ಪರರ ಮನೆಗೆ ಪೋಗಿ ತಿರುಗುವೆ ಯಾತಕೆ
ಸುರತರುವಿರುವದ ಅರಿಯದೆ ಮನುಜ ಪ.
ವರದಿಹ ಸುರಮುನಿ ಗುರುವರ ನಾರದ
ಪೊರೆವ ಹರಿ ಎಂದ ಪುರಂದರದಾಸರ ಅ.ಪ.
ವರ ದಿವಕರನೇಳದ ಮುನ್ನ ಸ್ಮರಿಸುತ
ಹರಿಯ ನೀನೇಳೆಂದು ಕರುಣಸಾಗರ
ಹರಿಚರಣಕೆ ನಿನ್ನಯ ಹರಣವ ಬಾಗುತೆ
ಪೊರೆವ ನಿನ್ನ ಜೀವವೆಂದರುಹಿದ ಮರೆತು ನೀನನುದಿನ 1
ಅಂಗನೆ ದ್ರೌಪದಿ ಗಂಗ ಸ್ನಾನಕೆ ಪೋಗೆ
ರಂಗನ ಚರಣವ ಸ್ಮರಿಸುವಂಥ ಶುಕರು
ಹೆಂಗಳೆಯನು ಮಾನಂಗಳ್ವಸ್ತ್ರವ ಬೇಡೆ
ಮಂಗಳೆ ಕೈಯಿಂದ ರಂಗನ ಕೊಡಿಸಿರೆಂದು ಮರೆತುನೀನನುದಿನ2
ತೋರಿದ ಜಗಕೆ ಕೃಷ್ಣನೆಂಬೋ
ನಾರಿ ಸೊಲ್ಲ ಕೇಳಿ ಭೋರೆಂಬೊ ಸಭೆಗೆ ತಾ
ಕೋರಿದಕ್ಷಯ ಶೀರೆ ಶ್ರೀ ಶ್ರೀನಿವಾಸನು ಮರೆತು ನೀನನುದಿನ3