ಒಟ್ಟು 2438 ಕಡೆಗಳಲ್ಲಿ , 114 ದಾಸರು , 1739 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣಾಗತನಾದೆನು ಶಂಕರ ನಿನ್ನ ಚರಣವ ಮರೆಹೊಕ್ಕೆನು ಪ. ಕರುಣಿಸೈ ಕರಿವದನಜನಕಾ- ವರಕದಂಬಪೂಜ್ಯ ಗಿರಿವರ- ಶರಸದಾನಂದೈಕವಿಗ್ರಹ ದುರಿತಧ್ವಾಂತವಿದೂರ ದಿನಕರ ಅ.ಪ. ಹಸ್ತಿವಾಹನವಂದಿತ ವಿಧುಮಂಡಲ- ಮಸ್ತಕ ಗುಣನಂದಿತ ಸ್ವಸ್ತಿದಾಯಕ ಸಾವiಗಾನಪ್ರ- ಶಸ್ತ ಪಾವನಚರಿತ ಮುನಿಹೃದ- ಯಸ್ಥಧನಪತಿಮಿತ್ರ ಪರತರ- ವಸ್ತು ಗುರುವರ ಶಾಸ್ತಾವೇಶ್ವರ 1 ಮಂದಾಕಿನೀ ಮಕುಟ ಶಿವ ಶಿವ ನಿತ್ಯಾ- ನಂದಮ್ನಾಯ ಕೂಟ ಚಂದ್ರಸೂರ್ಯಾಗ್ನಿತ್ರಿಲೋಚನ ಸಿಂಧುರಾಸುರಮಥನ ಸ್ಥಿರಚರ- ವಂದಿತಾಂಘ್ರಿಸರೋಜ ಉದಿತಾ- ರ್ಕೇಂದುಶತನಿಭ ನಂದಿವಾಹನ 2 ನೀಲಕಂಧರ ಸುಂದರ ಸದ್ಗುಣವರು- ಣಾಲಯ ಪರಮೇಶ್ವರ ಕಾಲ ಕಪಾಲಧರ ಮುನಿ- ಪಾಲ ಪದ್ಮಜವಂದಿತಾಮಲ- ಲೀಲ ಡಮರು ತ್ರಿಶೂಲಪಾಣಿ ವಿ- ಶಾಲಮತಿವರ ಭಾಳಲೋಚನ 3 ಮಾರಸುಂದರ ಸಂಕರ ಶ್ರೀಲಕ್ಷ್ಮೀ- ನಾರಾಯಣಕಿಂಕರ ಮಾರಹರ ಮಹನೀಯ ಶ್ರುತಿಸ್ಮøತಿ- ಸಾರ ವಿಗತಾಮಯ ಮಹೋನ್ನತ ವೀರ ರಾವಣಮದನಿಭಂಜನ ಪುರಹರ 4
--------------
ತುಪಾಕಿ ವೆಂಕಟರಮಣಾಚಾರ್ಯ
ಶರಣಾಗತಿಯೊಂದೆ ಸಾಧನ ಮಾಧವ ಪ ಶರಣಾಗತಿಯಿಂದ ಹರಿಯ ಪ್ರಸಾದವು ಹರಿಯ ಪ್ರಸಾದವು ಪುರುಷಾರ್ಥಕೆ ಸಾಧನ ಅ.ಪ ಹರಿಯಲಿ ಚಿತ್ತವು ಹರಿಯಲಿ ಭಕುತಿಯು ಹರಿಯುದ್ದೇಶದಿ ಯಜನಾದಿಗಳು ಹರಿಯ ಚರಣದಲಿ ನಮ ನವು ಇದನೇ ಶರಣಾಗಿಯೆಂದರುಹಿದ ನುಡಿ ಕೇಳಿÀದೆ 1 ಸರ್ವೋತ್ತಮ ನೀನೊಬ್ಬನೆ ಎನ್ನುವ ದಿವ್ಯಜ್ಞಾನವ ಪೊಂದುತ ಮನದಲಿ ಸರ್ವಾಧಿಕ ನಿಶ್ಚಲ ಪ್ರೇಮ ಸಹಿತ ಸರ್ವಕರ್ಮ ನಿನ್ನೊಳಗರ್ಪಣೆ ಮಾಡುವೆ 2 ತ್ರಿವಿಧ ಪೂಜೆಗಳಲಿ ರತಿಯು ಹರಿಯ ಪ್ರಸನ್ನತೆಯಲಿ ನಂಬುಕೆಯು ಹರಿದಾಸನು ನಾನೆಂಬುವ ನಂಬಿಕೆ ಶರಣಾಗತಿಯಿದು ಮೋಕ್ಷಫಲಕೆ ಸಾಧನ 3
