ಒಟ್ಟು 152 ಕಡೆಗಳಲ್ಲಿ , 40 ದಾಸರು , 144 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕ ನಾಯಕ ಲಕ್ಷ್ಮೀಲೋಲನಾ ಸ್ಮರಣೆ ಬಿಟ್ಟೂ ಪ ವಿದಿ ಮುನ್ನೆ ಬರದಿಷ್ಟಾ ಯಡಿಯಾತಪ್ಪಾದು ತುದಿಮೊದಲಿಂದಾ ಮಾಡಿದ ದೋಷವೆಲ್ಲಾ ಬೆದರಿಸಿದರೆ ಅದು ಬಿಡಲು ಬಲ್ಲುದೆ ಕೇಳೂ ಪಾದ ಭಜನಿಯ ಬಿಟ್ಟು 1 ನಾನಾಪರಿಯ ಮನಸೂ ನಟಿಸುವದಲ್ಲಾದೆ ಏನು ಎಲ್ಲವೂ ವ್ಯರ್ಥಾ ವೇದನೆ ನಿಂದೆ ನೀನು ಮಾಡಿದಾ ಫಲ ನಿನಗುಣಿ ಸದೆ ಬಿಡದೂ ಮಾನವಾಧೀಶನಂಘ್ರಿ ಧ್ಯಾನವೆಂಬುದು ಬಿಟ್ಟು 2 ಸಕಲಕೆ ಕರ್ತನಾಗಿ ಸರ್ವೋತ್ತಮನಿರಲು ಭಕುತಿ ಭಾವನೆಯಿಂದ ಭಜಿಸಾದೆ ನಿ ವಿಕಟಯೋಚನೆಯಿಂದ ಏನುಫಲವು ಇಲ್ಲಾ ನಿಕರ `ಹೊನ್ನೆಯ ವಿಠ್ಠಲನ ' ನಾಮೋಪಾಸನೆ ಬಿಟ್ಟು 3
--------------
ಹೆನ್ನೆರಂಗದಾಸರು
ಲೌಕಿಕ ಸಂದರ್ಭದ ಹಾಡು ಯಾತಕೆ ಹೋದೆವು ದುರುಳನ ಮನೆಗೆ ಪಾತಕಿ ಇವನು ಛೇ ಛೇ ಛೇ ಪ ಏಳು ಬಿಲ್ಲಿಯ ಕೊಡಲಿಕ್ಕೆ ಬಂದ ಖೂಳನಿವನು ಈ ಮನೆಯೊಳಗೆ ತಾಳಲಾರದೆ ಬೀಸಾಟಿ ಬಂದೆನು ಶ್ರೀಲತಾಂಗಿಯ ರಮಣ ಗೋವಿಂದಾ 1 ಗುಂಡಪ್ಪನು ಯಾಗುಂಡಪ್ಪನು ರುಬು ಗುಂಡಪ್ಪನು ನಾನಿವನರಿಯೆ ಮಂಡರಂತೆ ದಿನಗಳಿವುತಲಿ ನಮ ಕಂಡು ಮಾನ್ಯ ಮಾಡದೆ ಹೋದನು 2 ಹರಿಸರ್ವೋತ್ತಮನೆಂದು ಝಾಂUಟಿ ಬಾರಿಪ ದಾಸರು ನಾವ್ ಹೌದು ವರ ಕದರುಂಡಲುಗೀಶನ ಒಡೆಯ ನಮ್ಮ ಪಾಂ- ಡುರಂಗನ ದಾಸನೆಂದು ತಿಳಿಯದಲೆ 3
--------------
ಕದರುಂಡಲಗೀಶರು
ವರಾಹ ಹರಿ ವಿಠಲ | ಕಾಪಾಡೊ ಇವನಾ ಪ ನಿರುತ ತವನಾಮ ಸ್ಮøತಿ | ಕರುಣಿಸುತ ಕಾಯೋಅ.ಪ. ತಾರಕವು ತವನಾಮ | ಸ್ಮರಣೆ ಮಾತ್ರದಿ ಎಂದುಒರಲುತಿದೆ ವೇದಗಳು | ಕರಿವರದ ಹರಿಯೇತರುಳ ಸಾಧ್ವೀ ಯುವಕ | ಮೊರೆಯಿಡುವನಂಕಿತಕೆಒರೆದಿಹೆನು ಅದರಿಂದ | ಕರೆದು ಕೈ ಪಿಡಿಯೋ 1 ಕಾಮವರದನೆ ದೇವ | ಕಾಮಿತಾರ್ಥಗಳಿತ್ತುನೇಮದಿಂ ಪೊರೆಯುವುದು | ಕಾಮಪಿತ ಹರಿಯೇ |ನೇಮ ನಿಷ್ಠೆಯಲಿಂದ | ಧೀಮಂತ ಪದಕೆರಗಿಸೌಮನಸ್ಯದಿ ಸೇವೆ | ಸಲ್ಲಿಸುವನಯ್ಯಾ 2 ಹರಿಯೆ ಸರ್ವೋತ್ತಮನು | ಸಿರಿವಾಯು ಮೊದಲಾದಸುರರೆಲ್ಲ ಕಿಂಕರೆಂಬ ಮತಿಯ ಕೊಟ್ಟುವರಜ್ಞಾನ ಭಕುತಿಯನೆ ಕರುಣಿಸುತ ಪೊರೆಯಯ್ಯಾವರದ ಗುರು ಗೋವಿಂದ ವಿಠಲ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ವ್ಯಾಸರಾಯ ನಿನ್ನ ಅನುದಿನಾ | ಸ್ಮರಿಪ ಜನಕೆತೋಷದಿಂದ ಲೀವೆ ಸಾಧನಾ |ವಾಸುದೇವ ಕೃಷ್ಣಲೀಲೆ | ರಾಶಿಗುಣವ ಬೋಧಿಸುತ್ತಶ್ರೀಶ ಪಾದಪದುಮ ಕಾಂಬ | ಲೇಸು ಮುಕ್ತಿ ಮಾರ್ಗತೋರ್ವೆ ಅ.ಪ. ಏಸೊ ಮುನಿಗಳಿದ್ದು ಮಾಡದಾ | ಶಾಸ್ತ್ರವೆಂಬ ಭೂಷಣಂಗಳ್ಹರಿಗೆ ತೊಡಿಸಿದಾ |ಕೇಶವನೆ ಸರ್ವೋತ್ತಮನು | ದೋಷದೂರನೆಂದು ತಿಳಿಸಿಮೋಸಪಡಿಪ ಮಾಯಿ ಮತವ | ಘಾಸಿಮಾಡಿ ಜಯವ ಪಡೆದೆ 1 ವಾಸುದೇವ ವಾಲೀಲೆಯಏಸೊ ವಾದಿ ಜಯದ ಪತ್ರ | ಭೂಷಣಗಳ್ ಶ್ರೀಶಗಿತ್ತೆ 2 ಶೇಷನಾವೇಶದಿಂದಲಿ | ಪುಟ್ಟಿ ನೀವುವ್ಯಾಸರಾಯರೆಂಬ ಪೆಸರಲಿ |ದೇಶ ಪತಿಗೆ ಬಂದ ಕುಹು | ದೋಷಯೋಗ ಹರಿಸುತ ಸಿಂಹಾಸನೇರಿ ಜಗದಿ ಬಹಳ | ಭಾಸುರ ಸುಕೀರ್ತಿ ಪಡೆದೆ 3 ನ್ಯಾಯ ಗ್ರಂಥವೆಂದು ಕರೆಸಿಹ | ಚಂದ್ರಿಕಾದಿನ್ಯಾಯಾ ಮೃತವು ತರ್ಕ ತಾಂಡವ |ಗೇಯದಿಂದ ತುಚ್ಛ ಭಾಷ್ಯ | ಗಾಯನ ಮಾಡ್ದದುರ್ಮತೆನ್ನ ಮಾಯಿಮತವ ಗೆದ್ದು ಮಧ್ವ | ಧೇಯ ಸಾಧಿಸೀದ ಗುರುವೆ 4 ಪರಮ ಶಿಷ್ಯರೆಂದು ಮೆರೆವರಾ | ವಿಜಯಿಂದ್ರವರ ಸುವಾದಿರಾಜರೆಂಬರಾ |ಗುರುಗಳಾಗಿ ಯತಿ ಸುರೇಂದ್ರ | ವರ ಸುಪುತ್ರ ಭಕ್ಷೆ ಬೇಡೆಪರಮ ಹರುಷದಿಂದ ವಿಜಯ | ಇಂದ್ರರನ್ನ ಕಳುಹಿ ಪೊರೆದೆ 5 ಜ್ಞಾನಿಯರಸ ವ್ಯಾಸ ಮುನಿಗಳಾ | ಮನುಜರೆಂದುಹೀನ ಜನರು ಪೇಳೆ ಆವರ್ಗಳಾ |ಭಾನುಸೂನು ನರಕ$ನೇಕ | ಕಾಣಿಸುತ್ತ ಹಿಂಸಿಸೂವಶ್ರೀನಿವಾಸ ಹರಿಯ ಮುಂದೆ | ಗಾನ ಗೈದು ಆಡುತಲಿಪ್ಪ 6 ಪರಮಹಂಸ ಮುನಿಯು ಮನದಲಿ | ಪೂಜೆಗೈದುಹರಿಯ ಕಾಂಬ ಹೃದಯ ಗುಹೆಯಲಿ |ಗುರುವರ ಬ್ರಹ್ಮಣ್ಯ ಪೂಜ್ಯ | ಗುರು ಗೋವಿಂದ ವಿಠ್ಠಲಾನಚರಣ ವನಜ ಧ್ಯಾನಾಸಕ್ತ | ವರ ಸುನವ ವೃಂದಾವನಸ್ಥ 7
--------------
ಗುರುಗೋವಿಂದವಿಠಲರು
ಶೇಷ ಗಿರಿಯ ವಾಸಈಶ ಜಗತ್ರಯ ಪೋಷಕ ಸರ್ವೇಶ ಭಾಸುರ ಕೀರ್ತಿ ಶೇಷ ಎನ್ನ ನೀ ಪೋಷಿಸುವುದು ಈಶ ಪ ವಕ್ಷಸ್ಥಳದಲಿ ವಾಸವಾಗಿಹ ಶ್ರೀ ಪರಬ್ರಹ್ಮ ನಾ ಪಕ್ಷಿವಾಹನ ಪರಮಪರುಷ ಅಕ್ಷಯ ಫಲದಾಯಕನಾ ರಕ್ಷಕ ದೀನ ಜನರ ಸರ್ವೋತ್ತಮನ ರಾಜೀವದಳನಯನ ಈಕ್ಷಣದಲೆನ್ನ ನಿನ್ನ ಕುಕ್ಷಿಯೊಳಗೆ ಇಟ್ಟು ರಕ್ಷಿಸೊ ಸಂಪನ್ನ 1 ವೇಣುನಾದ ವಿನೋದನಾದ ಸುಗಾನಲೋಲ ಹರಿಯೆ ದಾನವಾಂತಕ ದಜನುರಕ್ಷಕ ಸುಜ್ಞಾನಿಗಳ ಧೊರಿಯೆ ಮಾನವಾಧಿ ಪ ಮದನವಿಲಾಸ ಮಾಧವ ಮುಕುಂದಾ ನೀನೆ ದಯಮಾಡಿ ಸಲಹೊ ಆನಂದಾ ನಿಜನಿತ್ಯ ಗೋವಿಂದಾ 2 ವಾರಿಧಿ ಬಂಧಿಸಿ ದೈತ್ಯರ ಬಲವನೆಲ್ಲ ಮುರಿದಾ ಬಲವಂತಾ ರಾವಣನ ಭಂಗವ ಬಡಿಸಿ ತಲೆಗಳ ಛೇದಿಸಿದಾ ಸುಲಭದಿ ಅವನನುಜಗೆ ಪಟ್ಟವನಿತ್ತು ಸತಿಯನೆ ತಂದಾ ಜಲಧಿಶಯನ ಅಹೋಬಲ 'ಹೊನ್ನವಿಠ್ಠಲ’ ಚಲುವ ಸದಾನಂದಾ 3
--------------
ಹೆನ್ನೆರಂಗದಾಸರು
ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರೀ ಶ್ರೀ ರಾಘವೇಂದ್ರತೀರ್ಥರು ಆನೆಂತು ತುತಿಪೆ ನಿನ್ನ - ಮಂಚಾಲಿ ರನ್ನ ಪ ಆನೆಂತು ತುತಿಪೆ ನಾ - ಮಾನಮೇಯದಿನಿಪುಣಗಾನ ವಿಶಾರದ - ಶ್ರೀನಿವಾಸನ ದೂತ ಅ.ಪ. ಕೃತಯುಗದಲಿ ನೀನು | ದಿತಿಜ ವಂಶದಿ ಬಂದುವಿತತ ವಿಶ್ವಾಧಾರ | ಕೃತಿಪತಿಯ ತುತಿಸಿ ಮುಕುತಿ ಪಥಕೆ ಸತ್ತರ ತಮ ಪಂಚಭೇದಮತಿಯೆ ಸಾರ್ಥಕವೆಂದು | ಹಿತದಿಂದ ಸಾಧಿಸೆಮತಿಭ್ರಾಂತನಾದಂಥ | ದಿತಿಜ ಗುರುವು ತಾನುಖತಿಯಿಂದ ನೋಡುತ್ತಲೀ || ಬಾಲಕರೆಲ್ಲಹತಭಾಗ್ಯರೆನ್ನುತ್ತಲೀ | ನೃಪಗೆ ಪೇಳೆಖತಿ ನಿನ್ನೋಳ್ ತೋರುತ್ತಲೀ | ದಂಡಿಸೆ ನಿನ್ನಪಿತಗೆ ಬುದ್ಧಿಯ ಪೇಳ್ದ | ಅತುಳ ಪರಾಕ್ರಮೀ 1 ಕಡು ವೇಗದಲಿ ಬಂದ | ಶಂಡ ಮರ್ಕನ ಕಳುಹಿಒಡ ಹುಟ್ಟಿದವನನ | ದಾಡೆದಂತಗಳಿಂದಬಿಡದೆ ಶೀಳಿದ ಹರಿಯ | ದೃಢದಿ ಪೂಜಿಪೆ ನೀನುಬಿಡು ಬಿಡು ಈ ಮತಿ | ಮೃಡನೆ ನಮ್ಮಯ ದೇವಪುಡುಕಿ ಆ ಹರಿಯನ್ನೆ | ಖಡುಗದಿಂದಲಿ ಅವನಕಡಿದು ಹಾಕುವೆನೆನ್ನುತ್ತ || ಕರೆದು ನಿನ್ನಕಡು ಭಾಗ್ಯ ಕೋ ಎನ್ನುತ್ತ | ಪೇಳಲು ನೀನುಮಿಡುಕದೆ ಬೇಡೆನ್ನುತ್ತ | ಬುದ್ದಿಯ ಮಾತದೃಢದಿ ಪಿತಗೆ ಪೇಳ್ದೆ | ಬಿಡೆನು ಹರಿಯ ಎನ್ನುತ್ತ 2 ಸಹೋದರಿ | ವರಲಕ್ಷ್ಮಿ ಮಾತೆಯಸ್ಮರಿಸಿ ಜೀವಿಸೆ ಅವನೂ || ರಕ್ಕಸ ನೋಡಿಭರದಿ ಖಡ್ಗವ ಸೆಳೆದೂ | ತೋರೊ ಕಂಬದಿಹರಿಯ ಎಂದು ಒದೆದೂ | ನಿಲ್ಲಲು