ಒಟ್ಟು 3457 ಕಡೆಗಳಲ್ಲಿ , 124 ದಾಸರು , 2458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡಿಸೊ ಬಂಧನ ಕ್ಲೇಶವ ಬಿಗಿಯುತಲಿದೆ ಪ ನಾನು ಬಿಟ್ಟರು ಎನ್ನ ಕಂಬಳಿ ಬಿಡದಿದೆ ಅ.ಪ ಎಲ್ಲವ ಬಿಟ್ಟು ನಾ ಬಂದೆನೆಂದರಿತೆನೊ ಎಲ್ಲವು ಎನ್ನನು ಬಿಡಲಿಲ್ಲವೊ ಕಲ್ಲು ಎದೆಯ ಪೊತ್ತ ಮಲ್ಲನೆಂದರಿತೆನೊ ಹುಲ್ಲೆಯ ಮರಿಯಂತೆ ನಡುಗುವಂತಾಯಿತೊ 1 ಮಿಕ್ಕ ವಿಷಯಗಳ ಬೇಡ ಬೇಡೆನ್ನುತ ಹೊಕ್ಕರು ಮೂಲೆ ಮೂಲೆಗಳನ್ನು ದಿಕ್ಕು ದಿಕ್ಕುಗಳಿಂದ ಸೆಳೆಯುತಲಿರುವುದು ಅಕ್ಕರೆ ತೊಲಗಿತು ಶುಷ್ಕವಾಯಿತು ಮನವು 2 ಲೋಕ ರಕ್ಷಕನು ನೀನೆಂಬುದನರಿತರು ವ್ಯಾಕುಲವೇತಕೆ ಪ್ರತಿ ಕ್ಷಣವು ತಾ ಕಾಣದ ನರ ವರವÀ ಕೊಡಲುಬಹುದೆ ಏಕಾಂತ ಭಕುತ ಪ್ರಸನ್ನನೆ ಕರುಣದಿ 3
--------------
ವಿದ್ಯಾಪ್ರಸನ್ನತೀರ್ಥರು
ಬಿಡು ಬಿಡು ಇನ್ನು ಸೋಗಾಚಾರ | ಒಡಿಯ ಬಲ್ಲನು ನಾನು ನಿನ್ನ ವಿಚಾರ ಪ ತುಡಗತನ ಕಲಿತು ನೆರೆಹೊರೆಯವರ ಮನೆಯಲ್ಲಿ | ಗಡಿಗೆ ತುಪ್ಪಾ ಬೆಣ್ಣೆ ಮೊಸರು | ಹಾಲು | ಕುಡಿದು ಛೀ ಹಳಿ ಕದ್ದ ಕಳ್ಳನೆನೆಸಿಕೊಂಡ | ಪಡಚುತನವಲ್ಲದೆ ಭಾರಕನು ನೀನಲ್ಲ 1 ಸೀರಯನು ಕದ್ದಂದು ಕಡವಿನ ಮರವನೇರಿ | ಊರ ನಾರಿಯರ ಮಾನಕ್ಕೆ ಸೋತು || ಜಾರತನದವನಾಗಿ ತಿರಗಿ ಜಗದಾ ಭಂಡ | ಪೋರರಿಗೆ ಪೋರನಲ್ಲದೆ ಹಿರಿಯನಲ್ಲ2 ಮುನಿಗಳೆಜ್ಞದಲ್ಲಿ ತಿರಿತಂದು ಗೊಲ್ಲತೆರ | ತನುಜರ ಸಂಗಡಲಿದ್ದು ಎಂಜಲುಂಡು | ಮನುಜದೇಹವ ತೆತ್ತು ಬಿನಗು ಲೀಲಾಕೃತಿ | ದನಗಾವಿ ಎಲ್ಲದೆ ದೊರೆ ಮಗನು ನೀನಲ್ಲ 3 ಯಾತಕ್ಕೆ ಬಾರದ ಕುನಪೆಣ್ಣಿಗೆ ಮೆಚ್ಚಿ | ಮಾತುಳನ ಕೊಂದು ಮುತ್ತೈಯಗೊಲಿದು | ಭೀತಿಯಲಿ ಪರರಾಯನ ಮಗಳ ಕೊಂಡು ಬಂದ | ಯಾತರ ಪೌರುಷದವನು ಲೋಕದೊಳಗೆಲ್ಲ 4 ತೊತ್ತಿನ ಮಗನಲ್ಲಿ ವುಂಡು ಬಿಗಿಸಿಕೊಂಡು | ಮಿತ್ರಭೇದವನಿಕ್ಕಿ ಬಂಧುಗಳಿಗೆ | ತೆತ್ತಿಗನು ನೀನಾಗಿ ವಾಜಿಗಳ ಪಿಡಿದು | ಹತ್ಯವ ಮಾಡಿಸಿದೆ ಉತ್ತಮನು ನೀನಲ್ಲ 5 