ಒಟ್ಟು 3826 ಕಡೆಗಳಲ್ಲಿ , 119 ದಾಸರು , 2440 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾರ್ಥನ ಸಾರಥಿಯಾ ನೋಡಿದೆಯಾ ಪ ಆರ್ತ ಜೀವನಿಗೆ ಕರ್ತವ್ಯವನುಗುರ್ತಿಸಿ ಪೇಳ್ವುದ ಪೂರ್ತಿಯ ರೀತಿಯಾ ಅ.ಪ. ಗೀತೆಯ ಪೇಳಲು ವೇದಾಗಮಗಳಸಾರಧಾರೆಯ ಕರೆವನೆಂಬಂತೆಶ್ವೇತಾಶ್ವಂಗಳ ಕಡಿವಾಣಗಳಪ್ರೀತಿಲಿ ಪಿಡಿದಿಹ ಕೃಷ್ಣ ಮೂರುತಿಯ 1 ಭವದ ತೇರಿನಲಿ ಜೀವನನಿರಿಸಿ ನಾಲ್ಕರ್ಥಗಳನು ಜೋಡಿಸುತತವಕದಿ ತಾ ಹೊರಗಿರುತಲೆ ನಡೆಸಿಪ್ರೇರಿಪನೆಂಬಂತಿಹ ಶ್ರೀಪತಿಯ 2 ನೇತ್ರಕೆ ಜೀವನಯಾತ್ರೆಯ ಸಡೆಸುವಸೂತ್ರಧಾರನೆನೆ ತೋರುತಲಿರುವಕ್ಷೇತ್ರ ಗದುಗಿನ ವೀರನಾರಾಯಣನಪಾತ್ರ ವಹಿಸಿದ ದಿವ್ಯಾಕೃತಿಯ 3
--------------
ವೀರನಾರಾಯಣ
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪಾರ್ವತಿದೇವಿ ಗಿರಿಜೆ ನೀ ಒಲಿಯುವರೇ ಪರಶಿವನು ತಕ್ಕ ವರನೆಂದು ಮೆರೆಯುವರೆ ಪ ಪರಮ ವೈಷ್ಣವ ಭಕ್ತಾಗ್ರಣಿಯಾದ ಶಿವನಿಗೆ ಇರುತಿಹ ಕೊರತೆಗಳರಿಯದೆ ಗರುವದಲಿ ಅ.ಪ ಮನ್ಮಥನ ವೈರಿಗೆ ವಾಸಕೆ ಯೋಗ್ಯ ಮನೆಯಿಲ್ಲದಿರುವಾತಗೆ ಮನೆಯು ಮಶಾಣವೆನ್ನುತ ಪೇಳುತಿಹರಿನ್ನು ಸುಮನಸರೊಡಯನೆ ಸಖನಂತೆ ಇದು ಕೇಳು ಮನಸಿನ ಅಭಿಮಾನಿ ಶಿವನು ಘನತರದ ವಿಷಪಾನಗೈದನು ಮನದಿ ಶ್ರೀ ರಘುವರನ ಸ್ಮರಿಸುತ ವೃಷಭ ವಾಹನವೇರಿ ಚರಿಪಗೆ 1 ರುಂಡಮಾಲೆಯ ಧರಿಸಿದ ಕೊರಳೊಳಗೆ ಸರ್ಪ ದಂಡೆ ಅಲಂಕರಿಸಿರುವ ಮಂಡೆಯೊಳಗೆ ಚಲುವ ಗಂಗೆಯ ಧರಿಸಿಹ ಚಂದ್ರಶೇಖರ ಶಿವನೆಂದು ಕರೆಸಿಕೊಂಬ ಕೆಂಡಗಣ್ಣಿನ ಕ್ರೂರರೂಪನ ಕಂಡು ಹರುಷದಿ ಹಿಗ್ಗಿ ನಲಿಯುವಿ ಮಂಡೆಯಲಿ ಕೆಂಜಡೆಯ ಸುತ್ತಿಹ ಹಿಂಡು ವಿಷ ಸರ್ಪಗಳಲಂಕೃತನಿಗೆ 2 ಕರಿಚರ್ಮಾಂಬರನುಡುವ ಕೈಯಲ್ಲಿ ಕಪಾಲ ತಿರಿದುಂಡು ಹರುಷಿಸುವ ಪರಿ ದೈತ್ಯ ಪಿಶಾಚಯಕ್ಷರ ಕೂಡಿ ಚರಿಸುತ್ತ ಕುಣಿಯುತ್ತ ಗೊರವನಂತಿರುತಿಹ ಪರಮ ವೈರಾಗ್ಯವನು ಧರಿಸಿ ಫಣೆಯ ಗಣ್ಣನು ಬಳಿದು ಭಸುಮವ ಚರಿಸುವನು ರುಷಿವರರ ತೆರದಲಿ ಎಣಿಸಿ ಮಣಿಗಳ ಒಲಿಸಿ ಹರಿಯನು 3 ರಾಮಮಂತ್ರವ ಜಪಿಸಿ ರಮಣಿಗೆ ದಿವ್ಯ ರಾಮಚರಿತೆಯ ಬೋಧಿಸಿ ಕಾಮಹರನು ಕೈಲಾಸಪತಿಯು ಮತ್ತೆ ಕಾಮದೇವನು ಎಂಬ ನಾಮಸ್ಮರಿಸುವ ಆ ಮಹಾಗಣಪತಿಯು ಪುತ್ರನು ವೀರಭಕ್ತನು ಸುತನು ಶಿವನಿಗೆ ಪ್ರೇಮದಲಿ ಷಣ್ಮುಖನು ಸುತನೆಂ- ದೀ ಮಹಾಮಹಿಮೆಗಳು ತಿಳಿಯದೆ4 ಸುಂದರಾಂಗಿ ನಿನ್ನಯ ಚಲುವಿಕೆಗೆ ತಕ್ಕ ಚಂದದ ವರನೇ ಕೇಳು ಮಂದರೋದ್ಧರ ಶ್ರೀ ಮುಕುಂದನ ಭಜಿಸಲು ಚಂದದ ವರಗಳ ಕುಂದದೆ ಕರುಣಿಪ ಕಂದುಗೊರಳನು ಶಿವನು ಕಮಲ ನಾಭ ವಿಠ್ಠಲನ ಭಜಿಪ ಸಂತತ ಮಂದಗಮನೆಯ ಇಂದುಧರನಿಗೆ ಚಂದದಲಿ ವನಮಾಲೆ ಹಾಕುತ 5
--------------
ನಿಡಗುರುಕಿ ಜೀವೂಬಾಯಿ
ಪಾರ್ವತಿಪತಿ ಆರ್ವರಾಭಿಷ್ಟಿಯ ಸರ್ವಪೂರಿಸಿ ತನ್ನಿಜಪದ ಸೇವಕನಿಗೆ ಕರುಣವ ಬೀರ್ವನಿಗೆ ಚರಿತ ಆ ಪೂರ್ವನಿಗಾರತಿಯಾ ಬೆಳಗಿರೇ ಸೋ 1 ತಾರ್ಕು ಪದೇಶಿತಾ ಸರ್ಕನೆ ಕರ್ಕಶ ಮಾರ್ಗವ ಬಿಡಿಸುವ ಅತಕ್ರ್ಯನಿಗೆ ಅಘತಮರ್ಕನಿಗೆ ಸುರಸ ಪರ್ಕನಿಗಾರತಿಯಾ ಬೆಳಗೀರೇ ಸೋ 2 ಅಂಬುಶಶಿಬಿಂಬಾಂಕಿತ ಜಟೆ ಅಂಬಕತ್ರಯ ಶಾಂಭವ ವಾಸೆ ಚಿದಂಬರಗೆ ಗಜಚರ್ಮಾಂಬರಗೆ ಹರಸಿ ಶ್ವಂಭರಗಾರತಿಯ ಬೆಳಗಿರೇ ಸೋ3 ಕರ್ಪುರ ಗೌರವತನು ತೋರ್ಪುವ ಸರ್ಪಾಭರಣಗಳಲಿ ಶೋಭಿಸುತಿರ್ಪನಿಗೆ ಹತ ಕಂರ್ದಪನಿಗೆ ಸುಜ್ಞಾನ ದರ್ಪಣೆಗಾರತಿಯಾ ಬೆಳಗೀರೆ ಸೋ 4 ಕುಂದದಿ ಆನಂದದಿ ಮಹೀಪತಿ ನಂದನ ಸಲಹುವ ಘನ ಅಶಿತ ಕಂದರಿಗೆ ಪೂಜಿತ ಇಂದರಗೆ ಸದ್ಗುಣ ಸಾಂದರ ಗಾರತಿಯಾಬೆಳಗೀರೆ ಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾರ್ವತೀದೇವಿಯ ಸ್ತುತಿ (ಮಂಗಳೂರು ಮಂಗಳಾದೇವಿ) ಮಹಾಮಾಯೆ ದಯದೋರೆಲೆ ತಾಯೆ ಪ. ಸದರದೊಳೆಬ್ಬಿಸುತಿದಿರಾದ ಮದನಾಂಬಾ ಮುದ ದಾಯಿ ಶುಭಪದದಾಯಿ 1 ದೇವತೆಗಳ ಸೇರಿರುವಾ ಮನೋಹರ ತನುವಾಗಿ ನಿಕರ ಮಹಿಷಾಸುರನಾ ಮೃಗಪತಿಗಮನಾ 2 ಖಂಡ್ಯಧಾರೆಯೊಳ್ದಿಂಡರಿದೂ ಖಂಡಿಸುತಾ ರಣ ಮಂಡಲದಿ ಬ್ರಹ್ಮಾಂಡ ನಿದಾನಿ 3 ತ್ರಿಗುಣಜಮಲವು ದಾನವಾರಿಗಳ ಮಾನಿಸಿ ದಿತಿಜರ ಹಾನಿಗೊಳಿಸುವದು ಹರಿಪರವು ಮಹಭರವು ಮನದಿರವೂ 4 ರಕ್ಷಿಸು ಪುರುಕರುಣಿ ಕ್ಷಮೆಯಿಂದಂ ಭರಣಿ ಖೂಳ ವೈರಿಗಳನೇಳದಂತೆ ಪಾತಾಳಕೆ ಕೆಡಹಿಸು ಮಮ ಜನನಿನೀಲ ಮೇಘ ನಿಭ ವೆಂಕಟರಾಜನ ಲೋಲಕಟಾಕ್ಷಸದಾಕರುಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಯ ಕೃಪ ಆಲಯ ಬಾಲಗೋ ಪಾಲ ಬೇಗ ಪಾಲಿಸು ಪಿಡಿದೆನ್ನ ಪ ನಿತ್ಯನಿರ್ಮಲ ಸತ್ಯಚರಿತ ದೇವ ಸತ್ಯಭಾಮೆಯ ಪ್ರಿಯನಾಥ ಸ್ವಾಮಿ ನಿತ್ಯನಿಗಮ ವೇದವಿನುತ ಜಗ ಕರ್ತು ಕಾರುಣ್ಯರಸಭರಿತ ಆಹ ಭಕ್ತಾಂತರ್ಗತ ಕಾಲಮೃತ್ಯುಸಂಹರ ಸ ಚ್ಚಿತ್ತಾನಂದ ಹರಿ ಸತ್ಯ ಸರ್ವೋತ್ತಮ 1 ದಿನಮಣಿಕೋಟಿಪ್ರಭಾಕರನುತ ವನಜಸಂಭವ ಸುರನಿಕರ ದಿವ್ಯಗುಣ ಘನನಿಧಿಗಂಭೀರ ಜೀಯ ಅನುಪಮ ಭೂಗಿರಿವರ ಆಹ ಮನಸಿಜಪಿತ ಮನುಮುನಿಮನಮಂದಿರ ತನುತ್ರಯದಲಿ ನಿನ್ನ ನೆನಹನು ಪಾಲಿಸು 2 ಶ್ಯಾಮಸುಂದರ ಕೋಮಲಾಂಗ ಭಕ್ತ ಕಾಮಿತಫಲಪ್ರದಪುಂಗ ದುಷ್ಟ ಸೋಮಕಸುರಮದಭಂಗ ಪುಣ್ಯ ನಾಮಕ ಸುಜನತರಂಗ ಆಹ ತಾಮಸ ಪರಿಹರ ಭೂಮಿಜನಕ ಜಯ ಕ್ಷೇಮ ಕರುಣಿಸು ಮಮಸ್ವಾಮಿ ಶ್ರೀರಾಮಯ್ಯ3
--------------
ರಾಮದಾಸರು
ಪಾಲಯ ದನುಜಾರೆ ನೃಹರೆ ಪ ಮಾಧವ ಮಧುರಾಪುರ ಪರಿಪಾಲಕ ಶೌರೀ 1 ನಂದ ಕಿಶೋರ ಗೋಪಾಲ ಮುಕುಂದ ಬೃಂದಾವನಾ ಸಾನಂದ ಗೋವಿಂದ 2 ಸನಕಸನಂದನ ವಿನಮಿತ ಚರಣಾ ವನಜನಯನ ಗೋಪೀಜನ ಕರುಣಾ 3 ಮಂಗಳಭಾಸಾ ಮುನಿಗಣತೋಷಾ ಮಾಂಗಿರಿವಾಸಾ ಮಣಿಗಣಭೂಷಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಲಯಮಾಂ ಪರಮೇಶಚಿತಕಾಲಿ ಸಂತತಮಂಬಿಕೇಶಭೂರಿಲೀಲ ಶಂಕರವಿಯತ್ಕೇಶಕರುಣಾಲಯಹೃತಪಶುಪಾಶಧೃತಶೂಲ ವಿಶಾಲ ಕಪಾಲ ಕರಾಲಕಂ-ಕಾಲಿಕಾಕೂಲ (?) ವಿಲೋಲಾಸ್ಥಿಮಾಲಾ ಪ ವಾರಣಾಸುರ ಚರ್ಮಚೇಲಸುರವಾರಸೇವಿತ ಗಾನಲೋಲಭಕ್ತಾಧಾರ ಸಕಲ ಜಗನ್ಮೂಲನಿರ್ವಿಕಾರ ಮೃಕಂಡು ಕಸಾಲಹಾರ ಹೀರ ಮಂದಾರ ಪಟೀರ ನೀಹಾರಗೋಕ್ಷೀರ ಕರ್ಪೂರ ಸುಧಾರಸಗೌರ1 ವ್ಯೋಮತರಂಗಿಣೀಜೂಟಜಿತಕಾಮಪಾಲಿತ ಸರ್ವಖೇಟವಿತತಾಮಲಾಂಬರ ಪುಷ್ಪವಾಟರಘುರಾಮಪೂಜಿತ ಪಾದಪೀಠಪೂರ್ಣಕಾಮಾತಿಧಾಮಾಭಿರಾಮ ನಿಸ್ಸೀಮಸುತ್ರಾಮ ಮುಖ್ಯಾಮರಸ್ತೋಮಲಲಾಮ 2 ಗೋಪತಿರಾಜಿತುರಂಗಘೋರಪಾಪಾಂಧಕಾರಪತಂಗದಿವ್ಯತಾಪಸಹೃದಯಾಬ್ಜಭೃಂಗವಿಶ್ವವ್ಯಾಪಕನಿಗಮಾಂತರಂಗಯಾಮಿನಿಪಕಲಾಪಾದ್ರಿಚಾಪರಮಾಪತಿರೂಪನಿರ್ಲೇಪ ಕೆಳದಿ ರಾಮೇಶ ಚಿದ್ರೂಪ 3
