ಒಟ್ಟು 170 ಕಡೆಗಳಲ್ಲಿ , 43 ದಾಸರು , 152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವಂದೇಹಂ ಕಮಲಾದ್ರಿನಿವಾಸಂ-ಪಲ್ಲವೀಶಂ-ಇಂದೀವರಭಾಸಂಪ ಗಣಾನಂದ ವಿಲಾಸಂ ಅ.ಪ ಪರಿ ಶಿಷ್ಟಶಿಖರಿವಿಹಾರಂ ಅಷ್ಟಮೂರ್ತಿಪರಮೇಷ್ಟಿಸಮರ್ಚಿತ- ಮಷ್ಟಸಿದ್ಧಿದಾತಾರಮುದಾರಂ 1 ಅಂಬುಜಭವಪಿತ ಮಂಬುಜ ಪತ್ರ ವಿಡಂಬಿನಯನ ಯುಗಳಂ ಘಟ ಚರಣಾಂಬುಜಯುಗಳಂ 2 ನಂದ ಗೋಕುಲಾನಂದ ಕಾರಣ ನಂದೋಪವರ ಕರುಣಂ ಮಂದಹಾಸ ವಿಜಿತೇಂದು ಕಿರಣಮತಿ- ಸುಂದರಾಂಗಮಾನಂದ ವಿತರಣಂ 3 ಮೋಹನ ವೇಣುನಿನಾದಂ ಲಲನಾಜನಸಂಮಿಳಿತವಿನೋದಂ 4 ಧರಣೀಭರ ಪರಿಹರಣೋಚಿತವರ ಕರುಣಾಯತನಿಜವೇಷಂ ವಿಠಲಾ ನತಪದ ಶರಣ ಸುಪೋಷಂ 5
--------------
ಸರಗೂರು ವೆಂಕಟವರದಾರ್ಯರು
ವಂದ್ಯನೆ ಲಾಲಿಸೋ ವರದನೇ ಪಾಲಿಸೋ ಪ ಪಯೋನಿಧಿ ಪಾರದನೆ ವಾರಿಧಿಮದಹರ ವಾರಿಧಿನಿಭಶಾರೀರವಿಹಾರ ವಿಶಾರದನೆ 1 ಶ್ರೀಶನಿಖಿಲ ಲೊಕೇಶಜನಕಭವ ಪಾಶವಿಮೋಚನ ಪಟುಚರಿತ ಈಶವಿನುತ ಸರ್ವೇಶ ಪರಾತ್ಪರ ಕೇಶವ ಸದ್ಗುಣ ಗಣಭರಿತ 2 ಶರಣರ ಸಲಹುವ ಶ್ರೀಧರನೆ ಚಕ್ರಧರ ವರನೆ 3
--------------
ಸರಗೂರು ವೆಂಕಟವರದಾರ್ಯರು
ವನಭೋಜನ ಊರ್ವಶಿ: ಇದೀಗ ಮನವು ಇಂದಿರಾಕ್ಷಿ ಇದೀಗ ಮನವುಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವುಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ4 ಊರ್ವಶಿ : ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ5
--------------
ತುಪಾಕಿ ವೆಂಕಟರಮಣಾಚಾರ್ಯ
