ಒಟ್ಟು 4612 ಕಡೆಗಳಲ್ಲಿ , 131 ದಾಸರು , 3293 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉ) ಆತ್ಮನಿವೇದನೆ ನೋಡದೆ ತ್ವರದಿ ಪ ಹೆಂಡತಿ ಮಕ್ಕಳ ಭ್ರಾಂತಿಯೊಳನ್ಯರ ದಂಡಿಸಿ ಧನವ ಹರಿಸಿದೆನೋ ಭಂಡತನದಲಿ ಪ್ರಚಂಡನಾದೆನೋ ಹರಿ ಪುಂಡರೀಕಾಕ್ಷನೇ 1 ನಾ ದಿನಗಳೆದೆ ಹೇ ಮಹಾಭಾವನೇ ಪಾಮರನಾದೆ ಎನ್ನ ನೀ ಮಮತೆಯಿಂದಲಿ 2 ಅಟ್ಟಮೇಲೆ ಒಲೆ ನೆಟ್ಟಗುರಿವಂದದಿ ಕೆಟ್ಟ ಮೇಲೆಚ್ಚರ ಹುಟ್ಟಿತೆನಗೆ ನೀ ದಯದಿ 3
--------------
ಹನುಮೇಶವಿಠಲ
(ಉ) ತಾತ್ತ್ವಿಕ ಕೃತಿಗಳು ಪಾರಾಯಣ ಮಾಡಿರೋ ಭವ ಪಾರಾವಾರದೊಳು ತಾರ ಕವಿದು ನೋಡಿರೋ ಪ ನೀರ ಬೊಬ್ಬುಳಿಕೆಯು ತೋರುವ ರೀತಿ ಶ ರೀರ ನಚ್ಚಿರಬೇಡಿರೋ ಧಾರಣಿಯಲಿ ಪೇಳಿರೋ 1 ಸಾಹಸ ಪಡಬೇಡಿರೋ ಬಾಹವೆಂದಿರ ಬೇಡಿರೋ 2 ನೇಹದಿ ನಾರಿಯೊಳು ದೇಹಿ ಸಂಸಾರದೊಳು 3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತ ದಾರಿಯೆಲ್ಲಿಗೆ ಪೇಳಿರೋ 4 ಮಿಂಚಬಾರದು ತನ್ನ ಮಡದಿಯ ಬಾಲರ ಕಂಚು ಕನ್ನಡಿ ಭಾರದೀ ಸಂಚಿತ ದ್ರವ್ಯದಿ ಕೊಂಚವು ಬಾರುದು ಉಗಿ ಸಂಚಿಗೆ ದೇಹವಿದ 5 ಒಲಿದು ಕೊಂಡಾಡುವರು 6 ಅರ್ಥವಿದ್ದವನ ಸಮರ್ಥನೀತನ ಜನ್ಮ ಸಾರ್ಥಕವೆಂಬುವರು ಆರ್ಥವ ಕಳಕೊಂಡು ಸಾರ್ಥನಾಗಲು ಜನ್ಮಸು ವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಿಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು8 ಮರಣ ಪೊಂದುವರು ಕೊರಳನು ಕೊಯ್ಸುವರೋ 9 ಬಂಧುಗಳನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರು ನಿಜ ದಂದುಗಕ್ಕೊಳಗಹರು 10 ಗಂಟು ಕಟ್ಟಿರೆ ಮನದಿ ಗಂಟಲ ಬಿಗಿವಾಗ ನಂಟರಿಲ್ಲವು ಜಗದಿ 11 ತಾಪದಿ ನೆನೆಯುತಿರೆ ಭೂಪನು ನಮ್ಮ ದೊರೆ12
--------------
ವೆಂಕಟವರದಾರ್ಯರು
