ಒಟ್ಟು 153 ಕಡೆಗಳಲ್ಲಿ , 50 ದಾಸರು , 146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮನೆಯಖಿಲ ಜಗತ್ಸ್ವಾಮಿ [ಯೌ] ದಾರ್ಯ ಜಯತು ಪ ಸಾಮಗಾನಪ್ರಿಯ ಕೋಮಲಶರೀರ ಜಯ ತಾಮರಸನಯನ ಲಕ್ಷ್ಮೀ ಮನೋಹರನೆ ಜಯ ಮಾಧವ ಮೂರ್ತಿ ಕೀರ್ತಿ ಜಯ ನೇಮಿ ಜಗದಂತರ್ಯಾಮಿ ಚಾತುರ್ಯ ಜಯತು 1 ರಾಮಕೃಷ್ಣ ಮುರಾರಿ ಜಯತು ಮೇಘ ಶ್ಯಾಮ ಅಚ್ಯುತಾನಂತ ಜಯತು ನಿ- ಸ್ಸೀಮ ಲೋಕಶರಣ್ಯ ಜಯತು ಸಾರ್ವ- ಭೌಮ ವಿರಾಡ್ರೂಪ ಜಯ ಜಯತು 2 ಶ್ರುತಿ ಸ್ತೋಮ ಸಂಸ್ತುತ ಜಯ ಜಯತು ವೈಕುಂ- ಠೇತಿ ಸುಕ್ಷೇಮ ಲೋಕಾರಾಧ್ಯ ಜಯತು ಸುತ್ರಾಮಾರ್ಚಿತಾಂಘ್ರಿಯುಗಳ ಜಯತು ಜ್ಯೋತಿ ಪರಂಜ್ಯೋತಿ ನಿರಾಮಯ ವೇಲಾಪುರೀಶನೆ ಜಯತು3
--------------
ಬೇಲೂರು ವೈಕುಂಠದಾಸರು
ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಮಧ್ವರಾಯ ಗುರುವರ್ಯ ಪ ತ್ರೇತೆಯಲಿ ರಘುಪತಿಯ ಸೇವೆ ಸಲಿಸಿದವನೆ ಸೀತೆಯನು ಕಂಡು ರಕ್ಕಸರ ಗೆಲಿದವನೆ ದೂತರಾವಣಗೆ ನೀತಿಗಳ ಕಲಿಸಿದವನೆ ಭೀತಿಯಿಲ್ಲದೆ ಲಂಕಾಪುರವ ದಹಿಸಿದವನೆ 1 ದ್ವಾಪರದಿ ಶ್ರೀ ಕೃಷ್ಣನನು ಪೂಜಿಸಿದವನೆ ಪಾಪಿ ದುರ್ಯೋಧನಾದಿಗಳ ಗೆಲಿದವನೆ ಕೋಪದಲಿ ಜರಾಸಂಧನನು ಸೀಳಿದವನೆ ಶ್ರೀಪತಿಯ ಸೇವೆಯಲಿ ನಿಸ್ಸೀಮನೆನಿಸಿದವನೆ2 ಮಧ್ವಮತದವರನುದ್ಧರಿಸಿ ಮೆರೆದವನೆ ಶ್ರದ್ಧೆಯಿಂದಲಿ ಹರಿಯ ಭಜಿಪ ಗುರುವರನೆ ಮುದ್ದು ಕಮಲನಾಭ ವಿಠ್ಠಲನೊಲಿಸಿದವನೆ ಶುದ್ಧ ಮೂರುತಿ ಉಡುಪಿ ಕೃಷ್ಣನರ್ಚಿಸಿದವನೆ3
--------------
ನಿಡಗುರುಕಿ ಜೀವೂಬಾಯಿ
ವಂದೇ ಗೋಪಾಲಂ ಕೃಷ್ಣಾನಂದ ಜಲಪಾಲಂ ಮಂದಹಾಸ ಮುನಿವೃಂದ ವಿಶಾಲಂ ಇಂದಿರೇಶ ಯದುನಂದನ ಬಾಲಂ ಪ ಸಾರಿದನು ಸಾರಂ ಕೃಷ್ಣ ಚಾರು ಮೋಹನಾ ಕಾರಂ ಸಾರೋದ್ದಾರಂ ಸುಜನಮಂದಾರಂ ಶ್ರೀರಮಣೀ ಮುಖ ಚಂದ್ರ ಚಕೋರಂ 1 ಕಾಂಚೀ ಮಣಿಹಾರಂ ಕೃಷ್ಣ ವಾಂಛಿತದನುಸಾರಂ ಪಂಚಭೂತ ಪಂಚಸ್ಯಾಕಾರಂ ಪಾಂಚ ಜನ್ಯ ಭೃಗುಲಾಂಛನ ಧಾರಂ 2 ಚಾಪಲ ಗುಣಧಾಮಂ ಕೃಷ್ಣ ಗೋಪೀಜನ ಕಾಮಂ ನೀ ಪರಮಾತ್ಮ ಸ್ವರೂಪ ಸುನಾಮಂ ಶ್ರೀಪತಿ ಯದು ಕುಲದೀಪ ನಿಸ್ಸೀಮಂ 3 ಪಾಂಡವ ಸಾಕಾರಂ ಕೃಷ್ಣ ಪಂಡಿತನುಸಾರಂ ಚಂಡ ಕಿರಣ ಮಣಿಕುಂಡಲ ಧಾರಂ ಮಂಡಲದೊಡೆಯ ಉದ್ದಂಡತಿ ಶೂರಂ 4 ಶರಣರ ಭವದೂರಂ ಕೃಷ್ಣ ಸುರಜನ ಸಾಕಾರಂ ಹರಿಸೂನು ಕೋಣೆ ಲಕ್ಷ್ಮೀಶ ಶೃಂಗಾರಂ ಪರಮಾತ್ಮಕ ಸದ್ಗುರು ಮಂದಾರಂ 5
--------------
ಕವಿ ಪರಮದೇವದಾಸರು
ವನಜನಾಭ ನೀನೆ ದಯಾನಿಧಿ ಮೂರು ಜಗದೊಳಗೆ ಮಣಿದುಬೇಡ್ವೆ ಕನಿಕರದೆನ್ನ ರಿಣಮುಕ್ತನೆನಿಸು ಬೇಗ ಪ ಭಾವಿಗಳ ಭಾವಪೂರ್ಣ ದೇವ ದೇವ ವಿಮಲಮಹಿಮ ಸಾವು ಹುಟ್ಟುಯಿಲ್ಲದ ಘನ ಸ್ವಾಮಿಯೆನ್ನ ಮಾಡೋ ಪಾವನ 1 ವೇದವೇದ್ಯನೀತ ಅ ನಾದಿಕಾಲದ್ವಸ್ತುವೇ ನೀ ಸಾಧುಸುಜನೈಕ್ಯನೆನ್ನ ಮೋದದಿಂದ ಸಲಹೋ ಮುದ 2 ಭೂಮಿಗಧಿಕ ನಿಸ್ಸೀಮ ಸುಖಧಾಮ ಭೀಮ ಗಂಭೀರ ಎನ್ನ ಕಾಮಿತಾರ್ಥ ಕರುಣೆಗೈದು ಪ್ರೇಮದಾಳೆನ್ನೊಡೆಯ ಶ್ರೀರಾಮ3
--------------
ರಾಮದಾಸರು
ವಾತನ್ನ ಜಯಾಜಾತನ್ನ ಲೋಕ- ಪ್ರೀತನ್ನ ಸ್ತುತಿಸಿ ಖ್ಯಾತನ್ನ ಪ ವಿಷವ ನುಂಗಿದ ಮಹಾಶೌರ್ಯನ್ನ ನಿತ್ಯ ಅಸಮ ಸುಂದರ ಮತಿಧಾರ್ಯನ್ನ ನಿಶಾಚರ ಕುಲದೋಷ ಸೂರ್ಯನ್ನ ಆರಾ ಧಿಸುವ ಭಕ್ತರ ಸುಕಾರ್ಯನ್ನ 1 ವಾನರ ಕುಲದೊಳು ಧೈರ್ಯನ್ನ ಮುದ್ದು ಆನನ ಗೀರ್ವಾಣವರ್ಯನ್ನ ಆನಂದ ವಿಜ್ಞಾನ ಚರ್ಯನ್ನ ದುಷ್ಟ - ದಾನವರಳಿದತಿ ವೀರ್ಯನ್ನ 2 ದ್ವಿಜರಾಜ ಕುಲಾಗ್ರಣಿ ಭೀಮನ್ನ ಮಹ ದ್ವಿಜಕೇತ ನಂಘ್ರಿಗೆ ಪ್ರೇಮನ್ನ ದ್ವಿಜರ ಪಾಲಿಸಿದ ನಿಸ್ಸೀಮನ್ನ ಕುರು ವ್ರಜವ ಸದೆದ ಸಾರ್ವಭೌಮನ್ನ 3 ಅದ್ವೈತ ಮತ ಕೋಲಾಹ ಲನ್ನ ವೇದ ಸಿದ್ಧಾಂತ ಶುಭಗುಣ ಶೀಲನ್ನ ಸದ್ವೈಷ್ಣವರನ್ನು ಪಾಲನ್ನ ಗುರು ಮಧ್ವಮುನಿ ಗುಣಲೋಲನ್ನ 4 ಚಾರುಚರಿತ ನಿರ್ದೋಷನ್ನ ಲೋಕ ಮೂರರೊಳಗೆ ಪ್ರಕಾಶನ್ನ ಧೀರ ವಿಜಯವಿಠ್ಠಲೇಶನ್ನ ಬಿಡದೆ ಆರಾಧಿಪ ಭಾರತೀಶನ್ನ 5