--------------
ಕೆಳದಿ ವೆಂಕಣ್ಣ ಕವಿ
ಪಾಲಿತ ಸುರನರ ಜಾಲಸುಚರಿತ ಪ ಫಣಿ ಮಾಲಶ್ರೀಲೋಲ 1 ಜಾಲವಿಮೋಹಿತ ಬಾಲಾನು ಕೂಲ 2 ಧಾರಾಧರಾಭ ಶರೀರ ತಿರಸ್ಕøತದೂರ ವಿಹಗಸಂ ಚಾರವುದಾರ3 ನಿಗಮ ವಿಚಾರ ವಿಹಾರ 4 ಸುಖಕರಣ ಶ್ರೀರಮಣ 5 ಮನೋಹರಭೂಷ ಸುವೇಷ 6 ದ್ವಿರದವರದ ಶ್ರೀವರದ ವಿಠಲ 7
--------------
ಸರಗೂರು ವೆಂಕಟವರದಾರ್ಯರು
ಪಾಲಿಸಗಸ್ತ್ಯ ಪುರವಾಸಾ ಸಂತತ ಲೇಸಾ ಲಾಲಿಸೋ ಭಾರತೀಶಾ ಪ ಪದ್ಯ ನಿತ್ಯ ನಿರ್ಧೂತಮಾಯಾ ಕವಿಜನ ವರಗೇಯಾ, ಕಾಮಿತಾರ್ಥಾಭಿಧೀಯಾ ದಿವಿಭುವಿ ನಿಜಗೇಯಾ, ನೀತ ಸದ್ಭಕ್ತ ಪ್ರೀಯಾ ತ್ರಿವಿಧಜನ್ವ ಸುಕಾಯಾ ನಿಲಯ ವಾಙ್ಮನೋ ಪ್ರೀಯಾ ನಿಗಮ ವಂದಿತ ಮುಖ್ಯಗುಣಧಾಮಾ ಸ್ವಾಶ್ರಿತಪ್ರೇಮಾತೋಷಿತ ಶ್ರೀರಾಮಾ ಜಗಕೆ ಜೀವನÀನಾದ ಹನುಮಾ ಕಾಮದ ಭೀಮಾ ಮೋಕ್ಷದ ಮಧ್ವನಾಮಾ ಮುಗಿವೆ ಕರದ್ವಯ ನಿಮಗಯ್ಯಾ ನಮೋ ನತಜೀಯಾ ಸಂತತ ಪಿಡಿ ಕೈಯಾ 1 ಪದ್ಯ ಜಲರುಹಭವಪೋತಾ ಭೂತನಾಥೈಕತಾತಾ ಸುಲಲಿತಜನದಾತಾ ಶುದ್ಧಸತ್ತಾ ್ವಧಿನಾಥಾ ಕಲಿಮಲ ಪ್ರವೀಫಾತಾ ವಿಶ್ವಕೋಶವ್ಯತೀತಾ ವಿಲುಲಿತ ದಿತಿಜಾತಾ ಧೂತ ಸರ್ವತ್ರಾಭೀತಾ ಪದ ಏಕವಿಂಶತಿ ಸಹಸ್ರ ಷಟ್‍ಶತಾ ಜಪಮಾಡುತಾ ತ್ರಿವಿಧರೊಳಿರುತ ಎಕೋ ನಾರಾಯಣನುತ್ತಮಾ ಸರ್ವ ಸುರೋತ್ತಮ ಜೀವಗಣವೆಂಬೋದು ಅಥವಾ ಎಕೋ ಭಾವಭಕ್ತಿವಿಜ್ಞಾನಾ ಭವದೊಳು ಜ್ಞಾನಾ ಕಲ್ಪಿಸಿ ಅಜ್ಞಾನಾ ಏಕವಾಗಿತ್ತು ಸತ್ವರಾ ಭವದಿಂದ ಮುಕ್ತರಾ ಮಾಡುವಿ ಸತ್ವರಾ 2 ಪದ್ಯ ಶ್ರುತಿತತಿಸ್ಮøತಿವೇದ್ಯಾ ಸೂತ್ರನಾಮಾಮರಾದ್ಯಾ ವಿತತವಿಮಲಗಾತ್ರಾ, ವೀಶಶೇಷತ್ರಿನೇತ್ರಾ ಶತಮಖ ಮುಖಧ್ಯಾತಾ, ಧೀತವೇದಾಂತಜಾತಾ ಪದ ವಿಶ್ವೇಶ ವಿಶ್ವಾಂತರಾತುಮಾ ಚಿÉಚ್ಛುಕಾತುಮಾ ಸರ್ವಜೀವರುತ್ತಮಾ ವಿಶ್ವಾಸದಿಂದಲಿ ತವಪಾದಾ ಮೋದ ದಾಯಕ ಮುಕ್ತಿಫಲದಾ ವಿಶ್ವನಾಟಕ ವಿಷ್ಣುಪದ ಭಕ್ತಾ ಸಜ್ಜನಸಕ್ತ ಪಾಲಿಸು ನಿನ ಭಕ್ತಾ ವಿಶ್ವೇಶÀ ಗುರುಜಗನ್ನಾಥ ಮೋದ 3
--------------
ಗುರುಜಗನ್ನಾಥದಾಸರು
ಪಾಲಿಸಯ್ಯ ಎನ್ನ ಪಾದಪದ್ಮದೋರಿ ನೀ| ಬಾಲಲೀಲೆ ದೋರ್ವೆ ಗೋಪಾಲ ಬಾಲರನ್ನನೇ ಪ ನಂದ ನಂದ ನಂದು ಓಡಿ ನಂದನೆಯಾ ಭಾವಕಾಗಿ| ಬಂದ ಬಂದು ದುರಿತವನು ಬಂದು ಬಂದು ಹರಿಸಿ| ಛಂದ ಛಂದದಿಂದ ಭಕ್ತರೈವರನು ಕಾಯ್ವೆ ಮು ಸಿಂಧು ವಾಸನೆ 1 ನಾಗನಾಗ ಶಯನ ಯನ್ನ ರಕ್ಷಿಸೆಂದು ಕರೆಯ ಕೇಳಿ| ನಾಗ ನಾಗದವನ ಬಿಟ್ಟು ಓರ್ವನೇ ಮಾರುತಿಯಾ| ವೇಗ ವೇಗದಿಂದ ಬಂದು ಪ್ರಾಣನುಳಹಿದೇ ನಿಗ| ಮಾಗ-ಮಾಗೋಚರ ಭೋಗ ಭೋಗಗನ ವ್ಯಾಪ್ತನೇ2 ಸುಂದ್ರ ಇಂದ್ರ ಚಾಪದಂತೆ ಪೊಳೆವ ಭ್ರೂಲತೆಯು|| ಪೇಂದ್ರ ಚಂದ್ರ ಧರನುತ ಮಂದ್ರಗಿರಿಧರ ಗುಣ| ಸಾಂದ್ರ ಚಂದ್ರಕುಲ ಸಿರೋಮಣೀ ವಾರಜಾಕ್ಷಯಾದ| ವೇಂದ್ರ ಇಂದ್ರನುತ ಮಹಿಪತಿ ನಂದ ನೋಡೆಯನೇ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಲಿಸು ಯದುಪತಿಯೆ ಶ್ರೀಹರಿಯೆ ಹರಿಯೆ ಹರಿಯೆ ಪ ನಾನಾಯೋನಿಗಳಲ್ಲಿ ಶ್ವಾನನಂದದೆ ಸುತ್ತಿ ಶ್ರೀಹರಿಯೆ ಹರಿಯೆ ಹರಿಯೆ 1 ದೇಶಕೋಶವು ಬಂಧು ಪಾಶದೊಳಗೆ ಸಿಕ್ಕಿ ದೋಷಗೈವೆ ಆಶೆಯಬಿಡೆನಾ ಶ್ರೀಹರಿಯೆ ಹರಿಯೆ ಹರಿಯೆ 2 ಅಂಗವು ಕುಂದಿತು ಭಂಗವ ಪೊಂದುವೆ ಶ್ರೀಹರಿಯೆ ಹರಿಯೆ ಹರಿಯೆ 3 ಧೇನುನಗರ ದೊರೆ ಭಾನುಸನ್ನಿಭ ಶೌರೆ ಶ್ರೀಹರಿಯೆ ಹರಿಯೆ ಹರಿಯೆ 4
