ಒಟ್ಟು 2682 ಕಡೆಗಳಲ್ಲಿ , 118 ದಾಸರು , 2023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು
ಬ್ರಹ್ಮತಾನೆ ನಿತ್ಯಾ ಬ್ರಹ್ಮತಾನೆಬ್ರಹ್ಮ ಪರಾತ್ಪರ ಬ್ರಹ್ಮ ತಾನೇ ಪ ಕಾಲು ಕಣ್ಣು ಕೈ ಬಾಯಿ ಕಿವಿ ಮೂಗು ತಾಳಿಕೊಂಡುಕಾಲವನಿಲ್ಲಿಯೆ ಕಳೆಯಲು ಬಂದ ಗುರುಮೂರ್ತಿಮೂಲಾಧಾರನೆಂದು ತಿಳಿದುಕೊಳ್ಳಿರಾ ಬ್ರಹ್ಮ ತಾನು 1 ಪುತ್ರ ಮಿತ್ರರರು ಕಳತ್ರರಾಗಿ ಬಂಧುವಾಗಿನಿತ್ಯದಾಟವ ಇಲ್ಲಿ ಕಳೆಯಲು ಬಂದ ಬ್ರಹ್ಮ ತಾನೇ2 ಆಪವಿರಲು ಚಂದ್ರನು ಬಂದ ತೆರನಂತೆಉಪಾಧಿಯಿಂದ ಚಿದಾನಂದ ಬಂದ ಬ್ರಹ್ಮತಾನೇಉಪಾಧಿಯಿಂದ ಚಿದಾನಂದ ಬಂದ ಗುರುಮೂರ್ತಿಉಪಾಧಿ ಹರನೆಂದು ತಿಳಿದುಕೊಳ್ಳಿ ಬ್ರಹ್ಮತಾನೆ3
--------------
ಚಿದಾನಂದ ಅವಧೂತರು
ಬ್ರಹ್ಮವದು ಹ್ಯಾಗಿದೆಬ್ರಹ್ಮ ಕೇಳ್ವನ ಹಾಗಿದೆಬ್ರಹ್ಮವದು ಹೀಗೆಂದು ತೋರಲಿಕೆ ಶಕ್ಯವೇ ಪ ಬ್ರಹ್ಮವದು ಶೂದ್ರನೇಬ್ರಹ್ಮವದು ಭದ್ರನೇಬ್ರಹ್ಮವದು ರುದ್ರನೆಂದು ತೋರಿಸಲು ಶಕ್ಯವೇ 1 ಬ್ರಹ್ಮವದು ಯಂತ್ರವೇಬ್ರಹ್ಮವದು ತಂತ್ರವೇಬ್ರಹ್ಮವದು ಮಂತ್ರವೆಂದು ತೋರಿಸಲು ಶಕ್ಯವೇ 2 ಬ್ರಹ್ಮವದು ರೊಟ್ಟಿಯೇಬ್ರಹ್ಮವದು ಪುಟ್ಟಿಯೇಬ್ರಹ್ಮವದು ಹೊಟ್ಟೆಯೆಂದು ತೋರಿಸಲು ಶಕ್ಯವೇ 3 ಬ್ರಹ್ಮವದು ಜೋಳಿಗೆಬ್ರಹ್ಮವದು ಮಾಳಿಗೆಬ್ರಹ್ಮವದು ಹೋಳಿಗೆ ಎಂದು ತೋರಿಸಲು ಶಕ್ಯವೇ 4 ಹೇಗಿದೆಂದು ಕೇಳ್ವಡೆಹೀಗೆದೆಂದು ಪೇಳ್ವಡೆಹೇಗೆ ಹೀಗೆ ಎಂಬುದಕ್ಕೆ ಚಿದಾನಂದನ ನೋಡಿದೆ 5
--------------
ಚಿದಾನಂದ ಅವಧೂತರು
