ಒಟ್ಟು 2434 ಕಡೆಗಳಲ್ಲಿ , 116 ದಾಸರು , 1874 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುನಿರಾಯಗೊಂದಿಸುವೆನನು ದಿನದಲಿ ಮನವಚನಕಾಯದಿಂ ಮರೆಯದಲೆ ಗುರು ಮಧ್ವ ಪ ವಾಸುದೇವ ಅಮಾನವಪ್ರತಿಮ ವಿಷ್ಣು ಹರಿ ದಾಸವರ ಪ್ರಥುಧಿ ತ್ರಿಜಗದ್ಗುರು ವರ ಶ್ವಾಸಪತಿ ಚತುರಧೀ ತ್ರಿಜಗದ್ಗುರುವರೇಣ್ಯ ಬೋಧ 1 ವಿಭುವಿಶ್ವವಿತುಪೂರ್ಣ ಬೋಧಾಲವ ಸುಬುದ್ಧಿ ತ್ರಿಭುವನಾಲಯ ಧಿಷಣ ಭೂರಿಚೇತಾ ಅಮಿತ ಬುದ್ಧಿ ಸುಖತೀರ್ಥ ಜಗ ದಭಿವಂದ್ಯದಭ್ರಚೇತಸ ಮಹಾಮನ ಮಧ್ವ2 ಸೂರಿಮಸ್ತಕ ಮುಕುಟ ಸಕಳಜ್ಞ ಸರ್ವವಿತ್ ಮಾರುತಾತ್ಮಜ ಪೂರ್ಣ ಪುಷ್ಠ ಬುದ್ಧಿ ವೃಜಿನ ನಾಶಕನಂತ ಕವಿ ಲೋಕನಾಯಕ ಪ್ರಾಜ್ಞ 3 ಆನಂದತೀರ್ಥ ಗುರು ಬುದ್ಧಿ ಸುಖತೀರ್ಥ ಅನು ಮಾನಯತಿ ಸಂಮೋದ ಹಂಸರಾಟ್ ಚಾರು ಕೃತಾಂತವಿತ್ ಮಹಾ ಮಾನಸ ಪ್ರ್ರಮೋದಾರ್ಯವರ್ಯ ವಿದ್ಯಾಧಿಪತಿ4 ಭುವನ ಭೂಷಣ ವ್ಯಾಸಶಿಷ್ಯ ಅಜಸಮ ಧನ್ಯ ಪ್ರವರ ಪ್ರಾಜ್ಞಾರ್ಯ ಧ್ವಸ್ತದುರಾಗಮ ಕವಿರಾಯಾ ಸುಹೃತ್ ಅಖಿಳಜ್ಞ ದಶಧಿಷಣನೆ ಅವಿರಳ ಜಗನ್ನಾಥ ವಿಠಲನಿಗತಿ ಪ್ರಿಯ 5
--------------
ಜಗನ್ನಾಥದಾಸರು
ಮುರಳೀ ಮನೋಹರ ವಿಠಲ | ಪೊರೆ ಇವಳಾ ಪ ಗುರು ರಾಘವೇಂದ್ರರ್ಗೆ | ತೋರ್ದ ಶಿರಿಕೃಷ್ಣಾ ಅ.ಪ. ಸಿರಿ | ನರಸಿಂಹ ಮೂರುತಿಯೆಚಂದದಲಿ ಸುಜ್ಞಾನ | ದೊಂದು ಅಂಕುರವಾ |ಸಂದೇಹ ವಿಲ್ಲದಲೆ | ಅಂದು ಸ್ವಪ್ನದಿ ತೋರಿಮಂದಳನ ಉದ್ಧಾರ | ವೆಂದು ಸೂಚಿಸಿದೇ 1 ಭಯ ಕೃತುವು ಭಯನಾಶ | ವಿಯದಧಿಪ ಗೊಲಿದವನೆನಯ ವಿನಯದಿಂ ಬೇಡ್ವ | ಹಯಮೊಗನ ದಾಸ್ಯದಯದಿ ಕೊಟ್ಟವಳೀಗೇ | ಭಾಗ್ಯ ವೈರಾಗ್ಯವನುದಯೆಗೈದು ಹೇಯೊ ಸಾ | ದೇಯಗಳ ತಿಳಿಸೋ 2 ಹರಿಯು ನೀ ನಿತ್ತುದಕೆ | ಉರುತರದ ತೃಪ್ತಿಯನುಅರಿತಿಹಳು ಈ ಗೃಹಿಣಿ | ಪರಿಸರೇಡ್ಯಾ |ದುರಿತ ರಾಶಿಗಳಳಿದು | ಹರುಷವನೆ ಸುಡಿಸುವುದುಶರಣ ಜನ ಮಂದಾರ | ಕರುಣಾಬ್ಧಿ ಹರಿಯೇ 3 ಮಧ್ವಮತ ಪದ್ಧತಿಗ | ಳುದ್ಧರಿಸ ಇವಳಲ್ಲಿಶ್ರದ್ಧೆ ಭಕುತಿಯು ಜ್ಞಾನ | ಮಧ್ವಮತದೀಕ್ಷಾವೃದ್ಧಿಗೈಸಿವಳಲ್ಲಿ | ಶುದ್ಧ ಆನಂದಾತ್ಮಅಧ್ವರೇಡ್ಯನೆ ಅನಿ | ರುದ್ಧ ಮೂರುತಿಯೇ 4 ಮೋದ ಮೋದ ಬಡಿಸಿವಳಾ 5
--------------
ಗುರುಗೋವಿಂದವಿಠಲರು
ಮುಳ್ಳು ಮೊನಿಯ ಮ್ಯಾಲ ಮೂರು ಕೆರಿಯ ಕಟ್ಟಿಎರಡು ಹೂಳು, ಒಂದು ತುಂಬಲೆ ಇಲ್ಲ 1 ತುಂಬದ ಕೆರೆಗೆ ಮೇಯಾಕ ಬಂದವು ಮೂರು ಎಮ್ಮಿಎರಡು ಗೊಡ್ಡು ಒಂದು ಕಂದು ಹಾಕಿ ಕರುವೇ ಇಲ್ಲ 2 ಕರುವಿಲ್ಲದ ಎಮ್ಮಿಯ ಕೂಡಿದರ ಮೂವರು ಹೆಣ್ಮಕ್ಕಳಾಇಬ್ಬರು ಬಂಜಿಯರು, ಒಬ್ಬಾಕಿ ಹಡೆದೇ ಇಲ್ಲ 3 ಹಡೆಯದ ಹೆಣ್ಣ ಕೂಡಿಕೊಂಡರು ಮೂವರು ಕುಂಬಾರರುಇಬ್ಬರು ಚೊಂಚರು, ಒಬ್ಬಗೆ ಕೈಯೇ ಇಲ್ಲ 4 ಕೈಯಿಲ್ಲದ ಕುಂಬಾರ ಮಾಡಿಕೊಟ್ಟ ಮೂರು ಮಡಿಕಿಗಳಎರಡು ದದ್ದು, ಒಂದಕೆ ತಳವೆ ಇಲ್ಲ5 ತಳವಿಲ್ಲದ ಮಡಕಿಗಿ ಕೊಟ್ಟಾರ ಮೂರು ರೊಕ್ಕಎರಡು ನಕಲು, ಒಂದು ಸವಕಲು 6 ಸವಕಲು ರೊಕ್ಕದಾಗ ಕುಚ್ಚಲಿಕೆ ತಂದಾರ ಮೂರ ಕಡುಬಎರಡು ಕುದಿಯಲಿಲ್ಲ ಒಂದು ಬೇಯಲಿಲ್ಲ 7 ಬೇಯದ ಕಡುಬಿಗಿ ಬಂದಾರ ಮೂವರು ಬೀಗರಇಬ್ಬರು ಬೊಚ್ಚರು, ಒಬ್ಬಗೆ ಹಲ್ಲೇ ಇಲ್ಲ 8 ಹಲ್ಲಿಲ್ಲದ ಬೀಗನಿಗೆ ಕೊಟ್ಟಾರ ಮೂರು ಚಿಕಣಿ ಅಡಕಿಎರಡು ಗೋಟು, ಒಂದು ಸಿಡಿದು ಕಾಣೆಯಾಯಿತು 9 ಕಾಣೆಯಾದ ಅಡಿಕಿಯ ನೋಡಾಕಂತ ಹೋಗ್ಯಾರ ಮೂರ ಮಂದಿಇಬ್ಬರು ಒಂಚೊರಿ, ಒಬ್ಬಗೆ ಕಣ್ಣೇ ಇಲ್ಲ10 ಕಣ್ಣಿಲ್ಲದವನ ಕರೆತರಬೇಕಂತ ಹೋಗ್ಯಾರ ಮೂರ ಮಂದಿಇಬ್ಬರು ಕುಂಟರು, ಒಬ್ಬಗೆ ಕಾಲೇ ಇಲ್ಲ 11 ಕಾಲಿಲ್ಲದವನ ಹೊತ್ತು ತರಬೇಕಂತ ಹೋಗ್ಯಾರ ಮೂರು ಮಂದಿ ಇಬ್ಬರು ಲಂಡರು, ಒಬ್ಬ ಮೊಂಡ 12 ಕಾಗಿನೆಲೆ ಕನಕದಾಸ ಹಾಕಿದ ಮುಂಡಗಿಇದ ತಿಳಿದವ ಜಾಣ. ಒಡೆದು ಹೇಳಿದವ ಕೋಣ13
--------------
ಕನಕದಾಸ
ಮೂರು ಜಗವ ಕುಣಿಸುವಂಥ ಗಾರುಡಿಗ ಇವ ದಾರಕ್ಕ ನಾರಾಯಣನಲ್ಲವೇನೆ ನಾರಿ ಕೇಳೆ ತಂಗಿ ಪ. ಧೀರ ಬಲುಗಂಭೀರ ಮತ್ಸ್ಯವತಾರ ಕಾಣೆ ತಂಗಿ 1 ಹತ್ತೂ ನಾಲ್ಕು ರತ್ನವ ತೆಗೆದು ಮತ್ತೆ ಇವ ದಾರಕ್ಕ ಕೂರ್ಮ ಕಾಣೆ ತಂಗಿ 2 ಧರಣಿಯ ಸುರುಳಿ ಸುತ್ತಿದಂಥ ಅರಸ ಇವ ದಾರಕ್ಕ ವರಾಹ ಕಾಣೆ ತಂಗಿ 3 ನಂಬಿದವರ ಕಂಬದೊಳು ಎಂಬೆ ಇವ ದಾರಕ್ಕ ರಂಭೆ ಹೇಮದ ಬೊಂಬೆ ನರಸಿಂಹ ಕಾಣೆ ತಂಗಿ 4 ಕದ್ದು ಅಡ್ಡ ಬಿದ್ದನ ಕಣ್ಣ ಇರಿದ ಇವ ದಾರಕ್ಕ ಮುದ್ದು ಮುಖದ ಪ್ರಸನ್ನನಾದ ವಾಮನ ಕಾಣೆ ತಂಗಿ 5 ಆ ಮಾತೃ ದ್ರೋಹವ ಮಾಡಿದವ ಇವ ದಾರಕ್ಕ ಶಾಮ ಸಾರ್ವಭೌಮ ಪರಶುರಾಮ ಕಾಣೆ ತಂಗಿ 6 ಕಾಮಿನಿಯ ಪೋಗಿ ತಂದ ಭೀಮ ಇವ ದಾರಕ್ಕ ಕಾಮಿತಾರ್ಥವನೀವ ಶ್ರೀ ರಾಮ ಕಾಣೆ ತಂಗಿ 7 ಗೊಲ್ಲತೇರ ಗಲ್ಲವ ಪಿಡಿದ ಚೆಲುವ ಇವ ದಾರಕ್ಕ ಬಲ್ಲಿದ ಮಲ್ಲರ ಮರ್ದಿಸಿದಂಥ ಕಳ್ಳ ಕೃಷ್ಣ ಕಾಣೆ ತಂಗಿ 8 ತ್ರಿಪುರದೊಳು ಚಪಲಾಕ್ಷಿಯರ ವಿಪರೀತವ ಮಾಡಿದನಕ್ಕ ಅಪರಿಮಿತ ಮಹಿಮನಿವ ಚಪಲ ಬೌದ್ಧ ಕಾಣೆ ತಂಗಿ 9 ಕುದುರೆಯೇರಿ ಎದುರಿಗೆ ಬರುವ ಚದುರ ಇವ ದಾರಕ್ಕ ಮಧುವನಿಕ್ಕಿದ ಮಧುರಾಪುರದ ಚದುರ ಕಲ್ಕಿ ತಂಗಿ 10 ಮೂರ್ತಿ ಗೋವಿಂದ ಇವ ದಾರಕ್ಕ ನಂದನ ಕಂದ ಹೆಳವನಕಟ್ಟೆ ರಂಗ ಕಾಣೆ ತಂಗಿ11
--------------
ಹೆಳವನಕಟ್ಟೆ ಗಿರಿಯಮ್ಮ
ಮೂರು ತುಂಡಾದ ಹನುಮನ ನೋಡಿರÉ ಪ. ಮಾರುತಿಯ ಮರ್ಮವಿದರಿಂದರಿಯರೆ ಅ.ಪ. ಮೊದಲ ಕಟ್ಟೆಯ ದಡದಿ ಮೊದಲಿದ್ದ ಹನುಮನ ವಿಧಿವಶದಿ ಖಳರು ಕಿತ್ತೊಗೆಯೆ ಮದದಿ ಮೊದಲು ಕಟ್ಟೆಯು ನಿಲದೆ ಒಡೆದು ಪರಿಯಲು ತುಂಗೆ ಅದರೊಳಡಗಿದ್ದ ಕೆಲಕಾಲವೀ ರಾಯ 1 ದೇವರಿಲ್ಲದ ಭವನ ಕಂಡು ನಿಂದು ತಾವೆ ಸ್ಥಾಪಿಸುವೆವೆಂಬನಿತರೊಳು ಸ್ವಪ್ನದಲಿ ಪಾವಮಾನಿಯು ತನ್ನ ಇರುವು ತೋರಿದನೊ 2 ಬರುತ ಕಟ್ಟೆಯ ದಿಡಗಿನಲ್ಲಿ ನಿಂದು ಕರೆವಡೆ ಬರಲು ಮೂರು ತುಂಡು ಹನುಮರಾಯ ತರುತ ಸ್ಥಾಪಿಸಿ ಬಂಧಿಸಲು ದ್ವಾರವಾರದಲಿ ಕರನ್ಯೂನ ಸಾಕಾರ ಸರಿಯಾದನೀತ 3 ಮೂರು ಯುಗದಲಿ ತಾನು ಮೂರು ರೂಪವ ತಾಳಿ ಮೂರು ಮೂರ್ತಿಯ ಭಜಿಸಿ ಮೂರು ಆಶ್ರಮದಿ ದುರುಳ ಮತಗಳ ಮುರಿದು ಮೂರುದಶ ಏಳು ಗ್ರಂಥಗಳ ಸ್ಥಾಪಿಸಿದ 4 ಮೂರು ಗುಣಬದ್ಧ ಮೂರು ದೇಹದಿ ನೆಲಸಿ ಮೂರು ವಿಧ ಜಪದಿಂದ ಮೂರ್ಗತಿಯನೀವ ಮೂರು ಸ್ಥಾನದಿ ಮೂರು ಕೋಟಿರೂಪವ ಧರಿಸಿ ಮೂರು ಲೋಕದಿ ಮೆರೆವ ಮಾರುತಿಯ ಚರ್ಯ 5 ಮೂರು ನಾಡಿಯ ಮಧ್ಯೆ ಮೂರೈದುದಲ್ಲಿ ತೋರುವೊ ಹರಿರೂಪ ತೋರಿಸುವನು ಮೂರು ಅವಸ್ಥೆಗಳ ವಿೂರಿದ ಜಾಗ್ರತನು ಮೂರು ಕಾಲದಿ ಜೀವರನು ಕಾಯುವನ 6 ಮೂರು ಮಾರ್ಗಗಳಿಂದ ಮಾರುತಿಯ ತೋರುವೊ ದಾರಿಯಿಂದಲಿ ಹರಿಯ ಸಾರಿ ಭಜಿಸೆ ಸೇರಿಸುವ ಗೋಪಾಲಕೃಷ್ಣವಿಠ್ಠಲನ ಪುರವ ತಾರಿಸುವ ಭವವನಧಿ ಮೊದಲಗಟ್ಟೇಶ7
--------------
ಅಂಬಾಬಾಯಿ
ಮೂರ್ತಿ ಧೃತ ಹೇಮವರ್ಣ ಸರ್ವಾಂಗ ಶೋಭಿತೆ ಕಾಮಿತಾರ್ಥ ಉದಾರಿಣಿ ಕುಂಡಲ ಪಾಣಿ ಪಾತ್ರ ಸುಧಾರಿಣಿ ಸೂರ್ಯ ಸುರಮುನಿಸ್ತೋಮ ಹೃದಯ ಸಂಚಾರಿಣಿ ಕಾಲ ಕಠಾರಿ ಪರಶಿವೆ 1 ಅಂಬುಜಾನನೆ ಸಕಲ ಕುಟುಂಬ ರಕ್ಷಕ ಮೋಹಿನಿ ಶಂಭುದಾನವ ಶಿಕ್ಷಿತೆ ಶಿವ ಪ್ರತಿಬಿಂಬೆ ಸಿಂಹ ಸುವಾಹಿನಿ ಕಂಬುಕಂಧರ ರತ್ನ ಭೂಷಿತೆ ತುಂಬರ ಪ್ರಿಯಗಾಯಿನಿ ಕುಮುದ ಲೋಚನೆÀ 2 ವರದ ಅಭಯ ಕರಾಂಬುಜೇಷಣೆ ವೀಣಾ ಪುಸ್ತಕ ಶೋಭಿತೇ ಪರಮ ಪಾವನ ಚರಿತೆ ಪರಮೇಶ್ವರಿ ಪ್ರತಾಪ ವಿರಾಜಿತೆ ಭರಿತ ಬಂಧ ಕಟಾದಿವಾಸಿನಿ ಭಕ್ತ ಸಜ್ಜನ ಪೂಜಿತೆ ಗುರು ವಿಮಲಾನಂದ ದೇವಿ ಶ್ರೀ ಮಹಾಲಕ್ಷ್ಮೀ ಸಂತತ 3
--------------
ಭಟಕಳ ಅಪ್ಪಯ್ಯ
ಮೂರ್ತಿ ಶರಣರ ಸಾರ್ಥಿ ಪ ಮರಹು ಬಿಡಿಸಿ ತನ್ನ ಅರವಿನೊಳಿಟ್ಟು | ಬೀರುವ ನಿಜ ಸ್ಫೂರ್ತಿ 1 ಮೂರ್ತಿ 2 ಪೂರಿಪ | ಮನದಾರ್ತಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರ್ತಿ ಹರಿ ಎಲ್ಲ ಕೇಳುವುದೆಲ್ಲ ನಿನ್ನ ಕೀರ್ತಿ ಪ ಎಲ್ಲ ಸಾರುವುದೆಲ್ಲ ನಿನ್ನ ವಾರ್ತಿ ಎಲ್ಲೆಂದರಲ್ಲೆ ನಿನಗೆ ಶರಣಾರ್ಥಿ ಅ.ಪ ಕಲ್ಲಿನಲ್ಲಿ ನಿನಗೆ ಶರಣಾರ್ಥಿ ನೆಟ್ಟ ಮುಳ್ಳಿನಲ್ಲಿ ನಿನಗೆ ಶರಣಾರ್ಥಿ ಕಳ್ಳರಲ್ಲಿ ನಿನಗೆ ಶರಣಾರ್ಥಿ ಮಹ ಕುಳ್ಳರಲ್ಲಿ ನಿನಗೆ ಶರಣಾರ್ಥಿ ವೈರಿ ಕೊಲ್ಲಲುಬರಲವ ರಲ್ಲೆ ನಿನಗೆ ಬಹು ಶರಣಾರ್ಥಿ 1 ಊರೊಳು ನಿನಗೆ ಶರಣಾರ್ಥಿ ಮಹ ದಾರಣ್ಯದಲಿ ನಿನಗೆ ಶರಣಾರ್ಥಿ ಘೋರತಾಪದಿ ನಿನಗೆ ಶರಣಾರ್ಥಿ ಬಿಡದಾ ಪಾರ ಸೌಖ್ಯದಿ ನಿನಗೆ ಶರಣಾರ್ಥಿ ಸಾರವಿಲ್ಲದ ಸಂಸಾರದಿ ನಿನಗೆ ಬಾರಿಬಾರಿಗೆ ಬಹು ಶರಣಾರ್ಥಿ 2 ನಿನಗೆ ಜಾಗ್ರದಲಿ ಶರಣಾರ್ಥಿ ಬಿದ್ದ ಕನಸಿನಲಿ ನಿನಗೆ ಶರಣಾರ್ಥಿ ಘನ ನಿದ್ರದಿ ನಿನಗೆ ಶರಣಾರ್ಥಿ ಬಿಡ ದನುದಿನದಲಿ ನಿನಗೆ ಶರಣಾರ್ಥಿ ತನುಮನಧನದಲಿ ಜನಕ ಶ್ರೀರಾಮ ನಿನಗೆಣಿಕಿಲ್ಲದ ನಿಜ ಶರಣಾರ್ಥಿ 3
--------------
ರಾಮದಾಸರು
ಮೃಡ ಫಣೀಂದ್ರವೀಂದ್ರ ವಂದ್ಯ ಕಡಲಶಯನ ಶ್ರೀನಿವಾಸ ಒಡೆಯನಾಜ್ಞೆಯಿಂದಲೆನಗೆ ಪ. ಜೀವಗಣಪತೆ ಸರ್ವದೇವತಾಗತೆ ಪಾವನಾತ್ಮ ಪದ್ಮ ಸಮಕರಾವಲಂಬಿತ್ತು ಬೇಗ 1 ಮೂರು ತಾಪವಾ ಹತ್ರ ಸೇರದಂದದಿ ಅದರ ಬೇರ ಕಡಿದು ಭಕ್ತಿಸಾರ ಧಾರದಿಂದ ದೃಢವ ಮಾಡಿ 2 ಕೈಟಭಾರಿಯ ಪುರದ ಭಾಟದಾರಿಯ ಬೇಟ ಜಲಟ ಕುಕ್ಕುಟಗಳ ನೋಟಾಪಾಟದೊಡನೆ ತೋರಿ 3 ಹರಿಯ ದೊರೆತನ ಕರುಣಿಕಾಗ್ರಣಿ ಕಮಲ ಕರವ ಎನ್ನ ಶಿರದೊಳಿಕ್ಕಿ 4 ನಿನ್ನ ಕರುಣವು ನಿಯತವಾಗಲು ಪನ್ನಗಾಚಲೇಂದ್ರ ದಯದಿ ತನ್ನ ದಾಸನೆಂದು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮೃಡದೇವ ಭವ್ಯ ಸ್ವರೂಪ ಜಡೇಂದ್ರ | ಗುರು ಜಿತಕೋಪ ಪ ಪರ ಉಪಕಾರಿ ಅಸಮ ಸುಗುಣ ಗಂಭೀರ ಉದಾರಿ ಎಸೆವ ರುದ್ರಾಕ್ಷಿ ಸುಮಾಲಾಧಾರಿ 1 ದೀನ ಜನಾಭಿಮಾನ ಸಂಪ್ರೀತ ಮಾನಿತ ನಿರ್ಮಲ ಹೃದಯ ದಯಾನ್ವಿತ ಧ್ಯಾನಿತ ಹರಿಪದ ಮಾನಸÀ ನಿಜ 2 ಗ್ರಾಮ ಬಲ್ಲಟಗಿ ಶಿವಮಠಾಧೀಶ ಪಾಮರ ಜನರಘು ಗರ್ವವಿನಾಶ ಶಾಮಸುಂದರ ಸಖ ಸ್ವಾಮಿ ಚಿನ್ಮಯ ಕೈಲಾಸವಾಸ 3
--------------
ಶಾಮಸುಂದರ ವಿಠಲ
ಮೆರೆದೆ ಮಹಿಮೆ ಉದಾರ ನಮ್ಮಗುರು ಭೀಮಸೇನ ಸುಧೀರ ಪ. ಮಂಗಳ ಮಹಿಮ ವಿಹಾರ ಮಾಯವಾದಿಗಳಿಗತಿ ಕ್ರೂರ ಅ.ಪ. ಹರಿಯ[ನಿರೂಪ] ವ ಧರಿಸಿ ಮರುತ ಕುಂತಿಯೊಳವತರಿಸಿಹರನೊಳು ವಾದಿಸಿ ಜೈಸಿ ಹರಿಸರ್ವೋತ್ತಮನೆಂದೆನಿಸಿ 1 ಬಕ ಹಿಡಿಂಬಕ ಕೀಚಕ ಜರಾಸುತರ ಮಣಿಮಂತ ಕೀಚಕ ದುರ್ಜನರಸಕಲ ಕೌರವ ಅತಿರಥರ ಕೊಂದು ಸುಖಪಡಿಸಿದೆ ಸಹೋದರರ 2 ಜ್ಞಾನಭಕುತಿಸಂಪನ್ನ ಅಜ್ಞಾನಾರಣ್ಯಛೇದನ ಮುದ್ದುಜ್ಞಾನೇಂದ್ರ ಹಯವದನನ್ನ ಧ್ಯಾನದೊಳಿರಿಸು ಪ್ರಸನ್ನ 3
--------------
ವಾದಿರಾಜ
ಮೇಲು ಕೋಟೆ ತಿರುನಾರಾಯಣ ಚರಣಂ ಶರಣಂ ಸುರ ಮುನಿ ವಲಯಂ ಯದುಗಿರಿನಿಲಯಂ ಪ ಗುರುರಾಮಾನುಜ ಹೃದಯಭರಣಂ ಸ್ಮರವರ ಸುಂದರಮನಿಶಂ ಸದಯಂ ಅ.ಪ ಯತಿರಾಮಾನುಜ ಶೆಲ್ವಕುಮಾರಂ ಪತಿತಪಾವನ ಮಾಯುತ ಮಣಿಹಾರಂ ಸತತಾನಂದದ ಪುಣ್ಯಶರೀರಂ ಶತಪತ್ರಾಯುತ ನೇತ್ರಮುದಾರಂ 1 ವಿರಾಜಿತ ಮಸ್ತಕಮಮಲಂ ಪರಮ ವೈಭವೋತ್ಸವ ರಾರಾಜಿತ ಪುರುಷೋತ್ತಮ ಕೇಶವ ಮಾಲೋಲಂ 2 ಪರಮ ಪುಣ್ಯತೀರ್ಥಾಕರ ಶೋಭಿತ ನರಹರಿ ಗಿರಿಸಂಭೂಷಿತ ಧಾಮಂ ನಿರುತ ದಯಾಕರ ಮಾಂಗಿರಿಪತಿ ಭೂ ಮಾಧವ ಜಗದಭಿರಾಮಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೇಲ್ ಮೇಲ್ ಮೇಲ್ ಮೇಲ್ ಹರಿನಾಮ ಮೇಲು ಮೂಜಗಸೂತ್ರ ಹರಿನಾಮ ಪ ಕಾಲಕುಜನಕುಲ ಹರಿನಾಮ ಪಾಲಸುಜನಗಣ ಹರಿನಾಮ ಜಾಲಮಾಯ ದರ್ಪಣ್ಹರಿನಾಮ ವಿಶ್ವ ಹರಿನಾಮ ಅ.ಪ ಶರನಿಧಿಮಂದಿರ ಹರಿನಾಮ ಶರಧಿಮಥನ ಮುರಹರಿನಾಮ ಪುರತ್ರಯಸಂಹರ ಹರಿನಾಮ ಸುರಗಣಭೋಜನ ಹರಿನಾಮ ಶರಣರ ಸಿರಿತಾನ್ಹರಿನಾಮ ಪರತರ ಪಾವನ ಹರಿನಾಮ1 ಶಾಪವಿಮೋಚನ ಹರಿನಾಮ ತಾಪತ್ರಯಗಳ್ಹರ ಹರಿನಾಮ ಗೋಪೇರಾನಂದ ಲೀಲ ಹರಿನಾಮ ಕಪಾಲಧರನುತ ಹರಿನಾಮ ಗೌಪ್ಯಕೆ ಗೌಪ್ಯದ ಹರಿನಾಮ 2 ದುರಿತ ದಾರಿದ್ರ್ಯ ದೂರ್ಹರಿನಾಮ ಪರಿಹರ ಜರಾಮರಣ್ಹರಿನಾಮ ನರನ ಸಿರಿಯ ಭಾಗ್ಯ ಹರಿನಾಮ ಸುರತರು ಹರಿನಾಮ ಅರಿವಿನ ಅರಮನೆ ಹರಿನಾಮ ಪರಕ ಪರಮಸಿರಿ ಹರಿನಾಮ 3 ನಿಜಮತಿ ಭಂಡಾರ ಹರಿನಾಮ ಕುಜಮತಿ ಖಂಡನ ಹರಿನಾಮ ಭಜಕರನಿಜಧೇನ್ಹರಿನಾಮ ಭುಜಗಾದ್ರಿ ಪರ್ಯಂಕ ಹರಿನಾಮ ದ್ವಿಜರಿಗಮೃತನಿಧಿ ಹರಿನಾಮ ಅಜನಿಗುತ್ಪತ್ತಿ ಮಂತ್ರ ಹರಿನಾಮ 4 ವೇದಗಳಾಧಾರ ಹರಿನಾಮ ಸಾಧುಸಂತ ಪ್ರೇಮ ಹರಿನಾಮ ಭೇದವಾದÀರಹಿತ್ಹರಿನಾಮ ಸಾಧಿಸಲಸದಲ ಹರಿನಾಮ ಆದಿ ಅನಾದಿವಸ್ತು ಹರಿನಾಮ ಭೋಧ ಸ್ವಾದಸಾರ ಹರಿನಾಮ 5 ಕಾಲ ಹರಿನಾಮ ಕೀಳರ ಎದೆಶೂಲ್ಹರಿನಾಮ ಶೀಲರ ಜಪಮಾಲ್ಹರಿನಾಮ ಲೋಲಗಾನಪ್ರಿಯ ಹರಿನಾಮ ಕೀಲಿ ವೇದಾಂತದ ಹರಿನಾಮ ಫಾಲನೇತ್ರಗೆ ಶಾಂತಿ ಹರಿನಾಮ 6 ಪ್ರಳಯಕೆ ಅಳುಕದ ಹರಿನಾಮ ಪ್ರಳಯ ಪ್ರಳಯಗೆಲುವ್ಹರಿನಾಮ ಮಲಿನದಿ ಸಿಲುಕದ ಹರಿನಾಮ ಚಲಿಸದ ನಿರ್ಮಲ ಹರಿನಾಮ ಬೆಳಗಿನ ಬೆಳಗೀ ಹರಿನಾಮ ಕುಲಮುನಿ ಪಾವನ ಹರಿನಾಮ 7 ವಿಷಮಸಂಸಾರಖಡ್ಗ ಹರಿನಾಮ ವ್ಯಸನಕಾಷ್ಠಕಗ್ನಿ ಹರಿನಾಮ ವಿಷಕೆ ಮಹದಮೃತ ಹರಿನಾಮ ಮಸಣಿಮಾರಿಧ್ವಂಸ ಹರಿನಾಮ ಅಸಮಸುಖದ ಋಣಿ ಹರಿನಾಮ ವಸುದೇಜೀವಜೀವಳ್ಹರಿನಾಮ8 ಧರ್ಮಶಾಸ್ತ್ರದ ಗುಟ್ಟು ಹರಿನಾಮ ಮರ್ಮ ತಿಳಿಸುವ ರಟ್ಟು ಹರಿನಾಮ ಕರ್ಮ ಕಡಿಯುವ ಶಸ್ತ್ರ ಹರಿನಾಮ ನಿರ್ಮಲಾನಂದ ಪದವೀ ಹರಿನಾಮ ನಿರ್ಮಾಣ ನಿಜಜ್ಞಾನ ಹರಿನಾಮ ಬ್ರಹ್ಮಕಿಟ್ಟಿಗುರಿ ಹರಿನಾಮ 9 ಭವಗುಣಮರ್ದನ ಹರಿನಾಮ ಭವನಿಧಿ ಸೇತುವೆ ಹರಿನಾಮ ಭವನ ಭೀತಿಹರ ಹರಿನಾಮ ರವಿಕುಲ ಪಾವನ ಹರಿನಾಮ ಬುವಿತ್ರಯ ಪವಿತ್ರ ಹರಿನಾಮ ಸಾಯುಜ್ಯಪದಸ್ಥಾನೀ ಹರಿನಾಮ 10 ಸತ್ಯಕ್ಕೆ ಬಹು ನಿರ್ಕು ಹರಿನಾಮ ಮಿಥ್ಯಕ್ಕೆ ಅನರ್ಥ ಹರಿನಾಮ ನಿತ್ಯಕ್ಕೆ ಮಹಸುರ್ತು ಹರಿನಾಮ ಚಿತ್ತಕ್ಕೆ ಚಿಜ್ಜ್ಯೋತಿ ಹರಿನಾಮ ಅರ್ತವರಿಗೆ ಗುರ್ತು ಹರಿನಾಮ ಭೃತ್ಯಜನರ ಮತ್ತು ಹರಿನಾಮ 11 ಮಾಯಕ್ಕೆ ಪ್ರತಿಮಾಯ ಹರಿನಾಮ ಮಾಯ ಕತ್ತಲುನಾಶ ಹರಿನಾಮ ಕಾಯಕ್ಕೆ ಶೋಭಾಯ ಹರಿನಾಮ ಭಾವಕ್ಕೆ ಪರಿಶುದ್ಧ ಹರಿನಾಮ ತಾಯಿತಂದೆ ಜೀವಕ್ಹರಿನಾಮ ಅಮೃತ ಹರಿನಾಮ 12 ಪುಣ್ಯ ಶರಧಿಗೆ ಚಂದ್ರ್ಹರಿನಾಮ ಮನ್ನಣೆ ಮೂಲೋಕದ್ಹರಿನಾಮ ಧನ್ಯರಿಗೆ ಧನ್ಯ ಹರಿನಾಮ ಉನ್ನತ ಸಾಮ್ರಾಜ್ಯ ಹರಿನಾಮ ಮುನ್ನ ಕೈವಲ್ಯಪದ ಹರಿನಾಮ ಸನ್ನಿಧಿ ವೈಕುಂಠ ಹರಿನಾಮ 13 ನಿಗಮಕೆ ಸೊಬಗಿನ ಹರಿನಾಮ ಸುಗುಣರೊಳ್ನೆಲೆಗೊಂಡು ಹರಿನಾಮ ಅಗೋಚರ ಆಗಮಕ್ಹರಿನಾಮ ಸೊಗಸುವ ಭಕ್ತರಲ್ಹರಿನಾಮ ಅಗಜೇಶ ಪೊಗಳುವ ಹರಿನಾಮ ಅಗಜೆಯು ಒಪ್ಪಿದ ಹರಿನಾಮ 14 ವಿಮಲ ಗುಣಗಣ ಹರಿನಾಮ ದಮೆ ದಯಾನ್ವಿತ ಹರಿನಾಮ ಶಮೆ ಶಾಂತಿಮಂದಿರ ಹರಿನಾಮ ಸುಮನಸ ಕಲ್ಪದ್ರುಮ ಹರಿನಾಮ ನಮಿತ ಸುರಾದ್ಯರಖಿಲ ಹರಿನಾಮ ಅಮಿತ ವಿಶ್ವರೂಪ ಹರಿನಾಮ 15 ಮೂರು ಕಾಲದರಿವದ್ಹರಿನಾಮ ಮೂರಾರಿಕ್ಕಡಿಗೈವುದ್ಹರಿನಾಮ ಪಾರಪಂಚ ಪರುಷ್ಹರಿನಾಮ ಸಾರಸೌಖ್ಯಾಂಬುಧಿ ಹರಿನಾಮ ದಾರಿ ವೈಕುಂಠಕ್ಕೆ ಹರಿನಾಮ ಸೇರಿ ದಾಸರನಗಲದ್ಹರಿನಾಮ 16 ಭಕ್ತವತ್ಸಲ ಜಯ ಹರಿನಾಮ ಮುಕ್ತಿದಾಯಕ ಜಯ ಹರಿನಾಮ ಹತ್ತಾವತಾರ ಜಯ ಹರಿನಾಮ ಸತ್ಯ ಶೀಲ ಜಯ ಹರಿನಾಮ ನಿತ್ಯ ನಿರುಪಮ ಜಯ ಹರಿನಾಮ ಕರ್ತು ಶ್ರೀರಾಮ ಜಯ ಹರಿನಾಮ 17
--------------
ರಾಮದಾಸರು