--------------
ವಿದ್ಯಾಪ್ರಸನ್ನತೀರ್ಥರು
ಶರಣು ಚಿನ್ಮಯರೂಪ ಅತ್ರಿಮುನಿ ಕುಲದೀಪ ಶರಣು ವಿಶ್ವಂಭರನೇ ದತ್ತ ದಿಗಂಬರನೆ ಶರಣು ನೆನುವರ ಸಾರಿ ಸುಳಿದು ಹೊರೆವ ಉದಾರಿ ಶರಣು ದುರಿತಾಪಹಾರಿ ಶರಣು ಸಿಂಹಾದ್ರೀಶ ಯೋಗ ಮಾರ್ಗ ಪ್ರಕಾಶ ಶರಣು ಸರ್ವರ ಗುರುವೆ ಎನಿಸಿ ಲೋಕದಿ ಮೆರೆವೆ ಶರಣು ಮಹಿಪತಿ ನಂದನನ ನೋಡದವೆ ಕುಂದಾ ಸಲಹು ಪದ ದೋರಿ ದ್ವಂದ್ವಾ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಪ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ 1 ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ2 ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದಿಸು ಮೇಲುಗತಿ | ತಂದೆ ತಾಯಿ ಮಿಕ್ಕ | ನಿತ್ಯ | ವೆಂದೆ ಬಂದೆ ಸತ್ಯ ಕುಂದದೆ ಉದ್ಧರಿಸು 3 ದಾತ | ರೋಮ ರೋಮ ಕೋಟಿ ಕಾಮ ಸಂಹಾರನೇ | ಭೂಮಂಡಲಧರನೆ ಭೀಮಶೈನ | ಭೀಮ ರಿಪು ಗಂಟಲಗಾಣ | ತಾಮಸ ಜ್ಞಾನವಳಿ | ಸುಳಿ | ಶ್ರೀ ಮದಾನಂದತೀರ್ಥ4 ಶ್ರೀ ಸಪುತ ಕುಜನರ | ಭಾಷ್ಯ ಮುರಿದ ಧೀರ | ಭಾಸುರ ಕೀರ್ತಿ ಹಾರಾ | ದೋಷರಾಶಿ ದೂರ | ಹ್ರಾಸವಿಲ್ಲದ ಮಹಿಮ | ಶ್ರೀಶ ವಿಜಯವಿಠ್ಠಲನ್ನ | ದಾಸರೊಳಧಿಕ ನಿನ್ನ ಲೇಶವಾದರು ಬಿಡೆ | ನಾ ಸರ್ವಥಾ ಕರೆ | ತೋಷದಲಿಡುವುದೆನ್ನ 5
--------------
ವಿಜಯದಾಸ
