ಒಟ್ಟು 1431 ಕಡೆಗಳಲ್ಲಿ , 109 ದಾಸರು , 1207 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಮದೂತರು ನರನನು ಎಳೆದೊಯ್ದುದನುಎಲ್ಲರಿಗೆ ಹೇಳುವೆನುಕುಮತಿಯಲಿ ಸದ್ಗುರು ಚರಣವ ಹೊಂದದಕೇಡಿಗಾಗುವ ಫಲಗಳನುಪಮುರಿದ ಮೀಸೆಯಲಿ ಮಸಿದೇಹದಲಿಉರಿಹೊಗೆ ಹೊರಡುವ ಉಸುರಿನಲಿಕರುಳು ಮಾಲೆಯಲಿ ಕೋರೆದಾಡೆಯಲಿಜರೆಮೈ ಹಸಿದೊಗಲುಡುಗೆಯಲಿ1ಝಡಿವ ಖಡುಗದಲಿ ಹೂಂಕಾರದಲಿಕಡಿದವಡೆಯಲಿ ಹುರಿಮೀಸೆಯಲಿಬಿಡಿಗೂದಲಲಿ ಕರದ ಪಾಶದಲಿಸಿಡಿಲ ತೆರೆದ ಬಿಡುಗಣ್ಣಿನಲಿ2ಮಿಡುಕುತ ಸತಿಸುತರನು ಆಪ್ತರನುಹಿಡಿದೊಪ್ಪಿಸುತಿಹ ವೇಳೆಯಲಿಕಡಿಯಿರಿ ಹೊಡಿಯಿರಿ ತಿನ್ನಿರಿ ಎನುತಲಿ ಧುಮುಕಲುಬಿಡುವನು ಪ್ರಾಣವ ಕಾಣುತಲಿ3ಯಾತನೆ ದೇಹವ ನಿರ್ಮಿಸಿ ಅದರೊಳುಪಾತಕಮನುಜನ ಹೊಗಿಸುತಲಿಘಾತಿಸುವ ನಾನಾಬಗೆ ಕೊಲೆಯಲಿಘನನುಚ್ಚು ಕಲ್ಲೊಳಗೆ ಎಳೆಯುತಲಿ4ಈ ತೆರವೈ ಈ ಧರ್ಮ ಶಾಸ್ತ್ರವನೀತಿಯ ತೆರದಲಿ ಮಾಡುತಲಿಪಾತಕವನು ಬಹುಪರಿ ಶಿಕ್ಷಿಪರುದಾತಚಿದಾನಂದನಾಜೆÕಯಲಿ5
--------------
ಚಿದಾನಂದ ಅವಧೂತರು
ಯೋಗಿಯ ಲಕ್ಷಣವಿದೆಯೋಗಿಯ ಲಕ್ಷಣ ತಿಳಿಯದಡೆ ಇವನಿಂತು ಬಲ್ಲಪಮೌನವೆಂಬುದು ಬಹಳ ಏನೇನೆಂದರು ಕೇಳಕಾನನವೊಂದೇ ಊರು ಒಂದೇ ತಾನೆಂಬುದು ಢಾಳಹೀನವಾದವ ಕೇಳ ತಾನು ಈ ಪರಿಯಲಿಹಯೋಗಿ1ಮಾತಾಡೆ ಮಾತಿಲ್ಲ ಯಾತರ ಗೊಡವೆಯಿಲ್ಲಭೂತ ಹೊಡೆದಂತೆ ಸುಮ್ಮನಿಹನುಭೀತಿಯ ತಾನಿಲ್ಲ ಈ ತೆರದಲಿ ತಾನಿರುತಿಹಯೋಗಿ2ಎದ್ದರೆ ಎದ್ದಿಹ ಬಿದ್ದರೆ ಬಿದ್ದಿಹನಿದ್ದೆಯು ಯಾವಾಗಲು ಕಟ್ಟಿಹುದುಬುದ್ಧಿಯ ಮಾತಿಲ್ಲ ಬುದ್ಧಿಯವರ್ಜಿಸಿಹಇದ್ದು ಈ ತೆರದಿ ತಾನಿದ್ದು ಇರುತಿಹಯೋಗಿ3ಶರೀರದ ಸ್ಮರಣೆಯಿಲ್ಲ ಶ್ರೇಷ್ಠ ಭಾವಗಳಿಲ್ಲಪೋರರ ಕಂಡರೆ ಪೋರರಂತೆಮಾರನ ಬಾಧೆಯಿಲ್ಲ ಮಹಾಕೋಪಗಳಿಲ್ಲಧೀರತನದಲಿಂತು ಇರುತಿಹಯೋಗಿ4ಹೊರಗಿಂತು ತೋರಿಹನು ಹೃದಯದ ಪರಿಯನ್ನುಅರಿವೆನೆಂದರೆ ಅರಿಗಳವಲ್ಲವೋಇರುಳು ಹಗಲು ಚಿದಾನಂದ ಮೂರುತಿಯನುಸ್ಥಿರವೀಗ ತಾನಂದುನಿತ್ಯಬೆರತಿಹನು5
--------------
ಚಿದಾನಂದ ಅವಧೂತರು
ರಕ್ಷಿಸು ಶ್ರೀ ಲಕ್ಷ್ಮೀವೆಂಕಟರಮಣ ರಾಕ್ಷಸ ಸಂಹರಣಪಕ್ಷೀಂದ್ರವಾಹನ ವಾಸುಕಿಶಯನ ವಾರಿಜದಳನಯನ ಪ.ತ್ರ್ಯಕ್ಷಾದಿ ವಿಬುಧಪಕ್ಷಪರಾತ್ಪರಸುಕ್ಷೇಮನಿಧಿ ಕೃಪೇಕ್ಷಣದಿಂ ಸದಾ ಅ.ಪ.ವೇದಬಾಹಿರರಾಗಿ ಖಲರು ಬಹು ಬಾಧಿಸುವರುಸಾಧನೆಯೆಲ್ಲ ಕೆಡಿಸುವರು ರಿಪುಗಳಾರ್ವರುಆದಿಮೂರ್ತಿ ತವಪಾದಾಶ್ರಯ ಸು-ಬೋಧಾಮೃತರಸ ಸ್ವಾದುಗೊಳಿಸುತಲಿ 1ಸರ್ವಾಪರಾಧಂಗಳ ನೀ ಕ್ಷಮಿಸು ಸುಜನರನುದ್ಧರಿಸುಪೂರ್ವಾರ್ಜಿತ ಪಾಪಂಗಳ ಪರಿಹರಿಸು ಸದ್ಭಕ್ತಿಯೊಳಿರಿಸುಸರ್ವತ್ರ ವ್ಯಾಪ್ತ ಸಂತಕೃತ ಸ್ತೋತ್ರದುರ್ವಾರದುರಿತದುರ್ಗನಿಗ್ರಹನೆ2ಸತ್ಯಾತ್ಮ ಪಾವನಪಂಕಜನಾಭನೀಲಾಭ್ರದಾಭಸತ್ವಾದಿಗುಣವರ್ಜಿತ ಮಹಾಶೋಭ ಶರಣಾಗತ ಸುಲಭಚಿತ್ತವಾಸ ಶ್ರೀವತ್ಸಾಂಕಿತ ಪರ-ಮಾರ್ಥಬೋಧ ಮಹತ್ತತ್ತ್ವನಿಯಾಮಕ 3ಪವಮಾನಾಂತರ್ಗತ ಪಾಪ ವಿನಾಶ ಪೊರೆಯೊ ಜಗದೀಶಅವಿಕಾರ ಲೀಲಾನಂತವಿಲಾಸ ಶತಸೂರ್ಯ ಪ್ರಕಾಶಕವಿಜನಾನಂದಭವನ ಭವಭಯಾ-ರ್ಣವ ಬಾಡಬಮಾಧವಮಧುಸೂದನ4ಚಿತ್ರಾಖ್ಯಪುರಮಂದಿರ ಸುಖರೂಪ ಯಾದವ ಕುಲದೀಪಕರ್ತಾಕಾರಯಿತ ಸುಗುಣಕಲಾಪಪರಮಪ್ರತಾಪಸುತ್ರಾಣಲಕ್ಷ್ಮೀನಾರಾಯಣಪರವಸ್ತು ಶಾಶ್ವತ ಪವಿತ್ರ ಚರಿತ್ರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಂಗ ಕೊಳಲನೂದುವ ಮಂಗಳಸ್ವರಕೆ ಮೂಜ-ಗಂಗಳೂ ಮೋಹಿಸುತಿಹವಲ್ಲೇ ನೋಡೆ ಏ ಸಖಿ ಪಗೋಕುಲದಂಗನೆಯರು ಮೈಮರೆದು ತಮ್ಮ ಮನೆ ಕದ |ಹಾಕದೇ ಹರಿಯೆಲ್ಲಿಹನೆಂದರಸುತ ಬಂದರು ||ಗೋ ಕರುವೇನೆಂದೊಬ್ಬಳು ಹಾಕುವಳೆತ್ತಿಗೆ ದಾಳಿ |ನೂಕು ನೂಕಾಗುತ್ತ ಹಲವಂಗನೆರೋಡಿದರು 1ಕಣ್ಣಿಗೆ ಕುಂಕುಮ ಫಣಿಯಲ್ಲಿ ಕಾಡಿಗೆ ಕೆಲವರು |ಬಣ್ಣದ ಸೀರೆಯ ಮಂಡೆಗೆ ಸುತ್ತುತ್ತ ಕೆಲವರು ||ಚಿನ್ನಗೆ ಹಾಲೆರೆವೆವೆಂದು ಗಂಡರ ಪಿಡಿದು ಒಲ್ಲೆ- |ನೆನ್ನೆ ಕೇಳದಲೆ ನೆಲಕಿಕ್ಕುವರು ಕೆಲವರು 2ಹರಿಯ ನೋಡುವ ಭರದಿಂದ ಆಕಳಿವೇಯೆಂದು |ಹರದೇರು ಅತ್ತೇರಿಗೆ ಕುಟ್ಟಿ ಕಣ್ಣಿಯಿಕ್ಕೊರು ||ಒರಲಿದರೆ ನಾವಾಕಳಲ್ಲವೆಂದು ಕೇಳದಲೆ |ತ್ವರದಿ ಮಾಧವನ ನೋಡಬೇಕೆಂದೋಡಿದರು 3ಕಾಲಿಕೆಕಟ್ಟಾಣಿಆಣಿಮೆಂಟು ಪಿಲ್ಯಾ ಸರ ಮಾಡಿ |ಮಾಲೆಯೆಂದು ಹಾಕುವರು ಕೊರಳಿಗೆ ಕೆಲವರು ||ಹಾಲಿಗೆ ಮೂಗುತಿ ಕಾನ ಬಾವುಲಿ ಮೂಗಿಗೆ ತಮ್ಮ |ಬಾಲೆರೆಂದಾಕಳ ಕರುವೆತ್ತಿಕೊಂಡೋಡುವರು 4ಹೇಳಿದರೆ ಮಾತುಕೇಳಿಕಳ್ಳ ಕೃಷ್ಣಾ ಸಿಕ್ಕೆಂದು ಮೈ |ಘಾಳಿಗೊಂಡಾಳುವರಾ ಕೈ ಕಂಭಕೆ ಕಟ್ಟುವರು ||ಕೀಲ ಕಂಕಣ ಬಾಗಿಲ ಬೀಗವೆಂಜೋಡಿಸಿ ಲಕ್ಷ್ಮೀ |ಲೋಲನಂಘ್ರಿಯ ಕಾಣಬೇಕೆಂದೆಲ್ಲರು ಓಡಿದರು 5ಎಲೆ ಯಶೋದೆಯಮ್ಮ ನಿನ್ನ ಮಗ ಮೊನ್ನೆ ನಿಶಿಯಲ್ಲಿ |ಮಲಗಂಟು ಬಿಚ್ಚಿ ಒಲ್ಲೆನೆನ್ನೆ ಕೇಳಾ ಥರವೆ ||ಬಲು ಶಬ್ದೆನೆಂದು ಕೇಳಲತ್ತೆಗೊಂದು ಪರಿಯಿಂದ |ತಿಳಿಸಿದೆನೆಂದೊಬ್ಬಳು ಅತ್ತೆಯ ಮುಂದೆ ಹೇಳುವಳು 6ಬೀದಿಯೊಳ್ ಹೇಳಿದಂತೆ ನಮ್ಮನಿಗೆ ಬಾಯೆಂದೊಬ್ಬಳು |ಮಾಧವನಿವನೆಂದು ತನ್ನ ಪುರುಷಘೇಳುವಳು ||ಆ ದಿನ ನಾವೇಕತ್ರದಲ್ಲಿರೆಗಂಡಬರಲು ಸ್ತ್ರೀ |-ಯಾದಿ ಸೈ ಸೈಯೆಂದೊಬ್ಬಳು ಪತಿಗೇ ಪೇಳುವಳು7ಬತ್ತಲೆ ಕೆಲವರು ಸೀರ್ಯುಟ್ಟವರ್ಕೆಲವರು ಉ- |ನ್ಮತ್ತರು ಕೆಲವರು ಪಾಡುತ್ತಲಿ ಕೆಲವರು ||ನೆತ್ತಿಹಿಕ್ಕುವರು ಕೆಲವರು ಹೂಸಿಕೊಂಡವರು |ತುತ್ತು ಬಾಯೊಳಿಟ್ಟವರೂ ತ್ವರದಿ ಓಡಿದರು 8ಒಂದಾಡುತೊಂದಾಡುವರುನಿಂದುನಿಂದಾಲಿಸುವರು |ಮಂದಿಗಂಜದಲೆ ಹರಿದು ಹರಿದು ಹೋಗುವರು ||ಕಂದಗಳೆತ್ತಿದವರು ಕರುಗಳೆತ್ತಿದವರು |ಚಂದಿರ ವದನೆಯರು ತವಕದಿ ಓಡುವರು 9ಹೆಂಣುಗಳಾ ಆವಾವ ಕೆಲಸದೊಳಿದ್ದಿರ್ಯಾ ಹ್ಯಾಂಗೆ |ಬನ್ನಿರೆನ್ನ ಬಳಿಗೆಂಬಂತೆವೇಣುಕೇಳಿಸುವುದು ||ಪನ್ನಗಶಯನನಾಜೆÕಯಂತೆ ಪ್ರವರ್ತಿಸಿದ ಮೇಲೆ |ಅನ್ಯಾಯವೇ ಸತಿಯರದು ಕೇಳಿರಿ ಕವಿಗಳು 10ಕರಿಸಿಂಹಗಳು ಹುಲಿತುರುತುರುಗಮಹಿಷಿ|ಮರೆದು