ಒಟ್ಟು 177 ಕಡೆಗಳಲ್ಲಿ , 55 ದಾಸರು , 165 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೇಲನೆಸಗಲಿ ನಿಮಗೆ ಮಾಲಕುಮಿ ಮನ್ನಿಸುಗೆ ಪ. ಬಾಲಕರು ಬಯಸುವೆವು ಬಾಲೆಯರು ಹರಸುವೆವು ಅ.ಪ. ಮಾಧವನ ದಯೆಯಿರಲಿ ಯೊಧರಿಗೆ ಜಯವಿರಲಿ ಸಾಧನವು ಕೈಸೇರೆ ಶ್ರೀಧರನು ಮೈದೋರೆ 1 ಸಿದ್ಧಿಸಿದಾವ್ರತವೆಂದು ಶುದ್ಧಭಾವದಿ ಬಂದು ಬದ್ಧಕಂಕಣರಾಗಿ ಶ್ರದ್ಧೆಯಿಂ ಶಿರಬಾಗಿ 2 ವಾಸುದೇವನ ಸ್ಮರಿಸಿ ಮೀಸಲಂ ತೆಗೆದಿರಿಸಿ ವಾಸಪಂಥದಿ ಬೇಗ ದಾಸ್ಯಮಂ ಬಿಡಿಸೀಗ 3 ವಿಜಯದಶಮಿಯು ನಾಳೆ ವಿಜಯಯಾತ್ರೆಗೆ ತೆರಳೆ ವಿಜಯಸಾರಥಿಯೊಲಿದು ವಿಜಯವೀಯುವನಹುದು 4 ಘನತೆಗೇರುವ ನಮ್ಮ ವನಿತೆಯರೆ ನಿಮ್ಮ ಮನೆತನವ ಬೆಳಗಿಸಿರೆ ಇನಿಯರನು ಹುರಿಡಿಸಿರೆ 5 ಪೌರುಷವು ಪುಟ್ಟುವೋಲ್ ವೀರರಹುದೆನ್ನುವೋಲ್ ವೀರಮಾತೆಯರೆ ನೀಂ ವೀರಪುತ್ರರ ಪಡೆಯಿರೆ 6 ಮಕ್ಕಳಂ ತಕ್ಕೈಸಿ ತಕ್ಕಂತೆ ನುಡಿಗಲಿಸಿ ಕಕ್ಕುಲಿತೆಯಿಂ ನೋಡಿ ಅಕ್ಷರಸ್ಥರ ಮಾಡಿ 7 ಮಹಿಳೆಯರೆ ಮಾದರಿಯ ಗೃಹಿಣಿರಹೆ ಶಾರದೆಯ ಮಹಿಮೆಯದು ಕರಮೆಸೆಗೆ ವಿಹಿತಮದು ನಿಮ್ಮೊಳಗೆ 8 ದೇಶದೇಳಿಗೆಯಲ್ಲಿ ಆಸೆ ನಿಮಗಿರುವಲ್ಲಿ ದೇಶೀಯವ್ರತಧರಿಸಿ ಐಶ್ವರ್ಯಮಂ ಬೆಳಸಿ 9 ಪತಿ ಸುತ ಸಹೋದರರ ಹಿತವೆಳಸಿ ಬಾಂಧವರ ಮತವರಿತು ನಡೆಯಿಸಿರೆ ವ್ರತಸಾಂಗವೆನ್ನಿಸಿರಿ 10 ಇನ್ನೇಳಿ ಕೈನೀಡಿ ಸನ್ಮಾನೈಯರೆ ನೋಡಿ ಧನ್ಯವಾದವ ಮಾಡಿ ಮನ್ನಿಸಿರೆ ದಯೆಗೂಡಿ 11 ಬಾಲಕರು ಬೇಡುವರು ಮೇಲೆನಿಪ ಮಮತೆಯನು ಶಾಲುಸಕಲಾಸೆಯನು ಬಾಲಕರು ತಾ ಬಯಸರು 12 ತಾಯಿಯರೆ ನೀವಿತ್ತ ತಾಯ್ನಲವನಿತ್ತ ತಾಯೆಂದುಕೊಳ್ಳುವರು