ಒಟ್ಟು 2773 ಕಡೆಗಳಲ್ಲಿ , 112 ದಾಸರು , 1907 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮರೆಯುವರಾರೆ ಶ್ರೀ ಮುರಳೀಧರನ ಕಂಡು ವರವ ಬೇಡದವರಾರೆ ಪಡೆಯದವರಾರೆ ಪ ಮುರಳೀದನಿಯ ಕೇಳಿ ಪರಿದೋಡದವರಾರೆ ಅವನೆಡೆ [ಪರಮಸುಖ] ಪಡೆಯದವರಾರೆ ಅ.ಪ ಕಂಜನಾಭನು ಬಂದು ಪುಂಚವನದಿ ನಿಂದು ಮಂಜುಳಗಾನವ ಮಾಡುತಿರೆ ಅಂಜುವರೇನೆ ನಿರಂಜನನವ ಪಾಪ ಭಂಜಕನೇ ತಂಗಿ ಹೋಗೋಣ ಬಾರೆ 1 ಮಂಗಳಮೂರ್ತಿ ಮಾತಂಗವರದ ಭವ ಭಂಗನ ಚರಣವ ನೋಡುವ ಬಾರೆ ಮಂಗಳ ಜಯ ಜಯ ಮಂಗಳ ಮಾಂಗಿರಿ ರಂಗಗೆ ಶುಭವೆಂದು ಪಾಡುವ ಬಾರೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆಯುವರೆ ಮರೆಯುವರೆ ರಾಮರಾಯಾ | ಗುರುಗಳಾರಾಧನೆಗೆ | ಶಿರಿವಾರದೊಡೆಯಾ || ಪರಿವಾರ ಸಹಿತಾಗಿ ತೆರಳುವದು ನಿಶ್ಚಯಿಸಿ ಬರೆವದಕೆ ಕಾಗದವು ಸಿಗದ್ಹೋಯಿತೆ | ಭರದಿ ಬರಬೇಕೆಂದು | ಕರೆಕಳುಹದಕೆನ್ನ | ಚರನೋರ್ವ ನಾದರು ದೊರೆಯದಾದನೆ ಅಕಟ 1 ಕ್ರೋಧ ವಿರಹಿತರಾದ ಸಾಧುವರ್ಯರ ಸಮಾರಾಧ | ನೆಗೆ ನಾ ಭಾರವಾದೆನೇನೈ | ಆದರವು ತಗ್ಗಿತೇ | ಯುಗ್ಮಪಾದಪಶುವಾದಿನೇ 2 ಗುರುಕರುಣವೆಗ್ಗಳದ ಗರುವಿಕೆಯೋ ಕಾರ್ಪರ ನರಸಿಂಹರರ್ಚಕರಮೋಕ್ಷ ಬಲವೋ ಪರಮ ಸತ್ಪುರುಷರುಪದೇಶ ಶ್ರವಣದ ಮದವೋ | ಹರಿಕಥಾ ಪಾನದ ಹಂಕಾರವೋ 3 ಇರಬೇಕು ಸರ್ವದಾ ಸಕಲರಲಿ ಸಮದೃಷ್ಟಿ ಹಿರಿಯರಾದವರಲ್ಲಿ ಏಕನಿಷ್ಟಿ | ನಿರುತದಲ್ಲಿ ಸದ್ಗೋಷ್ಟಿ ಪರನಾಗಿ ಮನಮುಟ್ಟಿ ಹರಿಪಾದಸ್ಮರಿಪರಿಗೆ ಕೈವಲ್ಯಷಟ್ಟಿ 4 ಶ್ರೀ ಶಾಮಸುಂದರನ ದಾಸಕೂಟಸ್ಥರೊಳು ನಾ ಸಲ್ಲದವನೆಂದು ಧೃಡವಾಯಿತೇ | ಭೂಸುರವೇಷದಲಿ ಎಂದು ಉದಾಸೀನ ಮಾಡಿನ್ನು 5