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶರಣು ಶರಣು ಪ ಶರಣುಮತ್ಸ್ಯನೆ ಕೂರ್ಮಕ್ರೋಡನರಹರಿ ವಟುಭಾರ್ಗವಶರಣುರಾಘವ ಕೃಷ್ಣ ಬುದ್ಧಶರಣು ಕಲ್ಕಿ ರೂಪನೆ1 ನಂಬಿದೆ ನಾನಿನ್ನ ಕೇಶವನಾರಾಯಣನೇ ಮಾಧವಅಂಬುಜಾಕ್ಷ ಗೋವಿಂದ ವಿಷ್ಣುಸಂಭ್ರಮದಿ ಮಧುಸೂದನ2 ಕರುಣದಲಿ ರಕ್ಷಿಸು ತ್ರಿವಿಕ್ರಮಕಲಿತ ವಾಮನ ಶ್ರೀಧರಪರಮಪಾವನ ಹೃಷೀಕೇಶನೆಪದ್ಮನಾಭ ದಾಮೋದರ 3 ಅನಿರುದ್ಧ ಅಧೋಕ್ಷಜ 4 ಶ್ರುತಿಗಗೋಚರ ನಾರಸಿಂಹಾ-ಚ್ಯುತ ಜನಾರ್ದನುಪೇಂದ್ರನೆಚತುರವಿಂಶತಿ ನಾಮದಲ್ಲಿಹಚತುರ ಹರಿ ಶ್ರೀಕೃಷ್ಣನೆ 5
--------------
ವ್ಯಾಸರಾಯರು
ಶರಣು ಶರಣು ಲಿಂಗಾ | ಶರಣು ಶ್ರೀ ಭಸಿತಾಂಗಾ | ಶರಣು ಗಗನ ಗಂಗಾಧರ ಗೋರಾಜ ತುರಂಗ | ಗುರುಕುಲೋತ್ತುಂಗಾ ಪ ಪುರಹರ | ಸಂತರ ಮನೋಹರ | ಅಂತಕನ ಗೆದ್ದೆ | ದಂತಿ ಚರ್ಮವ ಪೊದ್ದೆ | ಕಂತು ಮುನಿಯ ಗೆಲಿದೆ ಮಂತ್ರಿವಂದಿತ ಶೀಲ | ಸಂತತಿಗಳ ಪಾಲ | ಅಂತರಂಗದಲೆನ್ನ ಗ್ರಂಥಿಯ ಹರಿಸಿ ನಿರಂತರ ಸಂತರಿಸೋ 1 ಶುಕ ಯತಿಯೆ | ವನದೊಳು ರಾಯನ | ವನುತಿಯ ಮಾಡಿದ | ಘನ ಶೌರ್ಯನ ಶಿವನೆ || ಸನಕಾದಿಗಳ ಪರಿಯ | ಅನುದಿನದಲಿ ಗಿರಿಯ | ಫಣಿಭೂಷಣ ಶಂಭೋ 2 ಅಹಂಕಾರಾತ್ಮನೆ ಶರ್ವ | ಮಹಾಕೇಶ ವಿಷಗ್ರೀವ | ಬಹುದೂರ ಕೂಟ | ಮಹಿಧರ ನಿವಾಸನೆ | ಮಹಿಧರ ತೀರದಿ || ಮಹಿಮೆಯ ಬೀರುತ್ತ | ರಹಸ್ಯದಲಿ ಮೆರೆವ | ಶ್ರೀಹರಿ ವಿಜಯವಿಠ್ಠಲ ಸವೋತ್ತಮ | ನಹುದೆಂದು ಧೇನಿಪನೆ3
--------------
ವಿಜಯದಾಸ