ಅಣ್ಣ ತಮ್ಮಂದಿರನು ಅಗಲಿಸಿ ವೈರದಲಿ | ನುಣ್ಣಗೆ ಒಬ್ಬರೊಬ್ಬರ ಕೊಲ್ಲಿಸಿ | ಇನ್ನೇನು ಉಸರುವೆನು ಕಟ್ಟಕಡಿಗೆ ಎಲ್ಲ | ನಿನ್ನ ಕುಲವನು ಕೊಂದೆ ಇದು ಪುಶಿಯಲ್ಲ 6 ತಿಳಿಯಲಾರರು ನಿನ್ನ ಠಕ್ಕು ಠವಳಿಯ ಮಾಯ | ಜಲಜ ಸಂಭವ ಶಿವ ಇಂದ್ರಾದ್ಯರು | ಸುಲಭ ದೇವರದೇವ ವಿಜಯವಿಠ್ಠಲರೇಯ |ವೊಲಿದ ದಾಸರಿಗೆ ಸಂತಾನ ಕುಲದೀಪ7
--------------
ವಿಜಯದಾಸ
ಬಿಡುಮನವೆ ಬಿಡದಿಹ್ಯ ಸಂಸಾರ ಪಡಕೊಂಬುದು ಮಾಡು ನೀ ಸುವಿಚಾರ 1 ವಿಚಾರದೊಳಗದ ಬಲು ವಿವೇಕ ಸೂಚಿಸಿಬಾಹುದು ಸ್ವಾತ್ಮದ ಸುಖ2 ಸ್ವಾತ್ಮದ ಸುಖ ತಿಳಿದವ ಸ್ವತ:ಸಿದ್ಧ ಮತ್ತೆಲ್ಲಿಹದವಗೆ ಭವಬಂಧ 3 ಭವಬಂಧವ ತಿಳಿಯಲುಪಾಯ ಭುವನದಲ್ಯದ ಶುಕನಳಿಕನ್ಯಾಯಾ 4 ನ್ಯಾಯವ ತಿಳಿದರೆ ನೋಯವನೆಂದು ಶ್ರಯ ತಿಳಿಯಲು ತಾ ಬಂಧು 5 ಬಂಧು ಹಗೆಯು ತನಗೆ ತಾಯೆಂದು ಸಂಧಿಸಿ ಪಾರ್ಥಗ್ಹೇಳಿದ ಹರಿ ಬಂದು 6 ಹರಿವಾಕ್ಯವೆ ಗುರುಗುಹ್ಯದ ಗುಟ್ಟು ಪರಮಾನಂದದ ಹೆಜ್ಜೆಯ ಮೆಟ್ಟು 7 ಹೆಜ್ಜೆಲೆ ನಡೆವನು ಕೋಟಿಗೊಬ್ಬವನು ಸಜ್ಜನ ಶಿರೋಮಣೆನಿಸಿಕೊಂಬುನು 8 ಶಿರೋಮಣೆನಿಕೊಂಬುದು ಗುರುಕರುಣ ಗುರುಚರಣಕೆ ಬ್ಯಾಗನೆಯಾಗು ಶರಣು 9 ಶರಣ ಹೊಕ್ಕವಗೆಲ್ಲಿಹುದು ಮರಣ ಮರಣಕ ಮರಣವ ತಂದವ ಜಾಣ 10 ಜಾಣನೆ ಜನ್ಮರಹಿತ ವಾದವನು ಜನವನ ಸಕಲ ಸಮವಗಂಡವನು 11 ಸಮಗಂಡವಗಳದಿಹ್ಯ ಶ್ರಮವೆಲ್ಲಾ ರಾಮ ವಸಿಷ್ಠರೊಳಾಡಿದ ಸೊಲ್ಲ 12 ಸೊಲ್ಲಿಗೆ ಮುಟ್ಟಿದವ ಪ್ರತಿಯಿಲ್ಲ ಎಲ್ಲರೊಳಗ ವಂದಾದವ ಬಲ್ಲ 13 ಬಲ್ಲವನೆ ಬಲ್ಲನು ಬಯಲಾಟ ಎಲ್ಲರಿಗಿದೆ ಅಗಮ್ಯದ ನೋಟ 14 ನೋಟಕ ನೀಟ ಮಾಡಿದವನು ಧನ್ಯ ನೀಟಿಲೆ ನಡೆದವ ಕೋಟಿಗೆ ಮಾನ್ಯ 15 ಕೋಟಿಗೆ ಒಬ್ಬನು ತತ್ವಜ್ಞಾನಿ ನೋಟವಗಂಡಿಹ್ಯ ಮಹಾ ಸುಜ್ಞಾನಿ 16 ಸುಜ್ಞಾನಿಗೆ ಘನಮಯ ಸುಕಾಲ ಸುಗಮ ಸುಪಥವಾಗಿಹುದನುಕೂಲ 17 ಅನುಕೂಲದ ನಿಜ ಮಾತನೆ ಕೇಳು ಅನುದಿನ ಘನಗುರು ಸೇವಿಲೆ ಬಾಳು 18 ಪರಿ ಲೇಸು ಕಳೆವುದು ಮಿಕ್ಕಿನ ಭ್ರಾಂತಿಯ ಸೋಸು 19 ಸೋಸ್ಹಿಡಿದರ ಇದೊಂದೇ ಸಾಕು ವೇಷವದೋರುವದ್ಯಾತಕೆ ಬೇಕು 20 ಬೇಕೆಂಬ ಬಯಕೆಯ ಈಡ್ಯಾಡು ಸೋಕಿ ಶ್ರೀ ಸದ್ಗುರು ಪಾದದಿ ಕೂಡು 21 ಪಡೆವುದಿದೇ ಸ್ವಸುಖ ಸಾಧನ 22
