಿ ಎಂಬ ಬೇರು ಶಿರವೇಧೆ ಎಂಬುದಕೆ ಹರಿಹರಿ ಎಂಬ ಬೇರು ವಾತ ರುಜೆಗಳಿಗೆ ಸಿರಿಲೋಲನೀ ಬೇರು ಪರಿಪರಿಯ ಭವಗಳಿಗೆ ನಾರಾಯಣಾ ಎಂಬ ಬೇರು 1 ಪಿತ್ತರೋಗಂಗಳಿಗೆ ಚಿತ್ತಜನಪಿತನೆಂಬ ಪೃಥ್ವಿಯೊಳಗತ್ಯಧಮ ವಿಭಂದ ರೋಗಗಳಿ ಗರ್ಥಿಯಿಂ ಲೇಪಿಸುವ ಸತ್ವಗುಣನಿಧಿಯೆಂಬ ನಿತ್ಯಶೌರಿಯ ನಾಮ ಶಿವಬೇರು 2 ನಾರದನು ಬೇರೂರೆ ನೀರೆರೆದ ಪ್ರಹ್ಲಾದ ಧೀರಬಲಿ ಬೆಳೆಯಿಸಿದ | ನೀರ ಗಜನೆರೆದ ವೀರದಶಶಿರನನುಜನೆಚ್ಚರದೊಳಿದ ಕಾಯ್ದ ನಾರಿ ದ್ರೌಪದಿ ಶಿರದಿ ಮೊಗ್ಗಾಗಿ ಧರಿಸಿದಂಥ 3 ಅರಳಿದ ಸುಮಗಳನು ಅಕ್ರೂರ ಪೋಷಿಸಿದ ತ್ವರಿತದಿ ಕಾಯ್ಗಳನು ಶುಕದೇವ ಕಾಯ್ದ ನರರೆಲ್ಲರೀ ಫಲವ ದಿನದಿನವು ಮೆಲಲೆಂದು ವರದ ಮಾಂಗಿರಿರಂಗ ಪೇಳುತಿಹನು 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂಗಳಿಗೆ ಹಬ್ಬವಾಯಿತಯ್ಯಮಂಗಳಾತ್ಮಕ ಪುರಂದರದಾಸರನು ಕಂಡು ಪ ಸಕಲ ತೀರ್ಥಕ್ಷೇತ್ರ ಯಾತ್ರೆ ಮಾಡಿದ ಫಲವುಸಕಲ ಸತ್ಕರ್ಮ ಸಾಧಿಸಿದ ಫಲವುಭಕುತಿಯಿಂ ಭಾಗೀರಥೀ ಮಜ್ಜನದ ಫಲವುರುಕುಮಿಣಿ ಪತಿಯ ಪದ ಭಕುತರನು ಕಂಡು 1 ಇವರ ನರರೆಂದವರು ನರಕದಲಿ ಬೀಳುವರುಕವಿಜನರು ಒಪ್ಪಿ ಕೈಹೊಡೆದು ಹೇಳಿರಲುಅವನಿಯೊಳಗತಿ ದುರ್ಲಭವು ನಂದಗೋಪನ್ನಕುವರನಿದ್ದೆಡೆಯ ವೈಕುಂಠವೆಂಬುವರ ಕಂಡು 2 ಧನ್ಯನಾದೆನು ನಾನು ಮನುಜನ್ಮದಿ ಪುಟ್ಟಿಮಾನ್ಯನಾದೆನು ಇನ್ನು ಈ ಜಗದೊಳಗೆಪನ್ನಂಗಶಯನ ಶ್ರೀಕೃಷ್ಣನ ದಾಸರನುಚೆನ್ನಾಗಿ ಸ್ಮರಿಸಿ ಪಾವನ್ನನಾದೆನಿಂದು 3
--------------
ವ್ಯಾಸರಾಯರು
ಕಂಡು ಧನ್ಯನಾದೆ ಭೂಮಂಡಲದೋಳ್ ಪ ಶ್ರೀ ಗುರುಸಾರ್ವಭೌಮ ರಾಘವೇಂದ್ರರಾ 1 ಕಲಿಯುಗದೋಳ್ ಭಕ್ತಜನರಾ ಉದ್ಧರಿಸಬೇಕು ಎಂಬ ಮನದಿ ವರಮಂತ್ರಾಲಯದೊಳ್ ಬಂದು ನಿಂದಿಹ ಯತಿವರರಾ 2 ಮಂಗಳಮೂರುತಿ ರಾಘವೇಂದ್ರರ ಬೃಂದಾವನ ಮನದಣೆಯೆ 3 ವಿಶಿಷ್ಟ ಜನರ ಕಷ್ಟಗಳನು ನಿಮಿಷಮಾತ್ರದಿ ಕಳೆದು ಸಲಹುವ ಶ್ರೇಷ್ಟ ಗುರುಗಳ ದಿವ್ಯವಾದ ದರ್ಶನ ಭಾಗ್ಯಾ ದೊರೆಕಿತಿಂದು 4 ಆದಿವ್ಯಾಧಿಗಳೆಲ್ಲ ಹರಿಸಿ ಅಂಧ ಬಧಿರ ಮೂಕತ್ವ ತೊಲಗಿಸಿ ಬಂದ ದುರಿತಗಳೆಲ್ಲ ಓಡಿಸಿ ಕಂದನಂದದಿ ಸಲಹುವ ಗುರುಗಳಾ5 ದಿನದಿನದೊಳ್ ಇವರ ಮಹಿಮೆ ಅಧಿಕವಾಗುತಿರಲು ಕಂಡು ಹಿಂಡು ಹಿಂಡಾಗಿ ಬರುತಲಿಹರೂ 6 ಹೆಜ್ಜೆ ಹೆಜ್ಜೆಗೆ ವಂದಿಸುತಲೀ ದಂಡೆ ಮುಡಿ ಉರುಳುತಲೀ ಮಂಡೆಬಾಗಿ ನಮಿಸತಲಿ ಬಿಡದೆ ರಾಯರ ಕೊಂಡಾಡುತಲೀ 7 ಜನರೆನರವ ಕೊಡುತಾ ಕೊಡುವ ದಾತಾ 8 ನಿತ್ಯ ನಿತ್ಯದಿ ಬ್ರಾಹ್ಮಣರ ವೇದ ಪುರಾಣ ನಡೆಯುತಿರುವುದು ಕೇಳಿ ಭಕ್ತಿಯಿಂದ ಜನರಾನಂದ ಭರಿತರಾಗುತಿಹರು 9 ಕೇಳುತಿಹುದು ಮಂತ್ರಘೋಷ ಪೇಳುತಿಹ ಪುರಾಣ ರಹಸ್ಯ ನೀಡುತಿಹರು ಗುರೂಪದೇಶ ಎಮಗಾಯಿತಿಂದು ಬಹುಸಂತೋಷ10 ಗುರುಗಳ ಮನಸಾರಾ11 ಬಂದ ಭಕ್ತಬೃಂದಕೆಲ್ಲ ಬೇಡಿ ದೊರಗಳ ನೀಡುತ ಸಲಹಿ ಉಣಿಸಿದಣಿಸಿ ಹರಸಿ ಅವರ ಆನಂದದಿಂದ ಕಳುಹುತಿಹರು 12 ಭಕ್ತರಸವ ಪಾನಮಾಡಿಸಿ ಮುಕ್ತಿ ಮಾರ್ಗಕೆ ದಾರಿ ತೋರಿಸಿ ಕರ್ತೃ ಶ್ರೀಹರಿ ಹೊರತುಯಿಲ್ಲೆಂದು ಸತ್ಯವಾಕ್ಯ ವ್ಯಾಕ್ತಪಡಿಸುತಿಹರು13 ಭಕ್ತಜನರ ಪೊರೆಯಲಿವರ ಸರಿಗಾಣೆನೀಧರೆಯೊಳಗೆ ತಂದೆಯಂದದಿ ಬಿಡದೆ ಕಾಯ್ವರು ಸಾರ್ವಭೌಮ ಶ್ರೀ ರಾಘವೇಂದ್ರರು 14 ಎಷ್ಟು ಜನ್ಮದ ಸುಕೃತದ ಫಲವೋ ಶ್ರೇಷ್ಟಗುರುಗಳ ದರ್ಶನವಾಯಿತು ಕಂಗಳಿಂದಲಿ ಕಂಡು ಮನದ ಕ್ಲೇಶವೆಲ್ಲ ಪರಿಹಾರವಾಯಿತು 15 