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣುಶರಣು ದಶರಥ ರಾಮದೂತಗೆ ಪ ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ಅ ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ 1 ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ2 ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆಸಾರ ತತ್ತ್ವಗಳನೆಲ್ಲ ಶೋಧಿಸಿ ಸೂರೆ ಮಾಡಿದಾತಗೆಊರ್ವಿಯೊಳು ವರ ದೇವತಾದಿಕೇಶವ ದೊರೆ ದಾಸಗೆ 3
--------------
ಕನಕದಾಸ
ಶರಣು ಹೋಗುವೆನಯ್ಯ ನಾನು ಪ ಸಿರಿ ಅಜಭವ ಶಕ್ರ ಸುರಸ್ತೋಮಗಳನೆಲ್ಲ ಸರಸದಿಂದ ಆಳ್ವ ಪರಮಪುರುಷ ಹರಿಗೆ ಶಿರಬಾಗಿ ನಮಿಸುತ ಅ.ಪ. ನಿರುತ ಆನಂದದಿ ಮೆರೆದು ಇರುವಂಥ ನಿರಜ ನಿತ್ಯನು ಆದ ಉರಗನ ಮೇಲ್ವರಗುತ ಪರಮ ಪರಾತ್ಪರ ಪರಮವೇದದ ಸಾರ ಪರಮ ಸದ್ಗುಣ ಪೂರ್ಣ ಪುರುಷಸೂಕ್ತ ವಂದ್ಯ ಪರಿಪರಿ ರೂಪದಿ ಸರ್ವತ್ರ ಇರುವಂಥ ನಿರ್ಗುಣ ನಿರಾಕಾರ ನಿರುಪಮ ನಿಸ್ಸೀಮ ನಿರುತ ತೃಪ್ತನು ಆದ ಸರ್ವಸಾರ ಭೋಕ್ತ ಸರ್ವರ ಬಿಂಬನು ಸರ್ವಗುಣ ಪೂರ್ಣ ಸರ್ವರ ಆಧಾರ ಸರ್ವೇಶ ಸ್ವತಂತ್ರ ಸರ್ವಶಬ್ದ ವಾಚ್ಯ ಸರ್ವರಿಂ ಭಿನ್ನನು ಸರಸಸೃಷ್ಟಿಯ ಮಾಳ್ವ ನೀರಜನಾಭಗೆ ಚರಣವ ಪಿಡಿಯುತ್ತ ಉರುಗಾಯನ ದೇವ ಸಲಹು ಸಲಹೆಂದು 1 ವಾರಿಯೊಳಾಡುವ ಭಾರವಹೊರುವ ಕೋರೆಯತೀಡುವ ಕರುಳಾನು ಬಗೆಯುವ ವರವಟು ಆಗುವ ಪರಶುವ ಪಿಡಿಯುವ ನಾರಿಯ ಹುಡುಕುವ ನಾರಿಯ ಕದಿಯುವ ಬರಿಮೈಯ್ಯ ತೋರುವ ತುರುಗವನೇರುವ ನಾರಿಯು ಆದವ ಭಾರತ ಮಾಡುವ ವರ ಸಾಂಖ್ಯ ಹೇಳುವ ಕರಿಯನು ಪೊರೆಯುವ ಪೋರಗೆ ಒಲಿದವ ವರ ಋಷಭನಾದ ಹರಿ ಯಜ್ಞ ನಾದವ ತರಿವ ರೋಗಂಗಳ ವರಹಂಸ ರೂಪನು ತುರುಗ ವೇಷಧಾರಿ ನಾರಾಯಣ ಮುನಿಯೆ ಗುರು ದತ್ತಾತ್ರೇಯನೆ ಪರಿಸರ ಪರಮಾಪ್ತ ಪೊರೆಯೊ ಮಹಿದಾಸನೆಂದು ಕರವೆತ್ತಿ ಮುಗಿಯುತ 2 