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡೊ ಬಿಡೊ ಬಡಿವಾರಾ ಬೀರದಿರು ನಡಿ ನಡಿ ಹೋಗೈ ಸಾಕು ಪ ಗಂಡನುಳ್ಳವಳೆಂದರಿಯದೆ ನೀನೆಂಥಾ ಪುಂಡಾಟಿಕೆ ಯಾರಿಗೆ ಬೇಕೊ 1 ತಕ್ಕ ಬುದ್ಧಿ ಹೇಳುವರಿಲ್ಲದೆ ನಿ - ನ್ನಕ್ಕ ತಂಗಿಯರನೆ ಸೋಕೊ 2 ಶ್ರೀದವಿಠಲ ಸುಮ್ಮನೆ ಹೋಗದೆ ನಡು ಬೀದಿಯೊಳಗೆ ಮಾಡೊರೆ ಹೋಕು 3
--------------
ಶ್ರೀದವಿಠಲರು
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನಪ ಲಾಲಿಸಯ್ಯ ಭಕ್ತಪರಾಧ- ವನ್ನು ಕ್ಷಮಿಸಬೇಕಯ್ಯ ಪ. ಅನ್ಯಾಯ ಕಲಿಕಾಲಕ್ಕಿನ್ನೇನು ಗತಿ ಸುಪ್ರ- ಸನ್ನ ನೀನಾಗು ಸುಬ್ರಹ್ಮಣ್ಯ ಪಾವನಚರಿತಅ.ಪ. ಮಕ್ಕಳ ಮಾತೆಯಂದದಿ ಕಾಯುವ ಮಹ- ದಕ್ಕರದಿಂದ ಮುದದಿ ಸೊಕ್ಕಿನಿಂ ನಡೆವರ್ಗೆ ತಕ್ಕ ಶಿಕ್ಷೆಯನಿತ್ತು ರಕ್ಕಸಾರಿಯೆ ಹಿಂದಿಕ್ಕಬ್ಯಾಡೆಮ್ಮನು ದಿಕ್ಕಿಲ್ಲದವರ ಧಿಕ್ಕಾರ ಗೈದರೆ ಮಿಕ್ಕವರೆಮ್ಮನು ಲೆಕ್ಕಿಪರಿಲ್ಲ ದೇ- ವರ್ಕಳಮಣಿ ನಿನಗಕ್ಕಜವಲ್ಲವು ಕುಕ್ಕುಟಧರವರ ಮುಕ್ಕಣ್ಣತನಯ1 ಜಾತಿ ನೀತಿಯನು ಬಿಟ್ಟು ಡಾಂಭಿಕತನದ ರೀತಿಗೆ ಪ್ರೀತಿಪಟ್ಟು ಸೋತು ಹಣವ ಕೊಟ್ಟು ಖ್ಯಾತರೆಂಬುವ ಗುಟ್ಟು ಮಾತು ಮಾತಿಗೆ ತೋರಿ ಘಾತವ ಗೈವರ್ಮೀರಿ ಯಾತುಧಾನರ ಗುಣ ಯಾತಕ್ಕರಿಯದು ಭೂತೇಶ್ವರಸಂಜಾತ ಸುರನರ- ವ್ರಾತಾರ್ಚಿತ ಪುರಹೂತಸಹಾಯಕ ನೂತನಸಗುಣವರೂಥ ಪುನೀತ2 ಯಾವ ಕರ್ಮದ ಫಲವೋ ಇದಕಿ- ನ್ಯಾವ ಪ್ರಾಯಶ್ಚಿತ್ತವೋ ಯಾವ ವಿಧವೊ ಎಂಬ ಭಾವವರಿತ ಪುರುಷ ಈ ವಸುಧೆಯೊಳಿಲ್ಲ ಶ್ರೀವಾಸುದೇವ ಬಲ್ಲ ದೇವ ಲಕ್ಷ್ಮೀನಾರಾಯಣನ ಪಾದ ಸೇವಕನೀ ಮಹಾದೇವನ ಸುತ ಕರು- ಣಾವಲಂಬಿಗಳ ಕಾವ ನಮ್ಮಯ ಕುಲ- ದೇವ ವಲ್ಲೀಪತಿ ಪಾವಂಜಾಧಿಪ3