--------------
ಬೇಟೆರಾಯ ದೀಕ್ಷಿತರು
ಪಾಲಿಸು ಶ್ರೀನಿವಾಸ ಪಾಲಿಸೋ ಪ ಪಾಲಿಸೋ ಯದುಕುಲ ಬಾಲಾ ಗಾನ- ಲೋಲನೆ ಯಾಕಿಂಥ ಜ್ವಾಲಾ ಜನ್ಮ ಬಲ್ಲೇನಾ ಸಂಸಾರಶೂಲಾ ನಿನ್ನ ಚಾಲನದಿಂದಾದವೆಲ್ಲಾ ಪದ್ಯ ಮಾಲೆಹಾಕುವೆ ಸಿರಿಲೋಲಾ ಆಹಾ ಬಾಲನ ಪಡೆದು ಪಾಲಿಸಲಾರೆನೆಂದರೆ ಸೀಲನೇ ಜನನಿ ಪದ್ಮಾಯಗಳಿಗೆ ಪೇಳ್ವೆ 1 ನಾನು ಮಾಡುವುದೆಂಬುದಿಲ್ಲಾ ಯೆನಗಾವ ಸ್ವಾತಂತ್ರ್ಯವು ಇಲ್ಲಾ ಇರೆ ಅನುಗಾಲ ಕಷ್ಟವು ಸಲ್ಲಾ ಎನಗೆ ಜನುಮಾದಿ ಭಯವು ಬಿಟ್ಟಿಲ್ಲ ನೀನು ತನುಸ್ಥಾನ ಬಿಟ್ಹೋದ ಮ್ಯಾಲೆ ಎನ್ನ ಸ್ವಾತಂತ್ರ್ಯವು ಇಲ್ಲವಾಯಿತಲ್ಲ ಆಹಾ ಅನುದಿನ ಹಸಿವೆ ತೃಷೆಗಳಿಂದ ಬಳಲೋ ದಾ- ಸನು ನಿನ್ನವನಿಗೆ ಸ್ವಾಧೀನವೆಲ್ಲಿಹುದೈಯ್ಯಾ 2 ನಿತ್ಯ ಸಂಸಾರಿಯಾದೆನಗೆ ಮತ್ತೆ ಮೃತ್ಯು ಬೆನ್ಹತ್ತಿರುವವಗೆ ಮಾಡೋ ಕರ್ಮ ಬದ್ಧ ಎನಗೆ ನೀ- ಚತ್ವದಿದುಪಜೀವಿಸುವವಗೆ ನಾನು ನಿತ್ಯನೆಂಬುವ ದುರಾತ್ಮನಿಗೆ ಆಹಾ ಮುಕ್ತಿಗೊಡೆಯ ಪುರುಷೋತ್ತಮ ನಿನ್ನ ದಾ- ಸತ್ವನಿತ್ತು ಸುಶಕ್ತನಮಾಡು ನೀ 3 ನಿನ್ನ ಆಧೀನವೊ ಎಲ್ಲಾ ನಾನು ನಿನ್ನ ದಾಸನು ಶಿರಿನಲ್ಲಾ ಅನು- ದಿನ ಮಾಡುವ ಕಾರ್ಯವೆಲ್ಲ ನೀನು ಚಲನೆದಂದದಿ ಮಾಡ್ವೆನಲ್ಲಾ ಯೆಂನೊ- ಳಾವ ತಪ್ಪಿತವೇನೋ ಇಲ್ಲಾ ನಿನ್ನ ಸಂಕಲ್ಪದಂತಾಗೋದೆಲ್ಲಾ ಆಹಾ ತನುವ ಕೊಟ್ಟವ ನೀನೆ ತನು ಕೊಂಡೊಯ್ವನೂ ನೀನೆ ಹನುಮೇಶವಿಠಲಾ ನಿನ್ನವನಾದ ಮ್ಯಾಲೆನ್ನಾ4
