ಒಟ್ಟು 163 ಕಡೆಗಳಲ್ಲಿ , 51 ದಾಸರು , 154 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯದು ಕುಲಾಂಬುನಿಧಿ ಪೀಯೂಷಕ್ಷಕರ ಪಂಚಸಾಯಕಾನಂತ ಕಮನೀಯ ರೂಪಾ ಕಮಲಾಯತಾಕ್ಷನೆ ಬ್ರಹ್ಮ, ವಾಯು, ಸುರಮುನಿ ಮುಖ್ಯಧ್ಯೇಯ ವಿಷ್ಣೋ ಪ ಗೋತ್ರಾರಿ ಪುತ್ರನಿಜಮಿತ್ರ ಸುಪವಿತ್ರ ಚಾ ಕಳತ್ರ ಶುಭಗಾತ್ರಗತಿ ಸತ್ರತ್ರಿನೇತ್ರನುತ ಸಕಲಜಗ ಸೂತ್ರ ನೋಟಕ ತೋತ್ರವೇತ್ರ ಪಾಣೆ 1 ಭವ ಭವ ಭಂಗ ವರಗೋಪಾಂಗನಾ ಅಂಗ ಸಂಗಲೀಲಾರತ ಭುಜಂಗ ಪರಿಯಂಕ ಸುರ ತುಂಗ ಗಂಗಾಜನಕ ಸರ್ವಾಂತರಂಗ ಹರಿ ಮಂಗಳಾತ್ಮಕ ತಿರುವೆಂಗಳೇಶಾ 2 ನಂದಕಂದ ಶ್ರೀ ಮುಕುಂದ ದುರಿತಾಂಧ ಅರ ವಿಂದಭಾಂಧವ ದಿತಿ- ಜವೃಂದ ವ್ಯಾಳಖಗೇಂದ್ರ ತಂದೆ ಮಹಿಪತಿ ನಂದನ ಪ್ರಿಯ ಗೋವಿಂದ ಆ ನಂದ ಕಂದನೆ ಸಿಂಧುಶಯನ ದೇವಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಕ್ಷಿಸು ಪರಮೇಶ್ವರ ದೇವ ಸಂ- ರಕ್ಷಿಸು ಪರಮೇಶ್ವರ ದೇವ ಪ ಗಂಗಾಧರ ಜಟಾಜೂಟ ಮನೋಹರ ರಂಜಿತ ಕೇಶಾಲಂಕೃತ ಶಶಿಧರ ಭಸ್ಮೋದ್ಧೂಳಿತ ಭವ್ಯ ಶರೀರ ಆಬ್ಜ ಪ್ರಭಾಕರ ಅನಲ ತ್ರಿನೇತ್ರ ಸದ್ಯೋಜಾತನೆ ಪರಮ ಪವಿತ್ರ 1 ಮಂಡಿತ ಹಾಸೋನ್ಮುಖ ಮುಖ ಮಂಡಲ ಕುಂಡಲಿ ಭೂಷಿತ ಕರ್ಣಕುಂಡಲ ವಿಷಧರ ಕಂಧರ ಕಂಧರ ಮಾಲ ಭಕ್ತಾ ಭಯಕರ ಕರಧೃತ ಶೂಲ ವಾಮದೇವ ದೇವೋತ್ತಮ ಲೋಲ 2 ಘೋರ ಕಪಾಲ ಖಟ್ವಾಂಗ ಡಮರುಗ ಅಕ್ಷಮಾಲ ಪಾಶಾಂಕುಶ ಸಾರಗ ಖಡ್ಗ ಧನುಶ್ಯರ ಖೇಟಕ ಭುಜಗ ಸಾಯಕ ಧೃತಕರ ಜಗ ದೇಕವೀರ ಅಘೋರನೆ ಸುಭಗ 3 ಗಜ ಶಾರ್ದೂಲಾ ಜಿನಧರ ಸದ್ಗುಣ ಅಣಿಮಾದ್ಯಷ್ಟೈಶ್ವರ್ಯ ನಿಷೇವಣ ಅಂಕಾರೋಹಿತ ಅಗಜಾ ವೀಕ್ಷಣ ಸನಾಕಾದ್ಯರ್ಚಿತ ಪಾವನ ಚರಣ ತತ್ಪುರಷನೆ ನಮೋ ಕರುಣಾಭರಣ 4 ರುದ್ರಾದಿತ್ಯ ಮರುದ್ಗಣ ಸೇವಿತ ನಂದೀಶಾದಿ ಪ್ರಮಥಗಣ ವಂದಿತ ನಾರದ ಮುಖ ಸಂಗೀತ ಸುಪ್ರೀತ ನಿಗಮ ಪರಾರ್ಥ ದಾತ 5