ಪಿತಗೆನರಹರಿ ರೂಪವ ತೋರ್ದೆ | ಕ್ರೂರನ ಜರಿದೂ 3 ದಿಟ್ಟ ತರಳನ ಸಲಹೆ | ಗಟ್ಟಿ ಕಂಬದಿ ಬರೆಛಟ ಛಟ ಶಬ್ದಾ | ಜಾಂಡ ಕಟಹ ಬಿಚ್ಚೆಕಠಿಣ ಖಳನ ಪಿಡಿದು | ಜಠರವ ಭೇದಿಸಿಹಠದಿ ಕರುಳಿನ ಮಾಲೆ | ಕಂಠದಿ ಧರಿಸುತ್ತತೃಟಿಯು ಬಿಡದೆ ತನ್ನ | ಹಠದಿ ಭಜಿಪನಿನ್ನಸ್ಫುಟದಿ ಕರದೋಳತ್ತಿದ || ಮುದ್ದಿಸಿ ಬಲುದಿಟ ಭಟ ಎನೆ ಎನಿಸೀದ | ಮಗನ ಮಾತುದಿಟವ ಜಗಕೆ ತೋರಿದ | ವೆಂಕಟನ್ನಪಟುತರ ವ್ಯಾಪ್ತಿಯ | ಮಹಿಮೆ ಸ್ಫುಟದಿ ತೋರ್ದ 4 ದಶಶಿರ | ದೂತ ಹನುಮನ್ನವ್ಯಥೆಯ ಪಡಿಸೆ ಪೋಗಲೂ || ಖತಿಯಲಿ ಲಂಕೆಹುತವಹನಿಗೆ ಈಯಲೂ | ವಾತನ ನೀಪ್ರೀತಿಯಲ್ಲಾಶ್ರಯಿಸಲೂ | ಲಂಕೆಯ ಪುರನೀತಿಯಿಂದಲಿ ಆಳ್ದ | ಖ್ಯಾತ ದೂತನೆನಿಸಲೂ 5 ಪಾದ ಭಜಿಸಿದಿ 6 ಶೇಷಾವೇಶದಿ ಪುಟ್ಟಿ | ವ್ಯಾಸ ತೀರ್ಥರಾಗಿಮೀಸಲಾದ ಮತ | ದಾಶಯಗಳನೆಲ್ಲಸೂಸಿ ಪೇಳುತ್ತಲಿ | ಶೇಷಾಚಲದಿ ಶ್ರೀನಿವಾಸನ ದ್ವಾದಶ | ವರ್ಷ ಸೇವಿಸಿ ನೃಪತೀಶನ ಕುಹುಯೋಗ | ಲೇಸಾಗಿ ಕಳೆಯುತಆಶುಗತಿಯ ತತ್ವ ಮತವ || ಸ್ಥಾಪಿಸಿ ಬಲುಮೀಸಲು ತರ್ಕತಾಂಡವ | ನ್ಯಾಯಾಮೃತಭೂಸುರರ್ಗಿತ್ತು ನಾಯಕರ | ಪುರಂದರದಾಸರಾಯರ ಮಾಡ್ದ | ದಾಸ ಪಂಥೋದ್ಧಾರ 7 ವಿಹಂಗ ವಾಹನ ಶ್ರೇಷ್ಠನೂ || ಎಂದೆನಿಸುತ್ತತುಂಗ ತೀರದಲಿ ನೀನೂ | ರಾಮರ ಪಾದಭೃಂಗನೆಂದೆನಿಸಿ ಇನ್ನೂ | ವ್ಯಾಖ್ಯಾನದಿಶೃಂಗರಿಸಿದೆ ನಿನ್ನ | ಬಿಂಬ ಮೂರುತಿಯನ್ನೂ 8 ಮಾಸ ಭವ ವನಧಿಯತರಣೋಪಾಯವ ತೋರುತ್ತ | ಪವನಾಂತಸ್ಥಗುರುಗೋವಿಂದ ವಿಠಲನೆಂಬಾತ | ಗುಣ ಪೂರ್ಣಸರ್ವೋತ್ತಮನೆನ್ನುತ್ತ | ಕೀರ್ತಿಪೆ ನೀನು ನಿರುತ9
--------------
ಗುರುಗೋವಿಂದವಿಠಲರು
ಸತ್ಯ ಸಂಕಲ್ಪ ಸ್ವಾತಂತ್ರ ಸರ್ವೇಶ ಸರ್ವೋತ್ತಮನೆ ಸಾರ್ವಭೌಮಾ ಪ ಭೃತ್ಯರಿಗೆ ಬಂದ ಪರಿಪರಿ ಭಯಗಳನೆ ಕಳೆದುನಿತ್ಯದಲಿ ಕಾಯ್ವ ಸ್ವಾಮೀ ಪ್ರೇಮೀ ಅ.