ಒಟ್ಟು 413 ಕಡೆಗಳಲ್ಲಿ , 76 ದಾಸರು , 311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವು ಗುರುವು ಎಂದು ಜಗದೊಳಗಿಹರುಗುರುವು ಅದ್ಯಾತರ ಗುರುವುನರನನು ತಿಳುಹಿಯೆ ಹರನನು ಮಾಡುವಗುರುವು ಆತನೆ ಸದ್ಗುರುವು ಪ ಜ್ಞಾನವನರುಹಿ ಅಜ್ಞಾನವ ಹರಿಸುವಜ್ಞಾನಿಯಾದವ ಗುರುವುಏನೇನೋ ಭ್ರಾಂತಿಯದೆಲ್ಲವ ನೀಗಿ ನಿ-ಧಾನ ಮಾಡಿದನಾತ ಗುರುವುನೀನೀಗ ನಾನೆಂದು ಸಂಶಯ ಬಿಡಿಸಿಸನ್ಮಾನ ಮಾಡಿದನಾತ ಗುರುವು 1 ಯಮ ನಿಯಮಾಸನ ಎಲ್ಲವನರುಹಿಯೆಎಚ್ಚರಿಸಿದಾತನೆ ಗುರುವುಸಮರಸವಾಯು ಮನವ ಮಾಡಿಕುಂಭಕಕಮರಿಸಿದಾತನೆ ಗುರುವುಘುಮು ಘುಮು ಘುಮು ಎಂಬ ಘಂಟಾಘೋಷವನ್ನೆಬ್ಬಿಸಿ ಅನುವುಮಾಡಿದವ ಗುರುವುದ್ಯುಮಣಿಕೋಟಿ ಕಳೆದೃಷ್ಟಿಗೆ ತುಂಬಿಸಿದೃಢವ ಮಾಡಿದನಾತನೆ ಗುರುವು 2 ದೃಷ್ಟಿಯ ನಿಟ್ಟು ಖೇಚರಿ ಮುದ್ರೆ ನಿಲಿಸಿದಯ ಮಾಡಿದಾತನೆ ಗುರುವುಕಟ್ಟಳಿಲ್ಲದ ತೇಜ ಖವಖವ ನಗಿಸಿಯೆದಿಟ್ಟ ಮಾಡಿದನಾತ ಗುರುವುಮುಟ್ಟಿ ತುಂಬಿದ ಬೆಳದಿಂಗಳ ಖಂಡದಿಮುಳಿಗಿಸಿದಾತನೆ ಗುರುವುಶಿಷ್ಟ ಚಿದಾನಂದ ಸದ್ಗುರುವನಮಾಡಿಸಾಕ್ಷಿ ಮಾಡಿದನಾತ ಗುರುವು 3
--------------
ಚಿದಾನಂದ ಅವಧೂತರು
ಗೋಪಾಲ ಬಾಲಾ ಏಳು ಏಳೈಯ್ಯಾ | ಶ್ರೀಪತಿ ಪರಮಾನಂದ ಸಜ್ಜನರಿಗೆ ಕೊಡುವೆಸ್ವಹಿತಾಶ್ರಯಾ ಪ ನಾಮವೇದೋಕ್ತದಲಿ | ವಿಮಲತರದಿ ಸ್ತುತಿಗೈಯ್ಯುತಲಿದೇ | ಕರಮುಗಿದು ಆನಂದದಲಿ 1 ಸಂಗದಿ ತುಂಬುರ ನಾ | ಜಾಣತನಗಳಿಂದ ಪಾಡುತಲಿದಕೋ | ಅಣುಗನು ಪದ್ಮಜನಾ 2 ರವಿಯನುದಯಿಸಿದಾ || ನೋಟದಿದಯದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಿದೇವಿ ಎಂತು ಪೇಳಲೆ ನಾನೆಂತು ತಾಳಲೆ ಪ ಶ್ರೀಪತಿ ಬಂದು ನಿಂದು ಏಕಾಂತವನ್ನ ಆಡುತಾನೆ | ಪಾಪ ಇಂಥಾದುಂಟೇನೆ ಕೇಳೆ ಲಕ್ಷ್ಮೀಕಾಂತನೀತನೆ || ಮಂಥನ ಮಾಡುವಲ್ಲಿ ಮಂಥಣಿಯ ಒಡೆದನು | ಕುಂತಳವ ಪಿಡಿದು ಎನ್ನ ಕುಳ್ಳಿರಿಸಿದಾ ಕಿರಿಬೆವರನೊರಸಿದಾ 1 ಚಿಕ್ಕಮಕ್ಕಳ ಕೂಡಿ ಚಕ್ಕನೆ ತಾ ಬಂದು ಬೇಗ | ಬೆಕ್ಕು ಕುನ್ನಿ ಮರ್ಕಟವ ತಂದನಮ್ಮಾ ಇದು ಚಂದವೇನಮ್ಮ || ಉಕ್ಕುತಿಹ ಪಾಲ್ಗೊಡಗಳ ಉರುಳಿಸಿದಾ ಸುಮ್ಮನೆ | ಚೊಕ್ಕವೇನೆ ಸುಮ್ಮನೆ ಮೊಸರ ಸುರಿದಾ ಮೀಸಲು ಮುರಿದಾ 2 ರಕ್ಕಸರ ಗಂಡ ನಮ್ಮ ರಾಜ್ಯದೊಳಗಿವಗಿನ್ನು | ತಕ್ಕ ಬುದ್ದಿಯ ಪೇಳುವರದಾರು ಮೀರಿದ ಗೋಪಗೆ || ಸಿಕ್ಕ ಪಿಡಿದೇವೆಂದರೆ ಸಿಕ್ಕನಮ್ಮ ಇವ ಗುಡಿವಡ್ಡಿ ಬೇಡವೇ | ಕಕ್ಕಸದಲಿ ಬಲು ಕಕ್ಕಲಾತಿಯಲಿ 3 ಬಿರಬಿರನೆ ತಾ ಬಂದು ಬೆದರಿ ಎನಗಂದು | ಹರವಿಯ ಹಾಲು ಕುಡಿದಾ ತಾ ಎತ್ತ ಓಡಿದನೆ || ವಾರಿಗಣ್ಣಿನಿಂದಲಿ ನೋಡಿ ಒದಗಿ ಬಳಿಗೆ ಬಂದು | ತೋರವಾದ ಕುಚಗಳ ಪಿಡಿದಾನೆ ಬಲಿದನೇನೆ 4 ಹಾರ ಪದಕವು ಹಿಡಿ ಹಿಡಿ ಎಂದು ಎನ್ನ ಕೂಡ | ಸರಸವನಾಡಲಿಕ್ಕೆ ಅರಸನೇನೆ ನಮಗೆ ಪುರುಷನೇನೆ || ಪುರುಷರು ಕಂಡರೆನ್ನ ಪರಿಪರಿ ಬಾಧಿಸ್ಯಾರು | ತರಳನ ಕರೆದ್ಹೇಳು ತಿದ್ದಿ ನೀನು ಇವಗೆ ಬುದ್ಧಿ5 ಚಂಡನಾಡುತಲಿ ಚಿಕ್ಕ ಮಿಂಡಿಯರ ಕಂಡು ತಾನು | ಚಂಡು ಅಂತ ಕುಚಗಳ ಪಿಡಿದಾನೆ ಇಂಥದುಂಟೇನೆ || ಭಂಡು ಮಾಡತಾನೆ ಭಂಡಿಯ ಗೋವಳಗಿಂದು | ದಂಡಿಸವ್ವಾ ದಂಡವನು ಕೊಡು ನೀನು 6 ಚಂಡ ಪ್ರಚಂಡನಿವನು ಗೋಪಿಕೆಯರಿಗೆಲ್ಲ | ಉದ್ದಂಡನಿವನು ತಂಡ ತಂಡದಲಿ ತುರು- || ಹಿಂಡುಗಳ ಕಾಯುವ ಗೊಲ್ಲಬಾಲಕನಮ್ಮಾ |ಪಾಂಡುರಂಗ ವಿಜಯವಿಠ್ಠಲರಾಯ ಬಲು ದಿಟ್ಟನಿವನು7
--------------
ವಿಜಯದಾಸ