(ಉ) ಲೋಕನೀತಿ ಕುರಿತ ಕೀರ್ತನೆಗಳು ಏಳಿಸು ನಂಜನನೂ ಬೇಗದೊಳೇಳಿಸು ನಂಜನನೂ ಬಾಳುವ ಮಗನನು ಕೋಳುವಿಡಿದುದು ಯಮನ ನಾಳಿದೊಡೆಯ ವೇಲಾಪುರದರಸಾ ಪ ಪತಿಯನು ನೀಗಿದ ಸತಿಮಾದಮ್ಮನು ಸುತನಿಂ ಬದುಕುವೆನೆಂದೀ ಊರೊಳು ಅತಿ ತಿರಿತಂದೋವುತಲಿದ್ದಳು ಸುತ ಅಚ್ಯುತ ಸಲಹಯ್ಯಾ 1 ಉರಿಯೊಳು ಬಿದ್ದಂತೊರಲಿ ಪೊರಲಿ ವೋ ಹರಿ ಹರಿ ಹರಿ ಯೆಂದುರುಳಿ ಬಡಿದುಕೊಳ್ಳೇ ದುರಿಯಶ ವೊಡೆಯಗೆ ಬರುವುದೆಂದು ನರ ಹರಿ ರಕ್ಷಿಪನೆಂದೊರೆದೆನು ಹರಿಯೆ 2 ಸತ್ತಮಗನ ನೀ ತಂದಿತ್ತುದಿಲ್ಲವೇ ಹೇ ಕತರ್ುೃವೆ ಸಾಂದೀಪೋತ್ತಮನಿಗೆ ಅಂದು ಉತ್ತರೆಯೊಡಲೊಳು ಅತ್ತು ಶಿಶುವು ಸಾ ವುತ್ತಿರಲುಳುಹಿದೆ ಚಿತ್ತಜನಯ್ಯಾ 3 ಇರಿದಪಮೃತ್ಯು ಪೊತ್ತಿರಿದಪವಾದವು ಉರುಳಿದೆ ನೋಡುತ್ತಿರುವರೆ ಸುಮ್ಮನೆ ಅರಿಯದಂತಿರ್ದಡೆ ಪರಿಪಾಲಿಪರಾರು ವರಮೃತ್ಯುಂಜಯ ಕರುಣಾಕರನೇ 4 ಮರಣವನೈದಿದ ತರಳ ನಂಜುಂಡನ ಕರುಣಿಸದಿರ್ದಡೆ ಶಿರವನರಿದು ನಾ ಚರಣದೊಳಿಡುವೆನು ದುರಿತಬಾಹುದು ನಿನ ಗರಿಯದೆ ವೈಕುಂಠವಿಠಲ ಚೆನ್ನಿಗನೇ 5
--------------
ಬೇಲೂರು ವೈಕುಂಠದಾಸರು
(ಉಂಗುರ ಕಳೆದಾಗ ಮಾಡಿದ ಪ್ರಾರ್ಥನೆ) ಬೇಡಿಕೊ ಮೂಢಾ ಬೇಡಿಕೊ ಬೇಡಿಕೊ ಭಕ್ತವತ್ಸಲನಲ್ಲಿ ಭಕ್ತಿ ಮಾಡು ಪೂಜೆಯನು ಯಥಾಮತಿ ಶಕ್ತಿ ದೂಡುತ್ತ ದುರುಳರ ಕುಚಿತ್ತಯುಕ್ತಿ ರೂಢಿವಳಗೆ ಸಂಗ್ರಹಿಸು ವಿರಕ್ತಿ ಪ. ಲಾಭಾಲಾಭ ಜಯಾಪಜಂiÀiಗಳು ಸ್ವಾಭಾÀವಿಕವಾಗಿ ಬಹ ಹಗಲಿರುಳು ನಾ ಭಾಗಿ ವರದನ ಪದ ಪದ್ಮ ನೆರಳು ನೀ ಭಜಿಸಿದ ಮೇಲೆ ಬಾಯೊಳು ಬೆರಳು 1 ಯತ್ನವಿಲ್ಲದೆ ಬಹ ನಷ್ಟಗಳಂತೆ ರತ್ನ ಭಂಗಾರ ಸಿಕ್ಕುವುದ್ಯಾಕೆ ಚಿಂತೆ ನೂತ್ನವಾದ ಮೋಹವನು ಬಿಡು ಭ್ರಾಂತೆ ರತ್ನಗರ್ಭವ ನಂಬಿರುವುದೆ ನಿಶ್ಚಿಂತೆ 2 ಅರಿ ಮಿತ್ರೋದಾಸೀನರಿಲ್ಲವು ಹರಿಗೆ ಸರಿಯಾಗಿ ನಡೆಸುವ ಸರ್ವ ಜೀವರಿಗೆ ಪರ ವಸ್ತು ನೀನೆಂದು ಸೇವೆ ಮಾಳ್ಪರಿಗೆ ಸುರ ವೃಕ್ಷದಂತೆ ಕಾರಣವಾಹ ಸಿರಿಗೆ 3 ಋಣವಿಲ್ಲದೆ ವಸ್ತು ಕ್ಷಣವಾದರಿರದು ಉಣುವ ಭೋಗಗಳೆಂದು ತಪ್ಪವು ನೆರದು ಅಣು ಮಹತ್ತುಗಳಂತರಾತ್ಮನ ಬಿರುದು ಗಣನೆ ಮಾಳ್ಪರ ಕೂಡಿ ನೆನೆ ಮನವರಿದು 4 ಆಶಾ ಪಾಶದಿ ಸಿಕ್ಕಿ ಕೆಡದಿರು ವ್ಯರ್ಥ ಶ್ರೀಶನ ನೆನೆವುದೆ ಸಕಲ ವೇದಾರ್ಥ ಶೇಷಗಿರೀಶನು ಸತ್ಪುರುಷಾರ್ಥ ದಾಸಗೆ ತಾನಾಗಿ ಕೊಡಲು ಸಮರ್ಥ5
