ಒಟ್ಟು 1121 ಕಡೆಗಳಲ್ಲಿ , 101 ದಾಸರು , 945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದುಸ್ನಾನ ಇದುಸ್ನಾನ ಇದುಸ್ನಾನವಯ್ಯ ಸದಮಲಜ್ಞಾನಿಗಳು ಮನವೊಪ್ಪಿ ಮಾಡ್ವ ಪ ಇಟ್ಟು ಹಂಗಿಸದ್ದೆ ಸ್ನಾನ ಕೊಟ್ಟು ಕುದಿಯದ್ದೆ ಸ್ನಾನ ಕೊಟ್ಟದ್ದು ಕೊಡುವುದೇ ಶಿಷ್ಟ ತುಂಗಾಸ್ನಾನ ನಿಷ್ಠರಾಡದ್ದೆ ಸ್ನಾನ ದುಷ್ಟಸಂಗಳಿವುದೇ ಸ್ನಾನ ಶಿಷ್ಟಜನಸಂಗವೇ ನಿಜ ಕೃಷ್ಣಾಸ್ನಾನ 1 ಭವ ಅದು ಸ್ನಾನ ಕ್ಷೀರಸಾಗರ ಸ್ನಾನ ರಾಗನೀಗ್ವುದೆ ಸ್ನಾನ ಜಾಗರಣ ಸದಾಸ್ನಾನ ಭಾಗವತರೊಲುಮೆ ನಿಜ ಭಾಗೀರಥೀಸ್ನಾನ 2 ಮರೆವ ತರಿವುದೆ ಸ್ನಾನ ಅರಿವು ತಿಳಿವುದೆ ಸ್ನಾನ ಪರಮಜ್ಞಾನ ನಿಜ ಸುರಗಂಗಾಸ್ನಾನ ಕರುಣ ಪಡೆವುದೆ ಸ್ನಾನ ಮರಣಗೆಲಿವುದೆ ಸ್ನಾನ ಹರಿದಾಸರೊಡನಾಟ ಸರಸ್ವತೀ ಸ್ನಾನ 3 ವಾದನೀಗ್ವುದೆ ಸ್ನಾನ ಭೇದ ಅಳಿವುದೆ ಸ್ನಾನ ಮಾಧವನ ಕಥಾಶ್ರವಣ ಸದಾ ಯಮುನಾ ಸ್ನಾನ ವೇದವನರಿವುದೆ ಸ್ನಾನ ಬೋಧಪಡೆವುದೆ ಸ್ನಾನ ಸಾಧುಸಜ್ಜನಸೇವೆ ಗೋದಾವರೀಸ್ನಾನ 4 ನೇಮನಿತ್ಯವೆ ಸ್ನಾನ ತಾಮಸ್ಹರಣವೆ ಸ್ನಾನ ಕಾಮತೊಳೆವುದೆ ನಿಜ ಭೀಮಾನದೀಸ್ನಾನ ಕ್ಷೇಮಸಾಗರ ತ್ರಿಭೂಮಿಯೊಳಧಿಕ ಶ್ರೀ ರಾಮನಡಿಭಕುತಿಮುಕ್ತಿ ಹೇಮಾನದೀಸ್ನಾನ 5
--------------
ರಾಮದಾಸರು
ಇದೇ ನಮ್ಮ ವೃತ್ತಿ ಸದ್ಗುರುಭಾವಭಕ್ತಿ ಧ್ರುವ ಇದೇ ನಮ್ಮ ಮನೆಯ ಸದ್ಗುರು ಸ್ಮರಣಿಯ ಇದೇ ನಮ್ಮ ವರ್ತನೆಯು ಸದ್ಗುರು ಪ್ರಾರ್ಥನೆಯು 1 ಇದೇ ನಮ್ಮ ಗ್ರಾಮ ಸದ್ಗುರು ದಿವ್ಯನಾಮ ಇದೇ ನಮ್ಮ ಸ್ತೋಮ ಸದ್ಗುರು ಆತ್ಮಾರಾಮ 2 ಇದೇ ನಮ್ಮ ಭೂಮಿ ಸದ್ಗುರು ಘನಸ್ವಾಮಿ ಇದೇ ನಮ್ಮ ಸೀಮಿ ಸದ್ಗುರು ಅಂತರ್ಯಾಮಿ 3 ಇದೇ ನಮ್ಮ ದೇಶ ಸದ್ಗರು ಉಪದೇಶ ಇದೇ ನಮ್ಮಭ್ಯಾಸ ಸದ್ಗುರು ಜಗದೀಶ 4 ಇದೇ ನಮ್ಮ ವಾಸ ಸದ್ಗುರು ಸಮರಸ ಗ್ರಾಸ ಸದ್ಗುರು ಪ್ರೇಮರಸ 5 ಇದೇ ನಮ್ಮ ವ್ಯವಸನ ಸದ್ಗುರು ನಿಜಧ್ಯಾಸ ಇದೇ ನಮ್ಮ ಆಶೆ ಸದ್ಗುರು ಸುಪ್ರಕಾಶ6 ಇದೇ ನಮ್ಮಾಶ್ರಮ ಸದ್ಗುರು ನಿಜದ್ಯಾಸ ಇದೇ ನಮ್ಮುದ್ದಿಮೆ ಸದ್ಗುರು ಸಮಾಗಮ 7 ಇದೇ ನಮ್ಮ ಭಾಗ್ಯ ಸದ್ಗತಿ ಸುವೈರಾಗ್ಯ ಇದೇ ನಮ್ಮ ಶ್ರಾಧ್ಯ ಸದ್ಗುರು ಪಾದಯೋಗ್ಯ 8 ಇದೇ ನಮ್ಮ ಕುಲವು ಸದ್ಗುರು ದಯದೊಲವು ಇದೇ ನಮ್ಮ ಬಲವು ಸದ್ಗುರು ದಯಜಲವು 9 ಇದೇ ನಮ್ಮಾಭರಣ ಸದ್ಗುರು ದಯ ಕರುಣ ಇದೇ ದ್ರವ್ಯ ಧನ ಸದ್ಗತಿ ಸಾಧನ 10 ಕಾಯ ಸದ್ಗುರುವಿನುಪಾಯ ಇದೇ ನಮ್ಮ ಮಾಯ ಸದ್ಗುರುವಿನ ಅಭಯ 11 ಇದೇ ನಮ್ಮ ಪ್ರಾಣ ಸದ್ಗುರು ಚರಣ ಇದೇ ನಮ್ಮ ತ್ರಾಣ ಸದ್ಗುರು ದರುಶನ 12 ಇದೇ ನಮ್ಮ ಜೀವ ಸದ್ಗುರು ವಾಸುದೇವ ಇದೇ ನಮ್ಮ ದೇವ ಸದ್ಗುರು ಅತ್ಮಲೀವ್ಹ 13 ಇದೇ ನಮ್ಮ ನಾಮ ಸದ್ಗುರು ಸದೋತ್ತಮ ಇದೇ ನಮ್ಮ ನೇಮ ಸದ್ಗುರು ಸರ್ವೋತ್ತಮ 14 ಇದೇ ನಮ್ಮ ಕ್ಷೇತ್ರ ಸದ್ಗುರು ಬಾಹ್ಯಂತ್ರ ಗಾತ್ರ ಸದ್ಗುರು ಘನಸೂತ್ರ 15 ಇದೇ ನಮ್ಮ ತೀರ್ಥ ಸದ್ಗುರು ಸಹಿತಾರ್ಥ ಇದೇ ನಮ್ಮ ಸ್ವಾರ್ಥ ಸದ್ಗುರು ಪರಮಾರ್ಥ 16 ಇದೇ ನಮ್ಮ ಮತ ಸದ್ಗುರು ಸುಸನ್ಮತ ಪಥ ಸದ್ಗುರುಮಾರ್ಗ ದ್ವೈತ 17 ಇದೇ ನಮ್ಮ ವೇದ ಸದ್ಗುರು ಶ್ರೀಪಾದ ಇದೇ ನಮ್ಮ ಸ್ವಾದ ಸದ್ಗುರು ನಿಜಬೋಧ 18 ಇದೇ ನಮ್ಮ ಗೋತ್ರ ಸದ್ಗುರು ಸರ್ವಾಂತ್ರ ಸೂತ್ರ ಸದ್ಗುರು ಚರಿತ್ರ 19 ಇದೇ ಸದ್ಯ ಸ್ನಾನ ಸದ್ಗುರು ಕೃಪೆ ಙÁ್ಞನ ಇದೇ ಧ್ಯಾನ ಮೌನ ಸದ್ಗುರು ನಿಜಖೂನ 20 ಇದೇ ಜಪತಪ ಸದ್ಗುರು ಸ್ವಸ್ವಸೂಪ ಇದೇ ವೃತ್ತುದ್ಯೋಪ ಸದ್ಗುರು