ವೈರತ್ವ ಹರಿಸ್ವರ ಕೇಳುತಿಹವು ||ಕರಗುತಿಹವು ಕಲ್ಲು, ಸುರರಾಕಾಶದಿ ಪುಷ್ಪ |ಸುರಿಸುತಿಹರು, ಗಂಧರ್ವರು ಪಾಡುತಿಹರು11ಅಂಬುಜಾಕ್ಷಗೆ ಕೆಲವಂಗನೆರು ಆಲಿಂಗಿಸುವರು |ಚುಂಬಿಸುವರು ಕೆಲವರುನಿಂದುಪ್ರಾರ್ಥಿಸುವರು ||ಶಂಬುಪಾಣಿ ಕರುಣಿಸಿ ಇಬ್ಬರಿಗೊಬ್ಬೊಬ್ಬನಾಗಿ |ಹಂಬಲ ಪೂರೈಸುವಂತೆ ರಾಸಕ್ರೀಡೆಯಾಡಲು 12ಕಾಮನಾ ಪೂರ್ತಿ ಮಾಡುತಿರೆ ಹೆಂಗಳೆರು ಇಂಥ |ಸ್ವಾಮಿಯಮ್ಮ ಕೈ ಸೇರಿದ ನೋಡಿರೆಂದ್ಯೋಚಿಸಲು ||ಭಾಮಿನಿಯರಹಂಕಾರ ತಿಳಿದಾಕ್ಷಣವೊಬ್ಬಳ |ಪ್ರೇಮದಿ ಕೊಂಡೊಯ್ದು ಎಲ್ಲರಿಗೆ ಮಾಯವಾದನು13ಬಹುರೂಪದೊಳೊಮ್ಮಿಂದ ಒಮ್ಮೆ ಬಂದೂ ರೂಪವಿಲ್ಲ |ಮಹೀಪಾಲನೇನಾದನೋ ಆವಳನ ಕೊಂಡೊಯ್ದನು ||ಅಹಿವೇಣಿಯರೇ ನಿಮ್ಮ ನಿಮ್ಮ ಗುಂಪಿನೊಳಗೆ ಎ- |ಷ್ಟಿಹಿರೊ ನಾರೆರು ಎಣಿಸಿರೆ ಯಂದಾಳೊಬ್ಬಳು 14ಒಂದೆರಡು ನೂರಿನ್ನೂರೈನೂರು ಸಾವಿರೆಂದೆಣಿಸಿ |ಮಂದಗಮನೆಯೊಬ್ಬಳಿಲ್ಲವಮ್ಮ ನಮ್ಮೊಳೆಂದರು ||ಇಂದ್ರಜಾಲದವಳೇ ಆವನು ಅಂಥ ವಂಚಕನೆ |ಸಂಧಿಸಿತಿಬ್ಬರಿಗೆ ಮುಂದೇನುಪಾಯವೆಂದರು 15ಹರಿಹೋದಕಷ್ಟೊಂದು ಅವಳ ನಾ ವೈದ ದುಃಖೊಂದು |ಸ್ಮರಣೆದಪ್ಪಿ ಗಂಡರೊಡನೆ ಆಡಿದ್ದೊಂದು ||ಸ್ಮರನ ಬಾಣ ಬಾಧೆಯೊಂದು ಬೆರದಿತಿನಿತುಕ್ಲೇಶ|ಹರದೆರಚ್ಯುತನರಸುತವನಹೊಕ್ಕರು 16ಹರಿಒಬ್ಬಳ ಒಯ್ದನು ಕಂಡಿರಾ ಯಿದ್ದಿರ್ಯಾ ಎಂದು |ನರರೆಂಬೊ ಭ್ರಾಂತಿಯಿಂದ ಮರನ ಕೇಳುವರು ||ಸ್ಮರಣೆ ಬಂದಾಗ ವಮ್ಮೆ ಗಿಡ ಕೇಳುತಿಹವೆಲ್ಲೆ |ಹರಿಹರಿ! ಜೀವಿಸುವದೆಂತು ಹೇಳಿರೆಂಬೊರು 17ಅತ್ತ ಎಲ್ಲರ ವಂಚಿಸಿ ಯನ್ನ ರೂಪಾಧಿಕ ನೋಡಿ |ಎತ್ತಿಕೊಂಡು ಬಂದ ರಂಗನೆಂಬೊಳಾಕಿ ಮುದದಿ ||ಸತ್ಯ ಸಂಕಲ್ಪವಳ ಮನತಿಳಿದು ತಿಳಿಯದಂತೆ |ತೊತ್ತಿಗ ನಂದದಿ ಹೆಗಲೊಳಗಿಟ್ಟು ಪೋಗಲು 18ದಣಿದೆ ಹಸಿದೆ ನೀರಡಸಿದೆನೆಂದರವಳ |ಅಣುಗನಂದದಿಂದಿಳಿಸೇರಿಸಿ ಕೊಂಬುವನು ||ಗೊನೆ ಹಣ್ಣು ನಿಲಕದೆಂದರೆ ನೀಡಿ ಕೊಡುತಲಿ |ಘನಸುಖ ಬಡಿಸುತ ದಕ್ಕಿದಂತಿರುವನು 19ಸಾವಿರ ಪ್ರಕಾರಾ ಘೋರಿಸಿದರೂ ನಗುತಲೆ ಇಹ |ಕೇವಲ ದಕ್ಕಿದನೆಂದು ನಿಶ್ಚಯ ತಿಳಿದಳು ||ಮಾವಿರಿಂಚೇಶ ಜಂಭಾರಿಗಳನು ವಂಚಿಸುವಂಥ |ದೇವನು ಈ ನಾರಿ ಅಹಂಕಾರವ ತಾಳುವನೆ20ಸೊಕ್ಕು ಬಂತಿವಳಿಗಿನ್ನು ಶೀಘ್ರ ತಗ್ಗಿಸಬೇಕೆಂದು |ಚೊಕ್ಕ ಮಾವು ಪಿಡಿಸಿ ಅಪ್ರತ್ಯಕ್ಷವಾಗಲಿತ್ತಲು ||ತುಕ್ಕಿ ತುಕ್ಕ್ಯಾರಂಣ್ಯಾ ಹೆಜ್ಜೆ ಪಿಡಿದಿಲ್ಲಿಹ ಅಲ್ಲಿಹ |ರಕ್ಕಸಾರೆನುತ ಬಂದೆಲ್ಲರವಳನು ಕಂಡರು 21ಜಾರೆ ಚೋರೆ ಕುಲ್ಲೆ ಖೂಳೆ ಕುಲಕಂಟಿಕೆನವನೀತ|ಚೋರನೆಲ್ಲಡಗಿಸಿದ್ದೆ ತೋರೆಲೆ ತೋರೆಂದರು ||ಘೋರಪಾತಕಿಯ ಕುಟ್ಟಿರೆಂದು ಕೆನ್ನಿ ಕುಟ್ಟುವರು |ಗಾರುಮಾಡಿದರೆ ಬಟ್ಟಬವಣೆಹೇಳಿದಳು22ಸಮದುಃಖಿಗಳಾಗಿಹರಿಹರಿಯೆಂದೊದರಲು ಈ |ಶ್ರಮ ನೋಡಿ ಪ್ರಾಣೇಶ ವಿಠಲ ಬಂದಾಲಿಂಗಿಸಿ ||ಸುಮನಗಂಧಿಯರೆ ನಿಮ್ಮಹಂಕಾರ ಬಿಡಿರೆಂದು |ಅಮರೇಶಮುಂಚಿನಂತೆಲ್ಲರೊಳಾಡಿದನು 23
--------------
ಪ್ರಾಣೇಶದಾಸರು
ರುದ್ರದೇವರ ಹರಿಹರಸ್ತೋತ್ರ127ಶರಣು ನಿನ್ನಚರಣಕಮಲಗಳಿಗೆ ಶಿವಶಿವಾ |ಕರವಪಿಡಿದು ಸುಮತಿಯಿತ್ತು ಪೊರೆಯೊ ಶಿವಶಿವಾ ಪದಂತಿಚರ್ಮ ಹೊದ್ದ ಭಸ್ಮಭೂಷ ಶಿವಶಿವಾ |ಚಿಂತಿ ರಹಿತ ಲಯಕೆ ಕರ್ತೃನಾದ ಶಿವಶಿವಾ ||ಸಂತರಿಂದ ಸತತ ಸೇವೆಗೊಂಬ ಶಿವಶಿವಾ |ಕಂತುಪಿತನ ಪೂರ್ಣ ಪ್ರೀತಿಪಾತ್ರ ಶಿವಶಿವಾ 1ಮಂದಮತಿಯ ತಪ್ಪಿನೆಣಿಸಬ್ಯಾಡ ಶಿವಶಿವಾ |ಕುಂದುನಿನಗೆ ಎಂದಿಗೆಂದಿಗಿಲ್ಲ ಶಿವಶಿವಾ ||ಮಂದಗಮನೆ ನಿನ್ನ ಮನದೊಳಿಲ್ಲೆ ಶಿವಶಿವಾ |ತಂದುಕೊಂಡ ದಕ್ಷ ವೃಥ ಕುವಾರ್ತಿ ಶಿವಶಿವಾ 2ಹೀನರಂತೆ ನಿನಗೆ ಕೋಪ ಸಲ್ಲ ಶಿವಶಿವಾ |ಮಾಣು ಯಜÕ ಸಹಯನಾಗು ದಯದಿ ಶಿವಶಿವಾ ||ಏನುಪಾಯ ಇದಕೆ ಚಿಂತಿಸುವದು ಶಿವಶಿವಾ |ಪ್ರಾಣೇಶ ವಿಠಲ ನಿನ್ನ ವಶದೊಳಿಹನು ಶಿವಶಿವಾ 3
--------------
ಪ್ರಾಣೇಶದಾಸರು
ಲಾಲಿಪಂಪಾಂಬಿಕೆಲಾಲಿಭ್ರಮರಾಂಬಿಕೆಲಾಲಿಬಗಳಾಂಬಿಕೆಲಾಲಿಲಾಲಿಎಂದು ಪಾಡಿರಿ ಸಾಧು ಸಜ್ಜನರೆಲ್ಲದೇವಿ ತಾನೇ ಎಂದುಲಾಲಿಪಅದ್ವಯಾಗಮ ದ್ಯುತಿಗೋಚರ ಅನಾದಿಅಚಲಾನಂದವೇಲಾಲಿಶುದ್ಧ ಸಮ್ಯಕ್ ಜ್ಯೋತಿರ್ಮಯ ಸ್ವರೂಪಸುಚರಿತ್ರ ನಿಶ್ಚಲಲಾಲಿಚಿದ್ಬಯಲಿನೊಳು ಹೃದಯ ತೊಟ್ಟಿಲೊಳುಭಾವಹಾಸಿಗೆಯಲ್ಲಿ ಪವಡಿಸಿಹೆಲಾಲಿಸಿದ್ಧರಿ ಮಲಗಿನ್ನು ಜೋಗುಳ ಪಾಡುವೆಶ್ರೀ ಮಹಾಲಕ್ಷ್ಮಿಯೇಲಾಲಿ1ನಿತ್ಯನಿರ್ಗುಣ ನಿಷ್ಕಲಂಕ ನಿರ್ವಿಕಲ್ಪನಿಜನಿತ್ಯ ನಿರ್ಮಳೆಲಾಲಿಸತ್ಯ ವಸ್ತುವೆ ಸನಾಥ ವಿಶೋತ್ಪತ್ತಿಸರ್ವಪರಬ್ರಹ್ಮರೂಪಲಾಲಿಪ್ರತ್ಯಗಾತ್ಮಳೆ ಪೂರ್ಣಪರಮ ಪರತರವಂದ್ಯೆಪಾವನ ಚಾರಿತ್ರೆಲಾಲಿಕರ್ತೃನೀ ಅನಂತ ಬ್ರಹ್ಮಾಂಡಾದಿಗಳಿಗೆಕರುಣಾ ಸಮುದ್ರವೇಲಾಲಿ2ಪೃಥ್ವಿಅಪ್ಪುತೇಜವಾಯುರಾಕಾಶಕ್ಕೆಪೃಥಕಾಗಿ ಹೊಳೆದಿಹಳೆಲಾಲಿಸತ್ವರಜತಮಸು ಮೂರರೊಳಗೆ ನೀಸಾಕ್ಷಿರೂಪದಲಿರುವೆಲಾಲಿವೇದ ವೇದಾಂಗಗಳ ವಾಗ್ರೂಪಿನಲ್ಲಿನೆಲೆಸಿ ರಂಜಿಪಳೆಲಾಲಿತತ್ವವಿಂಶತಿ ಪಂಚಶರೀರಗಳೊಳಗೆ ನೀತೊಳ ತೊಳಗಿ ಬೆಳಗುತಿಹೆಲಾಲಿ3ಜಾಗೃತ ಸ್ವಪ್ನ ಸುಷುಪ್ತಿ ಮೂರವಸ್ಥೆಜನಿತದಿ ಕಾಣಿಸಿಲಾಲಿಪ್ರಾಜÕತೈಜಸವಿಶ್ವಮೂರು ಮೂರುತಿಯಾಗಿಪರಿಣಮಿಸಿ ತೋರುವೆಲಾಲಿಶೀಘ್ರದಲಿ ಸದ್ಭಾವ ಸಚ್ಛಿಷ್ಯರಾದರ್ಗೆಸ್ವಾನಂದ ಸುಖವೀವೆಲಾಲಿರೌದ್ರದಲಿ ಭುಗುಭುಗು ಭುಗಿಲೆಂಬ ಕಳೆಗಳುಅತ್ಯುಗ್ರದಿ ಝಂಗಿಸುವೆಲಾಲಿ4ವಿದ್ಯಾವಿದ್ಯವ ತೋರಿ ದೃಶ್ಯಾದೃಶ್ಯಕೆ ಮೀರಿಅದೃಶ್ಯರೂಪ ಶ್ರೀ ಲಕ್ಷ್ಮೀಲಾಲಿಸಿದ್ಧಿಗಳೆಂಬುವ ಛೇದಿಪ ಹರಿಹರಸರಸಿಜೋದ್ಭವ ಮಾತೆಲಾಲಿಸಿದ್ಧ ಪರ್ವತವಾಸ ಸಾಹಸ್ರದಳ ಮಧ್ಯೆಶ್ರೀ ಬಗಳಾಮುಖಿಲಾಲಿಸದ್ಗುರು ಚಿದಾನಂದಅವಧೂತಬಗಳಾಂಬ ಸಗುಣನಿರ್ಗುಣಮೂರ್ತಿಲಾಲಿ5
--------------
ಚಿದಾನಂದ ಅವಧೂತರು