ಬ್ರಹ್ಮವು ನೀನೇಬ್ರಹ್ಮವು ನೀನೆಂದು ನಂಬಲೋ ದೊರೆಯೇ ಪ ವ್ಯಾಪಾರ ಮೂಗಿನಲ್ಲಲ್ಲ ಮೂಗಿನವ್ಯಾಪಾರ ಕಣ್ಣಿನಲ್ಲಿಲ್ಲನಿನ್ನ ವ್ಯಾಪಾರ ಸಕಲವು ಎಲ್ಲನಿನ್ನ ಹೊರತು ಬೇರೆ ಏನಿಲ್ಲ1 ಜಾಗೃತ ವ್ಯಾಪಾರ ಸ್ವಪ್ನದಲಿಲ್ಲಸ್ವಪ್ನದ ವ್ಯಾಪಾರ ಜಾಗೃತದಲ್ಲಿಲ್ಲಜಾಗೃತ ಸ್ವಪ್ನವೆರಡು ಸುಷುಪ್ತಿಯಲ್ಲಿಲ್ಲಸುಷುಪ್ತಿ ತುರೀಯವು ಜಾಗೃತದಲ್ಲಿಲ್ಲ 2 ನಾದದ ವ್ಯಾಪಾರ ಬಿಂದುವಿನಲ್ಲಿಲ್ಲಬಿಂದು ವ್ಯಾಪಾರ ನಾದದಲ್ಲಿಲ್ಲನಾದ ಬಿಂದು ಕಳೆ ಮೂರಕೆ ಇಲ್ಲಬೋಧ ಚಿದಾನಂದ ಹೊರತಿಹನಲ್ಲ 3
--------------
ಚಿದಾನಂದ ಅವಧೂತರು
ಬ್ರಹ್ಮವೆತ್ತಲು ಪರಬ್ರಹ್ಮವೆತ್ತಲುಬ್ರಹ್ಮ ತಾವೆಯೆಂದು ವಾಚಾಬ್ರಹ್ಮವನೆ ಬಗಳುತಿಹರಿಗೆ ಪ ಆಸೆಯೆಂಬದು ಅಳಿಯಲಿಲ್ಲ ಆಕಾಂಕ್ಷೆತಾ ಕಳೆಯಲಿಲ್ಲಪಾಶವೆಂಬುದು ಬಿಗಿದು ಉರುಲು ಬಿದ್ದಿಹುದುದೋಷವೆಂಬುದು ಅಡಗಲಿಲ್ಲ ದುಷ್ಕøತವೆಂಬುದು ಒಣಗಲಿಲ್ಲಕ್ಲೇಶ ಪಂಚಕದ ವಿಷಯದಿ ಕೆಡೆದಿಹ ಮನುಜರಿಗೆ 1 ಕಾಮವೆಂಬುದು ಕಡಿಯಲಿಲ್ಲ ಕ್ರೋಧವೆಂಬುದು ಅಳಿಯಲಿಲ್ಲತಾಮಸವೆಂಬುದು ಶರೀರ ತುಂಬಿಕೊಂಡಿಹುದುಕಾಮಿತವೆಂಬುದು ಹೋಗಲಿಲ್ಲ ಕಷ್ಟವೆಂಬುದು ನೀಗಲಿಲ್ಲಪಾಮರರಾಗಿ ದಾಹಕೆ ಸಿಕ್ಕುಬಿದ್ದಿಹ ಮನುಜರಿಗೆ2 ಮೋಹವೆಂಬುದು ಹರಿಯಲಿಲ್ಲ ಮೂರ್ಖತೆಯೆಂಬುದು ಕರಗಲಿಲ್ಲಊಹೆ ಎಂಬ ಕುಬುದ್ಧಿಯು ಉಡುಗಲಿಲ್ಲದೇಹ ಶೋಧನೆ ತಿಳಿಯಲಿಲ್ಲ ದೇಹಿ ಚಿದಾನಂದ ಅರಿಯಲಿಲ್ಲಕಾಹುರ ಮದದಲಿ ಮರೆತಿಹ ಮಂಕುವನು ಮನುಜರಿಗೆ 3
--------------
ಚಿದಾನಂದ ಅವಧೂತರು