--------------
ವಿಜಯದಾಸ
ವಾಮನಾವತಾರ ವಾಮನನನು ನೆನೆ ಹೇ ಮನವೇ ವಟು ವಾಮನನನು ನೆನೆ ಹೇ ಮನವೇ ಕಾಮಪೂರಣ ಲಕ್ಷ್ಮೀಧಾಮನ ಮರೆಯದೆ ಪ. ಶ್ಯಾಮಸುಂದರ ಸುರ ಪ್ರೇಮದಿ ಕಶ್ಯಪ ಧಾಮವಾ ಬೆಳಗುತ ಬಂದ ಭೂಮಿಯನಳದ ಸುತ್ರಾಮಗಿತ್ತ ನಿ ಸ್ಸೀಮ ಸಾಹಸ ಗೋವಿಂದ ನೀ ಸಲಹೆಂದು 1 ಬಲಿಯ ದೃಢಕೆ ಮೆಚ್ಚಿ ಸಲಹುತ ಮುಂದಿನ ವಲಭಿದಾಗುವೀ ನೀನೆಂದ ಕಲುಷಾಪಹಪದಕಮಲವ ಶಿರದೊಳು ನಿಲಿಸಿ ಬಾಗಿಲೊಳು ನಿಂದವ ನೀನೆಂದು 2 ಶ್ರೀ ಭೂಮಿಯುತ ಮುಕ್ತಾಭರಣಾಶ್ರಿತ ಸೌಭಾಗ್ಯಕರ ಲೀಲಾ ಆಭೀರರ ಕನ್ನೆಯರೊಲಿಸಿದ ಪದ್ಮ- ನಾಭ ವೆಂಕಟಪತಿ ಪರಮ ಪುರುಷನೆಂದು 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಯಸ ಸಿದ್ಧಿ ಕೊಟ್ಟಾವಮ್ಮ ಒಲಿದಾಳೆ ದೂತೆ ಶ್ರೀಶನ ದಯ ಸೂಸಿತುಳುಕುತ ಶ್ರೇಯಸ್ಸು ಬರಲೆಂದು ಪ. ಶುದ್ಧ ಮುತ್ತು ರತ್ನದವಸ್ತ ತಿದ್ದಿಸೀರಿ ಕುಪ್ಪುಸ ತೊಟ್ಟುಬದ್ಧವಾದ ತಳಪಿಲಿಂದ ಮುದ್ದು ಸುರಿಯುತ1 ಪುಂಡರಿಕಾಕ್ಷನ ಪಾದಕೆ ದಂಡಪ್ರಣಾಮವ ಮಾಡಿ ಕೊಂಡಾಡಿ ಕೃಷ್ಣನ ನಡೆದಳು ಪಾಂಡವರರಮನೆಗೆ2 ಭಾವೆ ರುಕ್ಮಿಣಿ ದೇವಿಯರಿಗೆ ಭಾವ ಭಕ್ತಿಯಿಂದ ನಮಿಸಿ ಸ್ವಾಮಿ ಕಾರ್ಯ ಸಾಧಿಸಿ ನಿಸ್ಸೀಮಳು ನಡೆದಾಳೆÉ 3 ಅಂದಣ ಏರಿದಳು ದೂತೆ ಬಂದವು ನೀರಿನ ಕುಂಭಚಂದದ ಸೇವಕರು ಮಾರ್ಗ ಮುಂದೆ ನಡೆದರು 4 ಹಾಲು ಮೊಸರು ಹಲವು ಫಲ ಸಾಲುಸಾಲು ಮುತ್ತೈದೆಯರು ಮೇಲಾದ ವಿಪ್ರರು ಮೇಲೆ ಮೇಲೆ ಬಂದರು5 ಧೀರ ಧರ್ಮರಾಯನ ಸಭೆüಯ ದ್ವಾರಪಾಲಕಳಾಗಿ ದೂತೆ ವೀರ ಮುದ್ರಿಕೆಯ ಕೊಟ್ಟು ನೀರೆ ನಡೆದಳು6 ಶ್ರೀದೇವಿ ದೂತೆ ರಾಮೇಶನ ಪಾದಸ್ಮರಣೆಯ ಮಾಡಿಮೋದಭರಿತಳಾಗಿ ರಾಯನ ಪಾದಕ್ಕೆರಗಿದಳು 7
--------------
ಗಲಗಲಿಅವ್ವನವರು