--------------
ಹನುಮೇಶವಿಠಲ
ಪಾಲಿಸೆನ್ನ ಶ್ರೀಲೋಲ ಕೃಪಾಳೋ ಬಾಲಕನುಕ್ತಿಯ ಲಾಲಿಸಿ ಕೇಳೋ ಪ ಕಾರಾಗಾರ ಶರೀರದಯುಗಳ ದಾರಾಪತ್ಯದ ದಾರಿಯನಿಗಳ 1 ಚಿತ್ತವ ಹಾರಿಸುತಿಹರು 2 ಕೊನೆವರು ದುರ್ಮೃಗವನು ಪೋಲುತಲಿ 3 ತಾಪತ್ರಯ ಪರಿತಾಪದ ಬೇಗೆ | ಈ ಪರಿಮೋಚನ ಶ್ರೀಪತಿ ಹೇಗೆ 4 ಶರಣರ ಪೊರೆಯುವ ವರದವಿಠಲನೆ 5
--------------
ಸರಗೂರು ವೆಂಕಟವರದಾರ್ಯರು
ಪಾಲಿಸೋ ದಾಸರಾಯ ಗುರುವೆ ನೀ ಪಾಲಿಸೋ ಗುರುವೆ ಪ ಪಾಲಿಸು ನಾಗರಾಯಾಖ್ಯ ದಾಸ ಶೀಲವರ್ಯನೆ ನೀ ಮುಖ್ಯ ||ಅಹಾ|| ಶ್ರೀಲೋಲನ ಗುಣ ಲೀಲಾಜಾಲದಿ ಆ ಬಾಲವೃದ್ಧÀ್ದರಿಗರುಹಿ ಮೆರೆದ ಗುರು ಅ.ಪ ಬಂದೆ ದಯಾಂಬುಧೆ ಎನ್ನ ಮನದ ಕುಂದು ಕೊರತೆಗಳನ್ನ ಇನ್ನು ಬಂದ ಸಂಶಯಗಳನ್ನ ಹರಿಸಿ ಇಂದು ತೋರಿದೆ ನಂದವನ್ನ ||ಅಹಾ|| ತಂದೆ ಮುದ್ದುಮೋಹನ್ನವಿಠ್ಠಲನ್ನ ಹೃದಯಾರ ವಿಂದದಿ ಮುದದಿ ನೋಡುವ ಗುರು 1 ಮಾರ್ಗ ಮಾರ್ಗವನೆ ಚರಿಸುತ್ತಾ ದು ರ್ಮಾರ್ಗರ ಎದೆ ಗೆಡಿಸುತ್ತಾ ಸ ನ್ಮಾರ್ಗಕ್ಕೆ ನೀನವರ ತರುತ್ತಾ ಸಾರ್ದೆ ದುರ್ಗದೊಳ್ ನೀ ಚರಿಸುತ್ತಾ ||ಅಹಾ|| ದುರ್ಗಮರಾದ ದುರಾಗ್ರಹ ನಿಗ್ರಹ ಭೋರ್ಗರೆದು ಸುಖ ಸಂಸರ್ಗವ ತೋರ್ದ ಗುರು 2 ಪರಮ ಕರುಣದಿ ಇಂದೆನ್ನಾ ಪೊರೆದೆ ಶ್ರೀ ವೆಂಕಟೇಶಾಭಿನ್ನಾ ಉರಗಾದ್ರಿವಾಸವಿಠ್ಠಲಾಖ್ಯನ್ನಾ ತೋರಿಕೊಟ್ಟೆ ನೀನಂಕಿತವನ್ನಾ ||ಅಹಾ|| ಗುರು ನಿನ್ನ ಕರುಣಕ್ಕೆಣೆಯುಂಟೆ ಧರೆಯೊಳು ಉರಗಾದ್ರಿವಾಸವಿಠ್ಠಲನ ನಿಜದಾಸ 3
--------------
ಉರಗಾದ್ರಿವಾಸವಿಠಲದಾಸರು