ವನಭೋಜನ ಊರ್ವಶಿ:ಇದೀಗ ಮನವು ಇಂದಿರಾಕ್ಷಿ ಇದೀಗ ಮನವು ಪ. ಮಧುಸೂದನ ತನ್ನ ಸದನದಿಂದಲಿ ಒಮ್ಮೆ ಒದಗಿ ಪಯಣಗೈದು ಪದುಳದಿ ಮಂಡಿಪ 1 ವಾಸುದೇವ ತಂಪಾಶುಗದಿಂದಾ- ಯಾಸವ ಬಿಡಿಸಿ ಸಂತೋಷಪಡಿಸುವಂತಿದೀಗ 2 ಭಾಗವತರು ಅನುರಾಗದಿ ಕೂಡಿ ಸ- ರಾಗದಿ ಯೋಗಾರೋಗಣೆಮಾಡುವದೀಗ 3 ಸತ್ಪಾತ್ರ ವಿಯೋಗ ಸು- ಕ್ಷೇತ್ರ ಸುಧಾಮಯ ಕೀರ್ತಿಯೆಂದಿನಿಸುವ 4 ತರುಗುಲ್ಮಾವಳಿ ಸುರಮುನಿಗಳು ಕಾಣೆ ಉರು ಪಾಷಾಣವೆಲ್ಲವು ಸಚ್ಚರಿತವು 5 ರಂಭೆ : ಪೋಗಿ ಬರುವ ವನಕ್ಕಾಗಿ ನಾಗವೇಣಿ ಲೇಸಾಗಿ ಬೇಗ ನಾವು ಪ. ಭಾಗವತಾದಿ ಸಮಾಗಮವಾದರೆ ಭಾಗ್ಯವಂತೆಯರ್ನಾವಾಗಿ 1 ಹರಬ್ರಹ್ಮಾದಿ ನಿರ್ಜರರಿಗಸಾಧ್ಯವು ಹರಿಪ್ರಸಾದವೆಂದು ಸಾಗಿ ಬೇಗ 2 ನಾರಿ ನಿನ್ನ ಉಪಕಾರ ಮರೆಯೆ ನಾ ಭೂರಿ ಪುಣ್ಯವಶಳಾಗಿ 3 ಕಾಣದಿರಲು ಯೆನ್ನ ಪ್ರಾಣ ನಿಲ್ಲದು ಕಾಣೆ ಶ್ರೀನಿವಾಸನ ಭೇಟಿಗಾಗಿ 4 ಊರ್ವಶಿ :ಅಭಿಷೇಕವನು ಗೈದರಾಗ ಮನಸಿಗನುರಾಗ ಪ. ವಿಭುಧೋತ್ತಮರೆಲ್ಲರು ಕೂಡುತ್ತ ಶುಭ ಋಗ್ವೇದೋಕ್ತದಿ ನಲಿಯುತ್ತ ಅ.ಪ. ಕ್ಷೀರಾರ್ಣವದೊಳಗಾಳಿದವಂಗೆ ಕ್ಷೀರಾಬ್ಧಿಯ ದುಹಿತೆಯ ಗಂಡನಿಗೆ ನೀರಜನಾಭನ ನಿಖಿಲ ಚರಾಚರ ಪೂರಿತ ಕಲ್ಮಷದೊರಗೆ ಕ್ಷೀರದ1 ಚದುರತನದಿ ಗೊಲ್ಲರೊಳಾಡಿದಗೆ ದಧಿಪಾಲ್ ಬೆಣ್ಣೆಯ ಸವಿದುಂಡವಗೆ ಮದನಜನಕ ಮಹಿಮಾಂಬುಧಿ ಕರುಣಾ- ಸ್ಪದ ಸತ್ಯಾತ್ಮ ಸನಾಥಗೆ ದಧಿಯ 2 ಶ್ರುತಿಸ್ಮøತಿತತಿನುತ ರತಿಪತಿಪಿತಗೆ ಅತುಲಿತಗುಣ ಸೂನೃತಭಾಷಿತಗೆ ದಿತಿಸುತಹತ ಶೋಭಿತ ಮೂರುತಿ ಶಾ- ಶ್ವತವಾಶ್ರಿತ ವಾಂಛಿತಗೆ ಘೃತವ 3 ಮಧುಸೂದನ ಮಂದರಗಿರಿಧರೆಗೆ ಮೃದುವಾಕ್ಯಗೆ ಮಂಗಲಾಂಗನಿಗೆ ಪದಮಳಾಕ್ಷ ಪರಾತ್ಪರವಸ್ತು ನೀ- ರದ ಶ್ಯಾಮಲ ನಿತ್ಯಾತ್ಮಗೆ ಮಧುವಿನ 4 ಕರುಣಾಕರ ಕಮಲಜತಾತನಿಗೆ ದುರುಳ ಸುಬಾಹು ತಾಟಕಿ ಮರ್ದನಗೆ ನರಕಾಂತಕ ನಾರಾಯಣ ಸಕಲಾ- ಮರಪೂಜಿತಗೆ ಸರ್ವಾತ್ಮಗೆ ಸಕ್ಕರೆ 5 ಎಳೆತುಳಸೀವನಮಾಲಾಧರಗೆ ಫಲದಾಯಕ ಪರಬ್ರಹ್ಮರೂಪನಿಗೆ ಕಲುಷರಹಿತ ನಿರ್ಮಲಚಾರಿತ್ರ್ಯ ನಿ- ಶ್ಚಲಿತಾನಂದ ನಿತ್ಯನಿಗಳ ನೀರಿನ 6 ಕನಕಾಂಬರಧರ ಶೋಭತನಿಂಗೆ ಮನಕಾನಂದವ ಪಡಿಸುವನಿಂಗೆ ಚಿನಮಯ ಪರಿಪೂರ್ಣ ವಿಶ್ವಂಭರ ಜನಕಜಾ ವರನಿಗೆ ಕನಕಾನನೀಕದ 7 * * * ವೆಂಕಟೇಶ ಕಣ್ಣ ಮುಂದೆ ನಿಂತಿದಂತಿದೆ ಪ. ಶಿರದೊಳು ರತ್ನಕಿರೀಟದ ಝಳಕ ಮೆರೆವ ಲಲಾಟದಿ ಕಸ್ತೂರಿತಿಲಕ ವರ ಕರ್ಣಕುಂಡಲಗಳ ಮಯಕನಕ ಚೆಲುವ ಚರಾಚರಭರಿತಜ ಜನಕ1 ಕಂಬುಕಂಠದಿ ಕೌಸ್ತುಭವನಮಾಲ ಇಂಬಾಗಿಹ ಭೂಷಣ ಶುಭಲೋಲ ಸಂಭ್ರಮಿಸುವ ಮೋಹನ ಗುಣಶೀಲ ಅಂಬುಜನಾಭಾಶ್ರಿತಜನಪಾಲ 2 ಶಂಖಸುದರ್ಶನಗದಾಪದ್ಮ ಧಾರಿ ಕಂಕಣವೇಣುವಡ್ಯಾಣವಿಹಾರಿ ಬಿಂಕದ ಬಿರುದಾಂಕಿತ ಕಂಸಾರಿ ಶಂಕೆಯಿಲ್ಲದ ಭೂಷಣಾಲಂಕಾರಿ 3 ಎಡಬಲದಲಿ ಮಡದಿಯರ ವಿಲಾಸ ಕಡುಬೆಡಗಿನ ಪೀತಾಂಬರಭೂಷ ಕಡಗ ಕಾಲಗೆಜ್ಜೆ ಅಂದುಗೆಯಿಟ್ಟು ತೋಷ ಒಡೆಯ ಶ್ರೀನಾರಾಯಣ ಸರ್ವೇಶ 4 ಈ ರೀತಿಯಲಿ ಶೃಂಗಾರನಾಗುತ್ತ ಭೂರಿಭಕ್ತರ ಕಣ್ಮನಕೆ ತೋರುತ್ತ ನಾರದಾದಿ ಮುನಿವರ ಗೋಚರದ ಚಾರುಚರಣವನು ತೋರಿಸಿ ಪೊರೆದ 5 * * * ಆರೋಗಣೆಯ ಗೈದನು ಶ್ರೀರಂಗ ಸಾರಸವಾದ ಸಮಸ್ತ ವಸ್ತುಗಳ ಪ. ಧೂಪದೀಪನೈವೇದ್ಯವಿಧಾನ ಶ್ರೀಪರಮಾತ್ಮ ಮಂಗಲಗುಣಪೂರ್ಣ 1 ಸುರತರುವಿನ ಸೌಭಾಗ್ಯದ ತೆರನ ಮರಕತಮಯ ಹರಿವಾಣದೊಳಿದನ 2 ಭಕುತರ ಸೌಖ್ಯವಿನ್ನೇನೆಂಬುವೆನು ಶಕುತ ಶ್ರೀಮಾಧವ ನಿರತ ತೋರುವನು 3 * * * ಆರತಿ ಶ್ರೀನಿವಾಸಂ ಶ್ರೀವೆಂಕಟೇಶಂ ಗಾರತಿ ಶ್ರೀನಿವಾಸಂ ಪ. ಮಂಗಲಾಂಗ ನರಸಿಂಗ ಮನೋಹರ ರಂಗರಾಯ ಶ್ರೀಗಂಗಾಜನಕಗೆ 1 ಮಾಧವ ಮಧುಹರ ಮೋದಭರಿತ ಜಗ- ದಾಧಾರ ವೇಣುನಾದವಿನೋದಗೆ 2 ನಿತ್ಯನಿರಂಜನ ಸತ್ಯಸ್ವರೂಪಗೆ ಪ್ರತ್ಯಗಾತ್ಮಪರತತ್ತ್ವಸ್ವರೂಪಗೆ3 ಭೋಜನವ ಗೈದರು ಪ. ಮೂಜಗತ್ಪತಿಯ ಪ್ರಸಾದಪ್ರತಾಪದಿ ನೈಜವಾಗಿಹ ಪಾಪ ಮಾಜಿ ಹೋಗಾಡುತ್ತ1 ಜಿಹ್ವೆಗೆ ರುಚಿಕರವಪ್ಪುದ ಮಿಗಿಲಾದ ಶಾಕಪಾಕಗಳನ್ನು ಪಾತ್ರದಿ ತೆಗೆದು ಸಂತೋಷ ಬೆಡಗುಗಳ ತೋರುತ್ತ 2 ಹಪ್ಪಳ ಸಂಡಿಗೆಯು ತಪ್ಪು ಒಗರ ಶಾಲ್ಯನ್ನಗಳೆಲ್ಲವ ತಪ್ಪದೆ ಸವಿದು ಬಾಯ್ ಚಪ್ಪರಿಸಿದರಾಗ 3 ಹೋಳಿಗೆಯು ಕಾಯದ ಜಡಗಳು ಮಾಯಕವಾದವು ಆಯುರಾರೋಗ್ಯ ಸುಶ್ರೇಯ ಕಾರಣವಾಯ್ತು 4 ಸುರರು ಉರಗ ಮಾನವರೆಲ್ಲರೂ ದೊರೆಯ ಪ್ರಸಾದವು ದೊರಕಿತು ಎನುತ ವಿ- ಸ್ತರವಾದ ತೋಷದಿ ಭರದಿಂದೊದಗುತಲಿ 5 ಭೋಗವಿನ್ನಂತೆಯಿಲ್ಲಿ ರೋಗ ದುರಿತವೆಲ್ಲ ನೀಗಿತು ಎನುತನು- ರಾಗದಿ ಸವಿದುಂಡು ತೇಗಿದರೆಲ್ಲರು 6 ಪುಣ್ಯ-ಫಲದಿಂದ ದೊರಕಿತಲ್ಲೇ ನಲವಿಂದಾನತರು ಕೈ ತೊಳೆದ ನೀರಿನೊಳಿದ್ದ ಜಲಜಂತು ಸಹವು ನಿರ್ಮಲಿನವಾದವು ಕಾಣೆ 7 ಪಾವನವಾದರು ಹಿಂಡು ಉದ್ದಂಡ ಮೃಗಗಳೆಲ್ಲ &ಟಿb
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಾಹನ ಈಕ್ಷಿಸು ಪ್ರೇಮದೊಳೆನ್ನ ನೀಂ ಪ ಭೂರಿ ಸಾರಸ ಸನ್ನಿಭ ಲೋಚನ ಶ್ರೀಶ ಶಾರದ ಚಂದ್ರಸಮ ಹಾರ ವಿಹಾರ1 ಇಂದಿರೆ ತನುಮಂ ಅಂದದೊಳಪ್ಪುತ ಮೋದವ ಪೊಂದಿ ವಂದಿತ ಜನ ಮನೋನಂದ ವಿನೋದ 2 ಶ್ರೀವನಮಾಲಾ ಭಾವಿತಭಾವ ದೇವಚಿದಾತ್ಮ ಜೀವಪ್ರಭಾವ ಶ್ರೀ ವಿಭವಾನ್ವಿತ ಪಾವನರೂಪ 3 ವೈರಿ ಜ್ಞಾನ ಸ್ವರೂಪ ಭಾನುಕರಾರ್ಪಿತ ಭಾಮ ಯಶೋಧ ಧೇನುಕಪುರಪ್ರಿಯ ಗಾನ ಸ್ವರೂಪ 4
--------------
ಬೇಟೆರಾಯ ದೀಕ್ಷಿತರು
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವ್ರಜ ವಿಹಾರ ಜಯ ಮುರಾರೆ ಪ ಭಜಿಪ ಯೋಗವೇನು ಸುಕೃತವೊ ಅ.ಪ ಮುರಳಿನಾದ ಸುಧೆಯ ಧಾರೆ ಹರಿದುದೆನ್ನ ಶ್ರವಣದಲ್ಲಿ ಬೆರೆತೆ ನಿನ್ನ ಮರೆತೆ ಮೈಯ್ಯ ಹಿರಿಯದಾಯ್ತು ಜನುಮವಿಂದು 1 ಮೃದುಲಹಾಸ ಮಧುರಭಾಷ ವದನ ಸೊಬಗ ನೋಡಿದೆನೋ ಶ್ರೀಶ ಸದನದಲಿ ಮನೋಹರ ವಿಲಾಸ ಹೃದಯ ಕಮಲಕಾದುದು ವಿಕಾಸ 2 ಭೋಕ್ತ ನಿನಗೆ ಭಕುತಿ ಕುಸುಮವೆನ್ನ ಸೇವೆ ಸುಖವನೀಪರಿ ನಿತ್ಯಗೊಳಿಸೊ ಮುಕುತಿಯಿರಲಿ ಶ್ರೀ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಶಂಕರ ದೇವನಾಲಂಕಾರ ಶಯನ ಶಂಖ ನೃಪನ ಪಾಲಾ ಶಂಖಾದಿ ಸೂದನ ಶಂಕೆಯಿಲ್ಲದೆ ತಾಯಿ ಸಂಕಲೆ ಕಡಿದ ಶಶಾಂಕಕೋಟಿ ಪ್ರಭಾವ ಸಂಕರುಷಣ ದೇವ ಶಂಖಾರಿಧರನೆ 1 ಕಂಬದಿ ಬಂದಚ್ಯುತನೆ ಗೊಲ್ಲರ ಸಲಹಿದ ಗೋವರ್ಧನಧರ ಪುಲ್ಲ ಲೋಚನನೆ2 ಅಖಿಳ ಅಸುರರ ಶಕುತಿಯ ಅಪಹರಿಸಿದ ಅದಿತಿ ರುಕ್ಮಿಣಿಯೊಡನೆ ವಿಹಾರ ಸಕಲ ಸುರರೊಡೆಯ ಸಾಮಗಾಯನಲೋಲ ಶಕುಜನಕನೆ3 ಶಾಮಲ ಶರೀರ ವರ್ಣ ವಿನುತ ರೋಮ ರೋಮ ಕೂಪದಿ ಆನಂದ ಭರಿತ ದಾಮೋದರ ವಿಶ್ವದಾನಿಗಳರಸನೇ ಸಾಮಜವರದ 4 ಸನ್ನುತ ಚರಣ ಅನಿರುದ್ಧ ದೇವನೆ ಅಸುರ ಸಂಹರಣಾ ಕನಕಗರ್ಭಾದಿ ಸುರಕಟಕ ಪಾಲಕನೆ ವನಜ ಜಾಂಡವ ಪೆತ್ತ ವೈಕುಂಠ ಪುರಾಧೀಶ 5 ಫಣಿ ಫಣ ಮರ್ದನ ಪ್ರಣವ ಪ್ರತಿಪಾದ್ಯ ಪ್ರ ಸನ್ನವದನಾ ರಣರಂಗ ಭೀಮಾ ಭಕುತ ಜನ ಮೋದನಾ ಅಣು ಸ್ಥೂಲದಲಿ ಗಮನ 6 ಶ್ವೇತವಾಹನನ ಸಮರದಿ ಕಾಯಿದಾ ಅಖಿಳ ಜೀವ ಭೇದಾ ದರ ಪರಮ ಸುಮೋದಾ ಭೀತಿರಹಿತ ಕಲ್ಪಭೂಜನೆನಿಪ ಜಗನ್ನಾಥವಿಠ್ಠಲನೆ 7
--------------
ಜಗನ್ನಾಥದಾಸರು
ಶಂಕರನಂದನ ನಮೋ ನಮೋ ಕಿಂಕರಪಾಲಕ ನಮೋ ನಮೋ ಪ ಪಂಕಜಭವನುತ ನಮೋ ನಮೋ ಸಂಕಟ ಪರಿಹರ ನಮೋ ನಮೋ ಅ.ಪ ಓಂಕಾರಪ್ರಿಯ ದಿವ್ಯಶರೀರಾ ಶಂಕರ ಸುಖಕರ ಭವಪರಿಹಾರ ಅಂಕನಾಥ ಸರ್ವೇಶ ಮನೋಹರ 1 ಗಿರಿಜಾನಂದ ಕುಮಾರ ಶರಣಾಗತ ಪರಿವಾರ ವರಕೈಲಾಸ ವಿಹಾರ | ಸುರುಚಿರ ವಜ್ರಶರೀರಾ ಶರವಣಭವ ಭುಜಗೇಶ | ಕರುಣಾಕರ ಜಗದೀಶ ಹರಿಪರ್ಯಂಕ ಪರೇಶ ಮುದಗಾಂಕಿತ ಧೃತಕೋಶ 2 ಚಿಂತಾ ಜಲನಿಧಿ ಭೀಮ | ಸಂತ ಶರಣಜನ ಪ್ರೇಮ ಅಂತರ ಭಯಹರ ಜಗದಭಿರಾಮ ಸಂತಸದಾಯಕ ಮಾಂಗಿರಿಧಾಮ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶುಭ ಮಂಗಲಂ |ಮಂಜುಕರ ಲಾಲಿತ ಕುರಂಗಗೆ ||ಮಂಗಲ ಮೌನಿ ಮಾನಸ ಸಂಗಗೆ |ಮಂಗಲಂ ಮಂದಿರೀಕೃತ ಶೈಲಶೃಂಗಗೆಮಂಗಲಂ ಮಲ್ಲಿಕಾರ್ಜುನ ಲಿಂಗಗೆ ಪ ಚಾರು ಕಪರ್ದಿಗೆ ಗುಹ ಗಣಾಧಿಪ ಗುರುಗೆ | ಗೋರಾಜ ವಾಹನಗೆ |ಗಿರಿಜಾಂತರಂಗ ವಾರಿಜಭೃಂಗಗೆ 1 ಕರ್ಪೂರ ಗೌರಗೆ ಕಲ್ಪಾಂತವೀರಗೆ | ಕಾಲಾಗ್ನಿ ಕಿಲಕಾಲಿತ ಮಾರಗೆ |ಕಾಕೋಲ ಕಂಧರಗೆ ಕಾಶೀ ವಿಹಾರಗೆ |ಕಾಕೋದರಾಭರಣ ಕಮನೀಯಗೆ 2 ವಿಧು ಶಕಲಾಧಾರಿಗೆ ವಿಶ್ವಹಿತಕಾರಿಗೆ ವಿಯದಟನ ವಿಕಟ ಪುರ ಸಂಹಾರಿಗೆ | ವಿಮಲ ವಿದ್ಯಾನಿಧಿಗೆ |ವಿಧಿವಂದ್ಯ ರುಕ್ಮ ಪಾಡುಕ ಪಾದಗೆ 3 ಮಾಧವ |ಮಂಗಳ ಕರತರಂಗನ | ಅರಿತತಿ ಭಂಗವ ಬಿಡಿಸುತಕಂಗಳ ಸದೋದಿತ ರುಕ್ಮ 4
--------------
ರುಕ್ಮಾಂಗದರು
ಶೌರಿ ಪ ನಂದವ ಸೇವಕ ಬೃಂದ ತೋರಿ ಅ.