ಒಟ್ಟು 4668 ಕಡೆಗಳಲ್ಲಿ , 127 ದಾಸರು , 3353 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆನೆ ಮನವೆ ಮಾಧವನ ಪ ಮುನಿವರೇಣ್ಯರ ಮನದಿ ಅನುದಿನವು ನೆಲಸಿಹ ವನರುಹ ಲೋಚನನ ಅ.ಪ ಸತಿಸುತರ ಮೋಹವನು ಹಿತವೆಂದು ಅರಿಯುತಲಿ ಮತಿಯ ಕೆಡದಂತೆ ನೀ ಅತಿಶಯದ ಭಕುತಿಯಲಿ 1 ಮರುಳು ಮಾಡುವ ಭವದ ಪುರಳು ಸುಖಗಳಿಗೆ ನೀ ಇರುಳು ಹಗಲಲ್ಲಿ ಉರಳಿ ಕೆಡದಿರುವಂತೆ 2 ಮುನ್ನಗಳಿಸಿದ ಬಹಳ ಉನ್ನತದ ಅಘಗಳಿಗೆ ಖಿನ್ನನಾಗುತ ಸುಪ್ರಸನ್ನ ಶ್ರೀ ನರಹರಿಯ 3
--------------
ವಿದ್ಯಾಪ್ರಸನ್ನತೀರ್ಥರು
ನೆನೆದು ನಮಿಸುವೆ ನಾನು ವಾರಂವಾರ ಪ ನೆನೆದು ನಮಿಸುವೆ ನಾನನುದಿನ ಹರಿಪದ ವನಜ ಮಧುಪರಾದ ಅನುಭವ ಶರಣರ ಅ.ಪ ಆದಿಮೂರುತಿತ್ರಯ ಮಧ್ವಮುನಿರೇಯ ಪದ್ಮನಾಭ ನರಹರಿ ಧ್ಯಾನ ಮಾಧವಾಕ್ಷೋಭ್ಯರ ಮಹಾ ಜಯತೀರ್ಥರಾ ರಾಧಕ ವಿದ್ಯಾದಿರಾಜ ಕವಿನಿಧಿ ಸಾದರ ವಾಗೀಂದ್ರ ಶಾಂತ ರಾಮಚಂದ್ರ ಸಾಧು ವಿದ್ಯಾನಿಧಿಯರ ರಘುನಾಥ ಮೇದಿನಿ ರಘುವರ್ಯರ ರಘೋತ್ತಮ ವೇದವ್ಯಾಸಾರ್ಯರ ವಾರಂವಾರ 1 ಇತ್ತ ವಿದ್ಯಾಧೀಶ ಈ ವೇದನಿಧಿ ಘೋಷ ಸತ್ಯವ್ರತರ ನಾಮ ಸತ್ಯನಿಧಿಯ ನೇಮ ಸತ್ಯನಾಥಾಖ್ಯಾತ ಸತ್ಯಾಭಿನವ ತೀರ್ಥ ಮತ್ತಿಳೆಯೊಳಗಿರ್ಪ ಮನಕೆ ಸೂಚಿಸಿ ಬಪ್ಪ ಕೃತ್ಯಮ್ ಸುಜ್ಞಾನ ಕೃಷ್ಣದ್ವೈಪಾಯನ ಇತ್ಯಧಿಕ ಸರ್ವರ ಜನದಲಿ ಅತ್ಯಧಿಕ ಮೀರ್ವರಾ ಪುರುಷಾರ್ಥ ಉತ್ತಮ ಪದಲಿರುವರಾ ವಾರಂ ವಾರ 2 ಶರಣೆಂದು ಆದ್ಯರ ಸಕಲ ಪ್ರಸಿದ್ಧರ ಶುಭ ವ್ಯಾಸರಾಯರ ವರ ಹಯಗ್ರೀವ ಜಗವರಿತ ವಾದಿರಾಜ ಪುರಂದರದಾಸ ಪುತ್ರರಾ ವರ ಮಧ್ವರಾ ನೆರೆ ತಾಳ ಪಾಕರ ನುತ ಮತಿ ಕನಕರ ಹರಿಭಕ್ತಿ ಉಲ್ಹಾಸರ ಬಂಡೆರಂಗ ನರಿತಿಹ ನಿಜದಾಸರ ಮಹಿಪತಿ ಗುರುಶರಣರ ತೋಷರ ವಾರಂ ವಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆದು ಬದುಕಿರೋ ಸತತ ನೆನೆದು ಬದುಕಿರೋ ಪ ನೆನೆದು ಬದುಕಿ ಸುಜನರೆಲ್ಲಘನಗುಣಾಂಬುಧಿ ಶ್ರೀಪಾದರಾಯರ ಅ.