ಸುಸಾಕ್ಷೇಪ 21 ಇದೇ ನಿಮ್ಮ ನಿಷ್ಠಿ ಸದ್ಗುರು ಕೃಪಾದೃಷ್ಟಿ ಇದೇ ನಮ್ಮಾಭೀಷ್ಠಿ ಸದ್ಗುರು ದಯಾದೃಷ್ಟಿ 22 ಇದೇ ಪೂಜ್ಯಧ್ಯಕ ಸದ್ಗುರು ಪ್ರತ್ಯಕ್ಷ ಇದೇವೆ ಸಂರಕ್ಷ ಸದ್ಗುರು ಕಟಾಕ್ಷ 23 ಇದೇ ನಮ್ಮ ಊಟ ಸದ್ಗುರು ದಯನೋಟ ಇದೇ ನಮ್ಮ ಆಟ ಸದ್ಗುರು ಪಾದಕೂಟ 24 ಮಾತೃಪಿತೃ ನಮ್ಮ ಸದ್ಗುರು ಪರಬ್ರಹ್ಮ ಭ್ರಾತೃಭಗಿನೀ ನಮ್ಮ ಸದ್ಗುರು ಪಾದಪದ್ಮ 25 ಇದೇ ಬಂಧು ಬಳಗ ಸದ್ಗುರುವೆ ಎನ್ನೊಳಗೆ ಇದೇ ಸರ್ವಯೋಗ ಬ್ರಹ್ಮಾನಂದ ಭೋಗ26 ಇದೇ ಸರ್ವಸೌಖ್ಯ ಮಹಿಪತಿ ಗುರುವಾಕ್ಯ ಇದೇ ನಿಜ ಮುಖ್ಯ ಸದ್ಗತಿಗಿದೆ ಐಕ್ಯ 27
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿ ಸ್ವತಶುದ್ಧ ವiಡಿ ಸದಾ ಸರ್ವದಾ ಇದೇ ಮಾಡಿ ಧ್ರುವ ಅರಹು ಎಂಬುದೆ ಮಡಿ ಉಡಿ ಮರಹು ಮೈಲಗಿ ಮುಟ್ಟಬ್ಯಾಡಿ ಗುರುಸ್ಮರಣೆ ನಿಷ್ಠೆಯೊಳುಗೂಡಿ ಪರಬ್ರಹ್ಮ ಸ್ವರೂಪದ ನೋಡಿ 1 ಕಾಮಕ್ರೋಧದ ಸ್ವರ್ಶವ ಬ್ಯಾಡಿ ನೇಮನಿತ್ಯ ಇದನೇ ಮಾಡಿ ಶಮದಮೆಂಬುದು ಕೈಗೂಡಿ ಪ್ರೇಮಭಾವ ಭಕ್ತಿಯ ಮಾಡಿ 2 ಮಿಥ್ಯಾ ಭೂತಕ ಮಡಿಮಾಡಬ್ಯಾಡಿ ಚಿತ್ತಚಿದ್ಛನ ಸಮರಸ ನೋಡಿ ನಿತ್ಯ ಮಹಿಪತಿಗಿದೆ ಮಡಿ ನೋಡಿ
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರಿರಬೇಕು ಅನುದಿನಾ | ಒಳ್ಳೆವರ ಸಹವಾಸಾ ಪ ಅಂಗಸಂಗಗಳಿಂದ | ಮಂಗಳೋತ್ಸಾಹವಾಗಿ | ಕಂಗಳಿಗಿದಿರಿಡುವದು ಉಲ್ಹಾಸಾ1 ಸಾರಿ ಬೀರಿ ಬೋಧವಾ | ದಾರಿದೋರಿ ಭಕ್ತಿಯಾ | ದೂರ ಮಾಡುವರು | ಭವಭಯ ಕ್ಲೇಶಾ 2 ಗುರುವರ ಮಹಿಪತಿಸುತಪ್ರಭು ಸ್ಮರಣೆಯಾ | ಮರಹು ಮರೆಸುವರದರುದ್ದೇಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದ್ದರೆ ಹೀಗೆ ಇರಬೇಕು ಇಲ್ಲದಿದ್ದರೆ ಕಾಯವ ಬಿಡಬೇಕು ಶುದ್ಧ ಚಿತ್ತವಾಗಿ ಹೃದಯದೊಳಿದ್ದ ವಸ್ತುವನ್ನು ನಿನ್ನ ಬುದ್ಧಿಯಿಂದ ನೀನೆ ತಿಳಿಯುತ್ತಿದ್ದು ಜೀವನ್ಮುಕ್ತನಾಗಿ ಪ ಕಲ್ಲು ಮರಳು ಕಾಷ್ಠತರುಗಳಲ್ಲಿ ಗಿರಿಗಳಲ್ಲಿ ಚರಿಸುವ ಹುಲ್ಲೆ ಕರಡಿ ವ್ಯಾಘ್ರ ಸಿಂಹದಲ್ಲಿ ಪಕ್ಷಿ ನಾನಾಮೃಗ ಗಳಲ್ಲಿ ವಸ್ತುವೊಬ್ಬನಲ್ಲದಿಲ್ಲವೆಂದು ಭಾವಿಸುತ್ತ 1 ದ್ರಷ್ಟವಾಗಿ ತೋರ್ಪುದೆಲ್ಲ ನಷ್ಟವಾಗಿ ಪೋಪುದೆಂದು ದಿಟ್ಟನಾಗಿ ತಿಳಿದುಜ್ಞಾನ ದೃಷ್ಟಿಯಿಂದಲೆ ದುಷ್ಟಜನರ ಸಂಗವನ್ನು ಬಿಟ್ಟು ಅರಿಗಳರುವರನ್ನು ಕುಟ್ಟಿ ಕೆಡಹಿ ಆಶಪಾಶವೆಂಬ ಹಗ್ಗವನ್ನು ಹರಿದು 2 ಗೇರು ಹಣ್ಣಿನ ಬೀಜ ಹೊರಸಾರಿ ಇರ್ದವೊಲು ಸಂ ಸಾರವೆಂಬ ವಾರಿಧಿಯೊಳು ಕಾಲಗಳೆಯುತ ನೀರ ಮೇಲಕಿದ್ದ ನಳಿನದಂತೆ ಹೊರಗೆ ಬಿದ್ದು ಬಕನ ಚಾರು ಚರಣ ಸ್ಮರಣೆಯಿಂದ 3
--------------
ಕವಿ ಪರಮದೇವದಾಸರು
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇನ್ನಾದರೂ ದಯಬಾರದೆ ನಿನಗೆ ಸಂ-| ಪನ್ನ ಮೂರುತಿ ಶ್ರೀಹರಿ ಪ ನಿನ್ನ ನಾಮಸ್ಮರಣೆ ದೊರಕಿತು || ನಿನ್ನ ನಂಬಿದನಾಥನನುದಿನ ಅ.ಪ ಧಾರಿಣಿಯಲಿ ಬಳಲಿದೆ || ಪಾರ ರಹಿತನೆ ನಿರ್ಗುಣಾತ್ಮಕ | ಮಾರನನು ರಕ್ಷಿಸಿದ ದೇವನೆ 1 ಕಂದ ಧ್ರುವನು ಬಂದು ನಿಂದು ಮಧುವನದಲ್ಲಿ | ಚಂದದಿಂ ತಪಗೈಯಲು || ನಂದನಂದನ ದೇವ ಪಾಲಿಸು 2 ನಂಬಿದ ದ್ರೌಪದಿಗಭಯವಿತ್ತೆ || ಸಂಭ್ರಮದಿ ಕೊಡುವಂತೆ ಭಕ್ತಕ-| ದಂಬಪಾಲಕ ಶ್ರೀನಿವಾಸನೆ 3
--------------
ಸದಾನಂದರು
