ಒಟ್ಟು 6003 ಕಡೆಗಳಲ್ಲಿ , 130 ದಾಸರು , 3822 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವಸುವಾಲಿಗಳು ಓಂಕಾರ ಪ್ರತಿಪಾದ್ಯ ಶ್ರೀಕಾಂತನೇ ನಿನ್ನ ಭವ ಭಂಗವ ಗೈಸಿ ಶುಭಾಂಗನೆ ಕಾಯಯ್ಯ ಶ್ರೀರಂಗ 1 ಕಾಲತÀ್ರಯಕೃತ ವಿಕಾರವಿಲ್ಲದೆ ನೀನೆ ಮೂಲರೂಪನೆ ಬಹು ರೂಪ-ಬಹುರೂಪ ಸ್ವಗತಭೇದ ವಿವರ್ಜಿಕನೆ ಸಲಹಯ್ಯ 2 ಆವಕಾಲಕು ನೀನೆ ಚತುರ ರೂಪದೊಳಿದ್ದು ಜೀವ ನಿಯಾಮನು ನೀನಾಗಿ-ನೀನಾಗಿ ವಿಶ್ವ ತೈಜಸ ಪ್ರಾಜ್ಞ ತುರ್ಯಾತ್ಮ3 ಶುಭ ವಿಷಯಂಗಳಾ ಮಾಡಿ ಉಣಿಸುವೆ 4 ವಿಶ್ವದಲಿ ವ್ಯಾಪಿಸಿಹೆ ವಿಶ್ವನಂಬೋರು ನಿನ್ನ ನಾಶರಹಿತನೆಂದೂ ನರನೆಂದೂ-ನರನೆಂದೂ ನಿನ್ನ ವೈಶ್ವಾನರನು ಎಂದು ಪೇಳ್ವಾರೊ 5 ಹರಿ ನಿನ್ನ ವಿಶ್ವನೆಂದು ಉಪಾಸನೆಯನು ಮಾಡಿ ಹೇರಂಬ ನಿನ್ನ ಒಲಿಸಿದಾ-ಒಲಿಸಿದಾ ಗಜವಕ್ತ್ರನಾಗಿ ನಿನ್ನ ಸ್ತುತಿಪಾನೋ 6 ದೇಹದೊಳು ಸ್ವಪನದಲಿ ನೀ ನೀಡಿ-ನೀ ನೀಡಿ ಜೀವರುಪಭೋಗಿಸುವ ಸಾರವನು ರಕ್ಷೀಪೆ 7 ತೈಜಸನೆ ವಾಸನಾಮಯವೆಲ್ಲ ತೋರೀಪೆ8 ತತ್ವಗಳ ವ್ಯಾಪಾರವೇ ವ್ಯಾಪಾರ9 ಸುಪ್ತಕಾಲದಿ ಜೀವ ಸ್ವರೂಪಕೆ ತಕ್ಕ ಕ್ಲುಪ್ತ ಅಜ್ಞಾನ ಮೊದಲಾದ-ಮೊದಲಾದ ಕಾಲವನನುಸರಿಸಿ ಜೀವನಿಗೆ ತನ್ನ ತಿಳಿಯಗೊಡದೆ 10 ಪ್ರಾಜ್ಞಮೂರುತಿ ನೀನೆ ಹೃದಯಸ್ಥಾನದೊಳಿದ್ದು ಅಜ್ಞಾನಿ ಜೀವನ ಕಾಲಾವ-ಕಾಲಾವ ನನುಸರಿಸಿ ಜೀವ ಸ್ವರೂಪಾನಂದವÀನು ನೀನೀವೆ11 ಸ್ವಪನ ಜಾಗ್ರತ ಜ್ಞಾನವಿನಿತಿಲ್ಲವೆಂದು ಕೂಡುವ ಜೀವ ಆನಂದ ಹಿಂದೆಂದೂ ಕಾಣನೊ12 ಘನ ಬಹಿ ಪ್ರಾಜ್ಞ ತೈಜಸಾಂತ ಪ್ರಾಜ್ಞ ಘನ ಪ್ರಾಜ್ಞ ಮೂರುತಿ-ಮೂರುತಿ ಗಳುಪಾಸನೆ ಮಾಳ್ವ ಬುಧರೇನು ಧನ್ಯರೊ 13 ನಾಗಿ ನೀ ಕೊಡುತಿರುವೆ ಮುಕ್ತರಿಗೆ ಆನಂದ 14 ಮುಕ್ತರಿಗೆ ದೃಷ್ಟನೋ ಅದೃಷ್ಟನೋ ಅ- ಗುರುಪ್ರಾಣನನುಗ್ರಹದಿ ಲಭ್ಯನಹುದಯ್ಯಾ ಹೇ ಜೀಯ 15 ಕಣ್ಮನ ಹೃದಯ ತ್ರಿಧಾಮಗಳಲ್ಲಿ ಇದ್ದು ಉಣಿಸೂವೇ ಜೀವರಿಗೆ ಫಲಭೋಗ-ಫಲಭೋಗವು ವಿಶ್ವತೈಜಸ ಪ್ರಾಜ್ಞ ಸ್ಥಿತಿಯೊಳು 16 ಸರ್ವರೂಪವು ಪೂರ್ಣ ಸರ್ವಗುಣ ಸಂಪೂರ್ಣ ಸರ್ವೋತ್ಪಾದಕ ಸುಖರೂಪಿ-ಸುಖರೂಪಿ ಸರ್ವಲೋಕ ಜೀವರೊಳಿದ್ದು ನಿರ್ಲಿಪ್ತಾ 17 ವರ್ಣತ್ರಯಯುತ ಓಂಕಾರದೊಳಾದ್ಯವರ್ಣ ವಿಶ್ವ ನೀನೆ-ವಿಶ್ವನು ನೀನೆ ಉಕಾರವೇ ತೈಜಸನು ಮಕಾರ ವಾಚ್ಯನೇ ಶ್ರೀಪ್ರಾಜ್ಞ 18 ನಾದದೊಳು ನೀ ವಾಚ್ಯ ತುರ್ಯರೆಂಬೋರು ನಿನ್ನ ಸದನವಾಗಿಹುದೈ ಶಿರಸ್ಥಾನ-ಶಿರಸ್ಥಾನ ನಾಶಿಕಾಗ್ರದಿ ಊಧ್ರ್ವ ದ್ವಾದಶಾಂಗುಲದಲ್ಲಿ ನೆಲೆಸಿರ್ಪೆ 19 ತೈಜಸನೊಡಗೂಡಿ ವಾಸನಾ-ವಾಸನಾಮಯ ಕಳೆವ ಅಜ್ಞಾನಿ ಜೀವನನ್ನಾಡಿಸುವೆ ಶ್ರೀಪ್ರಾಜ್ಞ 20 ಸರ್ವಶಕ್ತನು ನೀನೆ ಸರ್ವಕತರ್Àನು ನೀನೆ ಸವೋತ್ತಮನು ನೀನೆ ಸರ್ವಜ್ಞ-ಸರ್ವಜ್ಞ ಪೂರ್ಣಪ್ರಜ್ಞಾಂತರ್ಯಾಮಿ ಸಲಹಯೈ21 ಪಲವಿಲ್ಲ ವಾಸುದೇವನೆ ನಿನ್ನ ದಯ ಬೇಕೊ 22 ನೀ ಸುಮ್ಮನಿರದೆ ಎನ್ನನೂ-ಎನ್ನನು ಪ್ರೇರಿಸುವೆ ಲೇಸುಮನ ನಿನ್ನಲ್ಲಿ ನೆಲೆಸಲೋ 23 ಕಂಡಕಂಡಲ್ಲಿ ನಾ ಉಂಡುಂಡು ಓಡಾಡಿ ಧಾಂಡಿಗನಾಗಿ ಬೆಳೆದೆನೊ-ಬೆಳೆದೆನೊ ಪುಂಡರೀಕಾಕ್ಷ ನಿನ್ನ ಮರೆತೆನೋ24 ಅವಾವ ಕಾಲದೊಳು ನೀನಿದ್ದು ಉಣಿಸುವೆ ಜೀವಕೃತ ಕರ್ಮಫಲಗಳ-ಫಲಗಳ ಶ್ರೀ ವೇಂಕಟೇಶ ನೀನಿತ್ತು ಸಲಹೂವೇ 25 ವಂದನೆಯು ಒಂದೆ ಮನದಿಂದೆ-ಮನದಲಿ ನಿನ್ನ ಪಾದಾರವಿಂದವ ತೋರಯ್ಯ26 ಬಂಧುಗಳು ಹಿತರೆನ್ನೆ ಬಂಧಕರಾಗಿಹರು ಬಂಧನಕೆ ನಾ ಇನ್ನು ಸಿಲುಕಿದೆ 27 ಘನವಾಗಿ ತನು ಬೆಳೆಸಿ ಹಿತದಿಂದ-ಹಿತದಿಂದ ಮುಂದೆ ಪರಗತಿಯ ಕಾಣುವುದೆಂತೊ ಗೋವಿಂದ28 ವಿತ್ತಾಪಹಾರಕರು ಹೃತ್ತಾಪಕಳೆವರೆ ಉತ್ತಮಗತಿಯ ತೋರಿಸು29 ಹರಿಕಥಾಪುರಾಣಶ್ರವಣ ನಿತ್ಯದೀ ಮಾಡೀ ಪರಿಯಿಂದ ನಿಜತತ್ವವರಿಯಾದೆ-ಅರಿಯಾದೆ ಬರಿದೇ ವಿಪರೀತ ಜ್ಞಾನಕೆ ವಶನಾದೆ30 ಮದ್ಯ ತುಂಬಿದ ಭಾಂಡ ಗದ್ಗುಗೆಯ ಮೇಲಿಟ್ಟು ಶ್ರಧ್ದೆಯಿಂದಲಿ ಅದನ ಪೂಜಿಸೆ-ಪೂಜಿಸೆ ಪೂತÀ ದುರ್ಗಂಧ ಫಲವದು ಬಿಟ್ಟೀತೆ 31 ಮಂದಹಾಸದಿ ಜನರ ಸಂದೋಹದಲಿ ಕುಳಿತು ನಿಂದೆ ಮಾತುಗಳಾಡಿ ಮದತುಂಬೀ-ಮದತುಂಬಿಬಿದಾ ದುರ್ಮ ದಾಂಧರಿಗೆ ಗತಿಯು ಮುಂದೆ ಇನ್ನೆಂತೊ32 ಕಂಡಕಂಡವರಲ್ಲಿ ಕೊಂಡೆ ಮಾತುಗಳಾಡಿ ಪುಂಡರೀಕಾಕ್ಷ ನಿನ್ನ ಸ್ಮರಿಸಾದೆ-ಸ್ಮರಿಸದಲೆ ಪರದಿ ಯಮದಂಡಕ್ಕೆ ಗುರಿಯಾದೆ33 ಹಿಂದೆ ಮಾಡಿದ ಪುಣ್ಯದಿಂದ ಇಂದಿನ ಭಾಗ್ಯ ವೆಂದು ತಿಳಿದು ಮುಂದೆ ನಡೆಯಾದೆ-ನಡೆಯಾದೆ ತಿಳಿಗೇಡಿ ಬುದ್ಧಿಯಿಂದ ಕುಂದುಪೊಂದುವೆ 34 ಬಾಯಿಮಾತಲ್ಲ ಶ್ರೀ ತೋಯಜಾಕ್ಷನ ಭಕ್ತ- ರಾಯತನ ತಿಳಿವುದು ಶ್ರಮಸಾಧ್ಯ-ಶ್ರಮಸಾಧ್ಯ ವನು ಸದುಪಾಯದಿಂದ ತಿಳಿದು ನಲಿದಾಡೊ 35 ನಿಂದಕರ ನುಡಿಯಿಂದ ಹಿಂದೆ ಮಾಡಿದ ಪಾಪ ಒಂದೊಂದು ಪರಿಯಲ್ಲಿ ಪರಿಹಾರ-ಪರಿಹಾರವಾಗಿ ನಿಂದಕರು ಬಂಧನಕೆ ಬೀಳ್ವಾರೋ 36 ಸ್ಮøತಿಯುಕ್ತಿಯನೆ ಬಿಟ್ಟು ಯುಕ್ತಿಮಾತುಗಳಿಂದ ಹೊತ್ತು ಕಳೆಯುತ ಉನ್ಮತ್ತನೆನಿಸಿ-ಉನ್ಮತ್ತನೆನಿಸಿದವ ಇ- ನ್ನೆತ್ತÀ್ತ ಭವಶರಧಿಯ ದಾಟÀುವ 37 ಅರೆಘಳಿಗೆ ಕಳೆದುದಿಹ ನರಜನ್ಮ-ನರಜನ್ಮ ಬಂದುದು ನರಕಯಾತನೆಗಲ್ಲದಿನ್ನಿಲ್ಲ 38 ಪರಿಯಂತ ಉದರಭರಣಕಾಗಿ ಉದಧಿಶಯನ ನಾ ನಿನ್ನ ಭಜಿಸಾದೆ-ಭಜಿಸಾದೆ ಮದದಿಂದ ಬುಧಜನರ ನಿಂದೆಯ ಮಾಡೀದೆ39 ಇನ್ನಲ್ಲ ಪರಗತಿಯ ಸಾಧನ-ಸಾಧನವು ತನ್ನೊಳು ತÀನ್ನಿರವರಿತು ಸುಮ್ಮನಿರುವುದು ಅದು ನಿಧಾನ40 ಭಿನ್ನಧರ್ಮಂಗಳ ಗ್ರಹಿಸಾದೆ-ಗ್ರಹಿಸಾದೆ ನೀನೆಣಿಸಿದೆ ತನ್ನಗುಣಧರ್ಮದಂತನ್ಯರಿಹನೇನೊ 41 ಕಾಯವೇ ತಾನೆಂದು ಮಾಯಕೆ ಒಳಗಾಗಿ ಕಾಯಯಾತನೆಗೊಂಡು ನೋಯುವಾ 42 ವಚನ ವಚನವು ಸರ್ವ ಉಚಿತ ದೇಹದ ಕಾರ್ಯ ನಿಚಯದೊಳು ಹರಿ ಪ್ರಚುರನಾಗಿ-ಪ್ರಚುರನಾಗಿ ಕಾಯಕುಪಚಯವಿತ್ತು ಸಲಹೂವ 43 ದೇಹ ಕಾಯದ ಕಾರ್ಯಪ್ರಕ್ರಿಯವ ತಿಳಿಯಾದೆ ಮಾಯೆಗೊಳಗಾಗದಿರು ಹೇ ಮಾನವಾ-ಮಾನವನೆ ತಿ- ಳಿಯೊ ಮಾಯಾರಮಣನ ಬಿಂಬಕ್ರಿಯವಾ44 ಅನ್ಯರೊಳು ನೀ ಹೋರಾಡಬಲ್ಲೆಯ-ಬಲ್ಲೆಯಾ ನಿನ್ನ ವೈರಿಗಳ ಜಯಿಸಲರಿಯದ ಖೂಳ ರಣಹೇಡಿ 45 ಕೊಳೆತು ನಾರುವ ದೇಹದೊಳಗಿರುವ ಹುಳುಕುಗಳ ಕೊಳೆಯ ಕಳೆಯದ ಮನುಜ ನೀನೆಂತೊ-ನೀನೆಂತೊ ಕೊಳೆತÀ ಸಗಣಿಯೊಳಗಿಹ ಹುಳುವೆ ನಿನ್ನ ಗತಿಯೆಂತೊ46 ಆದದ್ದು ಆಯಿತು ಯತ್ನ ತಪ್ಪಿತು ಎಂದು ಹೆದ್ದಾರಿ ಹಿಡಿದು ಪರಮಾರ್ಥ-ಪರಮಾರ್ಥವ ಬುದ್ಧಿ ತಿದ್ದಿಕೊಳ್ಳಲು ಮುಂದೆ ಅನುವಾಗೊ47 ತತ್ತ ್ವದೇವತೆಗಳು ತತ್ತತ್ವಕಾರ್ಯಜಿ- ವೋತ್ತಮನಾಜ್ಞೆಯಿಂ ತಾವ್ ಗೈವರೊ-ತಾವ್‍ಗÉೈ ಯುತ್ತಲಿರೆ ನಾನೆತ್ತ ಮೃತ್ತಿಕಾಪ್ರತಿಮೆಯೋ48 ಒಂದೊಂದು ರೀತಿಯಿಂ ಚೆಂದಾಗಿ ಯೋಚಿಸು ಮಂದಮತಿಯು ನೀನು ಹಿಂದೆಂತೂ-ಹಿಂದೇನು ವಂದನೆಯೊಂದಲ್ಲದಿನ್ನಿಲ್ಲ49 ಡಾಂಭಿಕತನ ಬಿಟ್ಟು ಡಿಂಬದೊಳು ಸರ್ವದಾ ಅಂಬುಜನಾಭನೇ ಇಂಬಾಗಿ-ಇಂಬಾಗಿ ಸರ್ವತ್ರ ತುಂಬಿಕೊಂಡಿಹನೆಂದು ನಲಿದಾಡೋ 50 ತುಷ್ಟಿಯಾಗಿರು ನೀನು ಕೊಟ್ಟಷ್ಟು ಲಾಭಕ್ಕೆ ದುಷ್ಟವಿಷಯಗಳಿಗೆ ಎರಗಾದೆ-ಎರಗಾದೆ ಇರಲು ಸಂ- ತುಷ್ಟ ನಾಗುವನಯ್ಯ ಶ್ರೀಕೃಷ್ಣ51 ಕಾಯ ನಿನ್ನದು ಅಲ್ಲ ಮನವು ಅಧೀನವಲ್ಲ ಹೇಯವಿಲ್ಲದೆ ಮಾಯಕೊಳಗಾಗಿ ಮರುಳಾಗದಲೆ-ಮರುಳಾಗದಲೆ ಮಾಯಾರಮಣನ್ನ ನೆನೆಯೊ ನಿರ್ಭಯದಿಂದ 52 ಹಲವು ಶಾಸ್ತ್ರವ ನೋಡಿ ತಲೆಹರಟೆಯ ಬಿಟ್ಟು ಅಲವಬೋಧರ ತತ್ತ ್ವಸುಧೆಯನ್ನು- ಸುಧೆಯನ್ನು ಸವಿದು ನಿ-
--------------
ಉರಗಾದ್ರಿವಾಸವಿಠಲದಾಸರು
ತತ್ವೋಪದೇಶತೋರಿಸಬೇಕು ನಿನ್ನ ನಿಜವನು ಕಾರುಣ್ಯನಿಧಿ ಗುರುರಾಯ ನೀನು ಪತೋರುವ ತೋರಿಕೆಯನು 'ುೀರಿ 'ುಕ್ಕಿಹ ಪಾರಮಾರ್ಥಿಕ ಸಚ್ಚಿದಾನಂದ ರೂಪವ ಅ.ಪಕಾಯ ಬಂದಂದವೆನಗೆ ಕಾಣಿಸದು ಮಾಯಾಪಾಶದ ತೊಡರೆನ್ನ ಬಿಡದುಜಾಯಾಸುತಾದ್ಯರ ಬರಿಯ ಮೋಹದಲಾಯು ಬೀಯವಾಗುತಲಿದೆ ಬಿಡಿಸಿದ ಬೇಗದಿ 1ಪ್ರಕೃತಿಯೊಳ್ ಕೂಡಿ ಪ್ರಕೃತಿಧರ್ಮಗಳಾದ ಸುಕೃತ ದುಷ್ಕøತ ಫಲ ರೂಪವಾದ'ಕರಿಪ ಸುಖದುಃಖದನುಭವಕದಕೊಳಗಾಗದಕಳಂಕದಿರ'ದೆಂಬುದು ತೋರದಿದೆ ದೇವ 2ಆಕಾಶದೊಳು ದೀಪಪ್ರಕಾಶವು ಏಕವಾದಂತೆ ಚಿದಚಿತ್‍ಸಂಮೇಳವುಐಕ್ಯವಾಗಿರಲಚಿದ್ಭಾವವಳಿದು ಚಿತ್ತು ಏಕವಾಗಿಹ ನಿತ್ಯನಿರ್ಗುಣ ರೂಪವ 3ಅರಿ'ದ್ದೂ ಮರವೆಯೊಳರಿವರಿಯದೆ ಪಿರಿದಾಗಿ ಹಮ್ಮು 'ಹರಿಸುತಿಹುದುಮರವೆಯಹಂಭಾವ ತೋರದರಿ'ನೊಳು ಬೆರೆದು ಬೆರೆದ ಪರಿ ತೋರದಿರುವ ಹಾಗೆ4ಮೃತ್ತಿನಿಂದಾದ ಘಟಶರಾವಾದಿಗಳು ಮತ್ತೊಂದು ರೂಪವಾದ ತೆರದಲಿಚಿತ್ತೊಂದುಪಾಧಿುಂ ನಾನಾತ್ವವಾಗಿರೆ ಕೃತ್ರಿಮ'ದ ಕಡೆಗೊಳಿಸಿ ನಿಜದೊಳಿರಿಸಿ5ಬೀಜದಿಂದಾದ ತರು ಭಿನ್ನರೂಪಾಗಿ ಬೀಜದಾಕಾರ ಮಾಜಿದಂದದಲಿವ್ಯಾಜರ'ತ 'ಭ್ರಾಜಮಾನ ಬ್ರಹ್ಮಬೀಜದಿಂ ಮೂಜಗವಾದ ಬಗೆಯದೇನು 6ನಂಬಿದೆ ನಿನ್ನ ಚರಣಸರೋಜವ ಅಂಬುಜನಾಭ ಗುರು ವಾಸುದೇವನಂಬುಗೆಯನು ಕೊಟ್ಟು ಕರುಣವೆನ್ನೊಳಗಿಟ್ಟುುಂಬಿಟ್ಟು ಸಲ'ದ ವೆಂಕಟರಮಣ ನೀ7
--------------
ತಿಮ್ಮಪ್ಪದಾಸರು
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಂದೆ ನೀನೆಂದು ನಾ ಬಂದೆ ರಕ್ಷಿಸೆಂದೆ ಪ ಮುಂದೆನ್ನ ಸಲಹುವ ಭಾರವು ನಿಂದೆ ಅ.ಪ. ಮಾತು ಮಾತಿಗೆ ನಾ ನಿನ್ನ ನೆನೆವೆ ಸ್ಮರಿಸುತಿರುವೆ ಜ್ಞಾತಿ ಬಾಂಧವರ ಮತ್ಸರ ಮರೆವೆ ಮಾತಾಪಿತರುಗಳ ಸೇವೆಗೈವೆ ಈ ತನು ನಿನ್ನ ಚರಣಕರ್ಪಿಸಿರುವೆ 1 ಸಾಧನವೇನೆಂಬುದ ನಾನರಿಯೆ ಕೇಳೊ ದೊರೆಯೆ ಮಾಧವ ನಿನ ನಾಮವೆಂದಿಗೂ ಮರೆಯೆ ವೇದಬಾಹಿರರೊಡನಾಡಿ ಮೆರೆಯೆ ಕಾದುಕೋಯೆನ್ನನೆಂಬೆನು ಶ್ರೀಹರಿಯೆ 2 ನಾ ನಿನ್ನ ಕಾಡಿ ಬೇಡುವುದಿಲ್ಲ ದೂರುವನಲ್ಲ ಜ್ಞಾನ ಮಾತುರವಿತ್ತು ಕಾಯಬೇಕಲ್ಲ ನೀ ನನ್ನ ಸಲಹೊ ಲಕ್ಷ್ಮೀ ನಲ್ಲ ಶ್ರೀನಿವಾಸ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ತಂದೆ ಪ್ರಾಣೇಶವಿಠ್ಠಲರಾಯ ಒಲಿದು ಆ |ನಂದ ಕೊಡು ಈ ಭಕ್ತಗೆ ||ಪೊಂದಿಕೊಂಡಿಹ ನಿನ್ನನೆಂದು ನಾ ಪ್ರಾರ್ಥಿಸುವೆ ಮಂದರೋದ್ಧರ ಮುಕುಂದಾ | ನಂದಾ ಪ ವೈರಿ ನಿನ್ನವರಡಿಗೆ ನಡಿಯೆ ಪದವನುಕೂಲವಾಗಿರಲೀ ಬರಲಿ1 ಇವನ ಕವನಾ ಕೇಳಿ ಹರುಷಯುತರಾಗಿ ಸತ್ಕವಿಗಳೂ ತಲಿದೂಗಲಿ |ಪವನ ಮತದಲಿ ಪೇಳಿದಂತೆ ಅದನನುಸರಿಸಿ ಕವಿತೆಯು ಬಂದೊದಗಲಿ ||ನವರಾಗಗಳಿಂದೊಪ್ಪಿ ಲಘು ದೀರ್ಘ ಮೊದಲು ಮರ್ಮವ ತಿಳಿದು ಪೇಳುತಿರಲಿ |ಭುವನದೊಳಗುಳ್ಳ ಸುಜ್ಜನರು ಶೋಧಿಸಿ ಆಶುಕವಿಯೆಂದು ಕರೆಯುತಿರಲಿ | ಮೆರೆಯಲಿ || ಚಿರಕಾಲ ಬಾಳಿ ಬಹು ಕೀರ್ತಿಯುತನಾಗಿ ಈ ಧರಿಯೊಳಗೆ ಸುಖಿಸುತಿರಲಿಪರಮ ಭಕುತಿಯು ಪೆಚ್ಚಿ ಸೋತ್ತುಮರ ಪದಗಳಿಗೆ ಎರಗಿ ಕರುಣವ ಪಡೆಯಲಿ ||ಮರೆಯದಲೆ ಇಹಪರದಿ ಸುಖಗಳನು ಕೊಟ್ಟು ಶ್ರೀ ಹರಿಯೆ ಪೊರೆಯಂದಾಡಲಿ |ಮರುತಾಂತರ್ಯಾಮಿ ಗುರು ಪ್ರಾಣೇಶ ವಿಠಲನೆ ಶರಣ ಜನ ಕಾಮಧೇನೂ ನೀನು 3
--------------
ಗುರುಪ್ರಾಣೇಶವಿಠಲರು
ತಂದೆ ಮುದ್ದು ಮೋಹನಾ | ನಿನ್ | ಅಂದ ಪಾದವ ಭಜಿಸುವೆ ಪ ನಂದ ಕಂದನ ತಂದು ತೋರಿಸಿ | ಬಂಧನವ ಪರಿಹರಿಸು ನೀ ಅ.ಪ. ವತ್ಸರ | ತರಳನಾಗಿರುವಾಗಲೇ 1 ಹರಿಯ ವ್ಯಾಪ್ತಿಯ ಕಂಡು ನೀ | ಗಿರಿ ಗುಹೇಯಲಿ ಚರಿಸುತಾತೊರೆದು ಮಮತೆಯ ಚರಿಸಿದೇ | ಕರೆಕರೆಯ ಸಂಸಾರದೀ 2 ತಪವನಾಚರಿಸುತ್ತಲೀ | ವಿಪಿನವಸಿ ಸಂಚರಿಸುತಾವಿಪವರಸ ಪೆಗಲೇರಿದವನ್ನ | ಅಪರೋಕ್ಷದಿ ಕಾಣುತಾ 3 ನಡುನಡುವೆ ಮನೆಗೈದುತಾ | ಮಡದಿಯನೆ ತಕ್ಕೈಸುತಾ ಎಡ ಬಲದ ಒಡನಾಡಿ ಜನ ಕಡು | ಮೋಹಬಡುವಂತಾಡುತಾ 4 ಇಭಗಿರೀ ರಥೋತ್ಸವಕ್ಕೇ | ಪ್ರಭು ಮುದ್ದು ಮೋಹನ ದಾಸರುವಿಭವದಿಂದಲಿ ಬಂದು ನಿಮಗೆ | ಶುಭದ ಅಂಕಿತವಿತ್ತರು 5 ಶಾಂತ ಚಿತ್ತದಿ ಜಪಿಸುತಾ | ಮಂತ್ರ ಸಿದ್ಧಿಯ ಪಡೆಯುತಾ ಭ್ರಾಂತ ಜನರನು ಭಕ್ತಿ ಪಂಥದಿ | ನಿಂತು ನಲಿವಂತೆ ಮಾಡುತಾ6 ಸಾಹಸ್ರಾರಂಕಿತವನಿತ್ತೂ | ಮಾಹಿತಾಂಘ್ರಿಯ ಭಜಿಸಿದಾ ಸಾಹಸಿಗ ಶೇಷಾಂಶ ಭಕ್ತರ | ಮೋಹ ಕಳೆದುದ್ಧರಿಸಿದಾ 7 ನಕ್ರಹರಗತಿ ಪ್ರೀತನಾ | ವಿಕ್ರಮದಿ ಸಂಸ್ಥಾಪಿಸೀಚಕ್ರಿಪುರಿಗಾ ರಾಮನವಮಿಲಿ | ವಿಕ್ರಮದಿ ನೀ ಹೊರಡುತಾ 8 ಅಹಿ ಭವ ವಂದ್ಯನಾ | ಗುರುಗೋವಿಂದ ವಿಠಲನನಿರುತ ಭಜಿಸುವ ಜ್ಞಾನವಾ | ಕರುಣಿಸೀ ಸಲಹೆನ್ನನು 9
--------------
ಗುರುಗೋವಿಂದವಿಠಲರು
ತಂದೆ ಮುದ್ದು ಮೋಹನ್ನ ತವ ಚರಣ ಕಾನಮಿಪೆಬಂದೆನ್ನ ಸಲಹ ಬೇಕೋ ಪ ಎಂದೆಂದಿಗೂ ನಿಮ್ಮ ಪದ ಧ್ಯಾನವಿತ್ತು ಭವಬಂಧನವ ಬಿಡಿಸಬೇಕೋ | ಕರುಣೀ ಅ.ಪ. ಅಂಕಿತವನಿತ್ತೆ ಮನಪಂಕ ಹರಿಸೀ ಹರಿಕಿಂಕರರ ಸಂಗ ಸಲಿಸೋ |ಸಂಕಟವ ಪರಿಹರಿಪ ವೆಂಕಟೇಶನ ಪಾದಪಂಕಜಕೆ ಮಧುಪ ನೆನಿಸೋ |ಶಂಕೆಗಳು ಎಂದೆನಿಪ | ಸೊಂಕು ಜಾಡ್ಯವ ಹರಿಸೆಡೊಂಕು ಮನ ವೈದ್ಯನೆನಿಸೋ |ಮಂಕುಮತಿಯಾದೆನಗೆ ಅಕಲಂಕ ಮಹಿಮನನಲೆಂಕತನವನೆ ಇತ್ತು ಕಾಯೋ | ಕರುಣೀ 1 ಪರಿ ಮಾನವ ಎನ್ನ | ಮರುಕದಿಂದಲಿ ನೋಡಿವಿರಕುತಿಯನಿತ್ತು ಸಲಹೋ | ಕರುಣೀ 2 ಲೆಕ್ಕವಿಲ್ಲದ ದೇಹ ಗೇಹಾದಿಗಳ ಪೊಕ್ಕುಸಿಕ್ಕಿನಿಂದಲಿ ನೊಂದೆನೋ |ಕಕ್ಕಸದ ಸಂಸಾರ | ಅಕ್ಕರವು ಎಂದೆನುತಮರ್ಕಟನ ತೆರನಾದೆನೋ |ಸೊಕ್ಕು ಮೂರೈದನ್ನ | ಮುಕ್ಕಿ ಕಾಡುತ್ತಿರಲುನಕ್ಕು ನೀ ನೋಳ್ಪುದೇನೋ |ಪಕ್ಕಿವಹ ದೇವ ಗುರು ಗೋವಿಂದ ವಿಠ್ಠಲನಅಕ್ಕರದಿ ತೋರಯ್ಯಾ | ಕರುಣೀ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಂದೆ ಮುದ್ದುಮೋಹನ ದಾಸರಾಯರ ಪದವ ಪೊಂದಿದವರಿಗೆ ಕಷ್ಟವೆ ಪ. ಬಂಧನವ ಪರಿಹರಿಸಿ ಸಿಂಧುಶಯನನ ಮೂರ್ತಿ ತಂದು ತೋರುವರು ಮನದಿ | ಮುದದಿ ಅ.ಪ. ಅತಿಶಯದ ತಪದಿಂದ ಪತಿತ ಪಾವನನಂಘ್ರಿ ಮತಿವಂತರಾಗಿ ಭಜಿಸಿ ಪೃಥುವಿಯೊಳಗವತರಿಸಿ ಯತನವಿಲ್ಲದೆ ಕರ್ಮ ಪಥವನ್ನೆ ಕೊನೆಗಾಣಿಸಿ ಪತಿತರಿಗೆ ಅಂಕಿತವ ಹಿತದಿಂದ ಬೋಧಿಸಿ ಅತಿ ಅದ್ಭುತವ ತೋರಿಸಿ ಸುತರಂತೆ ಶಿಷ್ಯರನು ಹಿತದಿಂದನುಗ್ರಹಿಸಿ ಗತಿಯ ಮಾರ್ಗವ ತೋರ್ವರು | ಇವರು 1 ದೇವತೆಗಳೊಡೆಯರು ಪಾವಮಾನಿಗೆ ಪ್ರಿಯರು ಭೂವಲಯದೊಳು ಮೆರೆವರು ಆವಕಾಲದಲಿ ಸುಖಾನಂದಭೋಗಿಗಳು ಪಾವನ ಸುಚರಿತ್ರರು ದೇವ ನರಹರಿ ಕರುಣ ಪೂರ್ಣವಾಗಿ ಪಡೆದು ಭಾವಶುದ್ಧಿಯಲಿಪ್ಪರು ಈ ವಿಧದ ಇವರ ಚರ್ಯೆಯನರಿಯುವರನರಿಯೆ ಕಾವ ಭಕ್ತರ ಕರುಣಿಯ | ದೊರೆಯ 2 `ತ' ಎನಲು ತಪಸಿಯಹ `ದೇ' ಎನಲು ದೇಹ ಶುದ್ಧಿ `ಮು' ಎನಲು ಮುಕ್ತನಾಗ್ವ `ದು' ಎನ್ನಲು ದುರ್ಜನರು ದೂರವಾಗಿರುತಿಹರು `ಮೋ' ಎನಲು ಮೋಕ್ಷದಾರಿ `ಹ' ಎನಲು ಹರಿಬಂದು `ನ' ಎನಲು ನರ್ತಿಸುವ `ದಾ' ಎನಲು ದಾರಿದ್ರನಾಶ `ಸ' ಎನಲು ಸತ್ವಗುಣಿ `ರಾಯ' ಎನೆ ಪದವಾಳ್ವ `ರು' ಎನಲು ಋಜುಮಾರ್ಗಿಯು | ಸುಖಿಯು 3 ಈ ರೀತಿಯಿಂ ತಂದೆ ಮುದ್ದುಮೋಹನದಾಸ ರಾ - ಯರೆಂತೆಂದು ಜಪಿಸೆ ಪಾರುಗಾಣಿಸಿ ಭವದ ಬಂಧನವ ಬಿಡಿಸುವರು ದೇವಾಂಶ ಸಂಭೂತರು ಕಾರುಣ್ಯ ನಿಧಿಗಳು ತೋರುವರು ಹರಿಮಾರ್ಗ ಸಾರಿ ಭಜಿಪರಿಗೆ ಸತತ ನಾರಸಿಂಹನ ಚರಣ ಸೇರಿಸಿ ಹೃದಯದಲಿ ಸೂರೆಗೊಂಡಿಹರು ಮುಕ್ತಿ | ಸುಕೀರ್ತಿ 4 ಅಪಾರ ಅದ್ಭುತದ ಕರ್ಮಗಳ ನಡೆಸಿಹರು ಪಾಪಿ ಜನಗಳ ಪೊರೆವರು ರೂಪ ರೂಪಾಂತರದಿ ತೋರ್ಪರು ಸುಜನರಿಗೆ ಶ್ರೀಪತಿಯ ವರ ಭಕ್ತರು ಕೋಪತಾಪಗಳಿಂದ ನಿರ್ಲೇಪರಾಗಿಹರು ತಾಪತ್ರಯಗಳ ಕಡಿವರು ಗೋಪಾಲಕೃಷ್ಣವಿಠ್ಠಲನ ಪದಧ್ಯಾನವನು ಗೋಪ್ಯದಿಂದಲಿ ಇತ್ತರು | ಇವರು5
--------------
ಅಂಬಾಬಾಯಿ
ತಂದೆಯಿಂದಲಿ ತಾಯಿ ಗರ್ಭಕೆ ನೂಕಿದ್ವಂದ್ವ ಜನ್ಮಕೆ ಕರ್ತ ಇಂದ್ರ ರಕ್ಷಿಪುದೆಂದೋ ಜನ್ಮದಿಂದ |ಇಂದ್ರಾದಿ ಪ್ರಾವರ್ತಕನಿಂದು ಪ್ರಲಯಾದಲ್ಲಿನಂದಕರ ಮುಕ್ತರಿಗೆ ಮಂದಿರವು ಸಿತ ದ್ವೀಪ ಗುರು ಗೋ-ವಿಂದ ವಿಠಲಾತ್ಮಕ ಸಂಕ್ಷೇಪ್ತø ಶರಣು ||ಹರಣ ಹೋಗದ ಮುನ್ನ | ಹರಿ ನಿನ್ನ ಹಂಬಲನ್ನಕರುಣಿಸಿ ಕಾವುದೆನ್ನ | ಕರುಣಾನಿಧಿಯೆ ಘನ್ನಸ್ವರ್ಣ ಗರ್ಭನನಯ್ಯ | ಅರ್ಣ ಸಂಪ್ರತಿಪಾದ್ಯಕರ್ಣರಹಿತ ಶಯ್ಯ | ವರ್ಣಿಸೆ ನಿನ್ನನಯ್ಯಮರುತನ ಮತದಲ್ಲಿ | ಕರೆ ತಂದು ಎನ್ನನುತರತಮ ಜ್ಞಾನವನ್ನ | ಅರುಹುವುದೊಳಿತಲ್ಲೆಹರಿಯೆ ಸರ್ವೋತ್ತಮ | ಮರುತ ಜೀವೋತ್ತಮಹರ ವೈಷ್ಣವೋತ್ತಮ | ವರ ಜ್ಞಾನ ಪಾಲಿಸಿಪನ್ನಗಾಚಲವಾಸ ಪ್ರ | ಸನ್ನ ರಘನಾಶಘನ್ನ ಗುರು ಗೋವಿಂದ ವಿಠಲಾ ಗೋ ಪ್ರಸನ್ನ ||
--------------
ಗುರುಗೋವಿಂದವಿಠಲರು
ತನು ಸಹ ಕಾಂಬುದೆ ಬ್ರಹ್ಮಸತ್ಯವು ಸತ್ಯವ ಕೇಳೆಲೋ ತಮ್ಮತನು ಸಹ ಕಾಂಬುದೆ ಬ್ರಹ್ಮತನುವನು ಬಿಟ್ಟು ಬೇರೇನೂ ತೋರದುನಿನಗೆ ಅರಿದು ನಿಮ್ಮಪ್ಪಗೆ ಅರಿದು ಪ ಹೂವನೆ ಮುಂದೆ ಮುಂದಿಟ್ಟುಕೊಂಡುಸರ ಕಟ್ಟಬಹುದು ದೊಡ್ಡ ಚೆಂಡುಹೂವನೆ ಮುಂದಿಟ್ಟಿಕೊಂಡುಹೂವನೆ ಬಿಟ್ಟು ಪರಿಮಳ ಕಟ್ಟೆನೆಅವ್ವಗೆ ಅರಿದು ಅವ್ವನವ್ವಗೆ ಅರಿದು1 ಮುತ್ತದು ಕೇವಲ ಜ್ಯೋತಿ ಕಿವಿಗೆಮುತ್ತಿಡುವರಿಗದು ನೀತಿಮುತ್ತದು ಕೇವಲ ಜ್ಯೋತಿಮುತ್ತದು ಬಿಟ್ಟು ಜ್ಯೋತಿಯ ಬಿಡು ಎನೆಮುತ್ತದು ಅಜಗೆ ಅರಿದು ಮಹೇಶ್ವರಗರಿದು2 ಬೆಲ್ಲದ ಮುದ್ದೆಯ ನೋಡುಹಲ್ಲಿನಿಂದಲೇ ತಿನಬೇಕು ಕಡಿದುಬೆಲ್ಲದ ಮುದ್ದೆಯ ನೋಡುಬೆಲ್ಲವನು ಬಿಟ್ಟು ಸಿಹಿಯನು ತಿನ್ನೆನೆಬಲ್ಲ ಚಿದಾನಂದ ಸದ್ಗುರುಗರುದು 3
--------------
ಚಿದಾನಂದ ಅವಧೂತರು