ಪಾಪಿಯ ಪೊರೆದವಗೆ ತಾಪ ಇಲ್ಲದವಗೆ ಅಪವರ್ಗದಾತಗೆ ವಿಪನ ಏರಿದವಗೆ ಗೋಪತಿಯಾದವಗೆ ತಾಪವ ಮೆದ್ದವಗೆ ಚಾಪವ ಮುರಿದವಗೆ ಚಪಲ ಇಲ್ಲ ದವಗೆ ಕಪಟರ ವೈರಿಗೆ ಗುಪ್ತದಿ ಇರುವಗೆ ವಿಪ್ರನ ಸಖನಿಗೆ ಅಪ್ರಮೇಯನಿಗೆ ಗೋಪೇರ ವಿಟನಿಗೆ ತಾಪಸ ಪ್ರೀಯಗೆ ವಿಪ್ರಶಿಶು ತಂದವಗೆ ಮುಪ್ಪಿಲ್ಲ ದವಗೆ ತ್ರಿಪುರಾರಿ ಸಖಗೆ ಕೃಪಣ ವತ್ಸಲನಿಗೆ ತಪ್ಪು ಮಾಡದವಗೆ ಆಪ್ತತಮನಿಗೆ ಸಪ್ತ ಶಿವವ್ಯಕ್ತನಿಗೆ ಶ್ರೀಪತಿಯಾದವಗೆ ಕಪಟನಾಟಕ ಪ್ರಭು ಗೋಪಾಲಕೃಷ್ಣಗೆ ಒಪ್ಪಿಸಿ ಸರ್ವಸ್ವ ಅಪ್ಪನೆ ಅಪ್ಪನೆ ತಪ್ಪದೆ ಸಲಹೆಂದು 3 ಅನ್ನವು ಆದವಗೆ ಅನ್ನಾದ ನೆಂಬುವಗೆ ಅನ್ನದ ಖ್ಯಾತನಿಗೆ ಚಿನ್ಮಯ ರೂಪಗೆ ಬೆಣ್ಣೆಯ ಕಳ್ಳಗೆ ಅನಾಥನಾದವಗೆ ಕನಕಮಯನಿಗೆ ಅನಂತರೂಪನಿಗೆ ಉಣ್ಣದೆ ಇರುವವಗೆ ಉಣ್ಣುತ ಉಣಿಸುವವಗೆ ಜ್ಞಾನಿಗಮ್ಯನಿಗೆ ಜ್ಞಾನ ದಾಯಕನಿಗೆ ಗುಣತ್ರಯ ದೂರಗೆ ಭಾನುವ ತಡೆದವಗೆ ಆನತ ಬಂಧುವಿಗೆ ಅನುಪಮನಾದವಗೆ ತನುಮನ ಪ್ರೇರಿಪಗೆ ದಾನವ ವೈರಿಗೆ ತನ್ನಲ್ಲೆ ರಮಿಸುವನಿಗೆ ಮನ್ಮಥ ಪಿತನಿಗೆ ಪೆಣ್ಣಿನ ಪೊರೆದವಗೆ ಅಣುವಿಗೆ ಅಣುವಿಹಗೆ ಘನಕೆ ಘನ ತಮನಿಗೆ ಕಣ್ಣಿಲ್ಲದೆ ನೋಳ್ಪ ಉನ್ನತ ಪ್ರಭುವಿಗೆ ಬೆನ್ನು ಬೀಳುವೆ ನಾನು ಇನ್ನು ಕಾಯೋ ಎಂದು 4 ಹೇಯನಾಗದ ಶೃತಿ ಗೇಯನು ಸುಜನರ ಪ್ರೀಯನು ಸರ್ವರ ಕಾಯುವ ಸುಂದರ ಹಯಮುಖ ಸರ್ವದ ಪ್ರಾಯದಿ ಮೆರೆಯುವ ಗಾಯನ ಪ್ರಿಯನಾದ ಮಾಯಾರಮಣ ಭಾವ ಮಾಯೆ ಹರಿಸಿ ಮುಕ್ತಿ ಭಾಗ್ಯ ಭಕ್ತರಿಗೀವ ತೋಯಜಾಂಬಕ ಸುರ ನಾಯಕರಿಗೆ ಭಕ್ತಿ ತೋಯದಿ ಮುಳುಗಿಪ ಶ್ರೀಯರಸಾಭಯ ದಾಯಕ ಗುರು ಮಧ್ವ ರಾಯರ ಪ್ರಿಯನಾದ ಜೇಯ ಜಯಮುನಿ ವಾಯುವಿನ ಅಂತರದಿ ನವನೀತ ಧರಿಸಿರ್ಪ ತಾಂಡವ ಸಿರಿಕೃಷ್ಣ ವಿಠಲ ರಾಯನಿಗೆ ಕಾಯ ವಾಚಮನದಿ ಗೈಯ್ಯುವ ಸಕಲವನು ಈಯುತ ನಮಿಸುತ ಜೀಯನೆ ಜೀಯನೆ ಕಾಯಯ್ಯ ಕಾಯೆಂದು 5