ಇನ್ನಾರೆ ತಿಳಿದು ನೋಡು ಮನರಾಯಾ | ನಿನ್ನ ಕಣ್ಣದೆರೆದು ಸ್ವ ಹಿತದ ಉಪಾಯಾ ಪ ನಾನಾ ಜನ್ಮದಲ್ಲಿ ಬಂದು ಧರೆಯಲ್ಲಿ ಸುಖ | ವೇನು ಪಡೆದಿ ಹರಿಯ ಸ್ಮರಣೆ ಮರೆದಿಲ್ಲಿ 1 ಶರಗೊಡ್ಡಿ ಬೇಡಿಕೊಂಬೆ ನಾನೀಗಾ | ಸ್ಥಿರವಾದರಿಲ್ಲ ದೂರ ಶಿವಯೋಗಾ 2 ಇಂದು ನಾಳೆವೆನ್ನಬೇಡಿ ನಿಶ್ಚಯಾ ನಿನಗ | ಮುಂದ ಮತ್ತ ದೊರೆಯದಿದ ನರದೇಹಾ 3 ತಂದೆ ಮಹಿಪತಿಸ್ವಾಮಿ ದಯದಿಂದ | ನಂದವ ಪಡೆದು ಗೆಲಿಯೋ ಭವದಿಂದಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು ಧ್ರುವ ಎನ್ನೊಳು ಗುರು ತನ್ನ ಮರ್ಮವು ತೋರಿದ ಇನ್ನೇನಿನ್ನೇನು 1 ಮುನ್ನಿನ ಕರ್ಮವು ನಿರ್ಮೂಲವಾಯಿತು ಇನ್ನೇನಿನ್ನೇನು 2 ಎನ್ನೊಳು ಘನಬ್ರಹ್ಮವಸ್ತು ತಾನಾಯಿತು ಇನ್ನೇನಿನ್ನೇನು 3 ನಾನು ನಾನೆಂಬುದು ನೆಲಿಯು ತಾನಾಯಿತು ಇನ್ನೇನಿನ್ನೇನು 4 ಏನೆಂದು ತಿಳಿಯದ ಅನುಮಾನ ಗಳೆಯಿತು ಇನ್ನೇನಿನ್ನೇನು 5 ಪರಮ ತತ್ವದ ಗತಿ ನೆಲೆ ನಿಭ ತೋರಿತು ಇನ್ನೇನಿನ್ನೇನು 6 ಎನ್ನೊಳಾತ್ಮ ಖೂನ ಕುರುಹವು ತಿಳಿಯಿತು ಇನ್ನೇನಿನ್ನೇನು 7 ಕನಸು ಮನಸು ಎಲ್ಲ ನಿನ್ನ ಸೇವೆ ಆಯಿತು ಇನ್ನೇನಿನ್ನೇನು 8 ಹಗಲಿರುಳೆಂಬುದು ಹಗರಣವಾಯಿತು ಇನ್ನೇನಿನ್ನೇನು 9 ಅರಹು ಮರಹಿನ ಇರುವು ತಿಳಿಯುತು ಇನ್ನೇನಿನ್ನೇನು 10 ಭಾವದ ಬಂiÀiಲಾಟ ನಿಜವಾಗಿ ದೋರಿತು ಇನ್ನೇನಿನ್ನೇನು 11 ಜೀವಶಿವನ ಗತಿ ಸೋಹ್ಯವು ತಿಳಿಯಿತು ಇನ್ನೇನಿನ್ನೇನು 12 ಆಯವು ದಾಯವು ಸಾಹ್ಯವು ದೋರಿತು ಇನ್ನೇನಿನ್ನೇನು 13 ಜೀವನ್ನ ಜಾತಿಯ ಕೀಲವು ತಿಳಿಯಿತು ಇನ್ನೇನಿನ್ನೇನು 14 ಜನ್ಮ ಮರಣದಾ ಜಂತ್ರವು ಮುರಿಯಿತು ಇನ್ನೇನಿನ್ನೇನು 15 ಸಂದೇಹ್ಯ ಸಂಕಲ್ಪ ಸೂಕ್ಷ್ಮವು ಹರಿಯಿತು ಇನ್ನೇನಿನ್ನೇನು 16 ಮರಣದ ಗತಿಗಳ ಮಂತ್ರವು ತಿಳಿಯಿತು ಇನ್ನೇನಿನ್ನೇನು 17 ಸುಷಮ್ನ ನಾಳದ ಸೂಕ್ಷ್ಮವು ದೋರಿತು ಇನ್ನೇನಿನ್ನೇನು 18 ಇಮ್ಮನವಿದ್ದದು ಒಮ್ಮನವಾಯಿತು ಇನ್ನೇನಿನ್ನೇನು 19 ಆಧಾರಚಕ್ರದ ಹಾದಿಯು ತಿಳಿಯಿತು ಇನ್ನೇನಿನ್ನೇನು 20 ಸದ್ಗುರು ಕೃಪೆಯಾದಾ ಸಾಧನವಾಯಿತು ಇನ್ನೇನಿನ್ನೇನು 21 ಇನ್ನೇನಿನ್ನೇನು 22 ಅಂತರಾತ್ಮನ ಸೂತ್ರಾಂತ್ರವು ತಿಳಿಯಿತು ಇನ್ನೇನಿನ್ನೇನು 23 ಇನ್ನೇನಿನ್ನೇನು 24 ಎನ್ನೊಳು ಭಾಸ್ಕರ ಗುರು ತಾನೆಯಾದನು ಇನ್ನೇನಿನ್ನೇನು 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಲ್ಲೆ ಉಂಟು ಮುಕುತಿ ನೋಡಿ ನೋಡಿ ಒಂದೆ ಮನದಲಿ ಸುಲಭವಾಗಿ ದೋರುತಿಹ್ಯದು ಗುರುಕರುಣದಲಿ ಧ್ರುವ ಏನುಹೇಳಲಿ ಸ್ವಾನುಭವ ಸುಖದ ಸಿದ್ಧಿಯ ಜ್ಞಾನಿಬಲ್ಲ ಭಾಸುತಿಹ್ಯ ಸ್ವಕೀಲ ಸಿದ್ಧಿಯ ಮನವ ಬಲಿದು ಮಾಡಿಕೊಳ್ಳಿ ಜ್ಞಾನಸಿದ್ಧಿಯ ತನುವಿನೊಳು ದೋರುತೀಹ್ಯ ಶ್ರೀಗುರು ಸುಧೆಯ 1 ನಿಟಿಲ ಭ್ರೂಮಧ್ಯ ದಾಟಿನೋಡಿ ಮುಕ್ತಿಯ ದಿಟವಾಗಿ ಕೂಡಿ ಪ್ರಭಯ ಜ್ಞಾನ ಶಕ್ತಿಯ ಕುಟಿಲವಲ್ಲ ಕೇಳಿ ಮಾತು ನಿಜಯುಕ್ತಿಯ ನಟನೆ ತನ್ನೊಳು ದೋರುವ ಗುರುಭಕ್ತಿಯ 2 ಲೇಸು ಲೇಸಾಯಿತು ಎನಗೆ ಭಾಸ್ಕರ ಕರುಣವು ಭಾಸುತಿಹ್ಯದು ವಾಸುದೇವನ ಪುಣ್ಯಚರಣವು ಮೋಸವಿಲ್ಲದೆ ನೀಗಿತು ಜೀವನ ಜನ್ಮಮರಣವುದಾಸ ಮಹಿಪತಿಗಾಯಿತು ಘನಸ್ಫುರಣವು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಷ್ಟಾದರು ದಯಮಾಡು ಪಂಡರಿನಾಥ ಪಾದ ಮುಟ್ಟಿ ಪ್ರಾರ್ಥಿಪೆನು ಪ ದಾನಧರ್ಮವು ಮಾಡಬೇಕೆಂದು ಮನವಿರೆ ದಾನವಾಂತಕ ಕೃಷ್ಣ ಧನವಿಲ್ಲವಯ್ಯ ಗಾನಲೋಲನೆ ಭಕ್ತಪಾಲ ನಿನ್ನಯ ಪಾದ ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1 ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ- ಮೂರ್ತಿ ಸೇವಿಸಲಸಮರ್ಥನಾಗಿರುವೆ ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2 ಜ್ಞಾನಿಗಳೊಡನಾಡಿ ಶ್ರೀನಿವಾಸನೆ ನಿನ್ನ ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ ಜ್ಞಾನಿಗಳರಸ ಭಕ್ತರ ಸುರಧೇನು ಅಜ್ಞಾನಿಗಳಳಿದು ಸುಜ್ಞಾನಜನರ ಸಂಘ 3 ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ ಖಗವಾಹನ ಕಂಸಾರಿಯೆ ದೇವ ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ ಪಾದಗಳು ಸೇವಿಪ ಪರಮಲಾಭವನು 4 ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
--------------
ನಿಡಗುರುಕಿ ಜೀವೂಬಾಯಿ
ಇಷ್ಟು ದಿನ ಇಂಥ ಸುಖ ಕಾಣಲಿಲ್ಲಕೃಷ್ಣ ಈ ದಿನ ನೋಡಿ ತುಷ್ಟನಾದೆನೊ ದೇವಾ ಪ ಆಟಗಳು ಸುಖವಲ್ಲ ಕೃಷ್ಣ ನೋಟಗಳು ಸುಖವಲ್ಲಪಾಠಗಳು ಸುಖವಲ್ಲ ಕೂಟವಲ್ಲತೋಟದೊಳು ರವಿಸುತನ ಕೂಟದೊಳು ಗೋಪಿಯರಆಟಕದ ಕೊಳಲೂದೊ ನೋಟ ಸ್ಮರಣೆಗೆ ತರುವೆ 1 ಏನು ಸೌಂದರ್ಯವೊ ಕೃಷ್ಣ ಏನು ಸೌಭಾಗ್ಯವೊಧೇನುಪಾಲನ ನೋಟಕಾಶ್ಚರ್ಯವೊನಾನು ಒಲ್ಲೆನು ಸೀದಾ ಆಣೆ ಮಾಡುವೆನೀಗಧೇನು ಮುಖ ಸಮ ತೋರಿ ಧ್ಯಾನ ತಪ್ಪಿಸೋ ಜಗದಿ 2 ಇಂದು ಬಾಯೊಳಗಿಟ್ಟುಮಂದಹಾಸವ ಮಾಡುತಿಂದಿರೇಶಕಂದರ್ಪಸಮರೂಪದಿಂದ ನೋಡುವೆನೀಗಸಿಂಧುನೊಳು ಮುಳುಗಿದೆನು ನಂದಬಾಲಕನೆ 3
--------------
ಇಂದಿರೇಶರು
