ಒಟ್ಟು 2486 ಕಡೆಗಳಲ್ಲಿ , 115 ದಾಸರು , 1804 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಮಂದಗಮನೆ ಕರೆದುತಾರೆ ಇಂದಿರೇಶನ ಚಂದ್ರ ಸೂರ್ಯಕೋಟಿ ತೇಜದಿಂದ ಮೆರೆವನಾ ಪ ನಿಗಮ ಚೋರನ ಕೊಂದು ವೇದವತಂದ ಮತ್ಸ್ಯನಾ ನಗವ ಬೆನ್ನೊಳಾಂತ ಮಥನದೊಳಗೆ ಕೂರ್ಮನ ಜಗವ ಕದ್ದ ಖಳನ ಕೊಂದ ವರಹರೂಪನ ಮಗನ ಕೊಲಲು ಬಂದು ಕಾಯ್ದ ನಾರಸಿಂಹನ 1 ಬೆಡಗಿನಿಂದ ಬಲಿಯಬೇಡಿ ಧರೆಯ ನಳೆದನ ಬಿಡದೆ ಕ್ಷತ್ರಿಯರನು ಕೊಂದ ಪರಶುರಾಮನ ಮಡದಿಗಾಗಿ ಜಲಧಿಗಟ್ಟಿ ಸತಿಯ ತಂದನ ಕಡಲ ಮನೆಯ ಮಾಡಿನಿಂದ ವಾರಿಜಾಕ್ಷನ 2 ವರ ಪತಿವ್ರತೆಯ ಮಾನಗೊಂಡ ವರದ ಭೌದ್ಧನ ಹರಿಯನೇರಿ ಮ್ಲೇಂಛ ಕುಲವ ಕೊಂದ ಕಲ್ಕ್ಯನಾ ಮರುತ ಸುತನ ಕೋಣೆವಾಸ ಲಕ್ಷ್ಮೀ ರಮಣನ ಸರಿಸಿ ಜಾಕ್ಷಿ ತಂದು ತೋರೆ ಸುಜನರೊಡೆಯನ 3
--------------
ಕವಿ ಪರಮದೇವದಾಸರು
ಮದನಮೋಹನ ಮಾಮನೋಹರ ಶ್ರೀದೇವ ಸಾಧುಪಾಲನಕಾಗಿ ಬಂದು ಮೇದಿನಿಯ ಭಾರಿಳುಹಿದೆ ಧ್ರುವ ಬಂದು ಯದುಕುಲದಲಿ ಜನಿಸಿದೆ ಶ್ರೀ ಕೃಷ್ಣನು ಪೂತಣಿ ನಂದಗೋಕುಲಲ್ಯಾಡಿದೆ ಮಂದರಧರ ಸುಂದರರೂಪ ಮುಕುಂದ ವೃಂದಗೋಪರ ನಂದದಲಿ ಕೂಡಿ ಚಂದ ಚಂದದಲ್ಯಾಡಿದೆ1 ದೇವಕೀ ಕಂದ ದೇವಾಧಿದೇವ ಗೋವಿಂದ ಹಾವನ್ಹಿಡಿದಿ ನೀ ಮೆಟ್ಟಿ ಫಣಿಯಲಿ ಮಾವನ ಮರ್ದಿಸಿದೆ ಸಾವಿರನಾಮ ಪಡೆದ ನೀ ಪೂರ್ಣ ಶ್ರೀಹರಿ ದೇವ ಇಂದ್ರನು ಮಳಿಯಗರೆ ಗೋವರ್ಧನವ ನೀನೆತ್ತಿದೆ 2 ವಿದುರವಂದ್ಯ ಸದಾ ಪಾಂಡವಪಕ್ಷ ಶ್ರೀಧರ ನಿರ್ಮಿಸಿ ಮಡುಹಿದೆ ವಾಸುದೇವ ನಮ್ಮಯ್ಯ ಮಹಿಪತಿಯ ಘನಸುಖದಾಯಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಂದರೋದ್ಧರಾ-ಬಂದು ಕಣ್ಣಮುಂದೆ ನಿಲ್ಲೋ ಪ ಬಡವರೊಡೆಯನೆಂದು ನಿನ್ನ ಅಡಿಯ ಬಿಡದೆ ನಂಬಿದೆನೋ ಕಡುದಯಾನಿಧೆ ಬಡಕುಚೇಲನ ಪಿಡಿಯವಲಿಗೆ ಒಲಿದು ಪೊರೆದೆ1 ಸರ್ವಸಾರಭೋಕ್ತ ನೀನೆ ತೋರ್ವುದಿಲ್ಲ ಕೊಡಲು ನಿನಗೆ ಸರ್ವದೇವಸಾರ್ವಭೌಮನೀ ನೋರ್ವ ವ್ಯಾಪ್ತನಿರ್ಲಿಪ್ತ 2 ಪ್ರಣತಕಾಮದನೆಂದು ಅಂದು ಅಣುಗಧೃವನಾಕ್ಷಣದಿ ದಣಿಸಲಾಗದೋ ದೀನರಕ್ಷಕ 3 ಮುಕುತರೊಡೆಯ ಭಕುತವತ್ಸಲ ಯುಕುತಿತೋರದೊ ನಿನ್ನ ಧ್ಯಾನಕೇ ಶಕುತಿಯಿತ್ತು ಸಲಹೊ ಎನ್ನನು ಸಕಲಲೋಕೋದ್ಧ್ದಾರ ಧೀರ 4 ಎಲ್ಲಜನರ ಪೊರೆಯಲು ಶ್ರೀನಲ್ಲ ನಿಂತೆಯೊ ಶೇಷಶೈಲದಿ ವಲ್ಲಭಾ ಶ್ರೀ ವೆಂಕಟೇಶ ನೀ- ನೆಲ್ಲಬಲ್ಲೆನ್ನ ಸೊಲ್ಲ ಲಾಲಿಸೊ 5
--------------
ಉರಗಾದ್ರಿವಾಸವಿಠಲದಾಸರು
ಮದಲಗಟ್ಟಿ ಪ್ರಾಣನಾಥಾ ಮುದವನಿತ್ತು ಪಾಲಿಸಯ್ಯ ಪ ಮದನಜನಕ ಮಾಧವಾನಬೋಧವಿತ್ತು ಕರುಣಿಸಯ್ಯ ಅ.ಪ. ತಾಪ ಮೂರ್ತಿ ನೀನುದೀಪದಂತೆ ಹೊಳೆದು ಭವದಕೂಪ ದಾಟಿಸಯ್ಯಾ ಭೂಪ 1 ದೇವ ದೇವೋತ್ತಮನೆ ನೀನುಜೀವದಾನ ಮಾಡಿಸಯ್ಯಪಾವಮಾನಿ ಪರಿಕೆಸೆಮ್ಮಾನೋವನದೂರ ಮಾಡಿಸಯ್ಯಾ 2 ಅಂಧ ಬಧಿರ ಮೂರ್ಖ ಜನರುಬಂದು ನಿನ್ನ ವಂದಿಸಲುಛಂದದಿಂದ ಅವರ ದುರಿತವೃಂದವನ್ನು ನಾಶಗೈವೆ 3 ಭೂಸುರೇಂದ್ರ ವ್ಯಾಸರಿಂದಆರು ತುಂಗಾ ಹೃದವ ಬಿಟ್ಟುಭಾವಿಸುವೆ ಇಲ್ಲದೇವಆ ಸಮೀರ ಜಾತ ಶೂರ 4 ಮುದದಿನಾಥ ಜ್ಞಾನ ವಾತಾಕಂದಧೀಮಂಧ ರಾಮ ದೂತಾಹೃದಯ ಸದನದಲ್ಲಿ ತೋರೋತಂದೆಶ್ರೀನರಹರಿಯ ರೂಪ 5
--------------
ತಂದೆ ಶ್ರೀನರಹರಿ
ಮಂದಾನ ಬಾಧೆಗೆ ಮನಿ ಮಂದಿ ನಾವು ಸಹಿತ ಬೆಂದು ಬೇಸರ ಗೊಂಡು ಬಳಲು ತೇವು ಹರಿ ತಂದಿ ಬೇಗದಿ ಬಂದು ದಯಮಾಡಿ ಸಲಹೋ ಗೋವಿಂದಾ ಕೃಪಾಳು ಶ್ರೀ ಕರುಣಾಂಬುಧಿಯೆ ಪ ಕೃಷ್ಣಾ ರೌದ್ರಾಂತಕನ ಕ್ರೂರದೃಷ್ಟಿ ಮುಖ ಹಲಾ ತ್ಕøಷ್ಠವಾಗಿ ಎನ್ನ ಕಾಡುತಿರಲು ನಿಷ್ಠೆ ನೇಮಗಳೆಲ್ಲ ಜರಿದು ಮತಿ ಭೃಷ್ಟನಾಗಿ ಕಷ್ಟಕ್ಕೆ ಒಳಗಾದೆ ಕಡೆಹಾಯಿಸೊ ಧೊರಿಯೆ ಇಷ್ಟದಾಯಕ ನಿನ್ನಲ್ಲಿನ ಮಾಯವೆ ಆಡುದು (ಅಹುದು) ಕೃಷ್ಣಮೂರುತಿ ಬೇಗ ಕೈಹಿಡಿ ಇನ್ನಾ ಸೃಷ್ಟಿಗೊಡೆಯ ಶ್ರೀನಿವಾಸಕೇಶವ ಎನ್ನ ಕಷ್ಟವು ಪರಿಹರಿಸಿ ಕಾಯೋ ಸಂಪೂರ್ಣ 1 ಸೂರ್ಯಾನ ಪುತ್ರನ ಕಾರ್ಯಾವು ಎಮ್ಮ ಮೇಲೆ ಭಾರಿ ಕಾಣುತಲಿದೆ ಪರಮಾತ್ಮನೆ ------- ಘಟಗಳಿಗುಪದ್ರಕಾರನಾಗಿ ವ್ಯಾಧಿ ಖಂಡಿಸೋ ವೇಳೆ ಆರು ಈ ಗ್ರಹಕರ್ತರಾಗಿರಲು ದೇವರಿನ್ನು ಧಾರುಣಿಯೊಳು ಹರಿ ದನುಜಾಂತಕಾ ವಾರಿಜಾನಾಭಾ ಶ್ರೀ ವೈದೇಹಿ ಪತಿರಾಮಾ ಸಾರನೆ ಗಡ ಬಂದು ಸಲಹೋ ತಂದೆ 2 ಗರ್ಭಾದಿ ಮುದನಿಂ ಸುಖಭ್ರೂಣ ಭಯವೆಂಬ ದೆಬ್ಬಿಗೆ ತಾಳದೆ ತಲ್ಲಣಿಸುವೆ ಅರ್ಭಕ ನಾನೊಂದು ಅರಿತು ಅರಿಯೆ ದೇವ ಸಭ್ಯಾ ನೀ ನಂದ ಸರ್ವೋತ್ತುಮಾ ನಿರ್ಭಯನನು ಮಾಡಿ ನೀನೆ ರಕ್ಷಿಸದಿರೆ ದಾರು ಮನಸು----ಳಗೆ ದರ್ಭಶಯನ ರಾಮನ-----'ಹೊನ್ನ ವಿಠ್ಠಲ’ ಸಾಕಾರ ನೀ ಎನ್ನ ತ್ವರದಿ ಪೊರೆಯೊ 3
--------------
ಹೆನ್ನೆರಂಗದಾಸರು
ಮಂದಿರವೆಲ್ಲೆ ಹೇ ಲಲನೆ ಬಂಧನವೆಲ್ಲೆ ಪ ಅಂದು ಬಯಸಿದೆ ಇಂದು ಬಂದು ಪೇಳಿದಾ 1 ಸೃಷ್ಟಿಗೊಡೆಯಾ ಶಿಷ್ಟವಿಜಯಾ ನಿಷ್ಠೆಯನ್ನೇ ಪೂರೈಸಿ ಕಷ್ಟಹರನೆಂಬ ಬಿರುದನು ಆಂತು ಶ್ರೇಷ್ಠ ದೂತನ ಕಳುಹಿಕೊಟ್ಟನು 2 ಜ್ಞಾನ ಬುದ್ಧಿಯನಿತ್ತು ಶ್ರೀ ಪವಮಾನಪಿತ ನರಸಿಂಹವಿಠಲನು ಕೊಟ್ಟು ಸಲಹುವಾ 3
--------------
ನರಸಿಂಹವಿಠಲರು