--------------
ತುಪಾಕಿ ವೆಂಕಟರಮಣಾಚಾರ್ಯ
(ಊ) ಕ್ಷೇತ್ರವರ್ಣನೆ ಹುಲಿಗನಮೊರಡಿ ಶೇಷಾದ್ರಿಯನು ನೋಡಿರೋ ಸೇವಕಪರಿ ತೋಷಾದ್ರಿಯನು ಕಾಣಿರೊ ಪ ಶೇಷಾದ್ರಿಯನು ನೋಡಿ ದೋಷಾದ್ರಿ ಹುಡಿಮಾಡಿ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ ಚಿನ್ನದಗಿರಿಯಂದದಿ ರಂಜಿಸುವುದು ಬಣ್ಣದೊಳತಿ ದೂರದಿ ಸಣ್ಣದಾಸರು ಗಿರಿ ರನ್ನಪೋಲು ವರ್ಣಹ ಶಯನನ ಕಣ್ಣಲಿ ಕಾಣಿಪ 1 ಬಗೆ ಬಗೆ ವೃಕ್ಷಗಳು ಬನಂಗಳು ಬಗೆ ಬಗೆ ಪಕ್ಷಿಗಳು ಬಗೆ ಬಗೆ ಮೃಗಗಳು ಸೊಗಸಿನೊಳಿರೆ ಬಹು ಬಗೆ ಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು ನಾಮಂಗಳು ಯಗಳದ್ವಯ ಮೆನಲು ಯುಗಮೊದಲೊಳಗೆ ಪನ್ನಗಗಿರಿಯನೆ ತ್ತೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ ವೆಂಕಟನಾಮ ವೀ ಪರ್ವತತಕ್ಕೊದಗೆ ಶ್ರೀಪುಲಗಿರಿಮುಖ ರೂಪನೀಯುಗದೊಳು ಶ್ರೀಪತಿಯುತ್ತ ನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ ದೂರವೆ ಮಂದಿರವು ಚಾರುವಿಮಾನ ಪ್ರಾಕಾರವ ತೋರಿಪ ವಾರಿಜಾಸನ ಪಿತ ವರದ ವಿಠಲನಿಹ 5
--------------
ವೆಂಕಟವರದಾರ್ಯರು
(ಊ) ಗುರುನಮನ ಮುಳುಗಿ ಮೀಯೊ ಮನುಜ ಪ ದುರಿತ ಹರಿಸಿ ಸುಸ್ಥಿರ ಪದ (ಕರುಣಿಸುವಂಥ) ಅ.ಪ ಸ್ವಾರ್ಥವಾಗದಣ್ಣ || ಮುಕ್ತಿಸಂಪದಗಳ ಅರ್ತಿಯೊಳ್ ಪಡೆಯಲು 1 ಮೂರ್ಜಗಪತಿ ದಯವಿಡನಣ್ಣ || ಅರ್ಜುನ ಸಖನ ಪದಾಬ್ಜವ ಸೇರಲು 2 ಅಕ್ಷಯ ಸುಖವ ತನ್ನಿಚ್ಛೆಯೊಳ್ ಪಡೆದು ಮು-| ಮುಕ್ಷುವಾಗಿ ನಿಜ ಮೋಕ್ಷವ ಪಡೆಯಲು 3 ಸನ್ನಿಧಿ ಭಾಗ್ಯವನುಣ್ಣುತಿರುವರೆ 4 ಆದಿಮಧ್ಯಾಂತವಿಲ್ಲದ ಪದವಿಯೊಳ್ ಸ-| ದಾನಂದನಾಗಿ ವಿನೋದದೊಳಿರುವರೆ 5
--------------
ಸದಾನಂದರು
(ಊ) ಯತಿವರರು ಶ್ರೀ ಜಯತೀರ್ಥರು ಎದುರಾರೊ ಗುರುವೆ ಸಮರಾರೊ ಪ ಮದನ ಗೋಪಾಲನ ಪ್ರಿಯ ಜಯರಾಯ ಅ.ಪ ಕಡು ಗರ್ಜಿಸುವ ಕೇಸರಿಯಂತೆ ನಿಮ್ಮ ವಾದಗಡಣೆಯ ಕೇಳುತ ನುಡಿ ಮುಂದೋಡದೆಗಡಗಡ ನಡುಗುತ ಮಾಯ್ಗೋ ಮಾಯ್ಗಳುಅಡವಿಯೋಳಡÀÀಗೋರು ನಿಮ್ಮ ಭೀತಿಯಲಿ 1 ಕುಟಿಲ ಮತಗಳೆಂಬೊ ಚಟುಲಂಧಕಾರಕ್ಕೆಪಟುತರ ತತ್ವ ಪ್ರಕಾಶಿಕೆಂತೆಂಬಚಟುಲಾ ತಪದಿಂದ ಖಂಡಿಸಿ ತೇಜೋ-ತ್ಕಟದಿ ಮೆರೆದೆ ಬುಧಕಟಕಾಬ್ಜ ಮಿತ್ರ2 ಅಮಿತ ದ್ವಿಜಾವಳಿ ಕುಮುದಗಳರಳಿಸಿವಿಮತರ ಮುಖ ಕಮಲಂಗಳ ಬಾಡಿಸಿಸ್ವಮತರÀ ಹೃತ್ಸಂತಾಪಗಳೋಡಿಸಿವಿಮಲ ಸುಕೀರ್ತಿಯ ಪಡೆದೆಯೊ ಚಂದ್ರ 3 ವೇದ ಶಾಸ್ತ್ರಗಳೆಂಬೊ ಶೃಂಗಗಳಿಂದ ಸು-ಧಾದಿ ಗ್ರಂಥಗಳೆಂಬೊ ಸ್ತನದಿಂದೊಪ್ಪುತ ತತ್ವಬೋಧನೆಯೆಂಬ ದುಗ್ಧ ಶಿಷ್ಯವತ್ಸಂಗಳಿಗೆಆದರದಲಿ ಕೊಟ್ಟ ಯತಿಸುರಧೇನು 4 ವ್ಯಾಸ ಸೂತ್ರಗಳೆಂಬ ಮಂದರವನು ವೇದರಾಸಿಯೆಂಬ ವಾರಾಶಿಯೊಳಿಟ್ಟುಶ್ರೀ ಸರ್ವಜ್ಞರ ವಾಕ್ಯ ಪಾಶದಿ ಸುತ್ತಿಭಾಸುರ ನ್ಯಾಯಸುಧಾ ಪಡೆದೆ ಯತೀಂದ್ರ5 ವನಜನಾಭನ ಗುಣಮಣಿಗಳು ಸರ್ವಜ್ಞಮುನಿಕೃತ ಗ್ರಂಥಗಳವನಿಯೊಳಡಗಿರೆ ಸ-ಜ್ಜನರಿಗೆ ಟೀಕಾಂಜನದಿಂದ ತೋರಿಸಿಘನ ಸುಖಸಾಧನ ಮಾಡಿದ್ಯೊ ಧೀರ 6 ಅರ್ಥಿಮಂದಾರ ವೇದಾರ್ಥ ವಿಚಾರ ಸ-ಮರ್ಥ ಶ್ರೀಕೃಷ್ಣ ಪಾದಾಂಬುಜಲೋಲ ಪ್ರ-ತ್ಯರ್ಥಿ ಮತ್ತೇಭಕಂಠೀರವಕ್ಷೋಭ್ಯ-ತೀರ್ಥಕರ ಜಾತ ಜಯತೀರ್ಥ ಯತೀಂದ್ರ 7
--------------
ವ್ಯಾಸರಾಯರು
(ಊ) ಲೋಕನೀತಿಯ ಕೃತಿಗಳು ಕೆಟ್ಟಗುಣಗಳು ನರನ ಅಟ್ಟಿಕೆಡಹುತಲಿಹುವು ಭ್ರಷ್ಟನೆನಿಸದೆ ಬಿಡವು ಇವನ ಪ ಸೃಷ್ಟಿಯೊಳಗಿವುಗಳಿಂದೆಷ್ಟುಜನ ಕೆಟ್ಟಿಹರೋ ಕಟ್ಟುತ್ತ ಮುಸಲದಿಂ ಕುಟ್ಟುತಿಹುವೂ ಅ.ಪ ಸರಿಧರೆಯ ಸ್ತ್ರೀಯರಂ ಕಾಯಿಸಲು ನರತಾನು ಹರಿಯಿಂದ ಹತನಾಗಿ ಹೋದಾ ವರವಿಪ್ರನಲಿ ಕ್ರೋಧಮಾಡಿದ ಬಕಾಸುರನ ತರಿದನಲ್ಲವೆ ಭೀಮ ತಾನು 1 ದಾಯವನು ಲೋಭದಿಂ ಕೌರವನು ಪಾಂಡವರಿ ಗೀಯದುದಕವನೇನು ಪಡೆದಾ ರಾಯದಶರಥ ತನ್ನ ಸತಿಸುತರ ಮೋಹವಿರೆ ಆಯುವಿಂ ಗತನಾಗಿ ಹೋದಾ 2 ಜಮದಗ್ನಿಯ ಹೋಮಧೇನುವಂ ಮದದಿಂದೆ ಕಾರ್ತಿವೀರ್ಯಾರ್ಜುನನು ಕೊಳಲು ಅಮಿತಬಲನಾಪರಶುಧಾರಿಯು ತಾನು ಸಮರದೊಳೆ ಸವರುತ್ತ ಅವನ ಕಳೆದ3 ಕೃಷ್ಣನನು ಮತ್ಸರದಿ ಶಿಶುಪಾಲ ಬಯ್ಯಲು ವಿಷ್ಣುಚಕ್ರವು ಕೊಂದಿತವನ ಬಾಣ ತಾನೀರ್ಷೆಯಿಂ ಭವಗವಂತನಿದಿರೇಳೆ ಪ್ರಾಣವುಳಿಯುತ ನಾಲ್ಕು ತೋಳ್ಗಳಾಯ್ತು 4 ವಾಸುದೇವನ ಮೇಲಸೂಯೆಯಿಂ ಪೌಂಡ್ರಕ ವಾಸುದೇವನೊಳು ಅಳಿದ ಕಂಡ್ಯಾ ದೂಷಣೆಯು ಡಂಬಗಳು ನಾಶನವ ಗೈಯುವುವು ಈಶ ಸುಜನರಿಗಾಗಿ ಭಾವಿಸುವ ಜಗದೀ5 ದರ್ಪದಿಂ ದಶಶಿರನು ಮರೆಯುತ್ತಲಿರಲಾಗಿ ಅಪಹಾರಗೈದ ಶ್ರೀರಾಮ ತಲೆಯಾ ರಿಪುಗಳಾ ಮಧು ಕೈಟಭರ ಮಮತೆಯನು ಉಪಮೆಯಲ್ಲಿದು ಮಾಯಿ ಮುರಿದ ನೋಡಾ 6 ನಿರ್ವಿಕಾರನ ನೆನೆದು ಗರ್ವವರ್ಜಿತರಾಗಿ ಸರ್ವವೂ ಹೆಜ್ಜಾಜಿ ಕೇಶವಾ ಯೆಂದು ಪರ್ವತೋದ್ಧರನಲ್ಲಿ ಕರ್ಮಾರ್ಪಣೆಯ ಮಾಡಿ ಒರ್ವನೇ ಜಗದೀಶನೆಂದು ನಮಿಸೀ 7
--------------
ಶಾಮಶರ್ಮರು
(ಋ) ಕ್ಷೇತ್ರವರ್ಣನೆ (1) ಮೇಲುಕೋಟೆ ಯತಿರಾಜ ಸಂಪತ್ಕುಮಾರಾ ಸ ತ್ಕøತದೊಳಗಿರಿಸೆನ್ನ ಧೀರಾ ಪ ಸತತ ಶ್ರೀಮದ್ವೈಷ್ಣವರನಾ ನುತಿಸುವಾನಂದ ದೊಳಗಿರಿಸೈ ಪತಿತಪಾವನ ಕಂಕಣಾಧ್ರುತ ಕ್ಷಿತಿಯ ಪಾಲ ಮಹಾನುಭಾವನೆ 1 ನೋಡಲಿಚ್ಚೈಸಿ ನಾಂ ಬಂದೆ ನನ್ನ ಮೂಢಾಕೃತದೊಳು ನಿಂದೆ ಕೇಡುಗಳು ಬಂದೆನ್ನ ವಿಧ ವಿಧ ಬಾಧೆ ಪಡಿಸುತ್ತಿರುವದಿದೆಕೊ ನೋಡಿ ಸುಜನರ ಕೂಡಿ ಭಜನೆಯ ಮಾಡುವೆನು ಶ್ರೀಮಾಧವಾಗ್ರಣಿ 2 ತುಲಶಿಮಣಿಹಾರ ಲೀಲಾ ಸ ತ್ಫಲತಂತ್ರ ದಾಸಾನುಕೂಲಾ ಕಾಲಕಲನಹುದೊ ಶ್ರೀಮನ್ ಬಾಲಬ್ರಹ್ಮಚಾರಿ ಮದ್ಗುರು ಮೇಲುಕೋಟೆಯೊಳಿರುವೊ ನಿಜವರ ಲೀಲಾಮಾನುಷವಿಗ್ರಹನೆ ನಿಜ ಯತಿರಾಜ ಸಂಪತ್ಕುಮಾರಾ 3
--------------
ಚನ್ನಪಟ್ಟಣದ ಅಹೋಬಲದಾಸರು
(ಋ) ವಿಶೇಷಸಂದರ್ಭದ ಹಾಡುಗಳು ಬರಗಾಲವನ್ನು ಕುರಿತ ಹಾಡುಗಳು ವನಜಭವಾದಿಗಳನು ಪಾಲಿಪ ದೇವ ಪ ಸದಯ ನೀನಾದರೆ ಬದುಕಿಸಿ ಪಶುಗಳ ಮುದವನು ತೋರಿಸು ಮಧುಸೂಧನ ಈಗ 1 ಇದಿರಿಗೆ ನೋಡಲಾರದೆ ನಿನ್ನ ದೂರಿದೆ ಇದು ಒಂದು ತಪ್ಪು ಎನ್ನದು ಎಂದು ಮನ್ನಿಸು 2 ವಿಷದ ನೀರನು ಕುಡಿದಸುವನ್ನು ಕಳಕೊಂಡು ಪಶುಪಾಲರಿಗೆ ನೀನಸುವಿತ್ತು ಪೊರೆದೆ 3 ಹೊಟ್ಟಯೊಳಗೆ ಸತ್ತು ಹುಟ್ಟಿದ ಶಿಶುವನು ಮುಟ್ಟಿ ಜೀವವನಿತ್ತೆ ಕೃಷ್ಣಾಕೃಪಾಕರ 4 ಗುರುಸುತನನು ಯಮಪುರದಿಂದ ಕರೆತಂದ ಪರಮ ಶ್ರೀ ಪುಲಿಗಿರಿ ವರದ ವಿಠಲರಾಯ 5
--------------
