ಒಟ್ಟು 135 ಕಡೆಗಳಲ್ಲಿ , 49 ದಾಸರು , 117 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಸ್ವತಿದೇವಿ ಸ್ತುತಿ ಶುಕ ವಾಣಿ ಪ ಪ್ರೀಯಳೇ ಹರಿಯಾ |ನವ ವಿಧದಿ ಭಜಿಸುವಾ ||ಕವಿಗಳೊಳಿಡಬೇಕು | ನಿನ್ನನೇ ಒಂದರಿಯಬೇಕು1 ವೀಣಾಪಾಣಿಯೆ ಪಿತನಾ |ಧ್ಯಾನಾದೊಳಿರಿಸೆನ್ನ |ಹೀನಾ ವೈಷಿಕಗಳನ |ನಾನೊಲ್ಲೆನನುಗಾಲಾ 2 ಗುರುಪ್ರಾಣೇಶವಿಠ್ಠಲಾ |ತ್ವರಿತಾ ತಾನೊಲಿವಂತೆ ||ವರಮತಿಯನಿತ್ತೆಮ್ಮ |ಪೊರಿಯಲಿ ಬೇಕಮ್ಮಾ3
--------------
ಗುರುಪ್ರಾಣೇಶವಿಠಲರು
ಸರಸ್ವತಿಮಾತೆ ಪರತರಚರಿತೆ ವರ ಪುಣ್ಯನಾಮಳೆ ಪ ಕರುಣಿಸಿವರವ ಕರುಣಾಕರಳೆ ಕರುಣದಿ ಕಾಯೆ ಅ.ಪ ಪದುಮಾಸನನ ಸುವದನ ನಿವಾಸೇ ತ್ರಿಭುವನಾರ್ಚಿತೆ ಸತತವಾಗಿ ಸುದಯೆ ಹೃದಯೆ ಸ್ಥಿರ ಸದುಮತಿ ಪಾಲಿಸೆ ಪರಮದಯದಿ ಪದುಳಂಗೆ ದಯದಿ 1 ವೀಣಾಧರಿ ಸುವಾಣಿ ಕಲ್ಯಾಣಿ ಮಾನಿನಿ ಬ್ರಹ್ಮನ ಜನನಿಯೆ ಜಗದಜಾಣೆ ಸುತ್ರಾಣೆ ನಿಜ ಜ್ಞಾನಾಧಿಕಾರಿ ಜ್ಞಾನವ ನೀಡೆ ಮಾಣದೆ ಎನಗೆ 2 ಪಾಮರತನ ನಿವಾರಣೆಗೊಳಿಸೆ ಪ್ರೇಮದೆನಗೆ ಸುಜಾಣೆ ನುಡಿಗಲಿಸಿ ವಿಮಲೆ ಅಮಲಸುಖ ಗಮಕದಿ ನೀಡ್ವೆ ಭುವಿಜಪತಿ ಶ್ರೀರಾಮನ ಸೊಸೆಯೆ 3
--------------
ರಾಮದಾಸರು
ಸಿರಿ ಸರಸ್ವತಿಯೇ ಪ ಏಳಲವ ಮಾಡದಲೆ | ಭಕುತಿ ಭಿಕ್ಷೆಯ ನೀಡೇ ಅ.ಪ. ಹೃದಯ ಬರಿದಾಗಿಹುದು | ಮಧುಮಥನಸೂನಾಮಸುಧೆಯನುಣಿಸುತ ದಿವ್ಯ | ಯದುವರನ ರೂಪಾ |ಸದಯದಲಿ ನಿಲ್ಲಿಸುವುದು | ಹೃದಯ ಗಹ್ವರದಲ್ಲಿವಿಧಿ ಸತಿಯೆ ಹರಿಸುತೆಯೆ | ಬುಧಜನಾನತೆಯೆ 1 ಪಾದ ಭವ ಉತ್ತರಿಸುಮಾರಾರಿ ವಂದಿತಳೆ | ಚಾರುತರ ಗಾತ್ರೇ 2 ಅರಸಿ ನೋಡಲು ನಿನಗೆ | ಸರಿಯುಂಟೆ ಭುವನ ಮೂ-ರರ ವಳಗೆ ಗುಣಶ್ರೇಣಿ | ವರ ನೀಲವೇಣೀ |ಗುರುವಂತರಾತ್ಮ ಗುರು | ಗೋವಿಂದ ವಿಠ್ಠಲನ |ಪರಿಪರಿಯ ಚರಿತೆಗಳ | ಸ್ಫುರಿಸುವುದು ಸತತಾ 3
--------------
ಗುರುಗೋವಿಂದವಿಠಲರು
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಸ್ನಾನಾ ಮಾಡೈಯ ಸರ್ವಾಧಾರಾ ಪ ಜಾನಕೀವಲ್ಲಭ ನೀನೆ ನಿರ್ಮಲ ಮೂರ್ತಿಅ.ಪ ಸ್ಮರಿಸಿದ ಮಾತ್ರದಿ ಪರಿಶುದ್ಧ ಮಾಳ್ಪೆನೆಂ ದುರುತರ ಶೃತಿಗಳು ಪೊಗಳುತಿಹವು ನಿನ್ನ 1 ಕ್ಷೀರದದಾಜ್ಯ ಮಧುಶರ್ಕರ ಫಲಗಳಿಂ ನಾರಿಕೇಳೋದಕದಿಂದ ಪಂಚಾಮೃತ 2 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಕಾವೇರಿ ಜಲಗಳಿಂ3 ಪುನಗು ಕೇಸರಿ ಕರ್ಪೂರ ಕಸ್ತೂರಿ ಪರಮದ್ರವ್ಯವು ನವರತ್ನ ಮುತ್ತುಗಳಿಂದ 4 ಭಾಗವತಪ್ರಿಯ ಗುರುರಾಮವಿಠಲನೆ 5
--------------
ಗುರುರಾಮವಿಠಲ
ಸ್ಮರಿಸಿ ತೀರ್ಥಕ್ಷೇತ್ರ ಸಜ್ಜನರು ನಿತ್ಯದಲಿ ಅರಣೋದಯದಲೆದ್ದು ಭಕ್ತಿಪೂರ್ವಕವಾಗಿ ಕಠಿಣಶ್ರಮದಿ ಮಾಳ್ಪ ಪಾಪರಾಶಿಗಳ ಪರಿಹರಿಸುತ್ತ ಸಂತ್ಯೆಸುವಾ ಪ ಭಾಗೀರಥಿ ಸರಸ್ವತಿ ಯಮುನಾ ವಾರಾಣಾ ಶ್ರೀ ಗೋದ ಫಲ್ಗುಣಿ ಶೋಣಭದ್ರಾ ನರ್ಮ ದಾ ಗಂಡಕಿ ಭಿಮರಥಿ ತುಂಗಭದ್ರೆ ಪ್ರಯಾಗ ತ್ರಿವೇಣಿ ಹೇಮಾ ವೇಗವತಿ ಗಾಯತ್ರೀ ಕಾಶಿಮಣಿಕರ್ಣಿ ಕಾ ಗೌತಮಿ ವಿಯದ್ಗಂಗಾ ಕುಮುದ್ವತೀ ಸಿಂಧು ಪಾಪಾಘನಾಶಿನೀ 1 ಸರಯು ಜಯಮಂಗಳ ಜಮದಗ್ನಿ ವರತಾಮ್ರ ಪರಣಿ ಯೋಗಾನಂದ ಕೃತಮಾಲಕುಹು ಮಹೇ ಧುನಾಶಿ ಗರುಡ ಮದಿರಾ ಮರುದ್ವತಿ ಸ್ವರ್ಣಮುಖರಿ ವರ ಝರತಾಪಿನಿ ಕಾಳಿ ಸೌ ಪರಣಿ ದಕ್ಷಿಣೋತ್ತರಪಿನಾಕಿ ಕಪಿಲ ಶೀತಳ ಕಾನಂದ ಕುರಮುಖಿ ಪ್ರಣವಸಿದ್ಧ 2 ಕಾವೇರಿ ಸಿಧು ಮಾಲತಿ ಗಾರ್ಗಿಣಿ ಹರಿ ಕುಂದ ಕುಂದಿನಿ ಶೈವ ದೇವವತಿ ಪಾತಾಳ ಗಂಗಾ ಪುನಹ ನೀರಾ ಕುಮಾರಧಾರಾ ಸಾವಿತ್ರಿ ದಾನ್ಯಮಾಲಾ ಪುಷ್ಪವತಿ ಲೋಕ ಸಿಂಧು ಧರ್ಮಕು ಭವ ನಾಶಿನಿ ವರದಾ ಮಲಾಪಹಾರಿ 3 ಸ್ವಾಮಿ ಪುಷ್ಕರಣಿ ಮಾನಸ ಚಂದ್ರ ಪುಷ್ಕರಣಿ ಭೂಮಂಡಲದೊಳುತ್ತಮೋತ್ತಮ ತ್ರಿಪುಷ್ಕರಣಿ ನಿತ್ಯ ಪದ್ಮಸರ ಚಂದ್ರಭಾಗತೀರ್ಥ ವಾಮನ ಮಯೂರ ಪಂಪಾಸರೋವರ ಪುಣ್ಯ ಧಾಮ ವ್ಯಾಸ ಸಮುದ್ರ ಧವಳಗಂಗಾ ಸುಸಾ ರೋಮಹರ್ಷತೀರ್ಥ 4 ದ್ವಾರಕಾನಗರ ಸಾಲಗ್ರಾಮ ಟರರ ಬದರಿ ಕೇ ದಾರ ನರನಾರಾಯಣ ಶ್ರೀ ಮಜ್ಜಗನ್ನಾಥ ಶ್ರೀ ಮುಷ್ಣ ಮಂದರ ಮೈನಾಕ ಕೈಲಾಸ ಕಂಚಿ ಶ್ರೀರಂಗನಾಥ ನೈಮಿಷ ದ್ವೈತವನ ಚಂಪ ಕಾರುಣ್ಯ ಕಾಶಿ ಪಂಪಾವಂತಿಕಾ ಪುರಿ ಹರಿದ್ವಾರ ಛಾಯಾಪಿಪ್ಪಲ 5 ಕೇದಾರ ಸಾಗರ ಮಂದಾಕಿನಿ ಕುಸುಮವತಿ ಆದಿಸುಬ್ರಹ್ಮಣ್ಯ ಕೋಟೇಶ್ವರ ನಂದಿ ವೇದಪಾದ ಯಯಾತಿ ಗಿರಿ ಕಾಲಹಸ್ತಿ ಕೌ ಮೋದಕೀ ಪಾಡುರಂಗ ಕ್ಷೇತ್ರ ಶ್ರೀ ವಿಷ್ಣು ಪಾಟಲೀ ಮಂತ್ರಾಲಯ6 ಮಂದರ ಮಲಯ ಕೈವಲ್ಯನಾಥ ಕಾಶೀರ ಜಾಂಬವತಿ ವೃಂ ಶ್ರೀ ವಿರೂಪಾಕ್ಷ ಕುಂದರ ನಂದಪುರಿ ಮಾಯಾ ಶ್ರೀವತ್ಸ ಗಂಧಮಾದನ ಚಿತ್ರಕೂಟ ದ್ವಾ ನರಾಚಲಾಸೌಭದ್ರಿ ಆದಿನಾಥ 7 ಈ ಮಹಿಮಂಡಲದೊಳಿಪ್ಪ ತೀರ್ಥಕ್ಷೇತ್ರ ನಾಮಗಳ ಕಾಲತ್ರಯದಲ್ಲಿ ಸರಿಸುತಿಹ ಧೀಮಂತರಿಗೆ ಸಂಚಿತಾಪ ಪರಿಹರದಾನಂತರದಲಿ ಸೋಮಾರ್ಕರುಳನಕ ಸಕಲ ಭೋಗಗಳ ಸು ತ್ರಾಮಲೊಕದ ಲುಣಿಸಿ ಕರುಣಾಳು ಪ್ರಾತ್ಯಕೆ ಸ್ವ ಅಹುದೆಂದು ಸೂತ ಶೌನಕಣೆ ಪೇಳ್ದ8 ಈ ಭರತ ಖಂಡದೊಳಗುಳ್ಳ ತೀರ್ಥಕ್ಷೇತ್ರ ವೈಭವಾಬ್ಜ ಭವಾಂಡ ಪಾರನದೊಳಗೆ ಹರಿ ಪರಮಕಾರುಣ ದಿಂದ ಸ್ತ್ರೀಬಾಲ ಗೋವಿಪ್ರಮಾತ ಪಿತೃಗಳ ಧನ ಲೋಭದಿಂದಲಿಕೊಂದ ಪಾತಕವ ಪರಿಹರಿಸಿ ಬೇಡಿದಿಷ್ಟಾರ್ಥಗಳನು 9
--------------
ಜಗನ್ನಾಥದಾಸರು
ಸ್ವಾಗತ ಸುಗುಣಗೆ ಸ್ವಾಗತ ಕರುಣಿಗೆ ಸ್ವಾಗತವು ನವಸಚಿವರಿಗೆ | ಸ್ವಾಗತ ಸ್ವಾರ್ಥ ವಿದೂರರಾದ ಜಗನ್ನಾಯಕ ನಾಮ ರಾಯರಿಗೆ || ತರಳತನದಿ ಇವರು ಸರಳ ಮನಸ್ಸಿನಲ್ಲಿ ಸರಸ್ವತಿದೇವಿಯನೊಲಿಸಿದರು | ಪರಮಪೂಜ್ಯ ಮಹತ್ವರ ತತ್ವ ತಿರುಳು ತಿಳಿದು ಆಚರಿಸಿದರು 1 ಪ್ರಾಂತದ ಬಡವರ ಚಿಂತೆಕಡಿಯಲು ಸ್ವಾಂತದಿ ಪಂಥವ ಗೈದವರೋ || ಕ್ರಾಂತಿಯ ಹೂಡುತ ಶಾಂತಿ ಸಂಗರದಿ ನಿಂತು ಹೋರಾಡಿದ ಯೋಧರು 2 ದುರುಳರಾಳಿಕೆಯಲಿ ಜರಿದು ಧಿಃಕರಿಸಿ ಸೆರೆಮನೆ ಕಷ್ಟವ ಸಹಿಸಿದರು | ದೊರೆಯ ಸ್ವತಂತ್ರವು ಬಹುಮತದಲಿ ಸ್ವೀಕರಿಸಿದರು ಮಂತ್ರಿಪದವಿಯನು 3 ಉಚ್ಚನೀಚವೆಂಬ ಕುತ್ಸಿತ ಭಾವವ | ಕೊಚ್ಚಿ ಬೀಸಾಡಿದ ಜಾಣರು | ಅಚ್ಚಗನ್ನಡದ ವೀರ ಜನನಿಗೆ ಅಚ್ಭದ ಪ್ರೀಯ ಸುಕುಮಾರರು 4 ಈ ಮಹಾಚತುರನ ಪಡೆದ ಚಂಡ್ರಿಕಿ ಗ್ರಾಮದೇವಿ ಬಹುಪುಣ್ಯವತಿ | ಪ್ರೇಮ ದಿಂದಿವರ ನೇಮವ ನಡೆಸುವ ಶಾಮಸುಂದರನು ದಿನಂಪ್ರತಿ5