ಮಧುರಾಪುರದಿಂದ ಎಂದಿಗೆ ಬರುವಿಯೊ ಕೃಷ್ಣಾ ಮಧುರಾಪುರದ ಬಾಲೆಯರು ಬಲು ಮೋಸಗಾರರು ಪ. ಗೋಕುಲದ ನಾರಿಯರು ನಾವು ಏಕವಾಗಿ ಬರುವೆವು ಅನೇಕ ಬಗಿಯ ಸುಖದಿಂದಾ ಗೋಪಿಯ ತಂದಾ ಅ.ಪ. ಯೆಂದಿಗೆ ನಿನ್ನ ಮುಖಾರವಿಂದವ ನೋಡುವೆವೋ ಅಂದಿಗೆ ಸುಖವೋ ಮಾಧವ ಮಂದರೊದ್ಧರನೆ ಮಾವ ಕಂಸನ ಕೊಂದು ಸಿಂಧುರನಯನನೆ ನೀ ಬೇಗ ಬರಬೇಕೆಂದು ನಾವು ಬೇಡುವೆವು ಬಂದು 1 ಮಧುವನದಲ್ಲಿ ನಿನ್ನಾ ಮಧುರ ಸ್ವರವನ್ನು ಕೇಳಿ ಮದನ ತಾಪಕೆಮ್ಮ ಮರುಳು ಮಾಡಿಸಿ ಮುರಲಿ ನುಡಿಸಿ ಆಧರಾಮೃತ ಪಾನವನ್ನೇ ಮಾಡಿಸಿದ ನಿನ್ನ ಮಹಿಮೆಯನ್ನು ತೋರಿದಿ2 ಯೆಷ್ಟು ಮೊರೆ ಪೊಕ್ಕಾರು ಒಂದಿಷ್ಟು ದಯವ್ಯಾಕೆ ಬಾರದೊ ನಿನ್ನ ಬಿಟ್ಟು ಒಂದರಘಳಿಗಿರಲಾರೆವು ನಾನು ಪ್ರಾಣನಾಯಕನೇ ಎನ್ನ ಪ್ರಾಣದೊಲ್ಲಭನೆ ಕೇಳೊ ಸರ್ವಪ್ರಾಣಿಗಳಿಗೆ ಪ್ರೇರಕನೆ ನಮ್ಮ ಕಾಳಿಮರ್ಧನ ಕೃಷ್ಣನು 3
--------------
ಕಳಸದ ಸುಂದರಮ್ಮ
ಮಧುರೆಗೆ ಪೋಗಬ್ಯಾಡಾ ರಂಗಯ್ಯ ರಂಗಾ ಪ. ಮಧುರೆಗೆ ಪೋದಾರೆ ಚದುರಿ ನಾರಿಯರು ಬೆದರುತಲಿರುವೆವು ಹರಿಯೇ ಎನ್ನಯ ದೊರೆಯೇ ಅ.ಪ. ಮಧುರಾಪುರದಿಂದ ಅಕ್ರೂರ ಕರಿಲಿಕ್ಕೆ ಬಂದಾನು ಮಲ್ಲನ ಕೊಂದನು ಕೃಷ್ಣ ರಜಕನ ಕೊಂದನು ರಕ್ತಾಲಂಕೃತನಾಗಿ ಕುಬಜಿಯಿಂದ ಗಂಧವಾ ಕೊಂಡನು ಡೊಂಕನು ತಿದ್ದಿದನು 1 ಚಾಣಿಕರ ಮುಷ್ಟಿಕರ ಕೂಡಾ ಮುಷ್ಟಿ ಯುದ್ಧವ ಮಾಡಿ ಕುಟಿಲರ ಕೊಂದು ರಂಗಮಂಟಪಕೆ ಬಂದು ನಾನಾಭರರಣ ಭೂಷಿತನಾಗಿ ರಾಜ ಬೀದಿಯೊಳು ಸಾಗಿ 2 ಮಧುರಾಪುರದ ನಾರಿಯರು ಬಲು ಚೆಲುವಿಯರು ನಿನ್ನನೆ ಮರುಳು ಮಾಡುವೋರು ಯಮ್ಮನಗಲಿಸುವೋರು ಇವರು 3 ಕನಿಕರವಿಲ್ಲವೆ ನಾವು ನಿನ್ನನು ಬಿಟ್ಟು ವೊಂದು ನಿಮಿಷವಾದರು ಕಾಲಹ್ಯಾಗ ಕಳಿಯೋಣ ಘನ ಮಹಿಮನ ಅಧರಾಮೃತ ಪರವಶವಾದೆವು 4 ಮಲ್ಲಯುದ್ಧವ ಮಾಡಿ ಮಾವ ಕಂಸನ ಕೊಂದು ಉಗ್ರಸೇನರಿಗೆ ಅನುಗ್ರಹವ ಮಾಡಿ ಶೀಘ್ರದಿ ಬರಬೇಕೆಂದು ಬೇಡುವೆ ನಾ ಬಂದು ಕಾಳಿಮರ್ಧನಕೃಷ್ಣ ನಿನಗಿಂದು 5