ತನುಮನದಲ್ಲಿ ಯೋಚನೆ ಮಾಡೀ ಎಣಿಸಿ ಗುಣಿಸಿ ಮನಸಿಜನ್ನ ಜನಕನ ಲೀಲೆ ಪ ನರನಾರಾಯಣನೀತ ಕೃಷ್ಣ ಹರಿ ಹೃದ್ಭಾನು ಕಪಿಲನೀತ ಹರಿನಾರಾಯಣೇನೀತ ಯೋಗೀ ಶ್ವರ ತಾಪಸ ವೈಕುಂಠನೀತ ಹರನಸಖ ಸ್ವಧಾಮನೀತ ಕರುಣಿ ಸಾರ್ವಭೌಮನನೀತಾ 1 ಅಜಿತಯಜ್ಞನಾಮನೀತ ಅಜಗೆ ಪೇಳಿದ ಹಂಸನೀತ ಸುಜನಪಾಲ ವ್ಯಾಸ ವೀ ರಜ ಮಹಿದಾಸ ದತ್ತನೀತ ನಿಜ ಮಹಿಮ ಧನ್ವಂತ್ರಿ ಈತ ತ್ರಿಜಗವಳೆದುಪೇಂದ್ರನೀತ ಭಜಕರೊಡಿಯ ವಿಷಕ್ಸೇನ ಭುಜಗಶಾಯಿವಿಭುವೆ ಈತ 2 ಚಲುವ ಧರ್ಮಶೇತು ಈತ ಬಲುವುಳ್ಳ ಶಿಂಶುಮಾರನೀತ ಮತ್ಸ್ಯ ಕೂರ್ಮವರಹ ಲಲಿತನರಸಿಂಹನೀತ ಬಲಿಗೊಲಿದ ವಾಮನ್ನನೀತ ಕುಲವೈರಿ ರಘರಾಮನೀತ ಕಲಕಿ ರೂಪನಾದನೀತಾ 3 ವಾಸುದೇವ ಜಯಪತಿ ಸುಂ ದರ ಪ್ರದ್ಯುಮ್ನ ಈತ ನಿರಂತರ ಅನಿರುದ್ಧನೀತ ಚ ತುರ ವಿಂಶತಿ ಮೂರುತಿಯೇ ಈತ ಮೆರೆವ ಅಜಾದಿ ನಾಮಕನೀತ ವರ ಪಂಚಮೂರುತಿಯೇ ಈತಾ ಎರಡೈದು ಮೇಲೊಂದನೀತ 4 ಪರಿಪರಿ ರೂಪ ಉಳ್ಳನೀತ ಹೊರಗೆ ಒಳಗೆ ವ್ಯಾಪ್ತನಾಗಿ ಸರಿಸರಿ ಬಂದ ತೆರದಿ ಜಗವ ಸರಸದಲಿ ಆಡಿಪನೀತ ಸ್ಮರಣೆ ಮಾಡಲು ಸಕಲ ಇಷ್ಟವ ಕರೆÀದು ಕೊಡವನೀತ ಮರಣ ಜನನರಹಿತ ನೀತ 5
--------------
ವಿಜಯದಾಸ
ತನುಮನಧವನೆಲ್ಲ ನಿನಗರ್ಪಿಸಿದೆನಿನ್ನು ಎನಗಾವುದಾಧೀನವಿನಿತಿಲ್ಲ ದೇವ ಪ ಜನಕ ನಾನು ಕ್ಷಣಕೆ ಕ್ಷಣಕೆ ಉಣವುದೆಲ್ಲವು ನಿನ್ನ ಪ್ರಸಾದ ಕನಸುಮನಸಿನೊಳಗೆ ನಾನು ಮಣಿವುದೆಲ್ಲವು ನಿನ್ನ ಚರಣ ಅ.ಪ ಮಡದಿಯಿಂ ಮಮತದಿ ಸಡಗರದಾಡ್ಯಾಡಿ ಕಡು ಆನಂದಿಪುದೆಲ್ಲ ಒಡೆಯ ನಿನ್ನಾಟ ಎಡೆಬಿಡದೆ ಅಡಿಗಡಿಗೆ ಕಡುಸಿರಿವಡೆದು ನಾ ಪೊಡವಿಯೋಳ್ಜೀವಿಪುದು ಕಡು ನಿಮ್ಮ ಪ್ರೇಮ ನುಡಿವುದೆಲ್ಲ ನಿನ್ನ ಮಂತ್ರವು ಕೊಡುವುದೆಲ್ಲವು ನಿನ್ನ ಅಧಿಕಾರ ನಡೆವುದೆಲ್ಲವು ನಾ ನಿನ್ನ ಯಾತ್ರೆಯು ಇಡುವತೊಡುವುದು ನಿನ್ನ ಬಿರುದು 1 ಗಳಿಸುವುದೆಲ್ಲ ನಾ ಚಲಿಸದ ತವಪಾದ ನಳಿನದಾಸರಸಂಗೀ ಇಳೆಯೊಳು ಪ್ರಭುವೇ ಬಳಸುವುದೆಲ್ಲ ನಾ ಅಳಕದ ತವಚರಿತ ಕಲಿಯುವುದೆಲ್ಲ ನಿಮ್ಮ ವಿಲಸಿತನಾಮಧ್ಯಾನ ಮಲಗುವುದೇ ನಿಮ್ಮ ಧ್ಯಾನ ಆನಂದ ನಲಿವುದಖಿಲ ನಿಮ್ಮ ಭಜನೆಯು ಅಳಿವುದೆಲ್ಲನುಭವದ ಗುಣಗಳು ತಿಳಿವುದೆಲ್ಲವು ನಿಮ್ಮ ಮಹಿಮೆ 2 ಅಮಿತ ತವಪ್ರೇಮವು ಗಮಿಸುವುದೆಲ್ಲ ನಾ ಸುಮನರ ಸಭೆಯು ಕ್ರಮದಿ ನಾ ಬೇಡುವುದು ವಿಮಲ ಸುಜ್ಞಾನವು ದಮೆ ದಯ ಭಕ್ತಿ ತವ ನಿರ್ಮಲಂಘ್ರಿಯ ಅರಿವು ನೇಮದಿಂ ನಾ ಬರುವುದೆಲ್ಲ ಸ್ವಾಮಿ ನಿಮ್ಮಯ ಮಹಿಮೆ ಖ್ಯಾತಿಯು ಕ್ಷೇಮನಿಧಿ ಶ್ರೀರಾಮ ನಿಮ್ಮೊಳು ಕಾಮಿಸುವುದೇ ನಾ ಮುಕ್ತಿಪದವು 3
--------------
ರಾಮದಾಸರು