--------------
ಶಾಮಸುಂದರ ವಿಠಲ
ಮರೆಯೊಕ್ಕೆ ನಿನ್ನನು ಮರುಗಿ ರಕ್ಷಿಸಬೇಕು ಶಂಕರೇಶಾಗಿರಿಜೆಯಾಣ್ಮನೆದೇವ ಕೆರೆಗೋಡಿಪುರದೀಶ ಶಂಕರೇಶಾ ಪಮರಳಿ ಮರಳಿ ಗರ್ಭಕುರುಳಿ ನಾನೊಂದೆನುಪರಿಪರಿ ಕರ್ಮದ ಫಲಗಳನುಣಲಾಗಿದುರಿತ ತೊಲಗದೀವರೆಗು ನಾನೇಗೈವೆಕರುಣಾರಸ ನಿನಗೇತಕುದಿಸದಿದೆ 1ಸೂತ್ರಧಾರಕ ನೀನು ಸಕಲಜೀವರಿಗೆಲ್ಲಪಾತ್ರ ಕೃಪೆಗೆ ನಾನು ಪ್ರೇಮದಿಂ ನೋಡಿನ್ನುಗೋತ್ರಾರಾತಿ ವಂದಿತ ಪಾದಕಮಲನೆಸ್ತೋತ್ರವ ಮಾಳ್ಪುದ ಮೊದಲೆ ನಾನರಿಯೆನು2ಮರತಿ ಪುಟ್ಟದು ನಾನಾವಿಧ ಭವಸುಖದಲಿವರೆತರಿತೆನೆನಿಸಿದ ಕರ್ಮದ ಬಲುಹಿನಿಂಬೆರೆತು ಬಯಲ ಮೋಹದಲಿ ಮೋಸಹೋದೆನುಕುರಿತು ಕಾಮ್ಯವ ಭಜಿಸಿದೆನೊ ನಿನ್ನನು3ಉರಿಗಣ್ಣ ದೃಷ್ಟಿಯಿಂ ದುರಿತವ ದಹಿಸಿನ್ನುವರಶಶಿನೇತ್ರದಿಂ ನೋಡಿ ತಾಪವ ಪರಿಹರಿದಶ್ವನೇತ್ರದಿ ಜ್ಞಾನವನರುಹಿಸುಶರಣಾಗತನಪರಾಧವನೆಣಿಸದೆ 4 ಪರಾಕು ಶಂಕರೇಶಾ5
--------------
ತಿಮ್ಮಪ್ಪದಾಸರು
ಮರೆವಿನೊಳಗೆ ಮನೆಮಾಡಿದ್ದಿ ಮನ ಅರಿವಿನ ಆಲಯ ಬಿಟ್ಟಿದ್ದಿ ಪ ಹರಿದುಹೋಗುವಂಥ ಸಿರಿಗೆ ಒಲಿದು ನೀ ಪರಮ ಹರಿಯ ಪಾದಕ್ಹೊರತಿದ್ದಿ ಅ.ಪ ಮಂದಿಮಕ್ಕಳೆಂದು ನೆಚ್ಚಿದ್ದಿ ನಿನ್ನ ಹಿಂದೆ ಬರುವರೇನು ಅಂತಿದ್ದಿ ಕುಂದುವ ಜಗ ಮಾಯದಂದಗೆಟ್ಟು ಒಬ್ಬ ನೊಂದಿನ ಹೋಗ್ವುದು ಮರೆತಿದ್ದಿ 1 ಸಿರಿಸಂಪತ್ತಿಗೆ ಹಿಗ್ಗಿದಿ ಇದು ಸ್ಥಿರವಲ್ಲೆಂಬುದು ಅರಿಯದ್ಹೋದಿ ಎರೆದೆಣ್ಣಿರುವನಕುರಿವ ದೀವಿಗೆಯೋಲ್ ವರ ಪುಣ್ಯಿರುವನಕಿರುತದೆ ಸಿರಿಯದು 2 ಹೇಳಿದಮಾತನು ಕೇಳದ್ಹೋಗಿ ಮನ ಮೂಳನಾಗಬೇಡೆಲೆ ಗೂಗಿ ಹಾಳುಯೋಚನೆ ಬಿಟ್ಟು ಮೇಲುಪದವಿ ಪಡಿ ಶೀಲ ಶ್ರೀರಾಮಗೆ ತಲೆಬಾಗಿ 3
--------------
ರಾಮದಾಸರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ಮಹಾಲಕ್ಷ್ಮಿ ಅಮ್ಮಾ ಲಕುಮಿದೇವಿ ನಿಮ್ಮರಸನ ತೋರೆ ಸುಮ್ಮನೆ ಬಿಡುವದು ಸಮ್ಮತವೇ ನಿನಗೆ ಪ ಹೆತ್ತ ಬಾಲರು ಮಂದಮತಿಗಳಾದರೆ ತಾಯಿ ಸತ್ತು ಹೋಗಲಿ ಎಂದು ಎತ್ತದೆ ಬಿಡುವೊಳೆ 1 ನಿಮ್ಮ ಮಾತಿಗೆ ಹರಿ ಸಮ್ಮತನಾಗುವ ಕುಮತಿಗಳೆಣಿಸದೆ ರಾಮ ಮೂರುತಿ ತೋರೆ2 ಸಿಂಧುತನಯೆ ಎನ್ನ ಬಂಧ ಬಿಡಿಸಿ ಬೇಗ ಪಾದ ಪೊಂದಿರುವಂತೆ ಮಾಡೆ 3 ತತ್ವೇಶರೆಲ್ಲರೂ ನಿತ್ಯಾಧೀನರು ನಿಮಗೆ ಭೃತ್ಯಗೆ ನಿಜ ಹರಿ ಭಕ್ತಿ ಕೊಡುವಂತೆ ಪೇಳೆ 4 ಎನ್ನಲಿರುವ ಹೀನರೋಡಿಸಿ ಬೇಗ ಪನ್ನಗಾಚಲವಾಸ ಶ್ರೀ ನರಹರಿ ತೋರೆ 5
--------------
ಪ್ರದ್ಯುಮ್ನತೀರ್ಥರು
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ
ಮಾಡಿ ಗುರುಧ್ಯಾನ ನೋಡಿ ನಿಜಸ್ಥಾನ ಧ್ರುವ ಹೋಗ ಹೋಗಬ್ಯಾಡಿ ಏಕವಾಗಿ ನೋಡಿ ಜೋಕೆಯಿಂದ ಕೂಡಿ ಸುಖವು ಸೂರ್ಯಾಡಿ 1 ನೋಡಿ ನಿಮ್ಮ ಖೂನ ಕೂಡಿ ಸಮ್ಯಙÁ್ಞನ ಗುಹ್ಯ ಧನ ಮಾಡಿರೊ ಜತನ 2 ಮಾಡಿ ಗುರುಸ್ತುತಿ ಮೂಢ ಮಹಿಪತಿ ನೋಡಿ ನಿಜವ್ಯಕ್ತಿ ಪಡೆದ ಸದ್ಗತಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡಿ ನೀವು ಸತ್ಸಂಗ ನೋಡಿ ಘನ ಅಂತರಂಗ ಧ್ರುವ ಸಾರಿದೂರಲಿಕ್ಕೆ ವೇದ ಅರರಿವದೆನಗಗಾಧ ದಾರಿದೋರಿಕುಡು ಬೋಧ ಗುರುಪ್ರಸಾದ 1 ಬದಿಲಿರಲಿಕ್ಕೆ ಖೂನ ಇದಕ್ಯಾಕುದ್ದರಿ ಜ್ಞಾನ ಛೇದಿಸಿ ಅನುಮಾನ ಭೇದಿಸಿರೊ ಪೂರ್ಣ 2 ಹಿಡಿಯಲಿಕ್ಕೆ ಸತ್ಸಂಗ ಓಡಿಬಾವ್ಹಾ ಶ್ರೀರಂಗ ಮಾಡಿ ಭವಭಯಭಂಗ ನೋಡುವ ಕೃಪಾಂಗ3 ಎಲ್ಲಕ್ಕೆ ಶಿಖಾಮಣಿ ಸುಲಭ ಈ ಸಾಧನಿ ಸೊಲ್ಲಿಗೆ ಮುಟ್ಟಿದ ಪ್ರಾಣಿ ಬಲ್ಲವ ಸುಜ್ಞಾನಿ 4 ಪಿಡಿದು ಸತ್ಸಂಗತಿ ಕಡಿದು ಹೋಯಿತು ಭ್ರಾಂತಿ ಪಡೆದ ಸುಖ ವಿಶ್ರಾಂತಿ ಮೂಢ ಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡಿದಫಲವನುಭವಿಸಣ್ಣ ನೀ ಒಲ್ಲೆಂದರೆ ಬೆನ್ನ ಬಿಡದಣ್ಣ ದೊರಕುವುದ್ಹ್ಯಾಗಣ್ಣ ಪ ಜತೆಯಿಲ್ಲದೆ ನೀ ಮೊದಲ್ಹುಟ್ಟಿ ಮತ್ತು ಜತೆಯಿಲ್ಲದ್ಹೋಗ್ವುದು ಮರೆತುಬಿಟ್ಟಿ ಸತಿಸುತರ್ಹಿತರೆಂದು ಮತಿಗೆಟ್ಟ ಮಂದ ಮತಿಯಾಗಿ ಸಂಸಾರ ತಿಳಿದಿ ಗಟ್ಟಿ ಗತಿಸುವ ದೇಹದ ಸ್ಥಿತಿ ವಿಚಾರಿಸದೆ ಸತತ ಒದ್ದಾಡಿದಸತ್ಯದೊಳಗೆ ಭ್ರಷ್ಟ 1 ಗಳಿಸಲು ತುಸು ಬೇಸರಲ್ಲದ್ಹೋಗಿ ಕೇಳಿದಳುಕಿ ಅಳುಕಿ ಜನರಿಗೆ ಬಾಗಿ ಅಳಿದುಪೋಗುವ ಕಾಸು ಹಣಕಾಗಿ ಕೆಟ್ಟು ಬಳಲಿಬಳಲಿ ದುಡಿದೆಲೆ ಗೂಗಿ ನಳಿನಾಕ್ಷನ ಪೂಜೆ ಒಮ್ಮೆ ಮಾಡೆನ್ನಲು ಅಳುಮೋರೆ ಮಾಡಿದಿ ತಲೆಬಾಗಿ 2 ಕೆಟ್ಟ ಕೃತ್ಯದಿ ನಿನ್ನ ವಯ ಕಳೆದಿ ಮನೆ ಗಿಷ್ಟಮಿತ್ರರು ಬರಲತಿ ನೊಂದಿ ಕೊಟ್ಟದ್ದು ಕೊಡಲಿಕ್ಕೆ ಸಿಟ್ಟಿಗೆದ್ದಿ ನೀ ಶಿಷ್ಟರ ಸಂಗಕೆ ದೂರಾದಿ ಇಷ್ಟದಾಯಕ ನಮ್ಮ ಶಿಷ್ಟ ಶ್ರೀರಾಮನಡಿ ಗಟ್ಟ್ಯಾಗಿ ಭಜಿಸದೆ ಕೆಟ್ಟ್ಹೋದಿ 3
--------------
ರಾಮದಾಸರು
ಮಾಡಿದರಿಲ್ಲವೋ ಪ ಆಸೆ ಮಾಡಿದರಿಲ್ಲ ದೇಶ ತಿರುಗಿದರಿಲ್ಲ ಘಾಸಿ ಮಾಡಿದರಿಲ್ಲ 1 ಮೊಟ್ಟೆಯನು ಹೊತ್ತರಿಲ್ಲ ಕಷ್ಟ ಮಾಡಿದರಿಲ್ಲ ಘಟ್ಟ ಬೆಟ್ಟವ ಹತ್ತಿ ಕುಟ್ಟಿ ಕೊಂಡರು ಇಲ್ಲ 2 ಟೊಂಕ ಕಟ್ಟಿದರಿಲ್ಲ ಲಂಕೆಗೆ ಹೋದರೂ ಇಲ್ಲ ಬೆಂಕಿ ಬಿಸಿಲೊಳು ತಿರುಗಿ ಮಂಕು ಮರುಳಾದರಿಲ್ಲ 3 ಪರ ಊರಿಗೆ ಹೋದರಿಲ್ಲ ಆರಿಗ್ಹೇಳಿದರಿಲ್ಲವಾರಸೇರಿದರಿಲ್ಲ 4 ವಾತಸುತನ ಕೋಣೆ ಲಕ್ಷ್ಮೀಶನು ಆತ ಕೊಟ್ಟರೆ ಉಂಟು ಆತ ಕೊಡದರಿಲ್ಲ 5
--------------
ಕವಿ ಪರಮದೇವದಾಸರು
ಮಾತು ಆಡುವೆ ಯಾತಕೆ ಮನವೆ ನೀ ಸೋತು ಸುಮ್ಮನಿರು ಜೋಕೆ ಪ ಮಾತು ಆಡುವೆ ಯಾಕೆ ಮಮತಾ ಅಹಂಕಾರದಿ ಶ್ರೀತರುಣಿವರನ ಸಿರಿನಾಮವಿಲ್ಲದೆ ಅ.ಪ ಕಾಯ ಅಸ್ಥಿರವೆನ್ನದೆ | ಇಹ ಪರಕೆ ಸ- ಮಾಯವಾದಗಳಾಡೆ ಬಾಯಿ ನೋವಲ್ಲದೆ 1 ವೇದ ಪುರಾಣವಿಲ್ಲ | ಶಾಸ್ತ್ರವೆ ಬ್ರಹ್ಮ- ವಾದವೇ ಮೊದಲೇಯಿಲ್ಲಾ ಸಾಧನೆಯೆಂಬುವದು ಲೇಶಯಿದರೊಳಿಲ್ಲಾ ಹಾದಿಹೋಕರ ಕೂಡಿ ಪ್ರೌಢನು ನಾನೆಂದು 2 ಹರಟೆ ಹರಟೆ ಮೋದಿಸಿ ಪರಗತಿ ಚಿಂತೆ ಬಿಂದು ಮಾತ್ರವು ಕಾಣೆ ಹರಿವ ನೀರೊಳು ಬೂದಿಹಾಕುವಂದದಿ ವ್ಯರ್ಥ 3 ಒಂದಕ್ಕೊಂದ್ಹೆಚ್ಚಿಸುತ | ಶುಷ್ಕವಾದ- ದಿಂದ ಕಾಲವ ಕಳೆಯುತ ನಿಂದಿಸಿ ಪರರ ಸ್ವಯೋಗ್ಯತೆ ತಿಳಿಯದೆ 4 ಬಲ್ಲೆನಾ ಬಿಡು ಎಂಬುವೆ | ಸದಾ ಒಬ್ಬ- ಪುಲ್ಲಲೋಚನ ಗುರುರಾಮವಿಠಲನ ಕಾಣ- ಲಿಲ್ಲ ಶೋಧಿಸಿ ತಿಳಿಯಲಿಲ್ಲ ಬರಿದೆ ಬಾಯಿ 5
--------------
ಗುರುರಾಮವಿಠಲ
ಮಾಧವ ನಮ್ಮ ಹೆ ಜ್ಜಾಜಿಯ ಚೆನ್ನಕೇಶವಾ ಪ ಸಾಜದಿ ಶರಣರಿಗೊಲಿವಾ ಸುರ ಭೂಜನು ಪರವಾಸುದೇವಾ ಅ.ಪ ಮರೆತವರಿಗೆ ಮತ್ತೂ ದೂರನು ಇವ ಮರೆಹೊಕ್ಕವರ ಮುಂದಿರುವನು ದುರಿತಗಳಡಗಿಸಿ ದಾಸರ ಪೊರೆವಾ ಪರಮದಯಾಳುವು ಪ್ರಭು ಶ್ರೀನಿಭವ 1 ನಿರ್ಜರ ಮುನಿಗಣ ಲೋಲಾ ಶೀಲಾ ಸಾರಥಿ ಲೀಲಾ ಪರ್ಜನ್ಯ ಪ್ರಭುಪರಿಪಾಲ ನೀಲಾ ದುರ್ಜನ ವಂಶಕ್ಕೆ ಕಾಲಾ 2 ನಿತ್ಯತಂದೆಯು ತಾಯಿಯು ಶ್ರೀರಂಗಾ ಸತ್ಯಸಹೋದರನು ವೆಂಕಟರಂಗಾ ಸ್ತುತ್ಯ ಬಂಧುವು ತಾನೆ ನರಸಿಂಗಾ ಇವ ಪ್ರತ್ಯಕ್ಷನೊ ಅಂತರಂಗ 3 ವೆಂಕಟವರದನೆ ಸದಯಾ ಗುರು ಸಂಕಟಹರ ಬಹುವಿನಯಾ ರಂಗ ಪಂಕಜಸಂಭವ ತನಯಾ 4 ಯಾದವ ಯದುಶೈಲಶೃಂಗಾ ಸಾಂಗ ಮಣಿ ಉತ್ತಮಾಂಗ [ವೇದ] ವೇದ್ಯನೆ ಗರುಡತುರಂಗಾ ಗಂಗಾ ಬಾದರಾಯಣ ಗೀತೋತ್ತುಂಗ 5 ಸಂಪಿಗೆ ಕಂಪಿನ ಸುಂದರ ಸಂಪೂರ್ಣ ಸಂಪತ್ಕುಮಾರ ಶ್ರೀ ಭೂನೀಳ ರಮಣ ತಂಪಿನ ಹೃದಯದ ಪ್ರಾಣಸೂತ್ರಾದಿ ಪೆಂಪಿನಗುರು ಶ್ರೀನಿವಾಸ ಕಲ್ಯಾಣ6 ರಾಘವಜಯ ಸೀತಾರಾಮಾ ಸ್ವಾಮಿ ರವಿಕುಲ ಸುಂದರಸೋಮ ಯೋಗಿ ಜನಾನಂದ ಧಾಮಾ ಪ್ರೇಮಪ್ರಿಯ ಶ್ರೀಶ್ಯಾಮ ಭಾಗವತಾನಂದಪ್ರಿಯ ಪುಣ್ಯನಾಮಾ ಚತು ಸಾಗರಾಂತ ಸಾರ್ವಭೌಮ 7 ಭಕ್ತಮಂಡಲಿ ಕಾಮಧೇನು ಜೇನು ವಿ ರಕ್ತ ಜನರ ಹೃದಯಭಾನು ಮುಕ್ತಿ ಬಯಸಿ ಬಂದೆ ನಾನು ಪ್ರೇಮಾ ಸಕ್ತಿ ಸಿದ್ದಿಯ ನೀಡು ನೀನು 8 ಸಕಲದೇವರೊಳೆಲ್ಲ ನೀನೇ ಹೆಚ್ಚು ಅಕಳಂಕ ಸಾಧುಗಳ ಸವಿಬೆಲ್ಲದಚ್ಚು ನಿಖಿಳಜೀವರೊಳೆಲ್ಲ ಪರಮಾತ್ಮನಚ್ಚು ಸುಕರದಿ ನೆನೆಯುವ ನನಗೆ ನಿನ್ನಯ ಹುಚ್ಚು 9 ಪರಿಪರಿ ಭವಸಂಸಾರಾ ಸಾರಾ ಹೊರಲಾಲೆ ದೂಡುವೆ ದೂರಾ ಪರಮಾತ್ಮಾ ಪದಗಳ ಸೇರಾ ಸಾರಿ ಕರೆಯಲು ಕರಗಳ ತೋರಾ 10 ರಾಜ ಜನಾರ್ಧನ ದಿವ್ಯಂ ದಿವ್ಯಂ ಜಾಜಿ ತುಲಸೀ ಮಾಲ ಭವ್ಯಂ ಯಾಜಿ ಕಮಂಡಲ ದ್ರವ್ಯಂ ಸ್ತವ್ಯಂ ಜನಗಾನ ಶ್ರೋತವ್ಯಂ 11 ಸರ್ವಲೋಕ ಶರಣ್ಯ ಗಣ್ಯ ಉರ್ವಿ ದೇವ ವರೇಣ್ಯ ಹಿರಣ್ಯ ಸ್ವರ್ಣ ವಿರ್ವತ ದರಶ್ಯಾಮ ಪುಣ್ಯ 12
--------------
ಶಾಮಶರ್ಮರು