ಒಟ್ಟು 234 ಕಡೆಗಳಲ್ಲಿ , 59 ದಾಸರು , 212 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡೊ ಮನ ಕೊಂಡಾಡೊ ಮರೆಯದಲೆ ಮನ ಚಿಂತÀ ಲ್ರೇವ ಲೇಶನ ? ಪಾಡುತಿರೆ ಕೃಷ್ಣಾತೀರದ್ವಾಸನ ಮಾಡೊ ಮಹಾತ್ಮರೆಂದೆನಿಸೊ ದಾಸರ ಜೋಡು ಪಾದಂಗಳಿಗೆ ವಂದನೆ ಪ ಅಂಜನೆಯಲ್ಲುದಿಸಿ ಕೌಸಲ್ಯಾ- ಕಂದನಂಘ್ರಿಕಮಲ ಸೇವೆಗೆ ಅಂಗದ ಮೊದಲಾದ ಕಪಿಗಳ ಸಂಗ ಬಿಟ್ವಾರಿಧಿಯನ್ಹಾರುತ ಭಂಗ ಬಡಿಸುತ ರಾವಣನ ಪುರ ಮಂಗಳಾರತಿ ಮಾಡಿ ಜಾನಕಿ ಗುಂಗುರವನಿಟ್ಟೆರಗಿ ರಾಮರಿ ಗಂಗನೆಯ ವಾರ್ತೆಗಳನರುಹಿದೆ1 ಕುಂತಿಸುತನಾಗ್ಯುದಿಸಿ ಬ್ಯಾಗನೆ ಪಂಥಮಾಡುತ ಕೌರವರ ಕುಲ- ಕಂತಕನು ನಾನೆಂದು ರಣದೊಳು ನಿಂತು ಗದೆ ಹಾಕವರ ಸವರುತ ಅಂತರಂಗದಿ ಹರಿಯ ದಿವ್ಯಾ- ನಂತ ಗುಣಗಳ ತಿಳಿದು ದ್ರೌಪದೀ- ಕಾಂತನೆನಿಸಿ ತಾ ಕರುಣನಿಧಿಗೇ- ಕಾಂತ ಭಕ್ತನೆಂದಿನಿಸಿದಾತನು 2 ಮಧ್ಯಗೇಹಭಟ್ಟರಲ್ಲಿ ಮಗನಾ- ಗಿದ್ದ ಸುಜನರಭೀಷ್ಟದಾಯಕ ಗೆದ್ದು ಮಾಯಾವಾದಿಗಳನೆ ಪ್ರ ಸಿದ್ಧಿನೆನಿಸಿದೆ ಸರ್ವಲೋಕದಿ ಶುದ್ಧ ಜ್ಞಾನಾನಂದತೀರ್ಥರು ಮಧ್ವಮತದ ಬಿರುದನೆತ್ತಿದ ಪದ್ಮಪತಿ ಭೀಮೇಶಕೃಷ್ಣಗೆ ಪರಮಭಕ್ತನೆಂದೆನಿಸಿದಾತನು 3
--------------
ಹರಪನಹಳ್ಳಿಭೀಮವ್ವ
ಪಂಢರಪುರವಾಸ ಪಾಲಿಸೊ ಶ್ರೀಶ ಪ ಶ್ರೇಷ್ಠ ಭಕ್ತನು ಕೊಟ್ಟ ಇಟ್ಟಿಕಲ್ಲಿನ ಮ್ಯಾಲೆ ಗಟ್ಯಾಗಿ ನಿಂತಿದ್ದ ವಿಠೋಬ ದಯಮಾಡೊ 1 ಪಾಂಡುರಾಯನ ಸುತ ಗಾಂಡೀವರ್ಜುನ ದೂತ ಬಂಡಿ ನಡೆಸಿದಾತ ಪುಂಡರೀಕ್ವರದನೀತ2 ಮುಕುತಿದಾಯಕ ಮುದ್ದು ರುಕುಮಿಯ ರಮಣನೆ ಭಕುತ ವತ್ಸಲಯೆನಗೆ ಸಕಲಾಭೀಷ್ಟವ ನೀಡೊ 3 ಬುಕ್ಕಿ ್ಹಟ್ಟು ತುಳಸಿಮಾಲೆ ಕಟ್ಟಿ ಕೊರಳಿಗೆ ಹಾಕಿ ದಾತ 4 ಲೋಕ ಲೋಕದೊಳಗಿದ್ದಾನೇಕ ಜೀವರನೆಲ್ಲ ಸಾಕಿ ಸಾಕಾಯ್ತೆ ಕರವೇಕೆ ಟೊಂಕದಲ್ಲಿಟ್ಟಿ 5 ಸೃಷ್ಟಿಸ್ಥಿತಿಯು ಜನಸಂರಕ್ಷಣೆ ಮಾಡಿ ನಿನ್ನ ರಟ್ಟೆ ಸೋತವೆ ಟೊಂಕಕಿಟ್ಟು ಕಯ್ಯನು ನಿಂತೆ 6 ಕಂಬದೊಳಗೆ ನಿಂತ ಪುರಂದರದಾಸರು ವಂದನೆಮಾಡೆ ಇವರೆ ನಾರಂದರೆಂದು ನಾ ತಿಳಿದೆ 7 ರುಕ್ಮಿಣಿ ಸತ್ಯಭಾಮೆ ರಾಧೆ ಲಕ್ಷುಮಿಯೇರ ಹತ್ತಿಲೆ ನಿಂತ ನಮ್ಮಪ್ಪ ವೆಂಕಟರಮಣ 8 ಭೀಮರಥಿಯ ಸ್ನಾನ ಸ್ವಾಮಿ ನಿಮ್ಮ ದರುಶನ ಭೀಮೇಶಕೃಷ್ಣನ ಧ್ಯಾನ ಮಾಡುವೋದ್ವೈಕುಂಠಸ್ಥಾನ 9
--------------
ಹರಪನಹಳ್ಳಿಭೀಮವ್ವ
ಪತಿ | ನೀನಿವನ ಕಾಯೋ ಪ ಮಂದ ಜನರುದ್ಧಾರಿ | ತಂದೆ ಮುದ್ದು ಮೋಹನ್ನನಂದನರ ದ್ವಾರದಿಂ | ಪೊಂದಿ ಅಂಕಿತವಾಅಂದ ಸತ್ಸಾಧನವು | ಮುಂದುವರಿವಲಿಕಾಂಕ್ಷೆ |ಯಿಂದ ಸತ್ಕಾರ್ಯ | ಪ್ರತಿಬಂಧ ಪರಿಹರಿಸೊ 1 ಪಾದ | ವನಜ ಆಶ್ರಿತಗೇ 2 ಭಾವಜಾರಿಯ ಮಿತ್ರ | ಭಾವುಕರ ಪರಿಪಾಲಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ |ಪಾವಮಾನಿಯ ಪ್ರೀಯ | ನೀ ವೊಲಿದು ಭಕ್ತನ್ನತೀವರುದ್ದರಿಸೆಂದು | ದೇವ ಬಿನ್ನವಿಪೇ 3
--------------
ಗುರುಗೋವಿಂದವಿಠಲರು
ಪಶುಪತಿ ಶಂಭೋ |ಅಸುಪತಿಯನೆ ತೋರೋ || ಕರುಣವ ನೀ ಬೀರೋ ಪ ಮನಸೀನ ಒಡೆಯನೆ | ಕನಸು ಮನಸಿನಲಿಅನಘ ಹರಿಯ ಪದ | ನೆನೆವ ಮತಿಯನಿತ್ತುಎಣಿಸು ಭಕ್ತನೆಂದು || ಬೇಡುವೆ ಇನಿತೆಂದು ಅ.ಪ. ಮಾಹಿತಾಂಘ್ರಿಯ | ವಾಹಕನ ಸಮಮೋಹಶಾಸ್ತ್ರ ಪ್ರ | ವಾಹ ರಚಿಸುತ ||ದ್ರೋಹಿಗಳ ಬಲು | ಮೋಹ ಪಡಿಸುತಶ್ರೀ ಹರಿಯ ಸಖ | ಪಾಹಿ ಸುಖಪ್ರದ1 ಕಟಿ ಸೂತ್ರ | ಒಪ್ಪೊತವ ಸುತ ||ಸರ್ಪಾರಿ ಸಮಪದ | ಕಪ್ಪೊಗೊರಳ ಹರತಪ್ಪೊಗಳನು ಎಲ್ಲ | ಒಪ್ಪಿಕೊಳ್ಳಯ್ಯ 2 ಕರ್ಪರ | ಮೈಲಿ ಭಸ್ಮವು |ಶೂಲ ಪಾಣಿಯೆ | ಶೈಲಜಾಪತೆ ||ಕಾಲಕಾಲಕೆ | ಕಾಲನಾಮನಶೀಲ ಸ್ಮøತಿಯನು | ಪಾಲಿಪುದು ಹರ 3 ವಾಸ ಮಶಣವು | ಕೇಶ ವ್ಯೋಮವುಹೇ ಸದಾಶಿವ | ನೀ ಸಲಹೊ ಎನ್ನ ||ಮೀಸಲದ ಮನ | ಕಾಶಿಸುವೆ ಹರಹೇ ಸದಾಗತಿ ಕೂಸು ನೀ ನಲ್ಲೆ 4 ದೇವ ವರ ಶಿವ | ಮಾವ ವೈರಿಯಹಾವ ಭಾವಕೆ | ಓದಿ ಮೋಹಿಸುತ ||ಧಾವಿಸಲು ಹರಿ | ತೀವ್ರ ಕಾಯ್ದನುಗೋವಳನು ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪಾರ್ಥಸಾರಥಿ ಪಾಲಿಸೆನ್ನ ಶ್ರೀಹರಿಯೆ ಪ ಅಂದು ಗಜನು ತಾನು ಬಂದು ತಾ ಬಂಧು ಬಳಗವ ಕೂಡಿ ಸೊಂಡಿ- ಲಿಂದ ನೀರನು ಕಲಕಲಾಕ್ಷಣ ಒಂದು ಮಕರ್ಹಲ್ಲಿಂದ ಪಿಡಿಯೆ ಮು- ಕುಂದ ನೀನೆ ಗತಿಯೆಂದರಾಕ್ಷಣ ಬಂದು ಒದಗಿದ್ಯೊ ಸಿಂಧುಶಯನನೆ 1 ದುರುಳಾಸುರನು ತನ್ನ ಕರುಳ ತನ ಕರುಳನಿಟ್ಟುರಿಯಲ್ಲಿ ಗರಳ ಹಾಕಿ ಬಾಧಿಸಲು ಖಳನು ಕಾರಣ ಕಂಬದಲಿ ಬಂದೆಳೆದು ಅವನುರ ಕರುಳ ಮಾಲೆಯ ಕರಾಳವದನವ ತೆರೆದು ತನ್ನಯ ಕೊರಳಲ್ಲಿರಿಸಿದ ಕೋಮಲಾಂಗನೆ 2 ಪಿತನ ತೊಡೆಯಲಿದ್ದ ಸುತನ ಕಂಡು ಸುತನ ಸುರುಚಿಯು ತಾನಾಗ ಹಿತದಂತ್ವಾಕ್ಯಗಳನು ನುಡಿಯಲು ಅತಿಬ್ಯಾಗದಲಜಸುತನ ನುಡಿ ಕೇ ಳುತಲಿ ತಪವನು ಚರಿಸಲಾಕ್ಷಣ ಪತಿತಪಾವನ ಪರಮ ಕರುಣದಿ ಸುತ ಧ್ರುವಗೆ ಸುಖವಿಟ್ಟ ಶ್ರೀಹರಿ3 ಬಾಡಿ ಬಳುಕುವ ದ್ವಿಜನ ನೋಡಿ ತಾ ನೋಡಿ ತಂದವಲಕ್ಕಿ ಬೇಡಿ ಆಡಿ ಭಕ್ತನ ಕೂಡ ನಯನುಡಿ ಮಾಡಿ ಕರುಣವ ತನ್ನ ದಯ ಸೂ- ರ್ಯಾಡಿ ಸಖಗೀಡಿಲ್ಲದರ್ಥವ ನೀಡಿದ್ಯೊ ಬಹು ರೂಢಿಗಧಿಕನೆ 4 ಕಡುಚÉಲ್ವೆಕರೆಯಲುಟ್ಟುಡುಗೆ ಉಟ್ಟ ಉಡುಗೆ ಸೆಳೆಯಲು ಕೃಪ್ಣೆ(ಯಿ)ದ್ದೆಡೆಗೆ ನಡೆದಸುರ ಪಿಡಿದೆಳೆಯೆ ಸೀರೆಯ ಕಡೆಯ ಕಾಣದೆ ಖಳನು ಧರೆಯೊಳು ಯುಡುಗೆಗಕ್ಷಯ ನುಡಿದ ಕೃಷ್ಣನೆ 5 ಸಿಂಧುಶಯನಾರವಿಂದನಯನಾರ- ವಿಂದ ನಯನ ಅಸುರರಿಗತಿ ಭಯಂಕರನಾ- ಗೆಂದಿಗಾದರು ನಿನ್ನ ನಾಮಸುಧೆ ಯಿಂದ ಸುಖ ಸುರಿವಂತೆ ಮಾಡು ಮು- ಕುಂದ ಭೀಮೇಶಕೃಷ್ಣ ನಿನ್ನ ಪ- ದಾಂಬುಜವ ತೋರಾನಂದದಿಂದಲಿ 6
--------------
ಹರಪನಹಳ್ಳಿಭೀಮವ್ವ
ಪಾರ್ವತಿದೇವಿ ಗಿರಿಜೆ ನೀ ಒಲಿಯುವರೇ ಪರಶಿವನು ತಕ್ಕ ವರನೆಂದು ಮೆರೆಯುವರೆ ಪ ಪರಮ ವೈಷ್ಣವ ಭಕ್ತಾಗ್ರಣಿಯಾದ ಶಿವನಿಗೆ ಇರುತಿಹ ಕೊರತೆಗಳರಿಯದೆ ಗರುವದಲಿ ಅ.ಪ ಮನ್ಮಥನ ವೈರಿಗೆ ವಾಸಕೆ ಯೋಗ್ಯ ಮನೆಯಿಲ್ಲದಿರುವಾತಗೆ ಮನೆಯು ಮಶಾಣವೆನ್ನುತ ಪೇಳುತಿಹರಿನ್ನು ಸುಮನಸರೊಡಯನೆ ಸಖನಂತೆ ಇದು ಕೇಳು ಮನಸಿನ ಅಭಿಮಾನಿ ಶಿವನು ಘನತರದ ವಿಷಪಾನಗೈದನು ಮನದಿ ಶ್ರೀ ರಘುವರನ ಸ್ಮರಿಸುತ ವೃಷಭ ವಾಹನವೇರಿ ಚರಿಪಗೆ 1 ರುಂಡಮಾಲೆಯ ಧರಿಸಿದ ಕೊರಳೊಳಗೆ ಸರ್ಪ ದಂಡೆ ಅಲಂಕರಿಸಿರುವ ಮಂಡೆಯೊಳಗೆ ಚಲುವ ಗಂಗೆಯ ಧರಿಸಿಹ ಚಂದ್ರಶೇಖರ ಶಿವನೆಂದು ಕರೆಸಿಕೊಂಬ ಕೆಂಡಗಣ್ಣಿನ ಕ್ರೂರರೂಪನ ಕಂಡು ಹರುಷದಿ ಹಿಗ್ಗಿ ನಲಿಯುವಿ ಮಂಡೆಯಲಿ ಕೆಂಜಡೆಯ ಸುತ್ತಿಹ ಹಿಂಡು ವಿಷ ಸರ್ಪಗಳಲಂಕೃತನಿಗೆ 2 ಕರಿಚರ್ಮಾಂಬರನುಡುವ ಕೈಯಲ್ಲಿ ಕಪಾಲ ತಿರಿದುಂಡು ಹರುಷಿಸುವ ಪರಿ ದೈತ್ಯ ಪಿಶಾಚಯಕ್ಷರ ಕೂಡಿ ಚರಿಸುತ್ತ ಕುಣಿಯುತ್ತ ಗೊರವನಂತಿರುತಿಹ ಪರಮ ವೈರಾಗ್ಯವನು ಧರಿಸಿ ಫಣೆಯ ಗಣ್ಣನು ಬಳಿದು ಭಸುಮವ ಚರಿಸುವನು ರುಷಿವರರ ತೆರದಲಿ ಎಣಿಸಿ ಮಣಿಗಳ ಒಲಿಸಿ ಹರಿಯನು 3 ರಾಮಮಂತ್ರವ ಜಪಿಸಿ ರಮಣಿಗೆ ದಿವ್ಯ ರಾಮಚರಿತೆಯ ಬೋಧಿಸಿ ಕಾಮಹರನು ಕೈಲಾಸಪತಿಯು ಮತ್ತೆ ಕಾಮದೇವನು ಎಂಬ ನಾಮಸ್ಮರಿಸುವ ಆ ಮಹಾಗಣಪತಿಯು ಪುತ್ರನು ವೀರಭಕ್ತನು ಸುತನು ಶಿವನಿಗೆ ಪ್ರೇಮದಲಿ ಷಣ್ಮುಖನು ಸುತನೆಂ- ದೀ ಮಹಾಮಹಿಮೆಗಳು ತಿಳಿಯದೆ4 ಸುಂದರಾಂಗಿ ನಿನ್ನಯ ಚಲುವಿಕೆಗೆ ತಕ್ಕ ಚಂದದ ವರನೇ ಕೇಳು ಮಂದರೋದ್ಧರ ಶ್ರೀ ಮುಕುಂದನ ಭಜಿಸಲು ಚಂದದ ವರಗಳ ಕುಂದದೆ ಕರುಣಿಪ ಕಂದುಗೊರಳನು ಶಿವನು ಕಮಲ ನಾಭ ವಿಠ್ಠಲನ ಭಜಿಪ ಸಂತತ ಮಂದಗಮನೆಯ ಇಂದುಧರನಿಗೆ ಚಂದದಲಿ ವನಮಾಲೆ ಹಾಕುತ 5
--------------
ನಿಡಗುರುಕಿ ಜೀವೂಬಾಯಿ
ಪುರಂದರದಾಸರು ಎಂತು ಪೊಗಳಲಿ ನಾನು ಪ ಕಂತುಪಿತನೇಕಾಂತ ಭಕ್ತನ ಪಂಥವನು ಪದ ಪಂಕ್ತಿಯಲಿ ತುಂಬಿಟ್ಟು ಸಲಹಿದ ದಾಸವರ್ಯರ ಅ.ಪ. ನಿತ್ಯ ನೆನೆಯುತ್ತ ಪಂಡಿತೋತ್ತಮರೊಡನೆ ಸುಖಿಸುತ್ತ ಕಂಡು ಹರಿಯನು ಮುಂದೆ ಕುಣಿಯುತ್ತ ಕುಂಡಲಿಗೆ ನಿಜ ಭೂಷಣವು ಎನಿಸುತ್ತ ಭಂಡಜನರಾ ಪುಂಡುಮಾರ್ಗವ ಕಂಡಕಂಡೆಡೆ ಖಂಡ್ರಿಸುತ ಬ್ರಹ್ಮಾಂಡ ದೊಡೆಯನ ಭಕ್ತಿ ಬಿತ್ತುತ ಹಿಂಡಿ ಮತಿಮತ ರಸವ ಕುಡಿಸಿದ ದಾಸವರ್ಯರ 1 ಮೊದಲು ಗಾಯಕ ದೇವಸಭೆಯಲ್ಲಿ ಮುದದಿ ಕಾಮುಕ ಚೇಷ್ಟೆ ನಡೆಸುತಲಿ ಪದವಿಯಿಂ ಚ್ಯುತನಾಗಿ ದಾಸಿಯಲಿ ಉದಿಸಿ ಬಂದು ಸಾಧು ಸಂಗದಲಿ ಬದಿಗೆ ತಳ್ಳುತ ಭವದ ಕೋಟಲೆ ಮುದದಿ ಜಪಿಸುತ ವಾಸುದೇವನ ಪದವಿ ಸಾಧಿಸಿ ದೇವ ಋಷಿ ತಾ ಪದುಮನಾಭನ ನೆನೆದು ನರಕವ ಬ ರಿದು ಮಾಡ್ಡ ಮಹಾನುಭಾವನ 2 ಕಾಸಿನಾಶಯವು ಮೋಸವೆಂತೆಂದು ಹೇಸಿವಿಷಯದಿ ಲೇಸು ಸಿಗದೆಂದು ಶ್ರೀಶ ಸಿಗುವನು ದಾಸಗೆಂತೆಂದು ಆಶೆಯಿಂದಲಿ ಸಾರಬೇಕೆಂದು ಓಸು ಸಂಪದ ನೂಕಿ ಭರದಿಂ ವ್ಯಾಸರಾಯರ ಶಿಷ್ಯನೆನಿಸುತ ವಾಸುದೇವನ ದಾಸನಾಗುತ ದೋಷಜ್ಞಾನವ ನಾಶಮಾಡಿದ ದೇಶ ತಿರುಗಿದ ದಾಸವರ್ಯರ 3 ಭಕ್ತಿಯಿಲ್ಲದ ಗಾನ ತಾನಿನ್ನು ಕತ್ತೆಕೂಗನುಮಾನವಿಲ್ಲೆಂದು ನಿತ್ಯದೇವನ ಗಾನ ಗೈಯಲು ಗಾತ್ರವಿದು ನಿಜವೀಣೆಯೆಂತೆಂದು ಸಪ್ತಸ್ವರಗಳ ಕ್ಲಪ್ತಮರ್ಮಗ ಳೆತ್ತಿ ತೋರುತ ಶ್ರೇಷ್ಠತರ ಸಂಗೀತ ಸೂತ್ರ ಸಂಮತ ನೀತಿ ನುಡಿದಿಹ ದಾಸವರ್ಯರ 4 ಪೊಂದಿ ಪುಸ್ತಕ ದೀಚೆ ಬರದೆಂದು ಛಂದ ಮರ್ಮವ ತಂದಿಡುವೆ ನಮ್ಮೀ ಅಂದ ಕನ್ನಡ ದೊಳಗೆ ಎಂತೆಂದು ಕಂದ ವೃತ್ತ ಸುಳಾದಿ ಪದಗಳ ಛಂದ ಭೂಷಣವೃಂದ ನೀಡುತ ನಂದದಿಂ ಕರ್ಣಾಟಮಾತೆಯ ಮುಂದೆ ತಾ ನಲಿವಂತೆ ಮಾಡಿದ ದಾಸವರ್ಯರ 5 ನಾರಿ ಮನೆ ಪರಿವಾರ ಹರಿಗೆಂದು ಸಾರವನ್ನೆ ಮುರಾರಿ ಮನೆಯೆಂದು ಚಾರು ಶ್ರುತಿಗತಸಾರ ನಡತೆಯಲಿ ಸೂರಿಯಾದವ ತೊರಬೇಕೆಂದು ನೀರಜಾಕ್ಷನ ಧೀರ ದೂತನ ಸಾರ ಮನವನು ಸಾರಿ ಸಾರುತ ದೂರ ಒಡಿಸಿ ಮೂರು ಮತಗಳ ನೇರ ಸುಖಪಥ ತೋರಿಸಿದ ಮಹರಾಯ ದಾಸರ 6 ಕರ್ಮಕೋಟಲೆಗಿಲ್ಲ ಕೊನೆಯೆಂದು ಮರ್ಮತಿಳಿಯುತ ಬಿಂಬಹೃದಯಗನ ನಿರ್ಮಮತೆಯಿಂದೆಸಗಿ ಕರ್ಮಗಳ ಕರ್ಮಪತಿಗೊಪ್ಪಿಸುತ ಸರ್ವಸ್ವ ಭರ್ಮಗರ್ಭನ ಭಕ್ತಿ ಭಾಗ್ಯದಿ ಪೇರ್ಮೆಯಿಂ ಹರಿದಾಸನೆಸಿಸುತ ಶರ್ಮ ಶಾಶ್ವತವಿತ್ತು ಸಲಹುವ ವರ್ಮ ನೀಡಿದ ವಿಶ್ವಬಾಂಧವ 7 ಇಂದಿರೇಶನು ಮುಂದೆ ಕುಣಿಯುತಿರೆ ಕುಂದುಂಟೆ ಮಹಿಮಾತಿಶಯಗಳಿಗೆ ತಂದೆ ಕೌತಕ ವೃಂದ ಮಳೆಗರೆದು ಕಂದನನು ಪೊರೆದಂದವೇನೆಂಬೆ ಬಂದು ಸತಿಸಹ ಮಂದಿರಕೆ ಗೋ ವಿಂದ ಪಾಕವಗೈದು ಬ್ರಾಹ್ಮಣ ವೃಂದಕಿಕ್ಕುತ ದಾಸರಿಗೆ ಮುದ ಮಾಧವ ಭಾಗ್ಯಕೆಣೆಯುಂಟೆ 8 ದೀನ ಹೊಲೆಯಗೆ ಪ್ರಾಣ ಬರಿಸಿದನು ಏನು ಒಲ್ಲದೆ ಹರಿಯ ಯಜಿಸಿದನು ಜ್ಞಾನ ಭಾಗ್ಯದಿ ಮುಳುಗಿ ತೇಲಿದನು ದೀನ ಜನರುದ್ಧಾರ ಮಾಡಿದನು ದಾನಿ ಜಯಮುನಿ ವಾಯು ಹೃದಯಗ ಚಿನ್ಮಯ ಶ್ರೀ ಕೃಷ್ಣವಿಠಲನ ಗಾನ ಸುಧೆಯನು ಬೀರಿಸುತ ವಿ ಜ್ಞಾನವಿತ್ತ ಮಹೋಪಕಾರಿ ವಿಶೇಷ ಮಹಿಮನ 9
--------------
ಕೃಷ್ಣವಿಠಲದಾಸರು
ಬಣ್ಣಿಸುತ ಮಕ್ಕಳನು ಹರಸುವಳು ತಾುಎಣ್ಣೆ ಉಣಿಸುತ ತನ್ನ ಚಿನ್ನ ಚಿಕ್ಕರುಗಳಿಗೆ ಪಆಯುಷ್ಯವಂತನಾಗು ಆಸ್ತಿಕನು ನೀನಾಗುಭಕ್ತವತ್ಸಲ ಹರಿಯಭಕ್ತನಾಗುನಿತ್ಯನಿರ್ಮಲನಾಗು ನೀತಿವಂತನು ಆಗುಸತ್ಯನಿಷ್ಠನಾಗು ಸಿರವಂತನಾಗೆಂದು 1ಶೂರನೀನಾಗು ಬಲುಧೀರ ನೀನಾಗಯ್ಯಾಧೈರ್ಯದಿಂದ ಸತ್ಕಾರ್ಯ ನಿರತನಾಗುದುರುಳರನು ದೂರಿರಿಸು ಪರರ ಪೀಡಿಸದಿರುಕಾರುಣ್ಯ ನಿಧಿಯಾಗಿ ಸುಜನರನು ಪೊರೆಯೆಂದು2ದೇಶವನು ಪ್ರೀತಿಸು ದುರಾಶೆಗೊಳಗಾಗದಿರುಕರ್ಯಠನು ಆಗದಿರು ಧರ್ಮ ಬಿಡಬೇಡಾಉದ್ಯೋಗಪತಿಯಾಗು ಜಿಪುಣ ನೀನಾಗದಿರುಭೂಪತಿ'ಠ್ಠಲನ ಭಕ್ತ ನೀನಾಗೆಂದು 3
--------------
ಭೂಪತಿ ವಿಠಲರು
ಬಂದ ಬಂದಾ ಕದರೂರಿಂದ ನಿಂದಾ ಪ. ಬಂದ ಕದರೂರಿಂದ ಕರಿಗಿರಿ ಎಂದು ಕರೆಸುವ ಪುಣ್ಯಕ್ಷೇತ್ರಕೆ ತಂದೆ ಮುದ್ದುಮೋಹನ್ನ ಗುರುಗಳು ತಂದು ಸ್ಥಾಪಿಸೆ ತಂದೆ ಹನುಮನು ಅ.ಪ. ವ್ಯಾಸತೀರ್ಥರು ಸ್ಥಾಪಿಸಿದ ಶ್ರೀ ದಾಸಕೂಟದಿ ಉದಿಸಿದಂಥಾ ವಾಸುದೇವನ ಭಕ್ತವಂಶದಿ ಲೇಸುಮತಿಯಿಂ ಜನಿಸಿ ಭಕ್ತರ ಆಸೆಗಳ ಪೂರೈಸುತಲಿ ಬಹು ತೋಷದಂಕಿತಗಳಿತ್ತು ನಾಶರಹಿತನ ಭಕ್ತರೆನಿಸಿದ ದಾಸವರ್ಯರ ಮಂದಿರಕೆ ತಾ 1 ಶಾಲಿವಾಹನ ಶಕವು ಸಾವಿರ ಮೇಲೆ ಶತ ಎಂಟರವತ್ತೊಂದು ಕಾಲ ಫಾಲ್ಗುಣ ಕೃಷ್ಣ ಪಂಚಮಿ ಓಲೈಸುವ ಪ್ರಮಾಥಿ ವತ್ಸರ ಶೀಲ ಗುರುವಾಸರದಿ ಬುಧರ ಮೇಳದಲಿ ವೇದೋಕ್ತದಿಂದಲಿ ಶೀಲ ಶ್ರೀ ಕೃಷ್ಣದಾಸತೀರ್ಥರು ಲೀಲೆಯಿಂದ ಪ್ರತಿಷ್ಟಿಸಲು ತಾ 2 ರಾಮದೂತ ಶ್ರೀ ಹನುಮ ಬಂದನು ಭೀಮ ಬಲ ವಿಕ್ರಮನು ಬಂದನು ಶ್ರೀ ಮದಾನಂದತೀರ್ಥ ಬಂದನು ಪ್ರೇಮಭಕ್ತರ ಪೊರೆವ ಬಂದನು ಸ್ವಾಮಿಗೋಪಾಲಕೃಷ್ಣ ವಿಠಲನ ಪ್ರೇಮಭಕ್ತನು ದಾಸ ಭವನಕೆ 3
--------------
ಅಂಬಾಬಾಯಿ
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಬಾರಯ್ಯ ತಿಮ್ಮಯ್ಯಾ ತೋರಯ್ಯಾ ಮುಖವನು | ತಾರಯ್ಯಾ ಒಂದು ಚುಂಬನ ಕರುಣ | ಬೀರಯ್ಯಾ ನಮ್ಮ ವಶಕೆ ಪ ಶೋಭಾನೆ || ನಿಲ್ಲು ನಿಲ್ಲೆಲೊ ದೇವಾ | ಎಲ್ಲಿ ಪೋಗುವಾ ನೀನು ಸಲ್ಲದು ನಿನ್ನ ಚೋರಂಗ ಲೀಲಿಗೆ ಪಳ್ಳಿಸೋಕುದೆ ಇಲ್ಲ ಇಲ್ಲದೆ 2 ಹಾರಿಸಿ ವೈದು ಮರನೇರಿ | ಹಾರಿಸಿ ಮರನೇರಿದ ಸಣ್ಣ | ಪೋರ ಬುಧ್ಧಿಗಳ ಬಿಡವಲ್ಲಿ 3 ತುರುಕರಗಳ ಕಾಯ್ದು | ಚರಿಸಿದೆ ಅಡವಿಯ | ಪರಸತಿಯರ ವ್ರತಗಳ | ಪರಸತಿಯರ ವ್ರತಗಳ ಕೆಡಿಸಿದ | ಪರಮಾತ್ಮನಿಗೆ ಎಣೆಯುಂಟೆ 4 ಕೇಸಕ್ಕಿ ತಿರುಮಲ ಲೇಸಯ್ಯಾ ನಿನ್ನ ಗುಣ | ಕಾಸುಕಾಸಿಗೆ ಬಿಡದಲೆ | ಕಾಸುಕಾಸಿಗೆ ಬಿಡದೆ | ಬಡ್ಡಿಕೊಂಬ ಆಶೆಗಾರನು ಬಹು ಸೂರಾಳೊ 5 ಅಣಕವಾಡಲಿ ಬೇಡ ಕೆಣಕಿದರೆ ನಿನ್ನ | ಹೊಣಿಕೆಹಾಕುವೆ ಹಿಡತಂದು ಎನ್ನಯ | ಮನವೆ ನಿನ್ನಯ ಚರಣಕ್ಕೆ ಶೋಭಾನೆ 6 ಬೆಟ್ಟದ ಕೊನೆ ಏರಿ ಎಷ್ಟು ದೂರ ಓಡೀ | ಗಟ್ಯಾಗಿ ನಿನ್ನ ಚರಣದ | ಗಟ್ಯಾಗಿ ನಿನ್ನ ಚರಣದ ಕೊನಿಯ ಉಂ ಗುಷ್ಟ ಕಚ್ಚದಲೆ ಬಿಡೆ ನಾನು 7 ಹಿಂದೆ ಯಾರು ಏನು ತಂದು ಕೊಟ್ಟರೋ ನಿನಗೆ | ಇಂದು ನಾನೇನು ಕೊಡಲಿಲ್ಲವೆಲೋ ತಂದೆ | ಕಣ್ಣಿರದು ನೋಡೊ ಕಮಲಾಕ್ಷ | ಶೋಭಾನೆ 8 ಭಕ್ತನ ನುಡಿಕೇಳಿ ಚಕ್ಕನೆ ಬಿಗಿದಪ್ಪಿ | ತೆಕ್ಕಿಸಿದಾ ವಿಜಯವಿಠ್ಠಲ ಎನ್ನ ಅಕ್ಕರವೆಲ್ಲ ತೀರಿಸಿದಾ | ಶೋಭಾನೆ 9
--------------
ವಿಜಯದಾಸ
ಬಾರೋ ಮನೆಗೆ ರಂಗಾ ಕರುಣಾ ಪಾಂಗ ನರಸಿಂಗ ಪ. ಬಾರೋ ನಿನ ಪರಿವಾರ ಸಹಿತಲಿ ವಾರೆರೊಡಗೂಡಿ ನೀರಜಾಕ್ಷನೆ ಭವ ಕರುಣಾಂಬುದೆ ಅ.ಪ. ಪಿಡಿದು ಖಡ್ಗವ ನಿನ್ನ ವಡೆಯನ ತೋರೆಂದು ಘುಡುಘುಡಿಸಲು ಕಂದ ವಡನೆ ಕೂಗೆ ವಡಲ ಬಗೆದು ಕರುಳ ಮಾಲೆಯ ಪಿಡಿದು ಧರಿಸುತ ವಡನೆ ಭಕ್ತನ ಬಿಡದೆ ಸಲಹಿದ ಕಡು ದಯಾನಿಧೆ 1 ಪಿತನ ತೊಡೆಯಿಂದ ಭೂಪತಿಸತಿ ನೂಕಲು ಅತಿಭಯದಲಿ ಧ್ರುವ ಖತಿಗೊಳ್ಳುತ ಪತಿತ ಪಾವನ ನಿನ್ನ ಕಾಣಲು ಮುನಿ ಪತಿಯು ಪೇಳಿದ ಪಥದಿ ಪುಡುಕೆ ಅತಿಶಯದಿ ಬಂದ್ಹಿತವ ಕೋರಿದ ಗುಣಾನ್ವಿತ ದಯಾಂಬುಧೆ2 ಕರಿ ಮೊರೆಯಿಡೆ ಸಿರಿಗ್ಹೇಳದಲೆ ಬಂದು ಗರುಡ ಗಮನನಾಗಿ ತ್ವರಿತದಿಂದ ಶರಣಪಾಲಕ ನಿನ್ನ ಚಕ್ರದಿ ತರಿದು ನಕ್ರ ನಕರಿಯ ಪೊರೆದ ತೆರದೊಳೆನ್ನ ವಗುಣಗಳೆಣಿಸದೆ ಹರುಷದಲಿ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಬಿಡಬೇಡೆಲೆ ಮನಸೆ ಶ್ರೀಹರಿಪಾದ ಹಿಡಿ ಬಿಗಿಯಲೆ ಮನಸೇ ಪ ಹಿಡಕೋ ಕಡಕಿಂ ಕಡಲಕಡಿದಮರರ ಪಾದ ಅ.ಪ ಅನುದಿನ ಸಿರಿಯರೊತ್ತುವ ಪಾದ ಪರತರ ಭಕುತಿಯಿಂ ಸುರರುಪೂಜಿಪ ಪಾದ ನೆರೆದು ಋಷಿಸ್ತೋಮರರಸಿನಲಿಯುವ ಪಾದ ಪರಮನಾರದ ತುಂಬುರರು ಪಾಡುವ ಪಾದ ಪಾದ 1 ನೀಲಬಣ್ಣದಪಾದ ಪಿಡಿದೆತ್ತಿ ಮೂಲೋಕಾಳುವ ಪಾದ ತಾಳಿ ವಿಲಸಿತರೂಪ ಖೂಳನ ಎದೆಮೆಟ್ಟಿ ಸೀಳಿ ಉದರಮಂ ಬಾಲನ್ನಪ್ಪಿಕೊಂಡು ಪಾಲಿಸಿದಂಥ ಮಹ ಮೇಲಾದಮಿತಪಾದ ಸುಜನ ತಲೆಮೇಲೆ ಹೊತ್ತಪಾದ 2 ಬಲಿಯತುಳಿದಪಾದ ಮುನಿಯಾಗ ಒಲಿದು ಕಾಯ್ದಪಾದ ಶಿಲೆಯನೊದೆದಪಾದ ವನಕೆ ಪೋದಪಾದ ಖಳರಥಳಿಸಿ ಮುನಿಕುಲವ ಸಲಹಿದಪಾದ ಜಲಧಿದಾಂಟಿ ಸ್ಥಿರಪಟ್ಟ ಭಕ್ತನಿಗೆ ಸುಲಭದೊದಗಿಕೊಟ್ಟ ಚೆಲುವ ಸುದಯಪಾದ 3 ಪಾದ ಬಹು ಜರಮರಣ ನಿವಾರ ಪಾದ ತರಳಗೆ ಸ್ಥಿರವರ ಕರುಣದಿತ್ತ ಪಾದ ಭರದಿಗರಡನೇರಿ ಸರಸಿಗಿಳಿದ ಪಾದ ತರುಣಿಮಣಿಯರವ್ರತ ಹರಣಗೈದ ಪಾದ ಸಿರಿ ಪಾದ 4 ಪಾದ ಭಕುತರ ಮೊರೆಯ ಕೇಳ್ವ ಪಾದ ದುರುಳ ಕುರುಪನ ಗರುವಕಂಡ ಬುವಿ ವಿಶ್ವ ಪಾದ ಪರಮ ತುರಗವೇರಿ ಮೆರೆವ ವಿಮಲ ಪಾದ ಪಾದ 5
--------------
ರಾಮದಾಸರು