--------------
ಕಳಸದ ಸುಂದರಮ್ಮ
ಮಧ್ವಮುನಿಯೇ ಎನ್ನ ಹೃತ್ಕುಮುದ ಚಂದ್ರ ಪ ಅದ್ವೈತಮತಾರಣ್ಯ ದಹನ ಗುಣಸಾಂದ್ರ ಅ.ಪ. ನೊಂದೆ ಎಂಭತ್ನಾಲ್ಕು ಲಕ್ಷಯೋನಿಗಳಲ್ಲಿ ಒಂದೇ ಪ್ರಕಾರ ಸಂಚgಣೆಯಿಂದ ಒಂದೊಂದು ಕರ್ಮಗಳನರಸಿ ನೋಡಲು ಅದ- ರಿಂದ ಭವಾಬ್ಧಿಗೆ ಬಂದುಪಾಯವ ಕಾಣೆ 1 ನೀರು ಚಳಪಳಕಾಸಿ ಆರಲಿಟ್ಟು ಹೆಪ್ಪು ನೀರಿನಿಂದಲಿ ಕೊಡಲು ಬಪ್ಪುದೇನೊ ಮಾರುತೀ ನಿನ್ನ ಕೃಪೆ ಪಡೆಯದಲೆ ಉಳಿದವರ ಕಾರುಣ್ಯವಾಗಲು ಮೋಕ್ಷಸಾಧನವಿಲ್ಲ2 ಹರಿಸಿರಿಗೆ ಎರಗುವ ಸತ್ವ ಶರೀರನೆ ನಿರುತ ಎನ್ನೊಳಗಿಪ್ಪ ಮೂಲಗುರುವೆ ನೆರೆ ನಂಬಿದೆನೊ ಸ್ವಾಮಿ ವಿಜಯವಿಠ್ಠಲರೇಯನಚರಣದಲ್ಲಿರುವಂತೆ ಸಾಧ್ಯವಾಗಲಿ ಮನಸು 3
--------------
ವಿಜಯದಾಸ
ಮಧ್ವರಾಯರಿಗೆ ನಮೋ ನಮೋ ಪ ಮಾಯವಾದಿಗಳ ಮತವ ಸೋಲಿಸಿ ಸುಯತಿಗಳಿಗೆ ಸದ್ಗತಿ ಮಾರ್ಗವ ತೋರಿದ ಅ.ಪ ದೈತ್ಯ ರಾವಣಗೆ ಹಲವು ಭೀತಿ ತೋರಿಸಿ ಮಾತೆ ಜಾನಕಿಯಿಂದ ಖ್ಯಾತಿ ಪಡೆದ ಗುರು 1 ಮಂದ ಜರಾಸಂಧನಂಗವ ಸೀಳಿ ತಂದ ಕಪ್ಪವನ್ನು ಬಂದು ಧರ್ಮಗಿತ್ತ 2 ಕುಜನಾದಿಗಳ ನಿಜವಚನದಿ ಸೋಲಿಸಿ ವಿಜಯ ರಾಮಚಂದ್ರವಿಠಲ ಸರ್ವೋತ್ತಮನೆನಸಿದ 3
--------------
ವಿಜಯ ರಾಮಚಂದ್ರವಿಠಲ
ಮನಕೆ ಬೇಸರ ಬೇಡ ಮಣಿವೆ ಮಾಧವನೆ ಕ್ಷಣಕೊಂದು ಬೇಡುವ ಈ ಪಾಮರನೆಂದೆನುತ ಪ ತಂದೆಯನು ಕೊಲ್ಲೆನಲು ತಕ್ಕ ಶಿಕ್ಷೆಯ ಮಾಡು ಕೊಂದು ಅಣ್ಣನ ರಾಜ್ಯ ಕೊಡು ಎನಗೆ ಎನಲು ಕುಂದಿಟ್ಟು ಮನ್ನಿಸದಿರಲ್ಲದೆ ಎನ್ನ ಬಂಧನದ ಬಲೆಯನ್ನು ಬಯಲೆನಿಸು ಎಂಬೆ 1 ಹೆಣ್ಣಾಗಿ ಬಾರೆನಲು ಕಣ್ಣೆತ್ತಿ ನೋಡದಿರು ಎನ್ನ ಮನೆಯ ಕುದುರೆಯನು ಕಾಯಲು ಗನ್ನಗತಕನೆಂದು ಮನ್ನಿಸಿ ಸಲಹದಿರಲು ಅನ್ಯ ಬೇಡಿದೆನೇನು ಸಂತಸ ನೀಡೆಂಬೆ 2 ನಾಯಾಗಿ ಬಂದು ನಿನ್ನ ಲತ್ತೆತಿನುಯೆಂದೆನಲು ಕಾಯದಿರು ಕರುಣದಿ ದೇವದೇವೇಶ ಆವಾವ ಕಾಲದಿ ಬಾಯಬಿಡಿಸದಿರಲ್ಪ ಮಾಯ ಮೋಹಿಗಳ ಬಳಿಯೆಂದು ಬೇಡುವೆನು 3 ನೀರುಕೊಟ್ಟೆನ್ನ ಕರದಿಂದ್ಹೊಡಿಸಿಕೊಯೆನಲು ಚೋರನು ಇವನೆಂದು ಬಾರದೆ ಇರೆಲೋ ಘೋರಸಂಸಾರ ತಾಪವಾರಿಧಿಯ ಕಷ್ಟದಿಂ ಪಾರುಮಾಡೆಂದೆನುತ ಸಾರಿ ಬೇಡುವೆನು 4 ಸಲಿಸೆನ್ನ ನೈವೇದ್ಯ ಕುಲಗೇಡು ಎಂದೆನುತ ಛಲದಿ ಬೇಡಲು ಎನಗೊಲಿಯದಿರು ಸ್ವಾಮಿ ಬಲು ಹೊಲೆಯ ಪ್ರಪಂಚದ್ಹಲುಬಾಟ ಬಿಡಿಸೆನ್ನ ಮಲಿನತ್ವಳಿಕಿಸಿ ಚೆಲುವ ಸಲಹೆಂಬೆ 5 ತಿಳಿಯದೆ ನಿನ್ನನ್ನು ಕುಲಗೇಡಿಯೆಂದೆನುತ ಕುಲದಿಂದ ಹೊರಹಾಕಲೊಳಿತಾಗಿ ತಳ್ಳೋ ಮಳ್ಳತನ ಬಿಡಿಸೆನ್ನ ಮನಸಿನ ಕಿಲ್ಬಿಷವ ತೊಳದೆ ನಿಜಜ್ಞಾನದ ಪಾಲಿಸು ಎಂಬೆ 6 ನರನ ಭವಗುಣಗಳ ಪರಿಹರಿಸಿ ಬೇಗನೆ ಕರುಣಿಸು ಎನಗೆ ಪರರ ಬೇಡದ್ದನು ಕರುಣಾಳು ಶ್ರೀರಾಮ ಗುರುವೆ ನೀನಾಗೆನ್ನ ಪರಿಭವದ ದು:ಖವನು ತ್ವರಿತದ್ಹರಿ ತಂದೆ 7
--------------
ರಾಮದಾಸರು
ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ಮನವು ಕರಗದೇನೋ ಸಿರಿಹರಿ ಮುನಿಸದೇಕೆ ಪೇಳೋ ಪ ತನು ಮನ ಧನಗಳ ನಿನಗೊಪ್ಪಿಸುತ್ತಲಿ ಮುನಿವರರೊಲು ನಿನ್ನ ನೆನೆಯಲಿಲ್ಲವುಯೆಂದು ಅ.ಪ ಬಾಲತನದೆ ನಿನ್ನ ನೆನೆಯದೆ ಕಾಲಕಳೆದೆ ಯೌವನದೊಳು ಲೋಲುಪನಾದೆನ್ನ ಕಾಲದೂತರು ಬಂದು ನೂಲಿಂದಚಿಳೆದರೂ 1 ಜಗವು ಚಿರವೆಂದು ಸತತವು ಬಗೆದು ಭ್ರಾಂತನಾದೆನ ಅಗಣಿತ ನೀಲಮಣಿ | ಖಗಪತಿವಾಹನ [ಪೊರೆಯಲಿನ್ನು] 2 ಗಂಗಾಧರ ರಂಗಾ ನೀನೆನ್ನಂತರಂಗದೆ ನಿಲಲಿನ್ನು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್