ಪ ಕುಂದಮುಕುಳದಿಂದಾ ಕುಮುದ ಸುಗಂಧಿಯಗಳಿನಿಂದಾ ಕೆಂದಾವರೆ ಶ್ಯಾವಂತಿಗೆ ಜಾಜಿಯಿಂದ ರಚಿಸಿ ಸೊಗ ಸಿಂದಲಿ ಮೆರೆಯುವ 1 ಸ್ವಸ್ತಿಕಾದಿ ಬಹು ಚಿತ್ರದಿ ಶೋಭಿಪ 2 ಸೂರ್ಯ ಶಶಾಂಕ ಸುರೇಖೆಗಳಾ ಶಂಖ ಚಕ್ರ ಬಿರುದಾಂಕಿತ ದಿವ್ಯ ವಿಟಂಕದಿಂದ ಬಲು ಬಿಂಕದೊಳೆಸೆಯುವ3 ಕೋಟೆಯತೆನೆಗಳಲಿ ದಿವ್ಯವಧೂಟಿಯರೊಲವಿನಲಿ ನಾಟಕ ರಚನೆಯ ಪಾಠಕರಂದದಿ ನೋಟಕರಿಗೆ ಬಹು ದೀಟಿಯಲಿ ತೋರುವ 4 ಶಾರದಾಭ್ರನೀಲ ಶರೀರದಿ ಹೈರಣ್ಮಯ ಚೇಲಾ ಹಾರಮಕುಟ ಕೇಯೂರ ಕಟಕಮಂ ಜೀರಭೂಷಣೋದಾರ ವಿಹಾರ 5 ಮಂಗಳರವÀದೊಳಗೆ ಶಂಖ ಮೃದಂಗ ಧ್ವನಿಯೊಳಗೆ ಸಂಗತ ಸುರವಾರಾಂಗನೆಯರು ಗಾನಂಗಳಿಂದ ನಾ ಟ್ಯಂಗಳ ರಚಿಸಲು 6 ವರವಿಪ್ರರು ಪೊಗಳೆ ಛತ್ರಚಾಮರಗಳ ನೆಳಲೊಳಗೆ ಪರಿಪರಿ ಜ್ಯೋತಿಗಳೆಸೆಯಲು ಪುಲಿಗಿರಿನ ವರದವಿಠಲನು ವರಗಳ ಬೀರುತ 7
--------------
ವೆಂಕಟವರದಾರ್ಯರು
ಶೌರಿ ಪ ಬೃಂದಾರಕವರದಿಂದ ಶೌರಿಯಾನಂದವ ಸೇವಕ ಬೃಂದಕೆ ತೋರಿ ಅ.ಪ. ಕುಂದಮುಕುಳದಿಂದಾ ಕುಮುದಸು ಗಂಧಿಯಗಳಿನಿಂದಾ ರಚಿಸಿಸೊಗಸಿಂದಲಿ ಮೆರೆಯುವ 1 ಸುತ್ತಿರೆ ಹಸ್ತಿಗಳೂ-ಕೂರ್ಮನು ಪೊತ್ತಿರೆ ಮಧ್ಯದೊಳು ಮತ್ತೆಫಣೀಂದ್ರನ ಮಸ್ತಕದಲ್ಲಿರೆ ಸ್ವಸ್ತಿಕಾದಿಬಹು ಚಿತ್ರದಿ ಶೋಭಿಪ 2 ಪಂಕಜ ಚಿಹ್ನೆಗಳಾ-ಸೂರ್ಯಶ-ಶಾಂಕ ಸುರೇಖೆಗಳಾ ಬಹುಬಿಂಕದೊಳೆಸೆಯುವ3 ಕೋಟೆಯ ತೆನೆಗಳಲಿ ದಿವ್ಯವಧೂಟಿಯರೊಲವಿನಲಿ ಬಹುದೀಟಿಲಿ ತೋರುವ 4 ಶಾರದಾಭ್ರನೀಲ-ಶರೀರದಿ- ಹೈರಣ್ಮಯಚೇಲಾ ಜೀರಭೂಷಣೋದಾರ ವಿಹಾರ 5 ಮಂಗಳರವದೊಳಗೆ-ಶಂಖಮೃದಂಗ-ಧ್ವನಿಮೊಳಗೆ ನಾಟ್ಯಂಗಳರಚಿಸಲು6 ವರ ವಿಪ್ರರು ಪೊಗಳೆ-ಛತ್ರಚಾಮರಗಳ ನೆಳಲೊಳಗೆ ವರದವಿಠಲನು ವರಗಳ ಬೀರುತ 7
--------------
ಸರಗೂರು ವೆಂಕಟವರದಾರ್ಯರು