ಬ್ರಹ್ಮವೆಂಬಿರಿ ನಿಮ್ಮ ಬರಿದೆ ಮಾತಲ್ಲದೆಬ್ರಹ್ಮನಾದವನ ಬಗೆಯನು ಹೇಳುವೆ ಕೇಳಿ ಪ ಆಶಾಪಾಶಗಳಿಗೆ ವಶವಾಗದವ ಬ್ರಹ್ಮಮೋಸಹೋಗದೆ ಮಾಯೆಗೆ ಇರುವವ ಬ್ರಹ್ಮಕೂಸಿನಂದದಿ ಭಾವ ಕೂಡಿಹನವ ಬ್ರಹ್ಮಘಾಸಿಯಾಗನು ಮದನಗೆ ಅವನು ಬ್ರಹ್ಮ 1 ಸತಿಸುತರಿಚ್ಛೆಯ ಸಮನಿಸದವ ಬ್ರಹ್ಮಇತರರ ವಾಕ್ಯಕೆ ಕಿವಿಗೊಡದವ ಬ್ರಹ್ಮಗತಿ ಯಾವುದೆನಗೆಂದು ಗುಣಿಸುತಿಪ್ಪವ ಬ್ರಹ್ಮಅತಿ ಹರುಷದಿಂ ಬಾಳುತಿರುವವನು ಬ್ರಹ್ಮ2 ಸಕಲ ವಿಶ್ವವು ಎನ್ನ ಸರಿಯು ಎಂಬುವವ ಬ್ರಹ್ಮಸುಖ ದುಃಖವನು ಸಮದೃಷ್ಟಿಯಲಿ ನೋಡುವವ ಬ್ರಹ್ಮಭಕುತಿ ಭಾವನೆಯಿರುವ ಮಾನವನು ತಾ ಬ್ರಹ್ಮಮುಕುತಿ ಮರ್ಗದಲಿರುವ ಯೋಗಿಯವ ಬ್ರಹ್ಮ 3 ಹುಚ್ಚರಂದದಿ ನೋಡೆ ಹುದುಗಿಕೊಂಡಿಹ ಬ್ರಹ್ಮಅಚ್ಚರಿಯ ಅವನಾಟ ತಿಳಿವವನು ಬ್ರಹ್ಮನಿತ್ಯಕಾಲದಿ ಜ್ಞಾನ ಬೇಕೆನ್ನುವವ ಬ್ರಹ್ಮಕೊಚ್ಚಿತೆಂಬನು ಎಲ್ಲ ಕುಲಜ ಬ್ರಹ್ಮ4 ದಾಸದಾಸರ ದಾಸನಾದವನೆ ಬ್ರಹ್ಮಈ ದೇಹದಾ ಹಂಗ ತೊರೆದವನು ಬ್ರಹ್ಮಭಾಸುರ ಚಿದಾನಂದನ ಭಜಿಪ ಭಕ್ತನೆ ಬ್ರಹ್ಮವಾಸರಿಲ್ಲವೋ ಈ ವಾಕ್ಯಕೆಂಬುವವ ಬ್ರಹ್ಮ5
--------------
ಚಿದಾನಂದ ಅವಧೂತರು
ಬ್ರಹ್ಮವೇ ನೀನೆನ್ನು ಮುಕ್ತನೇಬ್ರಹ್ಮವೇ ನೀನೆನ್ನು ಪ ತುಪ್ಪದ ಹನಿಯೆಲ್ಲವು ಮುಕ್ತನೆತುಪ್ಪವೆಯಲ್ಲವೆ ಮುಕ್ತನೆಇಪ್ಪ ಈ ಜಗವೆಲ್ಲ ಮುಕ್ತನೆತುಪ್ಪದ ತೆರನಂತೆ ಈ ಬ್ರಹ್ಮ 1 ಸಕ್ಕರೆ ಚೂರೆಲ್ಲ ಮುಕ್ತನೆಸಕ್ಕರೆಯಲ್ಲವೆ ಮುಕ್ತನೆತಕ್ಕು ಆಪರಿ ಆ ಜಗವು ಮುಕ್ತನೆಸಕ್ಕರೆ ತೆರನಂತೆ ಈ ಬ್ರಹ್ಮ2 ಅಣುರೇಣು ತೃಣ ಕಾಷ್ಠ ಮುಕ್ತನೆಘನ ಜೀವ ತಾನೆ ಎನ್ನು ಮುಕ್ತನೆಗುಣಾತೀತ ಚಿದಾನಂದ ಮುಕ್ತನೆಅನುಮಾನವಿಲ್ಲದೆ ನೀನೇ ಈ ಬ್ರಹ್ಮ 3
--------------
ಚಿದಾನಂದ ಅವಧೂತರು