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನಹಕೆ ಬಾಯಿಲ್ಲ ಭೂತನಾಥ ಪ ನಿನ್ನ ಪದರಜ ಸ್ನಾನ ನೀಡೆನ್ನ ಉದ್ಧರಿಸು ಅ.ಪ. ಹೀನ ಯೋಗ್ಯತೆಗಿನ್ನು ಏನು ಮಾಡಲೊ ಸ್ವಾಮಿ ಧೇನು ವತ್ಸನ ತೆರದಿ ಪಾಲಿಸೆನ್ನ ವೇಣುಗೋಪಾಲನಾ ಧ್ಯಾನ ನಿಲ್ಲದು ಮನದಿ ನಾನು ನನ್ನದು ಬಿಡದು ಎನಗಾವ ಗತಿಯಿನ್ನು 1 ನೀಲಕಂಠನೆ ನಿನ್ನ ನೀಳಪಾದದ ಧೂಳಿ ಮೂರ್ಲೋಕದಘತೂಲಕಗ್ನಿ ಸತತ ಫಾಲಾಕ್ಷ ಪತಿತ ಪರಿಪಾಲಕನು ನೀನೊಬ್ಬ ಹಾಲಲ್ಲಿ ಅದ್ದೆನ್ನ ಹರಿಭಕ್ತರ ಬಂಧು 2 ಮನಕರಣ ತನು ವಿಷಯ ಘನಪಾಶದಲಿ ಸಿಕ್ಕಿ ಉಣಿಸುವುವು ಮಹದುಃಖ ಎನ್ನ ಮೀರಿ ತುಂಬಿ ಎನಿತು ನಿನ್ನಲಿ ನಿಂದು ಪೊರೆಯೆಂದು ಮೊರೆ ಇಡಲಿ 3 ದುಷ್ಟವಾಸನೆ ಶಕ್ತಿ ಮೆಟ್ಟಿ ಆಳುವುದೆನ್ನ ವೃಷ್ಟೀಶನಲಿ ಎನ್ನ ಪೋಗಬಿಡದೊ ದುಷ್ಟನಕ್ರಗೆ ಸಿಕ್ಕ ಕರಿಯಂತೆ ಬಾಯ್ಬಿಡುವೆ ಕಷ್ಟ ಪರಿಹರಿಸಯ್ಯ ಹರಿನಿಷ್ಠಧ್ಯಾನವನಿತ್ತು 4 ಶತಕೋಟಿ ಶ್ರುತಿಯಲಿ ಜಯೇಶವಿಠಲ ನತಬಂಧು ಎಂತೆಂದು ಸಾರುತಿಹುದು ಹಿತಭಕ್ತ ನೀ ಹರಿಗೆ ಹರಿಮೀರ ನಿನ್ನುಕ್ತಿ ಪತಿತಪಾವನ ನನ್ನ ಹರಿಭಕ್ತನ ಮಾಡು5
--------------
ಜಯೇಶವಿಠಲ
ಬಿನ್ಯೈಪೆ ನಿನಗಾನು ಭೀಮಸೇನ ಪ ಬನ್ನಬಡುತಿಹ ಜನರ ಭಯವ ಪರಿಹರಿಸೆಂದು ಅ.ಪ. ನೀಚರಿಂದಲಿ ಬಂದ ಭಯಗಳಿಂದಲಿ ಜನರು ಯೋಚಿಸುವರೆಮಗಾರು ಗತಿಯೆನುತಲಿ ಕೀಚಕಾಂತಕ ನಿನ್ನ ಕೀರ್ತಿ ಬಹುವಿಧ ಕೇಳಿ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು 1 ಭವ ವಿಮೋಚಕನು ನೀನೆ ಸಚ ರಾಚರಕೆ ಸಂತತ ಪುರೋಚನಾರಿ ಪ್ರಾಚೀನ ಕರ್ಮಾಬ್ಧಿ ವೀಚಿಯೊಳು ಮುಳುಗಿಹ ಖೇಚರೇಂದ್ರಾಹಿಪ ತ್ರಿಲೋಚನರ ಗುರುವೆ 2 ಖಚರೋತ್ತಮನೆ ನಿನ್ನ ಸುಚರಿತೆಗಳನು ಕೇಳಿ ರಚನೆಗೈಯ ಬಲ್ಲೆನೆ ಅಚಲ ಸತ್ವ ಪ್ರಚಲಿಸುತಿಹ ಮನೋವಚನ ಕಾಯುವ ಘಟೋ ಪ್ರಚಯ ಮಾಡುವುದೆಂದು 3 ಲೋಚಿತದ ಧರ್ಮಗಳ ಸೂಚಿಸೆಮಗೆ ಪಾಚಕನೆ ನಿನ್ನಡಿಗೆ ಚಾಚುವೆನು ಶಿರ ಸವ್ಯ ಸಾಚಿ ಸೋದರನೆ ದಯದಿ ಗೋಚರಿಸಿ ಸಲಹೆಂದು 4 ವಾಚಾಮಗೋಚರ ಜಗನ್ನಾಥ ವಿಠ್ಠಲನ ಶ್ರೀ ಚರಣ ಭಜಕನೆ ನಿಶಾಚರಾರಿ ಮೈಚರ್ಮ ಸುಲಿದು ದುಶ್ಯಾಸನನ ರಕುತ ಪರಿ ಷೇಚನೆಯ ಮಾಡಿದೆ ಮಹೋಚಿತವಿದೆಂದರಿದು 5