--------------
ಲಕ್ಷ್ಮೀನಾರಯಣರಾಯರು
ರಕ್ಷಿಸೋ | ಬೇಗನೆ ಬಂದು ರಕ್ಷಿಸೊ | ಪ ಕುಕ್ಷಿನಂಬಿದೆ ಕಲ್ಪಭೂಜ | ಆಹಾ ಪೇಕಿಸದೆನ್ನನು ಈಕ್ಷಿಸಿ ಕರುಣದಿ ಅ.ಪ ಕೇಶವ ಖಳಕುಲ ನಿಧನ | ನರ ಕೇಸರಿ ಶ್ರೀಹಯವದನ | ಗುರು ಪಾದ ನಳಿನ | ಸಮೀ ರಾಶನ ಪರ್ಯಂಕಶಯನ | ಆಹಾ ದಾಶರಥಿಯೆ ಭವದಾಶೆ ಬಿಡಿಸಿ ತವ | ದಾಸ ಜನರ ಸಹವಾಸದೋಳಿಟ್ಟನ್ನ 1 ಪಶುಪಾಲ ಮಿಸುನೀಯ ವಸನ | ಧ್ರುವ ಪಶುಪತಿ ಸುತ ಗುಣಪೂರ್ಣ | ದುಷ್ಟ ಶಿಶುಪಾಲ ಮದವಿಭಂಜನ | ಪಾಹಿ | ನಿರಂಜನ | ಆಹಾ | ವಸುಗರ್ಭನ ಪೆತ್ತ ಕುಸುಮದಳೇಕ್ಷಣ | ವಸುಮತಿಯೊಳು ಎನ್ನ ಪಿಸುಣನೆಂದೆನಿಸದೆ 2 ನಾಶರಹಿತ ವನಮಾಲ | ಧರ ಶ್ರೀಶಾಮಸುಂದರವಿಠಲ | ಗುಡಾ ಕೇಶ ವರದ ಸುಶೀಲ | ಪಾಕ | ಶಾಸನಾನುಜ ಗಾನಲೋಲ | ಆಹಾ | ಪೂಶರಪಿತ ಸ್ವಪ್ರಕಾಶ ಪರಮ | ವಿ ಲಾಸವ್ಯಾಸ ಮಹಿದಾಸ ಲೋಕೇಶನೆ 3
--------------
ಶಾಮಸುಂದರ ವಿಠಲ
ರಥವನೇರಿದ ರಥಗಾತ್ರ ಪಾಣಿ | ರಥಪತಿ ದಶರಥ ಸುತ ದಶರಥ ನೃಪ ಭಾಗೀ | ರಥಿ ವಿನುತಾ ಸು | ರಥನಯ್ಯ ಮನೋರಥ ದೇವ ಪ ಕರಿ ಭಯಂಕ ಹರ ಹರಿಣಾಂಕಾ | ಕಿರಣಶತ ಧಿಕ್ಕರಿಸುವ ದೇವಾ || ವರಮಣಿ ಭಕ್ತ ವರದಾಯುದಧಿ ತುರಗವು | ಪರತರ ತಮ ತರರಸ | ಪರಮ ಮಂಗಳ ಪುರುಷ ಪ್ರಧಾನಂ | ಪ್ರವಿಷ್ಠ ಭಾ | ಸುರ ಕೀರ್ತಿಹರ ನಿರುತ ಪ್ರದರು ಸುರಪತಿ 1 ಮಣಿಪ್ರಚುರ ಮುತ್ತಿನ ಮುಕುಟ ಸು | ಫಣಿ ಕಸ್ತೂರಿ ಕಂಕಣ ಕೇಯೂರ ಕಾಂ| ಕೌಸ್ತುಭ ಸೂರ್ಯನಗೆಲ್ಲ್ಲೆ | ವನಮಾಲೆ ಹರಿಮಣಿ ಪದಕ ಪಾ | ವನ ಪೀತಾಂಬರ ಮಿನಗುವ ಕಾಂಚಿ | ಝಣ ಝಣ ಮಹಾ | ಧ್ವನಿ ಚರಣ ಭೂಷಣವಾಗಿಯೂ ಮಾ | ನಿನಿ ಕೂಡಾ 2 ಎತ್ತಿದ ಶ್ವೇತಾತಪತ್ರ ಚಾಮೀಕರ | ವಿತ್ತ ನಭ ತುಳುಕುತ್ತಲಿರೆ ಧ್ವಜ | ಮಾತ್ರ ಬಂದಾಗಿ ತೂಗುತ್ತಿರಲು | ಸುತ್ತಲು ಊದುವ ತುತ್ತುರಿ ಶಂಖ | ವತ್ತಿ ಬಾರಿಸುವ ಮತ್ತೆ ವಾದ್ಯಗಳು | ತುತ್ತಿಸುವ ಮುನಿ | ಉತ್ತಮ ಜನ ಬಾ | ಗುತ್ತ ವಡನೆ ಬರುತಿರಲು 3 ವಸು ರುದ್ರಾದಿತ್ಯ ವಸುಜನರ ಪಾ | ಲಿಸುವೆನೆಂದು ದರಶನವು ಸರಸಿಜಗದಾಧರಿಸಿಕೊಂಡು ಅಷ್ಟ ರಸ ನಾಮಕ ಹರುಷದಿಂದ | ನಸುನಗುತ ನೀಕ್ಷಿಸಿಕೊಳುಂತ ಆ | ಲಸ ಮಾಡದೆ ರಂ | ಜಿಸುವ ಲೀಲಾಮಾನಸ ವಿಗ್ರಹ ಮೆ | ಚ್ಚಿಸಿದ ಜನರ | ವಶವಾಗಿಪ್ಪ ರಾಕ್ಷಸ ರಿಪು 4 ವನಧಿ ಚಿನ್ಮಯ ಉ | ಭಯಾ ಭಯ ಹಾರೆ | ಪಯೋವಾರಿ ನಿಧಿ | ಶಯನ ಚತುರ್ಬೀದಿಯಲಿ ತಿರುಗಿ | ಪ್ರೀಯದಿಂದಲಿ ಸ | ತ್ಕ್ರಿಯವಂತ ಜಯ ಜಯ ಪ್ರದಾ | ಸಾರಥಿ ನಿ | ರಯ ವಿದೂರ ವಿಜಯವಿಠ್ಠಲ ಸಾ | ಹಾಯವಾಗುವ ಗಿರಿಯ ವೆಂಕಟರಾಯ ಬಂದಾ 5
--------------
ವಿಜಯದಾಸ
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ರಾಮಾನಂದ ವಿಠಲ | ಪ್ರೇಮದಲಿ ಪೊರೆಯೋ ಪ ಭಾಮಿನಿಯ ಮೊರೆ ಕೇಳಿ | ಪ್ರಾರ್ಥಿಸುವೆ ಹರಿಯೇ ಅ.ಪ. ಅನುವಂಶಿಕವಾಗಿ | ಗಾನಕಲೆಯುಳ್ಳವಳುಮೇಣು ಸಂಸ್ಕಾರಗಳು | ಹೊಂದಿಕೊಳ್ಳುತಲೀಈ ನಾರಿ ಯಂಕಿತವ | ಕಾಂಕ್ಷಿಸುತ್ತಿಹಳಯ್ಯಶ್ರೀನಿವಾಸನೆ ಇವಳ | ಬಿನ್ನಪವ ಸಲಿಸೋ 1 ಪತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂಬ ಸ-ನ್ಮತಿಯನೇ ಕರುಣಿಸುತ | ಕಾಪಾಡೊ ಹರಿಯೆಗತಶೋಕ ಗತಿಪ್ರದನೆ | ಹತಮಾಡಿ ಗರ್ವಗಳಸ್ಮøತಿಗೆ ವಿಷಯನು ಆಗಿ | ಸತತ ಪೊರೆ ಇವಳಾ 2 ಮೋದ ಕೊಡು ದೇವಾ 3 ಭವವೆನಿಪ ಅಂಬುಧಿಗೆ | ಪ್ಲವವೆನಿಪ ತವನಾಮಸ್ತವನ ಸಂತತಗೈವ | ಹವಣೆಯಲಿ ವಜ್ರಾಕವಚವನೆ ತೊಡಿಸುತ್ತ | ಭವತಾರ ಕೆಂದಿನಿಸೋಧ್ರುವವರದ ಕರಿವರದ | ಕಾರುಣ್ಯಮೂರ್ತೇ 4 ಛಲದ ಮುನಿ ಅನುಸರಿಸಿ | ಶಿಲೆಯ ಸತಿಯಳ ಮಾಡಿಜಲಜಾಕ್ಷಿ ಜನಕಜೆಯ | ಕೈಯನೇ ಪಿಡಿದೂಇಳೆಯ ಭಾದಕ ಕಳೆದ | ಚೆಲುವಂಗದವ ಸೂರ್ಯಕುಲ ತಿಲಕನೇ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರುದ್ರದೇವರು ಸಾಂಬ ಸದಾಶಿವ | ಸಾಂಬ ಶಿವ ಪ ಶಂಭೋಶಂಕರ | ಶಶಾಂಕಶೇಖರ | ಸಾಂಬ ಶಿವ ಅ. ಪ. ಗಂಗಾಧರ ವರ | ಅಂಗಜ ಮದಹರ | ಸಾಂಬ ಶಿವ || ಸಂಗರಹಿತನೇ ಭು| ಜಗಭೂಷ ವರ | ಸಾಂಬ ಶಿವ 1 ವ್ಯೋಮಕೇಶಭವ | ಭಕ್ತಪರಾಯಣ | ಸಾಂಬ ಶಿವ || ವಾಮದೇವ ಪ್ರಮ | ಥಾಧಿಪ ಶಂಕರ | ಸಾಂಬ ಶಿವ2 ಖಂಡ ಪರಶು ಮಾ | ರ್ತಾಂಡಸಮಪ್ರಭ | ಸಾಂಬ ಶಿವ || ದಂಡಧರ ಹರ | ಮೃತ್ಯುಂಜಯ ಭೂ | ಸಾಂಬ ಶಿವ3 ಜಟಾ ಮಕುಟ ಸುರ | ತಟನೀ ಧರ ವರ | ಸಾಂಬ ಶಿವ || ಸ್ಫಟಿಕಸನ್ನಿಭ | ಖಲತ್ರಿಪುರಾಂತಕ | ಮೃಡ ಸಾಂಬ ಶಿವ 4 ನಕ್ತಂಚರ ಹರ | ಶತ್ರುಭಯಂಕರ | ಸಾಂಬ ಶಿವ || ಭಕ್ತವಶಂಕರ | ಭಜಕಸುಖಂಕರ | ಸಾಂಬ ಶಿವ 5
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು
ವಾಸುದೇವ ತೇ ನಮೋ ನಮೋ ವಾಸವ ವಂದಿತ ನಮೋ ನಮೋ ಪ ಮಾಧವ ಕೃಷ್ಣ ದಾಮೋದರ ಶ್ರೀಶ ಪರೇಶ ವಿಷ್ಣು ಪೀತಾಂಬರ ಈಶ ಮುಕುಂದ ವೈಕುಂಠ ಪರಾತ್ಪರ ಕೌಶಿಕ ಗೌತಮ ಮೌನಿ ಶುಭಂಕರ 1 ಶೌರಿ ಚತುರ್ಭುಜ ಚಕ್ರಧರಾಚ್ಯುತ ವೈರಿ ಭಯಂಕರ ಸಕಲಾಗಮನುತ ಸಾರಸನಾಭ ನೀರೇಜ ಭವಾನತ ಮಾರಜನಕ ರಘುವೀರ ಶಿವಾರ್ಚಿತ 2 ಶ್ರೀಮಹಿತಾಂಗಾ ರಂಗಾ ನಮೋ ನಮೋ ಶ್ರೀಮಣಿಹಾರಾ ರಂಗಾ ನಮೋ ನಮೋ ಶ್ರೀಮುಕುಂದಾ ಶ್ರೀರಂಗಾ ನಮೋ ನಮೋ ಶ್ರೀಮಾಂಗಿರಿ ವರರಂಗಾ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು
ವೆಂಕಟಪತೇಧೀರ | ಮಾಡೋಯನ್ನ ಸಂಕಟ ಪರಿಹಾರ || ಶಂಕರನ ವರ ಬಿಂಕರಕ್ಕಸಂ ಕಳೆದು ನಿ:ಶ್ಯಂಕನಾದ ಪ ನಿಜಾಂಕ ಗುಣಪೂರ್ಣಾಂಕ ನಿನ್ನಯ ಕಿಂಕರರ ಕಿಂಕರನು ನಾನು | ವರದ ಕೋಮಲ ಶುಭಾಂಗ| ಪಾವನಗಂಗ | ಬೆರಳಲಿಪಡೆದರಂಗ ಉರಗಾದ್ರಿ ಸ್ಥಿರನಿವಾಸ || ಶಿರೆಯೆರಗುತಿರುವರು ಮಹಿಮ ನಿನ್ನದು 1 ಅಂಡಜವಾಹನ ಧೋರೆ | ಪುಂಡಲೀಕವರದನೆ | ಗೋಪಾಲನೇ | ಪಾಂಡವರಕ್ಷಕನೆ | ಹಿಂಡು ದೈವರ ಗಂಡ | ವೀರ ಪ್ರಚಂಡ | ಜಗದುದ್ದಂಡ ಮಂಡಲಾಧಿಪ ದೇವ ದೇವ 2 ಪಾಲಸಾಗರ ಶಯನ | ಪಾವನ್ನ | ಪಾಲಿಸೋ ದಾಸರನ್ನ | ಜ್ವಾಲಾ ಹೆನ್ನೆವಿಠಲ | ಭಕ್ತವತ್ಸಲ | ಲಾಲಿತ ಗುಣಶೀಲ | ಪಾಲಿತಾಮರ ಲÉೂೀಲಗೋಪಿ ಬಾಲಾ ಲೀಲಾ ವಿಶಾಲನಾಯಕ | ಮಂಗಮನೋಹರ3
--------------
ಹೆನ್ನೆರಂಗದಾಸರು
ವೈಕುಂಠವಾಸಿ ನಾರಾಯಣಗೆ ನೀಲಕಂಠ ವಿಶ್ವೇಶ್ವರಗೆ ಭಾಳಲೋಚನ ಭವಹಾರಕಗೆ ಮಂಗಲಂ ಜಯ ಮಂಗಲಂ ಪ ವಾಸುಕಿ ಫಣಿವರ ಭೂಷಿತಗೆ ಶೇಷ ಪರೀಯಂಕ ವಾಸನಿಗೆ ಮಂಗಲಂ ಜಯ ಮಂಗಲಂ 1 ಗಿರಿವರ ಬಿರುಳಲಿ ನೆಗಹಿದಗೆ ತರಳೆಗಂಗಾ ಜಲಧಾರನಿಗೆ ಮಂಗಲಂ ಜಯ ಮಂಗಲಂ 2 ಗಜರಾಜನ ಕಾಯ್ದ ಗೋವಿಂದಗೆ ಅಜಪಿತನಾದ ನಾರಾಯಣಗೆ ಮಂಗಲಂ ಜಯ ಮಂಗಲಂ 3 ಶಂಖಚಕ್ರಧರ ಶಂಕರ ಪ್ರಿಯಗೆ ಪಂಕಜಾಂಬಕ ವಿಷ್ಣು ವಲ್ಲಭಗೆ ರಂಗರಕ್ಷಕ ಮಹಾಬಲೇಶ್ವರಗೆ ಮಂಗಲಂ ಜಯ ಮಂಗಲಂ 4