ಈಯಣುಗರ್ ಕೇಳಿದನು 13 ಕನ್ಯೆಯರು ಹಾಡುವರು ಕನ್ನಡವ ಪಾಡುವರು ಕನ್ನಡಕೆ ಜಯವಾಗಲೆನ್ನುವರು ನಲವೀಗೆ 14 ಹರಕೆಯನು ಸಲ್ಲಿಸಿರೆ ತರಳರಂ ಮನ್ನಿಸಿರಿ ಮರಳಿ ಬಾರೆಂದೆನಿರೆ ಹರುಷದಿಂ ಬೀಳ್ಕೊಡಿರಿ15 ವರಶೇಷಗಿರಿವಾಸ ಕರುಣದಿಂದಲೆ ಲೇಸ ಧರೆಗೆಲ್ಲ ಸಂತೋಷ ದಯೆಗೆಯೈ ಸರ್ವೇಶ16
--------------
ನಂಜನಗೂಡು ತಿರುಮಲಾಂಬಾ
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಕೆ ಬರವಲ್ಲಿ ಭಕುತನವಸರಕೆ ಪ ಬೇಕಿಲ್ಲೆ ಭಕ್ತವತ್ಸಲನೆಂಬ ಬಿರುದೀಗ ಅ.ಪ ಸುರಮುನಿ ನುಡಿಕೇಳಿ ನಾರಿ ಸತ್ಯಭಾಮೆ ಹರಿ ನಿನ್ನ ದಾನಮಾಡೆ ವರ ವೀಣ ಪುಸ್ತಕ ಹೊರಿಸಿ ಕರೆದೊಯ್ದನೇನೊ 1 ಮಾತೆಯ ಹಂಗಣೆಯ ಮಾತಿಗೆ ಖತಿಗೊಂಡು ಪೋತ ಧ್ರುವ ಅರಣ್ಯ ಪೋಗೆ ಕಾಯ ಪೋದ್ಯಾ 2 ಕುರುಪ ಧರ್ಮಾದ್ಯರ ಕರೆಸಿ ಪಗಡೆಯಾಡೆ ಸರಸಿಜಾಕ್ಷಿಯ ಸೀರೆಯ ಕಾಯ ಪೋದ್ಯಾ 3 ಹಿರಣ್ಯಾಕ್ಷನನುಜ ತರಳನ ಬಾಧಿಸೆ ಥೋರ ಕಂಬದಿ ಒಡೆದು ನರಮೃಗ ರೂಪನಾಗಿ ಪೋದ್ಯಾ 4 ನೀರಡಿಸಿ ಗಜರಾಜ ಸರೋವರಕೆ ಬರಲು ನಕ್ರ ಪಿಡಿದೆಳೆಯೆ ಕಾಯ ಪೋದ್ಯಾ 5 ವರವೇದ ಶಾಸ್ತ್ರ ತೊರದು ಪರಮ ನೀಚಳ ಕೂಡಿ ಮರಣ ಕಾಲದಲ್ಲಜಮಿಳ ನಾರಗನೆಂದು ಕರೆಯೆ ಪೋದ್ಯಾ 6 ಕರುಣಿ ವಿಜಯ ರಾಮಚಂದ್ರವಿಠಲ ಅವರ ಸರಿ ನಾನಲ್ಲವೊ ತವ ಚರಣ ಸೇವಕರ ಸೇವಕನೊ 7
--------------
ವಿಜಯ ರಾಮಚಂದ್ರವಿಠಲ
ಯಾಕೆಲೋ ರಂಗಾ | ನಿನ್ನರಸಿಯೊಳುಮುನಿದಿರುವೆ | ಲೋಕವೀರೇಳು ರಕ್ಷಿಪ ಮುದ್ದು ರಂಗಾ ಪ ನಾಲ್ಕನೆಯ ಅವತಾರದಲಿ ಉಗ್ರವಾಗಿರೆ | ಆ ಕಮಲಜ ಮುಖ್ಯ ಬೆದರುತಿರಲು | ಲಕುಮಿ ತಾಕಂಡು ತೊಡೆಮೇಲೆ ಕುಳ್ಳಿರಲು | ಈ ಲೋಕದೊಳು ಶಾಂತನೆನಿಸಿದಳೊ ನಿನ್ನರಿಸಿ 1 ಗುಂಜೆಯಮಾಲೆ ಕೊರಳಿಗೆ ಹಾಕಿ ಗೋವಳರ | ಎಂಜಲ ತಿನುತ ಗೋಗಳ ಕಾಯುತಿರಲು | ಕಂಜನಯನೆಯು ಬಂದು ಸಕಲ ಶಿರಿಯಿಂದಲಿ | ರಂಜಿಸಿದಳೊ ಜಗದೊಳಗೆ ನಿನ್ನ ಅರಿಸಿ 2 ಇಂತರಿದು ನಾನಾಪರಿಯಿಂದ ನಿನ್ನ ಮೇಲೇ | ಸಂತತ ಉಪಕಾರ ಮಾಡಿರೆ ನೀನು | ಕಂತುಮಾತೆಯ ತಪ್ಪು ನೋಡುವರೇನೋ | ಆ- ನಂತನೇ ಏಳು ಮಹೀಪತಿನಂದನೊಡೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾತಕವನಿಯೊಳ್ ಜನಿಸಿದೆ ನಾನು ಸಾರ್ಥಕೇನು ನಾನು ಕೋತಿ ಸಾರ್ಥಕೇನು ಪ ಶರಧಿ ಹಾರಿ ಉರಿವಿಲಂಕೆಯನರಿವೆನೇನೊ ವಾರ್ತೆ ತಿರುಗಿ ಮಾರ್ಗವ ಮಾಡಿ ಮಾತೆಯ ತರುವೆನೇನೊ 1 ಕಿತ್ತು ಸಂಜೀವನವ ಬೆಟ್ಟಲ್ಲಿರಿಸುವೆನೇನೊ ರಾಮ- ರ್ಹತ್ತಿಸ್ವಾಹನನಾಗಿ ಖ್ಯಾತಿಪಡೆವೆನೇನೊ 2 ಇಂದಿರೇಶ ಕೊಡಲು ಪದವಿ ಒಲ್ಲೆಂಬೆನೇನೊ ರಾಮ- ರೆಂಜಲೆಲೆಗ್ಹಾರೈಸಿ ಕದ್ದೊಯ್ದುಂಬೆನೇನೊ 3 ಮುನ್ನ ಹರಿಯ ಸೇವೆಗೆಂದು ಜನಿಸಿದೆನೇನೊ ಧರೆಯೊಳ್ ಧರ್ಮ ಮೀರದೆ ನಡೆದು ಖ್ಯಾತಿ ಪಡೆವೆನೇನೊ 4 ರಾಜಸೂಯಯಾಗಾಶ್ವಮೇಧ ಸಾಧಿಸುವೆನೇನೊ ರಾಜ್ಯ ಭೇದಿಸಿ ಶತ್ರುಗಳಿಗೆ ಭಯವ ತೋರುವೆನೇನೊ 5 ಕ್ಲೇಶಮನಕಿಲ್ಲದೆ ವನವಾಸ ಸಹಿಸುವೆನೇನೊ ಅಜ್ಞಾತ- ವಾಸೊಂದುಕ್ಷಣ ಪರಿಯಂತರ ಚರಿಸುವೆನೇನೊ 6 ಭಿಕ್ಷೆತನಕೊಂಬೊ ಸಜ್ಜನರಿಗೆ ನಮಿಸುವೆನೇನೊ ಬೋರೆ- ವೃಕ್ಷಮೂಲದಲ್ಲಿ ಆವಾಸ ಬಯಸುವೆನೇನೊ7 ಪಾದಕ್ಕೆರಗುವೆ ಪ್ರಾಣೇಶ ನೀ ಪಾಲಿಸುವ್ಯೇನೊ ಜ್ಞಾನ ಆದಿಮೂರುತಿ ವೇದವ್ಯಾಸನ ಒಲಿಸುವೆನೇನೊ 8 ಬಿಟ್ಟು ಚಲಿಸದೆ ನಿನ್ನಲ್ಲೆ ಮನಸಿಟ್ಟೇನೇನೊ ವಾ- ಸಿಷ್ಠ ಭೀಮೇಶಕೃಷ್ಣನ ಭಜಿಸುತ್ತಿರುವೆನೇನೊ 9
--------------
ಹರಪನಹಳ್ಳಿಭೀಮವ್ವ
ರಕ್ಷಿಸೆನ್ನನು ಶಾರದಾಂಬೆ ನೀನುಪಕ್ಷಿವಾಹನ ಸುತ ಮನಃಪ್ರತಿಬಿಂಬೆ ಪಆದಿಮಧ್ಯಾಂತರ'ತಳೆ ಅನಾದಿ ವಸ್ತು'ನಲ್ಲಿ ಭೇದರ'ತಳೆವಾದಿಜನರಿಗಗೋಚರಳೆ ನಿನ್ನ ಪಾದವೆ ಗತಿಯೆಂದರಾದರಿಸುವಳೆ 1ಚಿದ್ರೂಪೆಯಾಗಿಪ್ಪೆ ನಿಜದಿ ಹರಿ ಮುದ್ರಿತೆಯಾಗಿ ನಾದದಿ ತೋರ್ಪೆ ಮುದದಿ ಇದ್ದು ನೀ ಚಕ್ರಸಪ್ತಕದಿ ನಾಲ್ಕ ಹೊದ್ದಿ ನಾಮವನದ ಪ್ರPಟಿಪೆ ಕ್ರಮದಿ 2ಪರವೆಂದು ನಾಭಿಯಲಿರುವೆ ಮತ್ತೆ ಮೆರೆವೆ ಹೃದಯದಲ್ಲಿ ಪಶ್ಯಂತಿ ಭಾವೆಕೊರಳಲ್ಲಿ ಬಿಡದಿರುತಿರುವೆ ಮಧ್ಯಮೆವರ ನಾಮ ವೈಖರಿುಂದ ತೋರಿಸುವೆ 3ಗೀತೆ ಭಾಗವತರೂಪಿನಲಿ ನೀನು ಮಾತೆಯಂದದಲರ್ಥಗಳನು ಪ್ರೀತಿಯಲಿ ಮಾತು ಬೋಧಿಸಿ ಪರಮನಲಿ ನಿತ್ಯ ಪ್ರೀತಿಯನುಂಟು ಮಾಡಿದೆ ಮನಸಿನಲಿ 4ಮಂದಬುದ್ಧಿಯ ನೆರೆ ಬಿಡಿಸು 'ಂದೆ ಬಂಧಿಸಿ ಬಂದಕರ್ಮವ ಕಡೆಗೊಳಿಸುತಂದೆ ಕೃಷ್ಣನ ಮುಂದೆ ನಿಲಿಸು ುನ್ನೂ ಸಂದೇಹವೇಕೆ ನೀನೇ ಬಂದು ನೆಲಸು 5ತೋರಿಸು ಮತಿಗೆ ಜ್ಞಾನವನು ಇದು ಜಾರದಂದದಲರ್ಥಗಳನು ಪ್ರೀತಿಯನುಸೇರಿ ಚಿತ್ತದಲಿನ್ನು ನೀನು ಮಂದ ಬಾರದ ಹಾಗೆ ಮಾಡೆನ್ನ ಮುಕ್ತನನು 6ಕರುಣಾಪೂರಿತದ್ಟೃುಂದ ನಿನ್ನ ಚರಣದಲಿಂಬಿಟ್ಟು ಕೊಳಲದರಿಂದನೆರೆ ಧನ್ಯನಹೆನು ನಿನ್ನಿಂದ ಕೂಡೆ ತಿರುಪತಿ ವೆಂಕಟನೊಲವದರಿಂದ 7ಓಂ ಕಮಲಾನಾಥಾಯ ನಮಃ || 2 ||ಗುರುಸ್ತುತಿಗಳು:
--------------
ತಿಮ್ಮಪ್ಪದಾಸರು