ಶ್ರೀ ಕೃಷ್ಣ ಸ್ತುತಿಗಳು ಅದೋ ಬರುವ ರಂಗ ಅದೋ ಬರುವ ಇದೋ ನಲಿವರಂಗ | ಇದೋ ನಗುವ ಪ ಇನಬಿಂಬವದನಾ | ಭ್ರಮರಕುಂತಲ ಘನ ಜನಮನರಂಜನ ಅದೋ ಬರುವ ಅ.ಪ ಶರನಿಧಿಮಂದಿರ ಭುವನಮನೋಹರ ಶರಣರಮಂದಾರ | ಅದೋ ಬರುವ ಮಾಧವ | ಅದೋ ಬರುವ 1 ಪರಿಮಳ ಹೂಹಾರ ಮೆರೆವ ಮಾಣಿಕಸರ ಪರಿಪರಿ ಮಣಿಹಾರ ಧರಿಸಿರುವ ಶರಣರಭೀಷ್ಟವ ಸಲಿಸುವೆನೆನ್ನುವ ಮುರಳಿಯನೂದುವ | ಅದೊ ಬರುವ 2 ಕುಣಿ ಕುಣಿದಾರೈವ ತರುಣಿ ರಾಧೆಯತವ ಮಣಿಯೆನಿಸುವ ದೇವ ಅದೋ ಬರುವ ವೇಣುವನೂದುವ ಜಾಣನ ಪಾದವ ಕಾಣುವ ಭಾಗ್ಯವ ನೆರೆ ಪಡೆವ 3 ಕಂಸಾರಿ ಇವನೆ ಭಕ್ತರ ಸಿರಿ ಇವನೆಲೆ ದುರುಳಾರಿ ವರನೃಹರಿ ಇವನೆಲೆ ಮಾಂಗಿರಿಶೃಂಗವಿಹಾರಿ ಇವನಹುದೆಮ್ಮಯ ಅಮಿತಸಿರಿ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಗುರುವರದೇಂದ್ರರ ಸ್ತೋತ್ರಗಳು ಅಂದಣೇರಿದ ವರದೇಂದ್ರ ಮುನಿಪರ ನಿಂದು ಪಾಡುವರಫವೃಂದ ತರಿವರ ಪ ಅಂದದಿ ಭೂಸುರ ಸಂದಣಿ ಮಧ್ಯದಿ ಚಂದದಿ ಬಹು ಕರ್ಮಂದಿಗಳರಸ ಅ.ಪ ಶ್ರೀ ಮಧ್ವಮತಾಂಬುಧಿ ಸೋಮ ನಿಷ್ಕಾಮ ತಾಮಸಮತಕÀಂಜಸ್ತೋಮ ನಿಧೂಮ ಆ ಮಹಾಭಕ್ತ ಕುಮುದ ಪ್ರೇಮ ಸತ್ಕಾಮ ಕಾಮಿತ ಕಲ್ಪದ್ರುಮಗುರುಸಾರ್ವಭೌಮ ರಾಮ ಪದಾಂಬುಜ ಪ್ರೇಮದಿ ಭಜಿಸುವ ಭೂಮಿಸುರರ ಹೃತ್ತಾಮಸಹಾರಾ 1 ಉದಿತಾಕರ್À ಸಂಕಾಶ ವಿಧಿಕುಲಾಧೀಶ ಮುದದಿ ಭಜಿಸುವ ಭಕ್ತಹೃದಯನಿವಾಸ ಸದಮಲಭಕ್ತಙÁ್ಞನ ಉದಜವಿಕಾಸ ವಿಧಿಕುಲದ್ವೇಷಿ ಕುಮುದ ತತಿನಾಶ ವಿಧವಿಧದಲಿ ಹರಿಪದ ಭಜಿಸುವ ಮತಿ ವದಗಿ ಪಾಲಿಸು ಹೃದಜನಸದಯಾ 2 ಕರುಣಾನಿಧಿಯೆ ನಿನ್ನ ಚರಣ ಸೇವಕರ ಜರಮರಣಾದಿ ದೋಷತ್ವರಿತ ಪರಿಹಾರ ಶರಧಿ ವಿಹಾರ ನಿರುತದಿ ಹರಿಯನಾಮ ಸ್ಮರಿಸುವಧೀರ ವರದೇಶ ವಿಠಲನ ಕರುಣದಿ ಧರೆಯೊಳು ಮೆರೆಯುವ ಯತಿಕುಲವರಿಯ ಸುಚರಿಯಾ 3
--------------
ವರದೇಶವಿಠಲ