ಪ ಇತರ ಧ್ಯಾನವೆಲ್ಲವನುಳಿದುಅತಿಶಯದ ವಿರಕ್ತಿ ಬಲಿದುಮತಿ ವಿಶೇಷವೆನಿಪ ಮಧ್ವಮತಾಂಬುನಿಧಿಗೆ ಪೂರ್ಣಚಂದ್ರನ 1 ದುರಿತ ದೂರನಶಮದಮಾದಿ ಗುಣಸಮುದ್ರನ2 ಶುಭ ಚರಿತನ 3 ವಾದಿಕುಂಜರ ಪಂಚಮುಖನಸಾಧು ಸಜ್ಜನ ಕಲ್ಪವೃಕ್ಷನವೇದ ಶಾಸ್ತ್ರ ಪುರಾಣದಲಿಆದಿಶೇಷನ ಪೋಲ್ವ ಮುನಿಯ 4 ಸನ್ನುತ ಪರಮವನಧಿ ಗಂಭೀರ ಶ್ರೀಪಾದರಾಯರ 5
--------------
ವ್ಯಾಸರಾಯರು
ನೆನೆಯಿರೋ ಜನರೆಲ್ಲ ಗುಣಯುತನ ಮೂರ್ತಿ ಮಧುಪುರದ ಗಣನಾಥನ ಪ ಫಣೆಯುದರದಿ ಸ್ತುತಿ ತಿರುಗುವನ ಕರದಿ ಪಾಶಾಂಕುಶ ಪಿಡಿದಿಹನ ಪಾದವ ನೆನೆವರ ಭಕ್ತರ ನೋಡಿ ಮರುಗುವನ 1 ಶಿಬ್ಬಲುಂಡಿಗೆಯ ಮೆಲುವವನ ಕಾಲ ಕೊಬ್ಬಿದ ರಕ್ಕಸರಹಲ್ಲ ಮುರಿದವನ ಜಗಕೊಬ್ಬನೇ ಸುರನರ ಸೇವಿತನ 2 ಭಾಸುರ ತೇಜದಿ ಮೆರೆವನ ಒಳ್ಳೆ ಮೂಷಿಕವನೇರಿ ನಲಿದವನ ಅನುದಿನ ಪೊರೆವವನ 3
--------------
ಕವಿ ಪರಮದೇವದಾಸರು
ನೆನೆಯುತ್ತ ತಿರಗುವೆನಯ್ಯ ಜೀಯ ನಿನಗ್ಯಾಕೆ ದಯಬಾರದಯ್ಯ ಪ ಮನುಮುನಿನುತ ನಿಮ್ಮ ವನÀರುಹಂಘ್ರಿಯಧ್ಯಾನ ಅನುದಿನ ಬಿಡದೆ ಅ.ಪ ಪೋಷಿಸಲೊಲ್ಲ್ಯಾಕೋ ನೀನು ನಿಮ್ಮಯ ದಾಸನು ನಾನಲ್ಲವೇನು ದೇಶದೇಶಂಗಳನ್ನು ನಾನು ಬಿಡದೆ ಘಾಸ್ಯಾದೆ ತಿರುತಿರುಗಿನ್ನು ಈಸು ದಿವಸ ವ್ಯರ್ಥ ಮೋಸವಾದೆನು ನಿಮ್ಮ ಧ್ಯಾಸ ಮರೆದು ಭವಪಾಶವಿದೂರನೆ 1 ಪರುಷವ ಶಿರದೊಳು ಪೊತ್ತು ಎ ನ್ನಿರವ್ಹಸಿದು ಬಳಲುವಂತಿತ್ತು ಕರದಲ್ಲೆ ಮುಕುರುವಿತ್ತು ಅರಿಯದೆ ಹಂಚಿನೋಳ್ಹಲ್ಕಿಸಿದಂತಿತ್ತು ಪರಮಪುರುಷ ನಿಮ್ಮ ನೆರೆನಂಬಿ ಬದುಕದೆ ದುರಿತದಿಂ ಬಳಲಿದೆ ಪರಿಪರಿ ಹರಿಹರಿ2 ವರಭಕ್ತರಭಿಮಾನ ನಿನಗೆ ಇಲ್ಲೇನು ಸ್ಥಿರ ಮುಕ್ತಿ ಪದದಾಯಕನೆ ಸ್ಥಿರವಾಗಿ ಅರಿದು ನಾ ನಿಮಗೆ ಮರೆಹೋದೆ ಕರುಣದಿ ಕೊಡು ವರಸುತಗೆ ಅರಘಳಿಗ್ಯಗಲದೆ ಸ್ಮರಿಪೆ ನಿಮ್ಮಯ ಪಾದ ಶರಣಾಗತರ ಪಾಲ ಸಿರಿವಂತ ಶ್ರೀರಾಮ 3
--------------
ರಾಮದಾಸರು
ನೆನೆಯೋ ನೀ ಎನ್ನ ಮನವೇ| ಅನುಪಮ್ಯ ಶ್ರೀ ಮುಕುಂದನಾ| ಚಕೋರ ಸುನಕ್ಷತ್ರೇಶ ಗೋಪಾಲನಾ| ಶ್ರೀಲೊಲನಾ ನಂದಬಾಲನಾ ಪ ವರಭಕ್ತ ಧೃವಗ ಸ್ಥಿರಪದ ವಿತ್ತನಾ| ಧರಣಿಯ ಭಯಹರ ಪುರುಷೋತ್ತಮನಾ| ಉರಗ ತುಳಿದವನಾ| ಉರಗಶಯನುರಗಾ ಭರಣನ ಸಖನಾ| ಸುನಖನ ಅಬ್ಬ ಮುಖನಾ 1 ದುರಿತ ನಿವಾರಕನಾ| ಕರುಣಾದೀ ಅಹಲ್ಯಯ ನುದ್ಧರಿಸಿದನಾ ಸರಸಿಜ ಸಮಪದ ಸರಸಿಜನಾಭನಾ| ಸರಿಸಿಜ ಪಾಣಿಯ ಸರಸಿಜ ನೇತ್ರನಾ 2 ಸುಚರಿತ್ರನಾ ಮುನಿಸ್ತೋತ್ರನಾ| ಗುರುವರ ಮಹಿಪತಿ ನಂದನ ಜೀವನಾ| ಗಿರಿವರಧಾರನಾ ಕಂಸಾಸುರ ಮರ್ಧನಾ| ಶರಧಿ ನಿವಾಸನಾ| ಹರಿಶತ ಕಿರಣ ಹರಿಸುತ ಪ್ರೀಯನಾ| ಸ್ಮರಸೈಯ್ಯನಾ ಕೃಷ್ಣರೇಯನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ನೆನೆಸು ಮನವೆ ನಲಿವಿನಿಂದಲಿ ನೆನೆಸು ಮನವೆ ನಲಿವಿನಿಂದಲಿ ಮನಸಿಜನ್ನ ಪೆತ್ತ ಹರಿಯ ವನಜ ಚರಣವನ್ನು ಹೃ ದ್ವನಜದೊಳಗೆ ನಿಲಿಸಿ ನಗುತ ಪ ಪ್ರಳಯದಲ್ಲಿ ವರ ರಮಾ ಕ ಳವ ತಾಳಿ ಲೀಲೆಯಲ್ಲಿ ಪೊಳವ ಕಂಗಳಿಂದ ಕಿಡಿ ಗಳನು ತೋರಿ ಕುಣಿವುತ ಜಲಜ ಪೀಠ ಸುರಪ ಪುಲಿದೊ ಗಲ ವಸನ ಉಳಿದ ಸುರರ ಅಳಿದು ಏಕಮೇವನಾಗಿ ನಲಿವ ನಾರಸಿಂಹನೆಂದು 1 ಜರಾಮರಣರಹಿತ ಸುಜ ನರನ ಕಾಯ್ದು ಕರುಣದಲ್ಲಿ ಜರಿದು ಅದ್ರಿಯಲ್ಲಿ ದನುಜರನ್ನು ಶೀಳಿ ವೇಗ ನಿ ಪರಮನೆಂದೆನಿಸಿ ಚರಿಸುತಿಪ್ಪ ಅರುಣಪ್ರಭೆಗೆ ಕೋಟಿ ಮಿಗಿಲು ಪರಮಪುರುಷ ಸಿರಿಧರನ್ನ 2 ಕೆಡದೆ ಪರಮ ಭಕುತಿ ಮಾರ್ಗ ವಿಡಿದು ಗರ್ವವೆಂಬ ಕವಚ ದುರುಳ ಚೇತನಕ್ಕೆ ಕೊಡದೆ ಮನಸು ವಿನಯದಿಂದ ಕಡಲಶಯನನಾದ ಒಡಿಯ ವಿಜಯವಿಠ್ಠಲನ್ನ ಬಿಡದೆ ನುಡಿಯೆ ಬಂದ ಅವ ಘಡವ ದಾಟಿಸು ವೊಲಿದು ಕಾಯುವಾ3
--------------
ವಿಜಯದಾಸ
ನೆರೆ ಪ್ರಚಂಡ ಬರತಕದ ನಿರಗೊಡದ ಮನ್ಮಥನ ಪರಿಯನೆಲ್ಲ ಕೇಳು ಕೆಳದಿ ಸುರಪುರದ ಕರಿವರದ ಗರುಹಿದಡೆ ಮುತ್ತಿನ ಸರದ ಹಾರವ ನೀವೆ ಕೆಳದೀ ಪ ಸಸಿ ಬಿಂಬ ದೆಸೆ ತುಂಬಿ ಪಸರಿಸಿತೆಂಬುದನು ಪಿಕ ಕುಸುಮಾಂಬರಗೆ ಪೇಳೆ ಕೆಳದೀ ಮಸರೆಳೆಯದಸು ಬಿಳಿ ಯೆಸಳು ಕೇದಗೆಯಲರ ಹಸಮಾಡಿದನು ನಲಿದು ಕೇಳದಿ 1 ಅಸಿನನೆಯ ಹೊಸಮನೆಯ ಬಿಸುಗಣೆಯೆಂದಳೆಸೆಯೆಮಣಿಸಲುತರಹರಿಸುವುದುಕೆಳದಿ ಬಿಸಜಾಕ್ಷನ ನುಶಿಕ್ಷಣದಿ ತನು ಉಚ್ಚಿಕಡುಸುಡುತಲಿದೆ ನೀ ಸಾಕ್ಷಿ ಕೆಳದೀ 2 ತಂಬೆಲರ ಮುಂಬೆಲರ ಪಂಬೆಲರನುಳಿದು ಮರಿ- ದುಂಬಿಗಳ ಸಂಭ್ರಮದಿ ಕೇಳದ ಕೆಳದೀ ಬೆಂಬಿಡದೆ ಇಂಬುಗೊಂಡಂಬುಜಾಸ್ತ್ರವ ತುಡುಕಿ 3 ಪೊಂಬಲಕೆ ಕೊಳಗಾದೆ ಕೆಳದೀ ಪಣೆ ಯೆಂಬುವಗೆ ಕುಂಬಿನಿಯೊಳೇ ಮಣಿಹ- ದೆಂಬುದನು ಕೊಡಬಹುದೆ ಕೆಳದೀ 4 ನಂಬಿದಳು ಕಂಬನಿಯ ತುಂಬಿರಲು ಸಖಿಯರೊಳು ಗಾಂಭೀರ್ಯತನವಹುದೇ ಕೆಳದಿ ಕಂತುಶರವಂತಿರದೆಂತೊರೆಯಬಹುದೆನಗೆ ಚಿಂತೆ ತಲ್ಲಣ ಕೆಳದೀ 5 ದಂತಿ ನಡೆಯಂತೆ ಬೆಡಗಿಂತವಳ ಕಾಣೆ ಗುಣ ವಂತೆ ವಿಧಾನ್ಯಾಯದಲಿ ಸಂತೈಸಿ ಯೆನ್ನ ನೆರೆವಂತೆ ಸುರಪುರದ ಲಕ್ಷ್ಮೀ ಕಾಂತನಿಗೆ ಬಿನ್ನಯಿಸು ಕೆಳದೀ 6
--------------
ಕವಿ ಲಕ್ಷ್ಮೀಶ
ನೆರೆನಂಬಿ ಬೇಡುವೆನೊ ಶ್ರೀಹರಿಯೆ ನಿನ್ನ ಪರಮ ಪರತರ ತವಬಿರುದುಗಳರಿದು ಪ ಪುರನಾಶಗೈದು ನೀ ಪುರಸತಿಯರ್ವ್ರತ ಕೆಡಿಸಿ ಪುರದೊಳಗೆ ತೋರಿದೆಲೋ ಪರಿಪರಿಯ ಲೀಲೆ ಕರುಣಿಸದ್ಯಸಮಸುಖ ಪರಮ ದಯಾನಿಧಿಯೆ 1 ಸತಿ ಅಹಲ್ಯಾದೇವಿಗೆ ಪತಿಯಿತ್ತ ಶಾಪವನು ಅತಿಹಿತದಿ ಪರಿಹರಿಸಿ ಗತಿಯಿತ್ತಿ ದೇವ ಕ್ಷಿತಿಜಾತೆಪತಿ ನಿನ್ನ ಪತಿತಪಾವನಪಾದ ನುತಿಪ ಭಕ್ತರಿಗೆ ಜವಮೃತ್ಯುಭಯತರಿವಿ 2 ಮೃಡಸಖ ಶ್ರೀರಾಮ ದೃಢದಿ ಭಜಿಪರ ಬೆಂ ಬಿಡದಿರ್ದು ಕಾಯ್ವಂಥ ಕಡುದಯದ ದೇವ ದೃಢದಿಂದ, ನಂಬಿದೆ ಒಡಲಾಸೆ ಪೂರೈಸು ಜಡಜಾಕ್ಷ ಕಡುದಯದಿ ಪಿಡಿಯೆನ್ನ ಕೈಯ 3
--------------
ರಾಮದಾಸರು
ನೆರೆನಂಬಿದವನೆ ಧನ್ಯಾ ಈ ಗುರುಪದ ಪ ನೆರೆನಂಬಿದವ ರಘತರಿವ ವೇದವ್ಯಾಸ ಕರ ಪಾದ ಅ.ಪ ವರಮಣಿಯೊಳು ಶಿರಿತನದಿಂದಲ್ಲಿ ಮೆರೆವ ನಾಯ ಕರ ಮಂದಿರದಿ ಜಾತರಾಗಿ ಪರಮ ಮಹಿಮರಾದ ಗುರು ರಘೋತ್ತಮರಿಂದ ಪರವಿದ್ಯೆಯನು ಪೊಂದಿ ಚರಿಸಿ ದಿಗಂತದಿ ವರವೇದ ವ್ಯಾಸರಿಂದ ತುರಿಯಾಶ್ರಮ ಪಡೆದು ಸಚ್ಚಿಷ್ಯರಿಂದÀ ಸಂತತ ಪ್ರವಚನ ಮಾಡುತಲಿ ಆನಂದ ತೀರ್ಥರ ಮತ ಶರಧಿಗೆ ಪೂರ್ಣ ಚಂದಿರನೆನಿ ಪರ ಪದ 1 ಯಾದವಾರ್ಯರಿಗೆ ಅಗಾಧ ಮಹಿಮರು ಈ ಪೂರ್ಣಬೋಧ ಗ್ರಂಥಾರ್ಥ ಗ್ರಂಥಗಳನ್ನು ಟೀಕಾ ಕೃ ಕೌವÀುುದಿಗಳನು ರಚಿಸಿದಂಥಾ ವಾದಿ ಮಾತಂಗ ಮೃಗಾಧಿಪರನ್ನು 2 ಕರೆದು ಶಿಷ್ಯರಿಗೆ ಹರಿ ಪಾದಂಗುಟದಿಂದ ಸುರನದಿಯನು ಸಾಕ್ಷಾ- ತ್ಕರಿಸಿ ತೋರಿಸಿದಂಥ ಗುರು ಕೃಷ್ಣದ್ವೈಪಾಯನ ತೀರ್ಥರಿಗೆ ಘನವಾದ ಮಹಿಮೆಯನಾ ಸುರತರು ಸಮ ಚರಣ 3 ವೃಂದಾವನದೆಡೆ ಒಂದು ಪ್ರದಕ್ಷಿಣಿ ವಂದನೆ ಮಾಡಲು ಮಂದನಾದರು ಪ್ರಾಜ್ಞನೆಂದು ಕರೆಸುವನು ವಂಧ್ಯೆಯಾದರು ಬಹುಕಂದರ ಪಡೆವಳುಸಂದೇಹವ್ಯಾಕಿಲ್ಲಿ ದೂರಮಾಡುತಲಿ ಆ ನಂದವ ಗರಿಯುವರ ಭಕ್ತರ ದುರಿತಾಂಧಕಾರಕ್ಕೆ ರವಿ ಯಂದದಲಿಪ್ಪರ 4 ವರಭೀಮಾತೀರದಿ ಪರಿಶೋಭಿಸುವ ಮಣಿ ಪುರದಿ ಪಂಡಿತ ಭೂಮಿ ಚರಣಾರಾಧಕರನು ಸುಮಂದಿರದಿ ಕುಳಿತು ನಿತ್ಯ ಮೂಲದಲಿ ಮೆರೆವ ಧೇನಿಸುತಿಪ್ಪ ಗುರುವೇದೇಶರ ಶುಭ ಚರಣ ಯುಗಲವ 5
--------------
ಕಾರ್ಪರ ನರಹರಿದಾಸರು
ನೆರೆನಂಬಿದವರನ್ನ ಪರಿವೆಮಾಡದೆ ಇನ್ನು ಪೊರೆಯದಿರುವರೆ ಪರಮಪುರುಷನೆ ನರಹರೆ ನಿಮ್ಮ ಚರಣ ಕಮಲವ ಹಾಗೆ ಸ್ಮರಿಸುತಿರುವಂಥ ಪರಮಪುಣ್ಯ ಭಕ್ತಜನ ರನು ಪಾಲಿಸದೆ ಇನ್ನು ಇರುವದುಚಿತವೆ ಪ ಅಮಿತ ಪರಾಕ್ರಮ ಕುಂಡಲಶಯನ ಅಕ್ರೂರ ವಂದ್ಯಾ ಪುಂಡರೀಕಾಕ್ಷನೆ ಪುಣ್ಯ ಪ್ರಭಾವನೆ ಕುಂಡಲಾಧಿಪ ದೇವ ಮಹಾನುಭಾವ ದಂಡಿದಾನವ ಖಂಡಗರ್ವ ಅಖಂಡಮುನಿಮನ ಮಂಡಲ ನಿಲಯ ಕೋದಂಡಧರನೆ ಅಂಡಜ ಗಿರಿವಾಸ ಹರಿಗೋವಿಂದನೆ 1 ಭೂಮಿಜರಮಣ ಸಂಪೂರ್ಣಾನಂದನೆ ಸಾಮಗಾನಲೋಲ ಸರ್ವೇಶನೆ ಕಾಮತಾರ್ಥಗಳೀವ ಕರುಣಾಸಾಗರ ದೇವಾ ಸ್ವಾಮಿ ಜಗನ್ನಾಥ ಸರ್ವೋತ್ತಮನೆ ಕಾಮ ಜನಕ ಸುದಾಮ ರಕ್ಷಕ ಪ್ರೇಮ ಸೀತಾರಾಮ ಜಗತ್ಪತಿ ಶೌರಿ ಶ್ರೀಹರಿ ಕೋಮಲಾಂಗ ಕೃಷ್ಣ ಮೂರುತಿ 2 ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕನಾಗಿ ಸಕಲಭಾರಕರ್ತ ಶ್ರೇಷ್ಠನೆ ನಿಕರದಿ ಸಲಹುವ ನಿಜನಿತ್ಯಾನಂದಾನೆ ಪ್ರಕೃತಾದಿ ಪಾಲಿಸುವ ಪರಮಾತ್ಮನೆ ಸಕಲ ವೈಭವ ಚಿದ್ವಿಲಾಸನೇ ನಿಖರಾರೈ ನಿನ್ನಲಿ ನಮೋ ಭಕುತವತ್ಸಲ ಮುಕುತಿದಾಯಕ ರುಕ್ಮಣಿಯವರ 'ಹೆನ್ನವಿಠ್ಠಲಾ’ 3
--------------
ಹೆನ್ನೆರಂಗದಾಸರು