--------------
ಶಾಮಸುಂದರ ವಿಠಲ
ಸ್ವಾಮಿ ನೃಸಿಂಹ ಸರಸ್ವತಿಗೆ ಮಂಗಳಾ |ಕಾಮಿತ ಕಾಮ ಫಲ ತೃಪ್ತಿಗೆ ಮಂಗಳಾ ಪ ನಿತ್ಯ ನಿರ್ಮಾಯಗೆ ಮಂಗಳಾ |ನಿರ್ವಾಣ ಸುಖ ಯತಿರಾಯಗೆ ಮಂಗಳಾ 1 ಭಕ್ತಜನರ ಕಲ್ಪವೃಕ್ಷಗೆ ಮಂಗಳಾ |ಭಕ್ತಿಯಿಂದ ಭಜಿಸುವ ಮೋಕ್ಷಗೆ ಮಂಗಳ |ಭೀಮಾ ಗಂಧರ್ವಪುರ ವಾಸಗೆ ಮಂಗಳಾ |ಶ್ರೀ ಭೀಮಾಶಂಕರ ಗುರು ಈಶಗೆ ಮಂಗಳಾ 3
--------------
ಭೀಮಾಶಂಕರ
ಹೊಳೆವೊ ಮಂದಿರವ ಪ. ರಂಗಗೆ ರಚಿಸಿದ ಶೃಂಗಾರದ ವೈಕುಂಠ ಮಂಗಳಾದೇವಿಯರು ಇಳಿಯಲಿ1 ವೀತದೋಷಗೆ ದಿವ್ಯ ಸೇತು ದ್ವೀಪವ ರಚಿಸಿ ಪ್ರೀತಿ ಮಡದಿಯರು ಇಳಿಯಲಿ2 ರನ್ನಮಾಣಿಕದ ಅರಮನೆ ಪನ್ನಿಯರು ಬಂದು ಇಳಿಯಲಿ 3 ಪಟ್ಟೆ ಮುತ್ತುಗಳ ಬಿಗಿದು ಇಟ್ಟಾವ ಕನ್ನಡಿ ಧಿಟ್ಟ ತೋರೋದೆ ಜನಕೆಲ್ಲ ಅಷ್ಟು ಮಡದಿಯರು ಇಳಿಯಲಿ 4 ಹಸಿರು ಪಚ್ಚವ ಬಿಗಿದ ಕುಸುರಾದ ಗಿಳಿಬೋದು ದೇವಕಿ ವಸುದೇವ ಬಂದು ಇಳಿಯಲಿ5 ಜತ್ತು ತೋರುವುದು ಜನಕೆಲ್ಲ ಜತ್ತು ತೋರುವುದು ಜನಕೆಲ್ಲ ಸರಸ್ವತಿ ಮತ್ತೆ ಚತುರ್ಮುಖನು ಇಳಿಯಲಿ 6 ಎದ್ದು ತೋರುವುದು ಜನಕೆಲ್ಲ ಎದ್ದು ತೋರುವುದು ಜನಕೆಲ್ಲ ಪಾರ್ವತಿ ರುದ್ರಾದಿಗಳೆಲ್ಲ ಇಳಿಯಲಿ 7 ಕುಂದಣ ರತ್ನಗಳಿಂದ ಹೊಂದಿ ಕಟ್ಟಿದರಮನೆ ಅಂಬರಕೆ ಮ್ಯಾಲೆ ತುಳುಕುವ ಶಚಿದೇವಿ ಇಂದ್ರಾದಿಗಳೆಲ್ಲ ಇಳಿಯಲಿ 8 ರೇವತಿ ಬಲರಾಮರು ಬಂದು ಇಳಿಯಲಿ9 ಒಂಭತ್ತು ಬಗೆ ರತ್ನ ತಂಬಿ ರಚಿಸಿದ ಮನೆ ಅಂಬರಕೆ ಮೇಲೆ ತುಳುಕುವ ಅಂಬರಕೆ ಮೇಲೆ ತುಳುಕುವರತಿದೇವಿಸಾಂಬ ಪ್ರದ್ಯುಮ್ನರು ಇಳಿಯಲಿ10 ಚಂದ ತೋರುವುದು ಜನಕೆಲ್ಲ ಚಂದ ತೋರುವುದು ಜನಕೆಲ್ಲಭಾನು ಮಾನು ಬಂದ ಜನರೆಲ್ಲ ಇಳಿಯಲಿ 11
--------------
ಗಲಗಲಿಅವ್ವನವರು