ಪ. ಆವ ಜನುಮದ ಫಲವೊ | ಆವ ಕ್ರಿಯಗಳಿಂದಆವ ಸಾಧನದ ಬಗೆಯೋ ||ಆವುದಿಂದಾವುದಕೆ ಘಟನೆಯನು ಮಾಳ್ಪೆಯೊಆವುದೊ ನಿನ್ನಾಟವೋ ||ಆವ ಪರಿಯಿಂದಲ್ಲಿ ಜೀವಿಗಳ ಸಲಹುವಿಯೊಆವ ನಿನ್ನಾಧೀನವೋ |ದೇವ ದೇವೇಶ ನಿನ್ನ | ಭಾವ ಬಲ್ಲವರಾರೊಭಾವಜನ ಪಿತ ಕೃಪಾಳೊ | ಕೇಳೋ 1 ತೈಜಸ ಪ್ರಾಜ್ಞ ವಿಶ್ವರೂಪಗಳಿಂದಸ್ವಪ್ನ ಕಾಲದಲಿ ನೀನೂ ||ಸುಪರ್ವಾಣ ದೈತ್ಯರ ಸೃಜಿಸಿ ಮನೆಯನು ಮಾಡಿಅಪರಿಮಿತ ಕಾರ್ಯಗಳನೂ |ಸುಫಲ ದುಷ್ಕರ್ಮಗಳ ತೋರಿಸೀ ಜೀವಕ್ಕೆಕ್ಲುಪುತವಾಗಿದ್ದವೆಲ್ಲಾ |ಕೃಪೆಯಿಂದ ತೋರಿ ಬದಾಪತ್ತುಗಳ ಕಳೆವಅಪರಿಮಿತ ಸಾಗರಾ | ಶೂರಾ 2 ಎನ್ನಂಥ ಪಾಪಿಷ್ಠರಿನ್ನಿಲ್ಲ ಧರೆಯೊಳಗೆ ನಿನ್ನಂಥ ಕರುಣಿಯಿಲ್ಲಾ ||ಚೆನ್ನಗುರು ವಿಜಯರಾಯರ ಪೊಂದಿದವನೆಂದೂಮನ್ನಿಸಿ ಸಲಹಬೇಕೋ |ಘನ್ನ ಸಂಸಾರದೊಳು ಬವಣೆ ಬಂದಟ್ಟಿದರುನಿನ್ನ ಸ್ಮøತಿಯೊಂದು ಬರಲೀ |ಸನ್ನುತಾಂಗಿಯ ರಮಣ ವ್ಯಾಸವಿಠಲ ಮಧ್ವಮುನಿಗೊಲಿದೆ ಉಡುಪಿವಾಸಾ | ಶ್ರೀಶಾ 3
--------------
ವ್ಯಾಸವಿಠ್ಠಲರು
ಸತ್ಯಜ್ಞಾನ ಮುನಿರಾಯಾ ತವಸ್ಮರಣೆ ಸತತ ಕೊಡು ಜೀಯಾ ಪಜ್ಞಾನಭಕ್ತಿ ವೈರಾಗ್ಯದ ಕಣಿಯೆ ಧ್ಯಾನ ಮೌನ ಜಪ-ತಪಗಳ ನಿಧಿಯೆ ಅ.ಪಸರ್ವತ್ರದಿ ಶ್ರಿ ಹರಿಯನು ಕಾಣುತಸರ್ವಭೂತ 'ತರತನಾಗಿಸರ್ವೋತ್ತಮನು ಶ್ರೀರಾಮನ ಪೂಜಿಸಿಸರ್ವಜ್ಞಮತ ಸುದಾಂಬುಧಿಗೆ ಚಂದ್ರಮನಾದೆ 1ಭರತಾರುಣ್ಯದಿ ಪರಮಹಂಸನಾಗಿಧರ್ಮ ಸಾಮ್ರಾಜ್ಯದ ಧುರವ'ಸಿಧರ್ಮ ಸಂರಕ್ಷಣೆ ಮಾಡುತ ಧರೆಯೊಳುಪೂರ್ಣಜ್ಞರ ಧ್ವಜ ಮೆರೆಸಿದ ಧೀರಾ 2ಲೌಕಿಕವನು ಸಂಪೂರ್ಣ ತ್ಯಜಿಸಿ ನೀ-ಪರಲೋಕ ಸಾಧನ ಲೋಕಕೆ ತಿಳಿಸಿಟೀಕಾರಾಯರ ಸನ್ನಿಧಾನವ ಹೊಂದಿದಶ್ರೀಕಾಂತ ಭೂಪತಿ'ಠ್ಠಲನ ದೂತಾ 3
--------------
ಭೂಪತಿ ವಿಠಲರು
ಸರ್ವ ವಿಪತ್ ಪರಿಹಾರ ಸ್ತುತಿ ಕರ್ಮ ಫಲದಾತನು ಶೂನ್ಯ ಪ ವಾಹನ ಪತನ ಉಕ್ಕಿ ಪ್ರವಹಿಸುವ ನದಿ ಮೊದಲಾದ್ದರಿಂದ ಏಕ ಕಾಲದಿ ಸಂಗ ಮರಣ ಸಂಭವಿಸುವುದು ಏಕೆಂದು ಶಂಕಿಸುತಿ ಕೇಳು ಶ್ರದ್ಧಾಳು 1 ಏಕ ಕಾಲದಿ ನಾನಾ ಜನರು ಸಂಗದಿ ಕೂಡಿ ಮಂದ ಮಾರುತ ಪುಷ್ಪವನದಿ ಶ್ರೀಕರ ಕಥಾ ಶ್ರವಣ ನಾಟಕ ಕೇಳಿಕೆಯು ಹೀಗೆ ಜನ ಸಂಘದಲಿ ನಾನಾ ಸಂಭವವು 2 ಒಂದೊಂದು ಮನುಜನಿಗು ಇಂಥಾ ಕಾಲದಿ ಇಂಥಾ ರೀತಿಯಲಿ ಇಂಥಾ ಸ್ಥಳದಲ್ಲಿ ಇಂಥಾ ಹಿತಕರವೊ ಅಹಿತವೊ ಕರ್ಮಗತಿ ಸಂಭವವು ಶ್ರೀದ ನಿಯಮಿಸುವ ವೈಷಮ್ಯವಿಲ್ಲದಲೆ 3 ಮಳೆ ಬಿಸಿಲುಭೂಕಂಪ ಚಂಡಮಾರುತ ಸುಳಿಸುಳಿದು ಪ್ರವಹಿಸುವ ನದಿ ಹರಡುವ ದಾವಾಗ್ನಿ ಎಲ್ಲ ಇಂಥಾ ಅಹಿತ ಸಂಭವದಿ ಸಿಲುಕುವರು ಅಲ್ಲಲ್ಲಿ ಬಹುಜನರು ಕರ್ಮಗತಿಯಲ್ಲಿ 4 ಘೋರ ಭೂಕಂಪದ ಪೀಡೆಗೆ ಯೋಗ್ಯರು ಯಾರು ಯಾರೊ ಒಳ್ಳೆವರೋ ಕೆಟ್ಟವರೊ ಹರಿಯು ಆ ಜನರನ್ನು ಕಂಪನಕೆ ಒಳಮಾಡಿ ಮರಣಾಂಗ ಹೀನತೆಯು ರಕ್ಷಣೆಯು ಈವ 5 ಭಿನ್ನ ಜೀವರು ಭಿನ್ನ ಕರ್ಮಗತಿ ಉಳ್ಳವರು ಭಿನ್ನ ಫಲಯೋಗ್ಯರು ಆದ ಕಾರಣದಿ ಕ್ಷೋಣಿ ಕಂಪನದಲ್ಲಿ ಮರಣ ಕೆಲವರಿಗೆ ಅಂಗ ಹೀನತೆ ಕೆಲವರಿಗೆ ರಕ್ಷಣೆ ಕೆಲವರಿಗೆ 6 ಘೃಣಿ ಹರಿಯು ಭೂಕಂಪ ಆಗುವ ಪೂರ್ವದಲೆ ಜನರು ಕೆಲವರನ್ನು ಬೇರೆ ಊರಿಗೆ ಕಳುಹಿ ಹಾನಿಗೊಳಿಸುವ ಕಂಪನಕೆ ಸಿಲುಕದಂತೆ ಇನ್ನು ಕೆಲವರನ್ನು ಅಲ್ಲಿ ಬಾರದೇ ಮಾಳ್ಪ 7 ಸಿಂಧು ವಿಜ್ಞಾನಂದ ಹರಿಯೇ ಕರ್ಮಾಧ್ಯಕ್ಷನು ಕರ್ಮಫಲದಾತ ಕರ್ಮ ಕೊಡದು ಫಲ ಕರ್ಮಾಧ್ಯಕ್ಷ ಶ್ರೀಹರಿಯೇ ಫಲದಾತ 8 ಸಂಘ ದುಃಖ ಪ್ರಾಪ್ತಿಯು ಹಾಗೆ ಭವಿಸುವುದು ಐಹಿಕ ವಿಷಯಜವು ಉದಾನಿಸಿ ಅಘದೂರ ಗುರುಗ ಶ್ರೀ ಹರಿಯ ಸ್ಮರಿಸು 9 ನರಜನ್ಮ ಹೊಂದಿದವ ಹರಿನಾಮ ಸರ್ವದಾ ಸ್ಮರಿಸುವುದು ಕರ್ತವ್ಯ ದೊರಕಿದ ಸ್ಥಳದಿ ಹರಿನಾಮ ಭಕ್ತಿ ಪೂರ್ವಕದಿ ನುಡಿಯಲೇ ಬೇಕು ನರಪಶÀು ಜಡಮತಿ ಮೂಢನು ನುಡಿಯ 10 ಹರಿಯೇ ಸರ್ವೋತ್ತಮನು ಮುಖ್ಯಕಾರಣ ವಿಷ್ಣು ಶ್ರೀರಮಾಪತಿಯೇ ಸ್ವತಂತ್ರ ಜಗನ್ನಾಥ ಸರಸಿಜೋದ್ಭವ ಶಿವ ಶಕ್ರಾದಿ ಸರ್ವರಿಗೂ ಪ್ರೇರಕನು ಸ್ವಾಮಿಯು ಚಿತ್ ಅಚಿತ್ ನಿಯಂತ 11 ವಿಹಿತ ಸಾಧನಕ್ಕೊದಗೆ ನ್ಯಗ್ರೋಧೋದುಂಬರ ಹರಿ ದೇಹ ಬೆಳಸುವ ಪೋಷಿಸುವ ರಕ್ಷಿಸುವನು ಅಹರ್ನಿಶಿ ಪಾಲಿಸುವ ಭಕ್ತವಾತ್ಯಲ್ಯದಿ ಮಹಾರ್ಹರ ರಕ್ಷಿಸಿದ ಪ್ರಹ್ಲಾದ ಗಜಪತಿಯ 12 ಹರಿಯ ಪಾದಕೆ ಅಭಿಷೇಕ ಮಾಡಿದ ಬ್ರಹ್ಮ ಹರನು ಕೈಲಾಸ ವಾಸನು ಆ ತೀರ್ಥ ಸಹಸ್ರನಾಮ ಬೃಹತೀ ಸಹಸ್ರ ಸಹ ಪಠಿಸುತ್ತಾ ಸತಿ ಪಾರ್ವತಿಗೆ ಎರೆದ 13 ಹರಿನಾಮ ಸಂಸ್ಮರಣೆ ಪೂರ್ವಕದಿ ಈ ನುಡಿಯ ಬರೆಯುವ ಪಠಿಸುವ ಕೇಳುವ ಭಕ್ತರನ್ನು ಶ್ರೀರಮಾಯುತ ಹರಿ ಸುರವೃಂದ ಸಹ ಬಂದು ಸಂರಕ್ಷಿಸುವ ಸರ್ವವಿಪತ್ ದೂರ ಮಾಡಿ 14 ವರಾಹ ನರಸಿಂಹ ಭೂತಿದ ದಯಾಬ್ಧಿ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಸದಾ ಶರಣು ಮಾಂಪಾಹಿ ಸಜ್ಜನರ 15