ನೆಲೆಯಾಗಿ ನಿಲಿಸೆನ್ನ ನಿಲಯದಿ ಶ್ರೀಕಾಂತ ಸಿರಿ ಲಲನೆಯರೊಡಗೂಡಿ ಪ. ಸೂಕ್ತ ಪುರಾಣ ಭಾರತಗಳು ಪೊಗಳುವ ಭಕ್ತ ವತ್ಸಲತೆಯ ಬಹುಮತಿಯ ನಿತ್ಯ ಕೊಂಡಾಡುವ ಭೃತ್ಯಜನರ ಬೇಗ ಹೆತ್ತ ತಾಯಿವೊಲೆತ್ತಿ ಪಾಲಿಪ ಹರಿ 1 ವಿಧಿ ವಿಹಿತಗಳಾದ ಸದಮಲ ಕೃತಗಳ ಮುದದಿ ಮಾಡುವ ಸರ್ವ ಬುಧ ಜನರ ಸದನಕ್ಕೆ ಕರತಂದು ವಿಧವಿಧ ಪೂಜೆಯ ಒದಗಿ ಮಾಡುವ ಪೂರ್ಣ ನಿಧಿಮತಿಗಳನಿತ್ತು 2 ಬಂದ ಅತಿಥಿಗಳ ನಿಂದಿಸದಲೆ ಅಭಿ ವಂದಿಸಿ ಸತ್ಕರಿಸುತ ಫಲವ ಕುಂದಿಲ್ಲದಾನಂದ ಸಂದೋಹದಾಯಿ ಮುಕುಂದಗರ್ಪಿಸಿ ಸುಖದಿಂದ ಚರಿಸುವಂತೆ 3 ಅಹಿತಲ್ಪ ಶಯನನೀ ವಹಿಸಿದ ದಾಸರ ಸುರರು ಸಂಗ್ರಹಿಸುವರು ಕುಹಕ ವೈರಿಗಳನ್ನು ಬಹು ದೂರೋಡಿಸಿ ಮಹಾಮಹಿಮ ನೀ ಕರುಣದಿ 4 ಚತುರ ಹಸ್ತಗಳಿಂದ ಚತುರ್ವಿಧ ಫಲರಸ ಸ್ತುತಿಸುವ ದಾಸರೀ ಗತಿ ಬೇಗದಿ ಸತತ ಸುರಿವ ನಾಗಪತಿ ಗಿರಿನಿಲಯ ಶ್ರೀ ಪತಿ ನೀನೆ ಎನಗೆ ಸದ್ಗತಿಯಾಗಿ ಪೊಳವುತ್ತ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೇಮವಿಲ್ಲದ ಹೋಮವೇತಕೆರಾಮನಾಮವಿರದ ಮಂತ್ರವೇತಕೆ ಪ ನೀರ ಮುಣುಗಲು ಏಕೆ ನಾರಿಯಳ ಬಿಡಲೇಕೆವಾರಕೊಂದುಪವಾಸ ಮಾಡಲೇಕೆನಾರಸಿಂಹನ ದಿವ್ಯನಾಮವನು ನೆನೆದರೆಘೋರ ಪಾತಕವೆಲ್ಲ ತೊಲಗಿ ಹೋಗುವುದು 1 ಅಂಬರವ ತೊರೆಯಲೇಕೆ ತಾಂಬೂಲ ಬಿಡಲೇಕೆಡಂಭಕದ ವೃತ್ತಿಯಲಿ ಇರಲೇತಕೆಅಂಬುಜನಾಭನನು ಭಾವದಲಿ ನೆನೆದರೆಇಂಬುಂಟು ವೈಕುಂಠವೆಂಬ ಪುರದೊಳಗೆ 2 ಬಂಧದೊಳಗೆ ಬಿದ್ದು ಹರಿಯನೆ ನೆನೆಯುತಿರೆಬೆಂದು ಹೋಗುವುವು ದುರಿತಂಗಳೆಲ್ಲಬಂದ ದುಃಖಗಳೆಲ್ಲ ನಿಲ್ಲದಲೆ ಕಳೆಯುವವುಚೆಂದಾಗಿ ನೆಲೆಯಾದಿಕೇಶವನ ನೆನೆಯೆ3
--------------
ಕನಕದಾಸ