ತನುವೆಂಬ ಭವನದಲಿ ಮನವೆಂಬ ಮಂಟಪದಿ ವನರುಹಾಸನ ವಿಹುದು ನಿನಗಾಗಿ ಕೃಷ್ಣಾ ಪ ಅನವರತ ಸ್ವಾಗತವ ಇನಿದಾಗಿ ಪೇಳುತಲಿ ಸನುಮತದೊಳೀರೈದು ಮುನಿವರರು ನಿಂದಿಹರು ಅ.ಪ ಎನಗೆ ತನಗೆಂದಿಬ್ಬರನುವಾಗಿ ಕಾದಿಹರು ಘನ ಮೌನಿಯಂತೊಬ್ಬ ಮಣಿಯುತಿಹನು ವನಜ ಸಂಭವ ಜನಕ ಮುನಿಯೊಡನೆ ನೀ ಬಂದು ಕನಕಮಂಟಪವೇರು ಅವರಿಬ್ಬರೋಡುವರು 1 ಕರಿಯ ಮೈಯವನೊಬ್ಬ ದುರದುರನೆ ನೊಡುವನು ಪರಿವಾರದವರನ್ನು ತೋರುತಿಹನೊಬ್ಬ ಕರದಿ ಸನ್ನೆಯ ಮಾಡುತಿಬ್ಬರೂ ಬರುತಿಹರು ತರಿದವರ ಮಂಟಪವನೇರೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನ್ನ ತಾ ತಿಳಿದು | ಧನ್ಯನಾಗೊ ಬಗೆ ಇದು | ಖಿನ್ನವಳಿದು ಪೂರ್ಣ ಬ್ರಹ್ಮವನ್ನು ಕಾಂಬುದು ಪ ತತ್ತ್ವ ಶಾಸ್ತ್ರವನ್ನು ಓದಿ | ಭಕ್ತಿಯಿಂದ ಮನನ ಮಾಡಿ | ಯುಕ್ತಿ ಭಾವವೆಲ್ಲ ಕಳೆದು ಮುಕ್ತನಾಗುತಾ || ನಿತ್ಯವಾದ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು | ಸತ್ಯ ಶರಣರಡಿಯ ಪಿಡಿದು ಚಿತ್ತದಲ್ಲಿ ನಲಿವುದು 1 ಆಶೆ ಮೂರರಲ್ಲಿ ಇನ್ನು | ಬೇಸರಾಗಿ ವಿಷಯದ | ವಾಸನೆಗಳ ಜರಿದು ಪಾಶ ಕ್ಲೇಶವಳಿಯುತ || ನಾಸಿಕಾಗ್ರದಲ್ಲಿ ಮನವ | ಸೂಸದಂತೆ ನಿಲಿಸಿ ಜಗ- | ದೀಶನಾಟವನ್ನು ನೋಡಿ ನಾದ ಘೋಷ ಕೇಳ್ವುದು 2 ಹಿಂದೆ ಒಂದು ನೆನೆಸದಿನ್ನು | ಮುಂದೆ ಉಳಿದ ಕರ್ಮವನ್ನು | ಬಂದುದೆಲ್ಲ ಉಂಡು ಗೆದ್ದು ಹರುಷದಿಂದಲಿ || ತಂದೆ ಭವತಾರಕನ | ಹೊಂದಿ ಸದಾನಂದದಿಂದ | ಮುಂದೆ ಭವಕೆ ಬೀಳದಂತೆ ಛಂದದಿಂದ ನಲಿವುದು 3
--------------
ಭಾವತರಕರು
ತನ್ನ ತಿಳಿದು ತಾ ನಿರ್ಲಿಪ್ತನಾದವಗೆ ಇನ್ನೇನಿನ್ನೇನುತನ್ನ ತನ್ನೊಳು ಕಂಡು ತಾನಾದ ಮಹಾತ್ಮಗೆ ಇನ್ನೇನಿನ್ನೇನು ಪ ನಾನು ನೀನೆಂಬ ಹಮ್ಮುಳಿದುಳಿದಾತಗೆ ಇನ್ನೇನಿನ್ನೇನುನಾನು ನೀನೇ ನಿಶ್ಚಯವೆಂದು ನಿಶ್ಚಲನಾದವಗೆ ಇನ್ನೇನಿನ್ನೇನು1 ಸರ್ವವನರಿತು ಸರ್ವವೆ ತಾನಾದವಗೆ ಇನ್ನೇನಿನ್ನೇನುಸರ್ವ ಸರ್ವವು ಆದ ಸರ್ವಾತ್ಮಗೆ ಇನ್ನೇನಿನ್ನೇನು 2 ಮನದ ಮಾಟಗಳಿಗೆ ಮರುಳಾದವಗೆ ಇನ್ನೇನಿನ್ನೇನುಮನವು ತಾನಾದವಗೆ ಮನಕೆ ನಿಲುಕದವಗೆ ಇನ್ನೇನಿನ್ನೇನು 3 ಸುಖ ದುಃಖಗಳಿಗೆ ತಾ ಸಾಕ್ಷಿಯಾದವಗೆ ಇನ್ನೇನಿನ್ನೇನುಸುಖ ದುಃಖ ತೋರದೆ ಸಮಮನನಾದವಗೆ ಇನ್ನೇನಿನ್ನೇನು 4 ಅಗಣಿತ ಮಹಿಮಗೆ ಇನ್ನೇನಿನ್ನೇನು 5 ಎರಡನುಳಿದು ಮತ್ತೆರಡನು ಮರೆತವಗೆ ಇನ್ನೇನಿನ್ನೇನುಎರಡರೊಳು ತಾನೆಡಬಿಡದಿಪ್ಪಗೆ ಇನ್ನೇನಿನ್ನೇನು6 ಮುಟ್ಟು ಚಟ್ಟುಗಳ ಮುಗಿಸಿದಾತಗೆ ಇನ್ನೇನಿನ್ನೇನುಮುಟ್ಟು ಚಟ್ಟಲಿ ಅಡಗಿರುವಾತಗೆ ಇನ್ನೇನಿನ್ನೇನು7 ಸಕಲ ವಿಧವ ನೋಡಿ ಸಂತುಷ್ಟನಾದವಗೆ ಇನ್ನೇನಿನ್ನೇನುಸಕಲದಿ ಬೆರೆತು ಸಂಶಯವಳಿದಿಪ್ಪವಗೆ ಇನ್ನೇನಿನ್ನೇನು 8 ಚಿದಾನಂದ ಗುರುವಿನ ಚಿತ್ತದಿ ಪಿಡಿದಾತಗೆ ಇನ್ನೇನಿನ್ನೇನುಚಿದಾನಂದ ಗುರುವಿನ ಚಿತ್ಸುಖಭರಿತಗೆ ಇನ್ನೇನಿನ್ನೇನು 9
--------------
ಚಿದಾನಂದ ಅವಧೂತರು