--------------
ಪ್ರಸನ್ನ ಶ್ರೀನಿವಾಸದಾಸರು
ಸರ್ವೋತ್ತಮನ ಪರಮ ಪುರುಷ ಪರಮಾತ್ಮನ ವರ ಶಿರೋಮಣಿ ಪುರುಷೋತ್ತಮನ 1 ಧರೆಯ ಗೆಲಿದ ಮಹಾಶೂರನ ವರವಿತ್ತ ಉಗ್ರಾವತಾರನ 2 ಧರೆಯ ಬೇಡಿದ ಬ್ರಾಹ್ಮಣೋತ್ತಮನ ಪರಶುಪಿಡಿದ ಪರಾಕ್ರಮನ ಸ್ಥಿರ ಪದವಿತ್ತ ದೇವೋತ್ತಮನ ಗಿರಿಯನೆತ್ತಿದ ಮಹಾಮಹಿಮನ 3 ಗುಪಿತ ಪೊಕ್ಕಿದ್ದನ ಅಪರಂಪಾರ ಮಹಿಮಾನಂದನ ಒಪ್ಪುವ ತೇಜಿನೇರಿದ್ದನ ಕಪಟನಾಟಕ ಪ್ರಸಿದ್ಧನ 4 ಭಕ್ತವತ್ಸಲ ಭವನಾಶನ ಮುಕ್ತಿದಾಯಕ ದೇವ ದೇವೇಶನ ಮಹಿಪತಿ ಆತ್ಮ ಪ್ರಾಣೇಶನ ಗುರು ಭಾನುಕೋಟಿ ಪ್ರಕಾಶನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಕು ಸಾಕು ಇನ್ನು ಕಷ್ಟ ಅನೇಕಾ ಬೇಕು ಬೇಕು ನಿನ್ನ ಕರುಣ ಪ ಹಿಂದಿನಿಂದ ಎನ್ನ ಹೊಂದಿಬಂದ ದೋಷದಿಂದ ನಾನು ಬಹು ಬಳಲುತಲಿ ----------------------- ಎಂದು ಎಂದು ನಿಮ್ಮಂದ ದ್ವಯಪಾದ ಹೊಂದುವೆ ನಾನೆಂದೆನುತಲಿ----- ಬೆಂದುನೊಂದು ಈ ಚಂದದಿ ಈ ಪರಿಯಿಂದ ನಿನ್ನನಾ ಹೊಗಳುತಲಿ--- ಬೆಂದು ನೊಂದೆ ನಿನ್ನ ಮಂದಿರ ಸೇವಕನೆಂದು ಬಹಳ ಗೋವಿಂದ ಕೃಪಾಳು 1 ಘೋರ ರಾಕ್ಷಸ----ರಿದ ಅವರ ಸಂಹಾರವ ಮಾಡಿದ ಬಲವಂತ ------------------ ವೀರಶೂರ ಗಂಭೀರ ಕೃಪಾಕರ ವಾರಿಜೋದ್ಭವನ ಪಡೆದಂಥಾ ಸಾರಿಸಾರಿ ನಿಮ್ಮ ಸ್ಮರಿಸುವವರಿಗೆ ಸರ್ವ ಸಂಭ್ರಮವು ಮಾಡುವಂಥಾ ಕೀರುತಿ-----ರನು ಯನುತಲಿ ------ನಿಮ್ಮ ಸರ್ವೋತ್ತಮನಂಥಾ 2 ಗಾಧೆ ಬೋಧೆ ಗೊಳಗಾದೆ ಈ ಪರಿ ವೇದಾಂತ---ದೊಂದರಿಯೆ ಸಾಧು ಸಾಧಕರ ಬೋಧೆಗಳೆಂಬುವ ಸದಾ ಕರ್ಣದಿ ಕೇಳರಿಯೆ----ದರೆ ಮಾಧವ ಮಧುಸೂದನ ಧೊರಿಯೆ ವೇದ ಆದಿ ಅಗಾಧ ಗೋಚರನೆ ಪತಿ 'ಹೆನ್ನ ವಿಠ್ಠಲ’ ಹರಿಯೆ 3
--------------
ಹೆನ್ನೆರಂಗದಾಸರು