ವಂದನೆ ಮಾಡಿರೈಗುರುವರದೇಂದ್ರರ ಪಾಡಿರೈ ಪಬಂದ ದುರಿತಗಳ ಹಿಂದೆ ಮಾಡಿ ಸುಖ |ತಂದುಕೊಡುವ ದಯಾಸಿಂಧುಯತೀಂದ್ರರ ಅ.ಪ.ಮರುತ ಮತಾಂಬುಧಿ ಸೋಮನೆನಿಪ ವಸುಧೇಂದ್ರ - ಸದ್ಗಣಸಾಂದ್ರ|ಗುರುಗಳಕರಕಮಲದಿ ಜನಿಸಿದ ಸುಕುಮಾರಾ - ಕುಜನ ಕುಠಾರಾ ||ನೆರೆನಂಬಿದ ಭಕುತರನನುದಿನದಲಿ ಪೊರೆವಾ - ದುರಿತವ ತರಿವಾ |ಧರೆಯೊಳು ತ್ಯಾಗದಿ ಕರ್ಣನ ಮರೆಸಿದ ನೋಡಿ - ವರಗಳ ಬೇಡಿ1ಕರಿಹಿಂಡೊಳುಹರಿಹೊಕ್ಕ ತೆರದಿ ವಾದಿಗಳ - ಕೀಳು ಮತಗಳ |ವರಶಾಸ್ತ್ರಗಳಲಿ ಗೆಲಿದು ಸುಬುದ್ಧಿಯ ವರದ - ಜಗದೊಳು ಮೆರೆದ ||ಶರಭಂಗವರದಚರಣಸರಸೀರುಹಭೃಂಗ- ವಿಷಯ ಅಸಂಗ |ಸ್ಮರಣೆಯ ಮಾಡೆ ಪಿಶಾಚ ರೋಗಗಳ ಭಯವೂ - ಮುಟ್ಟದಲಿಹವೂ 2ಸಾನುರಾಗದಲಿ ಶ್ರೀ ರಾಘವೇಂದ್ರರ ಸ್ತೋತ್ರ - ಮಾಳ್ಪ ಸುಪಾತ್ರ |ಜಾನಕಿಪತಿ ಆನಂದದೊಳಿವರಿಗೆ ಒಲಿವ - ಹೃದಯದಿ ಸುಳಿವ ||ದೀನ ದಯಾಳು ಅಪರಿಮಿತ ಮಹಿಮ ಗುಣಾಢ್ಯ - ವಾದದಿ ದಾಢ್ರ್ಯಾ |ಧ್ಯಾನಿಸೆ ಮನದೊಳು ಜ್ಞಾನ ಕೀರ್ತಿ ಸುಖ ಕೊಡುವ - ಅಘಗಳ ಕಡಿವ 3ವಿಷ್ಣುನ ಲೋಕ ಪ್ರವೇಶ ಮಾಡಿದ ಚರಿಯಾ - ಕೇಳಿರಿ ಪರಿಯಾ |ಶಿಷ್ಟ ಜನರು ವಿಶ್ವಾವಸು ನಾಮಕ ಅಬ್ದ - ಆಷಾಢ ಶುದ್ಧ ||ಷಷ್ಠಿಯು ಕುಜವಾಸರ ಉತ್ತರಾ ನಕ್ಷತ್ರಾ -ವರಪುಣ್ಯಕ್ಷೇತ್ರ |ನಟ್ಟ ನಡುವೆ ವೃಂದಾವನ ಮಧ್ಯದೊಳಿರುವಾ - ಸೌಖ್ಯವ ಸುರಿವಾ 4ಆನೆ ಹಂಡೆ ವಸನಗಳು ದ್ರವ್ಯವು ನಾನಾ - ಮಾಡಿದ ದಾನಾ |ಆ ನಗರದಿ ಬಹು ಮಂದಿಯು ಭಕುತಿಯಲಿಂದಾ - ಪೂಜಿಪ ಚಂದ ||ಸೂನುಪಡೆದು ಸುಖ ಪಡುವರು ಸರ್ವರುನಿತ್ಯ- ಈತನು ಸತ್ಯ |ನಾನೆಂತುಸಿರಲಿ ಪ್ರಾಣೇಶ ವಿಠಲನ ದಾಸಾ, ಮುನಿ ಉತ್ತಂಸಾ 5
--------------
ಪ್ರಾಣೇಶದಾಸರು
ವರವ ಕೊಡೆ ತಾಯೆ ವರವ ಕೊಡೆ ಪ.ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆನೆರೆನಂಬಿದೆನು ನಿನ್ನ ಚರಣಕಮಲವನುಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ 1ಹೊಳೆವಂಥ ಅರಸಿನ ಹೊಳೆವ ಕರಿಯಮಣಿಸ್ಥಿರವಾಗಿ ಕಟ್ಟುವಂಥ ವರವ ಕೊಡೆತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆಯಾವಾಗಲಿರುವಂಥ ವರವ ಕೊಡೆ 2ಬಾಗಿಲ ತೋರಣ ಮದುವೆ ಮುಂಜಿ ನಾಮಕರಣಯಾವಾಗಲಾಗುವಂಥ ವರವ ಕೊಡೆಬಂಧುಬಳಗ ಹೆಚ್ಚಿ ಹೆಸರುಳ್ಳಮನೆಕಟ್ಟಿಉಂಡಿಟ್ಟಿಡುವಂಥ ವರವ ಕೊಡೆ 3ಹಾಲ ಕರೆಯುವ ಮೇಲಾದ ಸರಳೆಮ್ಮೆಸಾಲಾಗಿ ಕಟ್ಟುವಂಥ ವರವ ಕೊಡೆಕಂಡಕಂಡವರಿಗೆ ಕರೆದು ಮೃಷ್ಟಾನ್ನವತಿಳಿ ನೀರು ಕೊಡುವಂಥ ವರವ ಕೊಡೆ 4ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿಅಷ್ಟೈಶ್ವರ್ಯವು ಪುತ್ರಸಂತಾನವಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಿದುರನ ಭಾಗ್ಯವಿದು |ಪದುಮಜಾಂಡ ತಲೆದೂಗುತಲಿದೆ ಕೊ ಪಕುರುರಾಯನು ಖಳನನುಜನು ರವಿಜನು |ಗುರುಗಾಂಗೇಯರು ಎದುರಿರಲು ||ಹರಿಸಿ ರಥವ ನಡು ಬೀದಿಯಲ್ಲಿ ಬಹ |ಹರಿಯ ತಾನು ಕಂಡನು ಹರುಷದಲಿ 1ದಾರಿಯಲಿ ಬಹ ಮುರವೈರಿಯ ಕಾಣುತ |ಹಾರುತ ಚೀರುತ ಕುಣಿಯುತಲಿ ||ವಾರಿಧಾರೆಯನು ನೇತ್ರದಿ ಸುರಿಸುತ |ಬಾರಿಬಾರಿಗೆ ಹಿಗ್ಗುವ ಸುಖದಿ 2ಆಟಕೆ ಲೋಕಗಳೆಲ್ಲಾ ಸೃಜಿಸುವ |ನಾಟಕಧರ ತನ್ನ ಲೀಲೆಯಲಿ ||ನೀಟಾದವರ ಮನೆಗಳ ಜರೆದು |ಕುಟೀರದಲಿ ಬಂದುಹರಿ ಕುಳಿತ3ಅಡಿಗಡಿಗೆ ತನ್ನ ತನುಮನ ಹರಹಿ |ಅಡಗೆಡೆಯುತ ಬಲು ಗದ್ಗದದಿ ||ನುಡಿಗಳ ತೊದಲಿಸಿ ರೋಮವ ಪುಳಕಿಸಿ |ದುಡುದುಡು ಓಡುವ ದಶದಿಶೆಗೆ 4ಕಂಗಳುದಕದಿ ಪದಂಗಳ ತೊಳೆದು |ಗಂಧವ ಪೂಸಿದ ತನುಪೂರಸಿ ||ಮಂಗಳ ಮಹಿಮನ ಚರಣಕೆರಗಿ ಪು-ಷ್ಪಂಗಳಿಂದ ಪೂಜೆಯ ಮಾಡಿದನು 5ನೋಡಿದ ಭಕುತನ ಮನದ ಹವಣಿಕೆಯು |ಪಾಡುವ ಪೊಗಳುವ ಹರುಷದಲಿ ||ನೀಡಿದ ಕರದಲಿ ಬಿಗಿದಪ್ಪಿದ ಕೊಂ -ಡಾಡಿದ ಕರುಣದಿ ಜಗದೊಡೆಯ 6ಕ್ಷೀರವಾರಿಧಿ ಶಯನಗೆ ವಿದುರನು |ಕ್ಷೀರವನುಣ ಬಡಿಸಿದ ನೋಡಾ ||ವಾರಿಜನಾಭನು ಕರಸಂಪುಟದಲಿ |ಆರೋಗಣಿಸಿದ ಘನತೆಯನು 7ಒಂದು ಕುಡಿತೆ ಪಾಲುಹರಿ ತಾ ಸವಿದು |ಮುಂದಕೆ ನಡೆಸಿದ ಧರೆಮೇಲೆ ||ಇಂದಿರೆಯರಸನ ಚರಿತೆ ವಿಚಿತ್ರವು |ಚೆಂದದಿ ಹರಿದುದು ಬೀದಿಯಲಿ 8ಕರುಣಾಕರ ಸಿರಿಹರಿ ತನ್ನ ಭಕುತರ |ಪೊರೆವನುಅನುದಿನ ಆಯತದಿ ||ಸಿರಿಯ ಅರಸು ನಮ್ಮಪುರಂದರ ವಿಠಲನ |ಶರಣರು ಧನ್ಯರು ಮೇಲೆ 9
--------------
ಪುರಂದರದಾಸರು
ವೃಥಾಮಾಡಬೇಡ ಈ ಜನ್ಮವು ಸದಾಬರದು ಮೂಢಾ ಪಅಧೋಕ್ಷಜನ ಮೃದು ಪಾದಾರವಿಂದಗಳಯಥಾರ್ಥದಿಂ ಭಜಿಸಿ ಕೃತಾರ್ಥನಾಗದೆ 1ಸುಧಾರದನಗೃಹಪದಾರ್ಥದಾಶದಿಂಮದಾಂಧದಿಂಗುರುಬುಧಾಳಿ ಸೇರದೆ2ಪಿತಾ ಮಾತಾ ಹಿತ ಸುತಾದಿ ಬಂಧುಗಳ್ಹಿತಾರ್ಥರೆಂದು ಪರಗತೀ ನೀ ಕಾಣದೆ 3ಹರೆದುರಿತಪರಿಹರೆ ತುಲಸಿರಾಮಧೊರೆಯೆಂದು ನೀ ಮೊರೆಹೊಕ್ಕಡೆ 4
--------------
ತುಳಸೀರಾಮದಾಸರು
ವೆಂಕಟರಮಣ ವೇದಾಂತಕೋಟಿವಂದ್ಯಶಂಕರಪ್ರಿಯಪತಿಏಳೆನ್ನುತಪ.ಪಂಕಜಮುಖಿಪದ್ಮಾವತಿ ಸರ್ವಾ-ಲಂಕಾರದ ನಿದ್ದೆ ಸಾಕೆನ್ನುತ ಅ.ಪ.ಮಂಗಲಚರಿತ ಭುಜಂಗಶಯನ ನಿ-ನ್ನಂಗದಾಯಾಸವ ಪರಿಹರಿಸಿಪೊಂಗಲಶದಿ ಉಷ್ಣೋದಕ ಗಂಧ ತೈಲಾ-ಭ್ಯಂಗಮಾಡುವರೇಳು ಶೃಂಗಾರದ ಮೂರ್ತಿ 1ದಧಿಯ ಪೃಥುಕದಲಿ ಹದಗೈದು ಮಧುರದಿಮಧುಸೂದನ ನಿನ್ನ ಪದದ ಮುಂದೆಸದ್ ಹೃದಯರು ತಂದಿಹರು ಸಮರ್ಪಿಸೆಮದಜನಕ ನಿನ್ನ ಓಲೈಸುವರಯ್ಯ 2ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿಚೆನ್ನಾದ ಗೋಕ್ಷೀರವನ್ನು ತಂದುಉನ್ನತ ಮಹಿಮನೆ ಉಣ್ಣೆಂದು ಲಲಿತ ಸು-ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3ವಿಧವಿಧ ಷಡುರಸಭರಿತ ಮನೋಹರಸುಧೆಗೆಯಿಮ್ಮಡಿ ಮಧುರತ್ವದಲಿಮೃದುವಾದ ಉದ್ದಿನ ದೋಸೆಯ ಸವಿಯೆಂದುಪದುಮನಾಭನೆ ನಿನ್ನ ಹಾರೈಸುವರಯ್ಯ 4ಸಕ್ಕರೆಕದಳಿಉತ್ತಮ ಫಲಗಳ ತಂದುರಕ್ಕಸವೈರಿಯೆ ನಿನ್ನ ಮುಂದೆಚೊಕ್ಕಟವಾಗಿಡೆ ಲೆಕ್ಕ ಲೇಖನಗಳಒಕ್ಕಣಿಪರುವಾಸುದೇವನೀನೇಳಯ್ಯ5ಸಾರಹೃದಯ ಗೌಡಸಾರಸ್ವತವಿಪ್ರಭೂರಿವೇದಾದಿ ಮಂತ್ರದ ಘೋಷದಿಶ್ರೀರಮಣನೆ ದಯೆದೋರೆಂದು ಕರ್ಪೂರ-ದಾರತಿಯನು ಪಿಡಿದಿಹರು ಶ್ರೀಹರಿಯೇ 6ಭಾಗವತರು ಬಂದು ಬಾಗಿಲೊಳಗೆನಿಂದುಭೋಗಿಶಯನಶರಣಾದೆನೆಂದುಜಾಗರದಲಿ ಮದ್ದಳ ತಾಳರಭಸದಿರೇಗುಪ್ತಿರಾಗ ಸಂಗೀತ ಪಾಡುವರಯ್ಯ 7ಕರುಣಾಸಾಗರ ನಿನ್ನ ಚರಣದ ಸೇವೆಯಕರುಣಿಸೆಂದೆನುತಾಶ್ರಿತ ಜನರುಕರವಮುಗಿದು ಕಮಲಾಕ್ಷ ನಿನ್ನಯ ಪಾದ-ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8ನಾನಾ ಜನರು ಬಂದುಕಾಣಿಕೆಕಪ್ಪವಶ್ರೀನಿವಾಸನೆ ನಿನ್ನ ಪದಕೆ ಒಪ್ಪಿದಾನವಾಂತಕ ನಿನ್ನ ದಯವೊಂದೆ ಸಾಕೆಂದುಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9ನೀನೆ ಗತಿಯೆಂದು ನಿನ್ನ ನಂಬಿಹರು ಲ-ಕ್ಷ್ಮೀನಾರಾಯಣ ಪುರುಷೋತ್ತಮನೆಮಾನದಿ ಭಕ್ತರ ಸಲಹಯ್ಯ ಸಂತತಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವೆಂಕಟಾಚಲ ವಾಸ ವಂದಿಪೆನೋ ತವ ಪದ |ಪಂಕಜವ ನಿರ್ದೋಷ ವಾರಾಶಿಜಾದ್ರುಹಿಣ|ಶಂಕರ ಪ್ರಮುಖ ಪೋಷ ಶ್ರೀ ಶ್ರೀನಿವಾಸ ಪವೆಂಕಟ ಗದಾ ಸುದರುಶನವಿಜಯ|ಅಂಕಿತನೆಗಾಂಗೇಯಚೈಲತ- |ಳಂಕ ನನುಜ ಪಾಲಿಪುದು ಯನ್ನ ಮೀ |ನಾಂಕ ಜನಕ ಶಶಾಂಕ ಭಾಸ ಅ.ಪ.ಸ್ವಾಮಿ ಹೇ ನಿರಪೇಕ್ಷಝಷಕೂರ್ಮವರಾಹ|ಹೇಮಕಶ್ಯಪು ತೀಕ್ಷವಟುಭೃಗು ಕುಲೋದ್ಭವ ||ರಾಮ ಪಾಂಡವಪಕ್ಷ ತ್ರಿಪುರಾರಿ ಕಲ್ಕಿ |ಭೀಮವಂದಿತ ತ್ರ್ಯಕ್ಷಸಖವ್ರತತಿಜಾಕ್ಷ ||ಕಾಮಿತಪ್ರದ ಕೈರವದಳಶ್ಯಾಮಸುಂದರ ಕೋಟಿಮಾರಸು- |ಧಾಮಪ್ರಿಯ ಭಯವಿಪಿನವಹ್ನಿಸು ||ತ್ರಾಮ ನಂದನ ಪ್ರಾಣರಕ್ಷಕ |ಭೂಮಿಯೊಳು ದುರುಳರಿಪು ಸಾಲಿ ||ಗ್ರಾಮ ಮಂದಿರ ಲಕುಮೀ ಮನೋಹರ |ಸಾಮಜೇಂದ್ರನ ಪೊರೆದ ಸಹಸ್ರನಾಮ ಕಾಳೀಮದಾಹ ದೇವತ್ರ ||ಈಮಾಯಾತೃಣಕಾಷ್ಠಾದಿ ವ್ಯಾಪುತ |ಚಾಮೀಕರಭೂಷಣ ಶೋಭಿತ ||ಹೇಮಾಚಲ ಮಂದಿರ ಮುನಿಗಣಸೋಮಾರ್ಚಿತ ಕರುಣಿಸು ತ್ವರ್ಯಾ 1ನೀರಚರನಗಧರಕಿಟಿನೃಹರಿ ವಾಮನ |ಧರಣಿಪ ಸಂಹರ ಕೋದಂಡಕರ ಸ- ||ತ್ಯಾರಮಣಅಂಬರವರ್ಜಿತ |ತುರಂಗಮವೇರಿಕುಂಭಿಣಿಭಾರವಿಳುಹಿದ ಉದಾರ ||ಪರಾಶರ ಸುತ ಕಪಿಲರೂಪಿ ಸ- |ಮೀರ ವಂದ್ಯ ಅನಸೂಯವರಕುಮಾರ ಪು- ||ಷ್ಕರ ಕೇಶನನುಜ ಮಂದಾರನತ ಜನವಿಶ್ವ|ಧರಣ ಶರೀರವ್ಯೋಮಸಂತ್ಪತಿ ನಘ ತು- ||ಷಾರ ಗಣ ವೈದುವರೊ ನಿನ್ನಯಾ |ಪಾರಮಹಿಮೆಯ ತಿಳಿಯಲಾರರುನೀರಜಾಕ್ಷ|| ಯ ||ಪಿತಾಮಾತಾ ಮಹಿಮಯ ||ಕ್ಕಾರಿಂದೊಶ ಅಗ್ನಿಭಯ ನಿವಾರಣ ||ಸಾರೆಗರೆದು ಪೂರೈಸಭಿಲಾಷೆಯ |ಘೋರಿಸುತಿಹ ತಾಪತ್ರಯ ಬಿಡಿಸೊ ರ- |ಮಾರಮಣನೇ ಪ್ರಣತಾರ್ಥಿ ಪರಿಹರ 2ವೇದೋದ್ಧರಕೂರ್ಮಈ ಕ್ಷಿತಿಯ ಮಾಯದಲೊ- |ಯ್ದದುರ್ಮತಿ ಭರ್ಮ ಲೋಚನರತರಳಪ್ರ- ||ಹ್ಲಾದ ವರದ ಸುಕರ್ಮಸ್ಥಿತ ಮಾತೃಹಿಂಸಕ |ನಾದ ನಿರಶ ಸುಶರ್ಮ ಪ್ರಮುಖರನ ಮರ್ಮ ||ಭೇದಿಸೇಳಿದ ಭೈಷ್ಮೀವಲ್ಲಭ|ಶ್ರೀದಬುದ್ಧಖಳಕುಲಭಂಜನ||ಬಾದರಾಯಣನಿಗಮವೇದ್ಯನೆ |ಮೋದಮಯ ಪ್ರಾಣೇಶ ವಿಠ್ಠಲ ||ಕಾದುಕೋ ನಿನ್ನವರನು ಎಂದಾದಿಮಧ್ಯ |ವಿದೂರ ಯನ್ನ ವಿಷಾದಗುಣಗಳೆಣಿಸದೆ ಕುಬುಜೆಗೆ ||ಮೋದತೋರಿದ ದೀನಬಂಧು |ಶ್ರೀಧರಕೌಸ್ತುಭವಕ್ಷಸ್ಥಳ ||ದ್ವಾದಶವಪು ಸನ್ನಿಭ ನಿನ್ನಯ ಕ್ರೋಧಿಗಳೊಳು ಸ್ನೇಹವ ಪುನರಪಿ |ಮೇದಿನಿಯೊಳು ಜನ್ಮವ ಕೊಡದಿರು 3