ನೊಂದು ಬಂದೆನೊ ಕಾಂತೇಶ | ಕೈಯನೆ ಪಿಡಿಯೊ ಮಂದಭಾಗ್ಯಳ ಜೀವೇಶ ಪ. ಅಂದು ಶ್ರೀ ರಾಮರ ಸಂದೇಶವನ್ನೆ ಭೂ- ನಿಂದನೆಗೆ ಅರುಹುತಲಿ ಬಹು ಆನಂದಪಡಿಸಿದ ವಾನರೇಶ ಅ.ಪ. ಶೌರಿ | ಭಕ್ತರ ಕಾಯ್ವ ದುರಿತದೂರನೆ ಉದಾರಿ ಚರಣಕ್ಕೆ ನಮಿಸುವೆ ಹರಿಗೆ ಪರಮಾಪ್ತನೆ ದುರಿತ ತರಿಯುತ ಪೊರೆಯೊ ಗುರುವರ ರಾಮಕಿಂಕರ 1 ಗುರುಕರುಣದ ಬಲದಿ | ಅರಿತೆನೊ ನಿನ್ನ ಚರಣ ನಂಬಿದೆ ಮನದಿ ಪರಿ ಭವಕ್ಲೇಶ ಪರಿಯ ಬಣ್ಣಿಸಲಾರೆ ಹರಿವರನೆ ದಯಮಾಡು ಶ್ರೀ ಹರಿ ದರುಶನವನನವರವಿತ್ತು 2 ಕಾಂತನ ಅಗಲಿರಲು | ಚಿಂತೆಯಲಿ ಭೂ ಕಾಂತೆ ವನದೊಳಗಿರಲು ಸಂತೋಷದಿಂ ರಾಮನಂತರಂಗವನರುಹಿ ಸಂತಸವಪಡಿಸುತಲವನಿಸುತೆಯ ನಿಂತೆ ರಾಮರಿಗ್ಹರುಷ ತೋರಿ 3 ದ್ರುಪದ ಸುತೆಯಳ ಕೀಚಕ | ದುರ್ಮನದಲಿ ಅಪಮಾನಪಡಿಸೆ ದುಃಖ ತಪಿಸಿ ನಿನ್ನನು ಬೇಡೆ ಆ ಪತಿವ್ರತೆ ಸತಿ ಕುಪಿತದಿಂದಲಿ ಖಳನ ಕೊಂದೆ ಅಪರಿಮಿತ ಬಲಭೀಮ ಪ್ರೇಮ 4 ಮಿಥ್ಯಾವಾದದ ಭಾಷ್ಯಕೆ | ಸುಜ್ಞಾನಿಗಳ್ ಅತ್ಯಂತ ತಪಿಸುತಿರೆ ವಾತಜನಕನಾಜ್ಞೆ ಪ್ರೀತಿಯಿಂದಲಿ ತಾಳಿ ಘಾತುಕರ ಮತ ಮುರಿದ ಮಧ್ವನೆ ಖ್ಯಾತಿ ಪಡೆದೆÀ ಸಿದ್ಧಾಂತ ಸ್ಥಾಪಿಸಿ 5 ಪ್ರಾಣಪಾನವ್ಯಾನ | ಉದಾನ ಸ ಮಾನ ಭಾರತಿ ಕಾಂತನೆ ಜ್ಞಾನಿಗಳಿಗೆ ಪ್ರೀತ ಜ್ಞಾನ ಭಕ್ತಿಪ್ರದಾತ ದೀನಜನ ಮಂದಾರ ಕಾಯೊ ದೀನಳಾಗಿಹೆ ಕೈಯ ಮುಗಿವೆ 6 ನೋಯಲಾರೆನೊ ಭವದಿ | ಬೇಗನೆ ತೋರೊ ಧ್ಯೇಯ ವಸ್ತುವ ದಯದಿ ವಾಯುನಂದನ ನಿನ್ನ ಪ್ರಿಯದಿಂ ನಂಬಿದೆ ಕಮಲ ದ- ಳಾಯತಾಕ್ಷನ ಮನದಿ ತೋರಿ7 ಹರಣ ನಿನಗೊಪ್ಪಿಸಿದೆ | ಸುರವಂದಿತ ಕರೆದು ಮನ್ನಿಸಿ ಕಾಪಾಡೊ ಸಿರಿವರನನು ಹೃತ್ಸರಸಿಜದಲಿ ತೋರೊ ಧರೆಯ ವಸ್ತುಗಳ್ ಮಮತೆ ತೊರೆಸು ಹರಿಯ ನಾಮಾಮೃತವನುಣಿಸು 8 ಈ ಪರಿಬಂದೆ ಅನಿಲ | ನಿನ್ನೊಳು ವಾಸ ಗೋಪಾಲಕೃಷ್ಣವಿಠ್ಠಲ ಶ್ರೀಪತಿ ಕೃಪೆಯಿಂದ ನೀ ಪ್ರೀತನಾಗುತ ಕೈಪಿಡಿದು ಸಂತೈಸು ಕರುಣದಿ ಭಾಪುರೇ ಕದರುಂಡಲೀಶ 9
--------------
ಅಂಬಾಬಾಯಿ