ಬ್ರಹ್ಮಾಗಿ ತನ್ನ ಕಾಣೆ ಬ್ರಹ್ಮವಲ್ಲವೆ ಪ ಕೀಟ ಭೃಂಗವ ಹೊಂದಿ ಕೀಟ ಭೃಂಗವಾಗಲುಕೀಟವ ನೆನೆಸಲುಂಟೆ ಭೃಂಗದಲ್ಲಾದಕೂಟ ಪ್ರಾಣವೆ ಹೋಗಿ ಘಾಟಿ ಬ್ರಹ್ಮದಲಿರೆಕೂಟ ಪ್ರಾಣವದೆನಲುಂಟೆ ಬ್ರಹ್ಮನಲ್ಲದೆ 1 ಕರ್ಪೂರದುರಿಯ ಸೋಂಕಿ ಕರ್ಪುರ ಉರಿಯಾಗಲುಕರ್ಪೂರವ ನೆನಸಲುಂಟೆ ಉರಿಯಲ್ಲದೆಇಪ್ಪ ಇಂದ್ರಿಯ ಹೋಗಿ ಅಪ್ಪಟ ಆತ್ಮನಾಗೆಇಪ್ಪ ಇಂದ್ರಿಯ ಎನಲುಂಟೆ ಬ್ರಹ್ಮನಲ್ಲದೆ 2 ತೊತ್ತು ಅರಸನಸೇರಿ ತೊತ್ತು ಅರಸನಾಗಲುತೊತ್ತುತನವ ನೆನಸಲುಂಟೆ ಅರಸಲ್ಲದೆಚಿತ್ತವೆಂಬುದು ಹೋಗಿ ಶುದ್ಧ ಆತ್ಮವ ದಾಗೆಚಿತ್ತವೆನಲುಂಟೆ ಬ್ರಹ್ಮವಲ್ಲದೆ3 ಲವಣ ನೀರನು ಕೂಡಿ ಲವಣನೀರಾಗಲುಲವಣ ನೆನಸಲುಂಟೆ ನೀರಲ್ಲದೆಸವನಿಸೆ ಮನವದು ಶಿವನಾಗಿ ವರ್ತಿಸೆಸವನಿಸೆ ಮನ ಎನಲುಂಟೆ ಬ್ರಹ್ಮವಲ್ಲದೆ 4 ಶರೀರ ತನ್ನದು ಎಲ್ಲ ಶರೀರ ಗುರುವಿನದಾಗೆಶರೀರ ತಾನೆ ಎನಲುಂಟೆ ಗುರುವಲ್ಲದೆನರನು ಚಿದಾನಂದ ಗುರುವಾಗಿ ತನ್ನ ಕಾಣೆನರನು ಎನಲುಂಟೆ ಬ್ರಹ್ಮವಲ್ಲದೆ5
--------------
ಚಿದಾನಂದ ಅವಧೂತರು
ಬ್ರಹ್ಮಾನಂದದ ಸಭಾ ಮಧ್ಯದಲಿಸುಮ್ಮನೆ ಇರುತಿಹುದೇನಮ್ಮಬ್ರಹ್ಮಾದಿಗಳಿಗೆ ದೂರಾಗಿಹನಿರ್ಮಲ ನಿರುಪಮ ತಾನಮ್ಮ ಪ ಹೇಳಲು ಬಾರದ ಸುಖರೂಪದಲಿಹೊಳೆಯುತ ಅಹುದು ಏನಮ್ಮಮೇಳದ ಲೋಕಕೆ ಕರ್ತೃ ತಾನಾಗಿಹಲೋಲ ಪರಾತ್ಪರ ತಾನಮ್ಮ 1 ಬೋಧದ ರೂಪದಿ ಹಾ.... ಎಂಬಂದದಿಬೆಳಗುತಲಿಹುದದು ಏನಮ್ಮಆದಿ ಅನಾಧಿಯು ಅವ್ಯಕ್ತವೆನಿಪಅಚಲಾನಂದವೆ ತಾನಮ್ಮ 2 ತೃಪ್ತಾನಂದದಿ ತೂಷ್ಣೀ ಭಾವದಿದೀಪ್ತವಾಗಿಹುದದು ಏನಮ್ಮಸಪ್ತಾವರಣದ ಮೀರಿ ಮಿಂಚುವಗುಪ್ತಜ್ಞಪ್ತಿಯು ತಾನಮ್ಮ 3 ಕದಲದೆ ಚೆದುರದೆ ಕೈ ಕಾಲಿಲ್ಲದೆಉಕ್ಕುತಲಿಹುದದು ಏನಮ್ಮಸದಮಲ ಸರ್ವಾತ್ಮತ್ವವೆಯಾಗಿಹಸಾಕ್ಷೀಭೂತವು ತಾನಮ್ಮ4 ತೋರುತಲಡಗದ ಸಹಜಭಾವದಿಥಳಥಳಿಸುತಿಹುದದು ಏನಮ್ಮಕಾರಣ ಕಾರ್ಯವ ಕಳೆದ ಚಿದಾನಂದಕಾಲಾತೀತನು ತಾನಮ್ಮ 5