(ಒರಳುಕಲ್ಲು ಪೂಜೆಯ ಪದ)ಜಯ ಹನುಮಂತ ಭೀಮ | ಜಯ ಸರ್ವಜ್ಞಾಚಾರ್ಯ |ಜಯ ಭಾರತೀಶಾ ನಿರ್ದೋಷಾ || ನಿರ್ದೋಷ ಶ್ರೀ ವ್ಯಾಸಲಯನೆ ನಿನ್ನಂಘ್ರೀಗೆರಗೂವೆ | ಸುವ್ವಿ ಸುವ್ವೀ ಸುವ್ವಾಲಾಲೆ ಪಮುದದಿಂದಾ ಶ್ರೀ ಹರಿಯಾ | ಮದಿವಿ ಹಮ್ಮೀಕೊಂಡು |ಪದುಮಾಕ್ಷಿಯರೆಲ್ಲಾ ಒರಳೀಗೇ || ಒರಳಿಗಕ್ಕಿ ಹಾಕಿಪದ ಪಾಡಿದದನೂ ಬಣ್ಣೀಪೇ1ದೇವಕಿ ಯಶೋದೆ ಶ್ರೀ | ದೇವಭೂತೇ ಕೌಸಲ್ಯ ಸ- |ತ್ಯವತಿ ನೀವೆಂಥ ಧನ್ಯರೇ || ಧನ್ಯಾರೆ ಪಡದು ಶ್ರೀ |ದೇವೇಶಗೆ ಮೊಲಿಯಾ ಕೊಡುವೀರಿ 2ಅಕ್ಷರಳೆ ಪರಮಾತ್ಮನ | ವಕ್ಷ ಸ್ಥಳ ಮಂದಿರೆ |ಲಕ್ಷೂಮಿದೇವಿ ಜಯಶೀಲೆ || ಜಯಶೀಲೆ ಎಮ್ಮನು |ಪೇಕ್ಷಿಸಿದೆ ಕಾಯೇ ವರವೀಯೇ 3ಅಚ್ಛಿನ್ನ ಭಕ್ತರು ನೀವಚ್ಯುತಗೆ ಮುಕ್ತಿಯಾ |ತುಚ್ಛವೆಂಬುವಿರೆ ಸರಸ್ವತೀ || ಸರಸ್ವತಿಭಾರತಿ|ನಿಶ್ಚೈಸಿ ಒರಳೀಗೊದಗೀರೆ 4ಅಕ್ಕಿ ಥಳಿಸಲಿ ಬಾರೆ | ಅಕ್ಕ ಸೌಪರಣಿ ಶ್ರೀ |ರಕ್ಕಸಾ ವೈರೀ ಮದುವೀಗೇ || ಮದುವೀಗೆವಾರುಣಿತಕ್ಕೊಳ್ಳೆ ಕೈಲಿ ಒನಕೀಯಾ 5ಕೂಸಾಗಿ ಇದ್ದಾಗ ಆ ಶಿವನೆ ಬರಲೆಂದು |ಪೋಷಿಸಿದೆ ದೇಹಾ ತಪಸೀದೆ || ತಪಸೀದೆ ಪಾರ್ವತಿನೀ ಶೀಘ್ರ ಬಾರೇ ಒರಳೀಗೆ6ಇಂದ್ರ ಕಾಮನಸತಿಯಾರಿಂದು ಬನ್ನಿರಿ ನಮ್ಮ |ಮಂದರೋದ್ಧರನಾ ಮದಿವೀಗೇ || ಮದುವೀಗೆ ಒರಳಕ್ಕಿ |ಛಂದದಿಂದಲಿ ಪಾಡಿ ಥಳಿಸೀರೇ 7ಶತರೂಪಿ ನೀ ಪ್ರೀಯ ವ್ರತ ಮೊದಲಾದವರನ್ನ |ಪತಿಯಿಂದ ಪಡದೂ ಅವನೀಯಾ || ಅವನೀಯ ಪಾಲಿಸಿದಪತಿವ್ರತೀ ಒನಕೀ ಕೈಕೊಳ್ಳೇ8ದೇವರಂಗನಿಯರಿಗೆ ಸಾವಧಾನದಿ ಜ್ಞಾನ |ನೀ ವರದೇ ಎಂಥಾ ಗುಣವಂತೇ || ಗುಣವಂತೆ ಕರುಣಾಳೆಪ್ರಾವಹೀ ಪಿಡಿಯೇ ಒನಕೀಯಾ 9ಅರುವತ್ತು ಮಕ್ಕಳನಾ ಹರುಷದಿಂದಲಿ ಪಡದು |ವರನೋಡಿ ಕೊಟ್ಟೀ ಪ್ರಸೂತೀ || ಪ್ರಸೂತಿ ನೀನುಹಂದರದ ಮನಿಯೊಳೂ ಇರಬೇಕೂ 10ಗಂಗಾದೇವಿ ಯಂಥ ಇಂಗಿತಜÕಳೆ ನೀನು |ಹಿಂಗಿಸಿದೆ ವಸುಗಳಪವಾದಾ || ಅಪವಾದ ತ್ರಯ ಜಗ-ನ್ಮಂಗಳೇ ಪಿಡಿಯೇ ಒನಕೀಯಾ 11ಅನಿರುದ್ಧಾಶ್ವಿನಿ ಚಂದ್ರ ಇನಕಾಲಾ ಸುರಗುರು |ವನತಿಯರೆ ಉಳಿದಾ ನವಕೋಟೀ || ನವಕೋಟಿ ಸುರರಮಾನಿನಿಯೇರು ಬಂದೂ ಥಳಿಸೀರೇ 12ಅನ್ಯರನ ಪಾಡಿದರೆಬನ್ನಬಡಿಸುವ ಯಮನು |ವನ್ನಜಾಂಬಕನಾಶುಭನಾಮಾ || ಶುಭನಾಮ ಪಾಡಿದರೆಧನ್ಯರಿವರೆಂದೂ ಪೊಗಳೂವಾ13ಈ ವ್ಯಾಳ್ಯದಲಿ ನೋಡಿ ನಾವು ಥಳಿಸೀದಕ್ಕಿ |ಪಾಪನ್ನವಾಗೀ ತ್ವರದಿಂದಾ || ತ್ವರದಿಂದ ನಮ್ಮ ಶ್ರೀಗೋವಿಂದನ ಶಾಸೀಗೊದಗಲೀ 14ಹೆಚ್ಚಿನಂಬರ ಉಟ್ಟು ಅಚ್ಚಿನ ಕುಪ್ಪುಸ ತೊಟ್ಟು |ಪಚ್ಚಾದಿ ರತ್ನಾಭರಣಿಟ್ಟೂ || ಇಟ್ಟು ಸುಸ್ವರಗೈದುಅಚ್ಯುತನ ಪಾಡೋರಿನಿತೆಂದೂ 15ಲಕ್ಕೂಮಿ ಪತಿಯಾಗಿ ಬಹು ಮಕ್ಕಳನ ಪಡದಿದ್ದಿ |ಇಕ್ಕೊಳ್ಳಿ ಈಗಾ ಮದುವ್ಯಾಕೇ || ಯಾಕೊನತರಾನಂದಉಕ್ಕೀಸುವದಕೆ ರಚಿಸೀದ್ಯಾ16ಎಂಂದಾಗೆದೊ ಶ್ರೀ ಮುಕುಂದ ನಿನ್ನಾ ಮದುವಿ |ಹಿಂದಿನಾ ಬ್ರಹ್ಮರರಿತಿಲ್ಲಾ || ರರಿತಿಲ್ಲಅವಿಯೋಗಿಎಂದು ಕರಸುವಳು ಶೃತಿಯೋಳೂ 17ಶೀಲಿ ಸುಂದರಿ ನಿನ್ನ ಆಳಾಗಿ ಇರುವಳು |ಶ್ರೀ ಲಕ್ಷ್ಮೀ ನೀನು ಸ್ವರಮಣಾ || ಸ್ವರಮಣನಾಗೆವಳಮ್ಯಾಲೆ ಮದುಪ್ಯಾಕೊ ಭಗವಂತಾ18ಆರು ಮಹಿಷಿಯರು ಹದಿನಾರು ಸಾವಿರ ಮ್ಯಾಲೆ |ನೂರು ನಾರಿಯರೂ ಬಹುಕಾಲಾ || ಬಹುಕಾಲ ಬಯಸಿದ್ದುಪೂರೈಸಿ ಕೊಟ್ಯೋ ದಯಸಿಂಧು 19ವೇದನೆಂಥಾ ಪುತ್ರ ವೇದನಂತಾ ಬಲ್ಲ |ವೋದುವಾ ನಿರುತಾ ನಿನ ಪೌತ್ರಾ || ಪೌತ್ರೌ ನಿಮ್ಮಣ್ಣ ಸ್ವ-ರ್ಗಾಧಿಪತಿ ಎಂದೂ ಕರಸೂವ 20ಜಗವ ಪಾವನ ಮಾಳ್ಪ ಮಗಳೆಂಥ ಗುಣವಂತಿ |ಅಗಣಿತಜ್ಞಾನವಂತಾರೊ || ಜ್ಞಾನವಂತರೊ ನಿನ್ನಯುಗಳಸೊಸಿಯರೂ ಪರಮಾತ್ಮಾ21ಈ ವಸುಧಿಯೊಳಗೆಲ್ಲಾ ಆವಶುಭಕಾರ್ಯಕ್ಕೂ |ದೇವೇಶ ನಿನ್ನಾ ಸ್ಮರಿಸೋರೋ || ಸ್ಮರಿಸುವರೊ ನಿನ ಮದುವಿ-ಗಾಂವೀಗ ನಿನ್ನೇ ನೆನೆವೇವೊ 22ಅಕ್ಲೇಶಾ ಅಸಮಂಧಾ ಶುಕ್ಲಶೋಣಿತದೂರಾ |ಹಕ್ಲಾಸುರಾರೀ ದುರಿತಾರೀ || ದುರಿತಾರಿ ಅಸಮ ನಿ-ನ್ನೊಕ್ಲಾದವರಗಲೀ ಇರಲಾರೀ 23ವೇದವೆಂಬದು ಬಿಟ್ಟು ಭೂ ದಿವಿಜಾರಮರಾರು |ಮಾಧವನ ಗುಣವಾ ಪೊಗಳೂವಾ || ಪೊಗಳುವಾ ಸುಸ್ವರವಾಶೋಧಿಸೀ ಕೇಳೂತಿರುವಾರೂ 24ಕಾಮಾದಿಗಳ ಬಿಟ್ಟು ಸೋಮಪರ ರಾಣಿಯರು |ಸ್ವಾಮಿಯ ವಿವಾಹಾ ನಾಳೆಂದೂ || ನಾಳೆಂದರಿಷಿಣದಕ್ಕೀಹೇಮಾಧರಿವಾಣಕ್ಕಿರಿಸೋರೂ25ಜಯ ಮತ್ಸ್ಯಾ ಕೂರ್ಮಾಕಿಟಿಜಯ ನರಸಿಂಹಾ ಋಷಿಜ |ಜಯ ರಾಮಕೃಷ್ಣಾ ಶ್ರೀ ಬುದ್ಧಾ || ಶ್ರೀಬುದ್ಧಕಲ್ಕಿ ಜಯಜಯ ದತ್ತಾತ್ರಯಶುಭಕಾಯಾ 26ಆನಂದಾದಿಂದಾ ಸುರ ಮಾನಿನಿಯಾರಾಡೀದ |ಈ ನುಡಿಯಾ ಪಾಡೀದವರೀಗೆ || ಅವರಿಗಿಹಪರದಲ್ಲಿಪ್ರಾಣೇಶ ವಿಠಲಾ ಒಲಿವೋನೂ 27
--------------
ಪ್ರಾಣೇಶದಾಸರು
ಅ. ಗಣಪತಿ ಸರಸ್ವತಿಯರು261ಶ್ರೀ ಗಣನಾಥನಿಗೆ | ಶಾರದಾಂಬಿಕೆಗೆಶ್ರೀ ಗೌರಿ ಭೂದೇವಿ ಶ್ರೀದೇವಿಗೆ |ಶ್ರೀಗುರುಮಹಾವಿಷ್ಣು ಬ್ರಹ್ಮರುದ್ರಾದ್ಯರಿಗೆಸಿರಿಚರಣ ಪಂಕಜಗೆ ನಮಿಸಿ ನುತಿಸುವೆನು 1ಅಷ್ಟ ದಿಕ್ಪಾಲರಿಗೆ ಶಿಷ್ಯಮರುದ್ಗಣಗಳಿಗೆಅಷ್ಟವಸು ಸಪ್ತಋಷಿ ನವಗ್ರಹಾದ್ಯರಿಗೆ |ಶ್ರೇಷ್ಠ ಹನುಮಂತನಿಗೆ ಕನಕಾದಿ ದಾಸರಿಗೆಸೃಷ್ಟಿಯೊಳು ಕವಿಜನಕೆ ಕೈಮುಗಿವೆನು 2ವಿಪ್ರಕುಲ ಸಂಜಾತ ಮಯ್ಯೂರ ಮಡಿಪುರದೊ-ಳಿಪ್ಪ ವೆಂಕಟರಾಯ ಗೋಳೇರ ಸುಕುಮಾರ |ಸರ್ಪಶಯನನ ದಾಸ ಗೋವಿಂದನೆಂಬವನುಜಲ್ವಿಸಿಯೆ ವಿರಚಿಸಿದೆನೀ ಕೃತಿಯನು 3ಯತಿಗಣ ಪ್ರಾಸ ವಿಷಮಾಕ್ಷರಗಳೊಂದರಿಯೆಕೃತ ದೋಷ ರಾಗ ಲಯ ಭೇದವನು ತಿಳಿಯೆ |ಪೃಥುವಿಯೊಳು ಕವಿಗಳಂತಗ್ಗಳನು ನಾನಲ್ಲಅತಿಶಯದ ನ್ಯೂನತೆಯ ಬಲ್ಲ ಶ್ರೀನಲ್ಲ 4ತಪ್ಪು ಸಾವಿರವಿರಲು ತಿದ್ದಿ ಬಲ್ಲವರಿದನುಒಪ್ಪುವಂದದಿ ಜಗದಿ | ಮೆರೆಸಿ ವಾಚಕರುಸರ್ಪಶಯನನ ಕೃಪೆಗೆ ಪಾತ್ರರಾಗುತ ನೀವುಕ್ಷಿಪ್ರದಲಿ ಗೋವಿಂದದಾಸ£À£Àು ಪರಸಿ ಮನ್ನಿಪುದು 5
--------------
ಗೋವಿಂದದಾಸ
ಆರೋಗಣೆಯ ಮಾಡೋ ಎನ್ನಯ್ಯಆರೋಗಣೆಯ ಮಾಡೋ ಪ.ನಾರದಾರ್ಚಿತಪಾದ ನಾರಾಯಣ ಸ್ವಾಮೀ ಅ.ಪಸರಸಿಜಾಲಯೆ ಲಕ್ಷ್ಮಿ ಸರಸ್ವತಿಭಾರತಿಪರಿಪರಿ ಅಡಿಗೆಯ ಸಿದ್ದ ಮಾಡಿಹರೊ ||ಪರಿಮಿತಿಯಿಲ್ಲದ ರುಚಿಯ ಪದಾರ್ಥವಪರಮಪುರುಷ ಉಂಡು ದಯ ಮಾಡೋ ಸ್ವಾಮಿ1ಅಂಬುಜಮುಖಿ ಲಕ್ಷ್ಮಿ ತಾಂಬೂಲ ಕೊಡುವಳುಕಂಬುಕಂಧರನೇ ನೀ ಕೈಕೊಳು ಬೇಗ ||ರಂಭೆ ಊರ್ವಸಿ ಮೇನಕೆ ಮೊದಲಾದವರುಸಂಭ್ರಮದಿ ಬಂದು ನಾಟ್ಯಕೆ ಕಾದಿಹರೊ ಸ್ವಾಮಿ 2ಸರಸಿಜಭವನಯ್ಯ ಪುರಂದರವಿಠಲಸರುವಭೋಗಭುಂಜಿಪ ನರರ ಪಾಲಿಸೊ ದೇವಾ3
--------------
ಪುರಂದರದಾಸರು
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಉಪ್ಪವಡಿಸೆಲೆಲೆ ತಂದೆಸರ್ಪಗಿರಿವಾಸ ಶ್ರೀನಿವಾಸ ದಯದಿ ಪ.ಕಮಲಸಖಸೂರ್ಯಮೂಡದ ಮುನ್ನೆ ಮುನಿಜನರುತಮ ತಮಗೆ ನೀನೊಲಿದ ನಿನ್ನ ಪ್ರತಿಮೆಯ ಪದಕೆನಮಿಸುತೈದಾರೆ ಧ್ಯಾನಮೌನ ಜ್ಞಾನದೊಳವರುರಮೆಯರಸ ಯೋಗನಿದ್ರನೆ 1ಸುಳಿಗಾಳಿ ಸೌರಭಿಯ ಬಳಿವಿಡಿದು ಮಧುಪಕುಲಸುಲಲಿತ ಸ್ವನದಿ ಪಾಡುತಿರೆಸಾರಸಮಯೂರಗಿಳಿಕೋಕಿಲ ಮರಾಳ ಚಕ್ರವಾಕ ಶಕುಂತಬಳಗ ಬಲು ತುತಿಸುತಿವೆ ಕೋ 2ಪವಿತ್ರೆಯೆನಿಸುವ ದೇವನದಿ ಯಮುನೆ ಗೋದಾವರಿ ಸರಸ್ವತಿ ಶ್ರೀಕೃಷ್ಣ ಕಾಳಿಂದಿಕಾವೇರಿ ತುಂಗಭದ್ರೆ ಭೀಮಾದ್ಯರೈತರಲುಪಾವನಿಸುತೀರ್ಥಪದನೆ3ಹನುಮಸುರಋಷಿದೇವ ಗಂಧರ್ವ ಕಿಂಪುರಷರನುನಯದಿ ದಂಡಿಗೆ ಸುವೀಣೆಯಂ ಮುಟ್ಟಿ ನಿಜತನುವ ಮರೆದು ಉಗ್ಗಡಿಸುತಿರೆ ಸರಸಪ್ರಿಯಸನಕಾದಿ ವಂದ್ಯ ಕೃಷ್ಣ 4ತಮಜಾರಿ ಕೇಳುಮಂದರಪೊರೆಯಲೇಳೈ ವಸುಮತಿಲ್ಭಕ್ತ ಇಂದ್ರಾದಿಗಳ ಮೊರೆ ಕೇಳುಕುಮತಿಜನರಿಪುಭವಾಬ್ಧಿತ್ರಾತ ಸುಖಿಯೋಗಿಅಮಲಪ್ರಸನ್ನ ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ಕೊಡು ಬೇಗ ದಿವ್ಯ ಮತಿ - ಸರಸ್ವತಿಕೊಡು ಬೇಗ ದಿವ್ಯಮತಿ ಪಮೃಡಹರಿಹಯ ಮುಖರೊಡೆಯಳೆ ನಿನ್ನಯ |ಅಡಿಗಳಿಗೆರಗುವೆ ಅಮ್ಮನ ಬ್ರಹ್ಮನ ರಾಣಿ ಅ.ಪಇಂದಿರಾರಮಣನ ಹಿರಿಯ ಸೊಸೆಯು ನೀನು|ಬಂದೆನ್ನ ವದನದಿನಿಂದುನಾಮವ ನುಡಿಸಿ1ಅಖಿಳವಿದ್ಯಾಭಿಮಾನಿ ಅಜನ ಪಟ್ಟದ ರಾಣಿ |ಸುಖವಿತ್ತು ಪಾಲಿಸೆಸುಜನಶಿರೋಮಣಿ2ಪತಿತ ಪಾವನೆಯೆ ನೀ ಗತಿಯಂದು ನಂಬಿದ |ವಿತತಪುರಂದರವಿಠಲನ ತೋರೆ3
--------------
ಪುರಂದರದಾಸರು