--------------
ಜಗನ್ನಾಥದಾಸರು
ಬೃಂದಾವನದಿ ನೋಡುವ ಬಾರೆ ಗೋ-ಪ ವಿಂದನಾಡುವ ಸಂದಣಿ ಸಾಲದೆ ಸಖಿ ಅ.ಪ. ಮುನಿಗಳು ತರು ಪಕ್ಷಿ ಮೃಗಂಗಳಾಗಿರೆಸನಕಾದಿಗಳು ಗೋವುಗಳಾಗಿರೆಅನಿಮಿಷರೆಲ್ಲರು ಗೋಪಾಲರಾಗಿರೆದನುಜಾಂತಕನು ಮನುಜನಂತಾಗಿರೆ 1 ತಳಿತ ತೋರಣದಿಂ ತಂಪಿನ ನೆಳಲಿಂಮಳೆಯಾಗಿ ಸುರಿವಾ ಮಕರಂದ ಜಲದಿಂಫಲ ಪುಂಜಗಳಿಂ ಶುಕಚಾಟುಗಳಿಂನಳಿನನಾಭನನುಪಚರಿಪ ವೃಕ್ಷಗಳುಳ್ಳ 2 ತಳಿತ ತರುಗಳೆಲ್ಲ ತಂತಮ್ಮ ಜಾತಿಯಉಲುಹನುಳಿದು ಕಣ್ಣುಮುಚ್ಚಿ ತೆರೆಯುತ್ತನಳಿನನಾಭನ ವೇಣುಗೀತೆಯ ರಸದಲ್ಲಿಮುಳುಗಿ ಮುನಿಗಳಂತಿಪ್ಪ ಪÀಕ್ಷಿಗಳುಳ್ಳ 3 ಚಿತ್ತಜನೈಯನ ವೇಣುನಾದವಎತ್ತಿದ ಕಿವಿಯಿಂದ ಸವಿಯುತಲಿಮತ್ತಾದ ಸುಖಜಲ ಕಡಲಾಗಿ ಹರಿಯಲುಚಿತ್ತರದಂತಿಪ್ಪ ತುರುವಿಂಡುಗಳುಳ್ಳ 4 ನಖ ತಿಂಗಳ ಬೆಳಕಿಗೆತುಂಗ ಚಂದ್ರಕಾಂತ ಶಿಲೆ ಒಸರಿಹಿಂಗದೆ ಹರಿದು ಕಾಳಿಂದಿಯ ಕೂಡಲುಗಂಗೆ ಯಮುನೆಯರ ಸಂಗಮದಂತಿಪ್ಪ 5 ಚಕೋರ ಚಕ್ರವಾಕಇರುಳು ಹಗಲು ಎಂದು ಹೋಗುತಲಿರುತಿಪ್ಪ6 ಹರಿಯ ಕೊಳಲ ಸ್ವರದತಿ ಮೋಹನಕೆತರುಮೊಗ್ಗೆಗಳಿಂ ಪುಳುಕಿತವಾಗೆಗಿರಿಯು ಝರಿಯಾ ನೆವದಿಂ ಕರಗಲುತೊರೆಯು ಸುಳಿಯ ನೆವದಿಂದ ತಾ ನಿಲ್ಲುವ7 ಕುಂಡಲ ತಾಳಮೇಳದ ರಭಸಕ್ಕೆನಲಿನಲಿದಾಡುವ ನವಿಲ ಹಿಂಡುಗಳುಳ್ಳ 8 ನಳನಳಿಸುವ ವನಮಾಲೆ ಇಂದ್ರಚಾಪಪೊಳೆವ ಪೊಂಬಟ್ಟೆ ಮಿಂಚು ವೇಣುಗಾನಎಳೆಯ ಗರ್ಜನೆ ಶ್ಯಾಮಮೇಘ ಕೃಷ್ಣಮಳೆಯ ಮೇಘವೆಂದು ಚಾತಕ ನಲಿಯುತ9
--------------
ವ್ಯಾಸರಾಯರು
ಬೆರಗದಿರು ಮನವೇ ನೀ ತತ್ವವನು ತಿಳಿಯದೆ ಮರುಗಬೇಕಾಗುವುದು ಅವಿವೇಕಕೆ ಪ ಸಿರಿಯರಸ ನರಹರಿಯ ಮರೆತು ಬಾಳುವ ನರನು ನರಕಕ್ಕೆ ಗುರಿಯಾಗಿ ಸೊರಗುವನು ನಿಜದಿ ಅ.ಪ ಸುಲಭವಲ್ಲವೊ ನಿನಗೆ ಮನುಜ ಜನ್ಮದ ಲಾಭ ತನುಭೋಗವಲ್ಲವೊ ಅದರ ಫಲವು ವನಜನಾಭನ ಮನದಿ ನೆನೆನೆನೆದು ದಿವ್ಯ ಸ ನ್ಮಾನವ ಪಡೆಯುವತನಕ ಶುನಕಕ್ಕೆ ಸಮನೋ 1 ಭವಮೋಹದಿಂದ ನೀ ಘನ ಪಾಪಗಳ ಮಾಡಿ ಧನಿಕನೆಂದೆನಿಸಿದರೆ ಎಣಿಕೆ ಬಾರದೋ ದಿನದಲ್ಲಿ ಧನದಿಂದ ಪಡುವ ಭೋಗಗಳು ಬಂ ಧನದಲ್ಲಿ ಕೆಡಹುವುವು ನಿನ್ನನು ನಿಜದಿ 2 ಪ್ರೇಮಪಾಶಕೆ ಸಿಲುಕಿ ವಾಮಲೋಚನೆಯರ ಕಾಮಿತಕೆ ಬಿದ್ದು ನಿರ್ನಾಮವಾಗದಿರೊ ಹೇಮದಾಸೆಗೆ ನಿನ್ನ ಕಾಮನೆಂದ್ಹೊಗಳುವರೋ ರೋಮ ರೋಮದಿ ಸುಲಿದು ಕೊನೆಗೆ ಬಿಸುಡುವರೋ 3 ಮುನ್ನ ಏಸೇಸು ಜನ್ಮಗಳ ಪೊಂದಿದೆಯೊ ನೀ ನಿನ್ನವರು ಯಾರೆಂದು ಪೇಳಲಳವೇ ಘನ್ನ ಮಹಿಮನಲಿ ಸಂಪನ್ನಮತಿಯನೆ ಪೊಂದು ಪನ್ನಗಶಯನ ಪ್ರಸನ್ನನಾಗುವನು 4
--------------
ವಿದ್ಯಾಪ್ರಸನ್ನತೀರ್ಥರು
ಬೇಕೆಂದರೆ ಬಾರದು ಒಲ್ಲೆನೆಂದರೆ ಹೋಗದುಏಕಂಜುವಿ, ಶ್ರೀಹರಿ ಕರುಣಿಸದೆ ಒಂದೂ ಆಗದು ಪ ಸುಖವಾದಡೆ ಕಾಣುತ ಮುಖ ಕಮಲವುವಿಕಸಿತವಾಹುದು ಶ್ರೀಹರಿ ಕರುಣದಿದುಃಖವಾದಡೆ ದುಸ್ಥಿತಿಯಲಿರಲು ಅಂ-ಬಕದಲಿ ಜಲ ಪೋಗುವುದೇಕೊ ?ಸುಖದುಃಖ ದಿವ ರಾತ್ರಿಯ ತೆರವದರಿಂದಲಿ ನರರಂ-ಗಕೆ ಬಾಹುದು, ರಕ್ಷಣೆ ಮಾಡುವ ಕಾಶಿಪೀತಾಂಬರಮಕರ ಕುಂಡಲಾಭರಣನ ನೆನೆ ಮನವೆ1 ಸಿರಿ ಬಂದರೆ ಸಿರಿಗಾನಂದವ ಮಾಡುವಿರೇತಕೆ ಮನ ನಿರ್ಮಳ ಧ್ವನಿಯಲಿದರಿದ್ರವು ಬಂದರೆ ಧಾತುಗೆಟ್ಟು ದೇಹಾ-ತುರ ಹೊಂದುವಿರೇತಕೆ ದುಗುಡದಿಸಿರಿ ದಾರಿದ್ರ್ಯವು ಸುರತತಿಗಡರುವತೆರನೆಂದರಿದದರಿಂದಲಿ ಮಾನ-ವರಿಗೆ ಬಾಹುದು, ಪರಿಹರಿಸುವ ಪರಮಾತ್ಮನೆನಿಪಮುರವೈರಿಯ ಬಿಡದಿರು ಎಲೆ ಮನವೆ 2ಬಿ ಜನನವಾದರೆ ಹಾಡಿ ಹರಸಲೇತಕೆಅನುಗತಿಯನು ಹೇಳಿದರಳಲೇಕೆಜನನಮರಣವದೆಲ್ಲರಿಗೆ ಗತಿಬಾಹುದು ಏಕೆಜನನ ಮರಣವನೊಂದು ಹೊರಗೆ ಮಾಡಿ ಪರಜನದೊಳಗಿರಿಸುವ ಸುಜನೇಶ ಮುನೀಶನೆಂ-ದೆನಿಸುವ ಕಾಗಿನೆಲೆಯಾದಿಕೇಶವರಾಯನಅನುಶ್ರುತಿಯನು ಬಿಡದಿರು ಎಲೆ ಮನವೆ 3
--------------
ಕನಕದಾಸ
ಬೇಗ ನೀಗಿಸು ದುರ್ಭೋಗದ ಸೆರೆಯ ನಾಗಶಯನ ಬಾಗಿ ಬೇಡುವೆ ಪ ನೀತಿಗೆಡಿಸಿ ಮಂಗನೆನಿಸಿ ಮಾತುಮಾತಿಗೆ ಭಂಗಬಡಿಸಿ ಪಾತಕನೆನಿಸಿ ದಂಗು ಹಿಡಿಸಿ ಘಾತಮಾಳ್ಪ ಹೊನ್ನಿನಾಸೆ 1 ಕುನ್ನಿಯಂದದಿ ಕುಣಿಸಿ ಕುಣಿಸಿ ಬನ್ನ ಬಡಿಸಿ ಬನ್ನಂಗನೆನಿಸಿ ಉನ್ನತ ಸುಖಗೆಲಿಪ ಹೇಸಿ ಗನ್ನಗತಕ ಹೆಣ್ಣಿನಾಸಿ 2 ಮೋಸಪಾಶದೊಳಗೆ ಮುಳುಗಿಸಿ ದೋಷದೆಳಸಿ ಮುತಿಯಕೆಡಸಿ ನಾಶ ಯಮನ ಕೊಲೆಗೀಡೆನಿಸಿ ಘಾಸಿ ಮಾಳ್ಪ ಹೆಣ್ಣಿನಾಸಿ 3 ಇಷ್ಟೆ ಜಗದ ಸುಖವಿದನು ಎಷ್ಟುನಂಬಿ ಫಲವೇನು ಅಷ್ಟು ಮಾಯವೆನಿಸಿ ಎನ್ನನು ನಷ್ಟಗೊಳಿಪ ಕೆಟ್ಟಾಸಿಯನು 4 ಮೀರಿ ಮಹ ಘೋರಬಡಿಸಿ ಸಾರಸುಖದ ಮಾರ್ಗ ಕೆಡಸಿ ಧೀರ ಶ್ರೀರಾಮ ನಿನ್ನ ಮರೆಸಿ ಗಾರುಮಾಳ್ಪ ಪಾಪರಾಸಿ 5
--------------
ರಾಮದಾಸರು
ಬೇಡಲೇತಕೆ ಪರರ ದೇಹಿಯೆಂದು ಪ ನೀಡುವಾ ಧೊರೆ ಎನಗೆ ನೀನಿರಲು ಸರ್ವದಾ ಅ.ಪ. ಗ್ರಾಸವನು ಬೇಡೆ ದೂರ್ವಾಸ ಮುನಿಗಂದನ್ನ ಅನಾ ಯಾಸದಿಂ ತತ್ಕಾಲದಲಿ ಕಲ್ಪಿಸಿ ಆ ಸಂಯಮಿಗೆ ಉಣಿಸಿ ದಣಿಸಿದ ಮಹಾ ದಾತಾ ದಾಶರಥೆ ನಿನ್ನ ಬಿಟ್ಟನ್ಯ ದೇವತೆಗಳನು 1 ಖಳ ದುಶ್ಯಾಸನನು ದ್ರೌಪದಿಯ ಸಭೆಯೊಳು ದು ಕೂಲವನು ಸೆಳೆಯೆ ದ್ವಾರಕ ಮಂದಿರಾ ಶ್ರೀ ಲೋಲ ಶ್ರೀ ಕೃಷ್ಣ ಕರುಣಿಸು ಕರುಣಿಸೆನೆ ಪಾಂ ಚಾಲಿ ಮೊರೆ ಕೇಳಿ ದಿವ್ಯಾಂಬರ ನಿಚಯವಿತ್ತೆ 2 ಮಡದಿ ಕಳುಹಲು ಬಂದ ಬ್ರಾಹ್ಮಣನ ಪೀಡಿಸುವ ಬಡತನವ ಕಳೆದೆ ಒಪ್ಪಿಡಿಯವಲಿಗೆ ಪೊಡವಿಯನ್ನಾಳಿಸಿದೆ ಕ್ರಿಮಿಗೊಲಿದು ಕಾರುಣ್ಯದಲ್ಲಿ ಮೃಡ ಬಿಡೌಜರೀಪ್ಸಿತ ಕೊಡುವೆ 3 ತಾಪಸೋತ್ತಮ ಮೃಕಂಡಾತೃಜಗೆ ಕಲ್ಪಾಯು ನೀ ಪೂರ್ತಿ ಮಾಡಿ ಅಲ್ಪಾಯು ಕಳೆದು ಆ ಪರ್ವತೇಶ್ವರನ ಪಟ್ಟಣವ ಸಾರ್ದು ಸಾಂ ದೀಪ ತನಯನ ತಂದ ಸರ್ವಾಂತರ್ಯಾಮಿ 4 ವಿಶ್ವ ಜೀವರಿಗನ್ನ ಕಲ್ಪಕನೆ ನೀನಿರಲು ಜ್ಞಾನ ದ್ರವ್ಯ ಅಲ್ಪ ಮಾನವರಿಗಾಲ್ಪರಿರೇನಹುದು ಅಹಿ ತಲ್ಪ ಜಗನ್ನಾಥ ವಿಠ್ಠಲ ಕಲ್ಪತರುವಿರಲು 5
--------------
ಜಗನ್ನಾಥದಾಸರು
ಬೇಡವೀಗ ಬಾಲೆ ಸಂಗ ಕೆಟ್ಟುಹೋಗುವೆ ಇದುಪಾಡಲ್ಲ ಭಂಗವನು ಅನುಭವಿಸುತಕಾಡ ಹಿಡಿಯುವೇ ಹುಟ್ಟುಗೆಡುವೆಯಲ್ಲೊ ಪ ಸತ್ಯವದು ನಾರಿದೋಷ ಮೃತ್ಯುವಲ್ಲೋ ಯಮನಿತ್ಯದಲಿ ಎತ್ತಿರುವ ಕತ್ತಿಯಲ್ಲೋ ಆತ್ಮ-ಹತ್ಯವಲ್ಲೋ ಅಪಥ್ಯವಲ್ಲೋ 1 ಸರಕು ಎಲ್ಲೋ 2 ಶಿಷ್ಟಾಶಿಷ್ಟರೆಂಬವರು ಕೆಟ್ಟರಲ್ಲೋ ಬಲುಗಟ್ಟಿ ತವಸಿಗಳು ಮತಿಗೆಟ್ಟರಲ್ಲೊ ಕಂ-ಗೆಟ್ಟರಲ್ಲೋ ಘಾಸಿಪಟ್ಟರಲ್ಲೋ 3 ಧಾರಣೆಯು ಧ್ಯಾನಮೌನ ಹಾರಿತೆಲ್ಲೋ ಕಾಮಕೂರ್ಗಣೆಗಳು ಮೊನೆದೋರಿತಲ್ಲೋ ಮನೆಹಾರಿತಲ್ಲೋ ಧೈರ್ಯತೂರಿತೆಲ್ಲೋ 4 ನಾರಿಯವಳು ನಿನ್ನ ಗತಿಗೆ ಮಾರಿಯಲ್ಲೋ ಗುರುವೀರ ಚಿದಾನಂದನನ್ನು ಸೇರು ಎಲ್ಲೋಪರಿಹಾರವೆಲ್ಲೊಲ್ಲೋ ಮುಕ್ತಿ ಸಾರೆ ಎಲ್ಲೋ 5
--------------
ಚಿದಾನಂದ ಅವಧೂತರು
ಬೇಡುವುದಿಲ್ಲನ್ಯ ನಾನೇನು ನಿನ್ನ ನೋಡಿ ಕರುಣದಿ ಬಾರೋ ಭಜಕನ ತ್ರಾಣ ಪ ಬೇಡುತಕ್ಕುದನೆ ನಾ ಬೇಡುವೆನೆಲೆ ಸ್ವಾಮಿ ನೀಡುತಕ್ಕುದನೆ ನೀ ನೀಡಿ ಕಾಪಾಡಯ್ಯ ಮೃಡಮಿತ್ರ ಜಡಜಾಕ್ಷ ಒಡೆಯ ವೈಕುಂಠ ಅ.ಪ ಎನ್ನಮನೆ ಬಾಗಿಲವ ಕಾಯೆನ್ನದಿಲ್ಲ ಎನ್ನುಳಿಸು ತಂದೆಯನು ತರಿದೆನ್ನದಿಲ್ಲ ಅಣ್ಣನ್ನ ಕೊಲ್ಲಿರಾಜ್ಯಕೊಡು ಎನ್ನದಿಲ್ಲ ಎನ್ನ ಮನೆಯಾಳಾಗಿ ದುಡಿಯೆನ್ನದಿಲ್ಲ ನಿನ್ನ ದಾಸರ ಸಂಗವನ್ನು ಕರುಣಿಸಿ ಎನ್ನನನ್ಯರಿಗೆ ಬಾಗಿಸೆ ಮನ್ನಿಸಿ ಸಲಹೆಂಬೆ ಭಿನ್ನವೇನಿದರೊಳು ಉನ್ನತಮಹಿಮ 1 ಲಲನೆಯಳ ಕೊಡಿಸಣ್ಣನ್ಹೊಡಿದೆನ್ನದಿಲ್ಲ ಬಲವಾಗೆನ್ನಯ್ಯ ಬಂಧುಗಳ ನಾಶಕೆನ್ನೊದಿಲ್ಲ ಬಲಿದೆನ್ನಿಂ ತವ ಭಕ್ತ ನೋಡಿಸೆನ್ನದಿಲ್ಲ ಸುಲಭದೆನ್ನಿಂದ್ಹೆಡಮುರಿ ಕಟ್ಟಿಸಿಕ್ಕೆನ್ನದಿಲ್ಲ ಎಲೆದೇವ ತವಪಾದನಳಿನ ನಿರ್ಮಲಧ್ಯಾನ ನಿಲಿಸು ಸ್ಥಿರವಾಗೆನ್ನ ನಾಲಗೆಯೊಳನುದಿನ ಇಳೆಭೋಗದಳಸದೆ ಸಲೆ ಸುಖದಿ ಸಲಹೆಂಬೆ 2 ಭಿನ್ನವಿಲ್ಲದೆ ಬಾ ನೀ ಕರೆದಲ್ಲಿಗೆನೆನು ಎನ್ನ ಹೊಡೆತದ ಪೆಟ್ಟು ಸೈರಿಸೆಂದೆನೆನು ಉನ್ನತ ಕುಲಗೆಡು ಎನ್ನೊಳುಂಡೆನೆನು ಅನ್ಯಮಾತೊಂದು ನಿನ್ನ ಬಯಸಿ ಬೇಡೆನು ನಾನು ಅನ್ಯರನು ಬೇಡದಂತುನ್ನತ ಪದ ನೀಡಿ ನಿನ್ನ ಮೂರುತಿಯೆನ್ನ ಕಣ್ಣೊಳು ನಿಲ್ಲಿಸಿ ಬನ್ನಬಡಿಸದೆ ಕಾಯೊ ಎನ್ನಯ ಶ್ರೀರಾಮ 3
--------------
ರಾಮದಾಸರು