ಇಷ್ಟುದಯ ಮಾಡಿದ್ದೆ ಅತಿ ಸೋಜಿಗ ಶೀಷ್ಟೇಷ್ಟದಾತ ಭ್ರಷ್ಟಮಾನವನಲ್ಲಿ ಪ. ಉದಯಕಾಲದಲೆದ್ದು ಪದುಮಸಂಭವ ಪಿತನ ವದನದಲಿ ನೆನೆಯದಲೆ ಮಾನುನಿಯರ ಚದುರತೆಗೆ ಮೆಚ್ಚುತಲೆ ಉದರ ಪೊರೆದನ ಮೇಲೆ ಚದುರ ಶ್ರೀಕೃಷ್ಣ ಬದಿಗನಾಗಿದ್ದು 1 ಕರುಣಾಸಮುದ್ರನ ಸ್ಮರಣೆ ಸಾಲದೆ ಎಂಬ ಪರಮ ಗುರುಗಳ ವಚನ ಮರೆತು ನಿನ್ನ ಸ್ಮರಿಸದೆಲೆ ನಿರುತದಿ ಪರರ ಬಾಗಿಲಿಗ್ಹೋಗಿ ಚರಣ ಧಣಿವುತ ಮನದಿ ಮರುಗಿದೆನೋ ಕೃಷ್ಣಾ 2 ಇನ್ನಾದರೆನಮನದಿ ಪನ್ನಗಾದ್ರಿನಿವಾಸ ನಿನ್ನ ಸ್ಮರಣೆಯ ಕೊಟ್ಟು ಮನ್ನಿಸೆನ್ನ ಘನ್ನ ಅಪರಾಧಗಳ ವರ್ಣಿಸಲಳವಲ್ಲ ಚೆನ್ನಿಗ ಶ್ರೀ ಶ್ರೀನಿವಾಸ ಘನ್ನ ಸಂಪನ್ನ ಸರಿಯಾರೋ 3
--------------
ಸರಸ್ವತಿ ಬಾಯಿ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈ ಪರಿಯ ಸೊಬಗು ಇನ್ನಾವ ಗುರುಗಳಿಗುಂಟುಈ ಪರಿಮಳಾರ್ಯ ಗುರುರಾಜಗಲ್ಲದೆ ಪಅರ್ಜುನಪ್ರಿಯ ಸೇವಕನು ಶಂಕುಕರ್ಣನು ಮೊದಲುಅಜನ ಶಾಪವ ತಾಳಿ ದೈತ್ಯರೊಳು ಜನಿಸಿಈ ಜಗದಿ ಸರ್ವತ್ರ ಹರಿಯ ವ್ಯಾಪ್ತಿಯ ತೋರಿನಿಜ ಭಕ್ತನೆನಿಸಿದನು ಪ್ರಹ್ಲಾದನಾಗಿ 1ದ್ವಾಪರಾಂತ್ಯದಿ ಇವನ ಬಾ'್ಲೀಕನೆಂದೆನಿಸಿಶಾಪಫಲ ಪರಿಹಾರವಾಗಬೇಕಾಗಿ'ಪರೀತ ಬುದ್ಧಿುಂ ಯುದ್ಧವನು ಮಾಡಿ ತಾ-ನಪೇಕ್ಷಿಸಿದ ಭೀಮನಿಂ ಮರಣವನ್ನು 2ಕಲಿಯುಗದಿ ಭೀಮಸೇನ ಮಧ್ವ ಮುನಿಯಾಗಿಅವತರಿಸಿ ತತ್ವಮತ ಸ್ಥಾಪಿಸಿದನುಬಾ'್ಲೀಕ ಬಾಲಯತಿ ವ್ಯಾಸಮುನಿಯಾಗಿಕರುಣಿಸಿದನು ಕೃಷ್ಣ ಸದ್ಗ್ರಂಥಗಳ ರಚಿಸಿ 3ವ್ಯಾಸರಾಯರ ಮುಂದೆ ಅವತರಿಸಿ ಗುರುವರ್ಯಶ್ರೀರಾಘವೇಂದ್ರನೆಂದೆನಿಸುತಮಧ್ವಮತ ದುಗ್ಧಾಬ್ಧಿ ಚಂದ್ರಮನು ತಾನಾಗಿಕಲಿಯುಗದ ಕಲ್ಪತರು ಎಂದೆನಿಸಿದ 4ಅಜನಪ್ರಿಯ ಅಜನ ತಾತನ ಭಕ್ತಅಜಪದಕೆ ಅರ್ಹನೆ ಇವನಂತ (?) ಅಜನ ತಾತನ ಕುಣಿಸಿ ಅಜಕರಾರ್ಚಿತಪೂಜಿಸಿದ ಭೂಪತಿ'ಠ್ಠಲನ ದಾಸ *5
--------------
ಭೂಪತಿ ವಿಠಲರು