ಸಿರಿವರನ ಕರುಣಕ್ಕೆ ಪಾತ್ರ ನಾನಾದೆ ಪರಮ ಹರಿಭಕ್ತನಾಗಿ ಬಾಗಿ ಶರಣೆಂದು ಪ ಪರಿಪರಿಯಿಂದೊರೆದ ಕುಲಗುರುವಿನ ವಾಕ್ಯಗಳ ತರದೆ ತುಸು ಗಣಿತಕ್ಕೆ ಮರಣಭೀತಿಲ್ಲದೆ ಹರಿಸರ್ವೋತ್ತಮನೆಂಬ ವರಮಂತ್ರ ಪಠಿಸಿದ ಪರಮಪ್ರಹ್ಲಾದರಿಗೆ ನಿರುತ ಶರಣೆಂದು 1 ಪನ್ನಂಗಶಯನ ಉನ್ನತ ಮಹಿಮೆಗಳ ತನ್ನೊಳಗೆ ತಾ ತಿಳಿದು ಭಿನ್ನ ಭೇದವಿಲ್ಲದೆ ಗನ್ನಗತಕನಾದ ಅಣ್ಣನಿಗೆ ಮಹ ನೀತಿ ಯನ್ನು ಪೇಳಿದ ವಿಭೀಷಣಗಿನ್ನು ಶರಣೆಂದು 2 ವನಧಿಯನ್ನು ಲಂಘಿಸಿ ದನುಜಕುಲ ಸಂಹರಿಸಿ ವನಜನಾಭನ ಸೇವೆ ಮನುಮುಟ್ಟಿ ಗೈದು ಜನನಮರಣವ ಗೆಲಿದು ಘನಪದವಿ ಗಳಿಸಿದ ಹನುಮರಾಯರ ಪದಕೆ ಮಣಿದು ಶರಣೆಂದು 3 ತರಳತನದಲಿ ನಿಖಿಲ ಧರೆಭೋಗಗಳ ತೊರೆದು ಹರಿಮಂತ್ರ ಜಪಮಾಡಿ ಸ್ಥಿರಪದವ ಪಡೆದ ಪರಮಕಂಟಕ ಗೆಲಿದವರಿಗರಿತು ಶರಣೆಂದು 4 ನಿತ್ಯನಿರ್ಮಲ ನಿಖಿಲಕರ್ತ ಶ್ರೀರಾಮನಡಿ ಭಕ್ತರೆನಿಸಿದ ಮಹ ನಿತ್ಯಾತ್ಮರ ಸತ್ಯಪಾದಗಳೆನ್ನ ನೆತ್ತಿಯೊಳ್ಪೊತ್ತು ನಿಜ ಚಿತ್ತದಿಂ ನೆನೆನೆನೆದು ನಿತ್ಯಶರಣೆಂದು 5
--------------
ರಾಮದಾಸರು
ಸುತ್ತಬೇಕು ಜನ್ಮವೆತ್ತಬೇಕು ಪ ಕತ್ತಲೆ ಸಂಸಾರದೊಳು ಹೊತ್ತು ಹೊರೆಯ ನಿತ್ಯ ಅ.ಪ ಭರತಖಂಡದೊಳು ಪುಟ್ಟಿ ಮರುತ ಮತವ ಪೊಂದಿಕೊಂಡು ಗುರುಕೃಪೆಯನು ಪಡೆದು ಹರಿ ಸರ್ವೋತ್ತಮನೆಂದರಿಯೋ ತನಕ 1 ಅರಿಷಡ್ವರ್ಗವನ್ನೆ ತ್ಯಜಿಸಿ ದುರುಳರ ಸಂಗ ಕತ್ತರಿಸಿ ಪರಿ ಕಾರ್ಯ ಕರ್ಮದೊಳು ಹರಿಯು ತೋರುವ ತನಕ 2 ಬಿಂಬ ವಿಜಯ ರಾಮಚಂದ್ರ - ವಿಠಲರಾಯನು ಹೃದಯ ಅಂಬರದೊಳಗೆ ಪೊಳೆದು ಅಂಬವಿರಜೆಯಲಿ ಮುಳುಗೊ ತನಕ 3
--------------
ವಿಜಯ ರಾಮಚಂದ್ರವಿಠಲ
ಸುಮ್ಮನ್ಯಾತಕೆ ಕಾಲಕಳೆಯುವಿಯೋ ಹೇ ಸುಮ್ಮನ್ಯಾತಕೆ ಕಾಲಕಳಯುವಿ ಪ ಬ್ರಹ್ಮನಯ್ಯನ ವಿಮಲ ಚರಣ ಒಮ್ಮನದಿಂ ಪೊಗಳುತನುದಿನ ನಿರ್ಮಲಪದವಿ ಸಂಪಾದಿಸದೆ ನೀ ಅ.ಪ ಮತ್ತು ನಿನ್ನಗೆ ಹತ್ತಿ ಬರುವುದೆ ನಿತ್ಯ ವೆನಿಪತ್ಯಧಿಕ ಸಮಯವು ಸತ್ಯ ಸರ್ವೋತ್ತಮನ ಪಾದವ ನಿತ್ಯ ಪಾಡುತ ಸಾರ್ಥಕ್ಹೊಂದದೆ 1 ಮೃತ್ಯುಬಾಧೆಯ ಗೆಲಿಸಿ ನಿನ್ನ ಪ ವಿತ್ರನೆನಿಪ ಮಹ ಮೃತ್ಯುಲೋಕದಿ ಉತ್ಪತ್ತಿಯಾಗಿ ರಿಕ್ತಹಸ್ತದ್ಹೋಗ್ವತಿ ಚಿತ್ತಜಪಿತನ್ನರ್ತು ಭಜಿಸದೆ 2 ಭಕ್ತಜನರು ಕೈಯೆತ್ತಿ ಪೇಳಿದ ಸತ್ಯದೋಕ್ತಗಳ್ನಿತ್ಯವೆಂದು ಭಕ್ತವತ್ಸಲ ಸಿರಿಯರಾಮನ ಚಿತ್ತದರಿತು ಮುಕ್ತಿ ಪಡೆಯದೆ 3
--------------
ರಾಮದಾಸರು