ರಂಗನಾಯಕಿಗಾರತೀ ಅಂಗನೆಯರು ಬೆಳಗಿರೆ ಅಂಗಜನಜನನಿಗೆ ಮಂಗಳಗಾತ್ರೆಗೆ ಮಂಗಳವೆನ್ನಿರೆ ಪ. ಪ್ರೇಮಮಯ ಸ್ವರೂಪೆಗೆ ರಾಮಣೀಯಕ ಮೂರ್ತಿಗೆ ಪ್ರೇಮತಳೆದಾಮೋದದಿಂ ಕಾಮಿತವೀಯೆನುತಾ ನಮಿಸುತ 1 ಮಾತೆಯೇ ಪರದೈವವು ನೀತಿತಾನಿದು ಸತ್ಯವು ವಾತಾತ್ಮಜ ಸಂಸೇವಿತೆ ಸೀತೆಯ ಜಗನ್ಮಾತೆಯೆನ್ನುತ 2 ಕಾಂತ ಶೇಷಗಿರೀಶನ ಅಂತರಂಗದ ದಯೆಯೆನೆ ಇಂತೆಮ್ಮ ಸುಸ್ವಾಂತರ್ಕಳೆಂದಂತೆಸಗುವಂತ ಶ್ರೀಕಾಂತೆಯೆ ತಾನೆನೆ3
--------------
ನಂಜನಗೂಡು ತಿರುಮಲಾಂಬಾ
ರಮಣಿ ಕೇಳೆಲೆ ಮೋಹನ ಶುಭಕಾಯನ ಅಮರ ವಂದಿತ ರವಿಶತಕೋಟಿ ತೇಜನ ವಿಮಲ ಚರಿತ್ರದಿ ಮೆರೆವ ಶ್ರೀ ಕೃಷ್ಣನಕಮಲವದನೆ ನೀ ತೋರೆ ಪ ಬಾಯೊಳಗಿಹಳ ಗಂಡನ ನಿಜ ತಮ್ಮನತಾಯ ಪಿತನ ಮಡದಿಯ ಧರಿಸಿದನಸ್ತ್ರೀಯಳ ಸುತನ ಕೈಯಲಿ ಶಾಪಪಡೆದನದಾಯಾದಿಯ ಮಗನಸಾಯಕವದು ತೀವ್ರದಿ ಬರುತಿರೆ ಕಂಡುಮಾಯಾಪತಿ ಭೂಮಿಯನೊತ್ತಿ ತನ್ನಯಬೀಯಗನ ತಲೆಗಾಯಿದಂಥರಾಯನ ಕರೆದು ತೋರೆ 1 ನಾಲಗೆ ಎರಡರವನ ಭುಂಜಿಸುವನಮೇಲೇರಿ ಬಹನ ತಂದೆ ಇಹ ಗಿರಿಯನುಲೀಲೆಯಿಂದಲಿ ಕಿತ್ತೆತ್ತಿದ ಧೀರನಕಾಳೆಗದಲಿ ಕೊಂದನಲೋಲಲೋಚನೆಯ ಮಾತೆಯ ಪುತ್ರನಣುಗನಮೇಲು ಶಕ್ತಿಗೆ ಉರವನಾಂತು ತನ್ನವರನುಪಾಲಿಸಿದಂಥ ದಾತನಹ ದೇವನಲೋಲೆ ನೀ ಕರೆದು ತೋರೆ 2 ಉರಿಯೊಳು ಜನಿಸಿದವನ ನಿಜ ತಂಗಿಯಸೆರಗ ಪಿಡಿದ ಖಳನಣ್ಣನ ತಂಗಿಯವರನ ತಲೆಯನು ಕತ್ತರಿಸಿದ ಧೀರನಗುರುವಿನೊಳುದಿಸಿದನಶರವ ತಪ್ಪಿಸಿ ತನ್ನ ದಾಸರ್ಗೆ ಅನುದಿನಕರೆದು ವರವನಿತ್ತು ಮನ್ನಿಸಿ ಸಲಹುವಉರಗಗಿರಿಯ ವೆಂಕಟಾದಿಕೇಶವನ ಗರತಿ ನೀ ಕರೆದು ತಾರೆ 3
--------------
ಕನಕದಾಸ