--------------
ಚಿದಾನಂದ ಅವಧೂತರು
ಬ್ರಹ್ಮಾನುಭವ ಅದಕೋ ಕೈವಲ್ಯಂ ಅದಕೋ ಕೈವಲ್ಯಂಅದಕೋ ಕೈವಲ್ಯಂ ಅದಕೋ ಕೈವಲ್ಯಂ ಪ ಮಣಿ ಬಿದ್ದುಬೆಳಗೊಂದೆಯಾಗಿರುತಿಹುದೆ ಕೈವಲ್ಯಂ 1 ಜೋತಿ ಎರಡು ಇರೆ ಜೋತಿ ಒಂದರಲಿಡೆಜೋತಿಯೊಂದಾಗಿ ಬೆಳಗುತಲಿರೆ ಕೈವಲ್ಯಂ 2 ಕರ್ಪೂರ ಉರಿ ಸೋಂಕಿ ಉರಿ ಆವರಿಸಿರೆಕರ್ಪೂರ ಕಾಣ್ಬಾರದ ತೆರದಿಹುದೇ ಕೈವಲ್ಯಂ 3 ದರ್ಪಣಕೆ ಮುಖವೆರಡು ಆಗೆದರ್ಪಣವಿಲ್ಲದಿರೆ ಕಾಣದಿಹುದೇ ಕೈವಲ್ಯಂ 4 ಕೈವಲ್ಯ ಸ್ಥಿತಿ ನಿಲ್ಲಲವನೇ ಚಿದಾನಂದ5
--------------
ಚಿದಾನಂದ ಅವಧೂತರು
ಬ್ರಹ್ಮಾಸ್ತ್ರ ಬ್ರಹ್ಮಾಸ್ತ್ರ ಎಂಬ ಮಾತೆಂತೆನೆಬದಲಿಲ್ಲದಿರುವುದೇ ಬ್ರಹ್ಮಾಸ್ತ್ರಬ್ರಹ್ಮಾಸ್ತ್ರಕೆ ಬ್ರಹ್ಮಾಸ್ತ್ರವೇಯಲ್ಲದೆಬ್ರಹ್ಮಾಸ್ತ್ರವೇ ಬ್ರಹ್ಮಾಸ್ತ್ರವು ಬ್ರಹ್ಮಾಸ್ತ್ರ ಪ ಪಾಶುಪತಾಸ್ತ್ರ ನಾರಾಯಣಾಸ್ತ್ರವನೆಲ್ಲಪೂರ್ಣಾಹುತಿಯ ಕೊಂಬುದೇ ಬ್ರಹ್ಮಾಸ್ತ್ರವಾಸವಾದಿತ್ಯ ಆಗ್ನೇಯಾಸ್ತ್ರವನೆಲ್ಲಬೆದರದೇ ನುಂಗುವುದೆ ಬ್ರಹ್ಮಾಸ್ತ್ರ1 ಜಿಹ್ವೆ ಹಿಡಿದತುರೀಯ ದೇವತೆಬ್ರಹ್ಮಾಸ್ತ್ರವೇ ಅಸ್ತ್ರವು ಬ್ರಹ್ಮಾಸ್ತ್ರ 2 ಬ್ರಹ್ಮ ತುರೀಯಾತೀತ ಬ್ರಹ್ಮಾಸ್ತ್ರನಿರ್ಗುಣ ಬ್ರಹ್ಮಾಸ್ತ್ರವೆ ಸ್ವರಾಟ್ ಬ್ರಹ್ಮಾಸ್ತ್ರಬ್ರಹ್ಮ ಚಿದಾನಂದ ಬ್ರಹ್ಮಾಸ್ತ್ರವೆನಿಸಿತುಬ್ರಹ್ಮಾಸ್ತ್ರವೇ ಬಗಳ ಬ್ರಹ್ಮಾಸ್ತ್ರ 3
--------------
ಚಿದಾನಂದ ಅವಧೂತರು
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