ಒಟ್ಟು 1636 ಕಡೆಗಳಲ್ಲಿ , 112 ದಾಸರು , 1355 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರ ಸಾಗರವನುತ್ತರಿಸುವಡೆಕಂಸಾರಿ ನಾಮವೊಂದೇ ಸಾಕು ಮರುಳೆ ಪ ಯತಿಯಾಗಬೇಡ ನೀ ವೈರಾಗ್ಯವನೆ ಪಿಡಿದುಸತತ ವ್ರತವ ಮಾಡುವೆನೆಂಬ ಹಮ್ಮು ಬೇಡಶ್ರುತಿಸ್ಮøತಿಯರಿತು ನಡೆವೆನೆಂಬ ಚೇಷ್ಟೆಯು ಬೇಡರತಿಪತಿಪಿತನ ನಾಮವೊಂದೆ ಸಾಕು ಮರುಳೆ 1 ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆವನಿತೆಯನು ಬಿಟ್ಟು ತಪವಿರಲು ಬೇಡಅನುದಿನವು ನೀರೊಳಗೆ ಮುಳುಗಿ ನಡುಗಲು ಬೇಡವನಜನಾಭನ ನಾಮ ನೆನೆ ಕಂಡ್ಯ ಮರುಳೆ 2 ತೀರ್ಥಯಾತ್ರೆಯ ಮಾಡಿ ಬಹುವಿಧದಲಿ ಬಳಲಿ ಕೃ-ತಾರ್ಥನಾದೆನೆಂಬುವ ಹೆಮ್ಮೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಕೀರ್ತನೆಯ ಮಾಡಿ ಮುಕುತಿಯ ಹೊಂದು ಮರುಳೆ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಸಹಾಯವಿಲ್ಲ ಪಾಪಿಜೀವಿಗೆ ಜಗದಿ ಪ ಶಶಿಧರ ಶಿವನ್ವರವು ದಶಶತಭುಜಬಲವು ಪಶುಪತಿ ಕದವ ಕುಶಲದಿಂ ಕಾಯುವ ಅಸಮಬಲವಿರಲವನು ಕುಸುಮಾಕ್ಷಗ್ವೈರೈನಿಸಿ ಅಸುವ ಕಳೆದುಕೊಂಡ 1 ಆರಿಂದ ಮರಣವು ಬಾರದಂತ್ಹಿರಣ್ಯ ಕೋರಿಕೊಂಡ್ಹರನಿಂದ ಮೀರಿ ಮೆರೆಯುತಲಿ ಮೂರುಲೋಕಗಳನ್ನು ಘೋರಿಸಲತಿಶಯ ಮಾರಜನಕ ಮುನಿದು ಸೇರಿಸಿದೆಮಪುರ 2 ಹರನು ಭಸ್ಮಗೆ ಬಲಪರಿಪೂರ್ಣವಾಗಿ ತ ನ್ನುರಿಹಸ್ತ ವರವನ್ನು ಕರುಣಿಸಿಯಿರಲು ದುರುಳಂಗೆ ಘನತರ ಹರನ ಕರುಣವಿರಲು ನರಹರಿ ತಡೆಯದೆ ಉರುವಿದ್ಯರಲವದಿ 3 ನೂರುಯೋಜನ ಮಹ ವಾರಿಧಿಯೊಳು ಮನೆ ಆರು ಕೋಟ್ಯಾಯುಷ್ಯ ಶೂರತಮ್ಮನ ಬಲವು ಮೀರಿದವರ ಬಲ ಮೇರಿಲ್ಲದೈಶ್ವರ್ಯ ಸಾರಸಾಕ್ಷನು ಮುನಿಯೆ ಹಾರಿತು ನಿಮಿಷದಿ 4 ಪರಿ ಬಲವಿರ್ದು ಸಾಫಲ್ಯಹೊಂದದೆ ಲೋಪಾಯಿತು ಸರ್ವರಾಪಾರ ಬಲವು ವ್ಯಾಪಿಸಿ ತ್ರೈಜಗ ಕಾಪಾಡ್ವ ಶ್ರೀರಾಮನಪ ರೂಪಪಾದಕೃಪೆ ನೋಂಪಿ ಸಂಪಾದಿಸದೆ 5
--------------
ರಾಮದಾಸರು
ಸಾಕು ಬಿಡು ಭಾವೆ ಸಾಕು ಬಿಡು ನಿನ್ನ ಹೋಕೆ ಮಾತುಗಳೆಷ್ಟುಸಾಕು ಬಿಡು ಪ ಮದಗಜಗಮನೆ ನೀ ಒದೆವೋದ್ಯಾತಕೆ ಕಲಿತೆಬದಿಯಲಿದ್ದವರು ಇದಕೆ ನಗರೇನೆ ಸಖಿಯೆ ಬದಿಯಲಿದ್ದವರು ನಗರೇನೆ ನಿನ್ನ ಬುದ್ದಿಅದ್ಬುತವಾಗಿ ಈಗ ಬೆಳೆದಿದೆ ಸಖಿಯೆ1 ಸುದತಿ ಸುಭದ್ರಾಗೆ ಕದನ ಕಠೋರಿ ಸರಿಯೇನ ಸಖಿಯೆ2 ಎತ್ತಿ ಒಯ್ದವ ನಿನ್ನ ಅತ್ಯಂತ ಸುಖಿಸಿದ ಲತ್ತಿತಿಂದೊಬ್ಬ ಬಳಲುವಲತ್ತಿತಿಂದೊಬ್ಬ ಬಳಲುವ ನಿನ್ನ ನಡತೆವಿಸ್ತಾರವಾಗಿ ಈಗ ತಿಳಿಸಿದೆ ಸಖಿಯೆ3 ತಾಯಿ ಮಕ್ಕಳೊಳು ನ್ಯಾಯವನಿಕ್ಕುವಿಮಾಯಗಾರುತಿಯೆ ಬಲು ಮೂದೇವಿಮಾಯಗಾರುತಿಯೆ ಬಲು ಮೂದೇವಿ ನಿನಕಂಡುಬಾಯಿ ಬಿಡುತಾರೆ ಜನರೆಲ್ಲ ಸಖಿಯೆ4 ಖ್ಯಾತ ರಾಮೇಶ ಈಗ ಈ ಮಾತೆಲ್ಲಿ ಕಲಿತೆಂದ ಚಾತುರ್ಯದಲ್ಲಿ ಚಪಲನೆಚಾತುರ್ಯದಲ್ಲಿ ಚಪಲ ಚನ್ನಿಗನೆಂಬೊಪಾರ್ಥನು ನಿನಗೆ ಗುರುವೇನ ಸಖಿಯೆ 5
--------------
ಗಲಗಲಿಅವ್ವನವರು
ಸಾಕು ಸ್ವಾಮಿ ಲೋಕವಾಸವು ಪ ಬೇಕು ನಿಮ್ಮ ಚರಣಸೇವೆ ಲೋಕದಿಂದ ಪಾರು ಮಾಡೆನ್ನ ಅ.ಪ ಕಷ್ಟದಿಂದಿನ್ನು ಜೀವಿಸಲು ನಾ ನೆಷ್ಟು ಪಾಪವ ಮಾಡುವೆನೊ ಇಷ್ಟೆ ಸಾಕಯ್ಯ ಕಷ್ಟನಿವಾರ ಸೃಷ್ಟಿಯಿಂದೆನ್ನ ಪಾರುಮಾಡೊ 1 ಹಲವು ಭ್ರಾಂತಿಗಳಲಿ ನಾನು ತೊಳಲಿಬಳಲಿ ಚಲನೆಗೆಡುತ ದುರಿತ ಸಾಕೈ ಇಳೆಯಿಂದೆನ್ನನು ಗೆಲಿಸು ದೇವ 2 ಸಕಲವಿಧದಿ ದು:ಖರೂಪ ಕಾಕುಸಂಸಾರ ಬಲು ತಾಪ ಭಕುತಜನಪ್ರಿಯ ಮುಕ್ತಿಸೋಮ ಮುಕುತಿ ಕರುಣಿಸು ನಿರುತ ಶ್ರೀರಾಮ 3
--------------
ರಾಮದಾಸರು
ಸಾಗಿ ಬಾರೈಯ ನೀನು, ಗೋವಿಂದ ವೆಂಕಟ ಪ ಸಾಗಿಬಾರೈಯ ಭವರೋಗದ ವೈದ್ಯನೆ ಬಾಗಿ ನಿನಗೆ ಚೆನ್ನಾಗಿ ತುತಿಪೆ ನಿಂದು ಭಾಗೀರಥಿಪಿತ ಭಾಗವತರ ಸಂ ಯೋಗರಂಗ ಉರಗಗಿರಿ ವೆಂಕಟ ಅ.ಪ. ರಥದ ಮಧ್ಯದಲಿಪ್ಪನೆ ರಥಾಂಡಜ ವಾಹನನೆ ರಥಾಂಗಪಾಣಿಯೆ ದಶರಥ ನೃಪಬಾಲ ಪಾರ್ಥಗೆ ಒಲಿದವನ ರಥವ ನಡಿಸಿ ಅತಿ- ರಥ ಮಹರಥರ ವಿರಥರ ಮಾಡಿ ಗೆಲಿಸಿದೆ ಪ್ರಥಮ ದೈವವೆ ಮನ್ಮಥಪಿತ ದೈತ್ಯರ- ಮಥನ ಭಕ್ತರ ಮನೋರಥನೆ ತಾರಾ- ಪಥವರ್ಣನೆ ತವ ಕಥಾಶ್ರವಣದಲಿ ಸು- ಪಥವನು ತೋರಿಸು ಪ್ರಥಮಾಂಗದೊಡೆಯ 1 ನಿಲ್ಲದೆ ಬರುವುದು ಪುಲ್ಲಲೋಚನೆ ಸಿರಿ- ವಲ್ಲಭ ಸರ್ವರಿಗು ಬಲ್ಲಿದನೆ ಅಪ್ರತಿ- ಮಲ್ಲ ಮುರವಿರೋಧಿ ಮೆಲ್ಲಮೆಲ್ಲನೆ ಪಾದ ಪಲ್ಲವ ತೋರುತ್ತ ಎಲ್ಲಾ ಕಾಲದಿ ನಮ್ಮ- ನೆಲ್ಲರುದ್ಧರಿಪುದು ಎಲ್ಲಿ ನಿನಗೆ ಸರಿ- ಯಿಲ್ಲವೊ ನೋಡಲು ಸಲ್ಲುವುದೋ ಬಿರು- ದಲ್ಲಿಗಲ್ಲಿಗೆ ಗುಣಬಲ್ಲವರಾರಿನ್ನು ವಿಶ್ವ 2 ಬೊಮ್ಮ ಮೊದಲು ಮನುಜೋತ್ತಮರು ಕಡೆಯಾಗಿ ನಿಮ್ಮ ದಾಸರು ಅವರ ಸಮ್ಮಂಧಿಗಳ ಪಾದ- ನೆಮ್ಮಿಕೊಂಡಿಪ್ಪಂಥ ಧಮ್ಮನು ನಾ ಸರ್ವೋ- ತ್ತುಮ್ಮಾನೇಕ ಗುಣಮಹಿಮ ವಿಭೂಷಿತ ರಮ್ಮೆಧರಣಿದೇವಿ ಇಮ್ಮಹಿಷೇರ ಕೂಡಿ ಸಮುಖನಾಗುತ ಸುಮ್ಮನೆ ಬಾ ಬಾ ಸಿರಿ ವಿಜಯವಿಠ್ಠಲ ಅನು- ಪಮ್ಮಚರಿತ ಪರಬೊಮ್ಮ ತಿರುಮಲೇಶ 3
--------------
ವಿಜಯದಾಸ
ಸಾಧು ಸಂಗತಿ ಮಾಡೋ ಎಲೆ ಮನಾ ಸಾಧು ಸಂಗತಿ ಮಾಡು ಪ ಘೋರತರದ ಸಂಸಾರ ಸಾಗರದಿ ಪಾರು ಮಾಡಿ ಮುರಾರಿಯ ಸ್ಮರಿಸುವ 1 ಕರ್ಮಫಲಾಪೇಕ್ಷಿಸದಲೇ ಮಾಡಿ ತಾ ನಿರ್ಮಲ ಚಿತ್ತದಿ ಹರಿಯನು ಪೊಗಳುವಾ 2 ತನ್ನ ಪಿತ ಹನುಮೇಶವಿಠಲಗೆ ಆತ್ಮಅರ್ಪಿಸಿ ಕೃತಾರ್ಥನಾದನು ಸಾಧು ಸಂಗತಿ ಮಾಡೋ 3
--------------
ಹನುಮೇಶವಿಠಲ
ಸಾಮಜ ವಸ್ತ್ರಾಂಗಂ ಸುಮನೋತ್ತುಗಂ ಪ ನಿಗಮ ಶಿರಲೋಲ ಸದಾನಂದಿತಂ ಮೇ ಮನಸಾ 1 ತಾಪ ಭೀಷಣಂ ಈಶ್ವರವಿಶ್ವೇಶನಾದ ಘೋಷಣಂಭಾಸುರ ಕೋಟಿ ಸೇವಿತ ಸಂಕಾಶ ಮಹೇಶ ಸದಾನಂದಿತಂ ಮೇ ಮನಸಾ2 ಪರಮ ಪರಾಪುರುಷಂ ಪಾರ್ವತಿ ಮನೋಹರ ಹರಿ ವಿಶ್ವಾರ್ಚಿತಂವರ ಚಿದಾನಂದ ಗುರುವೇ ಸಾಕ್ಷಾತಂಸ್ಮರಣ ಮನೋನಿಶ್ಚಿತಂ ಮೇ ಮನಸಾ3
--------------
ಚಿದಾನಂದ ಅವಧೂತರು
ಸಾಮಜಾದ್ರಿ ನಿವಾಸ | ಮಮ ಹೃದಯ | ಸದ್ದಾಮದಲಿ ಆವಾಸ |ಸೌಮನಸ್ಯವ ಕಾಮಿಸುವೆ ಮನಕೀಶ | ನಾ ನಿಮ್ಮ ದಾಸಾ ಪ ಶ್ರೀ ಮನೋಹರನಂಘ್ರಿ ಕಮಲವ | ಯಾಮ ಯಾಮಕೆ ಭಜಿಸಿ ಹಿಗ್ಗುವ ಆಮಹಾತ್ಮರ ಚರಣ ರಜವನು | ಕಾಮಿಸುವೆ ಕರುಣಾಳು ಗುರುವರ ಅ.ಪ. ಘಾಸಿ ಪಡುತಲಿ ಬಂದ | ಪಾಪಾತ್ಮಯೆನ್ನಯಕ್ಲೇಶ ಹರಿಸಲು ಛಂದ | ಅಂಕಿತವನುಪದೇಷಿಸಿದೆ ನೀ ನಲವಿಂದ | ಕರುಣಾಳು ನಿನ್ನಯದಾಸ ಜನಗಳ ವೃಂದ | ಸೇವೆ ಕೊಡು ಆನಂದ || ವಿಷಯ ದಾಸೆಯ ಹರಿಸೊ ಗುರುವರ | ಬಿಸುರುಹಾಂಬಕನಂಘ್ರಿ ಕಮಲವ ಒಸೆದು ಸ್ಮರಿಸುವ ಮತಿಯನಿತ್ತು | ಎಸೆವ ಹರಿಯಪರೋಕ್ಷ ಪಾಲಿಸೊ 1 ವತ್ಸರ ಸುವಿಕ್ರಮವರ ನವಮಿ ಮಧ್ಯದಿನಂದೂ | ನಿಶ್ಚಯಿಸಿ ಮನದಲಿನರನಟನೆ ಉಪರಮಿಪೆನೆಂದೂ | ತನುವ ತ್ಯಜಿಸಿದೆ ಅಂದೂ ||ಸಾರ ಭಕುತರು ಸೇವೆ ಗೈಯಲು | ಕರಿಗಿರೀಯಲಿ ಒಂದು ಅಂಶದಿವರವ ಪಾಲಿಪುದಕ್ಕೆ ನೆಲೆಸಿದೆ | ಧೀರ ಕರುಣಾಪಾರ ಗುರುವೇ 2 ಚಾರು ಚರಣವ ತೋರು ಗುರುವೇ 3
--------------
ಗುರುಗೋವಿಂದವಿಠಲರು
ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಸಾರ ಸಾರ ಹರಿಯಪಾರ ಮಹಿಮ ನಾಮ ಘೋರಸಂಸಾರಾಬ್ಧಿಶೀಘ್ರೋತ್ತಾರನೌಕಾಧಾಮ 1 ವಿಧಿಭವಾದ್ಯಮರೌಘ ಧ್ಯಾನಾಸ್ಪದ ಕಲ್ವದ್ರುಮ ಪರಮಾಖಿಲ ಭಕ್ತಭವಯಕುಧರವಜ್ರೋಪಮ 2 ಭಕ್ತಿ ಜ್ಞಾನ ವೈರಾಗ್ಯ ಭಾಗ್ಯ ನಿವೃತ್ತಿ ಸುಖ ನಿಸ್ಸೀಮ ಕರ್ತ ಲಕ್ಷ್ಮೀನಾರಾಯಣನ ಭೃತ್ಯವರ್ಗಕ್ಷೇಮ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಾರಸ ಚರಣವ ತೋರೋ ನಿನ್ನ [ಪಾರ] ಕರುಣಾಮೃತವನು ಬೀರೋ ಪ ಮುರಳೀಧರ ಕೃಷ್ಣ ಬಾರೋ ಎನ್ನ ಹೃದಯ ಮಂದಿರವನು ಸೇರೋ ಅ.ಪ ನಿನ್ನ ಹೊರತು ಕೈ ಹಿಡಿಯುವರಾರೋ ಎನ್ನ ಭವಗಳ ಹರಿಸುವರಾರೋ ಎನ್ನಪರಾಧವ ಮನ್ನಿಸಿ ಬಾರೋ ಪನ್ನಗಶಯನ ನೀ ನಸುನಗೆದೋರೋ 1 ನಿನ್ನ ದರ್ಶನಕಾಗಿ ಹಾತೊರೆಯುವೆನೋ ನಿನ್ನ ಸೇವೆಗೆ ಎನ್ನ ತೆತ್ತಿಹೆನೋ ನಿನ್ನ ಪರೀಕ್ಷೆಗೆ ಫಲ ನಿನಗೇನೋ ಚೆನ್ನ ಮಾಂಗಿರಿರಂಗ ಮುನಿಸೆನ್ನೊಳೇನೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಾರಸಾಕ್ಷ ಘೋರದುರಿತ ದೂರಮಾಡೈ ಪ ಮಾರಜನಕಪಾರ ಮಹಿಮ ದೂರ ನೋಡದೆ ಬಾರೊ ಬೇಗ ಬಾರಿಬಾರಿಗೆ ನಿನ್ನ ನಂಬಿ ಸಾರಿಕೂಗಿ ಬೇಡುವೆನು 1 ಮೂಢತನದಿ ನಾಡ ತಿರುಗಿ ಖೋಡಿಯಾದೆ ಗಾಢಭಕುತಿಲಿ ಗಾಢ ನಿಮ್ಮ ಪಾವನ ಚರಿತ ರೂಢಿಯೊಳು ಧನ್ಯವಾಗದೆ 2 ಸಿರಿಯರಮಣ ಚರಣನಳಿನ ಮರೆಯಹೊಕ್ಕೆ ಕರುಣದೆನ್ನ ಮೊರೆಯ ಕೇಳಿ ದುರಿತದಿಂದ ಸೆರೆಯ ಬಿಡಿಸೆನ್ನ ಸಿರಿಯರಾಮ 3
--------------
ರಾಮದಾಸರು
ಸಾರಿ ಭಜಿಸಿರೋ ವಾದಿ ರಾಜ ಗುರುಗಳಾಘೋರ ಸಂಕಟದಿಂದಾ ಪಾರು ಮಾಳ್ಪರಾ ಪಭುಜಗುಣಸ್ಥರಾ ಅಜನ ಪದಕೆ ಅರ್ಹರಾಸುಜನವಂದ್ಯರಾ ವಾಜಿವದನ ದಾಸರಾ 1ವಕ್ರತರ್ಕದಾ ವಾದಿ ಸೊಕ್ಕು ಮುರಿದರಾಯುಕ್ತಮಲ್ಲಿಕಾ ರಚಿಸಿ ಮುಕ್ತಿ ತೋರ್ಪರಾ 2ಕುದುರೆ ಮೋರೆಯಾ ದೇವ ಮುದದಿ ಮೆಲುವನುಕಡಲೆ ಹೂರಣಾ ನೀವು ಕೊಡಲು ಅನುದಿನಾ3ಭೂತರಾಜನು ಸೋತ ದಾಸನಾದನುಅತಿ ಮಹತ್ವದಾ ಸೇವೆ ಸತತ ಮಾಳ್ವನು 4ಭಕ್ತಿುಂದಲಿ ಇವರ ಸ್ತುತಿಯ ಮಾಡಲುಭೂಪತಿ'ಠ್ಠಲಾ ಒಲಿದು ವರವಾ ಕೊಡುವನು 5'ಜುೀಂದ್ರರು
--------------
ಭೂಪತಿ ವಿಠಲರು
ಸಾರಿದ ಭಕ್ತಸಂಸಾರಿ ಮಾಲಿಂಗ ಕ್ಷೀರ ಗ್ರಾಮದಿ ನಿಂತ ಧೀರ ಮಾಲಿಂಗ ಪ ಹರ ಹರ ಮಹಾದೇವ ಶಿವಮಾಲಿಂಗ ವರ ಶಂಭೊ ಗಿರಿವಾಸ ಶಂಕರ ಮಾಲಿಂಗ ಉರಗ ಭೂಷಣ ಗಂಗಾಧರನೆ ಮಾಲಿಂಗ ಪರದೈವ ಶಶಿಮೌಳಿ ಗರುವ ಮಾಲಿಂಗ 1 ಖಂಡಲಪತಿಯೆ ದೋರ್ದಂಡ ಮಾಲಿಂಗ ತಂಡದ ಸುರರೊಳ್ ನಂಜುಂಡ ಮಾಲಿಂಗ ರುಂಡಮಾಲೆಯ ಧರಿಸಿಕೊಂಡ ಮಾಲಿಂಗ ಕೆಂಡಾಕ್ಷತೇಜ ಮಾರ್ತಾಂಡ ಮಾಲಿಂಗ 2 ಮಾರಹರನೆ ಶ್ರುತಿಸಾರ ಮಾಲಿಂಗ ಧೀರ ಬಾಣನ ದ್ವಾರ ಸಾರಿ ಮಾಲಿಂಗ ಮೂರುಪುರ ವೀರ ಸಂಹಾರಿ ಮಾಲಿಂಗ ಘೋರ ಸಂಸಾರ ಭವದೂರ ಮಾಲಿಂಗ 3 ಬ್ರಹ್ಮಾದಿ ಸುರವಂದ್ಯ ಹರ್ಮಿ ಮಾಲಿಂಗ ನಿರ್ಮಲ ರೂಪಕ ಧರ್ಮಿ ಮಾಲಿಂಗ ಕರ್ಮಬಂಧದ ನರವರ್ಮಿ ಮಾಲಿಂಗ ಉರ್ವಿಯೊಳು ನೀ ಬಹಳ ಪೆರ್ಮಿ ಮಾಲಿಂಗ 4 ನೀಲಕಂಠನೆ ನಿಗಮಶೀಲ ಮಾಲಿಂಗ ಪಾಲ ಕರಶೂಲ ಕಪಾಲಿ ಮಾಲಿಂಗ ಕಾಲ ಕಲ್ಪಾಂತಕ ಜಾಲ ಮಾಲಿಂಗ ಲೋಲಾಸ್ಥಿಮಾಲ ಸುರಮೂಲ ಮಾಲಿಂಗ 5 ಪ್ರಣವ ರೂಪಕ ಪಾರ್ವತಿ ಮಾಲಿಂಗ ತ್ರಿಣಯ ಗಣಸೇವಪರ ಧಣುರೆ ಮಾಲಿಂಗ ಮಣಿ ಕರ್ಣಾಭರಣ ಮಾಲಿಂಗ ಅಣುಮಹಾರೂಪ ಗುಣನಿಧಿಯೆ ಮಾಲಿಂಗ 6 ಪಂಥ ಬೇಡೆನ್ನೊಳು ನಿಶ್ಚಿಂತ ಮಾಲಿಂಗ ಸಂತತ ಸಲಹೆನ್ನ ಕಾಂತ ಮಾಲಿಂಗ ಅಂತರಾತ್ಮಕನಾದ ಶಾಂತ ಮಾಲಿಂಗ ಚಿಂತಿತಾರ್ಥವ ತೋರುವಂಥ ಮಾಲಿಂಗ 7 ಬೇಡಿದ ವರಗಳ ನೀಡೊ ಮಾಲಿಂಗ ಮಾಡಿದ ಸೇವೆಯ ನೋಡೊ ಮಾಲಿಂಗ ಜೋಡಾಗಿ ನಿನ್ನೊಳು ಕೂಡೊ ಮಾಲಿಂಗ 8 ಭೂಮಿಗೆ ವರಾಹತಿಮ್ಮಪ್ಪನಂತೆ ಗ್ರಾಮ ಮಂದಿರದೊಳು ನೆಲಸಿಹನಂತೆ ಪ್ರೇಮದಿ ಅದನೆಲ್ಲ ಕಡಿದುಕೊಡುವಂತೆ ಈ ಮಹಾ ಮಾಲಿಂಗ ಸ್ವಾಮಿ ದಯವಂತೆ 9
--------------
ವರಹತಿಮ್ಮಪ್ಪ
ಸಾರಿಭಜಿಸಿರೋ 'ಜಯರಾಯರಂಘ್ರಿಯಪಾರುಮಾಳ್ಪರಾ ಸಂಸಾರಸಾಗರಾ ಪದೇಶ ದೇಶವಾ ಪರದೇಶಿಯಂದದಿಬ್ಯಾಸರಿಲ್ಲದೆ ತಿರುಗಿ ಕಾಶಿಗ್ಹೋದರು 1ಸಪ್ನದಲ್ಲಿ ಶ್ರೀ ಪುರಂದರದಾಸರಾಯರುವ್ಯಾಸಕಾಶಿಯಲ್ಲಿ ದಾಸ ದೀಕ್ಷೆಕೊಟ್ಟರು2ಬಾು ತೆರೆುತು ನಾಲಿಗೆ ಮೇಲೆ ದಾಸರು'ಜಯ'ಠ್ಠಲಾ ಎಂದು ಬರೆದು ಬಿಟ್ಟರು 3ಎಚ್ಚರಾುತು ದಿವ್ಯ ಜ್ಞಾನ ಹುಟ್ಟಿತು ಧೈನ್ಯ ಓಡಿತು ಹರಿಯ ಧ್ಯಾನ ಹತ್ತಿತು 4ದಾಸರಾದರು ಹರಿಯ ದಾಸರಾದರು ಕೂಸೀಮಗ ದಾಸ 'ಜಯದಾಸರಾದರು 5ಹರಿಯ ಶ್ರೇಷ್ಠತೆ 'ಂದೆ ಒರೆಗೆ ಹಚ್ಚಿದಾಭೃಗುಮರ್ಹಯೇ ನಮ್ಮ 'ಜಯದಾಸರು6ಪಾಪಕಳೆವರು ಭಕ್ತರ ತಾಪಕಳೆವರುಭೂಪತಿ'ಠ್ಠಲನ ಅಪರೋಕ್ಷ ಮಾಳ್ಪರು 7
--------------
ಭೂಪತಿ ವಿಠಲರು