ವಾಯು ದೇವರು ಪಾವಕ ಭಾರತೀಶ ಮಹ ಶೂರಾ ಪ ಕೇಸರಿ ರೂಪನೆಶರಣೆನ್ನುವೆ ತವ ಚರಣಾಬ್ಜಗಳಿಗೆ ಅ.ಪ. ಕೂರ್ಮ ಕರ್ಮ - ಕರಣ 1 ಭೀಮಾ - ಕೌರವರಳಿದ ನಿಸ್ಸೀಮ | ಪ್ರಥಮಾಂಗ ಹರಿಗೆ ಸುಧಾಮಅಸಮ ನಿನ್ನೊಳು ಹರಿಪ್ರೇಮ | ನಿನಗೊಂದಿಪೆ ಮುಂದಿನ ಬೊಮ್ಮಶ್ಯಾಮಸುಂದರ ಹರಿ ಪ್ರೇಮ ಸಂಪೂರ್ಣನಿಮ್ಮೋಲಗೆ ಬಯಸುವೆ ಭೂಷ ಲಲಾಮ2 ಮಧ್ವಾ - ಬಹುಶ್ರುತಿ ಪ್ರತಿಪಾದ್ಯ | ಮಧ್ವಾಖ್ಯ ತತ್ರ್ಯತಿ ಸಿದ್ಧಶುದ್ದ ಸತ್ವಾತ್ಮಕ ತನು ಬದ್ಧ | ಬದ್ದ ತ್ವವು ನಾಮಮಾತ್ರ ಸಿದ್ದಅದ್ವಿತೀಯ ಗುರು ಗೋವಿಂದ ವಿಠಲನಸಿದ್ಧಾಂತಿಸಿ ಬಹು ಹಳಿದೆ ವಿರುದ್ಧ 3
--------------
ಗುರುಗೋವಿಂದವಿಠಲರು
ವಾಯುವೆ ತವಚರಣ | ಸುರಶಿರ ಭೂಷಣಉರು | ಗಾಯನ ದರ್ಶನ | ದಾಯವ ನೀವನೆರಾಯ ರಾಜ್ಯವಾಳ್ದ || ಭೋ ಯತಿವರ ||ಅ|| ಕಾಯ ಶೈಥಿಲ್ಯದಿದಾಯ ವರಿಯದಲೆ | ಮೊರೆ ಹೊಕ್ಕೆ ನಿನ್ನ ಅ.ಪ. ರಾಮರಾಜ್ಞೆಲಿ | ಆ ಮಹಾಬ್ಧಿಯ |ಸೀಮೆ ಮೀರಿ ನಿ | ಸ್ಸೀಮ ಮುದ್ರಿಕೆಭೂಮಿ ಜಾತೆಗೆ | ಇತ್ತು ನಿಶಿಚರಸ್ತೋಮ ಸಂಹರ | ಹೇ ಮಹಾದ್ಭುತ 1 ಪಾಂಡು ಕುವರ ಅ | ಜಾಂಡ ಸೃಜಿಪನೆ |ಹಿಂಡು ಕೌರವ | ದಿಂಡುಗಳ ಶೀಳಿಪಾಂಡುರಂಗಗೆ | ಮಂಡಿಸುತ ಬ್ರ |ಹ್ಮಾಂಡ ಭಾರವ | ಗೊಂಡ ಪ್ರಚಂಡನೆ 2 ಶೌರಿ ಯಾಜ್ಞದಿ | ಕ್ರೂರಿ ಮಾಯ್ಮತ |ಭಾರ ಕಳೆದು ವಿ | ಹಾರ ಗೈದೆಯೊಶೌರಿ ಗುರು ಗೋ | ವಿಂದ ವಿಠಲನ |ಚಾರು ಚರಣವ | ತೋರಿ ನೀ ಪೊರೆ 3
--------------
ಗುರುಗೋವಿಂದವಿಠಲರು
ವಿಘ್ನೇಶಾ - ಪಾಲಿಸೊ - ಎನ್ನ - ವಿಘ್ನೇಶಾ ಪ ವಿಘ್ನೇಶ ಪಾಲಿಸೊ ಯೆನ್ನಾ | ದೋಷಭಗ್ನವ ಗೈಸಯ್ಯ ಮುನ್ನಾ | ಆಹಲಗ್ನವಾಗಲಿ ಯೆನ್ನ ಮನ ಆದೀಂದ್ರಿಯಗಳುಯಜ್ಞೇಶ ಶ್ರೀಹರಿ ಪದದ್ವಯ ವನಜದಿ ಅ.