ಗೋಪಿಯ ಕಂದ ಇಗೋ ಬಂದ ತಾಪಸರೆಡೆಯಿಂದ ಗೋವಿಂದ ಪ ಆಪನ್ನರ ಕರೆ ಕೇಳಿಸಿದಾಕ್ಷಣ ಗೋಪಿಯರೆಡೆಯಿಂದ ಪರಿಪರಿದೋಡಿ ಅ.ಪ ಹಣೆಯ ಕಸ್ತೂರಿಯು ಥಳಥಳಿಸುತಿರೆ ಮಣಿ ಮಾಲೆಗಳೆಲ್ಲಾ ಮಿನುಗಾಡುತಿರೆ ಕಿಣಿ ಕಿಣಿ ನಾದದ ಗೆಜ್ಜೆ ನುಲಿಯುತಿರೆ ಫಣಿಪತಿಶಯನ ಮಾಂಗಿರಿಯೆಡೆಯಿಂದ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚಾರು ಗಾಯನ ರತನಾ | ಸಾಕಾರನ ತಂದು ತೋರೇ ಪ ಇರುವ ದಿಕ್ಕಿನೋಳಿಹನಾ ಪರಮ ಮಿತ್ರನಾಹಾರಾ ಮಾಳ್ವೆರಿಯಣ್ಣನಾ ನಿರುತ ಸೇವೆಯ ಕೊಂಬನಾ | ಶರೀರದಿ ಜನಿಸಿದಾವಳ ಕೂಡಿಕೊಂಡಳ ಅರಸನ ಸ್ನೇಹವ ಮಾಳ್ವನಾ ಹರಿಣಾಕ್ಷಿ ತಂದು ತೋರೇ 1 ಯೊಡಲೊಳು ತ್ವರಿತದಿ ಜನಿಸಿದನಾ | ಬಂದನಾ ಶರದೆಚ್ಚ ಸ್ಥಳ ಕೊಂಡನೇ | ಅಸುರನ ಕಂದನಾ ಕೊಂದನಾ | ಜಗ ದರಿಯನ ತಂದು ತೋರೇ 2 ಮಂದಗಮನಿ ಪ್ರಿಯನಾ | ಮುಂದ ಗಾಣದ ಲೊಲ್ಲನಾ | ಕೈಯಿಂದ ಕೊಲಿಸಿದನಾ | ನಂದನ ತಂದು ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ ನಿತ್ಯ ಕಲ್ಯಾಣಿ ಪ ಹರಜಡಿಯಲಿ ಜನಿಸಿ ಹರಿಪಾದ ಜಲವೆನಿಸಿ ಮುರಹರನ ವರ್ಣ ಪೆಸರವನೇ ಪೊತ್ತು ಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿ ಪೊರಿದೆ ಶರಣಾಗತರ ದುರಿತಗಳ ತರಿದೆ 1 ದೋಷರಹಿತಾಥೆರೆಯೊಳು ಸಾಸಿರ ಭಾಗದಲಿ ಆ ಸಲಿಲ ಬಿಂದು ಪವಮಾನ ಬಂದೂ ಬೀಸಿದಾ ಸಮಯದಲಿ ಜೀವರಾಸಿಯ ಮೇಲೆ ಕ್ಲೇಶ ಶೋಕ ವಿನಾಶ 2 ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿ ಕೃಷ್ಣವಾರ ವಿಷ್ಣು ತಾರೆಯಲ್ಲೀ ಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನ ಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ 3 ಕಪಟ ಸಂಗಮಛಾಯಾ ಶ್ರೀ ಶೈಲ ವರ ಚತುಸ್ಥಾನಗಳಲಿ ವಾಸಮಾಡಿ ಇರಲು ಕ್ತರನು ಮಾಡಿ ಪೊರದೇ 4 ಕಲಿಯುಗದಿ ಕೃಷ್ಣಾ ಸ್ನಾನ ಕೃಷ್ಣ ಸ್ಮರಣಿ ವೆ ಸತಿ ಪೊಗಳಲು ಸಿರಿ ವಿಜಯವಿಠ್ಠಲ ಕಾಣಿಸಿದಿಯಾ5
--------------
ವಿಜಯದಾಸ
ಜಯದೇವಿ ತನಯಗೆ ಮಂಗಳಂ ಶುಭ ಮಂಗಳಂ ಯುಗ ಯುಗದಿ ಪುಟ್ಟಿ | ಜಿಗಿದು ಗಗವ ಮೆಟ್ಟಿ ಹಗಲೊಡೆಯನ ಫಲ ಬಗೆಯ ಬಕ್ಷಿಸಿ ಮಿಗೆ ಭಕುತಿಲಿಂದ ರಘುಪನೊಲಿಸಿನಾ ಲ್ಮೊಗನ ಪದವಿ ಪಡೆದ ಸುಗುಣ ನಿಧಿಗೆ 1 ಪುನಃ ದ್ವಾಪರದಲ್ಲಿ ಇನಜನ ತನುಜಗೆ ಅನುಜನೆಂದೆನಿಸಿ ಹರಿಯಾಜ್ಞೆಯಿಂದಲಿ ಮಣಿಮಂತ ಮೊದಲಾದ ದನುಜರ ಗಣವೆಲ್ಲ ರಣದೊಳು ಹಣಿದಂಧ ಘವವೀರನೆ 2 ಬಂದು ಭೂಮಿಯಲ್ಲಿ ಮಧ್ಯಮಂದಿರ ನಂದನನಾಗಿ ಮಂದ ಮಾಯ್ಗಳ ಮತ ಖಂಡಿಸುತಲಿ ಶಿಂಧುತೀರದಿ ಮೆರೆವ ಇಂದುಕ್ಷೇತ್ರದಿ ಶಾಮ ಸುಂದರ ಸ್ಥಾಪಿಸಿದಾನಂದಮುನಿಗೆ 3
--------------
ಶಾಮಸುಂದರ ವಿಠಲ
ಜಯರಾಯ ಭವಹರಣ ಪಾಲಿಸೆಮ್ಮ ಪ ಜಯದೇವಿಪ್ರತಿ | ರೂಪ ಗುಣಕ್ರಿಯ ರತಯತಿಯೆ ಅ.ಪ. ಅಮರೇಶ ಸ್ವರ್ಗಪದ ತೃಣಮಾಡಿ ಕ್ಷಿತಿಯಲಿ ಪಾದ ಸೇವೆಗಾಗಿ ಅಮಿತ ಭಾಗ್ಯವಿದೆಂದು ಪಶುವಾಗಿ ನೀನಿಂದು ಕಮಲ ಮಧು ಸೇವಿಸಿದೆ 1 ತೃತಿ ಈಶರೆನಿಸುವ ಅಗ್ನಿ ಗರುಡ ಮಹರುದ್ರ ಪ್ರತಿ ಕ್ಷಣದಿ ಅತಿ ಭಕುತಿ ಭಾರದಿಂದ ನತಿಸಿ ಸೇವಿಪ ಪರಮ ಗುರುಚರಣವಾಶ್ರೈಸಿ ದತಿ ಸುಕೃತನಿಧಿ ನಮ್ಮ ಅತಿದಯದಿ ಈಕ್ಷಿಪುದು 2 ಶ್ರೀ ಭೂಮಿ ದುರ್ಗೇಶನ ಮತ ಮಂಗಳ ಮೂರ್ತಿ ಶೋಭನಾಂತ ಗುಣಕ್ರಿಯ ನಿವಹಗಳನು ಅದ್ಭುತದಿ ಧರಿಸಿಹಾ ಮಧ್ವಕೃತ ಗ್ರಂಥಗಳ ಸದ್ಭಕ್ತಿಯಲಿ ಪೊತ್ತೆ ಸೌಭಾಗ್ಯನಿಧಿ ಗುರುವೆ 3 ಪವಮಾನರಾಯನಾ ಕೃಪೆಯೆಷ್ಟೊ ನಿನ್ನಲ್ಲಿ ಅವನಿಯೊಳು ಸಿದ್ಧಾಂತ ಗ್ರಂಥಗಳ ಟೀಕೆ ಕವಿಶ್ರೇಷ್ಠನಿರಲಾಗಿ ನಿನ್ನಿಂದ ರಚಿಸಿದ ತ್ರಿ ಭುವನ ಮಾನ್ಯನೆ ಧನ್ಯ ಧನ್ಯತೆಲಿ ಪೊರೆ ಎಮ್ಮ 4 ಪಾರ್ಥನಾದಂದು ಶ್ರೀ ಯದುಪತಿಯ ಸಖ್ಯವನು