ವೆಂಕಟವರದಾರ್ಯರು
(ಏ) ವಿಶೇಷ ಸಂದರ್ಭದ ಹಾಡುಗಳು (1) ಶ್ರೀ ಶೃಂಗೇರಿ ಸ್ವಾಮಿಗಳ ಜಯತಿಯ ಮೆರವಣೆಗೆ ಗುರುವೆ ಪೂಜಿಪೆ ನಿಮ್ಮಯ ಚರಣಗಳನೂ ಪ ದರುಹಿನೊಳಗೆನ್ನನಿರಿಸಿ ಪಾಲಿಸೊ ದುರಿತದೂತವಿಚಾರ ಶ್ರೀಮದ್ಗುರು ಅ.ಪ ಶ್ರೀಸರಸ್ವತಿಸುಪ್ರಸನ್ನ ವಿಶೇಷ ದಿವ್ಯಪಾದಾಬ್ಜ ಕುಶಲನೆ ಬೇಸರಾಂತಕಮಾದ ಶಾಸ್ತ್ರಾಭ್ಯಾಸ ನಿಜಸನ್ಯಾಸಿ ಕಾರಣ 1 ವೇದನಾಲ್ಕು ಪ್ರಣವ ಪ್ರಸಾದ ವಿದ್ಯ ಸಬೋಧದಾಯಕ ಆದಿಗುರು ಶೃಂಗೇರಿಮಠವೆಂದೋದಿಹೇಳುವುದಾದ ಕಾರಣ 2 ರಾಜಸೋಮಿ ಜಗದ್ಗುರು ಜಯ ಆದಿ ಬೀಜಸಪೂಜ ದೈವಸಮಾಜ ಸತ್ಯಸಭೋಜ ಕಾರಣ 3 ರಾಜ ರಾಜ ಸಮಾಜದೊಳು ದುರ್ಬೀಜ ವಸ್ತುಗಳಿಡಲು ನಿಜಯತಿ ರಾಜಧಾನಿಗೆ ರಮ್ಯವಾದ ಸುವಸ್ತು ಪುಷ್ಪಗಳಾದಕಾರಣ 4 ಕುಂಪಿಣೀಧೊರೆಯ ನೀನೆ ಪರಮಪದನೆಂದೊಗಳಿ ಇಂಪಾದ ಸವಾರಿಯೆದುರಿಗೆ ದಂಪತಿಗಳಡಿಯಾದ ಕಾರಣ 5 ಎಲ್ಲ ದೇಶದ ರಾಜರೆಲ್ಲರು ಬಲ್ಲ ಗುರು ನೀನೆಂದು ನಿಮಗತಿ ಬಿಲ್ಲು ಬಾಣಗಳಿತ್ತು ಗುರುತುಗಳುಳ, ಸತ್ಯಸಮಾಜಭೋಜನೆ 6 ಆನೆಕುದುರೆಗಳೆತ್ತಲೆತ್ತಲು ಮತ್ತೆ ಮುತ್ತಿನ ತೊಂಪೆ ವೈಭವ ಏನು ಸಂಭ್ರಮದಿಂದ ಬಂದೆಯೊ ಭಾನುಕೋಟಿಪ್ರಕಾಶ ಕಾರಣ 7 ವೀರಶೈಯ್ಯಾಚಾರ ರತ್ನ ತಿರಿವುಮುತ್ತಿನಹಾರ ನಿರ್ಗುಣ ಧೀರ ತತ್ವವಿಚಾರ ಕಲ್ಮಷದೂರ ಅದ್ವಯಸಾರ ಕಾರಣ8 ಗೌರ್ನಮೆಂಟಿನೊಳಿತ್ತ ಸತ್ಯಾ ಮುಖ್ಯ ಜನರಲ್ ಬಾವುಟಗಳೂ ಶೌರಿ ತಮ್ಮ ಸವಾರಿಯೊಳಗದು ಫಾರಮೆಂಟಿನನೊಳಿರುವ ಕಾರಣ9 ಪಾದಸೇವೆಗೆ ಬರುವ ಭಕ್ತರ ಪಾಪಅಂತಕ ಪರಮಹಂಸನೆ ದೀಪವಿಲ್ಲದ ಬೆಳಕು ತಮ್ಮೊಳಗಾ ಪಯೋನಿಧಿ ಕಂಡ ಕಾರಣ10 ದಿಕ್ಕು ದೇಶದಿ ನಿಬಿಡಮಾಗಿದೆ ನಿಮ್ಮ ನಾಮಜಯಂತಿಯುತ್ಸವ ಮುಕ್ತಿಯಂಬೆನಗೀವ ನಿಜಪದ ಮೋಕ್ಷದಾಯಕನಾದ ಕಾರಣ11 ಕೈವಲ್ಯ ಪರಶಿವನೆಂಬೊ ನಿಶ್ಚಯ ಬಲ್ಲೆನೆಂಬುವ ಭಾಗ್ಯವಂ ಜನಕಿಲ್ಲಿ ಕೊಟ್ಟಕಾರಣ 12 ವಿಜಯನಗರಕ್ಕೈದ ಸಂಪದ ಅಜನು ಪೊಗಳಲ್ ತೋರಿಸಾಕ್ಷಾತ್ ದ್ವಿಜಪ್ರಜಾವತಿ ನಿಮ್ಮಭಜಿಸುವೆ ನಿಜಗುರು ನೀನಾದ ಕಾರಣ 13 ಸೀಮೆ ಭೂಮಿಯ ಜನಗಳೆಲ್ಲರು ಕಾಮಿತಾರ್ಥವ ಬೇಡುತಿರ್ಪರು ಸ್ವಾಮಿಯಹುದೋ ಜಗದ್ಗುರು ಶೃಂಗೇರಿಮಠದೊಳಗಿರುವಕಾರಣ 14 ವೀರಕಂಕಣ ಧೀರ ತತ್ವವಿಚಾರ ಶುಭಕರ ಧೀರನಹುದೆಲೊ ದಾರಿತೋರಿದ ಗುರುವು ತುಲಸೀಹಾರ ಕಂಟಕದೂರ15