ಪ. ಶಿರಿವ್ಯಾಸ ಹೃದ್ಗತ ಅರ್ಥಾ | ನೆರೆಅರಿತು ಲಿಖೀಸಿದೆ ಗ್ರಂಥಾ | ನೋಡುಕರುಣಾಳು ಹರಿಕೃಪಾ ಪಾತ್ರಾ | ಬಾಗಿಶರಣೆಂಬೆ ತಿಳಿಸ್ಯದರರ್ಥಾ | ಅಹತಾರಕಾಂತಕನನುಜ | ವೀರ ವೈಷ್ಣವ ನಿನ್ನಪರಮಾನುಗ್ರಹವನ್ನ | ಕರುಣಿಸಿ ಕಾಯೆನ್ನ 1 ಚಾರುದೇಷ್ಣನ ನಾಮದಲ್ಲೀ | ಅವತಾರ ಮಾಡಿದೆ ರುಕ್ಮಿಣೀಲಿ | ಸಿರಿಅರಸನಾಜ್ಞೆಯ ಪೊತ್ತು ಅಲ್ಲೀ | ದೈತ್ಯದುರುಳರ ತರಿದ್ಯೋಧುರದಲ್ಲೀ | ಅಹಧರೆಯ ಭಾರವ ನಿಳುಹಿ | ಮೆರೆದಂಥ ಗುರುವರಪರಮ ಕಾರುಣ್ಯದಿ | ಹರಿಸೆನ್ನ ಭವತಾಪ 2 ಶೇಷಶತ ದೇವೋತ್ತಮಾ | ಬಾಪುಶ್ರೀಶನ ನಾಭಿಯೆ ಧಾಮಾ | ವಿಶ್ವೋಪಾಸಕ ಖೇಶ ನಿಸ್ಸೀಮಾ | ಪ್ರಾಣಾವೇಶಯುತನೆ ಗುಣಧಾಮಾ | ಅಹಮೂಷಕ ವರವಾಹ ಭೇಶ ಗರ್ವಹರಶ್ರೀಶನ್ನ ಹೃದಯಾವ | ಕಾಶದಲಿ ತೋರೊ 3 ಪರಿ | ಶುದ್ಧ ಭಕ್ತಿಯನಿತ್ತು 8 ಸಿರಿ ರಮಣನಾ | ಗುರು ಗೋವಿಂದ ವಿಠಲಾಭಿಧನ್ನಾ | ನಿಲ್ಲಿಸಿಅವಿರತವನ ಧ್ಯಾನವನ್ನಾ | ಆಹಗೈವಂಥ ಸೌಭಾಗ್ಯ | ಪಾಲಿಸೊ ವಿಘ್ನೇಶಶ್ರೀವರನಂಘ್ರಿ ಸರೋಜ | ಭೃಂಗನೆ ಕರುಣೀ 5
--------------
ಗುರುಗೋವಿಂದವಿಠಲರು
ವಿಧಿ ಪ ಪುರಾರಿನುತ ಚರಣಾ ನಾರಾಯಣಾ ಅ.ಪ ಸರಸಿಜಾಪ್ತ ಕುಲಚಂದ್ರಮ ರಾಮ | ಮ- ಹಾರಾಜ ರಾಜಲಲಾಮ ನಿಸ್ಸೀಮ 1 ಎನ್ನಪರಾಧಗಳೇನಿದ್ದರು ಸರಿ ಮನ್ನಿಸುವರು ನೀನಲ್ಲದಾರು 2 ಅಜಿತಾದ್ಯನಂತರೂಪಾಪ್ರಮೇಯಭಜಕ ಪೋಷ ಗುರುರಾಮ ವಿಠ್ಠಲ ರಾಯಾ 3
--------------
ಗುರುರಾಮವಿಠಲ
ವೇದವ್ಯಾಸಾ ಶ್ರೀ ಹರೇ | ನಿನ್ನ ಶ್ರೀಪಾದಉದಕೇಜ - ತೋರಿಸೋ ಪ ಹರಣ ಪ್ರಬೋಧ ಮುದ್ರಾಂಕನ ಅ.ಪ. ಕಾಲ | ಸಕಲ ಸದ್ಗುಣಧಾಮ - ಶ್ರೀ ಭೂಮಿ ದುರ್ಗೆ ಲೋಲ ||ಧೃತ - ಕಾಮ ಜನಕ ನಿಸ್ಸೀಮ ಮಹಿಮ - ತ್ರಿಧಾಮದಲಿ ಭಕ್ತಸ್ತೋಮ ವಿರಿಸಿದೆ - ಶ್ರೀರಾಮಾ - ಸುಧಾಮ - ರಿಪು ಭೀಮಾ | ಸುರಸಾರ್ವಭೌಮ 1 ವಿಧಿ ಪುತ್ರಾನ್ವಿತಗೋತ್ರಾರಿ ಪ್ರಿಯ ಸತ್ಯಾವಲ್ಲಭಚಿತ್ರಾ - ಸುವಿಚಿತ್ರಾ - ಸಮಗಾತ್ರಾ | ತೋರಿಸುತವಗಾತ್ರ 2 ಚಿನುಮಯಗುಣ ವಪುಷಾ | ಅನಂತ ಶೀರ್ಷಾಅನಿಲ ಹೃದಯಾಂತರ್ಗತ ||ಧೃತ - ಮನಸಿಜ ಪಿತ ಗುರುಗೋವಿಂದ ವಿಠಲನೆತನುಮನಧನವೆಲ್ಲ ನಿನದಾಗಿರುವುದೊಮುನಿವಂದ್ಯಾ - ಮುಕುಂದ - ಗೋವಿಂದ | ಕೊಡು ಎನಗಾನಂದ3
--------------
ಗುರುಗೋವಿಂದವಿಠಲರು
ಶಂಕರ ಶಿವಶಂಕರ ಶಿವಶಂಕರ ಶಿವಶಂಕರ ಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ. ವ್ಯೋಮಕೇಶ ಭವಾಬ್ಧಿತಾರಕ ರಾಮನಾಮೋಪಾಸಕ ಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕ ಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜ ಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ1 ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದ ಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದ ವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲ ವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2 ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರ ಶೈಲರಾಜಸುತಾಧರಾಮೃತಲೋಲ ಲೋಕಧುರಂಧರ ಕರುಣಾಲವಾಲ ಮಹೇಶ್ವರ ಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3 ಕೃತ್ತಿವಾಸ ಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯ ದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯ ಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕ ಮೃಡ ನಮೋ„ಸ್ತು ಸುಮನನಿಯಾಮಕ 4 ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹ ಚಂಡಿಕಾಧವ ಶಿವ ದಯಾರ್ಣವ ಖಂಡಪರಶು ಸುರಾರಿಹ ಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪ ಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5 ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮ ಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮ ಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗ ಸದೋದಿತ ಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6 ಭರ್ಗ ಭಾರ್ಗವ ಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದ ನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದ ದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನ ನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7 ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರ ನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರ ವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತ ವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ತುಪಾಕಿ ವೆಂಕಟರಮಣಾಚಾರ್ಯ
ಶರಣು ಶರಣುಪ. ಶರಣು ಸಕಲೋದ್ಧಾರ ಅಸುರಕುಲ ಸಂಹಾರಅರಸು ದಶರಥಬಾಲ ಜಾನಕಿಯ ಲೋಲವಾಲಿಸಂಹಾರ ವಾರಿಧಿಗೆ ನಟುಗಾರಏಕಪತ್ನಿಯಶೀಲ ತುಲಸಿವನಮಾಲ ಅ.ಪ. ಬಂಟ ಈ ಭಾಗ್ಯಇನ್ಯಾವದೇವರಿಗುಂಟು ಮೂರ್ಲೋಕದೊಳಗೆ1 ಉಟ್ಟಪೀತಾಂಬರವು ಉಡಿಗಂಟೆವೊಡ್ಯಾಣತೊಟ್ಟ ನವರತ್ನದಾಭರಣ ರಸಕರುಣಕೊಟ್ಟ ನಂಬಿಕೆ ತಪ್ಪ ಕರುಣದಲಿ ರಕ್ಷಿಸುವಸೃಷ್ಟಿಯೊಳಗೆಣೆಗಾಣೆ ಕೌಸಲ್ಯರಾಮ 2 ಭಾವಿಸಲು ಅಯೋಧ್ಯಪಟ್ಟಣದ ಪುರವಾಸಬೇಡಿದವರಿಗೆ ವರವÀ ನೀಡುವೆನೆಂದುರೂಢಿಯೊಳಧಿಕ ಚುಂಚನಕಟ್ಟೆಯಲಿ ನೆಲೆಸಿದಸ್ವಾಮಿ ಶ್ರೀ ಹಯವದನ ಪಾಲಿಸೊ ನಿಸ್ಸೀಮ 3
--------------
ವಾದಿರಾಜ
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು