ಒಟ್ಟು 4285 ಕಡೆಗಳಲ್ಲಿ , 121 ದಾಸರು , 3030 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣಾ ನಮೋ ನಾರಾಯಣಾ ಪ ಘೋರ ಸಂಸಾರ ಭವದೂರ ಋಷಿಜನ ಮನೋ-ಹಾರ ಸಾಕಾರ ಸಿರಿಧರ ರೂಪನೆ ನಮೋಅ ನೆಗಳು ನುಂಗಿದ ಕುಮಾರಕನ ತಂ-ದಿತ್ತೆ ಮುನಿವರನಿಗೆ ನಾರಾಯಣಾಚಿತ್ತಜಾರಿ ಕೊಲ್ಲಲಂಬರೀಷ ಭೂಪೋತ್ತಮನ ಕಾಯ್ದೆ ಶ್ರೀನಾರಾಯಣಾ 1 ನಕ್ರಂಗೆ ಸಿಲ್ಕಿ ನಡುನೀರೊಳೊದರುವ ಗಜವಚಕ್ರದಿಂ ಕಾಯ್ದೆ ಶ್ರೀನಾರಾಯಣಾಶುಕ್ರನುಪದೇಶವನು ತವೆ ಜರಿದ ವೈಷ್ಣವರಅಕ್ಕರದಿ ಪಾಲಿಸಿದೆ ನಾರಾಯಣಾಶಕ್ರಜಿತುಪಿತ ಸಹೋದರಗೆ ಸ್ಥಿರರಾಜ್ಯವನುಉತ್ಕøಷ್ಟದಿಂ ಕೊಟ್ಟೆ ನಾರಾಯಣಾದುಷ್ಕøತದಿ ಸುತನ ಪೆಸರ್ಗೊಂಡವನ ಕಾಯ್ದೆಯೊ ತ್ರಿ-ವಿಕ್ರಮಾಂಕಿತ ವೀರ ನಾರಾಯಣಾ2 ದುರಿತ ಮೃಗ ವ್ಯಾಘ್ರನೆದುರಿತ ವನದಾವಶಿಖಿ ನಾರಾಯಣಾದುರಿತ ಜೀಮೂತಪವನ ದುರಿತಾಂಧಕಾರ ರವಿದುರಿತ ಲತಾಲವಿತ್ರ ನಾರಾಯಣಾದುರಿತ ಮರ್ದನ ಕಾಗಿನೆಲೆಯಾದಿಕೇಶವನೆದುರಿತ ಬಂಧವ ಪರಿದೆ ನಾರಾಯಣಾ 3
--------------
ಕನಕದಾಸ
ನಾರಾಯಣೆನು ಮನವೆ ನರಹರಿಯ ನೆನೆ ಮನವೆಘೋರ ದುರಿತಗಳ ಬೆದರಿಸಿ ಓಡಿಸುವುದು ಪ ಗುರುವಿನುಪದೇಶದಲ್ಲಿ ಪರಮ ರಹಸ್ಯವನರಿತುಮರೆಯದಲೆ ಅಲ್ಲಿ ಅಧಿಕಾರಿಯಾಗೊತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸುಪರಮ ವೈಷ್ಣವರ ಪಂಕ್ತಿಯ ಸೇರು ಮನವೆ 1 ನಿತ್ಯ ಸುಖಿಯಾಗೋ 2 ಶೇಷವಿಶೇಷವೆಂದೆನಿಪ ಪರಮಾರ್ಥದೊಳುಮೀಸಲಳಿಯದ ಪಾಪರಹಿತನಾಗುವಾಸಾಧಿಪತಿ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸ ನೀನಾಗೊ 3
--------------
ಕನಕದಾಸ
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಾಲಗೆ ಬರದಯ್ಯಾ ಶ್ರೀ ಗುರುವರರಾಯಾಪಾಲಿಸೆನ್ನೊಳು ನಿನ್ನ ಪೂರ್ಣದಯ ಪ ನಾಲಿಗೆ ಮತಿಗಳು ತಡೆದು ನಿಂತಿಹವಯ್ಯಮೇಲು ನಿಮ್ಮಯ್ಯ ನಾಮಾ ನಾ ಪೇಳೆನೆಂದರೆ ಅ.ಪ. ಕಥೆಯ ಕಟ್ಟಿದೆ ನಾಟಕ ಪದ್ಯವ ರಚಿಸಿದೆನೆಂಬಿ ಹೆಮ್ಮೆಯೊಳಿದ್ದೆ ಯತಿರಾಯಾನಿನ್ನ ಸುಚರಿತೆಯ ಕಥಿಸಲುಗತಿಕಾಣದೆ ನಿಂತು ಬಾಯ್ಬಿಡುವೆ ಪೊರೆಯಯ್ಯಾ 1 ಪಾದ ತುತಿಸುವೆನೆಂದರೆ 2 ಸ್ಮರಿಸುವೆ ಮನದೊಳು ನಿರುತದಿ ಯತಿವರ್ಯಾಶ್ರೀ ರಾಘವೇಂದ್ರರಾಯಾಧರೆಯೊಳು ಪರಮ ದಾನಿಗಳ ಹಿರಿಯನೆಂದುಅರಿತು ನಾ ಬಂದೆನೊ ಮೂಕನಾಗಿರುವೆನೊ 3 ಮನದೊಳಗಿರುತಿರ್ದ ಭಕುತಿ ಭಾವಗಳುಏನಿತೆಂಬುದನು ನೀನೇ ನೋಡಿಮನಸಿನಭೀಷ್ಟವನಿತ್ತು ಕಾಯುವದಯ್ಯಾಮನದೊಳು ನೆನೆಯುವೆ ಹೊರಗಾಡಲಾರದೆ 4 ಕರುಣಾಳು ಗದುಗಿನ ವೀರನಾರಾಯಣಹರನೆ ಕಳುಹಿಸಿದನೆಂದು ನಾನಿಲ್ಲಿ ಬಂದೇವರ ನಿನ್ನ ಚರಣವೂ ದೊರೆಯೆ ನಾ ತುತಿಸಲುಸರಿಯಾದ ನುಡುಗಳ ಕರುಣಿಸು 5
--------------
ವೀರನಾರಾಯಣ
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1 ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2 ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3 ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4 ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5
--------------
ಕನಕದಾಸ
ನಿಖಿಲಾತ್ಮ ನಿಖಿಲಾತ್ಮ ಅಖಿಲಬ್ರಹ್ಮಾಂಡಪತಿ ಸಲಹು ಸರ್ವೋತ್ತಮ ಪ ಮಂದರಧರ ಎನ್ನ ಮಂದಮತ್ಯಳಿದಾ ನಂದ ಮತಿಯಿತ್ತು ಚೆಂದದಿಂ ರಕ್ಷಿಸು 1 ನಿತ್ಯನಿರುಪಮ ಸತ್ತು ಚಿತ್ತ ನಿಮ್ಮ ಭಕ್ತಿ ಭಜನೆ ಎನ್ನ ಚಿತ್ತಕ್ಕೆ ದಯಮಾಡು 2 ಬಗೆದು ಎನ್ನಂತರಂಗzಗಲದೆ ನಿಂತು ನಿಜ ಸುಗುಣವಿತ್ತು ಪೊರೆ ಸುಗುಣಾಂಬುಧಿ 3 ಕಾಮಿತಜನಕಲ್ಪ ಕಾಮಧೇನು ಎನ್ನ ಕಾಮ ಪೂರೈಸಿ ನಿನ್ನ ನಾಮವಿತ್ತು ಕಾಯೊ 4 ಭಕ್ತಿದಾಯಕ ನಿನ್ನ ಭಕ್ತಿಯಿಂ ಭಜಿಸುವೆ ಸತ್ಯ ಶ್ರೀರಾಮ ನಿತ್ಯಮುಕ್ತಿಯಿತ್ತು ಪೊರೆ 5
--------------
ರಾಮದಾಸರು
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ
ನಿಗಮನುಳುಹಿಸಿ ನಗನೆಗದಿಹಗೆ ಜಗದೋದ್ದಾರ ಸುಭಗತ ಪ್ರಿಯಗೆ ಸುಗಮ ಧರಿ ಮೂರಡಿಯ ಮಾಡಿ ಸುಗೊಡಲ ಪಿಡಿದಿಹಗೆ ಬಗೆದು ಜಲಿಧಿಲಿ ಸೇತು ಗಟ್ಟಿದ ಖಗವಾಹನ ಯದುಕುಲ ಲಲಾಮಗೆ ಜಗಮೋಹಿಸುವ ಬೌದ್ಯಕಲ್ಕಿಗೆ ಶರಣು ಸುಶರಣು 1 ಸಿರಿಯನಾಳುವ ದೊರಿಯೆ ನಿನ್ನ ಮರೆಯ ಹೊಕ್ಕಿಹ ಚರಣಕಮಲ ಸರಿಯ ಬಂದ್ಹಾಂಗೆನ್ನ ಹೊರವದು ನಿನ್ನ ದಯ ಘನವು ಬಿರುದು ನಿನ್ನದು ಸಾರುತಿಹುದು ಕರಿಯ ವರದಾನಂದ ಮೂರುತಿ ಸುರಿಸಿ ಕರುಣಾಮೃತವುಗರೆವುದು ತರಳ ಮಹಿಪತಿಗೆ 2 ಮೂರ್ತಿ ಸದ್ಗುರು ನೆನೆವರನುದಿನ ಸಾರ್ಥ ಸದ್ಗುರು ಜನವನದೊಳನುಕೂಲ ಸದ್ಗುರು ತಾನು ತಾಂ ಎನಗೆ ಸಾರ ನೀಡುತ ತನುಮನದೊಳನುವಾಗಿ ಸಲಹುವ ದೀನಮಹಿಪತಿ ಸ್ವಾಮಿ ಭಾನುಕೋಟಿ ತೇಜನಿಗೆ 3 ಶರಣಜನಾರಾಭರಣವಾಗಿಹ ಮೂರ್ತಿ ಸದ್ಗುರು ತರಣೋಪಾಯದ ಸಾರಸುಖವಿರುವ ನಿಜದಾತ ಪರಮಪಾವನ ಗೈಸುತಿಹ ವರ ಶಿರೋಮಣಿ ಭಕ್ತವತ್ಸಲ ಚರಣ ಸ್ಮರಣಿಲೆ ಪೊರೆವದನುದಿನ ತರಳ ಮಹಿಪತಿಗೆ 4 ನೋಡದೆನ್ನವಗುಣದ ದೋಷವ ಮಾಡುವದು ಸದ್ಗುರು ದಯ ಘನ ನೀಡುವುದು ನಿಜ ಸಾರಸುಖವನು ಕರುಣದೊಲವಿಂದ ಬೇಡುವÀದು ನಿನ್ನಲ್ಲಿ ಪೂರಣ ಪ್ರೌಢ ಘನಗುರುಸಾರ್ವಭೌಮನೆ ಮೂಢ ಮಹಿಪತಿ ರಕ್ಷಿಸನುದಿನ ಸರ್ವಕಾಲದಲಿ 5 ಸ್ವಾಮಿ ಸದ್ಗುರು ಸಾರ್ವಭೌಮನೆ ಕಾಮ ಪೂರಿತ ಕಂಜನಾಭನೆ ಸಾಮ ಗಾಯನ ಪ್ರಿಯ ಸಲವ್ಹೆನ್ನಯ ಶ್ರೀ ನಿಧಿಯೆ ಮಾಮನೋಹರ ಮನ್ನಿಸೆನ್ನ ನೀ ನೇಮದಿಂದಲಿ ಹೊರೆವದನುದಿನ ಕಾಮಧೇನಾಗಿಹ ಕರುಣದಿ ದೀನಮಹಿಪತಿಗೆ 6 ಕುಂದ ನೋಡದೆ ಬಂದು ಸಲಹೆನ್ನಯ್ಯ ಪೂರ್ಣನೆ ಇಂದಿರಾವಲ್ಲಭನೆ ತಂದಿ ತಾಯಿ ನೀ ಎನಗೆ ಬಂಧು ಬಳಗೆಂದೆಂದು ನಿನ್ನನೆ ಹೊಂದಿ ಕೊಂಡಾಡುವ ಮೂಢ ನಾ ಬಂದ ಜನ್ಮವು ಚಂದಮಾಡು ನೀ ಕಂದ ಮಹಿಪತಿಗೆ 7 ದೀನಬಂದು ದಯಾಬ್ಧಿ ಸದ್ಗುರು ಭಾನುಕೋಟಿ ತೇಜಪೂರ್ಣನೆ ನ್ಯೂನ ನೋಡದೆ ಪಾಲಿಸೆನ್ನ ನೀ ಘನಕರುಣದಲಿ ನೀನೆ ತಾಯಿತಂದೆಗೆ ನೀನೆ ಬಂಧುಬಳಗ ಪೂರಣ ನೀನೆ ನೀನಾಗ್ಹೊರೆವದನುದಿನ ದೀನಮಹಿಪತಿಗೆ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಜ ದೇವನೇ ಕೇಶವಾ ತ್ರಿಜಗಧೀಶಾ ಭಜಿಸುವೆ ತರಳ ದಾಸಾ ಪ ಅಜಸುರಾರ್ಚಿತ ಸುಗುಣರೂಪನೇ ನಿಜ ಶ್ರೀ ಲಕ್ಷ್ಮೀ ಸೇವಿತ ಹರಿಯೆ 1 ಸುಜನ ಪಾಕನಿಂದ ಚರಣವ ಭಜಿಸುವೆನು ಶ್ರೀ ಜಾನ್ಹಕಿ ರಮಣಾ 2 ನಿರುತ ದಾಸರ ಕಾಯೋಪಿತನೇ ಸಿರಿ ಚನ್ನಕೇಶವ ಮಾದವನೇ 3
--------------
ಕರ್ಕಿ ಕೇಶವದಾಸ
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿಜ ವೈಷ್ಣವಾ ಅವನೇ ನಿಜ ವೈಷ್ಣವಾ ಪ ಇತರರ ದುಃಖವು ತನಗೆಂದರಿವಾಸತತದಿ ಸೇವೆಗೆ ತತಪರನಿರುವಾ 1 ತೊರೆದು ಹೆಮ್ಮೆಯಾ ಸರುವರು ನಮಿಸುವ ಪರರನು ಜರಿಯಾ ನಿರುಮಲನಿರುವಾ 2 ಧನ್ಯನವನು ತಾಯನ್ಯ ಸತಿಯರನುತನ್ನ ತಾಯಿಯೊಲು ಮನ್ನಿಸುತಿರುವಾ 3 ಸಟಿಯನು ನುಡಿಯಾ ಪರಧನವೆಡಿಯಾಕಟ್ಟಿಲಿ ಸಿಕ್ಕದೆ ಸಮಮನನೆನವ 4 ನಡೆನುಡಿಗಳಲಿ ಮಡಿಯಿಂದಿರುವಾದೃಢ ಮನದಿಂ ಬಹು ಶಾಂತಿಯಲಿರುವಾ 5 ಪ್ರತಿಪ್ರಾಣಿಯಲಿ ಹರಿಯನು ನೋಡುವಾಅತಿಶಯ ದಯವನು ತೋರುತಲಿರುವಾ 6 ಕಾಮಕ್ರೋಧಗಳ ಗಡ ಜೈಸಿರುವರಾಮನಾಮವ ನೇಮದಿ ಭಜಿಸುವ 7 ಗದುಗಿನ ವೀರನಾರಾಯಣನಹೃದಯದಿ ಸತತ ಮುದದಲಿ ಪಿಡಿವ 8
--------------
ವೀರನಾರಾಯಣ
ನಿತ್ಯ ಪಾರಾಯಣ ವರ್ಣವರ್ಣವು ಶ್ರೀಹರಿ ನಾರಾಯಣ ಪ ಸತ್ಯಪೂರ್ಣಗುಣ ಚಿತ್ಸುಖಧಾರಣ [ನಿತ್ಯಾ]ನಂದದ ನಾರಾಯಣಅ.ಪ ಪಾತಕ ಪರಿಹರ ಖ್ಯಾತ ಮನೋಹರ ಪೀತಾಂಬರಧರ ಮುರಳೀಧರ ದಿವಿಜ ಸುಖಂಕರ [ವಿನುತ] ಶ್ರೀ ಮಾಂಗಿರಿವರ ಜಗದಾಧಾರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿತ್ಯ ಮಂಗಳಂ ಪ್ರಸನ್ನ ವಾಸುದೇವಗುರುವೆ ಪರಮಮಂಗಳಂ ಗುರುವೆಪಅನಾಥನಾದವನಿಗಾನಂದ ಮಂಗಳಂ ನಿನ್ನಧ್ಯಾನಗೈವ ಧನ್ಯರಿಗೆ ದಿವ್ಯ ಮಂಗಳಂಮಾನಸ ನಿನ್ನೊಳಗೆರಗೆ ಬಹು ಮಂಗಳಂ ಸರ್ವವೂ ನೀವೆಂದರಿತ ಮ'ಮರಿಗಖಿಲ ಮಂಗಳಂ 1ಕಂಗಳು ನಿನ್ನೊಳಿದ್ದರೆ ಶುಭಕಾರ ಮಂಗಳಂ ಭವಭಂಗಗೈವ ನಿನ್ನ ನೋಡೆ ಭವ್ಯ ಮಂಗಳಂಅಂಗಪ್ರತಿಸೇವೆಯೆ ಸರ್ವಾದಿ ಮಂಗಳಂ ಕಷ್ಟ'ಂಗುವಂಥ ನಿನ್ನ ಕೃಪೆ ಕೋಟಿ ಮಂಗಳಂ 2ಪಾದುಕೆಯೂಳಿಗವೇ ಪ'ತ್ರ ಮಂಗಳಂ ನಿನ್ನಪಾದಪದ್ಮ ಸೇವೆ ದೊರಕೆ ಬಹು ಮಂಗಳಂಓದಿದರೆ ನಿನ್ನ ಕಥೆಯ 'ಶ್ವ ಮಂಗಳಂ ನೀನಾದರಿಸಿ ಕರೆಯಲೆಮಗತ್ಯಂತ ಮಂಗಳಂ 3ನಿನ್ನ ಮುಂದೆ ಕುಣಿಯಲೆಮಗೆ ನಾನಾ ಮಂಗಳಂ ಗುಣವನ್ನು ಪಾಡಿ ಪೊಗಳಿದರಪಾರ ಮಂಗಳಂನಿನ್ನ ಚರಣತೀರ್ಥಪಾನ ಅನಂತ ಮಂಗಳಂನಿನ್ನ ದಿವ್ಯಪ್ರಸಾದವೆ ಭುವನ ಮಂಗಳಂ 4ದಾಸಾನುದಾಸನಪ್ಪುದೆ ದೊಡ್ಡ ಮಂಗಳಂ ಗುರುವಾಸುದೇವಾರ್ಯ ನಿನ್ನವರಿಗೆಲ್ಲಾ ಮಂಗಳಂಪೋಷಕನೀನಾದುದರಿಂ ಪಂತು ಮಂಗಳಂ ತ್ರಿಭುವನೇಶ ಚಿಕ್ಕನಾಗಪುರವಾಸ ಮಂಗಳಂ5
--------------
ವೆಂಕಟದಾಸರು
ನಿತ್ಯ ಶುಭಮಂಗಳ ಪ ಶ್ರೀರಂಗನಾಥನಿಗೆ ಮೂರಂಗವೇಷನಿಗೆ ಮಾರಾರಿಸಖನೆಂಬ ಮದನಪಿತಗೆ ನೂರೆಂಟುತಿರುಪತಿಗೆ ಕಾರಣನು ನಿಜದಿವ್ಯ ವೀರವೈಷ್ಣವನೆಂಬೊ ಮಹಾರಾಜಗೆ 1 ನೀಲಕಂಠನಪ್ರಿಯಗೆ ಮೇಲುಕೋಟೆಯ ಧೊರೆಗೆ ಏಳುಸುತ್ತಿನ ಕೋಟೆಯೊಳಗಿರುವಗೇ ಕಾಳೆಕೊಂಬುಧ್ವನಿಯ ಕೇಳುವಾನಂದನಿಗೆ ವಾಲಿಯನು ಕೊಂದಂತ ವೋಂಕಾರಗೆ 2 ಶಂಕರಪ್ರಿಯನಿಗೆ ಶ್ರೀಪಂಕಜಾಕ್ಷನಿಗೆ ಕುಂಕುಮಾಂಕಿತ ಪಕ್ಷಿವಾಹನನಿಗೆ ಕಂಕಣವು ಕರದೊಳಗೆ ಕಟ್ಟಿ ವೊ ಶ್ರೀಗುರು [ವಂಕ]ತುಲಸಿರಾಮದಾಸ ಪೋಷಿತನಿಗೆ 3
--------------
ಚನ್ನಪಟ್ಟಣದ ಅಹೋಬಲದಾಸರು