--------------
ಚನ್ನಪಟ್ಟಣದ ಅಹೋಬಲದಾಸರು
(ಕಟೀಲಿನ ದುರ್ಗೆಯನ್ನು ಕುರಿತು) ಕಟೀಲ್ ದೇವರ್ ಕಟೀಲ್ ದೇವರ್ ಕಟೀಲ್ ದೇವರ್ಯಾರು ಪ. ಸರ್ವಶಿಷ್ಟರಿಷ್ಟಕೊಟ್ಟು ಕಾವ ಬೆಟ್ಟದೊಡೆಯನ ಪಟ್ಟದರಸಿ ಅ.ಪ. ಸೃಷ್ಟಿಯೊಳುತ್ಕøಷ್ಟ ತೇಜಪಟು ಭಕ್ತಜನರ ಮನದ ಕಷ್ಟವ ಪರಿಹರಿಸಿ ಪೊರೆವ ಕೃಷ್ಣನ ಒಡಹುಟ್ಟಿದವಳು 1 ದುಷ್ಟ ಕಂಸನ ಶಿರವ ಮೆಟ್ಟಿ ಜಿಗಿದ ವಿವಿಧ ಲೋಕಾ- ರಿಷ್ಟ ಶಾಂತಿಪ್ರದಳು ಪರಮ ನಿಷ್ಠಳು ಬಲಿಷ್ಠಳಿವಳು 2 ಅಷ್ಟಸಿದ್ಧಿದೇ ಪ್ರಸಿದ್ಧೆ ಜಿಷ್ಣುವಿನುತೆ ಭೂತ ಹೃದಯಾ- ವಿಷ್ಟೆ ನವನಿಧಿಷ್ಟೆ ಪುಷ್ಟೆ ಶ್ರೇಷ್ಠೆ ಸುಗುಣವರಿಷ್ಠಳಿವಳು 3 ಮುಷ್ಟಿಕಾರಿಯ ಚರಣ ಬಿಟ್ಟವರ ಭವಪಾಶದಿಂ ವೃಷ್ಟಿ ಸುರಿವ 4 ದಿಟ್ಟ ಲಕ್ಷ್ಮೀನಾರಾಯಣನ ಮುಟ್ಟಿ ಭಜಿಸುವವರ ಕರುಣಾ- ದೃಷ್ಟಿಯಿಂದ ನೋಡಿ ಮನೋಭೀಷ್ಟವೀವ ಹೃಷ್ಟರೂಪೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಕಟೀಲಿನ ದುರ್ಗೆಯನ್ನು ಕುರಿತು) ಕಟೀಲ್ ದೇವರ್ ಕಟೀಲ್ ದೇವರ್ ಕಟೀಲ್ ದೇವರ್ಯಾರುಪ. ಸರ್ವಶಿಷ್ಟರಿಷ್ಟಕೊಟ್ಟು ಕಾವ ಬೆಟ್ಟದೊಡೆಯನ ಪಟ್ಟದರಸಿಅ.ಪ. ಸೃಷ್ಟಿಯೊಳುತ್ಕøಷ್ಟ ತೇಜಪಟು ಭಕ್ತಜನರ ಮನದ ಕಷ್ಟವ ಪರಿಹರಿಸಿ ಪೊರೆವ ಕೃಷ್ಣನ ಒಡಹುಟ್ಟಿದವಳು 1 ದುಷ್ಟ ಕಂಸನ ಶಿರವ ಮೆಟ್ಟಿ ಜಿಗಿದ ವಿವಿಧ ಲೋಕಾ- ರಿಷ್ಟ ಶಾಂತಿಪ್ರದಳು ಪರಮ ನಿಷ್ಠಳು ಬಲಿಷ್ಠಳಿವಳು2 ಅಷ್ಟಸಿದ್ಧಿದೇ ಪ್ರಸಿದ್ಧೆ ಜಿಷ್ಣುವಿನುತೆ ಭೂತ ಹೃದಯಾ- ವಿಷ್ಟೆ ನವನಿಧಿಷ್ಟೆ ಪುಷ್ಟೆ ಶ್ರೇಷ್ಠೆ ಸುಗುಣವರಿಷ್ಠಳಿವಳು3 ಮುಷ್ಟಿಕಾರಿಯ ಚರಣ ಬಿಟ್ಟವರ ಭವಪಾಶದಿಂ ವೃಷ್ಟಿ ಸುರಿವ4 ದಿಟ್ಟ ಲಕ್ಷ್ಮೀನಾರಾಯಣನ ಮುಟ್ಟಿ ಭಜಿಸುವವರ ಕರುಣಾ- ದೃಷ್ಟಿಯಿಂದ ನೋಡಿ ಮನೋಭೀಷ್ಟವೀವ ಹೃಷ್ಟರೂಪೆ5
--------------
ತುಪಾಕಿ ವೆಂಕಟರಮಣಾಚಾರ್ಯ