ಹಿಂದೆ ಪ್ರಹ್ಲಾದರಾಜರೆನಿಸಿ ಬಂದು ಮಂಚಾಲೆಯಾಂಬಿಕೆ ದರ್ಶನ ಕೊಂಡು ಗುರುಗಳ ದರ್ಶನ ಮಾಡಿಸೆಂದು ಭಕ್ತಿಲಿಜನ ಬೇಡುತಿಹರು 16 ದೇಶ ದೇಶದ ಜನರಿಗೆಲ್ಲ ವಿಸ್ತಾರದಿಂದ ಎಲೆಗಳ್ಹಾಕಿ ಭಕ್ಷ್ಯ ಪಾಯಸಾನ್ನಗಳನು ತೃಪ್ತಿಯಿಂದ ಉಣಿಸುತಿಹರು 17 ಶ್ರೀ ರಾಘವೇಂದ್ರಾಯ ನಮಃ ಎಂದರೆ ದುರಿತಗಳೆಲ್ಲವದೂರಮಾಳ್ವರು ಸ್ಮರಣ ಮಾತ್ರದಿ ಸಕಲಪಾಪಗಳೆಲ್ಲ ನಾಶಗೊಳಿಸೋರು18 ಗುರುವಾರ ಪೂಜಾ ಸಂಭ್ರಮದಿಂದ ನಮಗಾಯಿತು ಇಂದು ಮುಂದೆ ನಮಿಸಲು ಭಕ್ತವೃಂದಾ 19 ಜಯ ಜಯತು ಗುರುರಾಜ ಜಯ ಜಯತು ಸುರಭೂಜ ಜಯತು ಶ್ರೀ ರಾಘವೇಂದ್ರಾ ಜಯ ಜಯತು ಜಯ ಜಯತು ಜಯ ಜಯಾ 20
--------------
ರಾಧಾಬಾಯಿ
ಕಂಡೆ ನಾ ಕಣ್ಣಾರೆನಾ | ಕಂಡೆನಾ ಪ ಕಂಡೆನು ಕರುಣಾಸಾಗರನ | ಕರ ದಂಡ ನಾಮಕೊಲಿದವನ | ಆಹಾ ದಂಡ ಧಂಡದ ಲೀಲೆ ತೋಂಡರೊಡನಾಡು ಮೂರ್ತಿ 1 vಟಿಟತಮತ್ಕೋಟಿ ಸನ್ನಿಭನ | ದೇವ | ತಟಿನಿಯ ಪದದಿ ಪೆತ್ತವನ | ಚಾರು ಕರವ ನಿಟ್ಟವನ | ನಿಜ ಭಟ ಜನರಿಗೆ ಮುಕ್ತಿ ಪ್ರದನ ||ಆಹಾ || ಜಠರದಿ ಜಗವಿಟ್ಟು ವಟದೆಲೆಯೊಳು ಮಲಗಿ ವಟುರೂಪದಲಿ ಪಾದಾಂಗುಟವನು ಮೆಲುವನ 2 ಭುವನದೊಳು ಸಂಚರಿಸುವನ | ಕೂರ್ಮ ಮಾನವ ಪಂಚಮುಖನ | ಋಷಿ ಕುಮಾರ ಕುವರರ ಕಡಿದವನ ಮಹಿ ಕರವ ಕುವಲಯ ಸಖ ಕುಲೋಧ್ಭವ ಭವಮಾರ್ಗಣ ಬವರದಿ ಹಯವೇರಿ ಯವನರ ಬಡಿದನ 3 ಲ್ಮೊಗನ ನಾಭಿಲಿ ಪಡೆದವನ | ರವಿ ಮಗನಿಗೆ ಮಗನಾದವನ ತನ್ನ ಪೊಗಳುವಂಥರಫÀ ಕಳೆಯವವನ ಆಹಾ ಜಗನ್ನಾಥದಾಸರಿಗೆ | ಸೊಗಸಾದ ಮೃಷ್ಟಾನ್ನ ಬಗೆ ಬಗೆ ಉಣಿಸಿದ ಖಗಪತಿ ಗಮನನ4 ಸಾಸಿರನಯನನುಜನ | ಮಹಿ ದಾಸ ಕಪಿಲದತ್ತಾತ್ರೇಯನ ವೇದ ವ್ಯಾಸ ವೃಷಭ ಹಯಮುಖನ ಭಾರ ಶ್ರೀಶ ಮಾನಸಮಂದಿರ ||ಆಹಾ || ಶ್ರೀಶ ತಂದೆ ವೆಂಕಟೇಶ ವಿಠಲಂಘ್ರಿ ದಾಸರ ಸತ್ಯಹವಾಸದಿಂದಲಿಯಿಂದು 4 ತಂದೆ ತಾಯ್ಗಳ ಸುಕೃತವೊ | ನಮ್ಮ ಒಂದೂರಾರ್ಯರ ಅನುಗ್ರಹವೋ | ಸ್ತಂಭ ಮಂದಿರ ರಾಯರ ದಯವೊ | ದಾಸ ವೃಂದ ಕೃತಾಶೇಷ ಫಲವೊ | ಆಹಾ ಇಂದು ಭಾಗದಿ ಭಕ್ತಾವೃಂದಕೆ ದರುಶನಾ ನಂದಗರೆವ ಶಾಮಸುಂದರ ವಿಠಲನ 5
--------------
ಶಾಮಸುಂದರ ವಿಠಲ
ಕಂತುಜನಕನ ನೆನೆಯಲೆ ಬರಿದೆ ಮನ ಚಿಂತಿಸಿ ಫಲವಿಲ್ಲಲೇ ಪ ಕುಂತಿಸುತರಪಾಲ ಸಂತಜನರ ಪ್ರೀಯ ಚಿಂತೆಯಳಿದು ನಿಶ್ಚಿಂತೆ ಪಾಲಿಸುವಂಥ ಅ.ಪ ಕೀಳುಯೋಚನೆ ಅಳಿಯೆಲೆ ವೈಕುಂಠನ ಶೀಲತನದಿ ಭಜಿಸೆಲೆ ಮೂಲಮಂತ್ರವ ಕೇಳೋ ನೀಲವರ್ಣನ ಜಪ ಕಾಲನ ಬಾಧೆಯ ಗೆಲಿಸಿ ಪಾಲಿಸುವಂಥ 1 ಕರಿಧ್ರುವರೆಂಬುವರೊ ಹರಿಹರಿಯೆಂದು ಸ್ಥಿರಮುಕ್ತಿ ಪಡೆದಿಹ್ಯರೊ ಹರಿಯೆಂದು ಪ್ರಹ್ಲಾದ ಪರಮಕಂಟಕ ಗೆದ್ದ ಹರಿಯೆಂದು ವಿಭೀಷಣ ಸ್ಥಿರಪಟ್ಟ ಪಡೆದನು 2 ವಾಸನಾದೇಹವಿದು ಶಾಶ್ವತವಲ್ಲ ನಾಶನಹೊಂದುವುದು ಬೇಸರಿಲ್ಲದೆ ಪಠಿಸೀಶ ಶ್ರೀರಾಮನ ಧ್ಯಾಸÀವ ಮರೆಯದಿರು ಹೇಸಿಭವವ ಗೆಲಿಪ 3
--------------
ರಾಮದಾಸರು
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕನಕದಾಸನ ಮೇಲೆ ದಯ ಮಾಡಲು ವ್ಯಾಸಮುನಿ ಮಠಿಕರೆಲ್ಲರು ದೂರುತಿಹರೊ ಪ. ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುದೂರ್ತರಾಗಿದ್ದ ವಿದ್ವಾಂಸರೆಲ್ಲಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲಪೂತ್ರ್ಯಾಗಲೆಂದು ಯತಿ ನಗುತಲಿಹನು 1 ಕದಳಿ ಫಲವನೆ ಕೊಟ್ಟುಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು2 ಕದಳಿ ಫಲವ ತಂದು ಮುಂದಿಟ್ಟ 3 ಡಿಂಬದೊಳು ಶಬ್ದ ವಾಗಾದಿ ಶ್ರೋತೃಗಳಲ್ಲಿಇಂಬಾಗಿ ತತ್ತ್ವೇಶರೆಲ್ಲ ತುಂಬಿಹರುತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆಕಂಬದಂತಾದರವರೆಲ್ಲ ಕುಳಿತವರು 4 ಮಾಣಿಕವು ಕೋಡಗನ ಕೈಯಲ್ಲಿ ಇದ್ದಂತೆಕೋಣನಿದಿರಿಗೆ ಕಿನ್ನರಿಯ ಮೀಟಿದಂತೆವೇಣುಧ್ವನಿ ಬಧಿರನ ಬಳಿ ಹೊರಡಿಸಿದಂತೆ ಕಣ್‍ಕಾಣದವನಿಗೆ ಕನ್ನಡಿಯ ತೋರಿದಂತೆ 5 ನೋಡಿದಿರ ಈ ಕನಕನಾಡುವ ಮಾತುಗಳಮೂಢ ಜನರರಿಯಬಲ್ಲರೆ ಮಹಿಮೆಯನಾಡಾಡಿಯಂತೆಯೆ ಮಾಡಿಬಿಟ್ಟರು ಇವಗೆ ನಾಡೆಲ್ಲ ಹುಡುಕಿದರು ಈಡಾರ ಕಾಣೆ6 ಪುರಂದರ ವಿಠಲನೆಂದ 7 * ಈ ಕೀರ್ತನೆ ಕನಕದಾಸರದೆಂದೂ, ‘ಪುರಂದರ ವಿಠಲ’ ಎಂಬ ಅಂಕಿತ ಪ್ರಕ್ಷಿಪ್ತವೆಂದೂ ಪ್ರತೀತಿ.
--------------
ಕನಕದಾಸ
ಕಮಲಾಲಯ ಕೈಹಿಡಿದೆನ್ನ ಪಾಲಿಸುಮುನ್ನ ಕರುಣ ಕಟಾಕ್ಷದಿ ಎನ್ನಕಮಲಾಲಯ ಪ ಸ್ವಾಮಿ ಭೃತ್ಯನ್ಯಾಯ ಅರಿಯದೆ ನಾ ನಿನ್ನಪರವÀು ಪಾಮರನೆಂದು ನುಡಿದೆನು ಪರಮ ಪಾಮರನೆಂದು ನುಡಿದ ಅಪರಾಧವ ಸ್ವಾಮಿ ಚಿತ್ತದಲೆ ಹಿಡಿಬ್ಯಾಡ 1 ಗುಣನಿಧಿ ನೀ ಎಂದು ಗುಣಕೆ ಕೀರ್ತನೆ ಗೈದೆಎಣಿಸದಿರೆನ್ನ ಅಪರಾಧಎಣಿಸದಿರೆನ್ನ ಅಪರಾಧ ಎನುತಲೆ ಮಣಿದು ಸಾಷ್ಟಾಂಗ ಕ್ಕೆರಗಿದಳು2 ನಿನ್ನವರ ಅಪರಾಧ ಇನ್ನೇನು ನೋಡದೆಮನ್ನಿಸ ಬೇಕೊ ಕಮಲಾಕ್ಷಮನ್ನಿಸ ಬೇಕೊ ಕಮಲಾಕ್ಷ ಎನುತಲಿ ಕನಿದ್ರೌಪತಿ ನುಡಿದಳು3 ಬಡನಡ ಬಳಕುತ ಕುಚಗಳಲ್ಲಾ ಡುತ ಮುಡಿದಿದ್ದ ಪುಷ್ಪ ಉದುರುತಮುಡಿದಿದ್ದ ಪುಷ್ಪ ಉದುರುತ ಸುಭದ್ರೆಅಣ್ಣನ ಅಡಿಗೆರಗಿದಳು4 ಹೆಣ್ಣು ಕೊಟ್ಟ ಮ್ಯಾಲೆ ಹಿತವ ಚಿಂತಿಸಬೇಕು ಇನ್ನು ನುಡಿದಲ್ಲಿ ಫಲವೇನೊಇನ್ನು ನುಡಿದಲ್ಲಿ ಫಲವೇನೊ ಅಣ್ಣಯ್ಯಎನ್ನ ಮುಖವ ನೋಡಿ ಕರುಣಿಸೊ 5 ಎನ್ನವ್ವ ಸುಭದ್ರಾ ಈ ನುಡಿನಿನಗ್ಯಾಕೆ ನೀನು ನಿಮ್ಮಿಂದ ನಿಮ್ಮವರುನೀನು ನಿಮ್ಮಿಂದ ನಿಮ್ಮವರಿಗೆ ಪ್ರಾಣವ ನಾನು ಕೊಡುವೆನು 6 ಮೊದಲೆ ಅತ್ತೆಯ ಮಗ ಆದರದಿಂದ ನಿನ್ನ ಕೊಟ್ಟೆ ಹೆದರೋನೆ ಅವನು ನಮಗಿನ್ನುಹೆದರೋನೆ ಅವನು ನಮಗಿನ್ನು ಎನುತಲೆಮುದದಿ ರಾಮೇಶ ನುಡಿದನು7
--------------
ಗಲಗಲಿಅವ್ವನವರು
ಕರುಣಾಳು ದೊರೆಯೆ ಕೃಷ್ಣಮೂರುತಿಯೆ ಪ ಕಣ್ಣುಗಳಿಗೆ ಕಾಣದ ನೋವು ಸಣ್ಣಾಗಿ ನೋಯಿಸುವಂಥ ನೋವು ಇಲ್ಲದ ಬಾಧಿಪ ನೋವು 1 ಬ್ಯಾಡದ ನೋವು ಫಲವುಂಬೋ ನೋವು 2 ವಿದ್ಯಾಬುದ್ಧಿಗಳಿಲ್ಲದ ನೋವು ಕದ್ದು ಪರಧನ ತಂದಂಥ ನೋವು ಶುದ್ಧವಿಲ್ಲದ ಮನಸಿನ ನೋವು ಇದ್ದ ಋಣವನು ತೀರಿಸದ ನೋವು 3 ಗರ್ವದ ನೋವು ಕೊಂಡಾಡಿದ ನೋವು 4 ಬಿಟ್ಟಂಥ ನೋವು ವಿಠಲನ ನೆನೆಯದ ನೋವು 5
--------------
ಹನುಮೇಶವಿಠಲ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರ್ಮ ಕಾಟಿಗಾಗಿ | ಮೇಲುಗಿರಿರಾಯ ನಿನ್ನ ||ಕಾಲಿಗೆನ್ನ ಶಿರವನಿಟ್ಟೆ | ಸಾಲ ಬೇಡುವವನಂತೆ ಪ ದಡವ ಸೇರಿಸೆನ್ನ ದೈನ್ಯ | ನುಡುಗಿ ತಡೆಯದೆ ||ಬಡವನೆಂದುದಾಸೀನವ | ಮಾಡಿ ನೋಡದೆ 1 ಹಲವು ದೇವಂಗಳಿಗೆ ನಾನು | ಹಲುಬಿ ಬಳಲಿದೆನಯ್ಯ ಸ್ವಾಮಿ || ಫಲವ ಗಾಣದೆನೊಂದು ಬೆಂದು | ತಿಳಿಯದಾದೆ ತಪ್ಪು ಎಂದು 2 ಪುಂಡಲೀಕ ವರದನಾಗಿ | ಪಾಂಡುರಂಗನೆನಿಸಿಕೊಂಡು ||ಗಂಡದೈವ ವೆಂಕಟೇಶ | ಭಂಡು ಮಾಡದೆ ರುಕ್ಮನಾ 3
--------------
ರುಕ್ಮಾಂಗದರು