ಮೊದಲಿಗೆ ಜಹದಾರ್ಜಹ ಲಕ್ಷಣ ಸಾಧಿಸಿ | ವಿದಿತದಿ ಅಜಹರ್ಲಕ್ಷಣ ಬೋಧಿಸಿ | ಪದುಳವೆ ಜಹದಾರ್ಜ ಲಕ್ಷಣವನು | ಹೃದಯದಿ ನೆಲೆಗೊಳಿಸಿ | ಇದರ ದರಿಸಿ ಭವದ್ಹೆದರಿಕಿ ಹಾರಿಸಿ ಸದಮಲ ಬ್ರಹ್ಮನ ಕಳೆಯನು ತೋರಿಸಿ | ಮುದದಲಿ ಭಕ್ತರ ಪಾಲಿಪ ಮಹಿಪತಿ | ಗುರುಮೂರ್ತಿ ಶರಣು
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೊರೆಯ ಲಾಲಿಸಬೇಕು ಮರುಗಿ ದಮ್ಮಯ್ಯಾವರದ ಸದ್ಗುರುರಾಯ ವಾಸುದೇವಾರ್ಯ ಪ *ಜನನೀಯ ಜಠರಾದಿ ಜಪಿಸಿದ ಸ್ಥಿತಿಯಾನೆನೆಯಾದೆ ಮರೆತಂಥ ನೀಚಾ ನಾನಯ್ಯಾಸನಿಹವನ ಸೇರಾದೆ ಸುಜ್ಞಾನರಡಿಯಾಕಣುಗೆಟ್ಟು ದಾರಿಯಕಾಣೆ ಗುರುರಾಯಾ 1ಕಾಮಾದಿ ರಿಪುಗಾಳ ಕೂಟದಿ ನಿಂದುಪ್ರೇಮಪಾಶದ ಕಟ್ಟು ಬಿಗಿಯಾಗಿ ಬಂದುಭೀಮಸಂಸಾರದಿ ಬಿದ್ದನಿವನೆಂದುನೀ ಮನಕೆಚ್ಚರ'ತ್ತು ಸೆಳಕೊಂಡು 2ಕೊಳಚೆಯೊಳಿಪ್ಪಾ ಸೂಕರ ವಾಸನೆಯುತೊಲಗಿ ಪೋಗಲಿಯೆಂದು ತೋರ್ಪುದೆ ಮತಿಯುಹೊಲೆದೇಹ ನಾನೆಂಬ ಹಳೆಯ ಸಂಗತಿಯುಬಲಿತಿದೆ ನೀನಿದ ಬಿಡಿಸಿ ಸನ್ಮತಿಯ 3ಸಾಲವ ತಂದು ಸ' ಸ'ಯಾಗಿ ತಿಂದೂಬಾಳುತಿರೇ ಕೊಟ್ಟವ ಬಡ್ಡಿ ಬೇಕೆಂದುಕೇಳಿ ಬಾಧಿಸಲೇತಕೆ ಕಡಗೈದೆನೆಂದುಆಲೋಚಿಪಂತೆಚ್ಚರಾುತೆನಗಿಂದು 4ಬರುವುದು ಸುಖವೆಂದು ಬಲುಯತ್ನಗೈದುಸೊರಗಿದೆನಲ್ಲದೆ ಸುಖಗಾಣೆ ನೊಂದುಕರಣಕೆಚ್ಚರವೊ ಕರುಣಿಸಲ್ಪ'ದುಕರಪಿಡಿದುಳುಹೆಂದು ಕೂಗಿದೆನಿಂದು 5ುೀ ದಯಾರಸಕೆ ನಾನೀವೆನೇನುವನುಪಾದಪದ್ಮವ ನಂಬಿ ಪಾಲಿಸೆಂಬುವನುಆದರಿಸುತ ಭಕ್ತಿಯಾನಂದವನ್ನುವೇದವೇದ್ಯನೆ ಕೊಟ್ಟು ಸಲಹು ನೀನಿನ್ನು 6ಪುಟ್ಟಿದಂದಿನಿಂದಾ ಮಡಿ ಮಡಿಯಾಗಿ ದುಡಿದುಘಟ್ಟಿಗತನವನು ಗಳಿಸಬೇಕೆಂದುಹೊಟ್ಟೆ ಹೊರಕರೊಳಾಡಿ ಹುಸಿಯನೆ ನುಡಿದುಕೆಟ್ಟು ಸುಖಗಾಣದೆ ಕೂಗಿದೆನಿಂದು 7ಸಾಕಾುತಯ್ಯಾ ಸಂಸಾರ ಕೋಟಲೆಯುನಾ ಕಾಣೆ ಸುಖವನು ನಿ'ುಷವಾದರೆಯುನೀಕರಿಸುವರಿಂದ ನಿರ್ವೇದ ಗತಿಯುಸೋಕಲು ನಿನ್ನೊಳು ಸಿಕ್ಕಿತು ಮತಿಯು 8ಧರೆಯೊಳಜ್ಞರ ನೋಡಿ ದಯದಿಂದ ಮುದದಿನರದೇಹದಾಳಿ ಚಿಕನಾಗಪುರವರದಿಒರೆದು ವೇದಾಂತರ್ಥವನು 'ಸ್ತರದಿ 1ಉದ್ಧರಿಸಿದೆ1 ವಾಸುದೇವಾರ್ಯ ಸುಖ ಪಥದಿ 9(ಈ) ಸಾಮಾಜಿಕ ಕೃತಿಗಳು
--------------
ವೆಂಕಟದಾಸರು