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ಲಾಲಿತ್ರಿ ಗುಣಗಾತ್ರ ಲಕ್ಷ್ಮಿಕಳತ್ರಾ ಲಾಲೀ ಪ ನೀರೊಳಗೆ ಮನೆಯು ಮಾಡಿಓಡ್ಯಾಡೀ | ಕೋರೆಯನೆ ಮಸೆದು ಭೂಮಿಗೆ ಕಡೆದಾಡೀ ಮೋರೆಯನು ಮುಚ್ಚಿಕೈಕಾಲು ತೂಗ್ಯಾಡೀ ಘೋರ ರೂಪವ ಧರಿಸಿ ಬಲಿದಾನವನೆ ಬೇಡೀ 1 ಕೊಡಲಿಯನು ಪಿಡಿದು ಮಾತೆಯ ಶಿರವನೇ ಒಡೆದೂ ಮಡದಿಗೋಸ್ಕರ ದಶಶಿರನ ಶಿರವತರಿದೂ ತುಡುಗ ತನದಿ ಮೊಸರು ಗಡಿಗೆಗಳ ಒಡೆದೂ ಮಡದಿಯರ ವ್ರತಭಂಗ ಮಾಡಿದೆಯೊ ಪಿಡಿದೂ 2 ಹಯವನೇರಿದ ಹರಿಯು ಬಹುಜನರ ಪೊರೆಯೇ ಚೆಲುವ ಮೂರುತಿ ತೊಟ್ಟಿಲೊಳು ಮುದ್ದು ಸುರಿಯೇ ಪರಮ ಪುರುಷ ಸದ್ಭಕ್ತರ ಸಿರಿಯೇ ಪವಡಿಸೋ ನರಸಿಂಹ ವಿಠಲಾ ಧೊರಿಯೇ ಲಾಲೀ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಲೋಕಕ್ಕೆ ನೀ ತಾಯಿ ಲೋಕಕ್ಕೆ ನೀ ತಂದೆ ಸಾಕುವಾಕೆಯೆ ನೀನು ಲೋಕಕ್ಕೆ ನೀ ತಾಯಿ ಪ ಬೇಸರಿಸಿ ಧರಿಸಿದಳು ಜನನಿ ಎನ್ನನÀು ದಶ- ಮಾಸ ಗರ್ಭದೊಳಿದ್ದು ಬಹಳ ಬಳಲಿದೆನು ಹೇಸಿಕೆಯ ವಿಣ್ಮೂತ್ರ ರಾಶಿಯೊಳುಗುದಿಸಿದರೆ ಆಸುರದಿ ಕೈಯೆತ್ತಿ ಪಿಡಿದು ರಕ್ಷಿಸಿದೆ1 ಮಲ ಮೂತ್ರ ಮೈಲಿಗೆಯ ಮೈಯೊಳಗೆ ಧರಿಸಿದರು ತಿಲ ಮಾತ್ರ ಹೇಸಿದೆಯ ಎನ್ನೊಳಗೆ ನೀನು ಜಲಜಮುಖಿ ಎನ್ ತಾಯಿ ಎಲೆಯ ಓಗರವಿಟ್ಟು ತೊಳೆದ ಹಸ್ತದಿ ಎನಗೆ ಕೊಳೆಯನಿಕ್ಕಿದಳು 2 ಮಗುವೆಂದು ಯೋಚಿಸದೆ ಉಗುಳುತ್ತ ಎಂಜಲನು ಒಗೆದು ಬೀಸಾಡಿದಳು ಎಡದ ಹಸ್ತದಲಿ ಜಗಳವಾಡಲು ಪಿತನು ಮಗನ ಮೋಹದ ಮೇಲೆ ತೆಗೆಯಬಾರದೆ ಮಲವನೆಂದು ಜರೆÀದಪಳು3 ಪಡೆದ ತಾಯ್ತಂದೆಗಳು ಅಡಗಿ ಹೋದರು ಎನ್ನ ಬಿಡದೆ ಸಲಹಿದೆ ನೀನು ಪೊಡವಿ ದೇವತೆಯೆ ಕಡೆಗಾಲದೊಳು ಕೈಯ ಪಿಡಿದು ರಕ್ಷಿಸದೆನ್ನ ಒಡಲ ದುಃಖವ ನೋಡಿ ನುಡಿಯದಿರಬಹುದೆ 4 ಬಲವಾಗಿ ಕೈವಿಡಿದೆ ವರಾಹತಿಮ್ಮಪ್ಪನಿಗೆ ಗೆಲವಿಂದ ಭೂರಮಣನೆನಿಸಿ ಮೆರೆವ ಜಲಜನಾಭನೆ ಎನ್ನ ಪಿತನು ಮಾತೆಯು ನೀನು ಸುಲಭದೊಳು ಮೈದೋರು ಫಲಿತವಹ ಪದವ 5