--------------
ಶಾಂತಿಬಾಯಿ
ಶಂಕರನಂದನ ನಮೋ ನಮೋ ಕಿಂಕರಪಾಲಕ ನಮೋ ನಮೋ ಪ ಪಂಕಜಭವನುತ ನಮೋ ನಮೋ ಸಂಕಟ ಪರಿಹರ ನಮೋ ನಮೋ ಅ.ಪ ಓಂಕಾರಪ್ರಿಯ ದಿವ್ಯಶರೀರಾ ಶಂಕರ ಸುಖಕರ ಭವಪರಿಹಾರ ಅಂಕನಾಥ ಸರ್ವೇಶ ಮನೋಹರ 1 ಗಿರಿಜಾನಂದ ಕುಮಾರ ಶರಣಾಗತ ಪರಿವಾರ ವರಕೈಲಾಸ ವಿಹಾರ | ಸುರುಚಿರ ವಜ್ರಶರೀರಾ ಶರವಣಭವ ಭುಜಗೇಶ | ಕರುಣಾಕರ ಜಗದೀಶ ಹರಿಪರ್ಯಂಕ ಪರೇಶ ಮುದಗಾಂಕಿತ ಧೃತಕೋಶ 2 ಚಿಂತಾ ಜಲನಿಧಿ ಭೀಮ | ಸಂತ ಶರಣಜನ ಪ್ರೇಮ ಅಂತರ ಭಯಹರ ಜಗದಭಿರಾಮ ಸಂತಸದಾಯಕ ಮಾಂಗಿರಿಧಾಮ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶಂಕರನಾರಾಯಣ ಸಲಹೊ ಎನ್ನ | ಪಂಕಜ ಪಾರ್ವತಿ ಪ್ರಿಯಾ | ಕಿಂಕರನ ಮೊರೆ ಕೇಳು ಪ ಶಂಖ ಚಕ್ರಪಾಣಿ | ಮೃಗಾಂಕ ಮೌಳಿ ಅಹಿಪರಿ-| ಯಂಕ ರುಂಡಮಾಲಾ ಶ್ರೀ | ವತ್ಸಾಂಕ ಭುಜಗಭೂಷಣ ವಿಷ್ಟು 1 ನಂದಿಗಮನ ಗರುಡಾರೂಢಾ | ಅಂದ ಭಸ್ಮಧರ ಕಸ್ತೂರಿ | ಸಿಂಧು ವೈರಿ 2 ಪೀತಾಂಬರಧರ ಕೃತ್ಯವಾಸಾ | ಜಾತರಹಿತ ಜಾಹ್ನವಿಧರ | ವಿ- ಧಾತ ಜನಕ ತ್ರಿಶೂಲಪಾಣಿ | ವಾತನೋಡಿಯ ಶಿವ ಗೋವಿಂದ 3 ಕೈಲಾಸವಾಸ ವೈಕುಂಠ | ಲೋಲ ಮಹಾಲಿಂಗ ರಂಗಾ | ಜ್ವಾಲನೇತ್ರ ಕಮಲನಯನಾ | ಕಾಲಾ ನೀಲವರ್ಣ ಕಪರ್ವಿ 4 ರಾಜನೊಬ್ಬ ಭೃತ್ಯನೊಬ್ಬ | ಪೂಜ್ಯನೊಬ್ಬ ಮಾಳ್ಪನೊಬ್ಬ | ಮೂಜ್ಜಗೇಶ ವಿಜಯವಿಠ್ಠಲ | ರಾಜ ತಾತ ಈಶ ಮೊಮ್ಮಗ 5
--------------
ವಿಜಯದಾಸ