ಪೂರ್ತಿಪೊಂದಿದೆ ಸರ್ವ ಪುರುಷಾರ್ಥವೆಂದು ಸ್ವಾರ್ಥಮತಿಯ ಹರಿಯ ಒಲಿಸಿದಾ ಮಹಾನಿಪುಣ ಪಾದ ಪಾಂಶು ರಕ್ಷಿಸಲೆನ್ನ 5 ದೇವಕೀಸುತ ನಿನ್ನ ಸಖನೆಂದು ಪವಮಾನ ದೇವ ನಿನ್ನಲ್ಲಿ ಮಾಡಿದ ಪರಮ ಪ್ರೀತಿ ಪತಿ ದಾಸ್ಯ ಪೂರ್ಣಪ್ರದ ಆರೂಢ ಕೇವಲಾ ಕೃಪೆ ಮಾಡು ಹರಿದಾಸ ಮಣಿಗುರುವೆ 6 ಭಾರತೀಪತಿಗೊಡೆಯ ಜಯೇಶವಿಠಲನ ವೈರಾಗ್ಯ ಸಿದ್ಧಿಯಲಿ ಏಕಾಂತ ಪೊಂದಿ ಭವ ತರಣ ಸತ್ಪಾತ್ರ ವೃಷ್ಟಿ ಹರಿಗುರುಗಳೊಲಿವಂತೆ 7
--------------
ಜಯೇಶವಿಠಲ
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು
ತತ್ವವ ಬೋಧಿಸಿದಾ ಶ್ರೀ ಗುರುರಾಯಾ ತತ್ವವ ಬೋಧಿಸಿದಾ ತತ್ವವ ಬೋಧಿಸಿ ತತ್ವ ಕರುಣಿಸಿ ಉತ್ತಮ ಜೀವಿಸಿ ಉತ್ತಮ ಗತಿಯೆಂದು ತತ್ವವ ಬೋಧಿಸಿದಾ ಪ ಹಿಂದೆಯಾದರು ಸರಿ ಇಂದಾದರೂ ಸರಿ ಗೋ- ಸಂದೇಹವಿಲ್ಲದೆ ಮುಂದೆ ಆನಂದಾತ್ಮಾ ಎಂದು ತಂದೆಯೇ ಮುಕುತಿಗೆ ಸಾಧನವೆಂದು 1 ಕನಸು ಮನಸಿನಲಿ ಅನುಗಾಲ ಧ್ಯಾನದಿಂದಲಿ ಘನಹರಿಯ ನೆನೆಯುತಲಿ ಮನಕಾನಂದವನೀವನವನಿದಿರಲಿ ಅನುಮಾನವಿನಿತು ಬಾರಲಾಗದೆನುತಲಿ 2 ನರಸಿಂಹವಿಠಲನ ಶರಣರ ಸಂಗವು ಹರಿವಾಯು ಕರುಣಕೆ ಕಾರಣವು ಮರೆಯದೆ ಹರಿನಾಮ ಸ್ಮರಣೆಯ ಮಾಡಲು ಹರಿಯೇ ಒಲಿದು ಕರಪಿಡಿವನು ಎಂದು 3
--------------
ನರಸಿಂಹವಿಠಲರು
ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಂದು ತೋರೆ ಮಂದಹಾಸನ | ಕಾಮಿನಿ | ತಂದು ತೋರೆ ಮಂದಹಾಸ | ನಂದ ಕಂದ ಶ್ರೀಮುಕುಂದ | ವಂದಿತಾಮರೇಂದ್ರ ವಂದ್ಯನ | ಕಾಮಿನಿ ಪ ಉರವನಿತ್ತಗುರುಮೊಮ್ಮನುದರಲಿ ಬಂದ ಮಾತೆ ಮಗನ | ಶರದ ಭರಕೆ ಫಣಿಲಿ ತಾಳ್ದಾನಾ | ಕಾಮಿನಿ 1 ಸರಳದಿಂದ ಪ್ರಾಣ ತೊರಿದನಾ | ಪ್ರೀತಿಯಾ | ಸರಳಕಾದು ಅಳಿದನಯ್ಯನ | ಸರಳಗದೆಯ ಕೈಯ್ಯಲಿಂದ | ಸರಳತ್ರಯನ ಕೊಲಿಸಿದಾತನ | ಕಾಮಿನಿ 2 ಶತಕಮೃಗನ ಭೋಜ್ಯವಾಹನ | ಸಖಉರಭಕಾಗಿ ನಿಲ್ಲದೇ | ಅಖಿಲದೋಳಗೆನುಸಲುತಿಹನಾ | ರಾಶಿಯ | ಪಕವನಳಿದನರಿಯಸುತನ | ರಕ್ಷಕಮಹೀಪತಿನಂದನ| ಮುಖದಿ ತನ್ನ ಚರಿತೆನುಡಿಪನ ಕಾಮಿನಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಂದೆ ಮುದ್ದು ಮೋಹನಾ | ನಿನ್ | ಅಂದ ಪಾದವ ಭಜಿಸುವೆ ಪ ನಂದ ಕಂದನ ತಂದು ತೋರಿಸಿ | ಬಂಧನವ ಪರಿಹರಿಸು ನೀ ಅ.ಪ. ವತ್ಸರ | ತರಳನಾಗಿರುವಾಗಲೇ 1 ಹರಿಯ ವ್ಯಾಪ್ತಿಯ ಕಂಡು ನೀ | ಗಿರಿ ಗುಹೇಯಲಿ ಚರಿಸುತಾತೊರೆದು ಮಮತೆಯ ಚರಿಸಿದೇ | ಕರೆಕರೆಯ ಸಂಸಾರದೀ 2 ತಪವನಾಚರಿಸುತ್ತಲೀ | ವಿಪಿನವಸಿ ಸಂಚರಿಸುತಾವಿಪವರಸ ಪೆಗಲೇರಿದವನ್ನ | ಅಪರೋಕ್ಷದಿ ಕಾಣುತಾ 3 ನಡುನಡುವೆ ಮನೆಗೈದುತಾ | ಮಡದಿಯನೆ ತಕ್ಕೈಸುತಾ ಎಡ ಬಲದ ಒಡನಾಡಿ ಜನ ಕಡು | ಮೋಹಬಡುವಂತಾಡುತಾ 4 ಇಭಗಿರೀ ರಥೋತ್ಸವಕ್ಕೇ | ಪ್ರಭು ಮುದ್ದು ಮೋಹನ ದಾಸರುವಿಭವದಿಂದಲಿ ಬಂದು ನಿಮಗೆ | ಶುಭದ ಅಂಕಿತವಿತ್ತರು 5 ಶಾಂತ ಚಿತ್ತದಿ ಜಪಿಸುತಾ | ಮಂತ್ರ ಸಿದ್ಧಿಯ ಪಡೆಯುತಾ ಭ್ರಾಂತ ಜನರನು ಭಕ್ತಿ ಪಂಥದಿ | ನಿಂತು ನಲಿವಂತೆ ಮಾಡುತಾ6 ಸಾಹಸ್ರಾರಂಕಿತವನಿತ್ತೂ | ಮಾಹಿತಾಂಘ್ರಿಯ ಭಜಿಸಿದಾ ಸಾಹಸಿಗ ಶೇಷಾಂಶ ಭಕ್ತರ | ಮೋಹ ಕಳೆದುದ್ಧರಿಸಿದಾ 7 ನಕ್ರಹರಗತಿ ಪ್ರೀತನಾ | ವಿಕ್ರಮದಿ ಸಂಸ್ಥಾಪಿಸೀಚಕ್ರಿಪುರಿಗಾ ರಾಮನವಮಿಲಿ | ವಿಕ್ರಮದಿ ನೀ ಹೊರಡುತಾ 8 ಅಹಿ ಭವ ವಂದ್ಯನಾ | ಗುರುಗೋವಿಂದ ವಿಠಲನನಿರುತ ಭಜಿಸುವ ಜ್ಞಾನವಾ | ಕರುಣಿಸೀ ಸಲಹೆನ್ನನು 9
--------------
ಗುರುಗೋವಿಂದವಿಠಲರು
ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು