ಒಟ್ಟು 57925 ಕಡೆಗಳಲ್ಲಿ , 139 ದಾಸರು , 12496 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಟಪಾಟವ ನೋಡಿ ಧನ್ಯರು ರಂಗಯ್ಯನಾಡ್ವಆಟಪಾಟವ ನೋಡಿ ಧನ್ಯರು ಪ.ಹೊಕ್ಕಳಲ್ಲಿರೊ ಮಗನು ಕಂಡರೆನಕ್ಕಾನೆಂಬ ಹೇಯ ಬಿಟ್ಟುಚಿಕ್ಕರೊಡನೆ ನಂದವ್ರಜದಿಮಕ್ಕಳಂತಲಿಪ್ಪ ರಂಗನಾಟ 1ಅಂಗಳದಲ್ಲಿದ್ದ ಪಂಕದಲ್ಲಿಮುಂಗೈಯ ಮುರಾರಿ ಕೃಷ್ಣಸಂಗದೆಳೆಯ ಮಕ್ಕಳೊಡನೆಹಿಂಗದೆ ಬೈಯ್ಯಾಟವಾಡುವಾಟ 2ಚಿನ್ನ ಬಾ ನೀ ಹಸಿದೆಯೆಂದುಚೆನ್ನ ನೀ ಉಣಿಸಿದರೊಲ್ಲದೆಕನ್ನವಿಕ್ಕಿ ಗೊಲ್ಲರ ಮನೆಯಬೆಣ್ಣೆಮೊಸರಸೂರ್ಯಾಡಿಮೆಲ್ಲುವಾಟ3ರಂಬಿಸಿಗೋಪಿನೀಲವರ್ಣದಬೊಂಬೆ ಬಾಲ ತೋಟಿ ಬೇಡೆನೆಕೊಂಬು ಕೊಳಲು ಸೆಳೆದು ಹೆಟ್ಟಿಕುಟ್ಟುವಡೆÉೂಂಬಿಕಾರ ವೀರಧೀರನಾಡುವಾಟ 4ಅಡಗಿದರ್ಭಕರ ಬಲ್ಪಿನಿಂದಲೆಹಿಡಿದುತಂದು ಚಿಣ್ಣಿ ಚಂಡನಾಡುತಬಡಿದು ಸೋಲಿಸಿ ದೂರು ಬರುವ ಮುನ್ನೆಹುಡಿಯ ಹೊರಳೇಳುವ ತೊಂಡೆಕಾರ ದೇವನಾಟ 5ಮೃತ್ತಿಕೆಯನುಂಬ ಮಗನ ಕಂಡುಮತ್ತೆಶೋದೆ ಅಕ್ಕಟೆಂದುತುತ್ತಿಸಿದ ಮಣ್ಣ ತೆಗೆಯಲಾಗಳೆಮತ್ರ್ಯನಾಕವಿಸ್ತಾರ ತೋರಿದ6ಹಲವು ಹಗ್ಗದಿಂ ಕಟ್ಟಿದಗೋಪಿಲಲನೆಗಚ್ಚರಿಯಾಗಿ ಉಲೂಖಲನ ಎಳೆದು ಮತ್ತಿಯ ಮರಗಳಛಲದಿ ಮುರಿದ ವಿಚಿತ್ರ ಚರಿತ್ರನ 7ಕರುಣದೋರಿ ಗೋಪಾಂಗನೇರತೋರದ ಮೊಲೆಯುಂಡ ವರಶಿಶುಗಳಉರುಳಗೆಡಹ್ಯವರೊಳು ನಲಿವದುರುಳಮಾಯಕಾರಖಿಳರೊಡೆಯನ8ಆರ ಪುಣ್ಯವೆಂತಂತೆ ಲೀಲೆಯತೆÉೂೀರಿ ಮುದ್ದು ಮೋಹವ ಬೀರಿದಸಾರಿದ ಭಕ್ತವತ್ಸಲ ನಮ್ಮಜಾರಚೋರ ಪ್ರಸನ್ವೆಂಕಟೇಶನಾಡುವ ಆಟ 9
--------------
ಪ್ರಸನ್ನವೆಂಕಟದಾಸರು
ಆಡ ಹೋಗಲು ಬೇಡವೊ-ರಂಗಯ್ಯ |ಬೇಡಿಕೊಂಬೆನು ನಿನ್ನನು ಪಆಡ ಹೋಗಲುಬೇಡ ಗಾಡಿಕಾರ್ತಿಯರೊಳು |ಕೂಡಿ ಕೆಡಲು ಬೇಡವೊ-ರಂಗಯ್ಯ ಅ.ಪನೀರೊಳು ಮುಳುಗೆಂಬರೊ-ನಿನ್ನನು ದೊಡ್ಡ |ಭಾರವ ಹೊರು ಎಂಬರೊ ||ಕೋರೆದಾಡೆಗಳಿಂದ ಸೀಳಿ ರಕ್ಕಸನೊಡಲ |ಹಾರವ ಹಾಕೆಂಬರೊ-ರಂಗಯ್ಯ 1ಪೊಡವಿಯನಳೆಯೆಂಬರೊ-ನಿನಗೆ ದೊಡ್ಡ |ಕೊಡಲಿಯ ಪಿಡಿಯೆಂಬರೊ ||ಕಿಡಿಗಣ್ಣ ರುದ್ರನ ವರದ ದಶಕಂಠನ |ಮಡುಹಿ ನೀ ಬಾರೆಂಬರೊ-ರಂಗಯ್ಯ 2ಬೆಟ್ಟವನೆತ್ತಂಬರೊ-ನಿನ್ನನು ಬರಿ-|ಬಟ್ಟಾಗಿ ತಿರುಗೆಂಬರೊ ||ಪುಟ್ಟ ತೇಜಿಯನೇರಿ ನಲಿನಲಿದಾಡುತ |ದಿಟ್ಟ ಪುರಂದರವಿಠಲ-ರಂಗಯ್ಯ3
--------------
ಪುರಂದರದಾಸರು
ಆತನ ಪಾಡುವೆನನವರತ |ಪ್ರೀತಿಯಿಂದಲಿ ತನ್ನ ಭಕುತರ ಸಲಹುವ ಪಆವಾತನ ಕೀರ್ತಿಯನುಪರೀಕ್ಷಿತ ಕೇಳೆ |ಪಾವನನಾದನು ಮೂಜಗವರಿಯೆ ||ಭಾವಶುದ್ಧಿಯಲಿ ಶುಕನಾರನು ಪೊಗಳುವ |ಆವಗಂ ಪ್ರಹ್ಲಾದನಾದವನ ನೆನೆವನಯ್ಯ 1ಶಿಲೆಯ ಬಾಲೆಯ ಮಾಡಿದ ಪಾದವಾರದು |ನಳಿನ ಸಂಭವನನು ಪೆತ್ತವನಾರು ||ಕಲಿಯುಗದ ಮನುಜರಿಗೆ ಆರನಾಮವುಗತಿ |ಇಳೆಯ ಭಾರವನಿಳುಹಿ ಸಲಹಿದರಾರಯ್ಯ 2ದ್ರುಪದನ ಸುತೆಯ ಮಾನರಕ್ಷಕನಾರು |ನೃಪಧರ್ಮನಿಗೆ ಸಂರಕ್ಷಕನಾರು |ಕೃಪೆಯಿಂದ ವಿದುರನ ಮನೆಯಲುಂಡವನಾರು |ಆಪತ್ಕಾಲದಿ ಗಜವ ಸಲಹಿದರಾರಯ್ಯ 3ಅತಿಶಯದಿಂದ ಅರ್ಜುನಗೆ ಸಾರಥಿಯಾಗಿ |ರಥವ ಪಿಡಿದು ನಡೆಸಿದವನಾರೊ ||ಪೃಥಿವಿಯೆಲ್ಲವಬಲಿ ಆರಿಗೊಪ್ಪಿಸಿದನು |ಮತಿವಂತ ಧ್ರುವನ ರಕ್ಷಕನಾರು ಪೇಳಯ್ಯ 4ಸಾಗರನ ಮಗಳಿಗೆ ಆರ ನಾಮವೆಗತಿ |ಯೋಗದಿ ನಾರದನಾರ ಭಜಿಪನಯ್ಯ ||ರಾಗರಹಿತ ಹನುಮಂತನೊಡೆಯನಾರು |ಭಾಗವತರ ಪ್ರಿಯ ಪುರಂದರವಿಠಲ 5
--------------
ಪುರಂದರದಾಸರು
ಆತ್ಮನಿವೇದನ ಭಕುತಿ ತನ್ನಾತ್ಮವನೀವ ಪರಮಾತ್ಮ ವಿಶ್ವಾತ್ಮಗೆ ಪ.ಸರ್ವಕರ್ಮಕರ್ತ ಸರ್ವಕಾಲವರ್ತಸರ್ವಕಾರ್ಯಕೆಹರಿಸ್ವತಂತ್ರನುಸರ್ವಾರ್ಥದಲಿ ಪೂರ್ಣಸರ್ವೇಂದ್ರಿಯ ನಿಯಂತ್ರಸರ್ವದೇಶ ಕಾಲವ್ಯಾಪ್ತ ಗೋಪ್ತನೆಂದು 1ಕಾಸು ಕೋಶಗೇಹದೇಹೇಂದ್ರಿಯ ಪ್ರಾಣಸ್ತ್ರೀ ಸುತ ಪ್ರಿಯ ದಾಸಿ ದಾಸರನುಈಶಗರ್ಪಣೆ ಮಾಡಿ ದಾಸದಾಸನಾಗಿಲೇಶವು ತನಗೆನ್ನದೆ ಸರ್ವಾರ್ಪಿಸುವುದು 2ಜನ್ಮ ಜನ್ಮಾಂತರ ಧರ್ಮ ಕರ್ಮಂಗಳುನಿರ್ಮಲ ಜ್ಞಾನ ವೈರಾಗ್ಯ ಭಕ್ತಿಸ್ವರ್ಮಂದಿರ ಭವಯಾತ್ರೆ ಗರ್ಭಯಾತ್ರೆರಮೆಯ ರಮಣಗರ್ಪಣವೆಂಬ ನಿಷ್ಠೆಯ 3ಅಹರ್ನಿಶಿಶ್ವಾಸೋಚ್ಚ್ವಾಸಾವಸ್ಥಾತ್ರಯಬಹು ಜಪತಪ ಅರ್ಚನೆಸಂಭ್ರಮಬಹುಭಿ:ಶ್ರವಣ ಬಹುಧಾಶ್ರವಣ ಮನನಶ್ರೀಹರಿ ಧ್ಯಾನ ಧ್ಯಾಸಾತ್ಮಾಥರ್Àದಿ 4ಅಲಂಬುದ್ಧಿಯನು ಬಿಟ್ಟು ಅಲಸಮತಿಯನು ಸುಟ್ಟುಅಲಸಲಕ್ಷಣ ವಿಸ್ಮøತಿಯನುನೀಗಿಅಲವಬೋಧಾಚಾರ್ಯ ಮತದವರನು ಪೊಂದಿಲಲಿತ ಪ್ರಸನ್ವೆÉಂಕಟ ಚತುರಾತ್ಮಗೆ 5
--------------
ಪ್ರಸನ್ನವೆಂಕಟದಾಸರು
ಆದದ್ದೆಲ್ಲ ಒಳತೇ ಆಯಿತು ನಮ್ಮ |ಶ್ರೀಧರನ ಸೇವೆಯ ಮಾಡಲು | ----- ಪಸಾಧನ ಸಂಪತ್ತಾಯಿತು ---------- ಅ.ಪದಂಡಿಗೆ ಬೆತ್ತ ಹಿಡಿಯುವುದಕ್ಕೆ |ಮಂಡೆತಗ್ಗಿಸಿ ನಾಚುತಲಿದ್ದೆ ||ಹೆಂಡತಿ ಸಂತತಿ ಸಾವಿರವಾಗಲಿ |ದಂಡಿಗೆ ಬೆತ್ತ ಹಿಡಿಸಿದಳಯ್ಯ 1ಗೋಪಾಳ ಬುಟ್ಟಿ ಹಿಡಿಯುವುದಕ್ಕೆ |ಭೂಪತಿಯಂತೆ ನಾಚುತಲಿದ್ದೆ ||ಆ ಪತ್ನಿಯು ತಾ ಪ್ರೀತಿಯಿಂದಲಿ |ಗೋಪಾಳ ಬುಟ್ಟಿಯ ಹಿಡಿಸಿದಳಯ್ಯ 2ತುಳಸಿಮಾಲೆಯ ಹಾಕುವುದಕ್ಕೆ |ಅಲಸಿಕೊಂಡು ನಡೆಯುತಲಿದ್ದೆ ||ಜಲಜಾಕ್ಷಿಯು ಶ್ರೀ ಪುರಂದರವಿಠಲ |ತುಳಸಿ | ಮಾಲೆಯ ಹಾಕಿಸಿದಳು 3
--------------
ಪುರಂದರದಾಸರು
ಆದಿಗುರುರಾಯ ನಮ್ಮ ಮುಖ್ಯ ಪ್ರಾಣಭವವ್ಯಾಧಿ ಕೋಟಿ ಭೇಷಜನೆಮುಖ್ಯಪ್ರಾಣಪ.ಜೀವ ತೊರೆದ ಪ್ಲವಗಗಣಕೆಮುಖ್ಯಪ್ರಾಣಸಂಜೀವನ ತಂದೌಷಧವನಿತ್ತಮುಖ್ಯಪ್ರಾಣಹೇವಿನ ರಕ್ಕಸರಮಾರಿಮುಖ್ಯಪ್ರಾಣಹನುಮದೇವ ದೇವ ರಾಘವಪ್ರಿಯಮುಖ್ಯಪ್ರಾಣ1ಸೋಜಿಗದಿ ಕೀಚಕನ ಕೊಂದಮುಖ್ಯಪ್ರಾಣಭೀಮಆಜನುಮ ಅಸಹಾಯಶೂರಮುಖ್ಯಪ್ರಾಣರಾಜಸೂಯಕೆ ಮುಖ್ಯಕರ್ತಾಮುಖ್ಯಪ್ರಾಣಕ್ಷಾತ್ರತೇಜಪೂರ್ಣ ಕೃಷ್ಣಾಂಕಿತನೆಮುಖ್ಯಪ್ರಾಣ2ರೌಪ್ಯಪೀಠದಿ ಕೃಷ್ಣಾರ್ಚಕನೆಮುಖ್ಯಪ್ರಾಣಮಧ್ವ ಸಾರೂಪ್ಯ ಮುಖ್ಯದ ಮುಕ್ತಿದಾತಮುಖ್ಯಪ್ರಾಣಗೌಪ್ಯ ಶ್ರುತ್ಯಜ್ಞಾಚಾರ್ಯನೆಮುಖ್ಯಪ್ರಾಣದೇದೀಪ್ಯ ಪ್ರಸನ್ವೆಂಕಟಪತಿಪ್ರಿಯಮುಖ್ಯಪ್ರಾಣ3
--------------
ಪ್ರಸನ್ನವೆಂಕಟದಾಸರು
ಆನಂದಂ ಮಹದಾನಂದಂಹರಿಯ ಭಜನ ಬ್ರಹ್ಮಾನಂದಂ ಪಸತ್ಯ ನುಡಿಯುವುದೆ ಆನಂದಂ ತನ್ನಗುರ್ತ ತಿಳಿಯುವುದೆ ಆನಂದಂನಿತ್ಯನಿರ್ಮಲನ ಸತ್ಯ ಗುಣಂಗಳನುಭಕ್ತಿಯಿಂ ಭಜಿಸೆ ನಿತ್ಯಾನಂದಂಸತ್ಯ ಸತ್ಯ ಸರ್ವೋತ್ತಮ ಹರಿಯೆಂದುಅರ್ತಿಯಿಂ ಭಜಿಸೆ ಅತ್ಯಾನಂದಂ 1ಆಶ ನೀಗುವುದೆ ಆನಂದಂಭವಪಾಶಗೆಲಿಯುವುದೆ ಆನಂದಂಶ್ರೀಶ ಕೇಶವನ ಸಾಸಿರ ನಾಮದಧ್ಯಾಸದಿರುವುದೆ ಲೇಸಾನಂದಂದೋಷದೂರ ಭವಪಾಶಹರನ ಅನುಮೇಷ ಪÀಠಿಸೆ ಸ್ಥಿರದಾನಂದಂ 2ಹಮ್ಮನಳಿವುದೇ ಆನಂದಂ ತಾಸುಮ್ಮನಿರುವುದೆ ಆನಂದಂಕರ್ಮರಹಿತನಾಗಿ ಬ್ರಹ್ಮಪಿತನಪಾದಒಮ್ಮನದೊಳಗಸಮಾನಂದಂಧರ್ಮವಿಡಿದು ಪರಬ್ರಹ್ಮ ಶ್ರೀರಾಮನಮರ್ಮ ತಿಳಿಯೆ ನಿರ್ಮಲಾನಂದಂ 3
--------------
ರಾಮದಾಸರು
ಆನೆ ಬಂತಾನೆ ಬಂತಾನೆ ಬಂತಮ್ಮದಾನವಕದಳಿಯಕಾನನಮುರಿವ ಮದ್ದಾನೆ ಬಂತಮ್ಮಪ.ಉಂಗುರುಗುರುಳು ನೀಲಾಂಗ ಚೆಲ್ವಾನೆಕಂಗಳುಹೊಳೆವೊ ವ್ಯಾಘ್ರಾಂಗುಲಿಯಾನೆಬಂಗಾರದಣುಗಂಟೆ ಶೃಂಗಾರದಾನೆಮಂಗಳತಿಲಕದ ರಂಗನೆಂಬಾನೆ 1ಅಲೆದೊಲೆದಾಡುವ ಎಳೆಮರಿಯಾನೆಕೆಳದಿ ಗೋಪಿಯರೊಳು ಗೆಳೆತನದಾನೆಘಳಿಲು ಫಳಿಲು ರವದಿ ಸುಳಿದಾಡುವಾನೆಮಲೆತವರೆದೆ ತುಳಿದಾಡುವಾನೆ 2ನಳಿನಭವರಿಗೆ ತಾ ನಿಲುಕದ ಆನೆಹಲವು ಕವಿಗಳಿಗೆ ಸಿಲುಕದೀ ಆನೆನಲವಿಂದ ಭಕ್ತರ ಸಲಹುವ ಆನೆಸಲೆ ಪ್ರಸನ್ವೆಂಕಟನಿಲಯನೆಂಬಾನೆ 3
--------------
ಪ್ರಸನ್ನವೆಂಕಟದಾಸರು
ಆಪ್ತ ಮಾತಿದು ನಿಜ ಪ್ರಾಪ್ತ ಜನಕೆಹರಿಯ ಪೂಜಿಸಿ ನೆಚ್ಚಿ ಪರಿವಾರ ಬಿಟ್ಟರೆಕೃಷ್ಣನಲ್ಲಿ ದ್ವೇಷ ನಾರಾಯಣನಲ್ಲಿ ಭಕುತಿಹರಿಯಲ್ಲಿ ದ್ವೇಷ ಹರನಲ್ಲಿ ಭಕುತಿ ಮಾಡಿದರೆಹರನ ದ್ವೇಷವ ಮಾಡಿ ಹರಿಯ ಪೂಜೆಯ ಮಾಡೆದೇವನಿಗೆ ಕರ್ತೃತ್ವ ಉಂಟು ಎಂದವ ಗೆದ್ದ
--------------
ಗೋಪಾಲದಾಸರು
ಆರ ಬಾಲಕನೆ ಜಾರನಿವನಾರ ಬಾಲಕನೆ ಪ.ಗುಂಡಿಗೆ ಬೆಣ್ಣೆ ಕದ್ದುಂಡಸಿಯರ ಕುಚಪುಂಡರೀಕವಿಡಿದು ಭಂಡು ಮಾಡುತಲಿಹ 1ನಿದ್ದೆಯ ಕಾಲಕೆ ಸದ್ದಿಲ್ಲದೆ ಬಂದುಗದ್ದಮುಂಡ್ಯಾಡಪ್ಪಿ ಮುದ್ದು ನೀಡುವ ನೋಡೆ2ಅರ್ತಿಲಿ ಬಾಲನ್ನೆತ್ತಿಕೊಂಡರೇನಮ್ಮಅತ್ತೆ ಮಾವನ ಮುಂದೆ ಬತ್ತಲೆ ಮಾಡುವ 3ಬಲು ಮೋಹ ಬರುತಿರೆ ಎಳೆಯನ ಕಾಣುತಅಳುಕದೆಮ್ಮುಡಿಯೇರಿ ಕಳೆವಕಂಚುಕಇವ4ಹುಸಿಯೇ ಅಳಲು ಅವಚಿ ರಂಬಿಸಿದ ಮೇಲೆಪ್ರಸನ್ವೆಂಕಟ ಕೃಷ್ಣ ನಸುನಗು ನಗುತಾನೆ 5
--------------
ಪ್ರಸನ್ನವೆಂಕಟದಾಸರು
ಆರ ಮಕ್ಕಳಾರ ರಾಣಿ ಆರ ಸಂಪದವಾರಿಜಾಕ್ಷನಿಟ್ಟ ತೆರದಿ ಇರು ಎಲೆಲೆ ಆತ್ಮಾ ಪ.ಬೇಡಿದರೆ ಕೊಡ ದೇವ ಬೇಡದಿದ್ದರೀವ ದೇವನೋಡುತಿಹ ಸುಮ್ಮನೆ ತಾನಾಡಿಪ ಜಗವರೂಢಿಯಲ್ಲಿ ಎಳೆ ಮಕ್ಕಳಾಡುವಂತೆ ಕೊಟ್ಟು ಕಳೆದುಓಡಿಸಾಡುತಿಹ ಯಂತ್ರಾರೂಢನ ಬಳಗಿದೆಲ್ಲ 1ಕಂದನ್ನಿಟ್ಟು ತಂದೆ ತಾಯಿ ತಂದೆ ತಾಯಿ ಮುಂದೆ ಕಂದನಹಿಂದೆ ಮುಂದೊಯ್ಯುವನ್ಯಮ ಸಂಬಂಧರಿಗ್ಹೇಳಿಚಂದದಿ ಜಗಜ್ಜೀವರು ದಂದುಗದಿ ತೊಳಲೆ ಕಂಡುಮಂದಸ್ಮಿತದೊಳಿಪ್ಪ ಮುಕುಂದನ ಮಾಯವಲ್ಲದೆ 2ಹಾವು ಹಾರವಕ್ಕು ಮೃತ ಜೀವರು ಸಂಜೀವರಕ್ಕುಪಾವಕತಂಪಕ್ಕು ವಿಷ ಪೀಯೂಷಮಕ್ಕುಆವಕಾಲದಿ ಶ್ರೀ ಪ್ರಸನ್ವೆಂಕಟೇಶನಂಘ್ರಿಯಭಾವದೊಳರ್ಚಿಸು ಕ್ಷುದ್ರ ಜೀವಿಗಳಾಸೆ ಸಲ್ಲ 3
--------------
ಪ್ರಸನ್ನವೆಂಕಟದಾಸರು
ಆರ ಮುಂಧೇಳಲಿ ಕರಕರಿಯ ಈ |ಪೋರನು ಕೊಡವಲ್ಲನಲ್ಲೇ ಸೀರೆಯ ಪದಾರಿಯೊಳ್ಹೋಗಿ ಬಹರ್ಯಾರೆನ್ನ ಕಂಡರೆ |ಊರೆಲ್ಲ ಹೋಗಿ ದೂರರೇನೆ1ಸಂತಿಗೆ ಹೋಗ್ಯಾಕೆ ನಿಂತರೆಂದುಡುಕುತ |ಕಾಂತನೇ ಬಂದರೇನಂತ ಹೇಳುವಾ 2ಬತ್ತಲಾರಾಗಿ ಜಲ ಮತ್ತೀಗ ಸೇರುವಾಗಿ |ಮೃತ್ಯು ಬಂದನಂಬುದರ್ತಿವೇನೆ 3ನೀರ ಹಾವುಗಳೆಲ್ಲ ಶರೀರವ ಸುತ್ತುತಿವೆ |ಗಾರಾದೆವಲ್ಲೆ ವಾರಿಜಾಸ್ಯೆ 4ಮುಳ್ಳು ತೆಪ್ಪವು ಮೋರೆಗೆಲ್ಲ ಮುಚ್ಚುತಲಿವೆ |ಖುಲ್ಲಪೋರಗೆ ದಯೆಯಿಲ್ಲವಲ್ಲೇ 5ಜಲ ಜಂತುಗಳೆಲ್ಲ ಗುಳು ಗುಳು ಮಾಡುತವೆ |ಜಲಜಾಕ್ಷಗ್ಯೇತಕೆ ತಿಳಿಯದಮ್ಮ 6ಮೀನಾಗಳಲ್ಲಿ ಹತ್ತಿ ಏನೇನೋ ಮಾಡುತವೆ |ಏಣಾಕ್ಷಿ ನಮಗೇ ಏನು ಬಂತೇ 7ಹಿಂದತ್ತ ಹೋದರೆ ಕಂಧರದುದ್ದ ನೀರು |ಮುಂದತ್ತ ಬರೆ ಎದೆಗಿಂದ ಕೆಳಗೆ 8ಏಡಿಗಳೆಲ್ಲ ಕಾಲು ನೋಡಿ ಕಚ್ಚುತಲಿವೆ |ಮಾಡಲಿನೆ ಮೋರೆ ಬಾಡಿತಲ್ಲೆ 9ಮೂಗುತಿ ಮಣಿಯೆಲ್ಲ ಹೇಗೋ ಎಲ್ಲ್ಯೋ ಎನಲು |ಈ ಗತಿಯಾಗೆ ಮನೆಗೆ ಹೋಗೋದ್ಹ್ಯಾಂಗೆ 10ಏನಾದರಾಗಲಿ ಪ್ರಾಣೇಶ ವಿಠಲಗೆ |ನೀನೇ ಗತಿಯೋ ಕಾಯೊ ಎನ್ನಬೇಕೇ 11
--------------
ಪ್ರಾಣೇಶದಾಸರು
ಆರ ಹಾರೈಸಿದರೇನುಂಟು - ಉರಿನೀರ ಕಡೆದರಲ್ಲೇನುಂಟು ? ಪ.ಅಂತರವರಿಯದ ಅಧಮನ ಬಾಗಿಲನಿಂತು ಕಾಯ್ದರಲ್ಲೇನುಂಟುಎಂತಾದರಲ್ಲಿಯ ತುಪ್ಪ ಸಾಧಿಸಿ ಯಮನಂತೆ ಕೊಲುವರಲ್ಲೇನುಂಟು ? 1ಕೊಟ್ಟೆ - ಕೊಟ್ಟೆನೆಂದು ಕೊಡದುಪಚಾರದಭ್ರಷ್ಟನ ಸೇರಿದರೇನುಂಟುಬಿಟ್ಟೆಯ ಮಾಡಿಸಿ ಬೆದರಿಸಿ ಬಿಡುವ ಕನಿಷ್ಟನ ಸೇರಿದರೇನುಂಟು ? 2ಪಿಸುಣನ ಕುದುರೆಯ ಮುಂದೋಡಲು ಬಲುಬಿಸಿಲಿನ ಹಣ್ಣಲ್ಲದೇನುಂಟುವಸುಧೆಯೊಳಗೆ ಪುರಂದರವಿಠಲನ ಭಜಿಸಲು ಮುಕ್ತಿಸಾಧನವುಂಟು 3
--------------
ಪುರಂದರದಾಸರು
ಆರ ಹಾರೈಸಿದರೇನುಂಟು - ಉರಿನೀರ ಕಡೆದರಲ್ಲೇನುಂಟು ? ಪ.ಅಂತರವರಿಯದ ಅಧಮನ ಬಾಗಿಲನಿಂತು ಕಾಯ್ದರಲ್ಲೇನುಂಟುಎಂತಾದರಲ್ಲಿಯ ತುಪ್ಪ ಸಾಧಿಸಿ ಯಮನಂತೆ ಕೊಲುವರಲ್ಲೇನುಂಟು ? 1ಕೊಟ್ಟೆ - ಕೊಟ್ಟೆನೆಂದು ಕೊಡದುಪಚಾರದಭ್ರಷ್ಟನ ಸೇರಿದರೇನುಂಟುಬಿಟ್ಟೆಯ ಮಾಡಿಸಿ ಬೆದರಿಸಿ ಬಿಡುವ ಕನಿಷ್ಟನ ಸೇರಿದರೇನುಂಟು ? 2ಪಿಸುಣನ ಕುದುರೆಯ ಮುಂದೋಡಲು ಬಲುಬಿಸಿಲಿನ ಹಣ್ಣಲ್ಲದೇನುಂಟುವಸುಧೆಯೊಳಗೆ ಪುರಂದರವಿಠಲನ ಭಜಿಸಲು ಮುಕ್ತಿಸಾಧನವುಂಟು 3
--------------
ಪುರಂದರದಾಸರು
ಆರತಿಯ ಬೆಳಗಿರೆ ಪಅರಸಿ ರುಕ್ಮಿಣಿ ಕೂಡ ಅರಸು ವಿಠಲಗೆಬಿರುದಿನ ಶಂಖವ ಪಿಡಿದ ವಿಠಲಗೆ ||ಸರಸಿಜ ಸಂಭವಸನ್ನುತ ವಿಠಲಗೆನಿರುತ ಇಟ್ಟಿಗೆ ಮೇಲೆ ನಿಂತ ವಿಠಲಗೆ 1ದಶರಥರಾಯನ ಉದರದಿ ವಿಠಲಶಿಶುವಾಗಿ ಜನಿಸಿದ ಶ್ರೀರಾಮ ವಿಠಲಪಶುಪತಿ ಗೋಪಿಯ ಕಂದನೆ ವಿಠಲಅಸುರೆ ಪೂತನಿಯ ಕೊಂದ ವಿಠಲಗೆ 2ಕಂಡಿರ ಬೊಬ್ಬುರ ವೆÉಂಕಟವಿಠಲನಅಂಡಜವಾಹನ ಅಹುದೋ ನೀ ವಿಠಲ ||ಪಾಂಡುರಂಗ ಕ್ಷೇತ್ರ ಪಾವನ ವಿಠಲಪುಂಡರೀಕಾಕ್ಷ ಶ್ರೀ ಪುರಂದರವಿಠಲಗೆ 3
--------------
ಪುರಂದರದಾಸರು