--------------
ಕೃಷ್ಣವಿಠಲದಾಸರು
ಶರಣೆನ್ನಿ ಸಾಧುರಿಂಗೆ | ಹರಿ ಮೆಚ್ಚುಪರಮ ಭಾಗವತರಿಂಗೆ ಪ ತೀರ್ಥ ಕ್ಷೇತ್ರಂಗಳಲ್ಲಿ ಮಿಂದು ಘನ | ಯಾತ್ರೆಯನು ಮಾಡಿ ಬರಲಿ | ಧಾತ್ರಿಯಲಿ ಕೆಲವು ದಿನಕೆ ಆ ಪುಣ್ಯ | ವರ್ಥಿ ಬಹುದಯ್ಯ ಜನಕ | ಅರ್ತು ಸದ್ಭಾವದಿಂದ್ಹೋಗಿ ಸಂತರ ಕಂಡ | ಮಾತ್ರದಲಿ ಸರ್ವ ಸುಖ ಇದಿರಿಡುವದೆಂದು 1 ಮೆರೆವ ಭಾಗವತದಲ್ಲಿ ಉದ್ಭವಗೆ | ಹರಿತಾನೆ ಬೋಧಿಸುತಲಿ | ನೆರೆಯೋಗ ಯಾಗ ವೃತವು ಯನ್ನಹಿಡಿ | ಲರಿಯದಿದು ಸಾಂಖ್ಯ ತಪವು | ನಿರುತೆನ್ನ ಸತ್ಸಂಗ ತೋರಿ ಕೊಡುವಂತನ್ಯ | ಧರಿಯೊಳಗ ಸಾಧನಗಳಿಲ್ಲ ಕೇಳೆಂದಾ 2 ಚಲಮೂರ್ತಿ ಸಂತರುಗಳು ನೋಡಲಾ | ಚಲಮೂರ್ತಿ ಪ್ರತಿಮೆಯಗಳು | ನಲಿದವರ ಪೂಜೆಯಿಂದಾ ಪ್ರೀಯನಾಗಿ | ಸಲಹುವನು ಶ್ರೀ ಮುಕುಂದಾ | ತಿಳಿಯ ದೆಂದಿಗೆ ಅಭಾವಿಕ ವರ ಮಹಿಮೆಗಳು | ವಲಿದು ಗುರುಮಹಿಪತಿ ಸುತಗೆಚ್ಚರಿಸಿದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೆಂಬೆ ಗುರುರಾಯಾ ಶರಣ ಜನರಾಶ್ರಯಾ ಶರಣು ಸಮೀರ ಕುಮಾರ ಉದಾರನೆ ಶರಣು ಪಾವನ ಕಾಯಾ ಪ ಹರಿ ಪೂರ್ಣಾಂಶದಿ ಜನಿಸಿ ಹರಿ ಕುಲೋದ್ಬವ ನೆನಿಸಿ ಹರಿಯತುಡಕಿ ಬಂದು ಹರಿತೇಜದಿ ನಿಂದು ಹರಿಸೆ ಧನುಜ ಮೃಗವಾ ಹರಿರೂಪದಲಿ ನಿಂದೆಹರಿಮಂದಿರದಲಿನಲಿದೆ ಹರಿಬರಲು ನಮಿಸಿ ಹರಿದಶ್ವಜ ಗೊಲಿಸಿ ಹರಿಹಯಜಗ ಮುನಿದೇ 1 ಗೋಪೆಂದ್ರ ನಾಜÉ್ಞಯಲಿ ಗೋಪದಾಂಬುಧಿ ಪರಿಲಿ ಗೋಪನಲಂಘಿಸಿ ಗೋಪುತ್ರಿಯ ಕಂಡು ಗೋಪೀಡಕರ ಮುರಿದೇ ಗೋಪಾಲಗಿದಿರಾಗಿ ಗೋಪಾಸ್ತ್ರವಶವಾಗಿ ಗೋಪುರವ ನುರುಹಿ ಗೋಪಾನ್ವಯ ಗುರುಹಿ ಗೋಪದವಿಯ ಪಡೆದೆ 2 ಮಹಿದರಾನೇಕವತಂದು ಮಹೋದಧಿಯನೆ ಜಿಗಿದು ಅಹಿ ಮಹಿರಾವಣಾನ್ವಯ ಮಹಿರುಹದಲಿ ತರಿದೇ ಮಹಿಯೋಳು ಮೂರವತಾರಿ ಮಹಿಮಾನೆಕವಬೀರಿ ಮಹಿಪತಿ ಸುತಪ್ರಭು ಮಹಿಜಳ ಕೂಡಿಸಿ ಮಹದಾ ಗ್ರಣಿಯಾದೆ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣೇ ಅಜಭವ ಮುಖ್ಯ ಸುರಾರ್ಚಿತ | ಶರಣೇ ವಿಧು ಬಿಂಬಾನನ ಚಂಪಕ | ವರಣೇ ತ್ರಿಭುವನ ಜೀವನ ರಕ್ಷಕ ಶರಣೇ ದುರಿತಚಯಾ | ಹರಣೇ ಶ್ರೀದೇವಿ ಜಾಂಬೂನದಾಂಬರ | ವರಣೇ ಫಣಿವರಶಯನ ಚಿತ್ತನ | ಹರಣೇ ಕುಶಲದಿ ಮಹಿಪತಿ ನಂದನುದ್ಧರಸೆ ಜಯ ಜಯತು
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರೀರ ಜರಿಯಬೇಡಾ | ಬೆರಿಯಬೇಡಾ | ಸ್ಥಿರವಿದ್ದ ಕೈಯಲಿ ಗುರು ಶರಣವ ಹೊಕ್ಕು | ತಾರಿಸೋ ಭವದಿಂದ ನೀ ಮರಳು ಜೀವವೇ ಪ ಲೋಕದೊಳು ವಾರಿಜೋದ್ಭವ ನಿನ್ನ ಜನ್ಮ ಕೊಟ್ಟು | ನೂಕಲಾಗ ತಾಯಿ ಗರ್ಭದೊಳಾವರಿಸಿ ತಾನು ಧರಿಸಿ | ರೇಖೆ ರೂಪ ಲಾವಣ್ಯ ಅವಯವಂಗಳಿಂದ | ಸಾಕಾರವಾಗಿ ಸುಂದರೆನಿಸಿ ವರನೆನಿಸಿ | ಬೇಕಾದ ವಿದ್ಯವನು ಸರ್ವ ಸಂಪಾದಿಸಲು | ತಾ ಕಾರ್ಯವಾಗಿ ಅಭ್ಯಾಸದಿಂದಾ ಧ್ಯಾಸದಿಂದಾ | ವಾಕ್ಪಟುದಲಿ ಸಮರ್ಥನೆಂಬನಾಮ ಪಡೆದು | ಪ್ರಖ್ಯಾತವಾದೆ ಈ ಕಾಯದಿಂದ 1 ಸ್ನಾನವನು ಮಾಡಿ ತ್ರಿಕಾಲ ಸಂಧ್ಯಾನ ವಿಧಿಯನು | ಮೌನ ಜಪಗಳವನು ತಪಗಳನು | ಸ್ವಾನುಭಾವ ಸೂರ್ಯಾಡಲಾಗಿ ನೇಮವನುಷ್ಠಾನ ಮೊದಲಾದ | ಧ್ಯಾನ ಧಾರಣವನು ಕಾರವನು | ಜ್ಞಾನ ಭಕ್ತಿ ವೈರಾಗ್ಯ ಶಮದಮ ಕರುಣನು ದಿನಮಾಳ್ಪಾ | ಕರ್ಮ ನೈಮಿತ್ಯವಾದಾ ನಿತ್ಯವಾದಾ | ತಾನು ತನ್ನ ಉದ್ಧರಿಸಿಕೊಳಲಿಕ್ಕೆ ಭಾವದಿಂದಾ | ಮಾನುಭಾವg ದಯ ಪಡೆವುದರಿಂದಾ 2 ತಾನು ಕುಣಿಯಲಾರದೆ ಅಂಕಣವು ಡೊಂಕು ಎಂದು | ಹೀನೋಯಿಸಿ ನುಡಿವ ನಟ ವೇಷಿಯಂತೆ | ನೀನು ನೀಟ ನಡಿಯದ್ಹೋಗಿ ದೇಹ ಕಶ್ಮಲವೆಂದು | ಜ್ಞಾನ ರಹಿತನಾಗಿ ಹಳಿವುದು ಉಚಿತ ಇದು ಪ್ರಾಚೀತ | ಈ ನಾಲ್ಕೆರಡು ವೈರಿಗಳ ದಂಡಿಸದೇ ಬರಿದೇ | ಹೀನ ವೈರಾಗ್ಯವಾ ಶಣಸಬೇಡಾ ದಣಿಸಬೇಡಾ | ಕಾನನದ ಹುತ್ತಮ್ಯಾಲ ಬಡಿದರೇನು ವರಗಿರುವಾ | ಆ ನಾಗದರ್ಪಗುಂದದು ಕಂಡಾ 3 ಪರಿಪರಿ ಮುಮ್ಮುಳಿ ವಳಗಾಗಿ ಜೀವಿಸುವ | ತೆರನಂತೋಯಂದು ಚಿಂತಿಸಬಹುದು ಸುರಿಸಬಹುದು | ನೂರು ಭಂಡಿಗಳ ತÀುಂಬಿ ಬಂದರೇನು ತಾ | ಧರೆಯೊಳು ಸೂಲ ತಾ ಹಾವುದೊಂದೇ ನೋವುದೊಂದೇ | ಬರೆದ ಬರಹವೇ ಪಣಿಯಾಲಿದ್ದಪರಿ ತಪ್ಪದೈ | ವರ ಕೂಡಿ ಕೊಟ್ಟಡವಿ ಮಾಡುವದೇನು ನೋಡುದೇನು | ಪರಿ | ಪಡಿ ನೀನು 4 ಸಾಕ್ಷರಾವೆಂಬ ಮೂರಕ್ಷರವ ಬರೆದು ತಾ | ರಾಕ್ಷಸಾವೆಂಬುದೇ ಅರ್ಥವಹುದು ಅನರ್ಥ ವಹುದು | ಪರಿ ವಳಿತು ಹೊಲ್ಲೆ | ಪಕ್ಷದ್ವಯಕ ಬಾಹುದು ಮಾಡಿದಾಂಗ ಕೂಡಿದಾಂಗ | ರಕ್ಷಿಸೆಂದು ಮಹಿಪತಿಸುತ ಜೀವನಾದಿ ವಿಶ್ವಾ | ಭವ ಹಿಂಗು ಬ್ಯಾಗ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶಾಂಭವಿ ಶೈಲಜೆ ಅಂಬಿಕೆ ದೇವಿ ಅಂಬುರು ಹಾಸನೆ ಪಾಲಿಸು ಪ್ರೇಮದಿ ಪ ಅಕ್ಷಯ ರಾಕ್ಷಸನಾಶಿನಿ ಯಕ್ಷಸುಪೋಷಿಣೆ 1 ದಿವ್ಯಸ್ವರೂಪೆ ಭವ್ಯಕಲಾಪೆ ಸ್ತವ್ಯ ಸ್ವರೂಪಿಣಿ ಗರ್ವ ವಿದಾರಿಣೆ 2 ಪಾಲಿಸು ಶಂಕರಿ ಗೌರಿ 3 ಪ್ರೇಮದಿ ಸ್ವರ್ನಸುಗಾತ್ರಿ 4 ಧ್ಯಾನವಗೈಯುವೆ ಧೇನುಪುರೀಶೆ 5
--------------
ಬೇಟೆರಾಯ ದೀಕ್ಷಿತರು