--------------
ವರಹತಿಮ್ಮಪ್ಪ
ಲೋಕನೀತಿಯ ಹಾಡುಗಳು ಆರು ಹಿತರಾದಾರು ಈ ವಿಶ್ವದೊಳಗೆ ಕೃತಿ ಹೊರತು ಪ ಪಿತನಲ್ಲ ಸುತನಲ್ಲ ರತಿಯಲ್ಲ ಸುತೆಯಲ್ಲ ಅತಿ ಪ್ರೀತಿಯಿಂ ಪೊರೆದ ನಿಜಮಾತೆಯಲ್ಲಾ ಸುತನಪೇಕ್ಷಿಸಿ ಹೆದರಿ ಅಜಮಿಳನು ಕರೆಯಲ್ಕೆ ಪತಿತ ಪಾವನ ಹರಿಯ ನಾಮ ಹಿತವಾಯ್ತು 1 ಧನವಲ್ಲ ಸಿರಿಯಲ್ಲ ಬಹು ಬೆಳೆದ ಮೈಯಲ್ಲ ಹಣ ರಾಶಿ ಗಳಿಸುವ ದುರ್ಬುದ್ಧಿಯಲ್ಲ ಮನ ಮತ್ಸರಗಳಲ್ಲ ಕಾಮಕ್ರೋಧಗಳಲ್ಲ ತನುವಲ್ಲ ಡಂಬರದ ವೇದಾಂತವಲ್ಲ2 ತರಳನಾಗಿಹ ಧೃವಗೆ ತರುಣ ಪ್ರಲ್ಹಾದನಿಗೆ ಕರಿರಾಜ ಹನುಮಾದಿ ನಿಜ ಭಕ್ತರಿಂಗೇ ವರಧರ್ಮ ಪುತ್ರನಿಗೆ ಮಧ್ಯ ಪಾಂಡವನಿಗೇ ಪರಮ ಪತಿವ್ರತಾ ರಮಣಿ ದ್ರೌಪದಿಗೇ 3 ಧರಣಿಯನು ಹೊತ್ತಿರುವ ಆದಿಶೇಷಗೆ ಮತ್ತೆ ನಿರುತವೂ ಭಜಿಸಿದ ಪರಮ ದಾಸರಿಗೆ ಸಿರಿಯರಸ ಶ್ರೀಹರಿಯ ಭಜನೆಯೊಂದುಳಿದು 4 ಜನ್ಮಬಂಧವ ನೀಗಿ ಪರಮ ಪದವಿಯ ಕೊಡುವ ಸನ್ನುತವು ನಿಜ ಸೌಖ್ಯವನ್ನು ಕರುಣಿಸುವ ಪ್ರಾಣಿಯಲಿ ಆತ್ಮನಲಿ ಶ್ರಧ್ಧೆ ಹುಟ್ಟಿಸುವಂಥ ಚನ್ನಕೇಶವ ಸ್ವಾಮಿ ಭಕ್ತಿಯೊಂದುಳಿದು 5
--------------
ಕರ್ಕಿ ಕೇಶವದಾಸ
ಲೋಕಮಾತೆಯೆ ದಯಮಾಡೆ ತಾಯೆ ಪರಿ ಪೂಜಿಪೆ ಶ್ರೀಪತಿಯ ಸತಿಯೆ ಪುಲ್ಲನಾಭನ ಕೂಡಿ ಮೆಲ್ಲಡಿ ಇಡುತಲಿ ಉಲ್ಲಾಸದಿಂದಲಿ ಬಂದು ಕಾಯೆ ತಾಯೆ 1 ನಿತ್ಯ ಮಂಗಳನಾಗೆ ಅಚ್ಚುತನರಾಣಿ ನಿಚ್ಚದಿ ಭಕ್ತಿ ಜ್ಞಾನವಿತ್ತು ಕಾಯೆ ತಾಯೆ 2 ವಕ್ಷಸ್ಥಳದಲಿ ನಿಂತೂ ಕಾಯೆ ತಾಯೆ ಪಕ್ಷಿವಾಹನ ರುಕ್ಮಿಣೀಶ ವಿಠಲನ ರಾಣಿ 3