(ಕಾಂಚಿ ವರದರಾಜಸ್ವಾಮಿ) ಕಾಂಚಿ ವರದರಾಜ ಪರಮ ದಯಾಳೊ ವಂಚನೆಯಿಲ್ಲದ ಬಿನ್ನಹ ಕೇಳೊ ಪ. ಐಂದ್ರ ನಕ್ಷತ್ರ ವಾಗೀಂದು ವಾರದಲಿ ದಿ- ನೇಂದ್ರನುದಯಲಗ್ನ ಸಲುವ ಸಮಯದಿ ಇಂದ್ರಾದಿ ದಿವಿಜರು ಪೊಗಳಲು ನಭದಿ ರಾಜೇಂದ್ರ ನೀ ಪೊರಮುಟ್ಟುದನು ಕಂಡೆ ಮುದದಿ 1 ಭರದಿಂದ ಧ್ವನಿಗೈವ ಭೇರ್ಯಾದಿ ವಾದ್ಯ ತಿ¾ುವಾಯ್ಮೊ¾õÉÉಯೆಂಬ ದ್ರಾವಿಡ ಪದ್ಯ ನೆರೆದ ವಿಪ್ರರು ಪೇಳ್ವ ವೇದ ಸಂವೇದ್ಯ ನಿರವದ್ಯ 2 ಎರಡು ಸಾಲಿನಲಿ ಸಾವಿರ ಸಂಖ್ಯೆ ದೀಪ ಮೆರೆವ ಭೂಛತ್ರಿ ಪಿಡಿದಿರುವ ಪ್ರತಾಪ ಗರುಡ ಗಮನನಾಗಿ ಗೋಪುರ ಮಧ್ಯ ಬರುವ ನಿನ್ನನು ನೋಡಿದರೆ ಮುಕ್ತಿ ಸಿದ್ಧ 3 ಖಂಡ ಮಂಡಲ ನಾಯಕನ ಭೇಟಿ ದೊರೆಯೆ ಖಂಡಿತವಾಗೋದು ದಾರಿದ್ರ್ಯ ಮರೆಯೆ ವಾಹನ ಅಖಿಳಾಂಡಕೋಟಿ ಬ್ರಹ್ಮಾಂಡನಾಯಕ ನಿನ್ನ ಕಂಡೆನು ದೊರೆಯೆ 4 ಶೇಷಗಿರಿಯೊಳಿದ್ದು ಪೋಷಿಪೆ ಜನರ ದೋಷವಿದೂರ ಕಾಂಚೀಶ ಶ್ರೀವರದ ಆಶೆ ಪೂರಿಸಿ ಎನ್ನ ಭಾಷೆಯ ಸಲಿಸೊ ಶ್ರೀಶ ಕೃಪಾರಸ ಸೂಸೆನ್ನ ಶಿರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಕಾಣೂರು ಮಠದ ನರಸಿಂಹ) ನೋಡಿರಯ್ಯ ನರಸಿಂಹ ಮೂರ್ತಿಯ ಪಾಡಿರೋ ಕೀರ್ತಿಯನು ಪ. ಚಿಕ್ಕವನ ಗೋಳಿಕ್ಕಿಸುತಲತಿ ಸೊಕ್ಕಿದಸುರನನು ಧಿಕ್ಕರಿಸುತಿಹ ಕಕ್ಕುಲತೆಯಿಂದುಕ್ಕಿ ರೋಷವನು ಮಿಕ್ಕ ದೇವರ ಲೆಕ್ಕಿಸದವನ ತಿಕ್ಕಿ ತೊಡೆಯೊಳಗಿಕ್ಕಿ ನಖಗಳನಿಕ್ಕರಿಸಿ ಸಾಲಿಕ್ಕಿ ತರುವ ಕರುಳಕ್ಕರದಿ ತೆಗೆದ್ಹಕ್ಕಿಗಮನನ 1 ವೇದಮುಖ ಸುರರೆಲ್ಲ ದೂರದಿ ಕಾದುಕೊಂಡಿರಲು ಸಿರಿನಡು ಹಾದಿಯಲಿ ಚಿನ್ಮೋದನಿರಕಾಲ್ಹಾದ ಬಡುತಿರಲು ಪಾದಪದ್ಮಗಳನ್ನು ಭಕ್ತಿರಸಾರದರದಿ ಶಿರಕಿಕ್ಕಿರುವ ಪ್ರ- ಲ್ಹಾದನನು ಪಿಡಿದೆತ್ತಿ ಪರಮವಿನೋದಗೊಂಡ ಪರಾಪರೇಶನ 2 ಅರ್ಥಿಯಿಂದಲಿ ಬಂದಿರುವರು ಪೂರ್ಣಾರ್ಥದಾಯಕನಾ ವ್ಯರ್ಥವೈರದ ದ್ವ್ಯರ್ಧಿದೈತ್ಯರ ಮೂರ್ತಿದಹಿಸುವನಾ ಅರ್ತಿಹರ ಶೇಷಾದ್ರಿವರ ಪುರುಷಾರ್ಥ ಪಾಲಿಪೆನೆಂದು ವಾಮನ ತೀರ್ಥ ಕೃತ ಪೂಜಾರ್ಥವಿಲ್ಲಿಗೆ ಕೀರ್ತಿಕರ ನಿಲಯಾರ್ಥದಾತನ 3
--------------
ತುಪಾಕಿ ವೆಂಕಟರಮಣಾಚಾರ್ಯ