--------------
ಪ್ರಾಣೇಶದಾಸರು
ವೈರಾಗ್ಯದಾವಾಗ್ನಿ ಉರಿಯು ಛಟಿಛಟಿಸಿತುಸರ್ವಪ್ರಪಂಚವೆಲ್ಲವ ಅಟ್ಟಟ್ಟಿ ಸುಟ್ಟಿತುಪಸತಿಸುತರು ಎಂಬ ಹೆಮ್ಮರವೀಗ ಸುಟ್ಟವುಪಿತೃ ಮಾತೃವೆಂಬ ಪಲ್ಲವ ಕರಿಕಿಟ್ಟಿತುಹಿತವೆಂಬ ಬಳ್ಳಿಗಳು ಅನಿಲ ಪುಟ್ಟವಿಟ್ಟವುಅತಿಭಾಗ್ಯವೆಂದೆಂಬ ಸಿಂಗಾರ ಹೊಗೆಯಿಟ್ಟವು1ಏಸೋ ಬಂಧುಗಳೆಂಬ ಧ್ರುಮವು ಶಿಖಿಸೋಂಕಿದವುಕ್ಲೇಶವೆಂದೆಂಬ ಕರಡವು ಭುಗಿ ಭುಗಿ ಲೆಂದವುವಾಸಗಳೆಂದೆಂಬಕುಡಿಕಿಡಿಯಾಗಿ ಉದುರಿದವುಆಸೆ ಎಂಬ ಫಲ ವಹ್ನಿಗಾಹಾರವಾದವು2ಘನಭ್ರಾಂತಿ ಎಂಬ ಪಕ್ಷಿಗಳು ಹಾರಿಹೋದವುಮನೆಯೆಂಬ ಗೂಡುಗಳು ನಿಗಿನಿಗಿಯಾದವುಬಿನುಗುಚಿಂತೆ ಎಂಬ ಹರಿಣ ಮುಗ್ಗರಿಸಿದವುಮನಸಿಜನ ಕ್ರೋಧವೆಂಬ ಕಳ್ಳರು ಸತ್ತಿಹರು3ಅಷ್ಟಮದದಾನೆ ಎಂಬುವು ಅಡವಿಯ ಹಿಡಿದವುತುಚ್ಛವಿಷಯಗಳೆಂಬ ನರಿಗಳೋಡಿದವುದುಷ್ಟಗುಣವೆಂದೆಂಬ ದುರ್ಜನ ಮೃಗವು ಚಲ್ಲಿದವುಕಷ್ಟ ತಾಪತ್ರಯದ ಕತ್ತಲು ಹರಿಯಿತು4ಇಂತು ಪ್ರಪಂಚವೆಂಬೀ ವೈರಾಗ್ಯದಾವಾಗ್ನಿಯಂತೆ ಧಗಧಗನೆ ಝಗಝಗನೆ ಸುಡುತಲಿಚಿಂತಯಕ ಚಿದಾನಂದ ಉರಿಯು ಅಖಂಡವಾಗಿಶಾಂತರೆಂಬರ ಮುಕ್ತರುಗಳ ಮಾಡಿತ್ತು5
--------------
ಚಿದಾನಂದ ಅವಧೂತರು
ಶಂಕರ ಗುರುವರ ಮಹದೇವ ಭವ-ಸಂಕಟ ಪರಿಹರಿಸಯ್ಯ ಶಿವ ಪ.ಸಂಕಲ್ಪ ವಿಕಲ್ಪಮನೋನಿಯಾಮಕಕಿಂಕರಜನಸಂಜೀವ ಅ.ಪ.ಭಾಗವತರರಸ ಭಾಗೀರಥೀಧರಬಾಗುವೆ ಶಿರ ಶರಣಾಗುವೆ ಹರಶ್ರೀ ಗೌರೀವರ ಯೋಗಿಜನೋದ್ಧರಸಾಗರಗುಣಗಂಭೀರ 1ರಾಯ ಲಕ್ಷ್ಮೀನಾರಾಯಣ ಭಕ್ತಿಪ-ರಾಯಣ ತ್ರಿನಯನ ಪುರಹನಕಾಯಜಮಥನ ಮುನೀಂದ್ರ ಸಿದ್ಧಜನ-ಗೇಯಸ್ವರೂಪೇಶಾನ 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶಂಕರ ಶಿವಶಂಕರ ಶಿವಶಂಕರ ಶಿವಶಂಕರಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ.ವ್ಯೋಮಕೇಶಭವಾಬ್ಧಿತಾರಕ ರಾಮನಾಮೋಪಾಸಕಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ 1ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರಶೈಲರಾಜಸುತಾಧರಾಮೃತಲೋಲ ಲೋಕಧುರಂಧರಕಾಲಕಾಲ ಕಪಾಲಧರಕರುಣಾಲವಾಲಮಹೇಶ್ವರಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3ಕೃತ್ತಿವಾಸಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕಮೃತ್ಯುಹರ ಹರಮೃಡನಮೋಸ್ತುನಮೋ&bಜquo;ಸ್ತು ಸುಮನನಿಯಾಮಕ 4ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹಚಂಡಿಕಾಧವ ಶಿವ ದಯಾರ್ಣವಖಂಡಪರಶುಸುರಾರಿಹಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗಸದೋದಿತಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6ಭರ್ಗಭಾರ್ಗವಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