--------------
ಗುಂಡಮ್ಮ
ವನಜನೇತ್ರೆ ಕನಕಗಾತ್ರೆ ಅನುವಿನಿಂ ಬಾ ಮಿತ್ರೆ ಪ. ವಿನಯದಿಂದ ಜನಕ ಸಾರುವ ಕೋಲನಾಡುವ ಅ.ಪ. ಆರ್ಯಮಾತೆಯ ಆರ್ಯಧರ್ಮದ ಸಾರವರಿಯುವ ವೀರಮಾತೆಯ ಭೂರಿಕೀರ್ತಿಯ ಪಾಡಿಸುಖಿಸುವ 1 ಬೇಗನೇಳಿರೆ ಭಾಗ್ಯೋದಯಮದೀಗ ನೋಡಿರೇ ಬೀಗಿಮಲಗುವ ರೋಗವುಳಿದು ಸರಾಗದೆ ಪಾಡಿರೇ 2 ಅವನೀಮಾತೆಯ ಭವಿತವ್ಯತೆಗೆ ತವಕಗೊಳ್ಳುತ 3 ಶುದ್ಧರಾಗಿ ತಿಲಕತಿದ್ದಿ ವೃದ್ಧರಂ ನಮಿಸಿರಿ4 ಶ್ರದ್ಧೆಯಿಂ ಕಾರ್ಯಸಿದ್ಧಿಗೊಯ್ಯಿರಿ ಸಿದ್ಧಾರ್ಥರೆನಿಸಿರಿ ಸದ್ಧರ್ಮ ದೀಕ್ಷಾಬದ್ಧರಾಗಿ ಸುಭದ್ರವಿಳೆಗೊದವಿರಿ5 ಅರಸರನ್ನು ಸರಸದಿಂದ ಹುರುಡಿಸಿರಿನ್ನು ಪುರುಷರೆನ್ನಿಸಿ ಕಾರ್ಯಮೆಸಗುವ ತೆರನ ತೋರಿಸಿ 6 ದೇಶದೇಳ್ಗೆಯೊಳಾಸೆಯಿರಿಸಿ ಲೇಸನೆಸಗಿರಿ ದೋಷಹರಣ ಶೇಷಗಿರೀಶಗೆ ಮೀಸಲಿರಿಸಿರಿ7
--------------
ನಂಜನಗೂಡು ತಿರುಮಲಾಂಬಾ
ವಾ - ರಿಜ - ನಿಲಯೇ - ಕ್ಷೀರವಾರಿಧಿ - ತನಯೆ ಪ ಭವ ಭಾರ ಕಳೆಯುವೇ ಅ.ಪ. ಪತಿ ಪ್ರೀಯೆ ತ್ರೈಗುಣಕಾರ್ಯ ಪ್ರವರ್ತಕೆ ಕಾಯುವುದೆನ್ನ1 ನಿತ್ಯಾ - ಅನಿತ್ಯಾ ಜನಕೆ - ಆಧಾರಳೆಮುಕ್ತಾ - ಮುಕ್ತಾವಿನುತೆ ||ವ್ಯಕ್ತಾ ಅವ್ಯಕ್ತಳೆ - ಗುಪ್ತ ಮಹಿಮೆ ಜಗವ್ಯಾಪ್ತೆ ನಿರ್ಲಿಪ್ತಳೆ - ಭೃತ್ಯಾಭಿಷ್ಟದೆ 2 ಅರಿ ವೃತ್ತಿಗಳನು ಹರಿಸುತ್ತಲೆನ್ನ ತವ - ಭೃತ್ಯನೆಂದೆನಿಸೇ 3 ಪೊಂಬಸಿರ - ಮಾತೆಯೇ - ಕೊಡು ಪತಿಹಂಬಲದ - ನೀತಿಯೇ ||ಉಂಬುಡುವೋ ಕ್ರಿಯ - ಬಿಂಬ ಮಾಡಿಸೆ ಪ್ರತಿಬಿಂಬಕುಂಟೆಂಬುವ - ಬಿಂಬ ಕ್ರಿಯಜ್ಞೆ 4 ಸಿಂಧು ಸತಿ 5
--------------
ಗುರುಗೋವಿಂದವಿಠಲರು